ಏ.9ರಿಂದ 11 ರವರೆಗೆ ಕರಾವಳಿಗೆ ಬಿಸಿಲಿನ ಪೆಟ್ಟು, ಈ ಜಿಲ್ಲೆಗಳಿಗೆ ಮಾತ್ರ ವರುಣನ ತಂಪು: 3 ದಿನಗಳ ಕಾಲ ‘ಯೆಲ್ಲೋ ಅಲರ್ಟ್’

ಮಂಗಳೂರು, ಏ. 07: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ತೀವ್ರವಾದ ಬಿಸಿ ಗಾಳಿ ಮತ್ತು ಆರ್ದ್ರತೆ (Humidity) ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ. ಏಪ್ರಿಲ್ 9 ರಿಂದ ಏಪ್ರಿಲ್ 11 ರವರೆಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸಾಮಾನ್ಯಕ್ಕಿಂತ ಹೆಚ್ಚಿನ…

Read More

ಆರಾಧ್ಯ ಗುರುಗಳ ಭವಿಷ್ಯದಿಂದ ಚಿಗುರೊಡೆದ ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆ – Kannada News | DK Shivakumar become a Karnataka CM Predicted By Nonavinakere Swamiji

ಬೆಂಗಳೂರು, (ಮೇ 24): ಕರ್ನಾಟಕ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ರಾಜಕೀಯ ಪ್ರಹಸನಗಳು ನಡೆದಿವೆ. ಇದರ ಮಧ್ಯೆ ‘ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ’ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ( Nonavinakere Swamiji Predication) ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಸಂಕಲ್ಪ ಮಾಡಿದ್ದು, ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಅವಕಾಶಕ್ಕಾಗಿ ಕಾಯುತ್ತಿದೆ, ಆದಷ್ಟು…

Read More

ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ: ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ – Kannada News | Ballari Money Doubling Scam: Hundreds of Families Cheated as Venkatesh Absconds with Crores in Chit Fund Fraud

ಬಳ್ಳಾರಿಯ ಬ್ರೂಸ್​ಪೇಟೆ ಪೊಲೀಸ್ ಠಾಣೆImage Credit source: tv9 ಬಳ್ಳಾರಿ, ಫೆಬ್ರವರಿ 21: ಭಾರೀ ಚೀಟಿ ವಂಚನೆ ಪ್ರಕರಣವೊಂದರಲ್ಲಿ ಬಳ್ಳಾರಿಯ (Ballari) ನೂರಾರು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ಬೆಳಕಿಗೆ ಬಂದಿದೆ. ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ನಂಬಿಸಿ ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಎಂಬಾತ ಚೀಟಿ ವ್ಯವಹಾರದ ಹೆಸರಿನಲ್ಲಿ ಸುಮಾರು 800ಕ್ಕೂ ಹೆಚ್ಚು ಜನರಿಂದ ಹಣ…

Read More

IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

 ಇಂಡಿಯನ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲೀಕರು ಯಾರು? ಈ ಕುತೂಹಲಕಾರಿ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ. ಏಕೆಂದರೆ RCB ಫ್ರಾಂಚೈಸಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಇದೀಗ ಈ ತಂಡವನ್ನು ಖರೀದಿಸಲು ಪ್ರಮುಖ ಉದ್ಯಮಿಗಳು ಯೋಜನೆ ರೂಪಿಸುತ್ತಿದ್ದಾರೆ. ಇವರಲ್ಲಿ ಎಲ್ಲರ ಗಮನ ಸೆಳೆದಿರುವುದು ಮ್ಯಾಂಚೆಸ್ಟರ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಮಾಲೀಕರಾದ ಗ್ಲೇಝರ್ ಫ್ಯಾಮಿಲಿ. ಗ್ಲೇಝರ್ ಫ್ಯಾಮಿಲಿಯ ಅವ್ರಾಮ್ ಗ್ಲೇಝರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೇಲೆ ಕಣ್ಣಿಟಿದ್ದಾರೆ. ಅಷ್ಟೇ…

Read More

ಕರ್ನಾಟಕ ಹವಾಮಾನ ವರದಿ: ಕೊಡಗು, ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ! – Kannada News | Karnataka Rain Update: Heavy Rainfall in Bengaluru and South Interior Districts

ಕೊಡಗು, ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ! ಬೆಂಗಳೂರು, ಮೇ 10: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Weather) ಇಲಾಖೆ ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯಾಂಶಗಳು ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಕೊಡಗು…

Read More

Magha Masa: ಮಾಘ ಮಾಸದಲ್ಲಿ ನದಿ ಸ್ನಾನದ ಮಹತ್ವ; ಆಧ್ಯಾತ್ಮಿಕ ಲಾಭ ಮತ್ತು ಆಚರಣೆಯ ವಿಧಾನ – Kannada News | The Spiritual Significance of River Bathing in Magha Masa: Rituals and Benefits

2026ರ ಮಾಘ ಮಾಸವು ಜನವರಿ 19ರ ಸೋಮವಾರದಿಂದ ಪ್ರಾರಂಭವಾಗಿದೆ. ಈ ಮಾಸದಲ್ಲಿ ಮಾಡುವ ಸ್ನಾನಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಏಕೆಂದರೆ ಮಾಘ ಸ್ನಾನವು ಕೇವಲ ದೇಹವನ್ನು ಶುದ್ಧಗೊಳಿಸುವುದಲ್ಲದೆ, ಮನಸ್ಸನ್ನು ಶುದ್ಧಿಪಡಿಸಿ, ಕರ್ಮಗಳನ್ನು ತೊಳೆಯುತ್ತದೆ ಎಂದು ನಂಬಲಾಗಿದೆ. ಮಾಘ ಸ್ನಾನಕ್ಕಾಗಿ ಪವಿತ್ರ ನದಿ ಅಥವಾ ಸಮುದ್ರಗಳಿಗೆ ಹೋಗಬೇಕೇ ಎಂಬ ಪ್ರಶ್ನೆ ಅನೇಕರಿಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಗಂಗಾ…

Read More

ದಿಲ್ಲಿಯಲ್ಲಿ ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್​​​​​​ಸೈಡ್ ಡಿಟೇಲ್ಸ್ – Kannada News | Karnataka Leadership Row: Rahul Gandhi And Others High command Leaders Meeting With CM Siddaramaiah, Here Is EXCLUSIVE report

ನವದೆಹಲಿ, (ಮೇ 26): ಕರ್ನಾಟಕ (karnataka) ರಾಜಕೀಯದ  ಅತ್ಯಂತ ದೊಡ್ಡ ಕುತೂಹಲಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಸಾಕ್ಷಿಯಾಗಿದೆ. ಕಾಂಗ್ರೆಸ್ ಹೈಕಮಾಂಡ್ (Congress High command )ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಯ ‘ಫೈನಲ್ ಫೈಟ್’ ಆರಂಭವಾಗಿದ್ದು, ಇಡೀ ರಾಜ್ಯದ ಕಣ್ಣು ಈಗ ದೆಹಲಿಯತ್ತ ನೆಟ್ಟಿದೆ. ದೆಹಲಿಯ ಇಂದಿರಾ ಭವನದಲ್ಲಿ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಪ್ರತ್ಯೇಕ ನಡೆದಿದೆ. ಸುಮಾರು 45 ನಿಮಿಷಗಳ ಕಾಲ ಉಭಯ ನಾಯಕರ ಸಭೆ ನಡೆದಿದ್ದು, ಈ ವೇಳೆ ಗಂಭೀರ ಚರ್ಚೆಯಾಗಿವೆ. ಇನ್ನು ಸಾಧಕ-ಬಾಧಕಗಳ…

Read More

Planetary Plants: ನವಗ್ರಹಗಳ ಶಾಂತಿ ಮತ್ತು ಸಮೃದ್ಧಿಗೆ ಈ ಗಿಡಗಳನ್ನು ನೆಟ್ಟು ಬೆಳೆಸಿ; ವಾಸ್ತು ಸಲಹೆ ಇಲ್ಲಿದೆ – Kannada News | Planetary plants grow trees for astrological benefits and family prosperity

ಮಳೆಗಾಲದಲ್ಲಿ ಮಣ್ಣಿನಲ್ಲಿರುವ ಹೆಚ್ಚಿನ ತೇವಾಂಶದಿಂದಾಗಿ ಈ ಸಮಯವನ್ನು ಹೊಸ ಗಿಡಗಳನ್ನು ನೆಡಲು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಸನಾತನ ಧರ್ಮದಲ್ಲಿ ವೃಕ್ಷಾರೋಪಣೆಯು ಕೇವಲ ಪರಿಸರ ಸಂರಕ್ಷಣೆಯಷ್ಟೇ ಅಲ್ಲದೆ, ಒಂದು ಪವಿತ್ರ ಧಾರ್ಮಿಕ ಕಾರ್ಯವೂ ಹೌದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹ ಮತ್ತು ನಕ್ಷತ್ರಕ್ಕೂ ನಿರ್ದಿಷ್ಟ ಸಸ್ಯಗಳೊಂದಿಗೆ ನಿಕಟ ಬಾಂಧವ್ಯವಿದೆ. ಜಾತಕದಲ್ಲಿ ದುರ್ಬಲವಾಗಿರುವ ಗ್ರಹಗಳನ್ನು ಬಲಪಡಿಸಲು ಮತ್ತು ಕುಟುಂಬದಲ್ಲಿ ಸಮೃದ್ಧಿ ತರಲು ಯಾವ ಗ್ರಹಕ್ಕೆ ಯಾವ ಸಸ್ಯವನ್ನು ನೆಡಬೇಕು ಎಂಬುದರ ವಿವರ ಇಲ್ಲಿದೆ. ಸೂರ್ಯ ಗ್ರಹ (ಆತ್ಮವಿಶ್ವಾಸ ಮತ್ತು…

Read More

Dhiraj Seth ಭಾರತದ ನೂತನ ಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್ ಅಧಿಕಾರ ಸ್ವೀಕಾರ – Kannada News | General Dhiraj Seth takes charge as Indias New Army Chief replaced General Upendra Dwivedi

ನವದೆಹಲಿ, ಜೂನ್ 30: ಭಾರತೀಯ ಭೂಸೇನೆಯಲ್ಲಿ (Indian Army) 4 ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಜನರಲ್ ಉಪೇಂದ್ರ ದ್ವಿವೇದಿ ಅವರ ಉತ್ತರಾಧಿಕಾರಿಯಾಗಿ ಜನರಲ್ ಧೀರಜ್ ಸೇಠ್ ಇಂದು (ಮಂಗಳವಾರ) ಭಾರತದ 31ನೇ ಭೂಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಜನರಲ್ ಧೀರಜ್ ಸೇಠ್ (Dhiraj Seth) ಭೂಸೇನೆಯ ಉಪಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಆರ್ಮರ್ಡ್ ಕಾರ್ಪ್ಸ್ (ಟ್ಯಾಂಕ್ ರೆಜಿಮೆಂಟ್) ವಿಭಾಗದ ಅಧಿಕಾರಿಯಾಗಿರುವ ಇವರು, 1997ರಲ್ಲಿ ನಿವೃತ್ತರಾದ ಜನರಲ್ ಶಂಕರ್…

Read More

ಭುಗಿಲೆದ್ದ ಮಂತ್ರಾಲಯ ರಾಯರ ಜಪದ ಕಟ್ಟೆ ವಿವಾದ: ಸರ್ವೆ ವೇಳೆ ಹೈಡ್ರಾಮಾ, ರೈತರು ಪೊಲೀಸ್ ವಶಕ್ಕೆ

ರಾಯಚೂರು, ಏಪ್ರಿಲ್​ 13: ಮಂತ್ರಾಲಯ ರಾಯರು (Mantralaya Rayaru) ತಪಸ್ಸು ಮಾಡಿದ್ದ ಜಪದ ಕಟ್ಟೆ ಸಮೀಪವಿರುವ ಜಮೀನಿನ ವಿವಾದ (Land Dispute) ಇದೀಗ ತಾರಕ್ಕೇರಿದೆ. ಸರ್ಕಾರದ ಆದೇಶದನ್ವಯ ಇಂದು ಸರ್ವೆ ಕಾರ್ಯ ನಡೆಯುತ್ತಿದ್ದ ವೇಳೆ ಕೆಲ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ತಳ್ಳಾಟ-ನೂಕಾಟ ಉಂಟಾಗಿದ್ದು, ದೊಡ್ಡ ಹೈಡ್ರಾಮಾವೇ ನಡೆದು ಹೋಗಿದೆ‌‌. ಏನಿದು ಪ್ರಕರಣ? ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮದಲ್ಲಿ ಮಂತ್ರಾಲಯ ರಾಯರ 13 ವರ್ಷಗಳ ಕಾಲ ತಪಸ್ಸು ಮಾಡಿದ್ದಾರೆ. ರಾಯರ ತಪಸ್ಸು ಮಾಡಿದ ಜಪದ ಕಟ್ಟೆ…

Read More