ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 7 ಕಾರ್ಮಿಕರು ಸಜೀವದಹನ – Kannada News | Factory Blast in Rajasthan Leaves Multiple Casualties, Rescue Teams Deployed
ಜೈಪುರ, ಫೆಬ್ರವರಿ 16: ರಾಜಸ್ಥಾನದ ಭಿವಾಡಿಯಲ್ಲಿರುವ ಖುಷ್ಖೇಡ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 7 ಮಂದಿ ಕಾರ್ಮಿಕರು ಸಜೀವದಹನವಾಗಿದ್ದಾರೆ. ಕಾರ್ಖಾನೆಯ ಒಳಗಿನಿಂದ ರಕ್ಷಣಾ ತಂಡಗಳು ಏಳು ಕಾರ್ಮಿಕರ ಶವಗಳನ್ನು ಹೊರತೆಗೆದರೆ, ತಿಜಾರಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಇನ್ನೂ ಹಲವಾರು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಯಿತು. ಒಂದೂವರೆ ಗಂಟೆಗಳ ಕಠಿಣ ಪರಿಶ್ರಮದ ನಂತರ, ಸಿಬ್ಬಂದಿ ಮತ್ತು ಅಧಿಕಾರಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.ನಂತರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.ಘಟನೆ ನಡೆದ ಸಮಯದಲ್ಲಿ ಕಾರ್ಖಾನೆಯಲ್ಲಿ 20-25 ಕಾರ್ಮಿಕರು ಕೆಲಸ ಮಾಡುತ್ತಿದ್ದರು….