ಕನ್ನಡಿಗರ ಎಚ್ಚರಿಕೆಯಿಂದ ರದ್ದಾಗಿದ್ದ ರೈಲ್ವೆ ಬಡ್ತಿ ಪರೀಕ್ಷೆಗೆ ಮರುದಿನಾಂಕ ನಿಗದಿ, ಈ ಬಾರಿಯೂ ಕನ್ನಡಕ್ಕೆ ಕೊಕ್ – Kannada News | railway department Once Again fixed promotion exam On June 25 without Kannada option
ಬೆಂಗಳೂರು, (ಜೂನ್ 16): ರೈಲ್ವೆ ಇಲಾಖೆ (Railway department) ತನ್ನ ಹಠಮಾರಿತನ ಮುಂದುವರೆಸಿದೆ. ಹೌದು.. ನೈಋತ್ಯ ರೈಲ್ವೆ (Southwestern Railway) ಮೈಸೂರು ವಿಭಾಗದ ಗೂಡ್ಸ್ ಟ್ರೇನ್ ಮ್ಯಾನೇಜರ್ ಹುದ್ದೆಯ ಪದೋನ್ನತಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಕನ್ನಡವನ್ನು (Kannada) ಕಡೆಗಣಿಸಲಾಗಿದೆ. ಈ ಹಿಂದೆ ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲವೆಂದು ಕನ್ನಡಪರ ಸಂಘಟನೆಗಳ ಖಡಕ್ ಎಚ್ಚರಿಕೆ ಬೆನ್ನಲ್ಲೇ ಎಕ್ಸಾಂ ರದ್ದುಗೊಳಿಸಿತ್ತು. ಇದೀಗ ಮತ್ತೊಮ್ಮೆ ಕನ್ನಡಕ್ಕೆ ಕೊಕ್ ನೀಡಿ ಜೂನ್ 25ರಂದು ಪರೀಕ್ಷೆಗೆ ಮರುದಿನಾಂಕ ನಿಗದಿ ಮಾಡಿದ್ದು, ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ….