Headlines

ಪಾರದರ್ಶಕತೆಯತ್ತ ಮತ್ತೊಂದು ಹೆಜ್ಜೆ ಇಟ್ಟ ಕೇಂದ್ರ : ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – Kannada News | Ration System Revamp: Central Govt Introduces Digital Currency for PDS Transparency

ನವದೆಹಲಿ, ಫೆಬ್ರವರಿ 16: ದೇಶದ ಪಡಿತರ( Ration)ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಡಿಜಟಲೀಕರಣಕ್ಕೆ ಒತ್ತು ನೀಡಿರುವ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರಲಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರ ದೂರದೃಷ್ಠಿಯಂತೆ ಈಗಾಗಲೇ ಒನ್ ನೇಷನ್ ಒನ್ ರೇಷನ್ ಕಾರ್ಡ್, ಅನುಷ್ಠಾನಕ್ಕಿಳಿದಿರುವ ಕೇಂದ್ರ ಸರ್ಕಾರ, ಇದೀಗ ಇದೇ ಮೊದಲ ಬಾರಿ ಸೆಂಟ್ರಲ್ ಬ್ಯಾಂಕ್ ಡಿಜಿಟಲ್…

Read More

ಕುರ್ಚಿ ಗುದ್ದಾಟದ ನಡುವೆ ನಾಳೆಯೇ ವಿದೇಶಕ್ಕೆ ಹಾರಲಿದ್ದಾರೆ ಸಿಎಂ ಸಿದ್ದರಾಮಯ್ಯ ಬಣದ ಕಾಂಗ್ರೆಸ್ ಶಾಸಕರು! – Kannada News | Congress MLAs Loyal to Siddaramaiah to Fly to Australia Amid Power Sharing Row in Karnataka

ಕುರ್ಚಿ ಗುದ್ದಾಟದ ನಡುವೆ ವಿದೇಶಕ್ಕೆ ಹಾರಲು ಕಾಂಗ್ರೆಸ್ ಶಾಸಕರು ಸಜ್ಜು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 16: ಕರ್ನಾಟಕ ರಾಜಕೀಯದಲ್ಲಿ, ಅದರಲ್ಲೂ ಕಾಂಗ್ರೆಸ್​ನಲ್ಲಿ (Congress) ಅಧಿಕಾರ ಹಂಚಿಕೆ ಸಂಘರ್ಷ ತೀವ್ರವಾಗಿರುವ ನಡುವೆಯೇ, ಸಮಾನ ಮನಸ್ಕ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದಾರೆ. ಮಂಗಳವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲು ತೀರ್ಮಾನಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಪ್ರವಾಸಕ್ಕೆ ಹೋಗುವವರಲ್ಲಿ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಣದಲ್ಲಿ ಗುರುತಿಸಿಕೊಂಡಿರುವ…

Read More

Twin Tube Tunnel: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಯ ಕೆಳಗೆ ನಿರ್ಮಾಣಗೊಳ್ಳಲಿದೆ ಅವಳಿ ಕೊಳವೆ ಸುರಂಗ, ವೈಶಿಷ್ಟ್ಯವೇನು? – Kannada News | Brahmaputra Twin Tube Tunnel: Assam’s Road Rail Marvel Boosting Northeast Connectivity and Security

ಸುರಂಗ-ಸಾಂದರ್ಭಿಕ ಚಿತ್ರImage Credit source: AI Generated Image ಗುವಾಹಟಿ, ಫೆಬ್ರವರಿ 16: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಯ ಕೆಳಗೆ ಅವಳಿ ಕೊಳವೆ ಸುರಂಗ ಮಾರ್ಗ(Tunnel) ನಿರ್ಮಿಸಲಾಗುತ್ತಿದೆ. ಈ ಅವಳಿ ಸುರಂಗದ ವಿಶೇಷತೆ ಏನೆಂದರೆ ಈ ಸುರಂಗದಲ್ಲಿ ವಾಹನಗಳು ಹಾಗೂ ರೈಲು ಒಂದೇ ಕಡೆ ಚಲಿಸುತ್ತದೆ. ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿ ಕೆಳಗೆ ಈ ವಂಡರ್ ಟನಲ್ ನಿರ್ಮಾಣಗೊಳ್ಳಲಿದೆ. 33.7 ಕಿಲೋಮೀಟರ್ ಉದ್ದದ ಈ ಸುರಂಗವು ಗೋಹ್ಪುರ್ ಮತ್ತು ನುಮಾಲಿಗಢವನ್ನು ಸಂಪರ್ಕಿಸುತ್ತದೆ. ಪ್ರಯಾಣದ ಸಮಯವನ್ನು ಆರು ಗಂಟೆಗಳಿಂದ 20 ನಿಮಿಷಗಳಿಗೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇನ್ನೂ ಹಲವು ದಿನ ಇರಲಿದೆ ಶುಷ್ಕ ವಾತಾವರಣ – Kannada News | Bengaluru temperature: Dry weather all over coastal area, south and north areas of Karnataka

ರಾಜ್ಯದಲ್ಲಿ ಇನ್ನೂ ಹಲವು ದಿನ ಇರಲಿದೆ ಶುಷ್ಕ ವಾತಾವರಣ ಬೆಂಗಳೂರು, ಫೆಬ್ರವರಿ 16: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೆಲ ದಿನಗಳಿಂದ ಒಣ ಹವೆಯ (Weather Forecast) ವಾತಾವರಣವಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ…

Read More

ನಾನು ಸ್ಪಿನ್ನರ್​ಗಳನ್ನೇ ನಂಬಿದ್ದೆ, ಆದರೆ ಅವರೆಲ್ಲರೂ ಆಫ್ ಡೇನಲ್ಲಿದ್ದರು..! – Kannada News | Salman ali agha post match presentation of ind vs pak match

T20 World Cup 2026: ಟಿ20 ವಿಶ್ವಕಪ್​​ನಲ್ಲಿ ಭಾರತದ ವಿರುದ್ಧದ ಸೋಲಿನ ಸಂಖ್ಯೆಯನ್ನು ಪಾಕಿಸ್ತಾನ್ ತಂಡ ಎಂಟಕ್ಕೇರಿಸಿದೆ. ಈ ಹಿಂದೆ ಏಳು ಬಾರಿ ಸೋತಿದ್ದ ಪಾಕ್ ಪಡೆ ಇದೀಗ ಕೊಲಂಬೊದಲ್ಲೂ ಮುಗ್ಗರಿಸಿದೆ. ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಹಿಂದೆ ಮುಂದೆ ನೋಡದೇ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಟೀಮ್ ಇಂಡಿಯಾ ದಾಂಡಿಗರ ಆರ್ಭಟದ ಮುಂದೆ ಪಾಕ್ ತಂಡ ಲೆಕ್ಕಾಚಾರಗಳು ತಲೆ ಕೆಳಗಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್…

Read More

ಕರಿಬಸೊಪ್ಪು ಬಳಿಕ ವರ್ತೂರ್ ಸಂತೋಷ್​​ಗೆ ಹೊಸ ಹೆಸರಿಟ್ಟ ರಕ್ಷಿತಾ ಶೆಟ್ಟಿ – Kannada News | Rakshita Shetty’s Viral Bigg Boss Moment: Varthur Santhosh Gets New Name

ರಕ್ಷಿತಾ ಶೆಟ್ಟಿ ಅವರು ಮೂಲತಃ ಮಂಗಳೂರಿನವರಾದರೂ ಅವರು ಹುಟ್ಟಿ ಬೆಳೆದಿದ್ದು ಮುಂಬೈನಲ್ಲಿ. ಈ ಕಾರಣದಿಂದ ಅವರಿಗೆ ಕನ್ನಡ ಸ್ಪಷ್ಟವಾಗಿ ಮಾತನಾಡೋಕೆ ಬರೋದಿಲ್ಲ. ಅವರು ಎಗ್ಸೈಟ್ ಆದಾಗ, ನರ್ವಸ್ ಆದಾಗ ಯಾರ ಹೆಸರನ್ನು ಇನ್ನು ಹೇಗೋ ಹೇಳುತ್ತಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಈ ಮೊದಲು ಕರಿಬಸಯ್ಯ ಹೆಸರನ್ನು ಅವರು ಬದಲಾಯಿಸಿದ್ದರು. ಈಗ ವರ್ತೂರು ಸಂತೋಷ್ (Varthur Santosh) ಸರದಿ. ಬಿಗ್ ಬಾಸ್ ಮನೆಯಲ್ಲಿರುವಾಗ ರಕ್ಷಿತಾ ಶೆಟ್ಟಿ ಅವರ ನಿಜವಾದ ವ್ಯಕ್ತಿತ್ವ ಜನರಿಗೆ ಗೊತ್ತಾಯಿತು. ಅವರು ಮೊದಲು ಸಾಕಷ್ಟು…

Read More

ಕರ್ನಾಟಕದಾದ್ಯಂತ ಎಲ್ಲೆಲ್ಲೂ ಶಿವರಾತ್ರಿ ಜಾಗರಣೆ, ಪರವಶರಾದ ಭಕ್ತರು – Kannada News | Karnataka Celebrates Maha Shivaratri with Night long Vigils; Grand Rituals in Bengaluru, Mysuru and Mangaluru Temples

ಬೆಂಗಳೂರು, ಫೆಬ್ರವರಿ 16: ಕರ್ನಾಟಕದಾದ್ಯಂತ ಭಾನುವಾರ ರಾತ್ರಿ ಮಹಾಶಿವರಾತ್ರಿಯ ಸಡಗರ ಮತ್ತು ಸಂಭ್ರಮ ಮನೆ ಮಾಡಿತ್ತು. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು ಮತ್ತು ಮಂಗಳೂರಿನಲ್ಲೂ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಮತ್ತು ಪುಷ್ಪಾಲಂಕಾರಗಳು ಕಂಡುಬಂದವು. ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಗಳು ಜರುಗಿದವು. ತಮಿಳುನಾಡಿನ ವೆಲ್ಲಿಯಂಗಿರಿ ಪರ್ವತಗಳ ತಪ್ಪಲಿನಲ್ಲಿರುವ ಇಶಾ ಫೌಂಡೇಶನ್‌ನಲ್ಲಿ ಶಿವರಾತ್ರಿ ಜಾಗರಣೆಯನ್ನು ಪ್ರತಿ ವರ್ಷದಂತೆ ಅದ್ದೂರಿಯಾಗಿ ಆಚರಿಸಲಾಯಿತು. ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಸುಮಾರು 2…

Read More

ನಮ್ಮ ಪ್ಲ್ಯಾನೇ ಬೇರೆಯಿತ್ತು, ಆದರೆ ಇಶಾನ್ ಕಿಶನ್ ಮಾತ್ರ ಅದನ್ನ ಪಾಲಿಸಿಲ್ಲ..! – Kannada News | Suryakumar yadav post match interview IND vs PAK 2026

ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಓವರ್​ನಲ್ಲೇ ಅಭಿಷೇಕ್ ಶರ್ಮಾ (0) ವಿಕೆಟ್ ಕಳೆದುಕೊಂಡಿತು. ಈ ಆರಂಭಿಕ ಆಘಾತದ ಹೊರತಾಗಿಯೂ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. 40 ಎಸೆತಗಳನ್ನು ಎದುರಿಸಿದ ಇಶಾನ್ 10 ಫೋರ್ ಹಾಗೂ 3…

Read More

ಗೋವಾ ಸ್ಟ್ರೀಟ್ ರೇಸ್​ 2026ರಲ್ಲಿಎರಡನೇ ಸ್ಥಾನ ಪಡೆದ ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ಟೀಂ  – Kannada News | Kichca Sudeep Kichchas Kings Bengaluru became runner Up in Goa Street Race 2026

ಇತ್ತೀಚೆಗೆ ಗೋವಾದಲ್ಲಿ ‘ಗೋವಾ ಸ್ಟ್ರೀಟ್ ರೇಸ್​ 2026’ ನಡೆಯಿತು. ಇದರಲ್ಲಿ ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಎರಡನೇ ಸ್ಥಾನ ಪಡೆದುಕೊಂಡಿದೆ. ಇದು ಸುದೀಪ್ ಅವರಿಗೆ ಖುಷಿ ನೀಡಿದೆ. ಸುದೀಪ್ ನಟನೆಯ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಕ್ರಿಕೆಟ್ ಎಂದರೆ ಅವರಿಗೆ ಬಲು ಇಷ್ಟ. ಇತ್ತೀಚೆಗೆ ಸಿಸಿಎಲ್​​ನಲ್ಲಿ ಅವರ ತಂಡ ಗೆಲುವು ಸಾಧಿಸಿತು. ಅವರು ಈಗ ರೇಸಿಂಗ್ ಕ್ಷೇತ್ರದಲ್ಲೂ ಗಮನ ಸೆಳೆದಿದ್ದಾರೆ. ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡದ ಮಾಲೀಕತ್ವ ಅವರ ಬಳಿ ಇದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

Bengaluru Air Quality: ಬೆಂಗಳೂರಿಗಿಂತಲೂ ಕಳಪೆ ಶಿವಮೊಗ್ಗದ ಏರ್ ಕ್ವಾಲಿಟಿ! – Kannada News | Bangalore Air Pollution Crisis: Shivamogga Air quality dropped more than Bengaluru

ಬೆಂಗಳೂರಿಗಿಂತಲೂ ಕಳಪೆ ಶಿವಮೊಗ್ಗದ ಏರ್ ಕ್ವಾಲಿಟಿ! ಬೆಂಗಳೂರು, ಫೆಬ್ರವರಿ 16: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಶಿವಮೊಗ್ಗದ AQI (Bengaluru Air Quality)ಇಂದು ಕಳಪೆ ಮಟ್ಟ ತಲುಪಿದೆ. ಬೆಂಗಳೂರು, ಮಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಅನಾರೋಗ್ಯಕರ ವಾಯು ಗುಣಮಟ್ಟವಿದ್ದು, ಇಂದಿನ ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರನ್ನೂ ಮೀರಿಸಿದೆ. 200ರ ಗಡಿ ತಲುಪಿರುವ ಶಿವಮೊಗ್ಗದ AQI, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 173ಕ್ಕೆ…

Read More