‘ಟಾಕ್ಸಿಕ್’ ಚಿತ್ರದಲ್ಲಿ ಕಾಣಿಸೋ ಈ ಜೋಕರ್ ಯಾರು? ಇನ್ನೂ ಎಷ್ಟು ಟ್ವಿಸ್ಟ್ ಇದ್ಯಪ್ಪ? – Kannada News | Who is Joker in Yash’s ‘Toxic’ Teaser: Fan Theories Explored

‘ಟಾಕ್ಸಿಕ್’ ಚಿತ್ರದ (Toxic Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಟೀಸರ್ ರಿಲೀಸ್ ಆದ ಬಳಿಕ ಜನರು ಥ್ರಿಲ್ ಆಗಿದ್ದಾರೆ. ಈ ಸಿನಿಮಾದ ಟೀಸರ್ ಸಂಪೂರ್ಣವಾಗಿ ಯಶ್ ಅವರ ಮೇಲೆ ಸಾಗಿದೆ. ಟೀಸರ್​​ನಲ್ಲಿ ಹಲವು ತಿಳಿಯದ ವಿಷಯಗಳಿವೆ. ಅದನ್ನು ಅಭಿಮಾನಿಗಳು ರಿವೀಲ್ ಮಾಡುತ್ತಿದ್ದಾರೆ. ಈಗ ಟೀಸರ್​ ಅಲ್ಲಿ ಕಾಣಿಸೋ ಜೋಕರ್ ಯಾರು ಎಂಬುದು ರಿವೀಲ್ ಆಗೋ ಸಮಯ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆದಿದೆ.

‘ಟಾಕ್ಸಿಕ್’ ಸಿನಿಮಾದ ಕಥೆ ಸಾಗೋದು 70 ಹಾಗೂ 80ರ ದಶಕದಲ್ಲಿ ಎನ್ನಲಾಗಿದೆ. ಆ ಸಂದರ್ಭದಲ್ಲಿ ಸರ್ಕಸ್ ಸಾಕಷ್ಟು ಪ್ರಚಲಿತದಲ್ಲಿ ಇತ್ತು. ಮನರಂಜನೆಗೆ ಹೆಚ್ಚಿನ ಆಯ್ಕೆ ಇಲ್ಲದ ಕಾರಣ ಜನರು ಮುಗಿಬಿದ್ದು ಸರ್ಕಸ್ ವೀಕ್ಷಣೆ ಮಾಡುತ್ತಿದ್ದರು. ‘ಟಾಕ್ಸಿಕ್’ ಚಿತ್ರದ ಕಥೆ ಆ ಘಟ್ಟದಲ್ಲೇ ಸಾಗುವುದರಿಂದ ‘ಟಾಕ್ಸಿಕ್’ ಚಿತ್ರದಲ್ಲಿ ಇದೇ ವಿಷಯ ಪ್ರಮುಖವಾಗಿ ತೆಗೆದುಕೊಳ್ಳಲಾಗಿದೆ.

ಮೊಟ್ಟ ಮೊದಲು ರಿಲೀಸ್ ಆದ ಗ್ಲಿಂಪ್ಸ್ ಅಲ್ಲಿ ಸರ್ಕಸ್ ಸೆಟ್ ತೋರಿಸಲಾಯಿತು. ಇತ್ತೀಚೆಗೆ ಬಿಡುಗಡೆ ಆದ ಟೀಸರ್ ಉದ್ದಕ್ಕೂ ಸರ್ಕಸ್ ವಿಷಯವನ್ನೇ ತೋರಿಸಲಾಗಿದೆ. ಅದರಲ್ಲಿ ಜೋಕರ್ ಓರ್ವನನ್ನು ತೋರಿಸಲಾಗಿತ್ತು. ಇದು ಯಶ್ ಅವರೇ ಎಂದು ಹೇಳಲಾಗುತ್ತಿದೆ. ಟಿಕೆಟ್ ಹಾಗೂ ರಾಯ ಹೆಸರಿನ ಎರಡು ಪಾತ್ರದಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಅಂದರೆ ಯಶ್ ಅವರದ್ದು ದ್ವಿಪಾತ್ರ. ಟಿಕೆಟ್​ ಪಾತ್ರಧಾರಿಯೇ ಜೋಕರ್ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾನ ಯಾವ ರಾಜ್ಯಗಳಲ್ಲಿ ಯಾರು ಹಂಚಿಕೆ ಮಾಡ್ತಾರೆ? ಇಲ್ಲಿದೆ ಸಂಪೂರ್ಣ ಪಟ್ಟಿ

ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ಹರಿದಾಡಿವೆ. ಇದಕ್ಕೆ ಸಾಕ್ಷಿಗಳನ್ನು ಕೂಡ ಒದಗಿಸಲಾಗಿದೆ. ಈ ಸಿನಿಮಾದಲ್ಲಿ ಇನ್ನೂ ಯಾವ ರೀತಿಯ ಟ್ವಿಸ್ಟ್​​ಗಳು ಇರಲಿವೆ ಎಂಬ ವಿಷಯದ ಬಗ್ಗೆ ಚರ್ಚೆ ನಡೆದಿದೆ. ಸಿನಿಮಾ ಡ್ರಗ್ಸ್ ಬಗ್ಗೆಯೂ ಇದೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಈ ಗ್ಯಾಂಗ್​​ಸ್ಟರ್ ಕಥೆ ಗಮನ ಸೆಳೆಯುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ! – Kannada News | Burglary Attempt Foiled by Alarm at Canara Bank in Bengaluru’s Seshadripuram

ಬೆಂಗಳೂರು, ಫೆಬ್ರವರಿ 24: ಬೆಂಗಳೂರಿನ ಶೇಷಾದ್ರಿಪುರಂ ಮುಖ್ಯ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನ ಯತ್ನ ವಿಫಲವಾಗಿದೆ. ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಕಳ್ಳರು ಬ್ಯಾಂಕ್‌ನ ಎಡಭಾಗದಲ್ಲಿದ್ದ ಕಿಟಕಿ ಗ್ರಿಲ್ ಮುರಿದು ಒಳನುಗ್ಗಿದ್ದಾರೆ. ಬ್ಯಾಂಕ್‌ನೊಳಗಡೆ ಪ್ರವೇಶಿಸಿದ ಆರೋಪಿ ಸಿಸಿಟಿವಿ ವೈರ್‌ಗಳನ್ನು ಕತ್ತರಿಸಲು ಪ್ರಯತ್ನಿಸಿದಾಗ ಅಲಾರಾಂ ಮೊಳಗಿದೆ. ಅಲಾರಾಂ ಶಬ್ದ ಕೇಳಿದ ತಕ್ಷಣ ಕಳ್ಳ ಗಾಬರಿಯಾಗಿ ಬಂದ ದಾರಿಯಲ್ಲೇ ಪರಾರಿಯಾಗಿದ್ದಾನೆ. ಬ್ಯಾಂಕ್‌ನ ಭದ್ರತಾ ಸಿಬ್ಬಂದಿ ಅಲಾರಾಂ ಮೊಳಗಿದಾಗ ಪರಿಶೀಲಿಸಿದ್ದರೂ, ಕಿಟಕಿಯ ಬಳಿ ಹೋಗಿ ನೋಡದೆ ನಿರ್ಲಕ್ಷಿಸಿದ್ದಾರೆ. ಬೆಳಗ್ಗೆ ಬ್ಯಾಂಕ್ ಸಿಬ್ಬಂದಿ ಬಂದು ನೋಡಿದಾಗ ಕಳ್ಳತನ ಯತ್ನದ ಬಗ್ಗೆ ತಿಳಿದುಬಂದಿದೆ.

ಮಾಹಿತಿ ಪಡೆದ ಶೇಷಾದ್ರಿಪುರಂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತುಮಕೂರು: ದರೋಡೆಕೋರರ ಸಿನಿಮೀಯವಾಗಿ ಕಾರಲ್ಲಿ ಚೇಸ್ ಮಾಡಿದ ಸ್ಥಳೀಯರು, ರೋಚಕ ಕಾರ್ಯಾಚರಣೆ ಹೇಗಿತ್ತು ಗೊತ್ತೇ? – Kannada News | Filmy Car Chase in Tumakuru: Locals Track Down Jewellery Robbers After Jagadamba Shop Heist

ದರೋಡೆಕೋರರ ಸಿನಿಮೀಯವಾಗಿ ಕಾರಲ್ಲಿ ಚೇಸ್ ಮಾಡಿದ ಸ್ಥಳೀಯರುImage Credit source: tv9

ತುಮಕೂರು, ಫೆಬ್ರವರಿ 24: ಸಿನಿಮಾ ಕಥೆಯನ್ನೇ ಮೀರಿಸುವ ರೋಚಕ ಚೇಸಿಂಗ್ ದೃಶ್ಯಕ್ಕೆ ತುಮಕೂರು (Tumakuru) ಜಿಲ್ಲೆ ಸೋಮವಾರ ಸಾಕ್ಷಿಯಾಗಿದೆ. ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಬೆಂಚೆಗೇಟ್ ಬಳಿ ಇರುವ ಜಗದಂಬಾ ಜ್ಯುವೆಲರಿ ಅಂಗಡಿಯಲ್ಲಿ ನಡೆದ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ, ಪೊಲೀಸರು ಎಂಟ್ರಿಯಾಗುವುದಕ್ಕೂ ಮುನ್ನ ಸ್ಥಳೀಯರೇ ಆರೋಪಿಗಳ ಬೆನ್ನಟ್ಟಿರುವುದು ಗಮನ ಸೆಳೆದಿದೆ.

ಫೆಬ್ರವರಿ 22ರಂದು ಮಧ್ಯಾಹ್ನ ಸುಮಾರು 2 ಗಂಟೆ ಸುಮಾರಿಗೆ ಮೂವರು ಅಪರಿಚಿತರು ಅಂಗಡಿಗೆ ನುಗ್ಗಿ, ಅಲ್ಲಿದ್ದ ಯುವಕ ಮತ್ತು ವೃದ್ಧೆಯ ಮೇಲೆ ಮೆಣಸಿನಕಾಯಿ ಪುಡಿ ಎರಚಿ ಚಿನ್ನ, ರೋಲ್ಡ್ ಗೋಲ್ಡ್ ಹಾಗೂ ಬೆಳ್ಳಿ ಆಭರಣಗಳನ್ನು ದೋಚಿಕೊಂಡು ಕೇವಲ 10 ನಿಮಿಷಗಳಲ್ಲಿ ಬೊಲೇರೋ ಕಾರಿನಲ್ಲಿ ಪರಾರಿಯಾಗಿದ್ದರು. ಈ ಕೃತ್ಯ ರಾಜಸ್ಥಾನ ಮೂಲದ ಅರವಿಂದ್ ಮತ್ತು ಆತನ ಗ್ಯಾಂಗ್ ನಡೆಸಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ಸ್ಥಳೀಯರ ಸಾಹಸಮಯ ಚೇಸಿಂಗ್

ಅಂಗಡಿಯಿಂದ ದರೋಡೆಕೋರರು ಪರಾರಿಯಾಗುವ ದೃಶ್ಯವನ್ನು ಕಣ್ಣಾರೆ ಕಂಡ ಸ್ಥಳೀಯರು ತಕ್ಷಣವೇ ತಮ್ಮ ಕಾರಿನಲ್ಲಿ ಬೆನ್ನಟ್ಟಿದ್ದಾರೆ. ಸುಮಾರು 8 ರಿಂದ 10 ನಿಮಿಷಗಳ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಕಾರು ಚೇಸಿಂಗ್ ಸಿನಿಮಾವನ್ನೇ ಮೀರಿಸುವಂತಿತ್ತು. ದರೋಡೆಕೋರರ ಬೊಲೇರೋ ಕಾರನ್ನು ಸ್ಥಳೀಯರು ಹಿಂಬಾಲಿಸಿ ಅಡ್ಡಗಟ್ಟಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರ ಎಂಟ್ರಿ, ಖದೀಮರು ಕಾಡಿಗೆ ಪರಾರಿ

ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ಆರೋಪಿಗಳು ವಾಹನ ಬಿಟ್ಟು ಸಮೀಪದ ಕಾಡಿನತ್ತ ಓಡಿ ಪರಾರಿಯಾಗಿದ್ದರು. ರಾತ್ರೋರಾತ್ರಿ ಕಾಡಿನಲ್ಲಿ ಕುಂಬಿಂಗ್ ಕಾರ್ಯಾಚರಣೆ ನಡೆಸಿದ ಶಿರಾ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ತುಮಕೂರು ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ

ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳವು ಮಾಡಿದ ಚಿನ್ನಾಭರಣಗಳನ್ನು ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲೇ ಸಂಚಲನ ಮೂಡಿಸಿದ್ದ ಈ ಪ್ರಕರಣವನ್ನು ವೇಗವಾಗಿ ಭೇದಿಸಿದ ಪೊಲೀಸರ ಕಾರ್ಯಕ್ಷಮತೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಹೋಮದ ಭಸ್ಮವನ್ನು ತಿಲಕವಾಗಿ ಇಟ್ಟುಕೊಳ್ಳುವುದರಿಂದ ಆಗುವ ಲಾಭಗಳು – Kannada News | Benefits of applying homa tilaka a daily devotional insight

ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ಹೋಮಕ್ಕೆ ವಿಶಿಷ್ಟ ಸ್ಥಾನವಿದೆ. ಇಂತಹ ಹೋಮಗಳ ನಂತರ ದೊರೆಯುವ ತಿಲಕಧಾರಣೆಯು ಅನೇಕ ಶುಭಫಲಗಳನ್ನು ತರುತ್ತದೆ. ಅನೇಕರು ಹೋಮದ ತಿಲಕವನ್ನು ಹೋಮ ನಡೆದ ದಿನ ಮಾತ್ರ ಧರಿಸುತ್ತಾರೆ, ಆದರೆ ಅದರ ಪ್ರಾಮುಖ್ಯತೆಯನ್ನು ಹೆಚ್ಚು ಆಳವಾಗಿ ತಿಳಿದುಕೊಳ್ಳುವುದು ಅವಶ್ಯಕ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ.

ಗುರೂಜಿ ಹೇಳುವಂತೆ, ಯಾವುದೇ ಹೋಮದ ತಿಲಕವನ್ನು ಎಷ್ಟು ದಿನಗಳವರೆಗೆ ಇಟ್ಟುಕೊಳ್ಳಬಹುದು ಎಂಬ ಪ್ರಶ್ನೆಗೆ ಉತ್ತರವಾಗಿ, ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ ತನಕ ಅದನ್ನು ಇಟ್ಟುಕೊಳ್ಳಬಹುದು. ಸೂರ್ಯ ಭಗವಾನರು ಇಡೀ ಭೂಮಂಡಲ ಮತ್ತು ನಭೋಮಂಡಲದ ಜಗದ ಚಕ್ಷು ಆಗಿದ್ದು, ಪಂಚಭೂತಗಳನ್ನು ನಿರ್ವಹಣೆ ಮಾಡುವ ಶಕ್ತಿ. ಆದ್ದರಿಂದ, ಸೂರ್ಯ ಒಂದು ರಾಶಿಯಲ್ಲಿ ಇರುವ ಅವಧಿಯಾದ ಒಂದು ತಿಂಗಳ ಮಟ್ಟಿಗೆ ಈ ತಿಲಕವನ್ನು ಶೇಖರಣೆ ಮಾಡಿ ಹಣೆಗೆ ಧರಿಸಬಹುದು. ನಂತರ ಅದನ್ನು ನದಿಗೆ ಅರ್ಪಿಸಬಹುದು ಅಥವಾ ಯಾರೂ ತುಳಿಯದ ಪವಿತ್ರ ಸ್ಥಳದಲ್ಲಿ ಇಡಬಹುದು. ಹೋಮದ ತಿಲಕವನ್ನು ಸಂಗ್ರಹಿಸಿಡುವ ಈ ಪದ್ಧತಿಯು ಹೆಚ್ಚಿನ ಶುಭ ಫಲಗಳನ್ನು ತರುತ್ತದೆ.

ಹಿಂದೂ ಸಂಪ್ರದಾಯದಲ್ಲಿ ಹಣೆಗೆ ಪ್ರಾಶಸ್ತ್ಯ ನೀಡಲಾಗುತ್ತದೆ, ಏಕೆಂದರೆ ಹಣೆಯ ಮಧ್ಯಭಾಗದಲ್ಲಿ ಆಜ್ಞಾಚಕ್ರವಿದೆ. ತಿಲಕಧಾರಣೆಯು ಆಜ್ಞಾಚಕ್ರವನ್ನು ಜಾಗೃತಿಗೊಳಿಸುತ್ತದೆ ಮತ್ತು ದೃಷ್ಟಿಯಾಗುವುದನ್ನು ತಡೆಯುತ್ತದೆ. ಈ ತಿಲಕವು ದೈವಿಕ ಶಕ್ತಿಯ ಸಂಕೇತವಾಗಿದ್ದು, ನಮ್ಮನ್ನು ಸಾತ್ವಿಕ ನೆಲೆಗೆ ತಲುಪಿಸುತ್ತದೆ. ಪುರಾಣಗಳಲ್ಲಿ ರಾಕ್ಷಸರೂ ತಿಲಕ ಧರಿಸುತ್ತಿದ್ದರು ಎಂದು ಹೇಳಿದರೂ, ಅವರಲ್ಲಿ ಅಖಂಡ ಶಕ್ತಿ ಇದ್ದರೂ, ಬುದ್ಧಿಯ ಸರಿಯಾದ ಉಪಯೋಗವಿಲ್ಲದೆ ಅವರು ಕೆಟ್ಟರು. ಆದರೆ ತಿಲಕ ಧಾರಣೆಯಿಂದ ಶಕ್ತಿ ವೃದ್ಧಿಯಾಗುತ್ತದೆ.

ಇದನ್ನೂ ಓದಿ: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಹೋಮದ ಭಸ್ಮದಲ್ಲಿ ತುಪ್ಪ, ವಿವಿಧ ಗಿಡಮೂಲಿಕೆಗಳು ಸೇರಿರುತ್ತವೆ. ಈ ಭಸ್ಮವನ್ನು ತಿಲಕ ರೂಪದಲ್ಲಿ ಹಣೆಗೆ ಧರಿಸುವುದರಿಂದ ನಕಾರಾತ್ಮಕ ಶಕ್ತಿಗಳು ದೂರವಾಗುತ್ತವೆ, ಆಲೋಚನಾ ಶಕ್ತಿ ಹೆಚ್ಚಾಗುತ್ತದೆ ಮತ್ತು ಮನಸ್ಸಿನ ಭಾವನೆಗಳಿಗೆ ಪೂರಕವಾಗಿ ಜೀವನ ಸುಧಾರಿಸುತ್ತದೆ. ದುಷ್ಟಶಕ್ತಿಗಳು ದೇಹಕ್ಕೆ ಪ್ರವೇಶಿಸುವುದಿಲ್ಲ. ವೈಜ್ಞಾನಿಕ ದೃಷ್ಟಿಯಿಂದ ನೋಡಿದರೆ, ಹೋಮದ ಭಸ್ಮದಲ್ಲಿರುವ ತುಪ್ಪ ಮತ್ತು ಗಿಡಮೂಲಿಕೆಗಳು ಔಷಧೀಯ ಗುಣಗಳನ್ನು ಹೊಂದಿರುತ್ತವೆ. ನಮ್ಮ ದೇಹವು ಪಂಚಭೂತಗಳಿಂದ ಕೂಡಿದ್ದು, ಈ ಔಷಧೀಯ ಗುಣಗಳು ದೇಹಕ್ಕೆ ಧನಾತ್ಮಕ ಶಕ್ತಿಯನ್ನು ನೀಡುತ್ತವೆ. ಮಾನಸಿಕ ಒತ್ತಡಗಳು ಕಡಿಮೆಯಾಗಿ, ಪವಿತ್ರ ಭಾವನೆಗಳು ಹೆಚ್ಚಾಗುತ್ತವೆ.

ಈ ಹೋಮದ ತಿಲಕವನ್ನು ವಿವಿಧ ಸಂದರ್ಭಗಳಲ್ಲಿ ಧರಿಸುವುದರಿಂದ ಶುಭ ಫಲಗಳು ದೊರೆಯುತ್ತವೆ. ಪರೀಕ್ಷೆಗಳಿಗೆ ಹೋಗುವವರು, ವಿವಾಹ ವಿಷಯಗಳ ಚರ್ಚೆಗಳಲ್ಲಿ ಭಾಗವಹಿಸುವವರು, ಭೂಮಿಯ ವ್ಯಾಪಾರಕ್ಕೆ ತೆರಳುವವರು, ಉದ್ಯೋಗಕ್ಕಾಗಿ ಸಂದರ್ಶನಕ್ಕೆ ಹೋಗುವವರು, ಮತ್ತು ನ್ಯಾಯಯುತವಾದ ಕೋರ್ಟ್ ಕೆಲಸಗಳಿಗೆ ಹೋಗುವವರು ಇದನ್ನು ಧರಿಸಬಹುದು. ಇದು ಧನಾತ್ಮಕ ಶಕ್ತಿಯನ್ನು ನೀಡಿ, ಸಕಾರಾತ್ಮಕ ಫಲಿತಾಂಶಗಳಿಗೆ ಸಹಕಾರಿಯಾಗುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭೋಜ್​ಶಾಲಾದಲ್ಲಿರುವ ಕಮಲ್ ಮೌಲಾ ಮಸೀದಿಯನ್ನು ಪ್ರಾಚೀನ ದೇವಾಲಯದ ಅವಶೇಷಗಳ ಬಳಸಿಕೊಂಡು ನಿರ್ಮಿಸಲಾಗಿದೆ: ಎಎಸ್​ಐ – Kannada News | Dhar Bhojshala: ASI Confirms Ancient Temple Remains Under Kamal Maula Mosque

ಧಾರ್, ಫೆಬ್ರವರಿ 24: ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜ್​ಶಾಲಾ ಸಂಕೀರ್ಣದೊಳಗೆ ಇರುವ ಕಮಲ್ ಮೌಲಾ ಮಸೀದಿ(Mosque)ಯನ್ನು ಪ್ರಾಚೀನ ದೇವಾಲಯದ ಅವಶೇಷಗಳನ್ನು ಬಳಸಿಕೊಂಡು ನಿರ್ಮಿಸಲಾಗಿದೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆಯ ವರದಿ ಹೇಳಿದೆ. ತನ್ನ ತನಿಖಾ ವರದಿಯಲ್ಲಿ ಪ್ರಾಚೀನ ದೇವಾಲಯಗಳ ಅವಶೇಷಗಳನ್ನು ಬಳಸಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದಿದೆ.

ಎಎಸ್​ಐ ಪ್ರಕಾರ, ಈ ತೀರ್ಮಾನವು ವೈಜ್ಞಾನಿಕ ತನಿಖೆ, ಸಮೀಕ್ಷೆಗಳು, ಉತ್ಖನನಗಳು, ಉತ್ಖನನ ಅವಶೇಷಗಳ ಅಧ್ಯಯನ ಮತ್ತು ವಾಸ್ತುಶಿಲ್ಪದ ರಚನೆಗಳು, ಶಾಸನಗಳು, ಕಲೆ ಮತ್ತು ಶಿಲ್ಪಗಳ ವಿಶ್ಲೇಷಣೆಯನ್ನು ಆಧರಿಸಿದೆ. ಈ ಎಎಸ್​ಐ ವರದಿಯನ್ನು ಮದ್ಯಪ್ರದೇಶ ಹೈಕೋರ್ಟ್​​ನ ಇಂದೋರ್ ಪೀಠಕ್ಕೆ ಸಲ್ಲಿಸಲಾಗಿತ್ತು, 10 ಸಂಪುಟಗಳಲ್ಲಿ ಬಿಡುಗಡೆ ಮಾಡಲಾದ ಸುಮಾರು 2,000 ಪುಟಗಳ ವರದಿಯನ್ನು ASI ಹೆಚ್ಚುವರಿ ಮಹಾನಿರ್ದೇಶಕ ಅಲೋಕ್ ತ್ರಿಪಾಠಿ ನೇತೃತ್ವ ವಹಿಸಿದ್ದರು.

ಉತ್ಖನನದ ಸಮಯದಲ್ಲಿ ಒಟ್ಟು 94 ಶಿಲ್ಪಗಳು ಮತ್ತು ಅವುಗಳ ಅವಶೇಷಗಳು ಕಂಡುಬಂದವು, ಅವುಗಳಲ್ಲಿ ಹಲವು ಹಾನಿಗೊಳಗಾಗಿದ್ದವು. ಇವುಗಳಲ್ಲಿ ಗಣೇಶ, ಬ್ರಹ್ಮ, ನರಸಿಂಹ ಮತ್ತು ಭೈರವ ಸೇರಿದಂತೆ ಹಲವಾರು ದೇವತೆಗಳ ಕೆತ್ತನೆಗಳು ಹಾಗೂ ಮಾನವ ಮತ್ತು ಪ್ರಾಣಿಗಳ ಆಕೃತಿಗಳು ಸೇರಿವೆ. ಈ ಸ್ಥಳವು ಸರಸ್ವತಿ ದೇವಿಗೆ ಅರ್ಪಿತವಾದ ಪ್ರಾಚೀನ ದೇವಾಲಯವಾಗಿರಬಹುದು ಎಂದು ಎಎಸ್​ಐ ಸೂಚಿಸಿದೆ.

ಮತ್ತಷ್ಟು ಓದಿ: ಬಾಬರಿ ಮಸೀದಿ ಶಿಲಾನ್ಯಾಸದ ವೇಳೆ ತಲೆ ಮೇಲೆ ಇಟ್ಟಿಗೆ ಹೊತ್ತುಕೊಂಡು ಬಂದ ಮುಸ್ಲಿಮರು

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಅರ್ಜಿದಾರರು ಮತ್ತು ಹಿಂದೂ ಫ್ರಂಟ್ ಫಾರ್ ಜಸ್ಟೀಸ್‌ನ ರಾಜ್ಯ ಉಪಾಧ್ಯಕ್ಷ ಆಶಿಶ್ ಗೋಯಲ್, ಎಎಸ್‌ಐ ಸಮೀಕ್ಷೆಯು ಸಂಪೂರ್ಣ ರಚನೆಯು ಪರ್ಮಾರ್ ರಾಜವಂಶದ ಹಿಂದಿನದು ಮತ್ತು ರಾಜ ಭೋಜ್ ಮತ್ತು ಅವರ ಪೂರ್ವಜರಿಂದ ನಿರ್ಮಿಸಲ್ಪಟ್ಟಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಹೇಳಿದ್ದಾರೆ. ಈ ರಚನೆಯು ಸರಿಸುಮಾರು 950 ರಿಂದ 1,000 ವರ್ಷಗಳಷ್ಟು ಹಳೆಯದು ಎಂದರು.

ಮತ್ತೊಬ್ಬ ಅರ್ಜಿದಾರರಾದ ಭೋಜ್ ಉತ್ಸವ ಸಮಿತಿ ಸಂಚಾಲಕ ಅಶೋಕ್ ಜೈನ್ ಮಾತನಾಡಿ, ನಮ್ಮ ಬೇಡಿಕೆ ಮೊದಲಿನಿಂದಲೂ ಸ್ಪಷ್ಟವಾಗಿದೆ, ಸ್ಥಳವು ಮಸೀದಿಯಾಗಿದ್ದರೆ, ಅದನ್ನು ಮುಸ್ಲಿಂ ಕಡೆಯವರಿಗೆ ನೀಡಬೇಕು ಮತ್ತು ಅದು ದೇವಾಲಯವಾಗಿದ್ದರೆ, ಅದನ್ನು ಹಿಂದೂ ಕಡೆಯವರಿಗೆ ನೀಡಬೇಕು ಎಂದು ಹೇಳಿದರು.

ನ್ಯಾಯಮೂರ್ತಿ ವಿಜಯ್ ಕುಮಾರ್ ಶುಕ್ಲಾ ಮತ್ತು ನ್ಯಾಯಮೂರ್ತಿ ಅಲೋಕ್ ಅವಸ್ಥಿ ಅವರು ಪಕ್ಷಗಳು ತಮ್ಮ ಆಕ್ಷೇಪಣೆಗಳು ಮತ್ತು ಪ್ರತಿಕ್ರಿಯೆಗಳನ್ನು ಹದಿನೈದು ದಿನಗಳೊಳಗೆ ಸಲ್ಲಿಸುವಂತೆ ಕೇಳಿದ್ದಾರೆ, ಮುಂದಿನ ವಿಚಾರಣೆಯನ್ನು ಮಾರ್ಚ್ 16ಕ್ಕೆ ನಿಗದಿಪಡಿಸಲಾಗಿದೆ.

ಧಾರ್‌ನಲ್ಲಿರುವ ಐತಿಹಾಸಿಕ ಸಂಕೀರ್ಣದ ವಿವಾದದ ನಂತರ, ಎಎಸ್‌ಐ ಏಪ್ರಿಲ್ 7, 2003 ರಂದು ಆದೇಶ ಹೊರಡಿಸಿತ್ತು, ಪ್ರತಿ ಮಂಗಳವಾರ ಹಿಂದೂಗಳು ಆ ಸ್ಥಳದಲ್ಲಿ ಪೂಜೆ ಸಲ್ಲಿಸಲು ಮತ್ತು ಪ್ರತಿ ಶುಕ್ರವಾರ ಮುಸ್ಲಿಮರು ಅಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 9:58 am, Tue, 24 February 26

Source link

ರಣಜಿ ಟ್ರೋಫಿ ಫೈನಲ್ ಫೈಟ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | Karnataka vs Jammu and Kashmir, Ranji Final Playing XI

ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು- ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇದೀಗ ಕಮ್ರಾನ್ ಇಕ್ಬಾಲ್ ಹಾಗೂ ಯಾವರ್ ಹಸನ್ ಇನಿಂಗ್ಸ್ ಆರಂಭಿಸಿದ್ದಾರೆ.

ಇನ್ನು ಈ ಪಂದ್ಯಕ್ಕಾಗಿ ಕರ್ನಾಟಕ ತಂಡವು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ತಂಡದಲ್ಲಿ ಅನುಭವಿ ದಾಂಡಿಗರಾದ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇದ್ದು, ಇಬ್ಬರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ನಾಯಕ ದೇವದತ್ ಪಡಿಕ್ಕಲ್ ಬ್ಯಾಟ್ ಬೀಸಲಿದ್ದಾರೆ.

ನಾಲ್ಕನೇ ಕ್ರಮಾಂಕದಲ್ಲಿ ಮತ್ತೋರ್ವ ಅನುಭವಿ ದಾಂಡಿಗ ಕರುಣ್ ನಾಯರ್ ಕಣಕ್ಕಿಳಿಯಲಿದ್ದಾರೆ. ಇನ್ನು ಯುವ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಹಾಗೆಯೇ ಆಲ್​ರೌಂಡರ್ ಆಗಿ ಶ್ರೇಯಸ್ ಗೋಪಾಲ್ ಕಣಕ್ಕಿಳಿದರೆ, ವಿಎಕಟ್ ಕೀಪರ್ ಬ್ಯಾಟರ್ ಆಗಿ ಕೃತಿಕ್ ಕೃಷ್ಣ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬೌಲರ್​ಗಳಾಗಿ ವಿದ್ಯಾಧರ್ ಪಾಟೀಲ್, ವಿಜಯಕುಮಾರ್ ವೈಶಾಕ್, ಶಿಖರ್ ಶೆಟ್ಟಿ ಹಾಗೂ ಪ್ರಸಿದ್ಧ್ ಕೃಷ್ಣ ಕರ್ನಾಟಕ ಪ್ಲೇಯಿಂಗ್ ಇಲೆವೆನ್​ನಲ್ಲಿದ್ದಾರೆ.

ಮತ್ತೊಂದೆಡೆ ಜಮ್ಮು-ಕಾಶ್ಮೀರ ಪರ ಬ್ಯಾಟಿಂಗ್ ಶಕ್ತಿಯಾಗಿ ಪರಸ್ ಡೋಗ್ರಾ ಹಾಗೂ ಅಬ್ದುಲ್ ಸಮದ್ ಇದ್ದಾರೆ. ಇನ್ನು ಬೌಲಿಂಗ್​ನಲ್ಲಿ ಜಮ್ಮು-ಕಾಶ್ಮೀರ ತಂಡ ನೆಚ್ಚಿಕೊಂಡಿರುವು ಆಖಿಬ್ ನಬಿ ಅವರನ್ನು. ಹೀಗಾಗಿ ಕಾಶ್ಮೀರಿ ಪಡೆಯಿಂದ ಕೂಡ ಉತ್ತಮ ಪೈಪೋಟಿಯನ್ನು ನಿರೀಕ್ಷಿಸಬಹುದು. ಅದರಂತೆ ಈ ಪಂದ್ಯದಲ್ಲಿ ಕಣಕ್ಕಿಳಿದಿರುವ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿವೆ…

ಜಮ್ಮು ಮತ್ತು ಕಾಶ್ಮೀರ ಪ್ಲೇಯಿಂಗ್ XI: ಕಮ್ರಾನ್ ಇಕ್ಬಾಲ್, ಯಾವರ್ ಹಸನ್, ಶುಭಂ ಪುಂಡೀರ್, ಪರಸ್ ಡೋಗ್ರಾ (ನಾಯಕ), ಅಬ್ದುಲ್ ಸಮದ್, ಕನ್ಹಯ್ಯಾ ವಾಧವನ್ (ವಿಕೆಟ್ ಕೀಪರ್), ಅಬಿದ್ ಮುಷ್ತಾಕ್, ಆಖಿಬ್ ನಬಿ ದಾರ್, ಯುದ್ವೀರ್ ಸಿಂಗ್ ಚರಕ್, ಸಾಹಿಲ್ ಲೋತ್ರಾ, ಸುನೀಲ್ ಕುಮಾರ್.

ಇದನ್ನೂ ಓದಿ: ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಬ್ರಿಯಾನ್ ಬೆನ್ನೆಟ್

ಕರ್ನಾಟಕ ಪ್ಲೇಯಿಂಗ್ XI: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ದೇವದತ್ ಪಡಿಕ್ಕಲ್ (ನಾಯಕ), ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ಕೃತಿಕ್ ಕೃಷ್ಣ (ವಿಕೆಟ್ ಕೀಪರ್), ವಿದ್ಯಾಧರ್ ಪಾಟೀಲ್, ವಿಜಯ್ ಕುಮಾರ್ ವೈಶಾಕ್, ಶಿಖರ್ ಶೆಟ್ಟಿ, ಪ್ರಸಿದ್ಧ್ ಕೃಷ್ಣ.

Source link

ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ದೊಡ್ಡ ಎಡವಟ್ಟು? – Kannada News | Big Loophole in Renukaswamy Murder Case Big Twist in Case

ರೇಣುಕಾಸ್ವಾಮಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಎದುರಾಗೋ ಸೂಚನೆ ಸಿಕ್ಕಿದೆ. ತನಿಖಾಧಿಕಾರಿ ಗಿರೀಶ್ ನಾಯಕ್ ವಿರುದ್ಧ ಗಂಭೀರ ಆರೋಪ ಒಂದನ್ನು ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿಗಳನ್ನು ಟೈಲ್ಸ್ ಇರೋ ಕ್ಯಾಬಿನ್ ಅಲ್ಲಿ ಫೋಟೋ ತೆಗೆಯಲಾಗಿತ್ತಂತೆ. ಆದರೆ, ಕಾಮಾಕ್ಷಿ ಪಾಳ್ಯದಲ್ಲಿ ಆ ರೀತಿಯ ಟೈಲ್ಸ್ ಇಲ್ಲ ಎಂದು ಹೇಳಲಾಗಿದೆ. ಇದರಿಂದ ಸಾಕಷ್ಟು ಚರ್ಚೆ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಶಾರ್ಟ್​ ಸರ್ಕ್ಯೂಟ್​​ನಿಂದ ಮನೆಯಲ್ಲಿ ಭಾರಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ – Kannada News | Short Circuit Sparks Deadly House Fire in Meerut, Six Killed

ಮೀರತ್, ಫೆಬ್ರವರಿ 24: ಶಾರ್ಟ್ ಸರ್ಕ್ಯೂಟ್​​ನಿಂದಾಗಿ ಮನೆಯಲ್ಲಿ ಭಾರಿ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಐವರು ಮಕ್ಕಳು ಸೇರಿ ಆರು ಮಂದಿ ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಮೀರತ್​​ನಲ್ಲಿ ನಡೆದಿದೆ. ಮೃತರಲ್ಲಿ ಆರು ತಿಂಗಳಿಗಿಂತ ಕಡಿಮೆ ವಯಸ್ಸಿನ ಇಬ್ಬರು ಅವಳಿ ಶಿಶುಗಳು ಸೇರಿದ್ದಾರೆ. ಸೋಮವಾರ ಸಂಜೆ ಇಕ್ಬಾಲ್ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿರುಚಾಟ ಕೇಳಿ ಮತ್ತು ಜ್ವಾಲೆಯ ತೀವ್ರತೆ ನೋಡಿ ಸ್ಥಳೀಯರು ಕೂಡಲೇ ಸಹಾಯಕ್ಕೆ ಮುಂದಾದರು.

ಬೆಂಕಿಯು ಕೆಳ ಮಹಡಿಯಿಂದ ಮನೆಯ ಮೇಲಿನ ಮಹಡಿಗೆ ವೇಗವಾಗಿ ಹಬ್ಬಿತ್ತು, ಕುಟುಂಬ ಸದಸ್ಯರು ಮನೆಯ ಒಳಗೆ ಸಿಲುಕಿಕೊಂಡರು. ಗಾಯಾಳುಗಳನ್ನು ಛಾವಣಿಯ ಮೂಲಕ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ, ಇದು ಆ ಪ್ರದೇಶದಲ್ಲಿ ಅವ್ಯವಸ್ಥೆಗೆ ಕಾರಣವಾಗಿದೆ.

ಅಗ್ನಿಶಾಮಕ ದಳದ ತಂಡಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ.ಎಸ್‌ಪಿ ಸಿಟಿ ಆಯುಷ್ ವಿಕ್ರಮ್ ಸಿಂಗ್ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು, ಆದರೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಲಿಸಾರಿ ಗೇಟ್ ಪ್ರದೇಶದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಒಬ್ಬ ಮಹಿಳೆ ಮತ್ತು ಐದು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ವಿದ್ಯುತ್ ಉಪಕರಣದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ ಎಂದು ಎಸ್‌ಎಸ್‌ಪಿ ಪಾಂಡೆ ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಬ್ರಿಯಾನ್ ಬೆನ್ನೆಟ್ – Kannada News | Brian bennett creates new world record in t20 world cup 2026

ಟಿ20 ವಿಶ್ವಕಪ್​ನಲ್ಲಿ ಝಿಂಬಾಬ್ವೆ ತಂಡದ ಆರಂಭಿಕ ದಾಂಡಿಗ ಬ್ರಿಯಾನ್ ಬೆನ್ನೆಟ್ (brian bennett) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಬರೋಬ್ಹರಿ 180 ರನ್​ಗಳನ್ನು ಪೇರಿಸುವ ಮೂಲಕ. ಅಂದರೆ ವಿಶ್ವಕಪ್ ಇತಿಹಾಸದಲ್ಲಿ ಔಟ್ ಆಗುವ ಮುನ್ನ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬ್ರಿಯಾನ್ ಹೆಸರಿಗೆ ಸೇರ್ಪಡೆಯಾಗಿದೆ.

ಈ ಬಾರಿಯ ವಿಶ್ವಕಪ್​ನಲ್ಲಿ ಒಮಾನ್ ವಿರುದ್ಧ ಅಜೇಯ 48 ರನ್ ಬಾರಿಸಿದ್ದ ಬ್ರಿಯಾನ್ ಬೆನ್ನೆಟ್, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಅಜೇಯ 64 ರನ್​ ಗಳಿಸಿದ್ದರು. ಇನ್ನು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅಜೇಯ 63 ರನ್ ಬಾರಿಸಿದ್ದರು. 

ಅಂದರೆ ಮೊದಲ ಮೂರು ಇನಿಂಗ್ಸ್​ಗಳಲ್ಲಿ ಬ್ರಿಯಾನ್ ಬೆನ್ನೆಟ್ ಔಟ್ ಆಗಿರಲಿಲ್ಲ. ಆದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಬ್ರಿಯಾನ್ ಬೆನ್ನೆಟ್ ಕೇವಲ 5 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.

ಈ ಮೂಲಕ ಕಳೆದ 4 ಇನಿಂಗ್ಸ್​ಗಳ ಮೂಲಕ ಬ್ರಿಯಾನ್ ಬೆನ್ನೆಟ್ ಬರೋಬ್ಬರಿ 180 ರನ್​ಗಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಔಟಾಗುವ ಮುನ್ನ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

2022 ರ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಮೊದಲ ಮೂರು ಇನಿಂಗ್ಸ್​ಗಳಲ್ಲಿ 82*, 62*, 12 ರನ್ ಬಾರಿಸಿದ್ದರು. ಈ ಮೂಲಕ 156 ರನ್ ಬಾರಿಸಿ ಟಿ20 ವಿಶ್ವಕಪ್​ನಲ್ಲಿ ಔಟಾಗುವ ಮುನ್ನ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದೀಗ 48*, 64*, 63*, 5 ರನ್​ಗಳಿಸುವ ಮೂಲಕ ಬ್ರಿಯಾನ್ ಬೆನ್ನೆಟ್ ಒಟ್ಟು 180 ರನ್ ಕಲೆಹಾಕಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ ದಾಖಲೆ ಮುರಿದು ಟಿ20 ವಿಶ್ವಕಪ್​ನಲ್ಲಿ ಔಟಾಗುವ ಮುನ್ನ ಅತೀ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Published On – 9:09 am, Tue, 24 February 26

Source link

ಬೆಂಗಳೂರು ಏರ್​ಪೋರ್ಟಲ್ಲಿ ಭರ್ಜರಿ ಕಾರ್ಯಾಚರಣೆ: ಬ್ಯಾಂಕಾಕ್, ಹಾಂಕಾಂಗ್​ನಿಂದ ಬರ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್ ವಶ – Kannada News | Massive Drug Bust at Bengaluru Airport: Hydroponic Ganja Worth Rs 3.1 Crore Seized, MDMA Haul in Ramanagara

ದೇವನಹಳ್ಳಿ/ರಾಮನಗರ: ಕರ್ನಾಟಕದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿದಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್‌ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಭಾರೀ ಪ್ರಮಾಣದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಸುಮಾರು 8 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ 2.8 ಕೋಟಿ ರೂ. ಎಂದು ತಿಳಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಹಾಂಕಾಂಗ್‌ನಿಂದ ಬಂದಿದ್ದ ಮತ್ತೊಬ್ಬ ಪ್ರಯಾಣಿಕನ ಬಳಿಯಿಂದ 900 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು 31.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇಬ್ಬರೂ ಪ್ರಯಾಣಿಕರು ಗಾಂಜಾವನ್ನು ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟುಕೊಂಡು ಬಂದಿದ್ದರು ಎನ್ನಲಾಗಿದೆ.

ತಕ್ಷಣ ಕ್ರಮ ಕೈಗೊಂಡ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು NDPS ಕಾಯ್ದೆಯಡಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಏರ್‌ಪೋರ್ಟ್ ಭದ್ರತಾ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಿಂದ ಈ ಡ್ರಗ್ಸ್ ಸ್ಮಗ್ಲಿಂಗ್ ಯತ್ನ ವಿಫಲಗೊಂಡಿದೆ.

ರಾಮನಗರದಲ್ಲಿ 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ರಾಮನಗರ ಜಿಲ್ಲೆಯ ಐಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಒಂದೂವರೆ ಕೋಟಿ ರೂ. ಮೌಲ್ಯದ 750 ಗ್ರಾಂ ಡ್ರಗ್ಸ್ ವಶಪಡಿಸಲಾಗಿದೆ. ದಾಳಿಯ ವೇಳೆ 450 MDMA ಮಾತ್ರೆಗಳು ಹಾಗೂ 550 ಗ್ರಾಂ ಕ್ರಿಸ್ಟಲ್ ಡ್ರಗ್ಸ್ ಸೀಜ್ ಮಾಡಲಾಗಿದೆ.

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಗೋರಿಪಾಳ್ಯದ ಸಜ್ಜಿಲ್ ಪಾಷಾ ಅಲಿಯಾಸ್ ಸಲ್ಮಾನ್, ಸಾದಿಕ್ ಹಾಗೂ ಉಗಾಂಡ ಮೂಲದ ನಾನಾ ಜಾನ್ಸನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೆಂಗಳೂರಿನಿಂದ ಡ್ರಗ್ಸ್ ತಂದು ರಾಮನಗರದಲ್ಲಿ ಮಾರಾಟ ಮಾಡುತ್ತಿದ್ದರೆಂಬದು ತನಿಖೆಯಲ್ಲಿ ಬಹಿರಂಗವಾಗಿದೆ.

ಈ ಸಂಬಂಧ ಐಜೂರು ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬೆಂಗಳೂರು ದಕ್ಷಿಣ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ನಿಗ್ರಹಿಸಲು ಕಟ್ಟುನಿಟ್ಟಿನ ಕ್ರಮ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಮುಂದುವರಿದ ಡ್ರಗ್ ಬೇಟೆ: ಮಾದಕವಸ್ತು ಸಾಗಿಸುತ್ತಿದ್ದ ನಾಲ್ವರ ಬಂಧನ

ಮತ್ತೊಂದೆಡೆ, ಮೈಸೂರು ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಳಿ ಮಾಡಿರುವ ಪೊಲೀಸರು, 10.30 ಲಕ್ಷ ರೂ. ಮೌಲ್ಯದ 103 ಗ್ರಾಂ ಎಂಡಿಎಂಎ ವಶಕ್ಕೆ ಪಡೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version