ಪದ್ಮಭೂಷಣ ತಿರಸ್ಕರಿಸಿದ್ದ ಎಸ್. ಜಾನಕಿ; ಕಾರಣ ತಿಳಿಸಿದ ಸಂಗೀತ ನಿರ್ದೇಶಕ ಆರ್ಪಿ ಪಟ್ನಾಯಕ್ – Kannada News | Music Director RP Patnaik reveals why singer S Janaki rejected Padma Bhushan Award
ಭಾರತೀಯ ಸಿನಿಮಾ ಸಂಗೀತದ ಇತಿಹಾಸದಲ್ಲಿ ತಮ್ಮದೇ ಆದ ಸುವರ್ಣ ಅಧ್ಯಾಯ ಬರೆದ ಲೆಜೆಂಡರಿ ಗಾಯಕಿ ಎಸ್. ಜಾನಕಿ (S Janaki) ಅವರ ನಿಧನಕ್ಕೆ ಇಡೀ ದೇಶ ಕಂಬನಿ ಮಿಡಿಯುತ್ತಿದೆ. ಮೈಸೂರಿನಲ್ಲಿ ಕೊನೆಯುಸಿರೆಳೆದ ಜಾನಕಮ್ಮ ಅವರ ಅಂತ್ಯಕ್ರಿಯೆ ಇಂದು (ಜುಲೈ 12) ಸಂಜೆ ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಸದ್ಯ ಮೈಸೂರಿನ ಮಹಾರಾಜ ಮೈದಾನದಲ್ಲಿ ಸಾರ್ವಜನಿಕ ಹಾಗೂ ಗಣ್ಯರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಭಾವುಕ ಕ್ಷಣದಲ್ಲಿ, ಟಿವಿ ವಾಹಿನಿಯೊಂದರ ಜೊತೆ ಮಾತನಾಡಿರುವ ದಕ್ಷಿಣ ಭಾರತದ…