ನೀಟ್ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ! – Kannada News | NEET Scam: Education Minister’s Emergency Meet, Arrests, and Future of Exam Security

ದೆಹಲಿ, ಮೇ.15: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ತಡರಾತ್ರಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಸಿಬಿಐ (CBI) ತನಿಖೆಯು ಚುರುಕುಗೊಂಡಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಒಳಗಿನವರ ಕೈವಾಡದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇನ್ನು ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿಗೆ ಹೊಸ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗಿದೆ. ಪರೀಕ್ಷೆಯು ಈಗ ಜೂನ್ 21 ರಂದು ನಡೆಯಲಿದೆ. ಮೇ 3 ರಂದು ನಿಗದಿಯಾಗಿದ್ದ ಹಿಂದಿನ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ರದ್ದುಗೊಳಿಸಲಾಗಿದೆ.

ರದ್ದುಗೊಂಡಿರುವ ನೀಟ್ ಪರೀಕ್ಷೆಯನ್ನು ಮತ್ತೆ ಯಾವಾಗ ನಡೆಸಬಹುದು ಮತ್ತು ಭವಿಷ್ಯದಲ್ಲಿ ಇಂತಹ ಸೋರಿಕೆ ತಡೆಯಲು ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ಎನ್‌ಟಿಎ ಮಹಾನಿರ್ದೇಶಕರು ಮತ್ತು ಸಿಬಿಎಸ್‌ಇ ಅಧ್ಯಕ್ಷರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದು, ಇನ್ನೂ ಇಬ್ಬರು ಶಂಕಿತರನ್ನು ಬಂಧಿಸಿದೆ. ಇದೊಂದು “ಸಂಘಟಿತ ಗ್ಯಾಂಗ್” ನಡೆಸುತ್ತಿರುವ ದಂಧೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ರಾಜಸ್ಥಾನದ ಸೀಕರ್ ಜಿಲ್ಲೆಯ ಕೋಚಿಂಗ್ ಸೆಂಟರ್‌ಗಳಿಗೆ ಈ ಸೋರಿಕೆಯಾದ ಪತ್ರಿಕೆ ತಲುಪಿದ್ದು, ಪ್ರತಿ ವಿದ್ಯಾರ್ಥಿಯಿಂದ 2 ರಿಂದ 5 ಲಕ್ಷ ರೂ. ಪಡೆಯಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.

ಇದನ್ನೂ ಓದಿ: ರಮ್ಮಿ ಆಟಗಾರರಿಗೆ ದೊಡ್ಡ ಶಾಕ್! ಗೇಮ್ಸ್‌ಕ್ರಾಫ್ಟ್‌ನಿಂದ 526 ಕೋಟಿ ರೂ. ವಂಚನೆ? ಇಡಿಯಿಂದ ಮೂವರು ಬಿಗ್ ಬಾಸ್‌ಗಳ ಬಂಧನ

ದೆಹಲಿ, ಅಹಮದಾಬಾದ್ ಸೇರಿದಂತೆ ಹಲವು ಕಡೆ ವಿದ್ಯಾರ್ಥಿ ಸಂಘಟನೆಗಳು ಎನ್‌ಟಿಎ ರದ್ದುಪಡಿಸಲು ಮತ್ತು ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿವೆ.ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ 21 ವರ್ಷದ ವಿದ್ಯಾರ್ಥಿಯೊಬ್ಬ ಪರೀಕ್ಷೆ ರದ್ದಾದ ಆತಂಕದಿಂದ ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ. ವಸತಿ ವೈದ್ಯರ ಸಂಘದ ಒಕ್ಕೂಟ (FORDA) ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದು, ನೀಟ್ ಪರೀಕ್ಷೆಯನ್ನು ಪೆನ್-ಪೇಪರ್ ಬದಲಿಗೆ ಐಐಟಿ-ಜೆಇಇ ಮಾದರಿಯಲ್ಲಿ ಕಂಪ್ಯೂಟರ್ ಆಧಾರಿತವಾಗಿ ನಡೆಸುವಂತೆ ಒತ್ತಾಯಿಸಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪವನ್ ಕಲ್ಯಾಣ್ ಸಿನಿಮಾಗೆ ಕಂಬ್ಯಾಕ್ ತಡವಾಗುತ್ತಿರುವುದಕ್ಕೆ ರಾಜಕೀಯವಲ್ಲ ಕಾರಣ – Kannada News | Pawan Kalyan’s Health Issues: Why He’s Not Returning to Movies

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಮೂಗಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಪವನ್ ನಿವಾಸಕ್ಕೆ ಭೇಟಿ ನೀಡಿದ್ದಾಗ ಪವನ್ ಚೇತರಿಸಿಕೊಳ್ಳುತ್ತಿರುವುದು ಕಾಣಿಸಿದೆ. ಪವನ್ ಕಲ್ಯಾಣ್ ನಟನೆಗೆ ಮರಳಬೇಕು ಎಂಬುದು ಅನೇಕರ ಕೋರಿಕೆ ಆಗಿತ್ತು. ಅವರು ನಟನೆಗೆ ಮರಳದಿರಲು ರಾಜಕೀಯ ಕಾರಣ ಎನ್ನಲಾಗಿತ್ತು. ಆದರೆ, ಇದಕ್ಕೆ ಬೇರೆಯದೇ ಕಾರಣ ಇದೆ.

ಪವನ್ ಕಲ್ಯಾಣ್ ಅವರು ಡಿಸಿಎಂ ಆದ ಬಳಿಕ ಸಿನಿಮಾದಿಂದ ಅಂತರ ಕಾಯ್ದುಕೊಂಡರು. ಒಪ್ಪಿಕೊಂಡಿದ್ದ ಕೆಲಸ ಸಿನಿಮಾಗಳ ಕೆಲಸವನ್ನು ಕಷ್ಟಪಟ್ಟು ಮುಗಿಸಿದರು. ಹೊಸ ಸಿನಿಮಾ ಒಪ್ಪಿಕೊಳ್ಳದೆ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಕಾರಣ ಅವರ ಅನಾರೋಗ್ಯ.

ವರದಿಗಳ ಪ್ರಕಾರ, ಪವನ್ ಕಲ್ಯಾಣ್ ಅವರು ಈ ಹಿಂದೆ ಸಿನಿಮಾ ಶೂಟಿಂಗ್‌ಗಳ ಸಮಯದಲ್ಲಿ ಅನೇಕ ಬಾರಿ ಪೆಟ್ಟು ಮಾಡಿಕೊಂಡಿದ್ದರು. ಆಗಿನ ಬಿಡುವಿಲ್ಲದ ವೇಳಾಪಟ್ಟಿಯಲ್ಲಿ ಆ ಗಾಯಗಳನ್ನು ಸರಿಯಾಗಿ ಗಮನಿಸದೆ ನಿರ್ಲಕ್ಷಿಸಲಾಗಿತ್ತು. ವರ್ಷಗಳ ಕಾಲ ಹಾಗೆಯೇ ಉಳಿದಿದ್ದ ಆ ಸಣ್ಣಪುಟ್ಟ ಗಾಯಗಳು ಈಗ ಕೆಲವು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತಿವೆಯಂತೆ. ಈ ಬಗ್ಗೆ ಸ್ವತಃ ಪವನ್ ಅವರು ಚಂದ್ರಬಾಬು ನಾಯ್ಡು ಅವರ ಬಳಿ ಹಂಚಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸದ್ಯ ಪವನ್ ಕಲ್ಯಾಣ್ ಅವರು ಉಪಮುಖ್ಯಮಂತ್ರಿಯಾಗಿ ದೊಡ್ಡ ಜವಾಬ್ದಾರಿ ಹೊತ್ತಿದ್ದಾರೆ. ಸರಣಿ ಸಭೆಗಳು, ಕ್ಷೇತ್ರ ಭೇಟಿಗಳು ಮತ್ತು ಪಕ್ಷದ ಕೆಲಸಗಳ ನಡುವೆ ಅವರಿಗೆ ವಿಶ್ರಾಂತಿ ಪಡೆಯಲು ಸಮಯ ಸಿಗುತ್ತಿಲ್ಲ. ಈ ಹಂತದಲ್ಲಿ ಮತ್ತೆ ಸಿನಿಮಾ ಶೂಟಿಂಗ್‌ನ ಅತಿಯಾದ ದೈಹಿಕ ಶ್ರಮದ ಕೆಲಸಗಳಿಗೆ ಕೈ ಹಾಕಿದರೆ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು ಎಂಬ ಆತಂಕ ಅವರ ಆಪ್ತ ವಲಯದಲ್ಲಿದೆ. ಹೀಗಾಗಿ, ಸಂಪೂರ್ಣವಾಗಿ ಗುಣಮುಖರಾಗುವವರೆಗೂ ಕ್ಯಾಮೆರಾ ಮುಂದೆ ಬರಬೇಡಿ ಎಂಬ ಸಲಹೆ ಅವರಿಗೆ ಸಿಕ್ಕಿದೆ ಎನ್ನಲಾಗಿದೆ.

ಇದನ್ನೂ ಓದಿ: ಶಸ್ತ್ರ ಚಿಕಿತ್ಸೆ ಬಳಿಕ ಪವನ್ ಕಲ್ಯಾಣ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಚಿರಂಜೀವಿ

ಸುರೇಂದರ್ ರೆಡ್ಡಿ ಸಿನಿಮಾದಲ್ಲಿ ಪವನ್ ನಟಿಸಬೇಕಿತ್ತು. ಈ ಚಿತ್ರದ ಚರ್ಚೆ ನಡೆದಿದೆ. ಆದರೆ, ಪವನ್ ಅವರ ಸದ್ಯದ ಆದ್ಯತೆ ಆರೋಗ್ಯ ಮತ್ತು ಆಡಳಿತ. ಶೂಟಿಂಗ್ ಆರಂಭಿಸುವ ಮೊದಲು ತಮ್ಮ ದೈಹಿಕ ಸಾಮರ್ಥ್ಯವನ್ನು ಪೂರ್ಣ ಪ್ರಮಾಣದಲ್ಲಿ ವಾಪಸ್ ಪಡೆಯಲು ಅವರು ನಿರ್ಧರಿಸಿದ್ದಾರೆ. ಹೀಗಾಗಿ, ಸದ್ಯಕ್ಕಂತೂ ಸಿನಿಮಾ ಸೆಟ್ಟೇರಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!

ಬೆಂಗಳೂರು, ಮೇ 15: ಪೆಟ್ರೋಲ್ ಮತ್ತು ಡೀಸೆಲ್ ದರ ದಿಢೀರ್ ಏರಿಕೆಯಾಗಿರುವುದು ಬೆಂಗಳೂರಿನ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 3.27 ರೂಪಾಯಿ ಹಾಗೂ ಡೀಸೆಲ್‌ಗೆ 3.12 ರೂಪಾಯಿ ಹೆಚ್ಚಳವಾಗಿದ್ದು, ಬೆಳಗ್ಗೆಯೇ ಪೆಟ್ರೋಲ್ ಬಂಕ್‌ಗಳಿಗೆ ಬಂದ ಸವಾರರು ಬೆಲೆ ಏರಿಕೆ ಕಂಡು ಕಂಗಾಲಾಗಿದ್ದಾರೆ. ಡೀಸೆಲ್ ದರ ಏರಿಕೆಯಿಂದಾಗಿ ಸರಕು ಸಾಗಣೆ ವೆಚ್ಚ ಹೆಚ್ಚಾಗಲಿದ್ದು, ಇದರ ನೇರ ಪರಿಣಾಮ ದಿನಸಿ ಮತ್ತು ತರಕಾರಿ ಬೆಲೆಗಳ ಮೇಲೆ ಬೀಳಲಿದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ‘ಟಿವಿ9’ ಬಳಿ ಅಳಲು ತೋಡಿಕೊಂಡ ಬೆಂಗಳೂರಿಗರು, ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ನಮಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿಕೆ ಶಿ​ವಕುಮಾರ್​ಗೆ 64ನೇ ಹುಟ್ಟುಹಬ್ಬದ ಸಂಭ್ರಮ: ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಜನ್ಮದಿನ ಆಚರಿಸಿಕೊಂಡ ಡಿಸಿಎಂ – Kannada News | DCM DK Shivakumar Celebrates 64th Birthday; Priests and Fans Throng Sadashivanagar Residence

ಬೆಂಗಳೂರು, ಮೇ 15: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು (ಮೇ 15) ತಮ್ಮ 64ನೇ ವಸಂತಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನ ಸದಾಶಿವನಗರದ ಅವರ ನಿವಾಸದ ಬಳಿ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ. ಮುಂಜಾನೆಯಿಂದಲೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಅವರು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಇದೇ ವೇಳೆ ವಿವಿಧ ಮಠಗಳ ಶ್ರೀಗಳು ಹಾಗೂ ಪುರೋಹಿತರು ಡಿಸಿಎಂ ನಿವಾಸಕ್ಕೆ ಭೇಟಿ ನೀಡಿ, ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ ಅವರಿಗೆ ಆಯುಷ್ಯ, ಆರೋಗ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದರು. ಅಭಿಮಾನಿಗಳ ಶುಭಾಶಯ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು ಸಂಭ್ರಮಾಚರಣೆಯ ನಂತರ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಮ್ಮಿ ಆಟಗಾರರಿಗೆ ದೊಡ್ಡ ಶಾಕ್! ಗೇಮ್ಸ್‌ಕ್ರಾಫ್ಟ್‌ನಿಂದ 526 ಕೋಟಿ ರೂ. ವಂಚನೆ? ಇಡಿಯಿಂದ ಮೂವರು ಬಿಗ್ ಬಾಸ್‌ಗಳ ಬಂಧನ – Kannada News | Online Rummy Scam: Gameskraft Directors Arrested for Money Laundering, Bot Usage

ಬೆಂಗಳೂರು, ಮೇ.15 : ಆನ್‌ಲೈನ್ ರಮ್ಮಿ ಗೇಮಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಬೆಂಗಳೂರು ಮೂಲದ ‘ಗೇಮ್ಸ್‌ಕ್ರಾಫ್ಟ್ ಟೆಕ್ನಾಲಜೀಸ್’ (Gameskraft Technologies) ಕಂಪನಿಯ ಕರಾಳ ಮುಖ ಅನಾವರಣಗೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಇಡಿ ನಡೆಸಿದ ಸರಣಿ ದಾಳಿಗಳಲ್ಲಿ ಭಾರಿ ಪ್ರಮಾಣದ ಆಸ್ತಿ ಪಾಸ್ತಿಗಳನ್ನು ಜಪ್ತಿ ಮಾಡಲಾಗಿದ್ದು, ಕಂಪನಿಯ ಮೂವರು ನಿರ್ದೇಶಕರನ್ನು ಬಂಧಿಸಲಾಗಿದೆ.

ಮೇ 7 ರಿಂದ 13 ರವರೆಗೆ ಬೆಂಗಳೂರು ಮತ್ತು ದೆಹಲಿ ಎನ್‌ಸಿಆರ್‌ನಲ್ಲಿ ನಡೆದ ದಾಳಿಯಲ್ಲಿ ಸುಮಾರು 526.49 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಬ್ಯಾಲೆನ್ಸ್, ಮ್ಯೂಚುವಲ್ ಫಂಡ್ ಮತ್ತು ಸ್ಥಿರ ಠೇವಣಿಗಳನ್ನು ಫ್ರೀಜ್ ಮಾಡಲಾಗಿದೆ. ಜೊತೆಗೆ 3.50 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು 11 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಕಂಪನಿಯ ನಿರ್ದೇಶಕರಾದ ಪೃಥ್ವಿ ರಾಜ್ ಸಿಂಗ್, ವಿಕಾಸ್ ತನೇಜಾ ಮತ್ತು ದೀಪಕ್ ಸಿಂಗ್ ಅಹ್ಲಾವತ್ ಅವರನ್ನು ಇಡಿ ಬಂಧಿಸಿದೆ.RummyCulture, RummyPrime, Playship ಮತ್ತು RummyTime ನಂತಹ ಜನಪ್ರಿಯ ಅಪ್ಲಿಕೇಶನ್‌ಗಳ ಮೂಲಕ ಈ ಕಂಪನಿ ವ್ಯವಹಾರ ನಡೆಸುತ್ತಿತ್ತು. ಕಂಪನಿಯು ತನ್ನ ವೇದಿಕೆಯಲ್ಲಿ ಯಾವುದೇ ಬಾಟ್‌ಗಳಿಲ್ಲ, ಇದು ಪಾರದರ್ಶಕವಾಗಿದೆ ಎಂದು ಭರವಸೆ ನೀಡಿತ್ತು. ಆದರೆ, ಇಡಿ ತನಿಖೆಯ ಪ್ರಕಾರ, ಬಳಕೆದಾರರಿಗೆ ತಿಳಿಯದಂತೆ ಅವರ ವಿರುದ್ಧ ಕಂಪನಿಯೇ ಬಾಟ್‌ಗಳನ್ನು (ಕಂಪ್ಯೂಟರ್ ಪ್ರೋಗ್ರಾಂ) ಬಳಸುತ್ತಿತ್ತು. ಇದರಿಂದಾಗಿ ಸಾವಿರಾರು ಆಟಗಾರರು ಹಣ ಕಳೆದುಕೊಂಡು ಮಾನಸಿಕ ಯಾತನೆ ಅನುಭವಿಸಿದ್ದಾರೆ.

ಇದನ್ನೂ ಓದಿ: CNG Price Hike: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ

ಆನ್‌ಲೈನ್ ಗೇಮಿಂಗ್ ನಿಷೇಧವಿರುವ ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಂತಹ ರಾಜ್ಯಗಳ ಬಳಕೆದಾರರಿಗೂ ಆಡಲು ಅವಕಾಶ ನೀಡಲು ಕಂಪನಿಯು ಅವರ ಜಿಯೋ ಲೊಕೇಶನ್ ಅನ್ನು ಟ್ಯಾಂಪರ್ (ತಿದ್ದುಪಡಿ) ಮಾಡಿತ್ತು. ಆಟಗಾರರಿಂದ ಕಮಿಷನ್ ರೂಪದಲ್ಲಿ ಪಡೆದ ಕೋಟ್ಯಂತರ ರೂಪಾಯಿ ಲಾಭವನ್ನು ವಿದೇಶಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡುವ ಮೂಲಕ ಹಣ ವರ್ಗಾವಣೆ ಮಾಡಲಾಗಿತ್ತು ಎಂದು ತನಿಖೆ ಬಹಿರಂಗಪಡಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಹಾ ಮಳೆಗೆ ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ – Kannada News | Tragedy in Vijayapura: Family of Four Dead as House Roof Collapses Due to Heavy Rain in Moratagi

ವಿಜಯಪುರ, ಮೇ 15: ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ, ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟ ದುರ್ದೈವಿಗಳು. ಗುರುನಾಥ್ ಅವರು ತಮ್ಮ ಸ್ವಂತ ಮನೆಯನ್ನು ದುರಸ್ತಿ ಮಾಡುತ್ತಿದ್ದ ಕಾರಣ, ಈ ಕುಟುಂಬವು ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇತ್ತು. ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯ ಹಳೆಯ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದ್ದರಿಂದ ಮನೆಯೊಳಗೆ ಮಲಗಿದ್ದ ನಾಲ್ವರು ಅವಶೇಷಗಳ ಅಡಿಯಲ್ಲಿ ಸಿಲುಕಿ ಜೀವಂತ ಸಮಾಧಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅವಶೇಷಗಳ ಅಡಿಯಲ್ಲಿದ್ದ ಶವಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆಯಿಂದ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ

ಪಂಜಾಬ್ ಹಾಗೂ ಮುಂಬೈ ನಡುವಿನ ಪಂದ್ಯದಲ್ಲಿ ಮುಂಬೈ ತಂಡ ಗೆದ್ದಿದೆ. ಬೂಮ್ರಾ ನಾಯಕತ್ವದಲ್ಲಿ ಗೆಲುವು ಸಿಕ್ಕಿದೆ. 4 ಓವರ್​​ಗೆ 52 ರನ್ ಬೇಕಿತ್ತು. ತಿಲಕ್ ವರ್ಮ ಜವಾಬ್ದರಿಯುತ ಆಟ ಆಡಿದರು. 11 ಎಸೆತಗಳಲ್ಲಿ 22 ರನ್ ಬೇಕಿದ್ದಾಗ ಇಡೀ ಮೈದಾನ ‘ಮುಂಬೈ.. ಮುಂಬೈ..’ ಎನ್ನುವ ಘೋಷಣೆಯಿಂದ ಮೊಳಗುತ್ತಿತ್ತು. ತಿಲಕ್ ವರ್ಮಾ 33 ಎಸೆತಗಳಲ್ಲಿ 75 ರನ್ ಬಾರಿಸಿದರು. ಕೊನೆಯ ಓವರ್​​ನಲ್ಲಿ 3 ಸಿಕ್ಸರ್​​ಗಳು ಬಂದವು. ಗೆಲುವಿನ ಬಳಿಕ ವರ್ಮ ಅವರು 45 ಎಂದು ತೋರಿಸುವ ಮೂಲಕ ರೋಹಿತ್ ಶರ್ಮಾ ಅವರಿಗೆ ವಿಶೇಷ ಗೌರವ ಸಲ್ಲಿಸಿದರು.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕುಟುಂಬದವರ ಚಿತ್ರವನ್ನೂ ಬಿಡದೆ ಟೀಕೆ ಮಾಡ್ತಾರೆ ಜಯಾ; ಪತಿ ಸಿನಿಮಾದಿಂದ ಅರ್ಧಕ್ಕೆ ಬಂದಿದ್ರು – Kannada News | Jaya Bachchan’s Unfiltered Film Criticism: Even Amitabh and Abhishek Aren’t Spared

ಬಾಲಿವುಡ್‌ನ ಹಿರಿಯ ನಟಿ ಜಯಾ ಬಚ್ಚನ್ ಅಂದಾಕ್ಷಣ ನೆನಪಾಗುವುದು ಅವರ ಶಿಸ್ತುಬದ್ಧ ನಡವಳಿಕೆ ಮತ್ತು ನೇರ ಮಾತು. ಪಾಪರಾಜಿಗಳ ಮೇಲಿರಲಿ ಅಥವಾ ಅಭಿಮಾನಿಗಳ ಮೇಲಿರಲಿ, ತಪ್ಪು ಕಂಡರೆ ಸಾರ್ವಜನಿಕವಾಗಿಯೇ ಗದರಿಸುವ ಅವರ ಸ್ವಭಾವ ಸದಾ ಚರ್ಚೆಯಲ್ಲಿರುತ್ತದೆ. ಆದರೆ, ಅವರ ಈ ಕಟ್ಟುನಿಟ್ಟಿನ ಧೋರಣೆ ಕೇವಲ ಹೊರಗಿನವರಿಗೆ ಮಾತ್ರ ಸೀಮಿತವಾಗಿಲ್ಲ; ಸ್ವತಃ ಪತಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್ ಬಚ್ಚನ್ ಅವರ ವಿಷಯದಲ್ಲೂ ಅವರು ಅಷ್ಟೇ ಕಟ್ಟುನಿಟ್ಟಾಗಿರುತ್ತಾರೆ.

2014ರಲ್ಲಿ ಶಾರುಖ್ ಖಾನ್ ಮತ್ತು ಅಭಿಷೇಕ್ ಬಚ್ಚನ್ ಅಭಿನಯದ ‘ಹ್ಯಾಪಿ ನ್ಯೂ ಇಯರ್’ ಸಿನಿಮಾ ತೆರೆಕಂಡಿತ್ತು. ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಗಳಿಕೆ ಮಾಡಿದ್ದರೂ, ಜಯಾ ಬಚ್ಚನ್ ಅವರಿಗೆ ಮಾತ್ರ ಈ ಸಿನಿಮಾ ಕಿಂಚಿತ್ತೂ ಇಷ್ಟವಾಗಲಿಲ್ಲ. ಪ್ರಥಮ ಪ್ರದರ್ಶನದ ನಂತರ ಬಹಿರಂಗವಾಗಿಯೇ ಈ ಚಿತ್ರವನ್ನು ‘ಅಸಂಬದ್ಧ’ ಎಂದು ಕರೆದು ಮಗನಿಗೇ ಶಾಕ್ ನೀಡಿದ್ದರು. ಸಿನಿಮಾ ಕಲೆ ಮತ್ತು ಗುಣಮಟ್ಟದ ವಿಷಯದಲ್ಲಿ ಅವರು ಮಗನನ್ನೂ ಬಿಟ್ಟಿರಲಿಲ್ಲ.

ಜಯಾ ಬಚ್ಚನ್ ಅವರು ಅಮಿತಾಬ್ ಬಚ್ಚನ್ ಅವರ ಜೀವನದ ಅತಿದೊಡ್ಡ ವಿಮರ್ಶಕಿ ಎಂದರೆ ತಪ್ಪಾಗಲಾರದು. ಬಿಗ್ ಬಿ ಅವರೇ ಹೇಳಿಕೊಂಡಿರುವಂತೆ, 1997ರಲ್ಲಿ ತೆರೆಕಂಡ ‘ಮೃತ್ಯುದಾತ’ ಚಿತ್ರದ ಪ್ರಥಮ ಪ್ರದರ್ಶನಕ್ಕೆ ಜಯಾ ಹೋಗಿದ್ದರು. ಆದರೆ ಸಿನಿಮಾ ಎಷ್ಟು ಕಳಪೆಯಾಗಿತ್ತೆಂದರೆ, ಅವರು ಅದನ್ನು ಪೂರ್ತಿ ನೋಡುವ ತಾಳ್ಮೆಯನ್ನೂ ಕಳೆದುಕೊಂಡರು. ಸಿನಿಮಾ ಅರ್ಧಕ್ಕಿರುವಾಗಲೇ ಸಿಟ್ಟಿನಿಂದ ಥಿಯೇಟರ್‌ನಿಂದ ಹೊರಬಂದಿದ್ದರು.

ವಿಶೇಷವೆಂದರೆ ‘ಮೃತ್ಯುದಾತ’ ಚಿತ್ರವನ್ನು ಅಮಿತಾಬ್ ಬಚ್ಚನ್ ಅವರ ಸ್ವಂತ ಸಂಸ್ಥೆ ‘ABCL’ ನಿರ್ಮಿಸಿತ್ತು. ಮೆಹುಲ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಡಿಂಪಲ್ ಕಪಾಡಿಯಾ, ಕರಿಷ್ಮಾ ಕಪೂರ್ ಅಂತಹ ದೊಡ್ಡ ತಾರಾಗಣವೇ ಇತ್ತು. ಆದರೂ ಜಯಾ ಬಚ್ಚನ್ ಆ ಚಿತ್ರವನ್ನು ‘ಕಸ’ ಎಂದು ಜರಿದಿದ್ದರು. ಅಂತಿಮವಾಗಿ ಅವರ ಮಾತು ನಿಜವಾಯಿತು ಮತ್ತು ಆ ಸಿನಿಮಾ ಆ ವರ್ಷದ ದೊಡ್ಡ ಸೋಲನ್ನು ಅನುಭವಿಸಿತು.

ಇದನ್ನೂ ಓದಿ: ಅವರು ಯಾರ ಮನೆ ಬೇಕಿದ್ದರೂ ಪ್ರವೇಶಿಸುವ ಇಲಿಗಳಂತೆ; ಜಯಾ ಬಚ್ಚನ್ ಕೋಪ ಯಾರ ಮೇಲೆ?

ಮನೆಯಲ್ಲಿರುವ ನಟರು ಎಷ್ಟೇ ದೊಡ್ಡ ಸೂಪರ್‌ಸ್ಟಾರ್‌ಗಳಾಗಿದ್ದರೂ, ನಟನೆಯ ಗುಣಮಟ್ಟ ಮತ್ತು ಚಿತ್ರದ ಕಥೆಯ ವಿಷಯದಲ್ಲಿ ಜಯಾ ಬಚ್ಚನ್ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರೀತಿಗಿಂತ ಕಲೆಗೆ ಅವರು ನೀಡುವ ಆದ್ಯತೆ ಈ ಘಟನೆಗಳಿಂದ ಸ್ಪಷ್ಟವಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:00 am, Fri, 15 May 26

Source link

ನಿರ್ದೇಶಕ ರೋಹಿತ್ ಶೆಟ್ಟಿ ತಲೆಗೆ ಬಾಟಲಿಯಿಂದ ಹೊಡೆದರಾ ದೀಪಿಕಾ ಪಡುಕೋಣೆ? – Kannada News | Deepika Padukone Viral Bottle Video: Chennai Express Prank with Rohit Shetty Explains Fake Blood

ಬಾಲಿವುಡ್ ಅಷ್ಟೇ ಅಲ್ಲದೆ, ಈಗ ದಕ್ಷಿಣ ಭಾರತದ ಸಿನಿಮಾಗಳಲ್ಲೂ ಮಿಂಚುತ್ತಿರುವ ನಟಿ ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿರುತ್ತಾರೆ. ಪ್ರಭಾಸ್ ನಟನೆಯ ‘ಕಲ್ಕಿ’ ಚಿತ್ರದ ಯಶಸ್ಸಿನ ಬೆನ್ನಲ್ಲೇ, ಈಗ ಅಟ್ಲೀ ನಿರ್ದೇಶನದ ಹಾಗೂ ಅಲ್ಲು ಅರ್ಜುನ್ ನಟನೆಯ ‘ರಾಕಾ’ ಚಿತ್ರಕ್ಕೂ ಇವರೇ ನಾಯಕಿ . ಸಿನಿಮಾ ಬದುಕು, ವೈಯಕ್ತಿಕ ಜೀವನದ ನಡುವೆ ದೀಪಿಕಾ ಅವರ ಹಳೆಯ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಏನಿದು ಬಾಟಲಿ ಪ್ರಹಸನ?

ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ನಟನೆಯ ಬ್ಲಾಕ್‌ಬಸ್ಟರ್ ಸಿನಿಮಾ ‘ಚೆನ್ನೈ ಎಕ್ಸ್‌ಪ್ರೆಸ್’ ಸೆಟ್‌ನಲ್ಲಿ ನಡೆದ ಕುತೂಹಲಕಾರಿ ಘಟನೆ ಇದಾಗಿದೆ. 2013ರಲ್ಲಿ ಬಿಡುಗಡೆಯಾಗಿ 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದ ಈ ಚಿತ್ರದ ಚಿತ್ರೀಕರಣದ ವೇಳೆ ಒಂದು ವಿಚಿತ್ರ ಸನ್ನಿವೇಶ ಎದುರಾಗಿತ್ತು.

ಸೆಟ್‌ನಲ್ಲಿ ದೀಪಿಕಾ ಅವರು ವಿಶ್ರಾಂತಿ ಪಡೆಯುತ್ತಾ ಕೂಲ್ ಡ್ರಿಂಕ್ ಕುಡಿಯುತ್ತಿದ್ದಾಗ, ನಿರ್ದೇಶಕ ರೋಹಿತ್ ಶೆಟ್ಟಿ ಅವರು ಏನೋ ವಿಷಯಕ್ಕೆ ಅವರನ್ನು ಅಡ್ಡಗಟ್ಟಿದ್ದಾರೆ. ಇದರಿಂದ ತಮಾಷೆಯಾಗಿ ಸಿಟ್ಟಾದ ದೀಪಿಕಾ, ತಕ್ಷಣವೇ ತಮ್ಮ ಕೈಯಲ್ಲಿದ್ದ ಬಾಟಲಿಯನ್ನು ತೆಗೆದುಕೊಂಡು ರೋಹಿತ್ ಶೆಟ್ಟಿ ಅವರ ತಲೆಗೆ ಹೊಡೆದಿದ್ದಾರೆ! ಬಾಟಲಿ ಚೂರು ಚೂರಾಗಿ ಒಡೆದು, ರೋಹಿತ್ ಅವರ ತಲೆಯಿಂದ ರಕ್ತ ಸುರಿಯಲಾರಂಭಿಸಿದೆ. ಇದನ್ನು ನೋಡಿದ ಸೆಟ್‌ನಲ್ಲಿದ್ದವರೆಲ್ಲ ಒಂದು ಕ್ಷಣ ದಿಗ್ರಮಗೊಂಡಿದ್ದಾರೆ.

ವಿಡಿಯೋದ ಹಿಂದಿರುವ ಅಸಲಿ ಸತ್ಯ!

ಆದರೆ ಗಾಬರಿಪಡುವ ಅಗತ್ಯವಿಲ್ಲ, ಇದೆಲ್ಲವೂ ಕೇವಲ ತಮಾಷೆಗಾಗಿ ನಡೆದ ಘಟನೆ. ದೀಪಿಕಾ ಹೊಡೆದಿದ್ದು ನಿಜವಾದ ಗಾಜಿನ ಬಾಟಲಿಯಿಂದಲ್ಲ, ಬದಲಾಗಿ ಸಿನಿಮಾಗಳಲ್ಲಿ ಬಳಸುವ ‘ಸಕ್ಕರೆ ಬಾಟಲಿ’ ಇಂದ. ಸಾಮಾನ್ಯವಾಗಿ ‘ಬಿಗ್ ಬಾಸ್’ ಅಂತಹ ರಿಯಾಲಿಟಿ ಶೋಗಳಲ್ಲಿ ಅಥವಾ ಸಿನಿಮಾದ ಸಾಹಸ ದೃಶ್ಯಗಳಲ್ಲಿ ಗಾಯವಾಗದಂತೆ ಇಂತಹ ಬಾಟಲಿಗಳನ್ನು ಬಳಸಲಾಗುತ್ತದೆ.

ಇದನ್ನೂ ಓದಿ: ಗರ್ಭಿಣಿ ಆದ ನಂತರವೂ ಸಾಹಸ ದೃಶ್ಯಗಳ ಚಿತ್ರೀಕರಣ ಮಾಡಿದ ದೀಪಿಕಾ ಪಡುಕೋಣೆ

ರೋಹಿತ್ ಶೆಟ್ಟಿ ಅವರ ತಲೆಗೆ ರಕ್ತ ಬಂದಂತೆ ಕಂಡಿದ್ದು ಕೂಡ ಮೇಕಪ್ ಟ್ರಿಕ್ ಅಷ್ಟೇ. ಚಿತ್ರೀಕರಣದ ನಡುವೆ ಸುಮ್ಮನೆ ತಮಾಷೆಗಾಗಿ ಈ ‘ಬ್ಲೂಪರ್’ ವಿಡಿಯೋ ಮಾಡಲಾಗಿತ್ತು. ಈಗ ಈ ಹಳೆಯ ವಿಡಿಯೋ ಮತ್ತೆ ಮುನ್ನೆಲೆಗೆ ಬಂದಿದ್ದು, “ದೀಪಿಕಾ ಅವರಿಗೆ ಇಷ್ಟೊಂದು ಕೋಪವೇ?” ಎಂದು ನೆಟ್ಟಿಗರು ತಮಾಷೆಯಾಗಿ ಕಾಮೆಂಟ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Nail shape personality: ನಿಮ್ಮ ಉಗುರುಗಳ ಆಕಾರದಲ್ಲಿದೆ ಭವಿಷ್ಯದ ರಹಸ್ಯ! ನಿಮ್ಮ ವ್ಯಕ್ತಿತ್ವ ಎಂತದ್ದು ಎಂದು ತಿಳಿಯಿರಿ – Kannada News | Personality Test: What Your Nail Shape Reveals About You

ಉಗುರುಗಳ ಆಕಾರದಲ್ಲಿದೆ ಭವಿಷ್ಯImage Credit source: Pinterest

ಜ್ಯೋತಿಷ್ಯ, ಹಸ್ತಸಾಮುದ್ರಿಕ ಶಾಸ್ತ್ರ, ಮುಖ ಲಕ್ಷಣ ಶಾಸ್ತ್ರಗಳಂತೆ, ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಪದ್ಧತಿಯೂ ಇದೆ. ಉಗುರುಗಳು ಕೇವಲ ದೇಹದ ಭಾಗವಲ್ಲದೆ, ಆಂತರಿಕ ಗುಣಗಳು, ಮಾನಸಿಕ ಸ್ಥಿತಿ ಮತ್ತು ಭವಿಷ್ಯದ ಒಳನೋಟಗಳನ್ನು ಪ್ರತಿಬಿಂಬಿಸುತ್ತವೆ ಎಂದು ನಂಬಲಾಗಿದೆ. ದೇಹದ ವಾತ, ಪಿತ್ತ, ಕಫ ಗುಣಗಳಂತೆ, ಉಗುರುಗಳ ಆಕಾರವೂ ವಿಭಿನ್ನ ಶಕ್ತಿಗಳನ್ನು ಪ್ರತಿನಿಧಿಸುತ್ತದೆ. ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ತಿಳಿಯುವ ಈ ವಿಧಾನವು ನಾಲ್ಕು ಪ್ರಮುಖ ವಿಧಗಳನ್ನು ಗುರುತಿಸುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಅಗಲವಾದ ಉಗುರುಗಳು:

ಅಗಲವಾದ ಉಗುರುಗಳನ್ನು ಹೊಂದಿರುವ ವ್ಯಕ್ತಿಗಳು ಸಾಮಾನ್ಯವಾಗಿ ಮೇಷ, ಸಿಂಹ ಮತ್ತು ಧನುಸ್ಸು ರಾಶಿಯವರಲ್ಲಿ ಹೆಚ್ಚು ಕಂಡುಬರುತ್ತಾರೆ. ಇವರು ತಕ್ಷಣವೇ ಪ್ರತಿಕ್ರಿಯಿಸುವ, ಸಾಧನೆ ಮಾಡಲು ಹಂಬಲಿಸುವ ಮತ್ತು ತಮ್ಮ ಗುರಿಗಳ ಬಗ್ಗೆ ದೃಢ ಮನಸ್ಸು ಹೊಂದಿರುವವರಾಗಿರುತ್ತಾರೆ. ಇವರು ಶ್ರಮಜೀವಿಗಳು, ಮುಂಗೋಪಿಗಳು ಮತ್ತು ಹಠಮಾರಿ ಸ್ವಭಾವದವರಾಗಿರಬಹುದು. ಯಾವುದೇ ಕಷ್ಟ ಬಂದರೂ ಅದನ್ನು ಪರಿಷ್ಕರಿಸಲು ಪ್ರಯತ್ನಿಸುತ್ತಾರೆ. ರಾಜಕೀಯ ಯೋಗವು ಇವರಿಗೆ ತುಂಬಾ ಚೆನ್ನಾಗಿರುತ್ತದೆ, ಮತ್ತು ಇವರು ಉತ್ತಮ ನಾಯಕತ್ವ ಗುಣಗಳನ್ನು ಹೊಂದಿರುತ್ತಾರೆ. ಈ ಗುಣಗಳು ಬೇರೆ ರಾಶಿಯವರಲ್ಲೂ ಕಂಡುಬರಬಹುದು, ಇದು ಕೇವಲ ಒಂದು ಸೂಚಕವಾಗಿದೆ.

ವೃತ್ತಾಕಾರದ ಉಗುರುಗಳು:

ವೃತ್ತಾಕಾರದ ಉಗುರುಗಳು ಸಾಮಾನ್ಯವಾಗಿ ಕರ್ಕ, ವೃಶ್ಚಿಕ ಮತ್ತು ಮೀನ ರಾಶಿಯವರಲ್ಲಿ ಇರುತ್ತವೆ. ಇವರು ನಿಧಾನಪ್ರಿಯರು, ತಾಳ್ಮೆಯುಳ್ಳವರು ಮತ್ತು ಸಹನಶೀಲರು. ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದೆ, ಪ್ರತಿಯೊಂದು ವಿಷಯವನ್ನು ಆಳವಾಗಿ ಚಿಂತಿಸಿ ಮುಂದುವರೆಯುತ್ತಾರೆ. ಇವರು ಉತ್ತಮ ವ್ಯಕ್ತಿತ್ವವನ್ನು ಹೊಂದಿದ್ದು, ಧರ್ಮ ಚಿಂತಕರಾಗಿರುತ್ತಾರೆ. ತಂತ್ರ, ಮಂತ್ರ, ಯಂತ್ರಗಳ ಬಗ್ಗೆ ಹೆಚ್ಚು ಒಲವು ಹೊಂದಿರುತ್ತಾರೆ. ರಾಜಕೀಯ ವ್ಯಕ್ತಿಗಳು ಇಂತಹ ಗುಣಗಳನ್ನು ಅಳವಡಿಸಿಕೊಳ್ಳುವುದು ಸಾಮಾನ್ಯ. ಇವರ ಶಾಂತ ಸ್ವಭಾವ ಮತ್ತು ದೃಢತೆ ಇವರ ಶಕ್ತಿ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ

ಲಂಬವಾದ (ಉದ್ದವಾದ) ಉಗುರುಗಳು:

ಲಂಬವಾದ ಉಗುರುಗಳನ್ನು ಹೊಂದಿರುವವರು ಸಾಮಾನ್ಯವಾಗಿ ವೃಷಭ, ಕನ್ಯಾ ಮತ್ತು ಮಕರ ರಾಶಿಯವರಲ್ಲಿ ಕಂಡುಬರುತ್ತಾರೆ. ಇವರು ರಸಿಕ ಸ್ವಭಾವದವರು, ಪ್ರೀತಿ ಮತ್ತು ಪ್ರೇಮದ ಬಗ್ಗೆ ಹೆಚ್ಚು ಒಲವು ಹೊಂದಿದವರು. ಬೇಗ ಆಕರ್ಷಣೆಗೆ ಒಳಗಾಗುತ್ತಾರೆ ಮತ್ತು ಇತರರನ್ನು ಆಕರ್ಷಿಸುವ ಗುಣವನ್ನೂ ಹೊಂದಿರುತ್ತಾರೆ. ಸಮಾಜದಲ್ಲಿ ಹೆಸರು, ಕೀರ್ತಿ ಮತ್ತು ಪ್ರತಿಷ್ಠೆಗಾಗಿ ಹೋರಾಡುತ್ತಾರೆ. ಹಿಂದಿನ ಕಾಲದಲ್ಲಿ ಮಹಿಳೆಯರು ಉದ್ದವಾದ ಉಗುರುಗಳನ್ನು ಬೆಳೆಸಿಕೊಳ್ಳುತ್ತಿದ್ದುದು ಇದೇ ಕಾರಣಕ್ಕೆ. ಇವರ ಬಲ ಮೆದುಳು ಹೆಚ್ಚು ಕ್ರಿಯಾಶೀಲವಾಗಿರುತ್ತದೆ. ಚಲನಚಿತ್ರ ನಟರು, ಸಾಹಿತಿಗಳು, ಪುಸ್ತಕ ಬರೆಯುವವರು ಮತ್ತು ಬರಹಗಾರರಲ್ಲಿ ಈ ಗುಣ ಹೆಚ್ಚು ಕಂಡುಬರುತ್ತದೆ. ಇವರು ಅನೇಕ ಸ್ನೇಹಿತರನ್ನು ಹೊಂದಿರುತ್ತಾರೆ.

ಚೌಕಾಕಾರದ ಉಗುರುಗಳು:

ಚೌಕಾಕಾರದ ಉಗುರುಗಳು ಮಿಥುನ, ತುಲಾ ಮತ್ತು ಕುಂಭ ರಾಶಿಯವರಲ್ಲಿ ಸಾಮಾನ್ಯ. ಇವರು ಸೀಕ್ರೆಟ್ ಸ್ವಭಾವದವರು, ಯಾವುದೇ ವಿಷಯವನ್ನು ಸುಲಭವಾಗಿ ಹಂಚಿಕೊಳ್ಳುವುದಿಲ್ಲ. ತಮ್ಮ ವೈಯಕ್ತಿಕ ವಿಚಾರಗಳಲ್ಲಿ ಗುಟ್ಟನ್ನು ಕಾಪಾಡಿಕೊಳ್ಳುತ್ತಾರೆ. ಇವರು ಗಂಭೀರ ವ್ಯಕ್ತಿತ್ವದವರು, ಸೋತರೂ ಗೆದ್ದಿದ್ದೇವೆ ಎಂದು ಹೇಳುವ, ಗೆದ್ದರೂ ಸೋತಿದ್ದೇವೆ ಎಂದು ಹೇಳಿಕೊಳ್ಳುವ ಧೈರ್ಯಶಾಲಿಗಳು. ಇವರು ಸ್ವತಂತ್ರ ಉದ್ಯೋಗವನ್ನು ಬಯಸುತ್ತಾರೆ ಮತ್ತು ಯಾರ ಮೇಲೂ ಅವಲಂಬಿತರಾಗಲು ಇಷ್ಟಪಡುವುದಿಲ್ಲ. ಇವರದೇ ಆದ ಆಲೋಚನೆಗಳು, ಮನೆ ಮತ್ತು ಮನಸ್ಥಿತಿಯನ್ನು ಹೊಂದಿರುತ್ತಾರೆ. ಇವರು ಸಮಾಜದಲ್ಲಿ ಉತ್ತಮ ಜೀವನವನ್ನು ನಡೆಸಲು ಶಕ್ತರು.

ಅಂತಿಮವಾಗಿ, ಉಗುರುಗಳ ಆಕಾರದ ಮೂಲಕ ವ್ಯಕ್ತಿತ್ವವನ್ನು ಅರಿಯುವ ಈ ವಿಧಾನವು ನಮ್ಮನ್ನು ನಾವು ಅರ್ಥಮಾಡಿಕೊಳ್ಳಲು ಒಂದು ಆಸಕ್ತಿದಾಯಕ ಮಾರ್ಗವಾಗಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version