ಟಿ20 ವಿಶ್ವಕಪ್​ಗೆ ನ್ಯೂಝಿಲೆಂಡ್ ತಂಡ ಪ್ರಕಟ – Kannada News | New Zealand squad for Women’s T20 World Cup 2026

2026ರ ಜೂನ್ 12ರಿಂದ ಇಂಗ್ಲೆಂಡ್‌ನಲ್ಲಿ ಆರಂಭವಾಗಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ನ್ಯೂಝಿಲೆಂಡ್ ಕ್ರಿಕೆಟ್ ಮಂಡಳಿಯು 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಹಾಲಿ ಚಾಂಪಿಯನ್ ಆಗಿರುವ ನ್ಯೂಝಿಲೆಂಡ್ ತಂಡವನ್ನು ಈ ಬಾರಿ ಸ್ಟಾರ್ ಆಲ್-ರೌಂಡರ್ ಅಮೆಲಿಯಾ ಕೆರ್ (Amelia Kerr) ಮುನ್ನಡೆಸಲಿದ್ದಾರೆ.

ಇನ್ನು ತಂಡದಲ್ಲಿ ಅನುಭವಿ ಆಟಗಾರ್ತಿಯರಾದ ಸೂಝಿ ಬೆಟ್ಸ್, ಸೋಫಿ ಡಿವೈನ್, ಲಿಯಾ ತಹುಹು ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ನೆನ್ಸಿ ಪಟೇಲ್ ಮತ್ತು ಇಸಿ ಶಾರ್ಪ್ ಕೂಡ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಟಿ20 ವಿಶ್ವಕಪ್​ಗೆ ನ್ಯೂಝಿಲೆಂಡ್ ತಂಡ ಈ ಕೆಳಗಿನಂತಿದೆ…

  1.  ಅಮೆಲಿಯಾ ಕೆರ್ (ನಾಯಕಿ)
  2.  ಸೂಝಿ ಬೇಟ್ಸ್
  3.  ಸೋಫಿ ಡಿವೈನ್
  4.  ಲಿಯಾ ತಹುಹು
  5.  ಮ್ಯಾಡಿ ಗ್ರೀನ್
  6.  ಬ್ರೂಕ್ ಹಾಲಿಡೇ
  7.  ಇಸಿ ಗೇಝ್ (ವಿಕೆಟ್ ಕೀಪರ್)
  8.  ಪಾಲಿ ಇಂಗ್ಲಿಸ್ (ವಿಕೆಟ್ ಕೀಪರ್)
  9.  ಜೆಸ್ ಕೆರ್
  10.  ರೋಸ್ಮೇರಿ ಮೇರ್
  11.  ಜಾರ್ಜಿಯಾ ಪ್ಲಿಮ್ಮರ್
  12.  ಫ್ಲೋರಾ ಡೆವೊನ್‌ಶೈರ್
  13. ಬ್ರೀ ಇಲ್ಲಿಂಗ್
  14.  ನೆನ್ಸಿ ಪಟೇಲ್
  15.  ಇಸಿ ಶಾರ್ಪ್

ದಿಗ್ಗಜರ ವಿದಾಯ:

ಈ ಬಾರಿಯ ಟಿ20 ವಿಶ್ವಕಪ್​ನೊಂದಿಗೆ ನ್ಯೂಝಿಲೆಂಡ್​ನ ದಿಗ್ಗಜ ಆಟಗಾರ್ತಿಯರಾದ ಸೋಫಿ ಡಿವೈನ್, ಸೂಝಿ ಬೇಟ್ಸ್ ಮತ್ತು ಲಿಯಾ ತಹುಹು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ. ಅಂದರೆ ಈ ಮೂವರು ಅನುಭವಿ ಆಟಗಾರ್ತಿಯರಿಗೆ ಇದು ಕೊನೆಯ ವಿಶ್ವಕಪ್​. ಈ ವರ್ಲ್ಡ್​ಕಪ್​ನೊಂದಿಗೆ ಕಿವೀಸ್ ಪಡೆಯ ತ್ರಿಮೂರ್ತಿಗಳು ಕೆರಿಯರ್ ಅಂತ್ಯಗೊಳಿಸಲಿದ್ದಾರೆ.

ಹೊಸ ಪ್ರತಿಭೆಗಳು:

2024ರಲ್ಲಿ ವಿಶ್ವಕಪ್ ಗೆದ್ದಿದ್ದ ನ್ಯೂಝಿಲೆಂಡ್​ ತಂಡದ 10 ಆಟಗಾರ್ತಿಯರನ್ನು ಈ ಬಾರಿಯೂ ಉಳಿಸಿಕೊಳ್ಳಲಾಗಿದೆ. ಇವರ ಜೊತೆ ಇಬ್ಬರು ಯುವ ಪ್ರತಿಭೆಗಳು ಕೂಡ ಆಯ್ಕೆಯಾಗಿದ್ದಾರೆ. ಅದರಂತೆ ನೆನ್ಸಿ ಪಟೇಲ್ ಮತ್ತು ಇಸಿ ಶಾರ್ಪ್ ಚೊಚ್ಚಲ ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ.

ಇನ್ನು ತಂಡದ ಪ್ರಮುಖ ಸ್ಪಿನ್ನರ್ ಎಡೆನ್ ಕಾರ್ಸನ್ ಅವರು ಮೊಣಕೈ ಗಾಯದ ಸಮಸ್ಯೆಯಿಂದಾಗಿ ಈ ಬಾರಿಯ ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

ಇದನ್ನೂ ಓದಿ: ರೋಹಿತ್ ಶರ್ಮಾ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ!

ಗ್ರೂಪ್​-ಬಿ ನಲ್ಲಿ ಕಿವೀಸ್ ಪಡೆ:

ನ್ಯೂಝಿಲೆಂಡ್ ತಂಡವು ಬಿ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳೊಂದಿಗೆ ಸೆಣಸಲಿದೆ. ಜೂನ್ 13 ರಂದು ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದೊಂದಿಗೆ ನ್ಯೂಝಿಲೆಂಡ್ ತನ್ನ ಅಭಿಯಾನವನ್ನು ಆರಂಭಿಸಲಿದೆ.

Source link

‘ಧುರಂಧರ್ 2’ ಬಳಿಕ ರಣವೀರ್ ಸಿಂಗ್ ಮುಂದಿನ ಸಿನಿಮಾ ಇದೇ ನೋಡಿ – Kannada News | Ranveer Singh’s ‘Pralay’ Zombie Film Not Stalled: 300 Crore Budget Confirmed

‘ಧುರಂಧರ್’ ಹಾಗೂ ‘ಧುರಂದರ್ 2’ ಯಶಸ್ಸಿನ ಬಳಿಕ ರಣವೀರ್ ಸಿಂಗ್ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಮೂಡಿದೆ. ಅವರ ನಟನೆಯ ‘ಡಾನ್ 3’ ಸಿನಿಮಾ ಸೆಟ್ಟೇರುವುದು ಅನುಮಾನ ಎಂದು ಹೇಳಲಾಗುತ್ತಾ ಇದೆ. ಅವರ ‘ಪ್ರಳಯ್’ ಚಿತ್ರದ ಬಗ್ಗೆಯೂ ನಿರೀಕ್ಷೆ ಮೂಡಿದೆ. ಈ ಸಿನಿಮಾ ಹಲವು ಅಡೆತಡೆಗಳನ್ನು ಎದುರಿಸುತ್ತಿದೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಈ ಎಲ್ಲಾ ಊಹಾಪೋಹಗಳಿಗೆ ಬ್ರೇಕ್ ಬಿದ್ದಿದೆ. ಈ ಸಿನಿಮಾ ನಿಗದಿತ ವೇಳಾಪಟ್ಟಿಯಂತೆ ಆಗಸ್ಟ್ 2026ರಲ್ಲಿ ಶೂಟಿಂಗ್ ಆರಂಭಿಸಲಿದೆ ಎಂಬ ಹೊಸ ಮಾಹಿತಿ ಹೊರಬಿದ್ದಿದೆ.

‘ಧುರಂಧರ್’ ಫ್ರಾಂಚೈಸಿಯ ಯಶಸ್ಸಿನ ನಂತರ ರಣವೀರ್ ಸಿಂಗ್ ಯಾವ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎನ್ನುವ ಕುತೂಹಲ ಇತ್ತು. ಹೀಗಿರುವಾಗಲೇ ಅವರು ನಿರ್ದೇಶಕ ಜೈ ಮೆಹ್ತಾ ಅವರ ‘ಪ್ರಳಯ್’ ಸಿನಿಮಾದಲ್ಲಿ ನಟಿಸೋ ಮಾಹಿತಿ ಹೊರ ಬಿತ್ತು. ಆದರೆ, ನಿರ್ದೇಶಕ ಹಾಗೂ ರಣವೀರ್ ಸಿಂಗ್ ಮಧ್ಯೆ ಸೃಜನಾತ್ಮಕ ಭಿನ್ನಾಭಿಪ್ರಾಯಗಳಿವೆ ಎಂದು ಹೇಳಲಾಗುತ್ತಿದೆ. ಇದರಿಂದ ಸಿನಿಮಾ ಸ್ಥಗಿತಗೊಂಡಿದೆ ಎಂಬ ವರದಿಗಳು ಹರಿದಾಡಿದ್ದವು. ಆದರೆ ಈ ಸುದ್ದಿಯನ್ನು ಚಿತ್ರತಂಡದ ಆಪ್ತ ಮೂಲಗಳು ನಿರಾಕರಿಸಿವೆ. ‘ಪ್ರಳಯ್’ ಚಿತ್ರದ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸುಳ್ಳು ಎಂದು ಹೇಳಲಾಗಿದೆ. ರಣವೀರ್ ಮತ್ತು ಜೈ ನಿರಂತರವಾಗಿ ಸ್ಕ್ರಿಪ್ಟ್ ಚರ್ಚೆ ನಡೆಸಿ ಅದನ್ನು ಫೈನಲ್ ಮಾಡಿದ್ದಾರೆ. ಸಿನಿಮಾ ಈಗಾಗಲೇ ಪ್ರೀ-ಪ್ರೊಡಕ್ಷನ್ ಹಂತಕ್ಕೆ ತಲುಪಿದೆಎಂದು ಮೂಲಗಳು ತಿಳಿಸಿವೆ.

‘ಪ್ರಳಯ್’ ಭಾರತೀಯ ಚಿತ್ರರಂಗದಲ್ಲಿ ಸಿದ್ಧವಾಗಲಿರುವ ದುಬಾರಿ ಜಾಂಬಿ ಶೈಲಿಯ ಸಿನಿಮಾ ಆಗಲಿದೆ. ಹಿಂದಿ ಚಿತ್ರರಂಗದಲ್ಲಿ ಈ ಮಟ್ಟದ ಬೃಹತ್ ಜಾಂಬಿ ಸಿನಿಮಾ ಇದುವರೆಗೆ ಬಂದಿಲ್ಲ. ಈ ಚಿತ್ರವು ಸುಮಾರು 300 ಕೋಟಿ ರೂಪಾಯಿಗಳ ಭಾರಿ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದ್ದು, ಬಾಲಿವುಡ್‌ನ ಅತ್ಯಂತ ದುಬಾರಿ ಸಿನಿಮಾಗಳ ಪಟ್ಟಿಗೆ ಸೇರಲಿದೆ.

ಇದನ್ನೂ ಓದಿ: ಮತ್ತೆ ಒಂದಾದ ‘ಧುರಂಧರ್’ ಜೋಡಿ; ಆದಿತ್ಯ ಧಾರ್ ಹೊಸ ಚಿತ್ರಕ್ಕೆ ರಣವೀರ್ ಹೀರೋ

ನಿರ್ದೇಶಕ ಜೈ ಮೆಹ್ತಾ ಮತ್ತು ‘ಲೂಟೇರೆ’ ಖ್ಯಾತಿಯ ವಿಶಾಲ್ ಕಪೂರ್ ಈ ಸಿನಿಮಾಗೆ ಚಿತ್ರಕಥೆ ಬರೆದಿದ್ದಾರೆ. ಈ ಚಿತ್ರಕ್ಕಾಗಿ ರಣವೀರ್ ಸಿಂಗ್ ವಿಶೇಷ ಲುಕ್​​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. 2027ಕ್ಕೆ ಸಿನಿಮಾ ತೆರೆಗೆ ಬರಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

44 ವರ್ಷಗಳ ಬಳಿಕ ಒಟಿಟಿಗೆ ಬರುತ್ತಿದೆ ಕಲ್ಟ್ ಕ್ಲಾಸಿಕ್ ಸಿನಿಮಾ – Kannada News | Kamal Haasan starrer Moondram Pirai movie releasing on OTT

ಹಳೆಯ ಹಿಟ್ ಸಿನಿಮಾಗಳು, ಕಲ್ಟ್ ಸಿನಿಮಾಗಳು ಚಿತ್ರಮಂದಿರಗಳಲ್ಲಿ (Theater) ಮರು ಬಿಡುಗಡೆ ಆಗಿ ದೊಡ್ಡ ಮೊತ್ತ ಗಳಿಸುತ್ತಿವೆ. ತೆಲುಗಿನಲ್ಲಂತೂ ವಾರಕ್ಕೊಂದು ಹಳೆಯ ಸಿನಿಮಾಗಳನ್ನು ರೀ ರಿಲೀಸ್ ಮಾಡಿ ದುಡ್ಡು ಮಾಡಲಾಗುತ್ತಿದೆ. ಅಂಥಹದರಲ್ಲಿ 44 ವರ್ಷ ಹಿಂದಿನ ಆದರೆ ಈಗಲೂ ಇನ್​​ಸ್ಟಾಗ್ರಾಂ, ಯೂಟ್ಯೂಬ್ ಶಾರ್ಟ್ಸ್​​ಗಳಲ್ಲಿ ಟ್ರೆಂಡಿಂಗ್ ನಲ್ಲಿ ಕಮಲ್ ಹಾಸನ್ ನಟಿಸಿರುವ ಕಲ್ಟ್ ಕ್ಲಾಸಿಕ್ ಸಿನಿಮಾ ಒಂದು ಈಗ ಒಟಿಟಿಗೆ ಬರುತ್ತಿದೆ. ಸಿನಿಮಾದ ಹೆಸರು ‘ಮೂಂಡ್ರಂ ಪಿರಯ್’. 1982 ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ.

ಕಮಲ್ ಹಾಸನ್, ಶ್ರೀದೇವಿ ನಟಿಸಿ, ಬಾಲು ಮಹೇಂದ್ರನ್ ನಿರ್ದೇಶನ ಮಾಡಿರುವ ‘ಮೂಂಡ್ರಂ ಪಿರಯ್’ ಸಿನಿಮಾ ಅದ್ಧೂರಿ ಬ್ಲಾಕ್ ಬಸ್ಟರ್ ಮಾತ್ರವಲ್ಲ. ಇಂದಿಗೂ ಕೋಟ್ಯಂತರ ಅಭಿಮಾನಿಗಳ ಮೆಚ್ಚಿನ ಕಮಲ್ ಹಾಸನ್ ಸಿನಿಮಾ. ಶ್ರೀದೇವಿ ಮತ್ತು ಕಮಲ್ ಹಾಸನ್ ತಮ್ಮ ಜೀವಮಾನದ ಅತ್ಯುತ್ತಮ ನಟನೆಯನ್ನು ಸಿನಿಮಾನಲ್ಲಿ ನೀಡಿದ್ದರು. ಸಿನಿಮಾದ ಹಾಡುಗಳು ಇಂದಿಗೂ ಟ್ರೆಂಡಿಂಗ್​​ನಲ್ಲಿವೆ.

ಸಿನಿಮಾವನ್ನು ಸತ್ಯ ಜೋತಿ ಫಿಲಮ್ಸ್ ನಿರ್ಮಾಣ ಮಾಡಿತ್ತು. ಇದೀಗ ಆ ಸಿನಿಮಾವನ್ನು ರೀಮಾಸ್ಟರ್ ಮಾಡಿ ಒಟಿಟಿಗೆ ಬಿಡುಗಡೆ ಮಾಡುತ್ತಿದ್ದು, ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ. ಆದರೆ ಅಮೆಜಾನ್ ಪ್ರೈಂನಲ್ಲಿ ಕೇವಲ ತಮಿಳು ಆವೃತ್ತಿಯಲ್ಲಿ ಮಾತ್ರವೇ ಈ ಸಿನಿಮಾ ವೀಕ್ಷಣೆಗೆ ಲಭ್ಯವಿರಲಿದೆ. ತೆಲುಗು ಅಥವಾ ಇನ್ಯಾವುದೇ ಭಾಷೆಯಲ್ಲಿ ಲಭ್ಯ ಇರುವುದಿಲ್ಲ.

ಇದನ್ನೂ ಓದಿ:‘ಕೆಡಿ’ ಸಿನಿಮಾ ರಿಲೀಸ್​​ಗೂ ಮೊದಲು ತಲೆ ಎತ್ತಿತು ಬೃಹತ್​ ಕಟೌಟ್

‘ಮೂಂಡ್ರಂ ಪಿರಯ್’ ಸಿನಿಮಾ ಬಿಡುಗಡೆ ಆದಾಗ ಅದನ್ನು ತೆಲುಗಿಗೆ ‘ವಸಂತ ಕೋಕಿಲ’ ಹೆಸರಿನಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗಿತ್ತು. ಆದರೆ ಒಟಿಟಿಯಲ್ಲಿ ತಮಿಳಿನಲ್ಲಿ ಮಾತ್ರ ಲಭ್ಯವಿದೆ. ಅಸಲಿಗೆ ಇದೇ ಸಿನಿಮಾ ಯೂಟ್ಯೂಬ್​​ನಲ್ಲಿ ಉಚಿತವಾಗಿ ವೀಕ್ಷಣೆಗೆ ಈಗಾಗಲೇ ಲಭ್ಯವಿದೆ. ಆದರೆ ಅದು ರೀ ಮಾಸ್ಟರ್ ಮಾಡಿರುವ ಆವೃತ್ತಿ ಅಲ್ಲ.

ಇತ್ತೀಚೆಗೆ ‘ಮೂಂಡ್ರಂ ಪಿರಯ್’ ಸಿನಿಮಾದ ಹಲವು ತುಣುಕು ದೃಶ್ಯಗಳು, ಆ ಸಿನಿಮಾದ ಹಾಡುಗಳು ಇನ್​​ಸ್ಟಾಗ್ರಾಂನಲ್ಲಿ ಸಖತ್ ಟ್ರೆಂಡ್ ಆಗುತ್ತಿವೆ. ಹಲವು ಜನಪ್ರಿಯ ಸಿನಿಮಾ ನಿರ್ದೇಶಕರು, ನಟರುಗಳು ಸಹ ‘ಮೂಂಡ್ರಂ ಪಿರಯ್’ ಸಿನಿಮಾದ ಬಗ್ಗೆ ಮಾತನಾಡುತ್ತಿದ್ದು, ಅದರ ತುಣುಕುಗಳು ಸಹ ವೈರಲ್ ಆಗುತ್ತಿವೆ. ಇತ್ತೀಚೆಗಷ್ಟೆ ಯುವತಿಯೊಬ್ಬಾಕೆ, ಯೂಟ್ಯೂಬ್​​ನಲ್ಲಿ ‘ಮೂಂಡ್ರಂ ಪಿರಯ್’ ಕ್ಲೈಮ್ಯಾಕ್ಸ್ ನೋಡಿ ಅಳುತ್ತಿರುವ ದೃಶ್ಯವೂ ಸಖತ್ ವೈರಲ್ ಆಗಿತ್ತು. ಹೊಸ ತಲೆಮಾರಿನವರಿಗೆ ಆ ಸಿನಿಮಾದ ಮೇಲಿನ ಆಸಕ್ತಿ ಗಮನಿಸಿ ಇದೀಗ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ.

ಅಂದಹಾಗೆ ‘ಮೂಂಡ್ರಂ ಪಿರಯ್’ ಸಿನಿಮಾದ ಕತೆಯನ್ನು ಆಧರಿಸಿ ಕನ್ನಡದಲ್ಲಿಯೂ ಒಂದು ಸಿನಿಮಾ ಬಂದು ಸೂಪರ್ ಹಿಟ್ ಆಯ್ತು. ಅದುವೇ ಸುದೀಪ್ ನಟನೆಯ ‘ನಲ್ಲ’. ‘ಮೂಂಡ್ರಂ ಪಿರಯ್’ ಸಿನಿಮಾದ ಕತೆಯನ್ನು ಆಧರಿಸಿದ ಸಿನಿಮಾ ಆಗಿದ್ದರೂ ಸಹ ಇದು ನೇರ ರೀಮೇಕ್ ಆಗಿರಲಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರೋಹಿತ್ ಶರ್ಮಾ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ! – Kannada News | Why rohit sharma is not playing in ipl 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್​ಗಳಲ್ಲಿ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಂಡಿರುವುದು ಮೊದಲ ನಾಲ್ಕು ಪಂದ್ಯಗಳಲ್ಲಿ ಮಾತ್ರ. ಇದಾದ ಬಳಿಕ ಸತತ ನಾಲ್ಕು ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಇದಾಗ್ಯೂ ಪ್ರತಿ ಪಂದ್ಯದ ವೇಳೆ ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಮ್​ ಹಾಗೂ ಡಗೌಟ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿಯೇ ಹಿಟ್​ಮ್ಯಾನ್ ಯಾಕೆ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿಲ್ಲ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ…

ಏಪ್ರಿಲ್ 12ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ರೋಹಿತ್ ಶರ್ಮಾ ಅವರ ಹ್ಯಾಮ್‌ಸ್ಟ್ರಿಂಗ್ (Hamstring injury) ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದಾದ ಬಳಿಕ ಅವರು ಯಾವುದೇ ಪಂದ್ಯವಾಡಿಲ್ಲ.

ರೋಹಿತ್ ಶರ್ಮಾ ಅವರ ಹ್ಯಾಮ್‌ಸ್ಟ್ರಿಂಗ್ ಸ್ನಾಯು ಸೆಳೆತದ ಸಮಸ್ಯೆಯು ಗಂಭೀರವಾಗಿದ್ದು, ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿಯೇ ಹಿಟ್​ಮ್ಯಾನ್ ತಂಡದೊಂದಿಗೆ ಕಾಣಿಸಿಕೊಂಡರೂ ಮೈದಾನಕ್ಕಿಳಿಯುತ್ತಿಲ್ಲ. ಅಲ್ಲದೆ ತಮ್ಮ ಕೆರಿಯರ್​ನ ಅಂಚಿನಲ್ಲಿರುವ ರೋಹಿತ್ ಶರ್ಮಾ ಕೂಡ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ಧರಿಲ್ಲ.

ಅಂದರೆ 2027ರ ಏಕದಿನ ವಿಶ್ವಕಪ್​ ಆಡುವ ಇರಾದೆ ಹೊಂದಿರುವ ರೋಹಿತ್ ಶರ್ಮಾ ಹ್ಯಾಮ್‌ಸ್ಟ್ರಿಂಗ್ ಸ್ನಾಯು ಸೆಳೆತವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ಸಂಪೂರ್ಣ ಫಿಟ್​ ಆದ ಮೇಲೆ ಮಾತ್ರ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅತ್ತ ಮುಂಬೈ ಇಂಡಿಯನ್ಸ್ ಟೀಮ್ ಮ್ಯಾನೇಜ್‌ಮೆಂಟ್ ಅವರ ನಿರ್ಧಾರಕ್ಕೆ ಬೆಂಬಲವಾಗಿ ನಿಂತಿದ್ದಾರೆ.

ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮುಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ. ಆದರೆ ಇತ್ತ ಹಿಟ್​ಮ್ಯಾನ್ ಅನುಪಸ್ಥಿತಿಯು ಮುಂಬೈ ಇಂಡಿಯನ್ಸ್ ತಂಡದ ಫಲಿತಾಂಶದ ಮೇಲೆ ಪ್ರಭಾವ ಬೀರಿರುವುದಂತು ನಿಜ. ಪರಿಣಾಮ ಹಾರ್ದಿಕ್ ಪಾಂಡ್ಯ ಪಡೆ ಕಳೆದ 4 ಪಂದ್ಯಗಳಲ್ಲಿ ಮೂರರಲ್ಲಿ ಸೋಲನುಭವಿಸಿದೆ. ಹೀಗಾಗಿಯೇ ಹಿಟ್​ಮ್ಯಾನ್ ಶೀಘ್ರದಲ್ಲೇ ಚೇತರಿಸಿಕೊಂಡು ಮೈದಾನಕ್ಕೆ ಮರಳುವುದನ್ನು ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

Published On – 12:52 pm, Thu, 30 April 26

Source link

Budh Gochar 2026: ಮೇಷ ರಾಶಿಗೆ ಬುಧನ ಪ್ರವೇಶ; ಇಂದಿನಿಂದ ಮೇ 14 ರವರೆಗೆ ಈ ರಾಶಿಗೆ ‘ಸುವರ್ಣ ಕಾಲ’! – Kannada News | Budh gochar 2026 mercury in mesha rashi impact on 12 signs and remedies

ಮೇಷ ರಾಶಿಗೆ ಬುಧನ ಪ್ರವೇಶImage Credit source: Pinterest

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆಯು ಮಾನವನ ಜೀವನದ ಮೇಲೆ ನಿರಂತರ ಪ್ರಭಾವ ಬೀರುತ್ತದೆ. ಇಂದು ಅಂದರೆ ಏಪ್ರಿಲ್ 30, ಮಂಗಳವಾರ ಬೆಳಿಗ್ಗೆ 6:52 ಕ್ಕೆ, ಬುದ್ಧಿಶಕ್ತಿ, ವ್ಯಾಪಾರ ಮತ್ತು ಸಂವಹನದ ಕಾರಕನಾದ ‘ಬುಧ’ ಗ್ರಹವು ಮೇಷ ರಾಶಿಗೆ ಪದಾರ್ಪಣೆ ಮಾಡಿದೆ. ಈ ಸಂಚಾರವು ಮೇ 14 ರವರೆಗೆ ಮುಂದುವರಿಯಲಿದ್ದು, ದ್ವಾದಶ ರಾಶಿಗಳ ಮೇಲೆ ಮಿಶ್ರ ಪರಿಣಾಮ ಬೀರಲಿದೆ.

ವಿಶೇಷವಾಗಿ ಐದು ರಾಶಿಯವರಿಗೆ ಇದು ಅತ್ಯಂತ ಲಾಭದಾಯಕ ಸಮಯವಾಗಿದ್ದರೆ, ಉಳಿದವರು ಸ್ವಲ್ಪ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಯಾರಿಗೆ ಜಾಗರೂಕತೆ ಅಗತ್ಯ? ಇಲ್ಲಿದೆ ಸಂಪೂರ್ಣ ಮಾಹಿತಿ.

ಅದೃಷ್ಟದ ಶಿಖರ ಏರಲಿರುವ 5 ರಾಶಿಗಳು!

ಮೇಷ ರಾಶಿ:

ನಿಮ್ಮದೇ ರಾಶಿಯಲ್ಲಿ ಬುಧನ ಸಂಚಾರ ನಡೆಯುತ್ತಿರುವುದರಿಂದ, ಈ ಅವಧಿಯಲ್ಲಿ ನೀವು ರಾಜನಂತಹ ಸುಖ-ಸಂತೋಷವನ್ನು ಅನುಭವಿಸುವಿರಿ. ಭೌತಿಕ ಸೌಕರ್ಯಗಳು ವೃದ್ಧಿಯಾಗಲಿವೆ. ವೈವಾಹಿಕ ಜೀವನದಲ್ಲಿ ಸಾಮರಸ್ಯ ಇರಲಿದೆ. ಮೇ 14 ರವರೆಗೆ ಹಸಿರು ಬಟ್ಟೆ ಧರಿಸುವುದನ್ನು ತಪ್ಪಿಸಿ.

ವೃಷಭ ರಾಶಿ:

ವೃಷಭ ರಾಶಿಯವರಿಗೆ ಈ ಸಂಚಾರವು ಹಣಕಾಸಿನ ಲಾಭವನ್ನು ತರಲಿದೆ. ಕುಟುಂಬದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದ್ದು, ಸಂತೋಷದ ವಾತಾವರಣ ಇರಲಿದೆ. ಶುಭ ಫಲಕ್ಕಾಗಿ ದೇವಸ್ಥಾನದಲ್ಲಿ ಮಣ್ಣಿನ ಪಾತ್ರೆಯನ್ನು ದಾನ ಮಾಡಿ.

ಮಿಥುನ ರಾಶಿ:

ನಿಮ್ಮ ದೀರ್ಘಕಾಲದ ಕನಸುಗಳು ನನಸಾಗುವ ಸಮಯವಿದು. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆತು ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಮಕ್ಕಳು ಶಿಕ್ಷಣದಲ್ಲಿ ಗಮನಾರ್ಹ ಪ್ರಗತಿ ಸಾಧಿಸುತ್ತಾರೆ. ದುರ್ಗಾ ದೇವಿಯ ಆರಾಧನೆ ಮಾಡಿ.

ಧನು ರಾಶಿ:

ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಲಿದೆ. ಪೂರ್ವಜರ ಆಸ್ತಿಯಿಂದ ದೊಡ್ಡ ಮಟ್ಟದ ಲಾಭವಾಗುವ ಸಾಧ್ಯತೆಯಿದೆ. ಹಸುಗಳಿಗೆ ಹಸಿರು ಹುಲ್ಲು ತಿನ್ನಿಸಿ.

ಕುಂಭ ರಾಶಿ:

ಒಡಹುಟ್ಟಿದವರೊಂದಿಗೆ ಇದ್ದ ಮನಸ್ತಾಪಗಳು ದೂರವಾಗಿ ಸಂಬಂಧ ಸುಧಾರಿಸಲಿದೆ. ನಿಮ್ಮ ಆಕರ್ಷಕ ಮಾತಿನ ಶೈಲಿಯಿಂದ ಇತರರ ಮೇಲೆ ಪ್ರಭಾವ ಬೀರಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಬಾರದು ಏಕೆ? ವಾಸ್ತು ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ

ಎಚ್ಚರಿಕೆಯಿಂದ ಇರಬೇಕಾದ ರಾಶಿಗಳು:

  • ಕರ್ಕಾಟಕ: ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಆಡಳಿತಾತ್ಮಕ ಕೆಲಸಗಳು ನಿಮ್ಮ ಪರವಾಗಿದ್ದರೂ, ಮಾತಿನ ಮೇಲೆ ನಿಗಾ ಇರಲಿ.
  • ಸಿಂಹ: ಅದೃಷ್ಟಕ್ಕಿಂತ ಹೆಚ್ಚಾಗಿ ಕೆಲಸದ ಮೇಲೆ ನಂಬಿಕೆ ಇಡಿ. ಕೊಟ್ಟ ಭರವಸೆಯನ್ನು ತಪ್ಪಬೇಡಿ.
  • ತುಲಾ: ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ಸಂಗಾತಿಯೊಂದಿಗೆ ವಾದ ಬೇಡ. (ಪರಿಹಾರವಾಗಿ ಹಸಿರು ಹೆಸರುಕಾಳನ್ನು ದಾನ ಮಾಡಿ).
  • ಮಕರ: ಆರ್ಥಿಕವಾಗಿ ಸಾಧಾರಣ ಫಲಿತಾಂಶವಿರಲಿದೆ. ದೂರದ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡಿ.

ಇತರ ರಾಶಿಗಳ ಮೇಲೆ ಪ್ರಭಾವ:

ಕನ್ಯಾ ರಾಶಿಯವರು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ ಕಾರ್ಯನಿರ್ವಹಿಸಲಿದ್ದಾರೆ. ವೃಶ್ಚಿಕ ರಾಶಿಯವರ ವಾಕ್ಚಾತುರ್ಯ ಹೆಚ್ಚಾಗಲಿದೆ ಮತ್ತು ಮೀನ ರಾಶಿಯವರಿಗೆ ವ್ಯವಹಾರದಲ್ಲಿ ಲಾಭದಾಯಕ ಅವಕಾಶಗಳು ಸಿಗಲಿವೆ.

ಸಲಹೆ: ಬುಧನ ಈ ಸಂಚಾರದ ಸಮಯದಲ್ಲಿ ಭಾವೋದ್ರೇಕಕ್ಕೆ ಒಳಗಾಗದೆ, ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುವ ನಿರ್ಧಾರಗಳು ಭವಿಷ್ಯದಲ್ಲಿ ಉತ್ತಮ ಫಲ ನೀಡುತ್ತವೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮರದಡಿ ಸಿಲುಕಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ ಮೆರೆದ ಮಹಿಳೆಯರು; ವಿಡಿಯೋ ವೈರಲ್! – Kannada News | Heartwarming Bengaluru: Women Save Cow from Fallen Tree After Heavy Rains, Inspiring Act

ಬೆಂಗಳೂರು, ಏ.30: ಬೆಂಗಳೂರು: ರಾಜಧಾನಿಯಲ್ಲಿ ಬುಧವಾರ ಸುರಿದ ರಣಮಳೆಗೆ ಈಗಾಗಲೇ 9 ಮಂದಿ ಬಲಿಯಾಗಿದ್ದು, ನಗರದಾದ್ಯಂತ ಮರಗಳು ಧರೆಗುರುಳಿವೆ. ಈ ದುರಂತಗಳ ನಡುವೆ, ಪ್ರಾಣಿಪ್ರೇಮ ಮೆರೆಯುವ ಹೃದಯಸ್ಪರ್ಶಿ ಘಟನೆಯೊಂದು ನಡೆದಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.ಧಾರಾಕಾರವಾಗಿ ಸುರಿದ ಮಳೆಗೆ ದೊಡ್ಡ ಗಾತ್ರದ ಮರವೊಂದು ರಸ್ತೆಯಲ್ಲಿದ್ದ ಹಸುವಿನ ಮೇಲೆ ಬಿದ್ದಿದೆ. ಮರದ ಭಾರಕ್ಕೆ ಸಿಲುಕಿದ ಹಸುವು ಹೊರಬರಲಾಗದೆ ತೀವ್ರವಾಗಿ ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ಇಬ್ಬರು ಧೈರ್ಯಶಾಲಿ ಮಹಿಳೆಯರು, ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಭಾರೀ ಗಾತ್ರದ ಮರದ ಕೊಂಬೆಗಳನ್ನು ತಮ್ಮ ಶಕ್ತಿ ಮೀರಿ ಪಕ್ಕಕ್ಕೆ ಸರಿಸಿ, ಹಸುವನ್ನು ಸುರಕ್ಷಿತವಾಗಿ ಹೊರತರಲು ಯಶಸ್ವಿಯಾಗಿದ್ದಾರೆ. ಸದ್ಯ ಈ ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, “ಮನುಷ್ಯತ್ವ ಇನ್ನೂ ಜೀವಂತವಾಗಿದೆ” ಎಂದು ನೆಟ್ಟಿಗರು ಕೊಂಡಾಡುತ್ತಿದ್ದಾರೆ. 9 ಜನರ ಸಾವಿನ ಸುದ್ದಿಯಿಂದ ಕಂಗಾಲಾಗಿದ್ದ ಜನರಿಗೆ ಈ ವಿಡಿಯೋ ಸಣ್ಣ ಸಮಾಧಾನ ನೀಡಿದೆ. ಈ ವಿಡಿಯೋವನ್ನು @gagana_hosmane ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಸಿಎಂ ರೇಸ್​​ನಲ್ಲಿದ್ದಾರಾ ಮಲ್ಲಿಕಾರ್ಜುನ ಖರ್ಗೆ?: ಸ್ವತಃ ಎಐಸಿಸಿ ಅಧ್ಯಕ್ಷರಿಂದಲೇ ಸಿಕ್ಕು ಸ್ಪಷ್ಟನೆ – Kannada News | Mallikarjuna Kharge Addresses Karnataka CM Change Speculation Amidst Political Buzz

ಕಲಬುರಗಿ, ಏಪ್ರಿಲ್​​ 30: ಮಾಧ್ಯಮಗಳೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ರಾಜ್ಯದ ನಾಯಕತ್ವ ಮತ್ತು ಮುಖ್ಯಮಂತ್ರಿ ಬದಲಾವಣೆ ಕುರಿತು ಹರಿದಾಡುತ್ತಿರುವ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿನ ಗೊಂದಲಗಳನ್ನು ಆದಷ್ಟು ಬೇಗನೆ ಬಗೆಹರಿಸುವುದಾಗಿ ಅವರು ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಇತ್ತೀಚೆಗೆ ಕಾಂಗ್ರೆಸ್‌ನ 40-50 ಶಾಸಕರು ದೆಹಲಿಗೆ ಟಿಕೆಟ್ ಕಾಯ್ದಿರಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಅವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ಖರ್ಗೆ ಅವರೇ ಸಿಎಂ ಆದರೆ ಉತ್ತಮ ಎಂಬ ಗೃಹ ಸಚಿವ ಪರಮೇಶ್ವರ್​​ ಹೇಳಿಕೆಗೂ ಉತ್ತರಿಸಿದ ಅವರು, ನಾನಾದರೆ ಉತ್ತಮ ಅಂತ ನೀವು ಹೇಳ್ತೀರಿ, ಅವರು ಹೇಳ್ತಾರೆ, ಮೇಲಿನವರು ಹೇಳ್ತಾರೆ. ಈಗಾಗಲೇ ಇಲ್ಲಿ ಚೀಫ್ ಮಿನಿಸ್ಟರ್ ಇದ್ದಾರೆ. ಬದಲಾವಣೆ ಆಗಬೇಕೆಂದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಥವಾ ನಾವು ಸೇರಿ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ. ಅದಕ್ಕೆ ಸ್ವಲ್ಪ ಸಮಯ ಹಿಡಿಯುತ್ತದೆ, ನೋಡೋಣ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಕಾಂಪೌಂಡ್ ಬಳಿ ಕೂತು ವ್ಯಾಪಾರ ಮಾಡಬೇಡಿ’: ಬೌರಿಂಗ್ ಆಸ್ಪತ್ರೆ ದುರಂತದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ನೋಡಿ – Kannada News | Bowring Hospital Tragedy: AICC President Mallikarjun Kharge Urges Vendors to Avoid Sitting Near Walls

ಕಲಬುರಗಿ, ಏಪ್ರಿಲ್ 30: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದುಬಿದ್ದು ಏಳು ಮಂದಿ ಮೃತಪಟ್ಟ ಘಟನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಪೌಂಡ್ ಹಳೆಯದಾಗಿತ್ತು ಅಥವಾ ಕಳಪೆ ಗುಣಮಟ್ಟದಿಂದ ನಿರ್ಮಿಸಲಾಗಿತ್ತು ಎಂದು ಹೇಳಲಾಗುತ್ತಿದೆ ಎಂದರು. ಕುಸಿದ ಕಾಂಪೌಂಡ್ ಸರಿಪಡಿಸಲು ಮತ್ತು ಕಾಯಿಪಲ್ಲೆ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.

ಭವಿಷ್ಯದಲ್ಲಿ ಇಂತಹ ಅನಾಹುತಗಳು ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು. ಕಾಂಪೌಂಡ್‌ಗಳ ಬಳಿ ಬೀದಿ ವ್ಯಾಪಾರಕ್ಕೆ ಅವಕಾಶ ನೀಡಬಾರದು. ಕಾಂಪೌಂಡ್​ಗಳ ಬಳಿ ಯಾರೂ ಮಾರಾಟ ಮಾಡಬೇಡಿ ಎಂದು ಖರ್ಗೆ ಮನವಿ ಮಾಡಿದರು. ಪುಟ್ಪಾತ್ ಮೇಲೆ ವ್ಯಾಪಾರ ಮಾಡುವ ಸಣ್ಣ ವ್ಯಾಪಾರಿಗಳ ಸಮಸ್ಯೆಗಳನ್ನು ನಾವು ಅರ್ಥಮಾಡಿಕೊಳ್ಳಬೇಕು. ಅವರನ್ನು ಅಲ್ಲಿಂದ ತೆರವುಗೊಳಿಸಲು ಹೋದರೆ, ‘ನಮ್ಮ ಹೊಟ್ಟೆ ಮೇಲೆ ಹೊಡೆಯುತ್ತಿದ್ದೀರಿ’ ಎನ್ನುತ್ತಾರೆ. ಆದರೆ ನಗರದ ನಾಗರಿಕರಿಗೆ ಅನಾನುಕೂಲವಾಗಬಾರದು. ಮುನ್ಸಿಪಾಲಿಟಿಗಳು ಅವರಿಗೆ ಯೋಗ್ಯವಾದ ಸ್ಥಳಗಳನ್ನು ಒದಗಿಸಬೇಕು. ಇಂದು ಬೆಂಗಳೂರಿನಲ್ಲಿ ನಡೆದಂತೆ ನಾಳೆ ಇನ್ನೊಂದು ಕಡೆ ಆಗದಂತೆ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಿಗ್ ವರ್ಕರ್‌ಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಸಹಾಯ ಮಾಡಬೇಕು ಎಂದು ಖರ್ಗೆ ಒತ್ತಾಯಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಕೆಡಿ ಬ್ಲಾಕ್​​ಬಸ್ಟರ್​’; ಪ್ರೇಮ್ ನಿರ್ದೇಶನಕ್ಕೆ ಮೆಚ್ಚುಗೆ, ಕಿಚ್ಚನ ಎಂಟ್ರಿಗೆ ಸಿಳ್ಳೆ, ಚಪ್ಪಾಳೆ – Kannada News | KD Blockbuster Review: Prem’s Direction and Kichcha Sudeep’s Entry Impress

‘ಕೆಡಿ’ ಸಿನಿಮಾ ಇಂದು (ಏಪ್ರಿಲ್ 30) ರಿಲೀಸ್ ಆಗಿದೆ. ಕೆವಿಎನ್ ಸಂಸ್ಥೆ ನಿರ್ಮಿಸಿರುವ ಈ ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ. ಈ ಚಿತ್ರವನ್ನು ಜನರು ಸೋಶಿಯಲ್ ಮೀಡಿಯಾದಲ್ಲಿ ಕೊಂಡಾಡುತ್ತಿದ್ದಾರೆ. ಪ್ರೇಮ್ ಅವರ ಹಳೆಯ ಖದರ್ ಮರಳಿದೆ ಎಂಬ ಮಾತುಗಳು ಕೂಡ ಕೇಳಿ ಬಂದಿವೆ. ಇದು ಆರಂಭದ ವಿಮರ್ಶೆ ಮಾತ್ರ. ಸಂಜೆ ವೇಳೆಗೆ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ.

‘ಮಾರ್ಟಿನ್’ ಸೋಲಿನ ಬಳಿಕ ಧ್ರುವ ಸರ್ಜ ಅವರ ‘ಕೆಡಿ’ ಸಿನಿಮಾ ರಿಲೀಸ್ ಆಗಿದೆ. ಈ ಕಾರಣಕ್ಕೆ ಅವರ ವೃತ್ತಿಜೀವನದ ದೃಷ್ಟಿಯಿಂದ ಈ ಸಿನಿಮಾ ತುಂಬಾನೇ ಮುಖ್ಯ ಎನಿಸಿಕೊಂಡಿದೆ. ಈಗ ಸೋಶಿಯಲ್ ಮೀಡಿಯಾದಲ್ಲಿ ಜನರು ಸಿನಿಮಾಗೆ ಪಾಸಿಟಿವ್ ಆಗಿ ಪ್ರತಿಕ್ರಿಯಿಸಿರುವುದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

‘ಕೆಡಿ’ ಸಿನಿಮಾದ ಮೊದಲಾರ್ಧವನ್ನು ಜನರು ಸಮಾಧಕರ ಎಂದು ಕರೆದಿದ್ದಾರೆ. ಸಿನಿಮಾದ ಪಾತ್ರಗಳ ಪರಿಚಯದ ಮೇಲೆ ಮೊದಲಾರ್ಧ ಸಾಗುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವಿಮರ್ಶೆ ತಿಳಿಸಿದವರು ಹೇಳಿದ್ದಾರೆ. ಸಿನಿಮಾದ ಅಸಲಿ ಕಥೆ ಆರಂಭ ಆಗೋದು ದ್ವೀತೀಯಾರ್ಧದಲ್ಲಂತೆ. ಸಿನಿಮಾದ ಕ್ಲೈಮ್ಯಾಕ್ಸ್ ಅನ್ನು ಜನರು ಹಾಡಿ ಹೊಗಳಿದ್ದಾರೆ.

ಇದನ್ನೂ ಓದಿ: ‘ಕೆಡಿ’ ಸಿನಿಮಾ ರಿಲೀಸ್​​ಗೂ ಮೊದಲು ತಲೆ ಎತ್ತಿತು ಬೃಹತ್​ ಕಟೌಟ್

ಅರ್ಜುನ್ ಜನ್ಯ ಅವರ ಹಿನ್ನೆಲೆ ಸಂಗೀತ ಸಿನಿಮಾನ ಬೇರೆ ಹಂತಕ್ಕೆ ತೆಗೆದುಕೊಂಡು ಹೋಗಿದೆ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಸಿನಿಮಾನ ಜನರು ಒಟ್ಟಾರೆಯಾಗಿ ಇಷ್ಟಪಟ್ಟಿದ್ದಾರೆ. ಸಂಕಷ್ಟದಲ್ಲಿರುವ ಚಿತ್ರರಂಗಕ್ಕೆ ಸಿನಿಮಾ ಸಹಕಾರಿ ಆಗಲಿದೆ ಎಂದು ಅನೇಕರು ಪರಿಗಣಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಂಡ್ಯ ವಿವಿಯ ಯುವಸಂಭ್ರಮಕ್ಕೆ ವರುಣನ ಅಡ್ಡಿ: ಮಳೆ ಅಬ್ಬರಕ್ಕೆ ವೇದಿಕೆಯೇ ನೆಲಸಮ – Kannada News | Mandya University Yuvasambrama Postponed After Storm Damages Event Stage

ಮಂಡ್ಯ, ಏಪ್ರಿಲ್​​ 30: ನಿನ್ನೆ (ಏಪ್ರಿಲ್​ 29) ರಾತ್ರಿ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ನವ ವಸಂತ ಯುವಸಂಭ್ರಮ ಕಾರ್ಯಕ್ರಮಕ್ಕೂ ಮಳೆ ಅಡ್ಡಿಯಾಗಿದೆ. ಕಳೆದ ರಾತ್ರಿ ಬೀಸಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಕಾರ್ಯಕ್ರಮಕ್ಕಾಗಿ ನಿರ್ಮಿಸಿದ್ದ ಬೃಹತ್ ಪೆಂಡಾಲ್ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಪಡಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಶಾಸಕ ರವಿ ಗಣಿಗ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳ ನಿರೀಕ್ಷೆಗೆ ತಕ್ಕಂತೆ ಕಾರ್ಯಕ್ರಮವನ್ನು ಮುಂದೊಂದು ದಿನ ನಡೆಸುವ ಭರವಸೆ ನೀಡಿದ್ದಾರೆ. ಸದ್ಯಕ್ಕೆ, ತಾತ್ಕಾಲಿಕವಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version