Headlines

ಬೇಗನೆ ಔಟಾದರೂ, 117 ರನ್​ ಪೂರೈಸಿದ ವೈಭವ್ ಸೂರ್ಯವಂಶಿ..! – Kannada News | Vaibhav Sooryavanshi Out For 38 Runs Against Afghanistan A

ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲೂ ಭಾರತ ‘ಎ’ ತಂಡದ ಯುವ ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದಲ್ಲೂ ಓಪನರ್ ಆಗಿ ಕಣಕ್ಕಿಳಿದ ವೈಭವ್ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನಿಡಿದ್ದರು. ಅದರಂತೆ ಕೇವಲ 27 ಎಸೆತಗಳಲ್ಲಿ 38 ರನ್ ಬಾರಿಸಿದ್ದರು. ಆದರೆ 28ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಔಟಾಗಿದ್ದಾರೆ. ಔಟ್ ಆಗಿದ್ದು ಹೇಗೆ? ಇನ್ನಿಂಗ್ಸ್‌ನ 8ನೇ ಓವರ್‌ನಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸುತ್ತಿದ್ದ ವೈಭವ್…

Read More

ಶಿವಣ್ಣನ ಎನರ್ಜಿಗೆ ತಮಿಳು ಸಿನಿಮಾ ತಂಡ ಫಿದಾ, ವಿಡಿಯೋ ನೋಡಿ – Kannada News | Shiva Rajkumar bring energy to Tamil movie set watch video

ಶಿವರಾಜ್ ಕುಮಾರ್ (Shiva Rajkumar) ಅವರ ವಯಸ್ಸಿಗೂ ಅವರ ಎನರ್ಜಿಗೂ ಸಂಬಂಧವೇ ಇಲ್ಲ. ಎಲ್ಲೇ ಹೋದರೂ ಶಿವಣ್ಣ ತಮ್ಮ ಎನರ್ಜಿಯಿಂದ ಆ ಸ್ಥಳದ ವಾತಾವರಣವನ್ನೇ ಬದಲಾಯಿಸಿಬಿಡುತ್ತಾರೆ. ಶಿವರಾಜ್ ಕುಮಾರ್ ಅವರು ಕನ್ನಡ ಮಾತ್ರವಲ್ಲದೆ ಕೆಲ ಪರ ಭಾಷೆ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ರಾಮ್ ಚರಣ್ ಜೊತೆ ನಟಿಸಿದ ‘ಪೆದ್ದಿ’ ಸಿನಿಮಾ ರಿಲೀಸ್ ಆಗಿ ಹಿಟ್ ಆಗಿದೆ. ಇದೀಗ ಅವರು ಹೊಸದೊಂದು ತಮಿಳು ಸಿನಿಮಾನಲ್ಲಿ ನಟಿಸುತ್ತಿದ್ದು, ಅಲ್ಲಿಯೂ ಸಹ ಶಿವಣ್ಣ ತಮ್ಮ ಎನರ್ಜಿಯಿಂದ ಇಡೀ ಸೆಟ್​​ಗೆ ಹೊಸ…

Read More

ಅದು ಫುಟ್‌ಬಾಲ್‌ಗೆ ಸಂಬಂಧಿಸಿದ್ದಲ್ಲ: ಕಣ್ಣೀರಿಟ್ಟ ಲಿಯೋನೆಲ್ ಮೆಸ್ಸಿ! – Kannada News | Lionel Messi was caught by broadcast visuals wiping tears

ಫಿಫಾ ವಿಶ್ವಕಪ್​ನ 19ನೇ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿ ಇತಿಹಾಸ ನಿರ್ಮಿಸಿದ ಲಿಯೋನೆಲ್ ಮೆಸ್ಸಿ (Lionel Messi) ಮೈದಾನದಲ್ಲೇ ಕಣ್ಣೀರೀಟಿದ್ದಾರೆ. ಅಲ್ಜೀರಿಯಾ ವಿರುದ್ಧದ ಈ ಪಂದ್ಯದಲ್ಲಿ ಅರ್ಜೆಂಟೀನಾ ತಂಡವನ್ನು ಮುನ್ನಡೆಸಿದ ಮೆಸ್ಸಿ 17ನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿದ್ದರು. ಈ ಗೋಲಿನ ಬೆನ್ನಲ್ಲೇ ಎಂದಿನ ಶೈಲಿಯಲ್ಲಿ ಸಂಭ್ರಮಾಚರಣೆ ಮುಗಿಸುತ್ತಿದ್ದಂತೆ, ವೈಯಕ್ತಿಕ ಭಾವನೆಗಳನ್ನು ತಡೆಯಲಾರದೆ ಭಾವುಕರಾದರು. ಈ ವೇಳೆ ಅವರು ತಮ್ಮ ಜೆರ್ಸಿಯಿಂದ ಕಣ್ಣೀರು ಒರೆಸಿಕೊಳ್ಳುತ್ತಿರುವ ದೃಶ್ಯಗಳು ಟಿವಿ ಲೈವ್ ಬ್ರಾಡ್‌ಕಾಸ್ಟ್‌ನ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದವು. The last time…

Read More

ಚಿತ್ರದುರ್ಗ: ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು – Kannada News | 4 Year Old Boy Vaishnav Dies From Chest Burning Sensation in Chitradurga

ಚಿತ್ರದುರ್ಗ, ಜೂನ್ 17: ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದ ದುರ್ಘಟನೆಯೊಂದರಲ್ಲಿ ನಾಲ್ಕು ವರ್ಷದ ಬಾಲಕ ವೈಷ್ಣವ್ ಎದೆ ಉರಿ ಕಾಣಿಸಿಕೊಂಡು ಸಾವನ್ನಪ್ಪಿದ್ದಾನೆ. ವೈಷ್ಣವ್ ತನ್ನ ಪೋಷಕರಿಗೆ ಎದೆ ಭಾಗದಲ್ಲಿ ಉರಿ ಕಾಣಿಸಿಕೊಳ್ಳುತ್ತಿದೆ ಎಂದು ಹೇಳಿಕೊಂಡಿದ್ದನು. ಆರಂಭದಲ್ಲಿ ಪೋಷಕರು ಇದನ್ನು ಗ್ಯಾಸ್ಟ್ರಿಕ್ ಸಮಸ್ಯೆ ಎಂದು ಭಾವಿಸಿ, ಮನೆಮದ್ದುಗಳನ್ನು ನೀಡಿದ್ದರು. ಆದರೆ, ವೈಷ್ಣವ್ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ. ಮಗುವಿನ ಸ್ಥಿತಿ ಗಂಭೀರವಾಗುತ್ತಿದ್ದಂತೆ, ಆತಂಕಗೊಂಡ ಪೋಷಕರು ವೈಷ್ಣವ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದರು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ವೈಷ್ಣವ್ ಕೊನೆಯುಸಿರೆಳೆದಿದ್ದಾನೆ….

Read More

UGC NET Admit Card 2026: ಯುಜಿಸಿ ನೆಟ್ ಪರೀಕ್ಷೆಯ ಹಾಲ್ ಟಿಕೆಟ್‌ ಬಿಡುಗಡೆ; ಡೌನ್‌ಲೋಡ್ ಮಾಡುವುದು ಹೇಗೆ? – Kannada News | NTA UGC NET Admit Card June 2026: Get Your Hall Ticket and Check Exam Dates

ಯುಜಿಸಿ ನೆಟ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಜೂನ್ 2026 ರ ಯುಜಿಸಿ ನೆಟ್ (UGC NET) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಪ್ರವೇಶ ಪತ್ರಗಳನ್ನು (Admit Cards) ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈಗ ತಮ್ಮ ಹಾಲ್ ಟಿಕೆಟ್‌ಗಳನ್ನು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಜೂನ್ 22, 23, 24, 25, 29 ಮತ್ತು 30 ರಂದು ನಡೆಯಲಿರುವ ಪರೀಕ್ಷೆಗಳಿಗೆ…

Read More

‘ದಿ ಒಡೆಸ್ಸಿ’ ಪ್ರೀಮಿಯರ್ ಶೋಗಾಗಿ ಭಾರತಕ್ಕೆ ಬರ್ತಾರೆ ಕ್ರಿಸ್ಟೋಫರ್ ನೋಲನ್ – Kannada News | Christopher Nolan in Mumbai for ‘The Odyssey’ Premiere! India Gears for IMAX Spectacle

ಹಾಲಿವುಡ್ ಚಿತ್ರರಂಗದ ಖ್ಯಾತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರಿಗೆ (Christopher Nolan) ಭಾರತದಲ್ಲೂ ಭಾರಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಪ್ರತಿ ಸಿನಿಮಾಗಳಿಗೂ ಇಲ್ಲಿ ಅದ್ಭುತ ರೆಸ್ಪಾನ್ಸ್ ಸಿಗುತ್ತವೆ ಹಾಗೂ ಗಲ್ಲಾಪೆಟ್ಟಿಗೆಯಲ್ಲೂ ಒಳ್ಳೆಯ ಕಲೆಕ್ಷನ್ ಮಾಡುತ್ತವೆ. ಇದೀಗ ಭಾರತದ ಅಭಿಮಾನಿಗಳನ್ನು ಮತ್ತಷ್ಟು ಖುಷಿಪಡಿಸಲು ನೋಲನ್ ಅವರು ಇದೇ ಮೊದಲ ಬಾರಿಗೆ ತಮ್ಮ ಸಿನಿಮಾವೊಂದರ ಪ್ರಚಾರಕ್ಕಾಗಿ ಮುಂಬೈಗೆ ಲಗ್ಗೆ ಇಡುತ್ತಿದ್ದಾರೆ. ‘ದಿ ಒಡಿಸ್ಸಿ’ ಸಿನಿಮಾನ ಕ್ರಿಸ್ಟೋಫರ್ ನೋಲನ್ ನಿರ್ದೇಶನ ಮಾಡಿದ್ದಾರೆ. ಜುಲೈ 17ರಂದು ತೆರೆಗೆ ಬರುತ್ತಿರುವ ಈ…

Read More

ಟೆಲಿಗ್ರಾಮ್ ತಾತ್ಕಾಲಿಕ ನಿಷೇಧ: ಕೇಂದ್ರದ ನಿರ್ಧಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಂಸ್ಥೆ – Kannada News | Telegram Challenges India’s NEET UG Re Exam Ban in Delhi High Court Today

ನವದೆಹಲಿ, ಜೂನ್ 17: ಭಾರತದಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ ಯುಜಿ (NEET-UG 2026) ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ಆ್ಯಪ್ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸಕರಕಾರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದೆ. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ನ್ಯಾಯಾಲಯವು ಇಂದು ನಂತರದ ಅವಧಿಯಲ್ಲಿ ಪ್ರಕರಣದ ತುರ್ತು ವಿಚಾರಣೆ ನಡೆಸಲು ಒಪ್ಪಿಕೊಂಡಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ತನಿಖೆಯನ್ನು ಕೇಂದ್ರ…

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬಿದ್ದು 7 ಜನ ಸತ್ತ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು! – Kannada News | Bengaluru Bowring Hospital Wall: Negligence After 7 Deaths Sparks Safety Concerns

ಬೆಂಗಳೂರು, ಜೂನ್ 17: ಸುಮಾರು ಒಂದೂವರೆ ತಿಂಗಳ ಹಿಂದೆ ಬೆಂಗಳೂರಿನ ಶಿವಾಜಿ ನಗರದ ಬೌರಿಂಗ್ ಅಥವಾ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಬಳಿ ಸಂಭವಿಸಿದ ಬೃಹತ್ ಗೋಡೆ ಕುಸಿತದಲ್ಲಿ ಏಳು ಮಂದಿ ಮೃತಪಟ್ಟಿದ್ದರು. ಈ ಭೀಕರ ದುರಂತ ಸಂಭವಿಸಿದರೂ, ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಘಟನಾ ಸ್ಥಳದಿಂದ ಕೇವಲ 100-150 ಮೀಟರ್ ಅಂತರದಲ್ಲಿ, ಬೌರಿಂಗ್ ಆಸ್ಪತ್ರೆಯ ಮತ್ತೊಂದು ಗೋಡೆಯು ಬೃಹತ್ ಬಿರುಕು ಬಿಟ್ಟು ಬೀಳುವ ಹಂತ ತಲುಪಿದೆ. ಈ ಅಪಾಯಕಾರಿ ಪ್ರದೇಶದಲ್ಲಿ ಜನಸಾಮಾನ್ಯರು, ವಿಶೇಷವಾಗಿ ಪಾದಚಾರಿಗಳು ನಿತ್ಯ…

Read More

ISRO Recruitment 2026: ಇಸ್ರೋದಲ್ಲಿ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲಿ ಕೆಲಸ! – Kannada News | ISRO URSC JRF Recruitment 2026: Apply Online for 17 Junior Research Fellow Posts by July 11

ಇಸ್ರೋದಲ್ಲಿ ಉದ್ಯೋಗಾವಕಾಶImage Credit source: Pinterest ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಇಸ್ರೋದ ಪ್ರಮುಖ ಕೇಂದ್ರವಾದ ಯು.ಆರ್. ರಾವ್ ಉಪಗ್ರಹ ಕೇಂದ್ರ (URSC) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ (Online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ: ಹುದ್ದೆಯ ವಿವರಗಳು: ಸಂಸ್ಥೆಯ…

Read More

ಚಾಮರಾಜನಗರದಲ್ಲೊಂದು ಹೃದಯ ವಿದ್ರಾವಕ ಘಟನೆ: ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು – Kannada News | Four Year Old Girl Dies From Grinder Electrocution in Chamarajanagar

ಚಾಮರಾಜನಗರ, ಜೂನ್​​ 17: ಗುಂಡ್ಲುಪೇಟೆ ತಾಲೂಕಿನ ಕಲಿಗೌಡನಹಳ್ಳಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ ಗ್ರೈಂಡರ್​ನಿಂದ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಪುಟ್ಟಮ್ಮ ಹಾಗೂ ಆನಂದ್ ದಂಪತಿಯ ಪುತ್ರಿ ಅದ್ವಿತಾ ಮೃತಪಟ್ಟ ದುರ್ದೈವಿ. ಮನೆಯಲ್ಲಿ ಆಟವಾಡುತ್ತಿದ್ದ ಅದ್ವಿತಾ ನೀರು ಕುಡಿಯಲು ಅಡುಗೆ ಮನೆಗೆ ತೆರಳಿದ್ದಳು. ಆ ಸಮಯದಲ್ಲಿ ಅಡುಗೆ ಮನೆಯಲ್ಲಿ ಆನ್ ಆಗಿದ್ದ ಗ್ರೈಂಡರ್ ಅನ್ನು ಮುಟ್ಟಿದ್ದಾಳೆ. ಗ್ರೈಂಡರ್ ಅನ್ನು ಮುಟ್ಟಿದ ತಕ್ಷಣವೇ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅದ್ವಿತಾಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು…

Read More