100 ಓವರ್​, 600 ಎಸೆತಗಳು: ವೈಭವ್ ಸೂರ್ಯವಂಶಿ ಸಿಕ್ರೇಟ್ ಬಹಿರಂಗ! – Kannada News | Coach Reveals Vaibhav Sooryavanshi’s Insane Childhood Routine

ವಿಶ್ವ ಕ್ರಿಕೆಟ್‌ನ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Sooryavanshi) ಯಶಸ್ಸಿನ  ಹಿಂದಿರುವ ರೋಚಕ ರಹಸ್ಯವನ್ನು ಅವರ ಬಾಲ್ಯದ ಕೋಚ್ ಮನೀಶ್ ಓಜಾ ಬಹಿರಂಗಪಡಿಸಿದ್ದಾರೆ. ಕೇವಲ 15ನೇ ವಯಸ್ಸಿಗೆ ವಿಶ್ವ ಕ್ರಿಕೆಟ್‌ನ ದೈತ್ಯ ಬೌಲರ್‌ಗಳನ್ನು ನಡುಗಿಸುತ್ತಿರುವ ಯುವ ದಾಂಡಿಗನ ಈ ಯಶಸ್ಸಿಗೆ ಕಾರಣ ಕಠಿಣ ಪರಿಶ್ರಮ. ಅದು ಅಂತಿಂಥ ಪರಿಶ್ರಮವಲ್ಲ ಎಂಬುದನ್ನೂ ಕೂಡ ಓಜಾ ಅಂಕಿ-ಸಂಖ್ಯೆಗಳ ಮೂಲಕ ತೆರೆದಿಟ್ಟಿದ್ದಾರೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 2026 ಸೀಸನ್‌ನಲ್ಲಿ 776 ರನ್ ಬಾರಿಸಿ ಅತ್ಯಂತ ಕಿರಿಯ ವಯಸ್ಸಿನ ಆರೆಂಜ್ ಕ್ಯಾಪ್ ಹಾಗೂ ಟೂರ್ನಿಯ ಮೂವಿಂಗ್ ಪ್ಲೇಯರ್ ಪ್ರಶಸ್ತಿ ಗೆದ್ದ ವೈಭವ್ ಸೂರ್ಯವಂಶಿ, ಸದ್ಯ ಇಂಗ್ಲೆಂಡ್ ಪ್ರವಾಸದ ಭಾರತ ಹಿರಿಯರ ಟಿ20 ತಂಡಕ್ಕೂ ಆಯ್ಕೆಯಾಗಿದ್ದಾರೆ. ಈ ಅಸಾಧಾರಣ ಯಶಸ್ಸಿಗೆ ವರ್ಷಗಳ ಕಾಲ ನಡೆದ “ಕಠಿಣ” ತರಬೇತಿಯೇ ಕಾರಣ ಎಂದು ಓಜಾ ಹೇಳಿದ್ದಾರೆ.

ವೈಭವ್ ಸೂರ್ಯವಂಶಿ ಪ್ರತಿ ದಿನ 8 ಗಂಟೆಗಳ ಕಾಲ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದ. ಈ ವೇಳೆ ಬರೋಬ್ಬರಿ 100 ಓವರ್​ಗಳನ್ನು ಎದುರಿಸುತ್ತಿದ್ದ. ಅಂದರೆ ಬರೋಬ್ಬರಿ 600 ಎಸೆತಗಳು.

ಈ ಅಭ್ಯಾಸ ಇಂದು ನಿನ್ನೆ ಶುರುವಾಗಿದ್ದಲ್ಲ, ಕೇವಲ 10 ವರ್ಷದವರಾಗಿದ್ದಾಗಿನಿಂದಲೇ ವೈಭಯ್ ಇಂತಹದೊಂದು ಅತ್ಯಂತ ಕಠಿಣ ದಿನಚರಿಯನ್ನು ಪಾಲಿಸುತ್ತಿದ್ದ. ಅದರ ಫಲವೇ ಇದೀಗ ಅಬ್ಬರಿಸುತ್ತಿರುವುದು ಎಂದು ಮನೀಶ್ ಓಜಾ ತಿಳಿಸಿದ್ದಾರೆ. ವೈಭವ್ ಸೂರ್ಯವಂಶಿಯ ದಿನಚರಿ ಈ ಕೆಳಗಿನಂತಿದೆ…

  • ಪ್ರತಿ ದಿನ ಬೆಳಿಗ್ಗೆ 7:30 ಕ್ಕೆ ಆರಂಭವಾಗುತ್ತಿದ್ದ ನೆಟ್ ಪ್ರಾಕ್ಟೀಸ್, ಸಂಜೆ 4:00 ರವರೆಗೆ ಸಾಗುತ್ತಿತ್ತು.
  • ವೈಭವ್ ಪ್ರತಿದಿನ ಕನಿಷ್ಠ 100 ಓವರ್‌ಗಳಷ್ಟು (600ಕ್ಕೂ ಹೆಚ್ಚು ಎಸೆತಗಳು) ಬ್ಯಾಟಿಂಗ್ ಮಾಡುತ್ತಿದ್ದರು.

ಮೊದಲು ಕೋಚ್ ಮನೀಶ್ ಓಜಾ, ಸ್ವತಃ 200 ರಿಂದ 300 ಥ್ರೋ-ಡೌನ್ ಎಸೆತಗಳನ್ನು ಹಾಕುತ್ತಿದ್ದರು. ಅವರು ಸುಸ್ತಾದಾಗ ಅಕಾಡೆಮಿಯ ಸಹಾಯಕ ಸಿಬ್ಬಂದಿ ಹಾಗೂ ನೆಟ್ ಬೌಲರ್‌ಗಳು ಗುಂಪು ಗುಂಪಾಗಿ ಬೌಲಿಂಗ್ ಮಾಡುತ್ತಿದ್ದರು. ಆದರೂ ವೈಭವ್ ಬ್ಯಾಟಿಂಗ್ ಹಸಿವು ತೀರುತ್ತಿರಲಿಲ್ಲ.

ಅಭ್ಯಾಸದ ವೇಳೆಯೇ ವೈಭವ್ ಸೂರ್ಯವಂಶಿ ಅವರ ಆಕ್ರಮಣಕಾರಿ ಪವರ್-ಹಿಟ್ಟಿಂಗ್ ಎಷ್ಟಿತ್ತೆಂದರೆ, ಯಾವುದೇ ಕ್ರಿಕೆಟ್ ಬ್ಯಾಟ್ ಒಂದು ತಿಂಗಳಿಗಿಂತ ಹೆಚ್ಚು ಕಾಲ ಉಳಿಯುತ್ತಿರಲಿಲ್ಲ.

ಕೇವಲ 11-12ನೇ ವಯಸ್ಸಿನಲ್ಲೇ ವೈಭವ್ ಅವರು ಗಂಟೆಗೆ 125-130 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಹಿರಿಯ ವೇಗದ ಬೌಲರ್‌ಗಳನ್ನು ಲೀಲಾಜಾಲವಾಗಿ ಎದುರಿಸುತ್ತಿದ್ದರು. ಇವೆಲ್ಲದರ ಫಲವಾಗಿ ಇಂದು ವಿಶ್ವದ ಪ್ರಮುಖ ಬೌಲರ್​ಗಳನ್ನು ನಿರಾಯಾಸವಾಗಿ ಎದುರಿಸುತ್ತಿದ್ದಾರೆ ಎಂದು ಮನೀಶ್ ಓಜಾ ತಿಳಿಸಿದ್ದಾರೆ.

ಹೆತ್ತವರ ತ್ಯಾಗ!

ವೈಭವ್ ಸೂರ್ಯವಂಶಿ ಈ ಮಟ್ಟಕ್ಕೆ ಬೆಳೆಯಲು ಅವರ ಹೆತ್ತವರ ತ್ಯಾಗ ಅಪಾರವಾಗಿದೆ. ಬಿಹಾರದ ಸಮಸ್ತಿಪುರದ ತಾಜ್‌ಪುರ ಗ್ರಾಮದವರಾದ ಇವರು ವೈಭವ್ ಕ್ರಿಕೆಟ್‌ಗಾಗಿ ಪಾಟ್ನಾಗೆ ವಲಸೆ ಬಂದವರು.

ಮಗನಿಗೆ ಅಕಾಡೆಮಿಯಲ್ಲಿ ನೆಟ್ಸ್ ಬೌಲಿಂಗ್ ಮಾಡುವ ಬೌಲರ್‌ಗಳಿಗೂ ಸೇರಿಸಿ ದಿನಕ್ಕೆ 10-15 ಜನರಿಗೆ ಅಡುಗೆ ಮಾಡಲು ತಾಯಿ ಆರತಿ ಪ್ರತಿದಿನ ನಡುರಾತ್ರಿ 2:00 ಗಂಟೆಗೆ ಏಳುತ್ತಿದ್ದರು. ಮುಂಜಾನೆ 4:00 ಗಂಟೆಗೆ ಅಡುಗೆ ಮುಗಿಸಿ ಪಾಟ್ನಾ ಅಕಾಡೆಮಿಗೆ ಕರೆದೊಯ್ಯುತ್ತಿದ್ದರು.

ಕೃಷಿಕರಾಗಿದ್ದ ತಂದೆ ಸಂಜೀವ್ ಸೂರ್ಯವಂಶಿ,  ಮಗನ ಕ್ರಿಕೆಟ್ ಕಿಟ್, ತರಬೇತಿ ವೆಚ್ಚ ಹಾಗೂ ನೆಟ್ಸ್ ಬೌಲರ್‌ಗಳ ಊಟದ ಖರ್ಚನ್ನು ಸರಿದೂಗಿಸಲು ತಮ್ಮ ಜಮೀನನ್ನೇ ಮಾರಾಟ ಮಾಡಿದ್ದರು.

ಇದೀಗ ಐಪಿಎಲ್​​ ಮೂಲಕ ವೈಭವ್ ಸೂರ್ಯವಂಶಿ ಪೋಷಕರು ಕಳೆದುಕೊಂಡಿದ್ದೆಲ್ಲವನ್ನೂ ಮರಳಿ ಪಡೆಯುವ ಯತ್ನದಲ್ಲಿದ್ದಾರೆ. ಅಷ್ಟೇ ಅಲ್ಲದೆ ಪೋಷಕರಿಗಾಗಿ ಮತ್ತಷ್ಟು ಸಾಧನೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ.

ಸ್ನಾಯು ಗ್ರಹಿಕೆ!

ವೈಭವ್ ಸೂರ್ಯವಂಶಿ ಆರು ವರ್ಷಗಳ ಕಾಲ ನಿರಂತರವಾಗಿ ಪ್ರತಿದಿನ 100 ಓವರ್‌ಗಳ ಕಾಲ ಬ್ಯಾಟಿಂಗ್ ಮಾಡಿದ್ದರಿಂದಲೇ ಅವರ ಸ್ನಾಯುಗಳ ಗ್ರಹಿಕೆ ಹಾಗೂ ಅದ್ಭುತ ಬ್ಯಾಟ್ ಸ್ವಿಂಗ್ ರೂಪುಗೊಂಡಿದೆ. ಇಲ್ಲಿ ಸ್ನಾಯು ಗ್ರಹಿಕೆ ಎಂದರೆ, ಒಂದು ಕೆಲಸವನ್ನು ಪದೇ ಪದೇ ಮಾಡಿ ರೂಢಿಸಿಕೊಂಡಾಗ, ದೇಹವು ಅದನ್ನು ಯೋಚಿಸದೆಯೇ ಸ್ವಯಂಚಾಲಿತವಾಗಿ ಮಾಡುವ ಶಕ್ತಿ.

ಇದನ್ನೂ ಓದಿ: ಸಿಕ್ಸ್ ಸಿಡಿಸಿಯೇ ಹೊಸ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ

ವೈಭವ್ ಸೂರ್ಯವಂಶಿ ನಿರಂತರವಾಗಿ 100 ಓವರ್​ಗಳ ಕಾಲ ಬ್ಯಾಟಿಂಗ್ ಅಭ್ಯಾಸ ಮಾಡಿರುವುದರಿಂದ ಅವರ ಸ್ನಾಯು ಗ್ರಹಿಕೆ ಬಲಗೊಂಡಿದೆ. ಇದರಿಂದ ಅವರ ಮೆದಳು ಯೋಚಿಸುವ ವೇಗದಲ್ಲೇ ಸ್ನಾಯುಗಳು ಕಾರ್ಯನಿರ್ವಹಿಸುತ್ತವೆ. ಇದರಿಂದಾಗಿಯೇ ಇಂದು ವೈಭವ್ ಸೂರ್ಯವಂಶಿಯ ಶಾಟ್​ಗಳನ್ನು ನೋಡಿ ಇಡೀ ಜಗತ್ತೇ ಆಶ್ಚರ್ಯಪಡುತ್ತಿದೆ ಎಂದು ಬಾಲ್ಯದ ಕೋಚ್ ಮನೀಶ್ ಓಜಾ ಹೇಳಿದ್ದಾರೆ.

Published On – 8:13 am, Mon, 15 June 26

Source link

ತಿಂಗಳಿನಿಂದ ಮುಖ್ಯ ರಸ್ತೆಯೇ ಬಂದ್​​: ಕಮರ್ಷಿಯಲ್ ಸ್ಟ್ರೀಟ್ ಬಳಿ ವಾಹನ ಸಂಚಾರವೇ ದುಸ್ತರ – Kannada News | Commercial Street Road Closure: Delayed Stormwater Drain Work Leaves Commuters and Locals Stranded for a Month

ರಾಜಕಾಲುವೆ ದುರಸ್ತಿ ಕಾಮಗಾರಿImage Credit source: Tv9 Kannada

ಬೆಂಗಳೂರು, ಜೂನ್​​ 15: ನಗರದ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್ ಆಗಿರುವ ಕಮರ್ಷಿಯಲ್ ಸ್ಟ್ರೀಟ್ ಬಳಿ ವಾಹನ ಸಂಚಾರವೇ ದುಸ್ತರವಾಗಿದೆ. ರಾಜಕಾಲುವೆ ದುರಸ್ತಿ ಹಾಗೂ ಪೈಪ್ ಲೈನ್ ಕಾಮಗಾರಿಗಾಗಿ ಮುಖ್ಯರಸ್ತೆಯನ್ನೇ ಬಂದ್ ಮಾಡಿ ಬರೋಬ್ಬರಿ ಒಂದು ತಿಂಗಳುಗಳೇ ಕಳೆದಿದ್ದು, ನಿಧಾನಗತಿಯ ಕಾಮಗಾರಿಯಿಂದಾಗಿ ವಾಹನ ಸವಾರರು ಮತ್ತು ಸ್ಥಳೀಯರು ಹೈರಾಣಾಗುತ್ತಿದ್ದಾರೆ. ಫ್ರೆಜರ್ ಟೌನ್ ಕಡೆಗೆ ತೆರಳಲು ವಾಹನ ಸವಾರರಿಗೆ ಬಹಳ ಕಿರಿಕಿರಿ ಉಂಟಾಗುತ್ತಿದೆ. ಸೂಕ್ತ ಪರ್ಯಾಯ ಮಾರ್ಗವೂ ಇಲ್ಲದ ಕಾರಣ ಸಮಸ್ಯೆ ಹೆಚ್ಚಿದೆ.

ಎಂಜಿ ರಸ್ತೆ ಕಡೆಯಿಂದ ಫ್ರೆಜರ್ ಟೌನ್ ಕಡೆಗೆ ತೆರಳಲು ಇದುವೇ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಅಕ್ಕಪಕ್ಕದ ಪರ್ಯಾಯ ಮಾರ್ಗದ ರಸ್ತೆಗಳು ಕಿರಿದಾಗಿರುವ ಕಾರಣ ಸುಗಮ ಸಂಚಾರ ಕಷ್ಟಕರ. ಹೀಗಿದ್ದರೂ ಒಂದು ತಿಂಗಳಿನಿಂದ ರಸ್ತೆ ಬಂದ್​​ ಮಾಡಿ ನಡೆಸುತ್ತಿರುವ ಕಾಮಗಾರಿ ಮಾತ್ರ ಕುಂಟುತ್ತಲೇ ಸಾಗಿದೆ. ಯಾವಾಗ ಕಾಮಗಾರಿ ಮುಗಿಬಹುದೆಂಬ ಸ್ಪಷ್ಟತೆಯೂ ಇಲ್ಲದ ಕಾರಣ ಸ್ಥಳೀಯರೂ ಕೂಡ ಪರದಾಡುವಂತಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪುಡಿರೌಡಿಗಳ ಕಿರುಕುಳ ತಪ್ಪಿಸಲು ವ್ಯಾಪಾರಿಗಳು ಆಗ್ರಹ; ಜೂ.1ರಂದು ಬೇಕರಿ-ಕಾಂಡಿಮೆಂಟ್ಸ್ ಬಂದ್

ವಾಹನ ಸವಾರರ ಆಕ್ರೋಶ

ಕಾಮಗಾರಿ ವಿಳಂಬದಿಂದ ಸಂಚಾರವೇ ದುಸ್ಥರವಾಗಿದೆ ಎಂದು ವಾಹನ ಸವಾರರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನಿಷ್ಠ ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡಿಕೊಡಬೇಕು ಎಂಬ ಆಗ್ರಹಗಳು ಕೇಳಿಬಂದಿವೆ. ಕಾಮಗಾರಿ ಆರಂಭಿಸಿ 4 ತಿಂಗಳಾಗಿದ್ದರೆ ರಸ್ತೆ ಬಂದ್​​ ಮಾಡಿ ತಿಂಗಳು ಕಳೆದಿದೆ. ಇದರಿಂದಾಗಿ ಬಹಳ ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳೂ ಅಲವತ್ತುಕೊಂಡಿದ್ದಾರೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಇತ್ತ ಗಮನಹರಿಸಿ ಶೀಘ್ರವೇ ಕಾಮಗಾರಿ ಮುಗಿಸುವ ಮೂಲಕ ಸಾರ್ವಜನಿಕರಿಗೆ ಉಂಟಾಗುತ್ತಿರುವ ಅನಾನುಕೂಲವನ್ನು ತಪ್ಪಿಸಬೇಕಿದೆ.

ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸತತ ಸೋಲುಗಳಿಂದ ಕಂಗೆಟ್ಟ ನಟಿ ಶ್ರೀಲೀಲಾ; ಬೇಕಿದೆ ದೊಡ್ಡ ಗೆಲುವು – Kannada News | Sreeleela’s Career Crisis: Box Office Failures and Comeback Challenge in Tollywood

ತೆಲುಗು ಚಿತ್ರರಂಗದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಅಪಾರ ಜನಪ್ರಿಯತೆ ಮತ್ತು ಕ್ರೇಜ್ ಗಳಿಸಿಕೊಂಡ ನಟಿ ಶ್ರೀಲೀಲಾ ಪ್ರಸ್ತುತ ಕಠಿಣ ಹಂತವನ್ನು ಎದುರಿಸುತ್ತಿದ್ದಾರೆ. ‘ಪೆಲ್ಲಿ ಸಂದಡಿ’ ಚಿತ್ರದ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿದ ಈ ಕರಾವಳಿ ಬೆಡಗಿ, ತನ್ನ ಮೊದಲ ಚಿತ್ರದಲ್ಲೇ ಪ್ರೇಕ್ಷಕರ ಮನಗೆದ್ದಿದ್ದರು. ಅದಾದ ನಂತರ ಮಾಸ್ ಮಹಾರಾಜ ರವಿತೇಜ ಜೊತೆ ನಟಿಸಿದ ‘ಧಮಾಕಾ’ ಚಿತ್ರವು ಬ್ಲಾಕ್‌ಬಸ್ಟರ್ ಹಿಟ್ ಆಗುವ ಮೂಲಕ ಶ್ರೀಲೀಲಾ ಅವರ ಸ್ಟಾರ್‌ಡಮ್ ಅನ್ನು ರಾತ್ರೋರಾತ್ರಿ ಹೆಚ್ಚಿಸಿತು. ಇವರ ಅದ್ಭುತ ನೃತ್ಯ, ಸೌಂದರ್ಯ ಮತ್ತು ನಟನೆಗೆ ಫಿದಾ ಆದ ನಿರ್ಮಾಪಕರು ಸಾಲು ಸಾಲು ಆಫರ್‌ಗಳನ್ನು ನೀಡ ತೊಡಗಿದರು. ಇದರ ಬೆನ್ನಲ್ಲೇ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ ಕೇಸರಿ’ ಚಿತ್ರದಲ್ಲೂ ಒಂದು ಪ್ರಮುಖ ಪಾತ್ರ ಮಾಡಿ ಯಶಸ್ಸು ಪಡೆದರು.

ಆದರೆ, ಈ ಆರಂಭಿಕ ಯಶಸ್ಸು ಬಹಳ ದಿನಗಳ ಕಾಲ ಉಳಿಯಲಿಲ್ಲ. ಒಂದೆಡೆ ಸ್ಟಾರ್ ಹೀರೊಗಳು ಹಾಗೂ ಇನ್ನೊಂದೆಡೆ ಯುವ ನಟರ ಸಿನಿಮಾಗಳಲ್ಲಿ ಸತತವಾಗಿ ಬ್ಯುಸಿಯಾಗಿದ್ದ ಶ್ರೀಲೀಲಾಗೆ ಇತ್ತೀಚಿನ ದಿನಗಳಲ್ಲಿ ಅದೃಷ್ಟ ಕೈಕೊಟ್ಟಿದೆ. ಅವರು ನಟಿಸಿದ ಬ್ಯಾಕ್ ಟು ಬ್ಯಾಕ್ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸಾಲು ಸಾಲು ಸೋಲನ್ನು ಕಾಣುತ್ತಿವೆ. ಟಾಲಿವುಡ್‌ನಲ್ಲಿ ಹಿಟ್ ಕೊಡುವ ಪ್ರಯತ್ನದ ನಡುವೆಯೇ ತಮಿಳು ಚಿತ್ರರಂಗಕ್ಕೂ ಕಾಲಿಟ್ಟ ಇವರು, ಶಿವಕಾರ್ತಿಕೇಯನ್ ನಾಯಕರಾಗಿದ್ದ ‘ಪರಾಶಕ್ತಿ’ ಚಿತ್ರದ ಮೂಲಕ ಕಾಲಿವುಡ್ ಪ್ರವೇಶಿಸಿದರು. ಆದರೆ ಭಾರಿ ನಿರೀಕ್ಷೆ ಮೂಡಿಸಿದ್ದ ಆ ಚಿತ್ರವೂ ಸಹ ವಿಫಲವಾಯಿತು. ಇನ್ನು ಇತ್ತೀಚೆಗೆ ಪವರ್ ಸ್ಟಾರ್ ಪವನ್ ಕಲ್ಯಾಣ್ ಕಾಂಬಿನೇಷನ್‌ನಲ್ಲಿ ಮೂಡಿಬಂದ ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೇಲಂತೂ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಆದರೆ ದುರದೃಷ್ಟವಶಾತ್ ಈ ಸಿನಿಮಾ ಕೂಡ ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿತು.

ತೆಲುಗಿನಲ್ಲಿ ಇದುವರೆಗೆ ಸುಮಾರು ಹತ್ತು ಚಿತ್ರಗಳಲ್ಲಿ ನಟಿಸಿರುವ ಶ್ರೀಲೀಲಾಗೆ ಕೈಹಿಡಿದಿದ್ದು ಕೇವಲ ‘ಧಮಾಕಾ’ ಮತ್ತು ‘ಭಗವಂತ ಕೇಸರಿ’ ಚಿತ್ರಗಳು ಮಾತ್ರ. ಈ ಸತತ ಸೋಲುಗಳ ಪರಿಣಾಮವಾಗಿ ಈಗ ಶ್ರೀಲೀಲಾಗೆ ಚಿತ್ರರಂಗದಲ್ಲಿ ಹೊಸ ಅವಕಾಶಗಳು ಮತ್ತು ಆಫರ್‌ಗಳು ಗಣನೀಯವಾಗಿ ಕಡಿಮೆಯಾಗಿವೆ. ಸಾಲು ಸಾಲು ಫ್ಲಾಪ್‌ಗಳಿಂದ ಕಂಗೆಟ್ಟಿರುವ ಈ ನಟಿಗೆ ಚಿತ್ರರಂಗದಲ್ಲಿ ತನ್ನ ಸ್ಥಾನವನ್ನು ಗಟ್ಟಿಯಾಗಿ ಉಳಿಸಿಕೊಳ್ಳಲು ಸದ್ಯ ಒಂದು ದೊಡ್ಡ ಬ್ರೇಕ್ ಅಥವಾ ಬ್ಲಾಕ್‌ಬಸ್ಟರ್ ಯಶಸ್ಸಿನ ತುರ್ತು ಅಗತ್ಯವಿದೆ. ಸದ್ಯಕ್ಕೆ ಕೈಯಲ್ಲಿ ದೊಡ್ಡ ಸಿನಿಮಾಗಳಿಲ್ಲದ ಕಾರಣ ಅವರು ಸರಿಯಾದ ಕಥೆ ಮತ್ತು ಬ್ರೇಕ್‌ಗಾಗಿ ಕಾಯುತ್ತಿದ್ದಾರೆ.

ಇದನ್ನೂ ಓದಿ: ಪ್ರಕೃತಿ ಮಧ್ಯೆ ಕಳೆದು ಹೋದ ಕನ್ನಡದ ನಟಿ ಶ್ರೀಲೀಲಾ

ಸಿನಿಮಾಗಳಲ್ಲಿ ಅವಕಾಶಗಳು ತಗ್ಗಿದ್ದರೂ ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಶ್ರೀಲೀಲಾ ಅವರ ಕ್ರೇಜ್ ಕಮ್ಮಿಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಸಕ್ರಿಯರಾಗಿರುವ ಇವರು, ತಮ್ಮ ಹೊಸ ಹೊಸ ಗ್ಲಾಮರಸ್ ಫೋಟೋ ಶೂಟ್‌ಗಳು ಮತ್ತು ವೀಡಿಯೊಗಳನ್ನು ನಿಯಮಿತವಾಗಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಶ್ರೀಲೀಲಾ ಅವರ ಈ ಕ್ಯೂಟ್ ಲುಕ್ಸ್‌ಗೆ ಯುವ ವೀಕ್ಷಕರು ಫಿದಾ ಆಗುತ್ತಿದ್ದು, ಸಾಮಾಜಿಕ ಜಾಲತಾಣಗಳ ಮೂಲಕವೇ ಅವರು ಪ್ರೇಕ್ಷಕರಿಗೆ ಹತ್ತಿರವಾಗುಳಿಯುವ ಪ್ರಯತ್ನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಪೆದ್ದಿ’ ಚಿತ್ರದ  ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ನಿರ್ದೇಶಕ; ಹೊಸ ದೃಶ್ಯಗಳ ಸೇರ್ಪಡೆ  – Kannada News | Ram Charan’s Peddi Reigns Box Office: New Scenes Added to Smash Hit Film

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಇತ್ತೀಚಿನ ಸೂಪರ್ ಹಿಟ್ ಸಿನಿಮಾ ‘ಪೆದ್ದಿ’ (Peddi Movie) ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಜೂನ್ 4 ರಂದು ವಿಶ್ವಾದ್ಯಂತ ತೆರೆಕಂಡ ಈ ಚಿತ್ರವು ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಭರ್ಜರಿ ಪ್ರಶಂಸೆ ಪಡೆದುಕೊಂಡಿದೆ. ಸದ್ಯ ಭಾರಿ ಕಲೆಕ್ಷನ್ ಮಾಡುತ್ತಿರುವ ಈ ಸಿನಿಮಾ 2026ರಲ್ಲಿ ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ನಂಬರ್ ಒನ್ ಚಿತ್ರವಾಗಿ ಹೊರಹೊಮ್ಮಿದೆ. ಎಲ್ಲಾ ಕಡೆ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡ ಇತ್ತೀಚೆಗೆ ಸಕ್ಸಸ್ ಪ್ರೆಸ್‌ಮೀಟ್ ಆಯೋಜಿಸಿತ್ತು.

ಈ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಬುಚಿ ಬಾಬು ಸನಾ, ನಿರ್ಮಾಪಕ ಸತೀಶ್ ಕಿಲಾರು, ಗೀತರಚನೆಕಾರ ಅನಂತ್ ಶ್ರೀರಾಮ್ ಮತ್ತು ಮೈತ್ರಿ ಸಂಸ್ಥೆಯ ಶಶಿ ಅವರು ಭಾಗವಹಿಸಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಇದೇ ವೇಳೆ ಮಾತನಾಡಿದ ನಿರ್ದೇಶಕ ಬುಚಿ ಬಾಬು, ಸಿನಿಮಾ ನೋಡಿದ ಶೇಕಡಾ 95 ರಷ್ಟು ಪ್ರೇಕ್ಷಕರು ಚಿತ್ರದ ಕಥೆ ಹಾಗೂ ರಾಮ್ ಚರಣ್ ಅವರ ಅದ್ಭುತ ನಟನೆಯನ್ನು ಕೊಂಡಾಡಿದ್ದಾರೆ. ಚಿತ್ರತಂಡವಾಗಿ ನಾವು ಏನನ್ನು ನಂಬಿ ಸಿನಿಮಾ ಮಾಡಿದ್ದೆವೋ, ಅದನ್ನು ಪ್ರೇಕ್ಷಕರು ನಿಜವಾಗಿಸಿ ತೋರಿಸಿದ್ದಾರೆ. ನಾವು ಭೇಟಿ ನೀಡಿದ ಪ್ರತಿಯೊಂದು ಚಿತ್ರಮಂದಿರದಲ್ಲೂ ಜನರಿಂದ ನಮಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ ಎಂದು ಸಂತಸ ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಚಿತ್ರದ ಬಗ್ಗೆ ಪ್ರಮುಖ ಘೋಷಣೆ ಮಾಡಿದ ನಿರ್ದೇಶಕರು, ‘ಪೆದ್ದಿ’ ಸಿನಿಮಾಗೆ ಈಗ ಕೆಲವು ಹೊಸ ದೃಶ್ಯಗಳನ್ನು ಸೇರಿಸಲಾಗುತ್ತಿದೆ ಎಂದು ತಿಳಿಸಿದರು. ಈಗಾಗಲೇ ಈ ದೃಶ್ಯಗಳ ಎಡಿಟಿಂಗ್ ಕೆಲಸ ಮುಗಿದಿದ್ದು, ಬುಧವಾರದಿಂದ (ಜೂನ್ 17) ಚಿತ್ರಮಂದಿರಗಳಲ್ಲಿ ಇವು ಪ್ರದರ್ಶನಗೊಳ್ಳಲಿವೆ. ಸಿನಿಮಾದಲ್ಲಿ ಒಟ್ಟು ಮೂರು ಹೊಸ ದೃಶ್ಯಗಳನ್ನು ಹೆಚ್ಚುವರಿಯಾಗಿ ಸೇರಿಸಲಾಗುತ್ತಿದ್ದು, ಇದರಲ್ಲಿ ನಾಯಕಿಯ ಪಾತ್ರಕ್ಕೆ ಸಂಬಂಧಿಸಿದ ದೃಶ್ಯಗಳು ಮತ್ತು ನಟ ಜಗಪತಿ ಬಾಬು ಅವರ ಒಂದು ಮುಖ್ಯ ದೃಶ್ಯ ಒಳಗೊಂಡಿದೆ. ಈ ಹಿಂದೆ ಸಿನಿಮಾದಲ್ಲಿ ಮಿಸ್ ಆಗಿದ್ದ ಕೆಲವು ಮುಖ್ಯ ಅಂಶಗಳು ಈ ದೃಶ್ಯಗಳ ಮೂಲಕ ಪ್ರೇಕ್ಷಕರಿಗೆ ಸಿಗಲಿವೆ.

ಇದನ್ನೂ ಓದಿ: ‘ಪೆದ್ದಿ’ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು: ರಾಮ್ ಚರಣ್ ಸಿನಿಮಾ ವಿವಾದಕ್ಕೆ ಹೆದರಿದ್ರಾ ನಟಿ?

ಮುಖ್ಯವಾಗಿ ನಾಯಕಿ ಜಾನ್ವಿ ಕಪೂರ್ ಪಾತ್ರಕ್ಕೆ ಸಂಬಂಧಿಸಿದ ಇನ್ನೂ ಎರಡು ದೃಶ್ಯಗಳನ್ನು ಸೇರಿಸುತ್ತಿರುವುದರಿಂದ, ಪ್ರೇಕ್ಷಕರು ಆ ಪಾತ್ರಕ್ಕೆ ಮತ್ತಷ್ಟು ಕನೆಕ್ಟ್ ಆಗಲಿದ್ದಾರೆ ಮತ್ತು ಜಾನ್ವಿ ಪಾತ್ರದ ತೂಕ ಇನ್ನೊಂದು ಹಂತಕ್ಕೆ ತಲುಪಲಿದೆ ಎಂದು ಬುಚಿಬಾಬು ವಿಶ್ವಾಸ ವ್ಯಕ್ತಪಡಿಸಿದರು. ಕೊನೆಯಲ್ಲಿ ತಮ್ಮ ಜೀವನದ ಮರೆಯಲಾಗದ ಘಟನೆಯೊಂದನ್ನು ನೆನೆದ ಅವರು, ‘ಒಂದು ದಿನ ನಾನು ಕಾರಿನಲ್ಲಿ ಹೋಗುತ್ತಿದ್ದಾಗ ಆಟೋ ಚಾಲಕರೊಬ್ಬರು ತಮ್ಮ ತಾಯಿಯೊಂದಿಗೆ ಬಂದು ನನ್ನನ್ನು ಮಾತನಾಡಿಸಿದರು. ‘ಬಾಬು, ತುಂಬಾ ಅದ್ಭುತವಾದ ಸಿನಿಮಾ ಮಾಡಿದ್ದೀರಿ. ನಾನು 25 ವರ್ಷಗಳ ನಂತರ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿದೆ’ ಎಂದು ಪ್ರೀತಿಯಿಂದ ಹೇಳಿದರು. ಈ ಮಾತುಗಳು ನನ್ನ ಜೀವನದುದ್ದಕ್ಕೂ ನೆನಪಿನಲ್ಲಿ ಉಳಿಯುವಂತಹ ಅತ್ಯುತ್ತಮ ಪ್ರಶಂಸೆ’ ಎಂದು ಭಾವುಕರಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಿಕ್ಸ್ ಸಿಡಿಸಿಯೇ ಹೊಸ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ

Source link

ಕಂಗನಾ ರಣಾವತ್‌ಗೆ ಶಾಕ್: ‘ಭಾರತ ಭಾಗ್ಯ ವಿಧಾತಾ’ ಚಿತ್ರಕ್ಕೆ ಭಾರಿ ನಷ್ಟದ ಭೀತಿ – Kannada News | Kangana Ranaut’s ‘Bharat Bhagya Vidhata’ Faces Massive Box Office Loss

ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಭಾರತ್ ಭಾಗ್ಯ ವಿಧಾತಾ’ ಬಾಕ್ಸ್ ಆಫೀಸ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. ಜೂನ್ 12 ರಂದು ಬಿಡುಗಡೆಯಾದ ಈ ಸಿನಿಮಾ ಮೊದಲ ವೀಕೆಂಡ್‌ನಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ತತ್ತರಿಸಿ ಹೋಗಿದ್ದು, ಚಿತ್ರದ ನಿರ್ಮಾಪಕರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗುವ ಮುನ್ಸೂಚನೆ ಸಿಕ್ಕಿದೆ. ಯಾವುದೇ ದೊಡ್ಡ ಸಿನಿಮಾದ ಅಬ್ಬರ ಇಲ್ಲದಿದ್ದರೂ ಚಿತ್ರಕ್ಕೆ ಪ್ರೇಕ್ಷಕರು ಬರುತ್ತಿಲ್ಲ.

ಕೋಟಿ ಬಜೆಟ್; ಗಳಿಸಿದ್ದು ಕೇವಲ 4 ಕೋಟಿ!

ಮೂಲಗಳ ಪ್ರಕಾರ, ‘ಭಾರತ ಭಾಗ್ಯ ವಿಧಾತಾ’ ಚಿತ್ರವನ್ನು ಬರೋಬ್ಬರಿ 60 ಕೋಟಿ ರೂಪಾಯಿ ಭಾರಿ ಬಜೆಟ್‌ನಲ್ಲಿ ನಿರ್ಮಿಸಲಾಗಿದೆ. ಕಂಗನಾ ರಣಾವತ್ ಅವರ ಸ್ವಂತ ಬ್ಯಾನರ್ ‘ಮಣಿಕರ್ಣಿಕಾ ಫಿಲ್ಮ್ಸ್’ ಕೂಡ ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ಆದರೆ, ಬಿಡುಗಡೆಯಾದ ಮೊದಲ ಮೂರು ದಿನಗಳಲ್ಲಿ ಸಿನಿಮಾ ಗಳಿಸಿರುವುದು ಕೇವಲ 4.03 ಕೋಟಿ ರೂಪಾಯಿ ಮಾತ್ರ.

ಬಜೆಟ್‌ನ 10 ಹಣವನ್ನು ಕೂಡ ಸಿನಿಮಾ ಮರಳಿ ಪಡೆಯುವುದು ಅನುಮಾನ ಇದೆ.ಚಿತ್ರದ ಪ್ರದರ್ಶನ ಹೀಗೆಯೇ ಮುಂದುವರಿದರೆ, ನಿರ್ಮಾಣ ಸಂಸ್ಥೆಗೆ ಸುಮಾರು 45 ರಿಂದ 50 ಕೋಟಿ ರೂಪಾಯಿಗೂ ಅಧಿಕ ನಷ್ಟ ಉಂಟಾಗುವ ಸಾಧ್ಯತೆ ದಟ್ಟವಾಗಿದೆ.

ಸಾಮಾನ್ಯವಾಗಿ ವೀಕೆಂಡ್‌ನ ಕೊನೆಯ ದಿನವಾದ ಭಾನುವಾರ ಸಿನಿಮಾಗಳ ಗಳಿಕೆ ಹೆಚ್ಚಾಗುತ್ತದೆ. ಆದರೆ ಈ ಚಿತ್ರದ ವಿಷಯದಲ್ಲಿ ಉಲ್ಟಾ ಆಗಿದೆ. ಶನಿವಾರಕ್ಕೆ ಹೋಲಿಸಿದರೆ ಭಾನುವಾರ ಚಿತ್ರದ ಪ್ರದರ್ಶನಗಳ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಎರಡನೇ ದಿನ 1,956 ಶೋ ಪ್ರದರ್ಶನ ಕಂಡಿದ್ದವು. ಅದು ಭಾನುವಾರಕ್ಕೆ 794 ಶೋಗಳಿಗೆ ಬಂದು ನಿಂತಿದೆ. ಭಾನುವಾರ ಥಿಯೇಟರ್‌ಗಳಲ್ಲಿ ಕೇವಲ 14ರಷ್ಟು ಮಾತ್ರ ಸೀಟುಗಳು ಭರ್ತಿಯಾಗಿದ್ದವು.

‘ಒಂದಕ್ಕೆ ಒಂದು ಉಚಿತ’ ಆಫರ್ ಕೊಟ್ಟರೂ ಪ್ರಯೋಜನವಾಗಿಲ್ಲ

ಸಿನಿಮಾದ ಕಲೆಕ್ಷನ್ ಸುಧಾರಿಸಲು ಶನಿವಾರದ ಬಳಿಕ ಚಿತ್ರತಂಡ ದೇಶಾದ್ಯಂತ ಒಂದು ಟಿಕೆಟ್ ಖರೀದಿಸಿದರೆ ಮತ್ತೊಂದು ಉಚಿತ ಎಂಬ ಆಫರ್ ಘೋಷಿಸಿತ್ತು. ಆದರೆ ಈ ಬಿಗ್ ಆಫರ್ ಕೂಡ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುವಲ್ಲಿ ವಿಫಲವಾಗಿದೆ. ದೆಹಲಿ ಮತ್ತು ಹರಿಯಾಣ ಸರ್ಕಾರಗಳು ಈ ಚಿತ್ರಕ್ಕೆ ‘ತೆರಿಗೆ ಮುಕ್ತ’ ಸ್ಥಾನಮಾನ ನೀಡಿದ್ದರೂ ಸಹ, ಗಲ್ಲಾಪೆಟ್ಟಿಗೆಯಲ್ಲಿ ಯಾವುದೇ ಪವಾಡ ನಡೆದಿಲ್ಲ.

ಇದನ್ನೂ ಓದಿ: ‘ಪೆದ್ದಿ’ ವಿವಾದ; ನಿರ್ದೇಶಕನ ಬೆಂಬಲಕ್ಕೆ ನಿಂತ ಕಂಗನಾ ರಣಾವತ್ 

ಮುಂಬೈನ 26/11 ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಮುಂಬೈನ ‘ಕಾಮಾ ಆಸ್ಪತ್ರೆ’ಯ ವೈದ್ಯರು ಮತ್ತು ನರ್ಸ್‌ಗಳು ಗರ್ಭಿಣಿಯರು ಹಾಗೂ ನವಜಾತ ಶಿಶುಗಳನ್ನು ರಕ್ಷಿಸಲು ಪ್ರಾಣದ ಹಂಗು ತೊರೆದು ಹೋರಾಡಿದ ನೈಜ ಘಟನೆಯನ್ನು ಆಧರಿಸಿ ಈ ಚಿತ್ರವನ್ನು ಮಾಡಲಾಗಿದೆ. ವಿಷಯ ಗಂಭೀರವಾಗಿದ್ದರೂ, ಚಿತ್ರಕಥೆ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ವಿಫಲವಾಗಿರುವುದರಿಂದ ಕಂಗನಾ ರಣಾವತ್ ಖಾತೆಗೆ ಮತ್ತೊಂದು ದೊಡ್ಡ ಸೋಲು ಸೇರ್ಪಡೆಯಾದಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯಾರೋ ಬೆಂಕಿ ಬೆಂಕಿ ಎಂದು ಕೂಗಿದ್ದಕ್ಕೆ ಭಯಗೊಂಡು ರೈಲಿನಿಂದ ಹಾರಿದ ನಾಲ್ವರಿಗೆ ಮತ್ತೊಂದು ರೈಲು ಡಿಕ್ಕಿ, ಎಲ್ಲರೂ ಸಾವು – Kannada News | Morena Train Tragedy: 4 Dead After Fire Rumor Causes Panic Jump, Hits Another Train

ಮೊರೆನಾ, ಜೂನ್ 15: ರೈಲಿನಲ್ಲಿ ಯಾರೋ ಬೆಂಕಿ ಬೆಂಕಿ ಎಂದು ಕೂಗೊಕೊಂಡಿದ್ದಕ್ಕೆ ಭಯಗೊಂಡು ನಾಲ್ವರು ರೈಲಿನಿಂದ ಹಾರಿ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಮಧ್ಯ ಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ. ಮೊರೆನಾ ಜಿಲ್ಲೆಯ ಹೇತಾಂಪುರ ನಿಲ್ದಾಣದ ಬಳಿಯ ಉದಯಪುರ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಿಂದ ಗಾಬರಿಗೊಂಡ ಪ್ರಯಾಣಿಕರು ರೈಲಿ(Train)ನಿಂದ ಹಾರುವಾಗ ಪಕ್ಕದ ಹಳಿಯಲ್ಲಿ ಬರುತ್ತಿದ್ದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಎಲ್ಲಾ ನಾಲ್ವರು ಅಲ್ಲೇ ಉಸಿರು ಚೆಲ್ಲಿದ್ದಾರೆ.

ಜೂನ್ 14 ರಂದು ಸಂಜೆ 4.15 ರ ಸುಮಾರಿಗೆ ಈ ದುರಂತ ಸಂಭವಿಸಿತು, ಖಜುರಾಹೊ-ಉದಯಪುರ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂಬ ವದಂತಿಯು ಪ್ರಯಾಣಿಕರಲ್ಲಿ ವೇಗವಾಗಿ ಹರಡಿತ್ತು. ಹೇತಾಂಪುರ್-ಧೋಲ್ಪುರ್ ವಿಭಾಗದಲ್ಲಿ ಪ್ರಯಾಣಿಕರೊಬ್ಬರು ಸಾಮಾನ್ಯ ಬೋಗಿಯಲ್ಲಿ ಅಲಾರಾಂ ಸರಪಳಿಯನ್ನು ಎಳೆದ ನಂತರ ರೈಲು ನಿಂತಿತ್ತು.

ನಂತರದ ಭಯದಲ್ಲಿ, ಹಲವಾರು ಪ್ರಯಾಣಿಕರು ರೈಲಿನಿಂದ ಹಾರಿ ಪಕ್ಕದ ರೈಲ್ವೆ ಹಳಿಯ ಮೇಲೆ ಹೆಜ್ಜೆ ಹಾಕಿದರು. ಆ ಕ್ಷಣದಲ್ಲಿ, ಫಿರೋಜ್‌ಪುರ-ಸಿಯೋನಿ ಪಾತಾಳಕೋಟ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 20424) ವಿರುದ್ಧ ದಿಕ್ಕಿನಿಂದ ಬಂದಿದ್ದರಿಂದ ಮಾರಣಾಂತಿಕ ಅಪಘಾತ ಸಂಭವಿಸಿತು.

ಮತ್ತಷ್ಟು ಓದಿ: ಬ್ಯಾಂಕಾಕ್‌: ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ, ಬೆಚ್ಚಿಬೀಳಿಸುವ ಸಿಸಿಟಿವಿ ದೃಶ್ಯ ವೈರಲ್!

ಮೃತರನ್ನು ಅಫ್ರೀನ್ (35), ಅವರ ನಾಲ್ಕು ವರ್ಷದ ಮಗ ಅಸದ್, ಶಕುಂತಲಾ (60) ಮತ್ತು ವೀರ್ಮ ದೇವಿ (58) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಮತ್ತು ಪೊಲೀಸ್ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಆರಂಭಿಸಿದರು.

ಯಾರೋ ಬೆಂಕಿ ಬೆಂಕಿ ಎಂದು ಕೂಗಿದ್ದಕ್ಕೆ ಇನ್ಯಾರೂ ರೈಲಿನ ಚೈನ್ ಎಳೆದಿದ್ದಾರೆ, ರೈಲು ನಿಲ್ಲುವ ಸಮಯದಲ್ಲಿ ಕೆಲವು ಪ್ರಯಾಣಿಕರು ಕೆಳಗಿಳಿದು ಅಜಾಗರೂಕತೆಯಿಂದ ಇಳಿದು ಹಳಿಯ ಮೇಲೆ ಓಡಲು ಶುರು ಮಾಡಿದ್ದಾರೆ. ಆಗ ಎದುರಿನಿಂದ ಬರುತ್ತಿದ್ದ ರೈಲು ಅವರಿಗೆ ಡಿಕ್ಕಿ ಹೊಡೆದಿದೆ.

ವಿಡಿಯೋ

ಬೆಂಕಿಯ ವದಂತಿ ಹೇಗೆ ಹುಟ್ಟಿಕೊಂಡಿತು ಮತ್ತು ಪ್ರಯಾಣಿಕರು ಪಕ್ಕದ ಹಳಿಯ ಮೇಲೆ ಚಲಿಸಲು ಏನು ಕಾರಣ ಎಂಬುದು ಸೇರಿದಂತೆ ಘಟನೆಗಳ ಬಗ್ಗೆ ರೈಲ್ವೆ ಅಧಿಕಾರಿಗಳು ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ತನಿಖೆಯ ಮೇಲ್ವಿಚಾರಣೆ ನಡೆಸಲು ಮತ್ತು ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡಲು ಝಾನ್ಸಿ ವಿಭಾಗದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Karnataka Weather Forecast: ರಾಜ್ಯದಲ್ಲಿ 2-3 ದಿನ ಮಳೆ ಅಬ್ಬರ; ಎಲ್ಲೆಲ್ಲಿ ವರುಣಾರ್ಭಟ? – Kannada News | Karnataka Weather Update: IMD Predicts Heavy Rainfall Across the State for Next 2 3 Days

ಬೆಂಗಳೂರು, ಜೂನ್​​ 15: ಮುಂಗಾರು ಮಳೆ ದೇಶದ ಹಲವು ಭಾಗಗಳಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಿದ್ದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಸೇರಿ ರಾಜ್ಯಾದ್ಯಂತ ಗುಡುಗು ಹಾಗೂ ಮಿಂಚು ಸಹಿತ ಮಳೆಯನ್ನು ಅಂದಾಜಿಸಲಾಗಿದ್ದು, ಬೆಂಗಳೂರಲ್ಲಿಯೂ ವರುಣನ ಅಬ್ಬರವಿರಲಿದೆ.

ಮುಖ್ಯಾಂಶಗಳು

  • ರಾಜ್ಯದಲ್ಲಿ ಮುಂದಿನ 2-3 ದಿನಗಳು ವರುಣನ ಅಬ್ಬರ
  • ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆ
  • ಬೆಂಗಳೂರಲ್ಲಿಯೂ ಭಾರಿ ಮಳೆಯಾಗುವ ಎಚ್ಚರಿಕೆ

ಇಂದು ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಇರಲಿದೆ. ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ವರುಣಾರ್ಭಟ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ

ಹೇಗಿರಲಿದೆ ಬೆಂಗಳೂರಿನ ವಾತಾವರಣ?

ರಾಜಧಾನಿ ಬೆಂಗಳೂರಿನಲ್ಲಿ ಹಲವೆಡೆ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣ ಇದ್ದು ಮಳೆಯನ್ನು ಅಂದಾಜಿಸಲಾಗಿದೆ. ನಗರದ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್​​ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್​​ ತಲುಪಲಿದೆ. ಗಾಳಿಯ ವೇಗ ಗಂಟೆಗೆ ಸುಮಾರು 20 ಕಿಲೋ ಮೀಟರ್​​ನಷ್ಟು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಾಗಲಕೋಟೆ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ – Kannada News | Bagalkot Rain Fury: Heavy Rains Flood Gotay Vegetable Market in Jamkhandi; Trees Uprooted on Vijayapura

ಬಾಗಲಕೋಟೆ, ಜೂನ್ 15: ಬಾಗಲಕೋಟೆ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಜಮಖಂಡಿ ತಾಲೂಕಿನ ಹಲವೆಡೆ ಭಾರಿ ಮಳೆಯಿಂದಾಗಿ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ಜಮಖಂಡಿ ತಾಲೂಕಿನ ಗೋಟೆ ಗ್ರಾಮದ ಸಾಪ್ತಾಹಿಕ ಸಂತೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ತರಕಾರಿ ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡಿತು. ಮಾರುಕಟ್ಟೆಯ ಮೈದಾನದಲ್ಲೆಲ್ಲಾ ಮಂಡಿಯುದ್ದ ನೀರು ನಿಂತಿದ್ದರಿಂದ ತರಕಾರಿ ಬುಟ್ಟಿಗಳು ಹಾಗೂ ಕ್ರೇಟ್‌ಗಳು ನೀರಿನಲ್ಲಿ ಮುಳುಗಡೆಯಾದವು. ಹಠಾತ್ ಮಳೆಯಿಂದ ಕಂಗಾಲಾದ ವ್ಯಾಪಾರಿಗಳು ತಮಗಾಗುವ ಭಾರಿ ನಷ್ಟವನ್ನು ತಪ್ಪಿಸಲು ಟೊಮೆಟೊ, ಹಸಿರು ಸೊಪ್ಪು ಹಾಗೂ ಇತರೆ ತರಕಾರಿಗಳನ್ನು ನೀರಿನಿಂದ ರಕ್ಷಿಸಲು ಹರಸಾಹಸ ಪಟ್ಟರು. ಅದರಲ್ಲೂ ವಿಶೇಷವಾಗಿ ಮಹಿಳಾ ವ್ಯಾಪಾರಿಗಳು ಮಳೆಯಲ್ಲೇ ನೆನೆಯುತ್ತಾ ತರಕಾರಿ ಬುಟ್ಟಿಗಳನ್ನು ಎತ್ತರದ ಸ್ಥಳಗಳಿಗೆ ಸಾಗಿಸುತ್ತಿದ್ದ ದೃಶ್ಯಗಳು ಕಂಡುಬಂದವು. ಹಳದಿ ಟಾರ್ಪಲ್‌ಗಳನ್ನು ಮುಚ್ಚಿ ತರಕಾರಿಗಳನ್ನು ರಕ್ಷಿಸಲು ವ್ಯಾಪಾರಿಗಳು ಯತ್ನಿಸಿದರಾದರೂ, ಬಹುತೇಕ ತರಕಾರಿಗಳು ಕೊಳೆತು ಹೋಗುವ ಸ್ಥಿತಿ ತಲುಪಿರುವುದರಿಂದ ಸಣ್ಣ ವ್ಯಾಪಾರಿಗಳು ಕಣ್ಣೀರು ಹಾಕುವಂತಾಗಿದೆ.

ಇದೇ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಬಳಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಬೃಹತ್ ಮರಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿವೆ. ಜಮಖಂಡಿ-ವಿಜಯಪುರ ಮುಖ್ಯ ರಸ್ತೆಯಲ್ಲೇ ಈ ಘಟನೆ ಸಂಭವಿಸಿದ್ದರಿಂದ ರಸ್ತೆಯ ಎರಡೂ ಬದಿಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು, ಸಾರ್ವಜನಿಕರು ಹಾಗೂ ಪ್ರಯಾಣಿಕರು ತೀವ್ರ ಪರದಾಡುವಂತಾಯಿತು. ಸದ್ಯ ಜಮಖಂಡಿ-ವಿಜಯಪುರ ರಸ್ತೆಯಲ್ಲಿ ವಾಹನ ಸಂಚಾರ ಯಥಾಸ್ಥಿತಿಗೆ ಮರಳಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಹಾರಾಷ್ಟ್ರ: ಸೋಲಾಪುರದಲ್ಲಿ ಯಾತ್ರಿಕರಿದ್ದ ವ್ಯಾನ್ ಬಾವಿಗೆ ಉರುಳಿ 8 ಮಂದಿ ಸಾವು, 7 ಮಂದಿಗೆ ಗಾಯ, ಪ್ರಧಾನಿ ನೆರವು – Kannada News | Solapur Van Accident: 8 Dead, 7 Injured as Pilgrim Vehicle Falls into Well; PM Announces Aid

ಸೋಲಾಪುರ, ಜೂನ್ 15: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಭಾನುವಾರ( ಜೂ.14) ಸಂಜೆ ಅಪಘಾತ(Accident)ವೊಂದು ಸಂಭವಿಸಿದೆ. ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವ್ಯಾನ್ ರಸ್ತೆ ಬದಿಯಿದ್ದ ಬಾವಿಗೆ ಉರುಳಿಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ಮಕ್ಕಳು ಸೇರಿ 8 ಮಂದಿ ಪ್ರಾಣಬಿಟ್ಟಿದ್ದಾರೆ. ಅಪಘಾತದಲ್ಲಿ ಇತರೆ 7 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತಪಟ್ಟವರು ಪಂಢರಪುರ ಪ್ರದೇಶದ ರಂಜನಿ ಗ್ರಾಮದ ನಿವಾಸಿಗಳಾಗಿದ್ದು, ದುರಂತ ಸಂಭವಿಸಿದಾಗ ತೀರ್ಥಯಾತ್ರೆಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

ಸೋಲಾಪುರ ಅಪಘಾತ ಸಂಭವಿಸಿದ್ಹೇಗೆ?
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಹಸಿಲ್​ನ ತಂಡುಲ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವ್ಯಾನ್ ಇದ್ದಕ್ಕಿದ್ದಂತೆ ರಸ್ತೆಯಿಂದ ಹೊರಟು ರಸ್ತೆ ಬದಿಯ ಬಾವಿಗೆ ಉರುಳಿ ಬಿದ್ದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ ಎಂದು ಸೋಲಾಪುರ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಕುಲಕರ್ಣಿ ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ರಕ್ಷಣಾ ತಂಡಗಳು ಸ್ಥಳಕ್ಕೆ ನಿನ್ನೆಯೇ ಧಾವಿಸಿತ್ತು.

ವಾಹನ ಬಾವಿಗೆ ಬಿದ್ದ ಕೂಡಲೇ ಸ್ಥಳೀಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ತುರ್ತು ಪ್ರತಿಕ್ರಿಯೆ ನೀಡುವವರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಗಾಯಾಳುಗಳನ್ನು ಹೊರತೆಗೆದು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು.

ಮತ್ತಷ್ಟು ಓದಿ: ದುಬೈ ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದ ಅನಿವಾಸಿ ಭಾರತೀಯ ಉದ್ಯಮಿ: 2.6 ಕೋಟಿ ರೂ. ನೆರವು ಘೋಷಿಸಿದ ಡಾ. ಶಂಶೀರ್ ವಯಾಲಿಲ್

ಗಾಯಾಳುಗಳ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ಆಸ್ಪತ್ರೆ ಅಧಿಕಾರಿಗಳಿಂದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಪಿಕಪ್ ವ್ಯಾನ್‌ನಲ್ಲಿದ್ದ 15 ಮಂದಿಯೂ ರಂಜನಿ ಗ್ರಾಮಕ್ಕೆ ಸೇರಿದವರಾಗಿದ್ದು, ಧಾರ್ಮಿಕ ಪ್ರಯಾಣದ ಭಾಗವಾಗಿ ಒಟ್ಟಿಗೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತವು ಸ್ಥಳೀಯ ಸಮುದಾಯದಲ್ಲಿ ಆಘಾತದ ಅಲೆಗಳನ್ನು ಉಂಟುಮಾಡಿದ್ದು, ತಮ್ಮ ಪ್ರೀತಿಪಾತ್ರರನ್ನು ಹಠಾತ್ ಕಳೆದುಕೊಂಡ ಕುಟುಂಬಗಳು ಶೋಕದಲ್ಲಿ ಮುಳುಗಿವೆ.

ಮಹಾರಾಷ್ಟ್ರದ ಸೋಲಾಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ವಿಡಿಯೋ

ಮಹಾರಾಷ್ಟ್ರದ ಸೋಲಾಪುರ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ನಾವಿದ್ದೇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version