ಮೋಹನ್​​ಲಾಲ್​ ಚಿತ್ರಕ್ಕೆ ಶಾಕ್; ಕೇವಲ 3.5 ಲಕ್ಷ ಗಳಿಸಿದ ಸಿನಿಮಾ – Kannada News | Mohanlal’s Drishyam 2 Flop: Why its Kerala Theater Re release Earned Just three and half Lakh

ಮೋಹನ್​ಲಾಲ್ (Mohanlal) ಅವರು ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಸಿನಿಮಾಗಳು ಕೋಟಿ ಕೋಟಿ ಬಾಚಿಕೊಳ್ಳುತ್ತವೆ. ಆದರೆ, ಈಗ ಕೇರಳದಲ್ಲಿ ರಿಲೀಸ್ ಆಗಿರುವ ಸಿನಿಮಾ ಒಂದು ಕೇವಲ 3.5 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಇದು ಇಡೀ ಚಿತ್ರತಂಡಕ್ಕೆ ಶಾಕಿಂಗ್ ಎನಿಸಿದೆ. ಸಿನಿಮಾದ ಸ್ಥಿತಿ ಈ ಮಟ್ಟ ತಲುಪಲು ಒಂದು ಪ್ರಮುಖ ಕಾರಣ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಈ ರೀತಿ ಹೀನಾಯ ಕಲೆಕ್ಷನ್ ಮಾಡಿದ ಚಿತ್ರ ‘ದೃಶ್ಯಂ 2’. ಜೀತು ಜೊಸೆಫ್ ನಿರ್ದೇಶನದ ಈ ಚಿತ್ರ ಕೊವಿಡ್ ಸಮಯದಲ್ಲಿ ಒಟಿಟಿಯಲ್ಲಿ ನೇರವಾಗಿ ತೆರೆಗೆ ಬಂತು. ಈಗ ಈ ಸರಣಿಯ 3ನೇ ಪಾರ್ಟ್ ಮೇ 21ರಂದು​ ತೆರೆಗೆ ಬರುತ್ತಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಅದಕ್ಕೂ ಮೊದಲು ‘ದೃಶ್ಯಂ 2’ ಚಿತ್ರವನ್ನು ಥಿಯೇಟರ್​​​ನಲ್ಲಿ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇತ್ತು. ಅದನ್ನು ಅನುಷ್ಠಾನಕ್ಕೂ ತರಲಾಯಿತು.

ಆದರೆ, ‘ದೃಶ್ಯಂ 2’ ಚಿತ್ರ ಗಳಿಕೆ ಮಾಡಿದ್ದು ಕೇವಲ 3.5 ಲಕ್ಷ ರೂಪಾಯಿ ಮಾತ್ರ. ಇದು ತಂಡಕ್ಕೆ ಹೊರೆಯಾಗಿದೆ. ಕೇರಳದಲ್ಲಿ ಚುನಾವಣೆ ಕಾವು ಜೋರಾಗಿತ್ತು. ಅಲ್ಲದೆ, ಸಿನಿಮಾ ಈಗಾಗಲೇ ಒಟಿಟಿಯಲ್ಲಿ ಲಭ್ಯವಿದ್ದು, ಅನೇಕರು ಇದನ್ನು ವೀಕ್ಷಿಸಿದ್ದಾರೆ. ಈ ಎಲ್ಲಾ ಕಾರಣದಿಂದ ಜನರು ಸಿನಿಮಾನ ಥಿಯೇಟರ್​​ನಲ್ಲಿ ನೋಡಿಲ್ಲ.‘ದೃಶ್ಯಂ 3’ ಚಿತ್ರದ ಬಗ್ಗೆ ಸದ್ಯ ನಿರೀಕ್ಷೆ ಇದೆ. ಈ ಚಿತ್ರ ಒಟಿಟಿಯಲ್ಲಿ ರಿಲೀಸ್ ಆಗಿ ಗೆಲ್ಲುವ ನಿರೀಕ್ಷೆ ಇದೆ.

‘ದೃಶ್ಯಂ’ ಹಾಗೂ ‘ದೃಶ್ಯಂ 2’ ಚಿತ್ರಗಳು ಪ್ರತಿ ಹಂತದಲ್ಲೂ ಟ್ವಿಸ್ಟ್​ಗಳು ಇದ್ದವು. ಎರಡನೇ ಪಾರ್ಟ್ ಕೊನೆಯಲ್ಲಿ ಮೂರನೇ ಪಾರ್ಟ್​ಗೆ ಕನೆಕ್ಷನ್ ನೀಡಲಾಗಿತ್ತು. ಈ ಸಿನಿಮಾದಲ್ಲೂ ಥ್ರಿಲ್ಲರ್ ಇರಲಿದೆ ಎಂದು ಅನೇಕರು ಊಹಿಸಿದ್ದರು. ಆದರೆ, ಇದು ಥ್ರಿಲ್ಲರ್ ಸಿನಿಮಾ ಅಲ್ಲ ಎಂದು ನಿರ್ದೇಶಕರು ಹೇಳಿದ್ದರು.

ಇದನ್ನೂ ಓದಿ: ‘ದೃಶ್ಯಂ 3’ ನಿರ್ಮಾಪಕರೊಟ್ಟಿಗೆ ವಿವಾದ: ಬಹಿರಂಗ ಎಚ್ಚರಿಕೆ ನೀಡಿದ ಅಮೆಜಾನ್ ಪ್ರೈಂ

‘ನಾನು ಇದನ್ನು ಹಣಕ್ಕಾಗಿ ಮಾಡುತ್ತಿಲ್ಲ ಎಂಬುದನ್ನು ನಿರ್ಮಾಪಕರಿಗೂ ಹೇಳಿದ್ದೇನೆ. ಇದು ಥ್ರಿಲ್ಲರ್ ಸಿನಿಮಾ ಅಲ್ಲ. ಜಾರ್ಜ್​ ಕುಟ್ಟಿ ಮತ್ತು ಕುಟುಂಬದವರಿಗೆ ಏನಾಯಿತು ಎಂಬುದಷ್ಟೇ ಚಿತ್ರದಲ್ಲಿ ಇರಲಿದೆ. ಇದನ್ನು ನಾನು ನಿರ್ಮಾಪಕರಿಗೆ ಮನದಟ್ಟು ಮಾಡಿಕೊಟ್ಟಿದ್ದೇನೆ. ಇದರಲ್ಲಿ ರಿಸ್ಕ್ ಇದೆ’ ಎಂದು ಅವರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆ ಸೌಜನ್ಯದ ನಗು: ಸಂಸತ್ತಿನ ಅಂಗಳದಲ್ಲಿ ಮೋದಿ-ಖರ್ಗೆ ಹಸ್ತಲಾಘವ – Kannada News | Politics Pauses: Modi Kharge Camaraderie Steals Spotlight at Ambedkar Anniversary

ನವದೆಹಲಿ, ಏಪ್ರಿಲ್ 14: ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಸಣ್ಣ ಮಾತುಕತೆ ನಡೆಸಿದರು. ಭಾರತದ ರಾಜಕೀಯ ಅಖಾಡದಲ್ಲಿ ಪರಸ್ಪರ ವಾಗ್ದಾಳಿಗಳು ಸಾಮಾನ್ಯ. ಆದರೆ, ಕಳೆದ ಎರಡು ದಿನಗಳಲ್ಲಿ ಸಂಸತ್ತಿನ ಆವರಣದಲ್ಲಿ ಕಂಡುಬಂದ ದೃಶ್ಯಗಳು ಮಾತ್ರ ವಿಭಿನ್ನವಾಗಿದ್ದವು. ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕರ ನಡುವಿನ ಸೌಜನ್ಯದ ನಗು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ.

ಎರಡು ದಿನಗಳ ಹಿಂದೆ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಮುಖಾಮುಖಿಯಾಗಿದ್ದರು. ಹತ್ತಿರದಲ್ಲೇ ಹಲವು ಸಚಿವರಿದ್ದರೂ, ಪ್ರಧಾನಿಯವರು ರಾಹುಲ್ ಮುಂದೆ ಸ್ವಲ್ಪ ಹೊತ್ತು ನಿಂತು ಸುದೀರ್ಘವಾಗಿ ಮಾತನಾಡಿದ್ದು ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು.

ಇಂದು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಪ್ರಯುಕ್ತ ಸಂಸತ್ತಿನ ‘ಪ್ರೇರಣಾ ಸ್ಥಳ’ದಲ್ಲಿ ಗಣ್ಯರು ಜಮಾಯಿಸಿದ್ದರು. ಪ್ರಧಾನಿ ಮೋದಿ ಕೆಲವು ನಿಮಿಷಗಳ ಕಾಲ ಖರ್ಗೆ ಅವರೊಂದಿಗೆ ಮಾತುಕತೆ ನಡೆಸಿದರು, ರಾಜಕೀಯವಾಗಿ ಟೀಕಿಸುವ ಪ್ರಧಾನಿಯವರ ಆಪ್ತ ಮಾತುಗಳು ಅಲ್ಲಿ ಆಹ್ಲಾದಕರ ವಾತಾವರಣ ಸೃಷ್ಟಿಸಿತ್ತು. ರಾಜಕೀಯ ಸಿದ್ಧಾಂತಗಳು ಏನೇ ಇರಲಿ, ಸಂಸತ್ತಿನ ಅಂಗಳದಲ್ಲಿ ಈ ದೇಶದ ನಾಯಕರು ತೋರಿದ ಈ ಸಭ್ಯತೆ ಮತ್ತು ಸೌಜನ್ಯ ಭಾರತೀಯ ಪ್ರಜಾಪ್ರಭುತ್ವದ ಅಸಲಿ ಶಕ್ತಿಯನ್ನು ಎತ್ತಿ ತೋರಿಸುವಂತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ – Kannada News | Siddaramaiahs Aide Nazir Ahmed Dismissed; Minister Zameer Ahmed Clarifies Bagalkote Duty

ಬೆಂಗಳೂರು, ಏ.14: ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ನಡುವೆ ಉಂಟಾಗಿದ್ದ ಅಸಮಾಧನಕ್ಕೆ ಇದೀಗ ಮತ್ತೊಂದು ತಲೆದಂಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ದಾವಣಗೆರೆ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪ ನಸೀರ್ ಅಹಮದ್ ಅವರ ಮೇಲಿದೆ. ಈ ಕಾರಣದಿಂದಾಗಿ ಅವರನ್ನು ಮುಖ್ಯಮಂತ್ರಿಗಳ ಆಪ್ತ ರಾಜಕೀಯ ಕಾರ್ಯದರ್ಶಿಯ ಹುದ್ದೆಯಿಂದ ತೆಗೆದುಹಾಕಲಾಗಿದೆ. ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಸಚಿವ ಜಮೀರ್ ಅಹಮದ್, ನಸೀರ್ ಅಹಮದ್ ಅವರು ಬಾಗಲಕೋಟೆ ಚುನಾವಣಾ ಜವಾಬ್ದಾರಿಯನ್ನು ಹೊತ್ತಿದ್ದರು ಎಂದು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳೇ ಅವರಿಗೆ ಬಾಗಲಕೋಟೆಯಲ್ಲಿ ಇರಲು ಸೂಚಿಸಿದ್ದರು. ದಾವಣಗೆರೆಗೆ ಬಂದು ಹೋಗುವ ಕುರಿತು ನಸೀರ್ ಅಹಮದ್ ಕೇಳಿಕೊಂಡಾಗ, ಬಾಗಲಕೋಟೆಯಲ್ಲಿಯೇ ಉಳಿದು ಕೆಲಸ ಮಾಡಲು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಮುಖ್ಯಮಂತ್ರಿಗಳ ಸೂಚನೆಯಂತೆ ನಸೀರ್ ಅಹಮದ್ ಬಾಗಲಕೋಟೆಯಲ್ಲಿ 10 ದಿನಗಳ ಕಾಲ ಕಾರ್ಯ ನಿರ್ವಹಿಸಿದ್ದರು ಎಂದು ಜಮೀರ್ ಅಹಮದ್ ಹೇಳಿದ್ದಾರೆ. ಇನ್ನು ಒಂದು ವಾರಗಳ ಹಿಂದೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜನೆ ಮಾಡಿ ಹೊಸದಾಗಿ ಮರು ನಿರ್ಮಾಣ ಮಾಡುವುದಾಗಿ ಹೇಳಿದರು. ಇದೀಗ ಈ ರಾಜಕೀಯ ಬಿಕ್ಕಟ್ಟಿನ ಮುಂದುವರಿದ ಭಾಗವಾಗಿ ಮುಖ್ಯಮಂತ್ರಿಗಳ ಆಪ್ತ ರಾಜಕೀಯ ಕಾರ್ಯದರ್ಶಿಯ ತಲೆದಂಡವಾಗಿದೆ. ಇದೀಗ ಇದರ ಪರಿಣಾಮ ಸಚಿವ ಜಮೀರ್​​​​ ಮೇಲೆಯೂ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ವಿಡಿಯೋ ಸುದಗ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಬ್ಬಾರ್, ನಸೀರ್ ಅಹ್ಮದ್​ ರಾಜೀನಾಮೆಗೆ ಹೈಕಮಾಂಡ್ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್! – Kannada News | Minority Leaders Resign: Zameer Ahmed Reveals Reasons Behind Jabbar and Naseer Ahmed’s Exit from Key Posts

ಬೆಂಗಳೂರು, ಏಪ್ರಿಲ್ 14: ಉಪಚುನಾವಣೆ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಲ್ಪಸಂಖ್ಯಾತರ ಅಸಮಾಧಾನ ಭುಗಿಲೆದ್ದಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡವಾಗಿದೆ. ಇದೀಗ ಈ ಬೆಳವಣಿಗೆಗಳಿಗೆ ಕಾರಣ ಏನೆಂಬುದನ್ನು ಸಚಿವ ಜಮೀರ್ ಅಹ್ಮದ್ ಬಹಿರಂಗಪಡಿಸಿದ್ದಾರೆ. ಜಬ್ಬಾರ್ ವಿಚಾರವಾಗಿ ಮಾತನಾಡಿದ ಜಮೀರ್ ಅಹ್ಮದ್, ಹೈಕಮಾಂಡ್‌ನಿಂದ ವೈಯಕ್ತಿಕ ಸಂಪರ್ಕದ ಕೊರತೆಯಿಂದ ಅವರು ಮನನೊಂದು ಮನೆಯಲ್ಲೇ ಉಳಿದಿದ್ದರು. ಅಲ್ಲದೆ, ಅನಾರೋಗ್ಯವೂ ಇದಕ್ಕೆ ಕಾರಣ ಎಂದು ತಿಳಿಸಿದ್ದಾರೆ. ಪಕ್ಷದ ಅಭ್ಯರ್ಥಿಯ ಗೆಲುವು ಮುಖ್ಯ ಎಂದು ಜಬ್ಬಾರ್‌ಗೆ ಮನವಿ ಮಾಡಿದ್ದರೂ, ಪಕ್ಕದ ಮನೆಗೇ ಬಂದು ತಮ್ಮ ಮನೆಗೆ ಹೈಕಮಾಂಡ್ ನಾಯಕರು ಭೇಟಿ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ಜಮೀರ್ ತಿಳಿಸಿದ್ದಾರೆ.

ಇನ್ನು ನಸೀರ್ ಅಹ್ಮದ್ ಅವರ ವಿಷಯದಲ್ಲಿ ಮಾತನಾಡಿ, ಮಾನ್ಯ ಮುಖ್ಯಮಂತ್ರಿಗಳು ಬಾಗಲಕೋಟೆ ಉಪಚುನಾವಣೆಯ ಜವಾಬ್ದಾರಿಯನ್ನು ಅವರಿಗೆ ವಹಿಸಿದ್ದರು. ನಸೀರ್ ಅಹ್ಮದ್ ಹತ್ತು ದಿನಗಳ ಕಾಲ ಬಾಗಲಕೋಟೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ದಾವಣಗೆರೆಗೆ ಬಂದು ಹೋಗಲು ಅನುಮತಿ ಕೇಳಿದಾಗ, ಅಲ್ಲಿಯೇ ಉಳಿದು ಕೆಲಸ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದ್ದರು ಎಂದು ಜಮೀರ್ ಅಹ್ಮದ್ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಸ್ಥಳೀಯ ಮುಸ್ಲಿಮರಲ್ಲಿ ಅಸಮಾಧಾನವಿದ್ದರೂ, ಈಗ ಪರಿಸ್ಥಿತಿ ಸುಧಾರಿಸಿದ್ದು, ಗೆಲುವು ನಿಶ್ಚಿತ ಎಂದು ಜಮೀರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Vishu Festival: ಕರಾವಳಿಯ ಸೌರ ಯುಗಾದಿಯ ಮಹತ್ವ ಮತ್ತು ಆಚರಣೆಯ ವೈಶಿಷ್ಟ್ಯಗಳು – Kannada News | Vishu Festival: Karnataka and Kerala’s New Year Celebrations, Traditions and Significance

ಭಾರತೀಯ ಸಂಸ್ಕೃತಿಯಲ್ಲಿ ಹೊಸ ವರ್ಷದ ಆರಂಭವನ್ನು ವಿವಿಧ ಹೆಸರುಗಳಿಂದ ಆಚರಿಸಲಾಗುತ್ತದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಹಾಗೂ ಕೇರಳದಲ್ಲಿ ಅತ್ಯಂತ ಸಡಗರದಿಂದ ಆಚರಿಸಲಾಗುವ ಹಬ್ಬವೇ ‘ವಿಷು’. ಸೂರ್ಯನು ಮೀನ ರಾಶಿಯಿಂದ ಮೇಷ ರಾಶಿಗೆ ಪ್ರವೇಶಿಸುವ ಸುಸಂದರ್ಭವನ್ನು ಈ ಹಬ್ಬವು ಸೂಚಿಸುತ್ತದೆ. ಸಂಸ್ಕೃತದಲ್ಲಿ ‘ವಿಷು’ ಎಂದರೆ ‘ಸಮಾನ’ ಎಂದರ್ಥ. ಈ ದಿನದಂದು ಹಗಲು ಮತ್ತು ರಾತ್ರಿಯ ಅವಧಿ ಸಮಾನವಾಗಿರುತ್ತದೆ ಎಂಬ ಭೌಗೋಳಿಕ ಹಿನ್ನೆಲೆ ಈ ಹೆಸರಿಗಿದೆ. ಇದನ್ನು ಕರಾವಳಿಯ ಜನರು ‘ಬಿಶು’ ಎಂದೂ ಕರೆಯುತ್ತಾರೆ.

ಹಬ್ಬದ ಪ್ರಮುಖ ಆಕರ್ಷಣೆ ‘ವಿಷು ಕಣಿ’ :

ವಿಷು ಹಬ್ಬದ ಅತ್ಯಂತ ಪವಿತ್ರವಾದ ಸಂಪ್ರದಾಯವೆಂದರೆ ‘ವಿಷು ಕಣಿ’ ನೋಡುವುದು. ಹಬ್ಬದ ದಿನ ಬೆಳಿಗ್ಗೆ ಕಣ್ಣು ಬಿಟ್ಟ ತಕ್ಷಣ ಕಾಣುವ ಮೊದಲ ದೃಶ್ಯ ಮಂಗಳಕರವಾಗಿರಬೇಕು ಎಂಬುದು ಇದರ ಹಿಂದಿನ ಆಶಯ. ದೇವರ ಮನೆಯಲ್ಲಿ ಅಕ್ಕಿ, ತೆಂಗಿನಕಾಯಿ, ಸೌತೆಕಾಯಿ, ಹಣ್ಣು-ಹಂಪಲು, ಚಿನ್ನ, ಬೆಳ್ಳಿ ನಾಣ್ಯಗಳು ಮತ್ತು ಕನ್ನಡಿಯನ್ನಿಟ್ಟು ಅಲಂಕರಿಸಲಾಗುತ್ತದೆ. ಈ ಆಚರಣೆಯಲ್ಲಿ ಹಳದಿ ಬಣ್ಣದ ‘ಕಣಿಕೊನ್ನ’ (ಕರ್ಣಿಕಾರ) ಹೂವುಗಳಿಗೆ ವಿಶೇಷ ಸ್ಥಾನವಿದೆ. ಬೆಳಿಗ್ಗೆ ಹಿರಿಯರು ಮನೆಯ ಸದಸ್ಯರ ಕಣ್ಣುಗಳನ್ನು ಮುಚ್ಚಿ ಕರೆತಂದು ಈ ‘ಕಣಿ’ಯನ್ನು ತೋರಿಸುತ್ತಾರೆ.

‘ವಿಷು ಕೈನೀಟಂ’ ಮತ್ತು ಹಿರಿಯರ ಆಶೀರ್ವಾದ:

ಮನೆಯ ಹಿರಿಯರು ಕಿರಿಯರಿಗೆ ಹಣವನ್ನು ನೀಡಿ ಆಶೀರ್ವದಿಸುವ ಪದ್ಧತಿಯನ್ನು ‘ವಿಷು ಕೈನೀಟಂ’ ಎನ್ನಲಾಗುತ್ತದೆ. ಇದು ಕೇವಲ ಹಣದ ಹಂಚಿಕೆಯಲ್ಲ, ಬದಲಾಗಿ ಮುಂದಿನ ವರ್ಷ ಪೂರ್ತಿ ಮನೆಯಲ್ಲಿ ಆರ್ಥಿಕ ಸಮೃದ್ಧಿ ನೆಲೆಸಲಿ ಎಂಬ ಹಾರೈಕೆಯಾಗಿದೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ರುಚಿಕರವಾದ ವಿಷು ಭೋಜನ:

ವಿಷು ಹಬ್ಬದ ಅಡುಗೆಯಲ್ಲಿ ಸಮತೋಲನವಿರುತ್ತದೆ. ಜೀವನದ ಸುಖ-ದುಃಖಗಳನ್ನು ಸಮನಾಗಿ ಸ್ವೀಕರಿಸಬೇಕು ಎಂಬ ಸಂದೇಶ ನೀಡಲು ಈ ದಿನ ಕಹಿ, ಸಿಹಿ, ಹುಳಿ ಮತ್ತು ಉಪ್ಪು ಮಿಶ್ರಿತ ಖಾದ್ಯಗಳನ್ನು ಸಿದ್ಧಪಡಿಸಲಾಗುತ್ತದೆ. ‘ವಿಷು ಕಂಜಿ’ (ಗಂಜಿ) ಮತ್ತು ಪಾಯಸ ಈ ದಿನದ ವಿಶೇಷ.

ಸಾಂಸ್ಕೃತಿಕ ಮಹತ್ವ:

ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ವಿಷು ಹಬ್ಬವು ಸುಗ್ಗಿ ಕಾಲದ ಮುಕ್ತಾಯ ಮತ್ತು ಹೊಸ ಬಿತ್ತನೆಯ ಆರಂಭದ ಸಂಕೇತವೂ ಹೌದು. ದೇವಸ್ಥಾನಗಳಲ್ಲಿ ಈ ದಿನ ವಿಶೇಷ ಪೂಜೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ನಮ್ಮ ಸಂಪ್ರದಾಯದ ಶ್ರೀಮಂತಿಕೆಯನ್ನು ಬಿಂಬಿಸುವ ವಿಷು ಹಬ್ಬವು ಸಮೃದ್ಧಿ, ಶಾಂತಿ ಮತ್ತು ಹೊಸ ಭರವಸೆಗಳನ್ನು ಹೊತ್ತು ತರುತ್ತದೆ. ಕೇವಲ ಧಾರ್ಮಿಕ ಆಚರಣೆಯಷ್ಟೇ ಅಲ್ಲದೆ, ಕುಟುಂಬದವರೆಲ್ಲರೂ ಒಂದೆಡೆ ಸೇರಿ ಸಂಭ್ರಮಿಸುವ ಈ ಹಬ್ಬವು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Rates: ಚಿನ್ನದ ಬೆಲೆ 135 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ – Kannada News | Gold prices 14th april 2026 gold rates rise as silver remains unmoved news in kannada

ಬೆಂಗಳೂರು, ಏಪ್ರಿಲ್ 14: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಳಿತಗಳನ್ನು ಕಾಣುತ್ತಲೇ ಇದೆ. ಒಂದು ದಿನ ಕಡಿಮೆಗೊಂಡರೆ, ಮತ್ತೊಂದು ದಿನ ಏರಿಕೆ ಆಗುತ್ತಿದೆ. ಇವತ್ತು ಮಂಗಳವಾರ ಚಿನ್ನದ ಬೆಲೆಯಲ್ಲಿ (Gold Rates) ಗ್ರಾಮ್​​ಗೆ 135 ರೂಗಳಷ್ಟು ಹೆಚ್ಚಳ ಆಗಿದೆ. ಇದರ ಬೆಲೆ ಮತ್ತೊಮ್ಮೆ 14,000 ರೂ ಗಡಿ ದಾಟಿ ಹೋಗಿದೆ. ಇದೇ ವೇಳೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆ ಕಂಡಿಲ್ಲ. ನಿನ್ನೆಯ ದರವೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 14ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,393 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,110 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,545 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,393 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,110 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,110 ರೂ
  • ಚೆನ್ನೈ: 14,220 ರೂ
  • ಮುಂಬೈ: 14,110 ರೂ
  • ದೆಹಲಿ: 14,125 ರೂ
  • ಕೋಲ್ಕತಾ: 14,110 ರೂ
  • ಕೇರಳ: 14,110 ರೂ
  • ಅಹ್ಮದಾಬಾದ್: 14,115 ರೂ
  • ಜೈಪುರ್: 14,125 ರೂ
  • ಲಕ್ನೋ: 14,125 ರೂ
  • ಭುವನೇಶ್ವರ್: 14,110 ರೂ

ಇದನ್ನೂ ಓದಿ: ಕಿಸಾನ್ ವಿಕಾಸ್ ಪತ್ರ; ಹಣ ಡಬಲ್ ಮಾಡುವ ಪೋಸ್ಟ್ ಆಫೀಸ್ ಸ್ಕೀಮ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 581 ರಿಂಗಿಟ್ (13,709 ರುಪಾಯಿ)
  • ದುಬೈ: 527.75 ಡಿರಾಮ್ (13,406 ರುಪಾಯಿ)
  • ಅಮೆರಿಕ: 147 ಡಾಲರ್ (13,716 ರುಪಾಯಿ)
  • ಸಿಂಗಾಪುರ: 189.40 ಸಿಂಗಾಪುರ್ ಡಾಲರ್ (13,879 ರುಪಾಯಿ)
  • ಕತಾರ್: 526 ಕತಾರಿ ರಿಯಾಲ್ (13,479 ರೂ)
  • ಸೌದಿ ಅರೇಬಿಯಾ: 538 ಸೌದಿ ರಿಯಾಲ್ (13,376 ರುಪಾಯಿ)
  • ಓಮನ್: 56.05 ಒಮಾನಿ ರಿಯಾಲ್ (13,583 ರುಪಾಯಿ)
  • ಕುವೇತ್: 43.56 ಕುವೇತಿ ದಿನಾರ್ (13,267 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 255 ರೂ
  • ಚೆನ್ನೈ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ್: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸುರಕ್ಷತೆಗೆ ಮೊದಲ ಆದ್ಯತೆ: ಮುಂಬೈ ಹಳಿಗಳ ಮೇಲೆ ಓಡಲಿದೆ ಮೊದಲ ‘ಕ್ಲೋಸ್ಡ್ ಡೋರ್’ ನಾನ್-ಎಸಿ ರೈಲು – Kannada News | Mumbai’s First Non AC Sealed Door Local Train, What Makes It Stand Out

ಮುಂಬೈ, ಏಪ್ರಿಲ್ 14: ಮುಂಬೈನ ರೈಲು(Train) ಹಳಿಗಳ ಮೇಲೆ ಪ್ರತಿದಿನ ಲಕ್ಷಾಂತರ ಕನಸುಗಳು ಪ್ರಯಾಣಿಸುತ್ತವೆ. ಆದರೆ, ಆ ಕನಸುಗಳ ಜೊತೆಗೇ ಸಾವು ಕೂಡ ತೆರೆದ ಬಾಗಿಲುಗಳ ರೂಪದಲ್ಲಿ ಹೊಂಚು ಹಾಕುತ್ತಿರುತ್ತದೆ. 2025ರ ಜೂನ್‌ನಲ್ಲಿ ನಡೆದ ‘ಮುಂಬ್ರಾ ರೈಲು ಅಪಘಾತ’ ಇಡೀ ದೇಶವನ್ನು ನಡುಗಿಸಿತ್ತು. ಕಿಕ್ಕಿರಿದು ತುಂಬಿದ್ದ ರೈಲಿನ ತೆರೆದ ಬಾಗಿಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕರು ಪ್ರಾಣ ಕಳೆದುಕೊಂಡಾಗ, “ಪ್ರಗತಿಗಿಂತ ಪ್ರಯಾಣಿಕರ ಪ್ರಾಣ ಮುಖ್ಯ” ಎಂಬ ಕೂಗು ಕೇಳಿಬಂತು.

ಇದೀಗ ಆ ಕೂಗಿಗೆ ಉತ್ತರ ಸಿಕ್ಕಿದೆ, ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮೊದಲ ಬಾರಿಗೆ, ಹವಾನಿಯಂತ್ರಣ (AC) ಇಲ್ಲದಿದ್ದರೂ ಬಾಗಿಲುಗಳು ಸ್ವಯಂಚಾಲಿತವಾಗಿ ಮುಚ್ಚುವ ಹೈಟೆಕ್ ರೈಲೊಂದು ಸಿದ್ಧವಾಗಿದೆ.

ರೈಲ್ವೆ ಮಂತ್ರಿಯ ಸಂಕಲ್ಪ, ಎಂಜಿನಿಯರ್‌ಗಳ ಸಾಧನೆ
ಪ್ರಯಾಣಿಕರ ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದೆಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ನೀಡಿದ ಕಟ್ಟುನಿಟ್ಟಿನ ನಿರ್ದೇಶನದ ಫಲವಾಗಿ ಈ ‘ಪ್ರೊಟೊಟೈಪ್’ (ಮೂಲಮಾದರಿ) ರೈಲು ಸೃಷ್ಟಿಯಾಗಿದೆ. ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF) ರೈಲ್ವೆ ಮಂಡಳಿಯ ಸಹಯೋಗದೊಂದಿಗೆ ಈ 12 ಬೋಗಿಗಳ (ಸಂಖ್ಯೆ 268201-268212) ರೈಲನ್ನು ವಿನ್ಯಾಸಗೊಳಿಸಿದೆ.

ಮತ್ತಷ್ಟು ಓದಿ: Video: ತಾಂತ್ರಿಕ ದೋಷ, ನಿಂತಿದ್ದ ರೈಲಿನಿಂದ ಇಳಿದ ಪ್ರಯಾಣಿಕನ ಮೇಲೆ ಹರಿದ ಮತ್ತೊಂದು ರೈಲು

ಈ ರೈಲಿನ  ವೈಶಿಷ್ಟ್ಯವೇನು?
ಜೀವ ರಕ್ಷಕ ಬಾಗಿಲುಗಳು: ಮೆಟ್ರೋ ರೈಲುಗಳ ಮಾದರಿಯಲ್ಲಿ ಇದರ ಬಾಗಿಲುಗಳು ತಾವಾಗಿಯೇ ಮುಚ್ಚಿಕೊಳ್ಳುತ್ತವೆ. ಬಾಗಿಲು ಪೂರ್ಣವಾಗಿ ಮುಚ್ಚದ ಹೊರತು ರೈಲು ಇಂಚೂ ಚಲಿಸುವುದಿಲ್ಲ, ಇದು ಬೀಳುವ ಭಯವಿಲ್ಲದ ಪ್ರಯಾಣವನ್ನು ಖಚಿತಪಡಿಸುತ್ತದೆ.

ಇದೊಂದು ವೆಸ್ಟಿಬುಲ್ ರೈಲಾಗಿದ್ದು, ಆರು ಬೋಗಿಗಳ ಎರಡು ಘಟಕಗಳನ್ನು ಒಳಗೊಂಡಿದೆ. ಪ್ರಯಾಣಿಕರು ಎಸಿ ರೈಲುಗಳಲ್ಲಿ ಇರುವಂತೆ ಒಂದು ಬೋಗಿಯಿಂದ ಮತ್ತೊಂದು ಬೋಗಿಗೆ ಆರಾಮವಾಗಿ ಚಲಿಸಬಹುದು. ಇದರಲ್ಲಿ ಪ್ರಥಮ ದರ್ಜೆ (First Class) ಎಂಬ ಭೇದವಿಲ್ಲ. ಎಲ್ಲರಿಗೂ ಸಮಾನವಾದ ಆಧುನಿಕ ಸೌಲಭ್ಯಗಳಿವೆ. ಮಹಿಳೆಯರ ಸುರಕ್ಷತೆಗಾಗಿ ವಿಶೇಷ ಬೋಗಿಗಳ ವ್ಯವಸ್ಥೆ ಮಾಡಲಾಗಿದೆ.

ಪ್ರಯಾಣಿಕರ ಆತಂಕ ಮತ್ತು ಸವಾಲು
ಬಾಗಿಲು ಮುಚ್ಚಿದರೆ ಎಸಿ ಇಲ್ಲದ ರೈಲಿನಲ್ಲಿ ಉಸಿರುಗಟ್ಟಬಹುದು ಎಂಬ ಆತಂಕ ಪ್ರಯಾಣಿಕರಲ್ಲಿದೆ. ಮುಂಬೈನ ವಿಪರೀತ ಬಿಸಿಲು ಮತ್ತು ಜನದಟ್ಟಣೆಯಲ್ಲಿ ಗಾಳಿಯ ಸಂಚಾರ ಹೇಗಿರಲಿದೆ ಎಂಬುದು ಸದ್ಯದ ದೊಡ್ಡ ಪ್ರಶ್ನೆ. ಆದರೆ, ರೈಲ್ವೆ ಇಲಾಖೆಯು ಗಾಳಿಯ ಮುಕ್ತ ಸಂಚಾರಕ್ಕಾಗಿ ವಿಶೇಷ ‘ವೆಂಟಿಲೇಶನ್’ ವ್ಯವಸ್ಥೆಯನ್ನು ಅಳವಡಿಸಿದ್ದು, ಪ್ರಾಯೋಗಿಕ ಓಡಾಟದ ನಂತರ ಇದಕ್ಕೆ ಅಂತಿಮ ರೂಪ ನೀಡಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಪ್ರಧಾನಿ ಮೋದಿ ಉದ್ಘಾಟಿಸಲಿರುವ ಭೈರವೈಕ್ಯ ಮಂದಿರ ಹೇಗಿದೆ? ಇಲ್ಲಿದೆ ವಿಡಿಯೋ – Kannada News | Inside PM Modi’s Inauguration: Adichunchanagiri’s Stunning Rs 80 Crore Bhairavaikya Mandira Revealed

ಮಂಡ್ಯ, ಏಪ್ರಿಲ್ 14: ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭವ್ಯ ಶ್ರೀ ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15 ರಂದು ಉದ್ಘಾಟಿಸಲಿದ್ದಾರೆ. ಕಳೆದ 10 ವರ್ಷಗಳಿಂದ ನಿರ್ಮಾಣ ಹಂತದಲ್ಲಿದ್ದ ಈ ಮಂದಿರ, ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆ ಎತ್ತಿದೆ. ಈ ಮಂದಿರವು ಬಾಲ ಗಂಗಾಧರನಾಥ ಸ್ವಾಮೀಜಿಯವರ ಐಕ್ಯ ಸ್ಥಳದಲ್ಲಿದೆ. ಮಂದಿರದ ನಿರ್ಮಾಣವು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಕನಸಾಗಿತ್ತು. ಮಂದಿರವು ಹೊಯ್ಸಳ, ಚಾಲುಕ್ಯ, ಚೋಳ ಮತ್ತು ಗಂಗರ ಕಾಲದ ಶಿಲ್ಪಕಲೆಗಳ ಸಮಾಗಮವನ್ನು ಹೊಂದಿದೆ. ದ್ರಾವಿಡ ಶೈಲಿಯಲ್ಲಿ ನಿರ್ಮಿಸಿರುವ ಈ ಮಂದಿರ ವಾಸ್ತುಶಿಲ್ಪದ ಒಂದು ಅದ್ಭುತವಾಗಿದೆ. ಇದರ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಅಂತಿಮ ಸಿದ್ಧತೆಗಳು ಭರದಿಂದ ಸಾಗಿವೆ. ಪ್ರಧಾನಿ ಮೋದಿ ಅವರ ಆಗಮನಕ್ಕಾಗಿ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಂದಿರ ಹೇಗಿದೆ ಎಂಬುದನ್ನು ಈ ವಿಡಿಯೋದಲ್ಲಿ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅರ್ಧ ಗಂಟೆಯಲ್ಲಿ ಮನೆಗೆ ಬಾ..: ಸಚಿವ ಜಮೀರ್​​ಗೆ ಸಿಎಂ ಸಿದ್ದರಾಮಯ್ಯ ಬುಲಾವ್ – Kannada News | Karnataka Politics: CM Calls Zameer Ahmed for Urgent Talks Following Minority Dissent

ಬೆಂಗಳೂರು. ಏ.14: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹಮದ್ ಖಾನ್‌ಗೆ ತುರ್ತು ಬುಲಾವ್ ನೀಡಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಇನ್ನೇನು ಕೆಲವೇ ನಿಮಿಷಗಳಲ್ಲಿ ಸಿದ್ದರಾಮಯ್ಯ ಜಮೀರ್ ಅಹಮದ್ ಅವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಲ್ಪಸಂಖ್ಯಾತ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಚುನಾವಣಾ ಪ್ರಚಾರದಲ್ಲಿ ಜಮೀರ್ ಅಹಮದ್ ಭಾಗಿಯಾಗಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಅಬ್ದುಲ್ ಜಬ್ಬಾರ್ ಈಗಾಗಲೇ ಅಲ್ಪಸಂಖ್ಯಾತ ಘಟಕದಿಂದ ರಾಜೀನಾಮೆ ನೀಡಿದ್ದಾರೆ. ಇದೇ ಕಾರಣಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ನಜೀರ್ ಅಹಮದ್ ಅವರನ್ನೂ ಕೂಡ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಹೈಕಮಾಂಡ್ ಸೂಚನೆಯಂತೆ ನಜೀರ್ ಅಹಮದ್ ರಾಜೀನಾಮೆ ನೀಡಲು ನಿರಾಕರಿಸಿದ ಕಾರಣ ಅವರನ್ನು ವಜಾಗೊಳಿಸಲಾಗಿದೆ. ಇದೀಗ ಜಮೀರ್ ಅಹಮದ್ ಖಾನ್ ಮತ್ತು ಸಿದ್ದರಾಮಯ್ಯ ನಡುವಿನ ಈ ಚರ್ಚೆಯು ಮತ್ತಷ್ಟು ಗೊಂದಲಗಳನ್ನು ನಿವಾರಿಸುವುದೇ ಅಥವಾ ಹೊಸ ವಿವಾದಗಳನ್ನು ಸೃಷ್ಟಿಸುವುದೇ ಎಂಬುದನ್ನು ಕಾದು ನೋಡಬೇಕಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ತ್ರಿಷಾ ಮನೆಯಲ್ಲಿ ಬಾಂಬ್ ಇಟ್ಟಿದ್ದೇವೆ, ಇನ್ನೇನು ಸ್ಫೋಟ ಗೊಳ್ಳುತ್ತೆ’ – Kannada News | Trisha’s Chennai Home Bomb Threat: Police Probe Fake Call, Fans Relieved

ನಾಯಕಿ ತ್ರಿಷಾ (Trisha) ಮನೆಗೆ ಬಂದಿರುವ ಬಾಂಬ್ ಬೆದರಿಕೆ ಸಂಚಲನ ಸೃಷ್ಟಿಸಿದೆ. ಸಿನಿಮಾ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಹಾಕಿದ್ದ ಅಪರಿಚಿತ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ತ್ರಿಷಾ ಮನೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ. ಇದು ಕೆಲವು ಕಾಲ ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ಸೃಷ್ಟಿ ಮಾಡಿತ್ತು.

ಚೆನ್ನೈನ ಅಲ್ವಾರ್‌ಪೇಟೆಯಲ್ಲಿರುವ ತ್ರಿಷಾ ಅವರ ನಿವಾಸದಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿತ್ತು. ಆ ವ್ಯಕ್ತಿ ಸ್ವಲ್ಪ ಹೊತ್ತಿನಲ್ಲೇ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಎಚ್ಚರಿಸಿದಾಗ ಪೊಲೀಸರು ಆಘಾತಕ್ಕೊಳಗಾದರು. ಎಚ್ಚೆತ್ತ ತೇನಂಪೇಟೆ ಪೊಲೀಸರು ತಕ್ಷಣವೇ ಬಾಂಬ್ ನಿಷ್ಕ್ರಿಯ ದಳ (ಬಿಡಿಡಿಎಸ್) ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ ತ್ರಿಷಾ ಅವರ ಮನೆಗೆ ತಲುಪಿದರು. ಪೊಲೀಸ್ ತಂಡಗಳು ತ್ರಿಷಾ ಅವರ ಮನೆಯ ಪ್ರತಿಯೊಂದು ಮೂಲೆಯನ್ನೂ ಸಂಪೂರ್ಣವಾಗಿ ಪರಿಶೀಲಿಸಿದವು.

ಸುಮಾರು ಗಂಟೆಗಳ ಕಾಲ ನಡೆದ ಈ ಹುಡುಕಾಟದಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ. ಕೊನೆಗೆ, ಇದು ಹುಸಿ ಬಾಂಬ್ ಕರೆ ಎಂದು ದೃಢಪಟ್ಟಾಗ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಈ ಸಮಯದಲ್ಲಿ, ತ್ರಿಷಾ ಶೂಟಿಂಗ್‌ಗಾಗಿ ಹೊರಗೆ ಇದ್ದಾರೋ ಅಥವಾ ಮನೆಯಲ್ಲಿದ್ದಾರೋ ಎಂಬುದು ಇನ್ನೂ ಸ್ಪಷ್ಟವಾಗಬೇಕಿದೆ.

ಈ ನಕಲಿ ಫೋನ್ ಕರೆ ಎಲ್ಲಿಂದ ಬಂತು? ಯಾರು ಮಾಡಿದ್ದಾರೆ? ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸೈಬರ್ ಕ್ರೈಮ್ ಪೊಲೀಸರ ಸಹಾಯದಿಂದ, ಫೋನ್ ಸಿಗ್ನಲ್‌ಗಳ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ. ಸಾಮಾನ್ಯವಾಗಿ ಇಂತಹ ಕೆಲಸಗಳನ್ನು ಮಾಡುವವರು ಮಾನಸಿಕ ಅಸ್ವಸ್ಥರು ಅಥವಾ ದರೋಡೆಕೋರರಾಗಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ: ‘ಇಂಥವರಿಗೆಲ್ಲ ತ್ರಿಷಾ ಉತ್ತರಿಸಬೇಕಿಲ್ಲ’; ಖಡಕ್ ಆಗಿ ಹೇಳಿದ ಖುಷ್ಬೂ ಸುಂದರ್

ತಮಿಳು ಚಿತ್ರರಂಗದ ಟಾಪ್ ನಟರ ಮನೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ, ರಜನಿಕಾಂತ್, ವಿಜಯ್, ಅಜಿತ್ ಮತ್ತು ಸೂರ್ಯ ಅವರಂತಹ ಸ್ಟಾರ್ ಹೀರೋಗಳ ಮನೆಗಳಿಗೂ ಇದೇ ರೀತಿಯ ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ತ್ರಿಷಾ ಅವರ ಮನೆಯನ್ನು ಗುರಿಯಾಗಿಸಿಕೊಂಡು ಇತ್ತೀಚೆಗೆ ನಡೆಸಲಾದ ದಾಳಿ ಚರ್ಚೆಯ ವಿಷಯವಾಗಿದೆ. ಈ ಘಟನೆ ಮತ್ತೊಮ್ಮೆ ಸೆಲೆಬ್ರಿಟಿಗಳ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version