Headlines

ಭ್ರಷ್ಟಾಚಾರ ನಿರ್ಮೂಲನೆ, ಬೆಂಗಳೂರು ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ – Kannada News | Mohandas Pai Urges CM D.K. Shivakumar to Tackle Corruption, Accelerate Bengaluru’s Development

ಬೆಂಗಳೂರು, ಜೂನ್​​ 16:  ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡುವಂತೆ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ವಿಶೇಷ ಗಮನ ಹರಿಸುವಂತೆ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಸಲಹೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರು ತಮ್ಮ ಮಾರ್ಗದರ್ಶಕರಾದ ಎಸ್.ಎಂ. ಕೃಷ್ಣ ಅವರಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ಕೆಲಸ ಮಾಡಿ ಬೆಂಗಳೂರಿನ ಹೆಸರನ್ನು ವಿಶ್ವ ಮಟ್ಟದಲ್ಲಿ ಮತ್ತೊಮ್ಮೆ ಎತ್ತಿ ಹಿಡಿಯಬೇಕು ಎಂದವರು ಆಶಿಸಿದ್ದಾರೆ. ಭ್ರಷ್ಟಾಚಾರದಿಂದಾಗಿ ನಗರದ ರಸ್ತೆಗಳು ಹಾಳಾಗಿವೆ, ಫುಟ್‌ಪಾತ್‌ಗಳಿಲ್ಲ, ದುಡ್ಡು ತಿನ್ನುವ ಕೆಲಸ…

Read More

ಷೇರುಪೇಟೆಯಲ್ಲಿ ಧೂಳೆಬ್ಬಿಸುತ್ತಿರುವ ಸ್ಪೇಸ್​ಎಕ್ಸ್; ಇಲಾನ್ ಮಸ್ಕ್ ಒಂದು ದಿನದಲ್ಲಿ ಗಳಿಸಿದ ಸಂಪತ್ತು ವಾರನ್ ಬಫೆಟ್​ನ ಒಟ್ಟೂ ಸಂಪತ್ತಿಗೆ ಸಮ – Kannada News | SpaceX Soars: Elon Musk Becomes First Trillionaire as Market Value Hits $3T

ವಾಷಿಂಗ್ಟನ್, ಜೂನ್ 16: ಇಲಾನ್ ಮಸ್ಕ್ ಅವರ ಸ್ಪೇಸ್-ಎಕ್ಸ್ (SpaceX) ಕಂಪನಿ ಷೇರು ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ. ಎರಡೇ ದಿನದಲ್ಲಿ ಅದು ಟಾಪ್-5 ಲಿಸ್ಟೆಡ್ ಕಂಪನಿಗಳ ಪಟ್ಟಿಗೆ ಜಂಪ್ ಮಾಡಿದೆ. ಐಪಿಒದಲ್ಲಿ ದಾಖಲೆಯ 137 ಡಾಲರ್ ಬೆಲೆಯಲ್ಲಿ ಮಾರುಕಟ್ಟೆಗೆ ಪದಾರ್ಪಣೆ ಮಾಡಿದ ಸ್ಪೇಸ್ ಎಕ್ಸ್ ಇದೀಗ 192 ಡಾಲರ್ ಬೆಲೆ ಪಡೆದಿದೆ. ಅದರ ಮಾರುಕಟ್ಟೆ ಸಂಪತ್ತು (Market Capital) 3 ಟ್ರಿಲಿಯನ್ ಡಾಲರ್ ಗಡಿ ದಾಟಿದೆ. ಮಾರುಕಟ್ಟೆಯ ಬ್ಲಾಕ್​ಬಸ್ಟರ್ ಕಂಪನಿಗಳಾದ ಎನ್​ವಿಡಿಯಾ (Nvidia), ಗೂಗಲ್, ಆ್ಯಪಲ್ ಮತ್ತು ಮೈಕ್ರೋಸಾಫ್ಟ್…

Read More

Video: ನೀನು ಸತ್ತಿಲ್ಲ ಏಳು, ಎದೆಗವಚಿ ಮರಿಗೆ ಮುತ್ತಿಡುತ್ತಾ, ಸತ್ತ ಮರಿಗೆ ಜೀವ ತುಂಬಲು ಯತ್ನಿಸುತ್ತಿರುವ ತಾಯಿ ಮಂಗ – Kannada News | Emotional Scene Captured as Mother Monkey Refuses to Leave Her Lifeless Infant

ಔರೈಯಾ, ಜೂನ್ 16: ನೀನು ಸತ್ತಿಲ್ಲ ಏಳು, ಎದೆಗವಚಿ ಮರಿಗೆ ಮುತ್ತಿಡುತ್ತಾ, ಸತ್ತ ಮರಿಗೆ ತಾಯಿ ಮಂಗ ಜೀವ ತುಂಬಲು ಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಔರೈಯಾದಲ್ಲಿ ನಡೆದಿದೆ. ಮರಿಯನ್ನು ಬಿಗಿಯಾಗಿ ಅಪ್ಪಿಕೊಂಡಿರುವ ಕೋತಿ(Monkey) ಸತ್ತ ಪರಿಯನ್ನು ಬಿಟ್ಟು ಹೋಗುಲು ಸಿದ್ಧಳಿಲ್ಲ. ವೈರಲ್ ಆಗಿರುವ ದೃಶ್ಯಾವಳಿಯಲ್ಲಿ, ಹೆಣ್ಣು ಕೋತಿಯು ತನ್ನ ಸತ್ತ ಮರಿಯ ದೇಹವನ್ನು ಎದೆಯ ಮೇಲೆ ಮಲಗಿಸಿಕೊಂಡಿರುವುದು ಕಂಡುಬಂದಿದೆ. ಆ ಮರಿಗೆ ಮತ್ತೆ ಜೀವ ಬರಬಹುದು ಎಂಬ ಆಶಯದಿಂದ ತಾಯಿ…

Read More

ಸುರ್ಜೇವಾಲ ಸಂಧಾನ ಸಕ್ಸಸ್​​: 13 ದಿನಗಳ ನಂತರ ಖಾತೆ ವಹಿಸಿಕೊಂಡ ಕೃಷ್ಣ ಭೈರೇಗೌಡ – Kannada News | Minister Krishna Byre Gowda Takes Charge of Bengaluru Urban Development, Chairs GBA Meeting.

ಬೆಂಗಳೂರು, ಜೂನ್​​ 16: 13 ದಿನಗಳ ಅಸಮಾಧಾನದ ನಂತರ ಸಚಿವ ಕೃಷ್ಣ ಭೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಖಾತೆ ಹಂಚಿಕೆಯಲ್ಲಿ ಪೂರ್ಣ ಪ್ರಮಾಣದ ಅಧಿಕಾರ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅವರು ಬೇಸರಗೊಂಡಿದ್ದರು. ಆದರೆ ಸಚಿವರ ಮುನಿಸನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಕಾಂಗ್ರೆಸ್​​ ಉಸ್ತುವಾರಿಯಾಗಿರುವ ಸುರ್ಜೇವಾಲ ತಣಿಸಿದ್ದಾರೆ. ಈ ಬೆನ್ನಲ್ಲೇ ಜಿಬಿಎ ಕೇಂದ್ರ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿಯೇ ಮೊದಲ ಸಭೆಯನ್ನು ಸಚಿವ ಕೃಷ್ಣ ಭೈರೇಗೌಡ ನಡೆಸಿದ್ದಾರೆ. ಈ ಸಭೆಯಲ್ಲಿ ಜಿಬಿಎ ಮುಖ್ಯ…

Read More

ಬೆಂಗಳೂರಲ್ಲಿ ಡ್ರಗ್ಸ್ ಬೇಟೆ: 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ, ಉಗಾಂಡಾ ಮಹಿಳೆ ಸೇರಿ ಮೂವರ ಬಂಧನ – Kannada News | Bengaluru Drug Bust: Rs 5.67 Crore Hydro Ganja and Cocaine Seized in Three Separate Raids; Ugandan Woman Arrested

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 2.77 ಕೋಟಿ ರೂ. ಮೌಲ್ಯದ ಗಾಂಜಾ ಸೀಜ್Image Credit source: tv9 ಬೆಂಗಳೂರು, ಜೂನ್ 16: ಬೆಂಗಳೂರಿನಲ್ಲಿ (Bengaluru) ಮಾದಕ ದ್ರವ್ಯ ಜಾಲದ ವಿರುದ್ಧ ಪೊಲೀಸರು ಹಾಗೂ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಕೊಕೇನ್ ಜಪ್ತಿ ಮಾಡಿದ್ದಾರೆ. ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯ ಡ್ರಗ್ಸ್ ಡೀಲಿಂಗ್‌ನಲ್ಲಿ ತೊಡಗಿದ್ದ ಉಗಾಂಡಾ ಮೂಲದ ಮಹಿಳಾ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ….

Read More

ಸಮಂತಾ ಹೂಡಿಕೆ ಮಾಡಿರುವ ಉದ್ಯಮಗಳ ಸಂಪೂರ್ಣ ಮಾಹಿತಿ – Kannada News | Samantha Ruth Prabhu’s investments detail and their current situation

ಸಮಂತಾ (Samantha), ಸ್ಟಾರ್ ನಟಿ ಮಾತ್ರವಲ್ಲ ಒಳ್ಳೆಯ ಉದ್ಯಮಿಯೂ ಸಹ. ಕಳೆದ ಐದಾರು ವರ್ಷಗಳಲ್ಲಿ ಅವರು ಒಂದರ ಹಿಂದೆ ಒಂದರಂತೆ ಹಲವು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೀಗ ಅವರ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆ ಆಗುತ್ತಿದೆ. ಕೆಲ ತಿಂಗಳ ಹಿಂದೆ ಸಮಂತಾ ಪಾಲ್ಗೊಂಡಿದ್ದ ಸಂದರ್ಶನವೊಂದರಲ್ಲಿ ತಮ್ಮ ಉದ್ಯಮಗಳ ಬಗ್ಗೆ ವಿವರವಾಗಿ ಮಾತನಾಡಿದ್ದರು. ಉದ್ಯಮಗಳನ್ನು ಆರಂಭಿಸಿದ್ದು ಯಾವಾಗ ಮತ್ತು ಅವು ಹೇಗೆ ನಡೆಯುತ್ತಿವೆ ಎಂಬಿತ್ಯಾದಿ ವಿವರಗಳನ್ನು ಸಮಂತಾ ಋತ್ ಪ್ರಭು ಹಂಚಿಕೊಂಡಿದ್ದರು. ಸಮಂತಾ ಅವರು ‘ಸಾಖಿ’…

Read More

Financial Stress: ಇಎಂಐ ಮತ್ತು ಸಾಲದ ಹೊರೆಯಿಂದ ಕಂಗಾಲಾಗಿದ್ದೀರಾ? ಮಂಗಳವಾರ ಈ ಒಂದು ಕೆಲಸ ಮಾಡಿ – Kannada News | Financial Peace: Angaraka Stotra Solution for Debt and Loan EMI Stress

ಇಂದಿನ ಆಧುನಿಕ ಜೀವನದಲ್ಲಿ ಹೋಮ್ ಲೋನ್​, ವೈಯಕ್ತಿಕ ಸಾಲ (Personal Loan), ಮತ್ತು ಕ್ರೆಡಿಟ್ ಕಾರ್ಡ್ ಇಎಂಐಗಳ ಸುಳಿಗೆ ಸಿಲುಕದವರೇ ಇಲ್ಲ. ಈ ಸಾಲದ ಕಂತುಗಳು ಕೇವಲ ಜೇಬಿಗೆ ಕತ್ತರಿ ಹಾಕುವುದು ಮಾತ್ರವಲ್ಲದೆ, ತೀವ್ರ ಮಾನಸಿಕ ಅಶಾಂತಿ ಮತ್ತು ಕೌಟುಂಬಿಕ ಒತ್ತಡಕ್ಕೂ ಕಾರಣವಾಗುತ್ತವೆ. ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಕಠಿಣ ಪರಿಶ್ರಮದ ಜೊತೆಗೆ ಆಧ್ಯಾತ್ಮಿಕ ಮತ್ತು ಧಾರ್ಮಿಕ ಪರಿಹಾರಗಳ ಮೊರೆ ಹೋಗುವವರಿಗಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಒಂದು ವಿಶೇಷ ಮಾರ್ಗವನ್ನು ಸೂಚಿಸಲಾಗಿದೆ. ಅದೇ ‘ಋಣ ವಿಮೋಚನ ಅಂಗಾರಕ ಸ್ತೋತ್ರ’. ಸಾಲ…

Read More

ಒಟಿಟಿಯಲ್ಲಿ ಸದ್ದು ಮಾಡುತ್ತಿದೆ ‘ರಾಖ್’ ವೆಬ್ ಸರಣಿ; ಸರಣಿ ನೋಡಿದ್ರೆ ಮೈ ನಡುಗುತ್ತೆ – Kannada News | Raakh Web Series: Unearthing The Chilling 1978 Ranga Billa True Crime On Amazon Prime

ಸಸ್ಪೆನ್ಸ್ ಹಾಗೂ ಕ್ರೈಂ ಥ್ರಿಲ್ಲರ್ ಕಥೆಗಳನ್ನು ನೋಡುವು ಎಂದರೆ ಒಂದು ವರ್ಗದ ಜನರಿಗೆ ಸದಾ ಇಷ್ಟ ಆಗುತ್ತದೆ. ಇವುಗಳಲ್ಲಿ ಬಹುತೇಕವು ಕಾಲ್ಪನಿಕ ಕಥೆ. ಆದರೆ, ಈಗ ನೈಜ ಘಟನೆ ಆಧಾರಿತ ಸರಣಿ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಈ ವೆಬ್ ಸರಣಿ ಹೆಸರು ರಾಖ್. ಬಿಡುಗಡೆಯಾದ ದಿನದಿಂದಲೇ ಈ ಸರಣಿ ತನ್ನ ವಿಭಿನ್ನ ಕಥಾಹಂದರ ಹಾಗೂ ರೋಚಕ ತಿರುವುಗಳಿಂದ ಪ್ರೇಕ್ಷಕರ ಗಮನ ಸೆಳೆದಿದೆ. ಈ ಸರಣಿಯು ಕೇವಲ ಕಾಲ್ಪನಿಕ ಕಥೆಯಲ್ಲ, ಬದಲಿಗೆ ಇಡೀ ಭಾರತವನ್ನೇ…

Read More

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ವನ್ಯಜೀವಿ ಬೇಟೆ: ಗೋವಾ ಸರ್ಕಾರಿ ನೌಕರನ ಬಂಧನ, ನಾಲ್ವರು ಪರಾರಿ – Kannada News | Kali Tiger Reserve Poaching: Goa Government Employee Arrested for Wildlife Hunting in Karnataka; 4 Absconding

ಬಂಧಿತ ಆರೋಪಿ ದಿಗಂಬರ್ ಗಾವ್ಡೆImage Credit source: The New Indian Express ಬೆಂಗಳೂರು, ಜೂನ್ 16: ಕರ್ನಾಟಕ-ಗೋವಾ ಗಡಿಭಾಗದ ಕಾಳಿ ಹುಲಿ ಸಂರಕ್ಷಿತಾರಣ್ಯದ (Kali Tiger Reserve) ವ್ಯಾಪ್ತಿಯಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಜಾಲವನ್ನು ಭೇದಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಗೋವಾ ಸರ್ಕಾರದ ಸಾರಿಗೆ ಸಂಸ್ಥೆಯ ನೌಕರನೊಬ್ಬನನ್ನು ಬಂಧಿಸಿದ್ದಾರೆ. ಜೊಯಿಡಾ ತಾಲೂಕಿನ ಡಿಗ್ಗಿ ಸಮೀಪದ ಬೊಂಡೇಲಿ ಗ್ರಾಮದಲ್ಲಿ ಭಾನುವಾರ ಈ ಕಾರ್ಯಾಚರಣೆ ನಡೆದಿದೆ. ಬೇಟೆಗೆ ಸಹಕರಿಸಿದ ಸ್ಥಳೀಯ ಶೂಟರ್ ಹಾಗೂ ಗೋವಾದ ಮತ್ತಿಬ್ಬರು ಭದ್ರತಾ ಏಜೆನ್ಸಿ ಸಿಬ್ಬಂದಿ…

Read More

Telegram Ban: ಭಾರತದಲ್ಲಿ ಟೆಲಿಗ್ರಾಮ್​ಗೆ ತಾತ್ಕಾಲಿಕ ನಿಷೇಧ: ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರದ ಕ್ರಮ – Kannada News | Government Suspends Telegram Access Ahead of NEET Re Exam to Curb Malpractice

ನವದೆಹಲಿ, ಜೂನ್ 16: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ (NEET-UG 2026) ಮರು ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ಆದ ‘ಟೆಲಿಗ್ರಾಮ್’ (Telegram) ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ನೀಡಿರುವ ಅಧಿಕೃತ ನಿರ್ದೇಶನದ ಪ್ರಕಾರ, ಭಾರತದಲ್ಲಿ ಜೂನ್ 22, 2026 ರವರೆಗೆ ಟೆಲಿಗ್ರಾಮ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ. ಜೂನ್ 21 ರಂದು ದೇಶಾದ್ಯಂತ ಬಿಗಿಯಾದ…

Read More