ಉಡುಪಿಯಲ್ಲಿ ಪರ್ಯಾಯ ಮಹೋತ್ಸವ ಸಂಭ್ರಮ: ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ – Kannada News | Shirur Matha’s Vedavardhana Teertha Swamiji Begins 253rd Udupi Krishna Paryaya
ಶ್ರೀ ಕೃಷ್ಣ ಮಠದ ಇತಿಹಾಸದಲ್ಲಿದು 253ನೇ ದ್ವೈವಾರ್ಷಿಕ ಪರ್ಯಾಯವಾಗಿದ್ದು, ವೇದವರ್ಧನ ತೀರ್ಥರ ಪ್ರಥಮ ಪರ್ಯಾಯವಾಗಿದೆ. ಮಧ್ಯರಾತ್ರಿ 1.30ಕ್ಕೆ ಕಾಪು ತಾಲೂಕಿನ ದಂಡ ತೀರ್ಥದಲ್ಲಿ ಪವಿತ್ರ ಸ್ನಾನ ನಡೆದು, ಬೆಳಗಿನ ಜಾವ 3 ಗಂಟೆಗೆ ಜೋಡುಕಟ್ಟೆಯಿಂದ ವೈಭವದ ಪರ್ಯಾಯ ಮೆರವಣಿಗೆ ಪ್ರಾರಂಭವಾಗಿದೆ. ನೂರಕ್ಕೂ ಅಧಿಕ ಸಾಂಸ್ಕೃತಿಕ ತಂಡಗಳು, ಟ್ಯಾಬ್ಲೋಗಳು, ಭಜನಾ ತಂಡಗಳು ಈ ವೇಳೆ ಗಮನ ಸೆಳೆದಿವೆ. Source link