ರಾಜಾಜಿನಗರದ ESI ಆಸ್ಪತ್ರೆ ಬಳಿ ಮರ ಬಿದ್ದು ಆಟೋಗಳು ಜಖಂ: ಬೆಂಗಳೂರಿನಾದ್ಯಂತ 50ಕ್ಕೂ ಹೆಚ್ಚು ಮರಗಳು ಧರಾಶಾಯಿ – Kannada News | Bengaluru Rain Fury: Over 50 Trees Uprooted Across City; Autos Crushed Near Rajajinagar ESI Hospital

ಬೆಂಗಳೂರು, ಏಪ್ರಿಲ್ 30: ಬೆಂಗಳೂರು ನಗರದಲ್ಲಿ ಭಾರಿ ಗಾಳಿ ಮಳೆಯ ಪರಿಣಾಮ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ನಗರದಾದ್ಯಂತ 50ಕ್ಕೂ ಹೆಚ್ಚು ಬೃಹದಾಕಾರದ ಮರಗಳು ಧರೆಗುರುಳಿವೆ. ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಪ್ರವೇಶ ದ್ವಾರದ ಬಳಿ ಮರ ಬಿದ್ದು, ಮೂರು ಆಟೋಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅದೃಷ್ಟವಶಾತ್, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದೇ ರೀತಿ, ಬಸವನಗುಡಿಯ ವಿದ್ಯಾಪೀಠ ಸರ್ಕಲ್ ಬಳಿಯೂ ಬೃಹತ್ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಿದ್ಯುತ್ ತಂತಿಗಳಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಮರಗಳನ್ನು ತೆರವುಗೊಳಿಸಲು ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾತ್ರಿ ಮರಗಳು ಬಿದ್ದಿದ್ದರೂ ಬೆಳಗ್ಗೆವರೆಗೂ ತೆರವು ಕಾರ್ಯಾಚರಣೆ ವಿಳಂಬವಾಗಿದೆ ಎಂದು ಆರೋಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

MI vs SRH, IPL 2026: 243 ರನ್‌ಗಳಿಸಿದರೂ ಸೋತಿದ್ದೇಕೆ?: ಹಾರ್ದಿಕ್ ನೀಡಿದ ಕಾರಣಕ್ಕೆ ಇಡೀ ಸ್ಟೇಡಿಯಂ ಸ್ತಬ್ಧ – Kannada News | Hardik Pandya gave a reason in the post match why he lost despite scoring 243 runs against Hyderabad

ಬೆಂಗಳೂರು (ಏ. 30): ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್ ಸ್ಥಿತಿ ತುಂಬಾ ಕೆಟ್ಟದಾಗಿದೆ. ಬುಧವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ 243 ರನ್‌ಗಳ ಬೃಹತ್ ಸ್ಕೋರ್ ಅನ್ನೂ ರಕ್ಷಿಸುವಲ್ಲಿ ಮುಂಬೈ ಇಂಡಿಯನ್ಸ್ ವಿಫಲವಾಯಿತು. ಈ ಸೋಲಿನಿಂದ ಎಂಐ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ತೀವ್ರ ನಿರಾಶೆಗೊಂಡಂತೆ ಕಂಡುಬಂದರು. ಸೋಲಿನ ನಂತರ ಹಾರ್ದಿಕ್ ತಮ್ಮ ಹೇಳಿಕೆಯಲ್ಲಿ, ಸೋಲಿಗೆ ಕಾರಣಗಳು ಮತ್ತು ತಂಡದ ಸ್ಥಿತಿಯ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ಮುಂಬೈ 243 ರನ್‌ಗಳ ಬೆಟ್ಟದಂತಹ ಸ್ಕೋರ್ ಗಳಿಸಿದರೂ ಸನ್‌ರೈಸರ್ಸ್ 8 ಎಸೆತಗಳು ಬಾಕಿ ಇರುವಾಗಲೇ ಈ ಗುರಿಯನ್ನು ಸಾಧಿಸಿತು. ಇದು ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಅತಿದೊಡ್ಡ ರನ್-ಚೇಸ್ ಆಗಿದೆ.

ಹೈದರಾಬಾದ್ ವಿರುದ್ಧದ ಸೋಲಿಗೆ ಹಾರ್ದಿಕ್ ಹೇಳಿದ್ದೇನು?

ಪಂದ್ಯದಲ್ಲಿ ಇಬ್ಬನಿ ಪ್ರಮುಖ ಪಾತ್ರ ವಹಿಸಲಿಲ್ಲ ಎಂದು ಹಾರ್ದಿಕ್ ಪಾಂಡ್ಯ ಸ್ಪಷ್ಟಪಡಿಸಿದರು. ಸೋಲಿಗೆ ಕೆಟ್ಟ ಚೆಂಡುಗಳು ಪ್ರಮುಖ ಪಾತ್ರ ವಹಿಸಿವೆ ಎಂದು ಅವರು ದೂಷಿಸಿದರು. ಇದನ್ನು ಕೇಳಿ ಅಭಿಮಾನಿಗಳು ಶಾಕ್ ಆದರು. “ಇಬ್ಬನಿ ಪ್ರಮುಖ ಪಾತ್ರ ವಹಿಸಿದೆ ಎಂದು ನಾನು ಭಾವಿಸುವುದಿಲ್ಲ. ಅವರು (ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್) ಕೆಲವು ಉತ್ತಮ ಹೊಡೆತಗಳನ್ನು ಆಡಿದರು ಮತ್ತು ನಾವು ಕೆಲವು ಕೆಟ್ಟ ಚೆಂಡುಗಳನ್ನು ಬೌಲ್ ಮಾಡಿದ್ದೇವೆ. ಅವರು ಉತ್ತಮ ಆರಂಭ ಪಡೆದರು. ನಾವು ಪುನರಾಗಮನ ಮಾಡಲು ಪ್ರಯತ್ನಿಸಿದೆವು, ಆದರೆ ಅದು ಸಾಧ್ಯವಾಗಲಿಲ್ಲ” ಎಂದು ಹಾರ್ದಿಕ್ ಹೇಳಿದರು.

ಬೌಲಿಂಗ್‌ನಲ್ಲಿ ಇನ್ನೂ ವಿಶ್ವಾಸವಿದೆ

ಇಷ್ಟು ಹೆಚ್ಚಿನ ಮೊತ್ತವನ್ನು ರಕ್ಷಿಸುವಲ್ಲಿ ವಿಫಲವಾದರೂ, ಹಾರ್ದಿಕ್ ತಮ್ಮ ಬೌಲರ್‌ಗಳನ್ನು ಸಮರ್ಥಿಸಿಕೊಂಡರು. ಸೋಲಿಗೆ ಬೌಲರ್​ಗನ್ನು ಮಾತ್ರ ದೂಷಿಸುವುದಿಲ್ಲ ಮತ್ತು ಅವರ ಮೇಲೆ ಒತ್ತಡ ಹೇರುವುದಿಲ್ಲ ಎಂದು ಹೇಳಿದರು. ಹಾರ್ದಿಕ್ ಪ್ರಕಾರ, “ನಾನು ನನ್ನ ಬೌಲರ್‌ಗಳನ್ನು ದೂಷಿಸುವುದಿಲ್ಲ. 244 ಸ್ಕೋರ್ ಅನ್ನು ರಕ್ಷಿಸಬಹುದೆಂದು ನನಗೆ ವಿಶ್ವಾಸವಿತ್ತು, ಆದರೆ ಇಂದು ನಮ್ಮ ಎಕ್ಸಿಕ್ಯೂಷನ್ ಪರಿಪೂರ್ಣವಾಗಿರಲಿಲ್ಲ. ಒಂದು ಘಟಕವಾಗಿ, ಮುಂಬೈ ಇಂಡಿಯನ್ಸ್‌ಗೆ ಹೆಸರುವಾಸಿಯಾದದ್ದನ್ನು ನಾವು ಸಾಧಿಸಲಿಲ್ಲ.” ಎಂದರು.

MI vs SRH: ಅತ್ಯಧಿಕ ಮೊತ್ತ ಕಲೆಹಾಕಿಯೂ ಸೋತ ಮುಂಬೈ ಇಂಡಿಯನ್ಸ್

ಪಂದ್ಯದಲ್ಲಿ ಟ್ರಾವಿಸ್ ಹೆಡ್ ಕ್ಯಾಚ್ ಕೈಬಿಟ್ಟಿದ್ದು ಅಥವಾ ವಿಫಲವಾದ ಮನವಿ ಮುಂಬೈಗೆ ದುಬಾರಿಯಾಗಿ ಪರಿಣಮಿಸಿತು. ಅವಕಾಶಗಳನ್ನು ಬಳಸಿಕೊಳ್ಳುವಾಗ ವೇಗ ಬದಲಾಗುತ್ತದೆ, ಆದರೆ ಹಾಗೆ ಮಾಡದಿದ್ದರೆ ನೋವುಂಟಾಗುತ್ತದೆ ಎಂದು ಹಾರ್ದಿಕ್ ಹೇಳಿದರು. ಈ ಋತುವಿನಲ್ಲಿ ಅದೃಷ್ಟ ಮತ್ತು ಅವಕಾಶ ತನ್ನ ಕಡೆ ಇರಲಿಲ್ಲ ಎಂದು ಅವರು ಒಪ್ಪಿಕೊಂಡರು.

ವಾಂಖೆಡೆಯಲ್ಲಿ ನಡೆದ ಪಂದ್ಯದ ವೇಳೆ ಎದುರಾಳಿ ತಂಡಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದ ಬಗ್ಗೆ ಹಾರ್ದಿಕ್ ತಮ್ಮ ನೋವನ್ನು ವ್ಯಕ್ತಪಡಿಸಿದರು. “ವಿರೋಧಿ ತಂಡ ಬಂದಾಗ ಅಭಿಮಾನಿಗಳು ಅವರ ಹೆಸರು ಜಪಿಸಿದಾಗ ಕೆಲವೊಮ್ಮೆ ದುಃಖವಾಗುತ್ತದೆ. ನಮ್ಮ ಅಭಿಮಾನಿಗಳು ತುಂಬಾ ನಿಷ್ಠಾವಂತರು, ಆದರೆ ನಾವು ಅವರನ್ನು ಮನರಂಜಿಸಬೇಕು ಮತ್ತು ಅವರ ವಿಶ್ವಾಸವನ್ನು ಮರಳಿ ಗಳಿಸಬೇಕು” ಎಂದು ಹೇಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಖತ್ ಬೋಲ್ಡ್ ಆಗಿದೆ ‘ಎಪಿಕ್’ ಟೀಸರ್; ಪ್ರಶ್ನೆ ಮಾಡಿದ್ದಕ್ಕೆ ಸಿಟ್ಟಾದ ‘ಬೇಬಿ’ ನಟಿ – Kannada News | Epic Teaser: Vaishnavi Chaitanya’s Bold Scenes & Angry Reaction to Media Question

ಸಿನಿಮಾಗಳಲ್ಲಿ ಬೋಲ್ಡ್​ ದೃಶ್ಯಗಳನ್ನು ಮಾಡಲು ಎಲ್ಲ ನಾಯಕಿಯರೂ ಒಪ್ಪಿವುದಿಲ್ಲ. ಕೆಲವರು ಒಪ್ಪಿದರೂ ಆ ಬಗ್ಗೆ ಕೇಳಿ ಬರುವ ಪ್ರಶ್ನೆಗಳಿಗೆ ಉತ್ತರಿಸಲು ರೆಡಿ ಇರುವುದಿಲ್ಲ. ಈಗ ಹಾಗೆಯೇ ಆಗಿದೆ. ‘ಎಪಿಕ್’ ಹೆಸರಿನ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ಹಾಗೂ ವೈಷ್ಣವಿ ಚೈತನ್ಯ ನಟಿಸಿದ್ದಾರೆ.

‘ಬೇಬಿ’ ಹೆಸರಿನ ಸಿನಿಮಾ 2023ರಲ್ಲಿ ಬಂದು ಸೂಪರ್ ಹಿಟ್ ಆಯಿತು. 10 ಕೋಟಿ ರೂಪಾಯಿಯಲ್ಲಿ ಸಿದ್ಧವಾದ ಈ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಬರೋಬ್ಬರಿ 80 ಕೋಟಿ ರೂಪಾಯಿ ಗಳಿಕೆ ಮಾಡಿತು. ಈ ಸಿನಿಮಾದಲ್ಲಿ ಆನಂದ್ ಹಾಗೂ ವೈಷ್ಣವಿ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾ ಬಳಿಕ ಆನಂದ್ ಹಾಗೂ ವೈಷ್ಣವಿ ‘ಎಪಿಕ್: ದಿ ಸೆಮಿಸ್ಟರ್’ ಚಿತ್ರಕ್ಕಾಗಿ ಒಂದಾಗಿದ್ದಾರೆ. ಈ ಸಿನಿಮಾದ ಟೀಸರ್ ಗಮನ ಸೆಳೆದಿದೆ.

ಇದನ್ನೂ ಓದಿ: ಹೊಸ ಸಿನಿಮಾ ಘೋಷಿಸಿದ ವಿಜಯ್ ದೇವರಕೊಂಡ; ಇದರಲ್ಲಿದ್ದಾರೆ ಹಾಲಿವುಡ್ ತಂತ್ರಜ್ಞರು

ವಿಜಯ್ ದೇವರಕೊಂಡ ಅವರು ‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ಬೋಲ್ಡ್​ ದೃಶ್ಯಗಳಲ್ಲಿ ಕಾಣಿಸಿಕೊಂಡರು. ಆ ಬಳಿಕ ಅವರ ಇಮೇಜ್ ಸಂಪೂರ್ಣವಾಗಿ ಬದಲಾಯಿತು. ಈ ಸಿನಿಮಾ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿತು. ಅದೇ ರೀತಿ ಆನಂದ್ ಕೂಡ ಪ್ರಯತ್ನಿಸುತ್ತಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ. ‘ಎಪಿಕ್’ ಚಿತ್ರದಲ್ಲಿ ಬೋಲ್ಡ್ ದೃಶ್ಯಗಳಿವೆ.

‘ಬೇಬಿ’ ಸಿನಿಮಾದಲ್ಲಿ ಒಂದು ಸ್ಯಾಡ್ ಎಂಡಿಂಗ್ ಲವ್​ ಸ್ಟೋರಿ ಇತ್ತು. ‘ಎಪಿಕ್’ ಚಿತ್ರದಲ್ಲಿ ಕೇವಲ ಬೋಲ್ಡ್ ದೃಶ್ಯಗಳ ಮೇಲೆ ಗಮನ ಹರಿಸಲಾಗಿದೆಯೇ ಎಂಬ ಪ್ರಶ್ನೆ ಇದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವೈಷ್ಣವಿಗೆ ಪ್ರಶ್ನೆ ಎದುರಾಗಿದೆ. ‘ಬೇಬಿ’ ಸಿನಿಮಾ ಬಳಿಕ ಈ ರೀತಿಯ ಇಮೇಜ್ ಚೇಂಜ್ ಬೇಕಿತ್ತು ಅಲ್ಲವೇ ಎಂದು ಕೇಳಲಾಗಿದೆ. ಆದರೆ, ಇದಕ್ಕೆ ಉತ್ತರಿಸಲು ನಟಿ ಹಿಂದೇಟು ಹಾಕಿದ್ದಾರೆ. ಅವರ ಬದಲು ನಿರ್ದೇಶಕರು ಉತ್ತರ ನೀಡಿದರು. ಒಂದು ಸರಳ ಪ್ರಶ್ನೆಗೆ ಇಷ್ಟು ಸಿಟ್ಟಾದರೆ ಹೇಗೆ ಎಂಬುದು ಅನೇಕರ ಕುತೂಹಲಕ್ಕೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರು ಯಾರೆಲ್ಲ? ಅಧಿಕೃತ ಮಾಹಿತಿ ಬಿಡುಗಡೆ, ಕೇರಳ-ಅಸ್ಸಾಂನವರೂ ಸಾವು – Kannada News | Bengaluru Bowring Hospital Wall Collapse: Official List of 7 Deceased Released; Kerala Tourists Among Victims

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತImage Credit source: tv9

ಬೆಂಗಳೂರು, ಏಪ್ರಿಲ್ 30: ಏಪ್ರಿಲ್ 29 ರ ಬುಧವಾರ ಸಂಜೆ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಗೆ ಬೆಂಗಳೂರಿನ (Bengaluru) ಬೌರಿಂಗ್ ಆಸ್ಪತ್ರೆಯ (Bowring Hospital) ಕಾಂಪೌಂಡ್ ಕುಸಿದು ಸಂಭವಿಸಿದ ಘೋರ ದುರಂತದಲ್ಲಿ ಮೃತಪಟ್ಟ ಏಳು ಜನರ ಅಧಿಕೃತ ಮಾಹಿತಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಭೀಕರ ಘಟನೆಯಲ್ಲಿ ಬೆಂಗಳೂರು ಮೂಲದವರು ಮಾತ್ರವಲ್ಲದೆ, ಕೇರಳದ ಪ್ರವಾಸಿಗರು ಹಾಗೂ ಅಂತರರಾಜ್ಯ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ: ಮೃತಪಟ್ಟವರ ವಿವರ

ಬೌರಿಂಗ್ ಆಸ್ಪತ್ರೆಯ ಮರಣೋತ್ತರ ಪರೀಕ್ಷೆಯ ನಂತರ ಬಿಡುಗಡೆಯಾದ ಪಟ್ಟಿಯ ಪ್ರಕಾರ ಮೃತರ ವಿವರ ಹೀಗಿದೆ;

  • ಬೆಂಗಳೂರಿನ ಜೆಸಿ ನಗರದ ಮೊಹಮ್ಮದ್ ಅಬ್ದುಲ್ (52)
  • ಡಿ.ಜೆ.ಹಳ್ಳಿಯ ಫಯಾಜ್ ಅಹ್ಮದ್ (39)
  • ಕೆ.ಜೆ.ಹಳ್ಳಿಯ ಮುಸಾವಿರ್ ಬೇಗಂ (6)
  • ಕೇರಳದ ಎರ್ನಾಕುಲಂನ ಸ್ಮಿತಾ (47) ಹಾಗೂ ಲತಾ (57)
  • ಕಾರ್ ಸ್ಟಿಕ್ಕರಿಂಗ್ ಕೆಲಸ ಮಾಡುತ್ತಿದ್ದ ಅಸ್ಸಾಂನ ನಸೀಮುಲ್ಲಾ (19)
  • ಉತ್ತರ ಪ್ರದೇಶದ ವ್ಯಾಪಾರಿ ಸಲಾವುದ್ದೀನ್ ಅನ್ಸಾರಿ (36)

ಏಪ್ರಿಲ್ 29ರಂದು ಸಂಜೆ ನಡೆದದ್ದೇನು?

ಏಪ್ರಿಲ್ 29ರ ಬುಧವಾರ ಸಂಜೆ ಸುಮಾರು 5 ಗಂಟೆಯ ಸುಮಾರಿಗೆ ಬೆಂಗಳೂರಿನಲ್ಲಿ ದಿಢೀರ್ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆ ಆರಂಭವಾಯಿತು. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುತ್ತಿದ್ದ ಬಿರುಗಾಳಿಯಿಂದ ತಪ್ಪಿಸಿಕೊಳ್ಳಲು ಪಾದಚಾರಿಗಳು ಮತ್ತು ಬೀದಿ ಬದಿಯ ವ್ಯಾಪಾರಿಗಳು ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆಯ ಕೆಳಗೆ ಆಶ್ರಯ ಪಡೆದಿದ್ದರು. ಮಳೆಯ ತೀವ್ರತೆಗೆ ದುರ್ಬಲವಾಗಿದ್ದ ಗೋಡೆಯು ಏಕಾಏಕಿ ಕುಸಿದುಬಿದ್ದ ಪರಿಣಾಮ, ಗೋಡೆಯ ಕೆಳಗಿದ್ದವರು ಅವಶೇಷಗಳಡಿ ಸಿಲುಕಿಕೊಂಡರು. ಸ್ಥಳೀಯರು ಮತ್ತು ತುರ್ತು ಸೇವಾ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯ ನಡೆಸಿದರೂ, ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಘನಘೋರ ದುರಂತ; ಕಾಂಪೌಂಡ್ ಕುಸಿದು 7 ಜನ ಸಾವು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕಾಂಪೌಂಡ್ ಬಳಿ ನಡೆಸುತ್ತಿದ್ದ ನಿರ್ಮಾಣ ಕಾಮಗಾರಿಯ ಮಣ್ಣಿನ ಒತ್ತಡದಿಂದ ಗೋಡೆ ಕುಸಿದಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮದುವೆ ಮನೆಯ ಡಿಜೆ ಸದ್ದು ಕೇಳಿ ಕೋಳಿಗಳಿಗೆ ಹಾರ್ಟ್ ಅಟ್ಯಾಕ್,140 ಕೋಳಿಗಳು ಸಾವು, ಕೋಳಿ ಫಾರಂ ಮಾಲೀಕನ ಆಕ್ರೋಶ – Kannada News | Uttar Pradesh:Loud Wedding Music Blamed for Death of 140 Chickens

ಸುಲ್ತಾನಪುರ, ಏಪ್ರಿಲ್ 30: ಉತ್ತರ ಪ್ರದೇಶದ ಸುಲ್ತಾನಪುರ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ವರದಿಯಾಗಿದೆ. ಏಪ್ರಿಲ್ 25 ರ ರಾತ್ರಿ ನಡೆದ ಮದುವೆ ಮೆರವಣಿಗೆಯ ಡಿಜೆ ಸದ್ದಿಗೆ ಕೋಳಿ(Chicken)ಗಳು ಸಾವನ್ನಪ್ಪಿವೆ ಎಂದು ಆರೋಪಿಸಿ ಫಾರಂ ಮಾಲೀಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಕುದ್ವಾರ ಪ್ರದೇಶದ ರಾಮ್ ಭದ್ರ ಪೂರ್ವದಿಂದ ಬಂದ ಬಬ್ಬನ್ ವಿಶ್ವಕರ್ಮ ಅವರ ಮಗಳ ವಿವಾಹ ಮೆರವಣಿಗೆಯು ಸಬೀರ್ ಅಲಿ ಅವರ ಕೋಳಿ ಸಾಕಣೆ ಕೇಂದ್ರದ ಮೂಲಕ ಸಾಗಿತ್ತು. ರಾತ್ರಿ 9:30 ರ ಸುಮಾರಿಗೆ ಡಿಜೆಯಲ್ಲಿ ನುಡಿಸಲಾದ ಹೆಚ್ಚಿನ ಡೆಸಿಬಲ್ ಶಬ್ದವು ಕೋಳಿಗಳಲ್ಲಿ ತೀವ್ರ ಭಯವನ್ನುಂಟುಮಾಡಿತು. ಈ ತೀವ್ರ ಶಬ್ದವನ್ನು ತಡೆದುಕೊಳ್ಳಲಾರದೆ ಸಬೀರ್ ಅಲಿ ಅವರ ಫಾರಂನಲ್ಲಿದ್ದ 140 ಕೋಳಿಗಳು ಮೃತಪಟ್ಟಿವೆ.

ಸಬೀರ್ ಅಲಿ ಅವರು ನೀಡಿದ ದೂರಿನ ಮೇರೆಗೆ, ಪೊಲೀಸರು ಮಂಗಳವಾರ ರಾತ್ರಿ ಡಿಜೆ ಆಪರೇಟರ್ ಕವಿ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಂಗೀತ ವ್ಯವಸ್ಥೆಯು ಅನುಮತಿಸಲಾದ ಶಬ್ದ ಮಿತಿಗಳನ್ನು ಮೀರಿತ್ತೇ? ಮತ್ತು ಕೋಳಿಗಳ ಸಾವಿಗೆ ಈ ಶಬ್ದದ ಮಟ್ಟವೇ ನೇರ ಕಾರಣವೇ? ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಬೊಮ್ಮನಹಳ್ಳಿಯಲ್ಲಿ ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್​​​ ನಾಯಕ : ಜನರ ಸಾಗರ!

ತಜ್ಞರ ಪ್ರಕಾರ, ಹೆಚ್ಚಿನ ತೀವ್ರತೆಯ ಧ್ವನಿ ತರಂಗಗಳು ಪಕ್ಷಿಗಳು ಮತ್ತು ಪ್ರಾಣಿಗಳಲ್ಲಿ ತೀವ್ರ ಒತ್ತಡದ ಪ್ರತಿಕ್ರಿಯೆಗಳನ್ನು ಉಂಟುಮಾಡಬಹುದು. ಇದು ಕೆಲವೊಮ್ಮೆ ಅವುಗಳಲ್ಲಿ ಹೃದಯ ಸ್ತಂಭನಕ್ಕೂ (Heart Arrest) ಕಾರಣವಾಗಬಹುದು ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾದಂತಿದೆ. ಶಬ್ದ ಎಷ್ಟು ತೀವ್ರವಾಗಿತ್ತೆಂದರೆ ಕೋಳಿಗಳು ಭಯಗೊಂಡು ಸತ್ತಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರಿನ ಮೇರೆಗೆ ಪೊಲೀಸರು ಮಂಗಳವಾರ ರಾತ್ರಿ ಪಾರ್ಸಿಪುರದ ಡಿಜೆ ಆಪರೇಟರ್ ಕವಿ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಡಿಜೆ ಅಥವಾ ಮದುವೆಯನ್ನು ಆಯೋಜಿಸಿದ್ದ ಕುಟುಂಬದಿಂದ ತಕ್ಷಣದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಳೆಗಾರರ ಪಾಲಿಗೆ ಹಣ್ಣಿನ ರಾಜ ಈಗ ಕಹಿ! ಮಾವಿನ ಹಣ್ಣಿನ ಬೆಲೆ ದಿಢೀರ್ ಬೆಲೆ ಕುಸಿತ, ರೈತರು ಕಂಗಾಲು – Kannada News | Gadag Mango Market Crisis: Prices Plummets from Rs 3000 to Rs 600 per Tray; Farmers Face Huge Lossess

ಮಾವಿನ ಹಣ್ಣಿನ ಬೆಲೆ ಕುಸಿತ (ಸಾಂದರ್ಭಿಕ ಚಿತ್ರ)Image Credit source: tv9

ಗದಗ, ಏಪ್ರಿಲ್ 30: ಹಣ್ಣಿನ ರಾಜ ಎಂದೇ ಖ್ಯಾತಿ ಪಡೆದಿರುವ ಮಾವು (Mango) ಈ ಬಾರಿ ಬೆಳೆಗಾರರ ಪಾಲಿಗೆ ಕಹಿಯಾಗಿದೆ. ಒಂದು ಕಡೆ ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ವಿದೇಶಕ್ಕೆ ರಫ್ತು ಸ್ಥಗಿತಗೊಂಡಿದ್ದರೆ, ಇನ್ನೊಂದು ಕಡೆ ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ (Mango Price) ದಿಢೀರ್ ಕುಸಿತ ಕಂಡಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗದೆ ಗದಗ (Gadag) ಮಾರುಕಟ್ಟೆಗೆ ಬಂದ ಬೆಳೆಗಾರರು ಕಣ್ಣೀರು ಹಾಕುವಂತಾಗಿದೆ.

ಬೆಲೆ ಕುಸಿತಕ್ಕೆ ಪ್ರಮುಖ ಕಾರಣಗಳೇನು?

ಬೇಸಿಗೆ ಆರಂಭದಲ್ಲಿ ಭರ್ಜರಿ ಬೇಡಿಕೆ ಹೊಂದಿದ್ದ ಮಾವಿನ ಹಣ್ಣಿನ ದರ ಈಗ ಪಾತಾಳಕ್ಕೆ ಕುಸಿದಿದೆ. ಕಳೆದ ವಾರ ಒಂದು ಟ್ರೇ ಮಾವಿಗೆ 2,500 ರಿಂದ 3,000 ರೂಪಾಯಿ ದರವಿತ್ತು. ಆದರೆ ಈಗ ಕೇವಲ 600 ರಿಂದ 700 ರೂಪಾಯಿಗೆ ಕುಸಿದಿದೆ. ಮಾರುಕಟ್ಟೆಗೆ ಒಂದೇ ಬಾರಿಗೆ ಹೆಚ್ಚಿನ ಪ್ರಮಾಣದ ಸರಕು ಆಗಮಿಸಿರುವುದು ಮತ್ತು ವ್ಯಾಪಾರಿಗಳ ಬೇಡಿಕೆ ಕಡಿಮೆಯಾಗಿರುವುದು ಈ ಬೆಲೆ ಕುಸಿತಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಇದರೊಂದಿಗೆ ಇರಾನ್ ಮತ್ತು ಅಮೆರಿಕಾ ನಡುವಿನ ಯುದ್ಧದ ಎಫೆಕ್ಟ್‌ನಿಂದಾಗಿ ಅಂತರಾಷ್ಟ್ರೀಯ ರಫ್ತು ವ್ಯವಹಾರಕ್ಕೂ ಹೊಡೆತ ಬಿದ್ದಿದೆ.

ಸಾರಿಗೆ ವೆಚ್ಚವೂ ಸಿಗದೆ ಕಂಗಾಲಾದ ಬೆಳೆಗಾರರು

ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಮತ್ತು ಹಾವೇರಿ ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಬೆಳೆಗಾರರು ಸಾವಿರಾರು ರೂಪಾಯಿ ಸಾರಿಗೆ ವೆಚ್ಚ ಭರಿಸಿ ಗದಗ ಮಾರುಕಟ್ಟೆಗೆ ಮಾವು ತಂದಿದ್ದಾರೆ. ‘ರಸಗೊಬ್ಬರ, ಕೂಲಿ ಸೇರಿದಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಆದರೆ ಇಲ್ಲಿ ಒಂದು ಟ್ರೇ ಮಾವಿಗೆ 600 ರೂಪಾಯಿ ಕೇಳುತ್ತಿದ್ದಾರೆ. ನಾವು ಬಂದ ಗಾಡಿ ಬಾಡಿಗೆಯೂ ಈ ಹಣದಲ್ಲಿ ಬರುವುದಿಲ್ಲ’ ಎಂದು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಡಿಮೆ ದರಕ್ಕೆ ಮಾರಾಟ ಮಾಡಲು ಇಷ್ಟವಿಲ್ಲದ ಹಲವು ರೈತರು ಮಾವನ್ನು ಮರಳಿ ತಮ್ಮ ಊರುಗಳಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ.

ಸರ್ಕಾರದ ನೆರವಿಗೆ ಆಗ್ರಹ

ತೆರೆದ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ದರಕ್ಕೆ ಮಾವು ಮಾರಾಟವಾಗುತ್ತಿದ್ದರೂ, ಅದರ ಲಾಭ ಮಾತ್ರ ಬೆಳೆಗಾರರಿಗೆ ಸಿಗುತ್ತಿಲ್ಲ. ಮಧ್ಯವರ್ತಿಗಳ ಹಾವಳಿ ಮತ್ತು ರಫ್ತು ಸಮಸ್ಯೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಮಾವು ಬೆಳೆಗಾರರ ನೆರವಿಗೆ ಸರ್ಕಾರ ತಕ್ಷಣ ಧಾವಿಸಬೇಕು ಎಂದು ರೈತ ಸಂಘಟನೆಗಳು ಮತ್ತು ಬೆಳೆಗಾರರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಗದಗದಲ್ಲಿ ಧೂಳೆಬ್ಬಿಸಿದ ಎತ್ತುಗಳ ಮಿಂಚಿನ ಓಟ ಹೇಗಿತ್ತು ನೋಡಿ!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:04 am, Thu, 30 April 26

Source link

ಮೂವರು ಸ್ಟಾರ್ ನಟಿಯರ ಸಿನಿಮಾ ವಿಳಂಬಕ್ಕೆ ಪ್ರಿಯಾಂಕಾ ಕಾರಣ? ವಿವರಿಸಿದ ನಿರ್ದೇಶಕ – Kannada News | Jee Le Zaraa: Farhan Akhtar on Delays and Star Cast | Priyanka, Katrina, Alia Film Update

‘ಜೀ ಲೇ ಜರಾ’ ಸಿನಿಮಾ ಬಾಲಿವುಡ್‌ನ ಖ್ಯಾತ ನಿರ್ದೇಶಕ ಹಾಗೂ ನಟ ಫರ್ಹಾನ್ ಅಖ್ತರ್ ಅವರ ಕನಸಿನ ಪ್ರಾಜೆಕ್ಟ್ ಎನಿಸಿಕೊಂಡಿದೆ. ಈ ಚಿತ್ರ ಘೋಷಣೆಯಾದ ದಿನದಿಂದಲೂ ಚಿತ್ರರಂಗದಲ್ಲಿ ಈ ಸಿನಿಮಾ ಬಗ್ಗೆ ಸುದ್ದಿ ಆಗುತ್ತಲೇ ಇದೆ. ಈ ಚಿತ್ರ ಗಮನ ಸೆಳೆಯಲು ಈ ಚಿತ್ರದ ತಾರಾಗಣ ಕೂಡ ಕಾರಣ ಆಗಿದೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು, ರೋಡ್ ಟ್ರಿಪ್ ಸುತ್ತ ಸಾಗುತ್ತದೆ ಎನ್ನಲಾಗಿದೆ. ಈಗ ಈ ಸಿನಿಮಾ ಸೆಟ್ಟೇರುವುದು ಅನುಮಾನ ಎನ್ನಲಾಗುತ್ತಿದೆ.  ಹೀಗಿರುವಾಗಲೇ ಫರ್ಹಾನ್ ಅಖ್ತರ್ (Farhan Akhtar) ಅವರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ.

‘ಜೀ ಲೇ ಜರಾ’ ಸಿನಿಮಾದ ಅತಿದೊಡ್ಡ ಆಕರ್ಷಣೆ ಎಂದರೆ ಅದರ ತಾರಾಗಣ. ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪ್ರಿಯಾಂಕಾ ಚೋಪ್ರಾ, ಗ್ಲಾಮರ್ ಗೊಂಬೆ ಕತ್ರಿನಾ ಕೈಫ್ ಮತ್ತು ಪ್ರತಿಭಾವಂತ ನಟಿ ಆಲಿಯಾ ಭಟ್ ಇದೇ ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗಬೇಕಿತ್ತು. ಬಾಲಿವುಡ್‌ನ ಮೂವರು ಟಾಪ್ ನಟಿಯರು ಒಂದೇ ಸಿನಿಮಾದಲ್ಲಿ ನಟಿಸುತ್ತಿರುವುದು ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.

ಕೇವಲ ನಟಿಯರಷ್ಟೇ ಅಲ್ಲದೆ, ಚಿತ್ರದ ಹಿಂದಿರುವ ತಾಂತ್ರಿಕ ತಂಡವೂ ಅಷ್ಟೇ ಪ್ರಬಲವಾಗಿದೆ. ಈ ಹಿಂದೆ ‘ಜಿಂದಗಿ ನಾ ಮಿಲೇಗಿ ದೊಬಾರಾ’ ಅಂತಹ ಕ್ಲಾಸಿಕ್ ಸಿನಿಮಾಗಳನ್ನು ನೀಡಿದ ಫರ್ಹಾನ್ ಅಖ್ತರ್, ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ಈ ಚಿತ್ರದ ಸ್ಕ್ರಿಪ್ಟ್ ಸಿದ್ಧಪಡಿಸಿದ್ದಾರೆ. ಈ ತ್ರಿಮೂರ್ತಿಗಳ ಲೇಖನಿಯಲ್ಲಿ ಮೂಡಿಬರುವ ಸಿನಿಮಾಗಳು ಸಾಮಾನ್ಯವಾಗಿ ಸ್ನೇಹ ಮತ್ತು ಜೀವನದ ಮೌಲ್ಯಗಳನ್ನು ಸಾರುತ್ತವೆ.  ಹಾಗಾಗಿ ‘ಜೀ ಲೇ ಜರಾ’ ಮೇಲೆ ನಿರೀಕ್ಷೆಗಳು ಇಮ್ಮಡಿಯಾಗಿವೆ.

ಈ ಬಗ್ಗೆ ಮಾತನಾಡಿರುವ ಫರ್ಹಾನ್ ಅಖ್ತರ್, ‘ ಪ್ರತಿದಿನ ಕೆಲಸಕ್ಕೆ ಉತ್ಸಾಹದಿಂದ ಹೋಗಬೇಕು ಎನ್ನುವುದು ನನ್ನ ಆಶಯ. ಹಿಂದೆ ಕೆಲವು ಸಿನಿಮಾಗಳನ್ನು ಕೇವಲ ಆ ಕ್ಷಣದ ಕುತೂಹಲಕ್ಕೆ ಒಪ್ಪಿಕೊಂಡಿದ್ದೆ. ಆದರೆ ಚಿತ್ರೀಕರಣದ ಸಮಯದಲ್ಲಿ ಅವು ನನಗೆ ತೃಪ್ತಿ ನೀಡುತ್ತಿಲ್ಲ ಎಂಬುದು ಅರಿವಾಯಿತು. ಅಂತಹ ಸಂದರ್ಭಗಳಲ್ಲಿ ಆ ಕೆಲಸವನ್ನು ಪ್ರಾಮಾಣಿಕವಾಗಿ ಪೂರೈಸಿ, ಅದರಿಂದ ಪಾಠ ಕಲಿಯುವುದು ಮುಖ್ಯ ಎಂದು ನಾನು ನಂಬುತ್ತೇನೆ’ ಎಂದಿದ್ದಾರೆ ಅವರು.

‘ಕಳೆದ ನಾಲ್ಕುವರೆ ವರ್ಷಗಳಿಂದ ಈ ಚಿತ್ರವನ್ನು ಸೆಟ್ಟೇರಿಸಲು ನಾನು ಪ್ರಯತ್ನಿಸುತ್ತಲೇ ಇದ್ದೇನೆ. ಆದರೆ ಯಾವುದೋ ಒಂದು ಕಾರಣದಿಂದಾಗಿ ಕೆಲಸಗಳು ಮುಂದೂಡಲ್ಪಡುತ್ತಿವೆ. ಈ ಅಡೆತಡೆಗಳನ್ನು ಕಂಡರೆ, ಬ್ರಹ್ಮಾಂಡವು ನನ್ನ ತಾಳ್ಮೆಯನ್ನು ಪರೀಕ್ಷಿಸುತ್ತಿದೆಯೇನೋ ಮತ್ತು ಈ ಸಿನಿಮಾ ಮಾಡಲು ನಾನು ಎಷ್ಟು ಹಂಬಲಿಸುತ್ತಿದ್ದೇನೆ ಎಂದು ನೋಡುತ್ತಿದೆ ಎಂದು ನನಗನ್ನಿಸುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ‘ಡಾನ್ 3’ ಸಿನಿಮಾ ವಿವಾದ: ಬಗ್ಗೆ ಕೊನೆಗೂ ಬಾಯ್ಬಿಟ್ಟ ಫರ್ಹಾನ್ ಅಖ್ತರ್

2021ರ ಆಗಸ್ಟ್‌ನಲ್ಲಿ ಅಧಿಕೃತವಾಗಿ ಘೋಷಣೆಯಾದ ಈ ಚಿತ್ರವನ್ನು ಎಕ್ಸೆಲ್ ಎಂಟರ್ಟೈನ್‌ಮೆಂಟ್ ಮತ್ತು ಟೈಗರ್ ಬೇಬಿ ಫಿಲ್ಮ್ಸ್ ಸಂಸ್ಥೆಗಳು ಅದ್ಧೂರಿಯಾಗಿ ನಿರ್ಮಿಸುತ್ತಿವೆ. ಡೇಟ್ಸ್ ಹೊಂದಾಣಿಕೆಯ ಸಮಸ್ಯೆ ಹಾಗೂ ನಟಿಯರ ವೈಯಕ್ತಿಕ ಬದ್ಧತೆಗಳಿಂದಾಗಿ ಚಿತ್ರದ ಕೆಲಸಗಳು ಸ್ವಲ್ಪ ವಿಳಂಬವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಆರಂಭಕ್ಕೂ ಮುನ್ನವೇ ಸಂಘರ್ಷ: ಬೀಳಕಹಳ್ಳಿ ಹೆಸರಿಗಾಗಿ ಸ್ಥಳೀಯರ ಪಟ್ಟು – Kannada News | Bengaluru Pink Line Metro Controversy: Residents Protest Against Naming Bilekahalli Station as IIMB

ನಮ್ಮ ಮೆಟ್ರೋ ಪಿಂಕ್ ಲೈನ್ ಐಐಎಂಬಿ ಸ್ಟೇಷನ್Image Credit source: tv9

ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ (Pink Line Metro) ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲು ಸಿದ್ಧವಾಗುತ್ತಿದೆ. ಆದರೆ, ಈ ಮಾರ್ಗದ ನಿಲ್ದಾಣವೊಂದಕ್ಕೆ ನಾಮಕರಣ ಮಾಡುವ ವಿಚಾರ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೀಳಕಹಳ್ಳಿ ಏರಿಯಾದಲ್ಲಿರುವ ಮೆಟ್ರೋ ನಿಲ್ದಾಣಕ್ಕೆ ಬಿಎಂಆರ್‌ಸಿಎಲ್ (BMRCL) ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ಎಂದು ಹೆಸರಿಟ್ಟಿರುವುದು ಸ್ಥಳೀಯ ನಿವಾಸಿಗಳ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಸ್ಥಳೀಯತೆಯ ಅಸ್ಮಿತೆಗಾಗಿ ಹೋರಾಟ

ಬೀಳಕಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಮೆಟ್ರೋ ನಿಲ್ದಾಣವಿದ್ದರೂ, ಐಐಎಂಬಿ (IIMB) ಸಂಸ್ಥೆಯ ಹೆಸರನ್ನು ನಿಲ್ದಾಣಕ್ಕೆ ಇಟ್ಟಿರುವುದು ಸ್ಥಳೀಯರ ವಿರೋಧಕ್ಕೆ ಕಾರಣ. ನಮ್ಮ ಏರಿಯಾದ ಮೂಲ ಹೆಸರು ಬಿಳೇಕಹಳ್ಳಿ ಎಂದಿರುವಾಗ, ಐಐಎಂಬಿ ಹೆಸರೇಕೆ? ಎಂದು ನಿವಾಸಿಗಳು ಪ್ರಶ್ನಿಸುತ್ತಿದ್ದಾರೆ. ಸ್ಥಳೀಯತೆಗೆ ಮೊದಲ ಆದ್ಯತೆ ನೀಡಬೇಕು ಮತ್ತು ನಿಲ್ದಾಣದ ಹೆಸರನ್ನು ತಕ್ಷಣವೇ ‘ಬೀಳಕಹಳ್ಳಿ ಮೆಟ್ರೋ ನಿಲ್ದಾಣ’ ಎಂದು ಬದಲಾಯಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೆಸರು ಬದಲಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ನಿವಾಸಿಗಳಾದ ನಾಗರಾಜ್ ಮತ್ತು ನಾಗಭೂಷಣ್ ಎಚ್ಚರಿಕೆ ನೀಡಿದ್ದಾರೆ.

ಮೇ ತಿಂಗಳಲ್ಲಿ ಆರು ನಿಲ್ದಾಣಗಳು ಓಪನ್?

ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುವ 21.25 ಕಿ.ಮೀ ವ್ಯಾಪ್ತಿಯ ಈ ಪಿಂಕ್ ಲೈನ್ ಮಾರ್ಗದಲ್ಲಿ ಒಟ್ಟು 18 ನಿಲ್ದಾಣಗಳಿವೆ. ಇದರಲ್ಲಿ 6 ಎಲಿವೇಟೆಡ್ ಮತ್ತು 12 ಅಂಡರ್​​ಗ್ರೌಂಡ್ ನಿಲ್ದಾಣಗಳಿವೆ. ಬರುವ ಮೇ ತಿಂಗಳಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 6 ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಬಿಎಂಆರ್‌ಸಿಎಲ್ ಸಿದ್ಧತೆ ಮಾಡಿಕೊಂಡಿದೆ. ಉಳಿದ 13.76 ಕಿ.ಮೀ ಭೂಗತ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು, ಈ ವರ್ಷದ ಅಂತ್ಯಕ್ಕೆ ಪೂರ್ಣ ಮಾರ್ಗ ಉದ್ಘಾಟನೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಪಿಂಕ್ ಲೈನ್ ಹಳಿ ಮೇಲೆ ಆರ್‌ಡಿಎಸ್‌ಒ ಪರೀಕ್ಷೆ ಆರಂಭ!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶನಿ ಕಾಟ ನಿವಾರಣೆಗೆ ಅತ್ಯಂತ ಸರಳ ಮಾರ್ಗ ಯಾವುದು? ಇಲ್ಲಿದೆ ಮಾಹಿತಿ – Kannada News | Simple Daily Practice to Overcome Shani Dosha

ಜ್ಯೋತಿಷ್ಯದಲ್ಲಿ ಶನಿ ಗ್ರಹಕ್ಕೆ ಮಹತ್ವದ ಸ್ಥಾನವಿದೆ. ಇದನ್ನು ಕರ್ಮ ಫಲದಾತ ಎಂದು ಪರಿಗಣಿಸಲಾಗುತ್ತದೆ. ಸಾಡೆ ಸಾತಿ, ಅರ್ಧಾಷ್ಟಮ ಶನಿ, ಪಂಚಮ ಶನಿ, ಅಷ್ಟಮ ಶನಿ ಮುಂತಾದ ಅವಧಿಗಳಲ್ಲಿ ಶನಿ ಪ್ರಭಾವ ಹೆಚ್ಚಾಗಿ, ಕಷ್ಟಗಳು ಎದುರಾಗಬಹುದು. ಈ ಸಮಸ್ಯೆಗಳಿಂದ ಹೊರಬರಲು ಸಾಮಾನ್ಯವಾಗಿ ಎಳ್ಳು ದಾನ, ಎಳ್ಳೆಣ್ಣೆ ದೀಪ, ಕಪ್ಪು ವಸ್ತ್ರಗಳಂತಹ ಪರಿಹಾರಗಳನ್ನು ಅನುಸರಿಸಲಾಗುತ್ತದೆ. ಆದರೆ ಡಾ. ಬಸವರಾಜ ಗುರೂಜಿ ಯಾವುದೇ ಖರ್ಚಿಲ್ಲದೆ, ಅತ್ಯಂತ ಸರಳವಾದ ಮತ್ತು ಪರಿಣಾಮಕಾರಿ ವಿಧಾನವನ್ನು ವಿವರಿಸಿದ್ದಾರೆ. ಪ್ರತಿದಿನ ಬೆಳಿಗ್ಗೆ ಅಥವಾ ಸೂರ್ಯಾಸ್ತದ ಸಮಯದಲ್ಲಿ, ಚಪ್ಪಲಿ ಹಾಕದೆ, ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖ ಮಾಡಿ ಸುಮಾರು ಅರ್ಧ ಘಂಟೆ ಕಾಲ ನಡೆಯುವ ಅಭ್ಯಾಸವು ಶನಿಯ ಅಶುಭ ಪ್ರಭಾವವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗಿದೆ. ಇದರಿಂದ ವ್ಯಾಪಾರ ವೃದ್ಧಿ, ಉತ್ತಮ ಆರೋಗ್ಯ, ಅಪವಾದಗಳಿಂದ ಮುಕ್ತಿ, ಕಾನೂನು ವಿಷಯಗಳಲ್ಲಿ ಜಯ, ರಾಜಕೀಯ ಪ್ರಗತಿ ಹಾಗೂ ಕುಟುಂಬದಲ್ಲಿ ಸಾಮರಸ್ಯ ಹೆಚ್ಚಲಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version