ನೆಟ್ ರನ್ ರೇಟ್ ಸಮಗೊಂಡರೆ ಸೆಮಿಫೈನಲ್​ಗೇರುವುದು ಯಾರು? – Kannada News | What will happen if the net run rate of two teams is tied in t20 World Cup 2026?

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವೇ ಮಳೆಗೆ ಆಹುತಿಯಾಗಿದೆ. ಕೊಲಂಬೊದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯವನ್ನು ರದ್ದು ಮಾಡಲಾಗಿದೆ. ಇನ್ನು ಪಂದ್ಯ ರದ್ದಾಗಿರುವ ಕಾರಣ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗಿದೆ.

ಇತ್ತ ಉಭಯ ತಂಡಗಳು ಒಂದೊಂದು ಅಂಕ ಪಡೆದಿರುವ ಕಾರಣ ಮುಂದಿನ ಎರಡು ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಸೆಮಿಫೈನಲ್​ಗೇರಬಹುದು. ಒಂದು ವೇಳೆ ಗ್ರೂಪ್ ಮುಂದಿನ ಪಂದ್ಯಗಳು ಕೂಡ ಮಳೆಗೆ ಆಹುತಿಯಾಗಿ ಎಲ್ಲಾ ತಂಡಗಳು ಸಮವಾದ ಅಂಕಳನ್ನು ಪಡೆದರೆ ಯಾರಿಗೆ ಚಾನ್ಸ್ ಎಂಬ ಪ್ರಶ್ನೆ ಮೂಡುವುದು ಸಹಜ.

ಈ ಪ್ರಶ್ನೆಗೆ ಸಾಮಾನ್ಯವಾಗಿ ಸಿಗುವ ಉತ್ತರ ನೆಟ್ ರನ್ ರೇಟ್. ಅಂದರೆ ಅಂಕ ಪಟ್ಟಿಯಲ್ಲಿ ಎರಡಕ್ಕಿಂತ ಹೆಚ್ಚಿನ ತಂಡಗಳು ಸಮನಾದ ಅಂಕಗಳನ್ನು ಪಡೆದುಕೊಂಡಿದ್ದರೆ ಯಾವ ತಂಡ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರುತ್ತವೆಯೋ ಆ ತಂಡವು ಮುಂದಿನ ಹಂತಕ್ಕೇರಲಿದೆ.  ಒಂದು ವೇಳೆ ಅಂಕಗಳೊಂದಿಗೆ ನೆಟ್ ರನ್ ರೇಟ್ ಕೂಡ ಸಮವಾಗಿದ್ದರೆ? ಈ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ…

  • ಗೆಲುವಿನ ಲೆಕ್ಕಾಚಾರ: ಪಾಯಿಂಟ್ಸ್ ಮತ್ತು ನೆಟ್ ರನ್ ರೇಟ್ ಎರಡೂ ಸಮವಾಗಿದ್ದಾಗ, ಟೂರ್ನಮೆಂಟ್‌ನಲ್ಲಿ ಯಾರು ಹೆಚ್ಚು ಪಂದ್ಯಗಳನ್ನು ಗೆದ್ದಿದ್ದಾರೋ ಆ ತಂಡಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ.
  • ಹೆಡ್-ಟು-ಹೆಡ್: ಟೂರ್ನಿಯಲ್ಲಿ ಉಭಯ ತಂಡಗಳ ಗೆಲುವು ಕೂಡ ಸಮನಾಗಿದ್ದರೆ, ಟೈ ಆಗಿರುವ ಆ ಎರಡು ತಂಡಗಳು ಲೀಗ್ ಹಂತದಲ್ಲಿ ಪರಸ್ಪರ ಮುಖಾಮುಖಿಯಾದಾಗ ಯಾರು ಹೆಚ್ಚು ಗೆದ್ದಿದ್ದರು ಎಂಬುದನ್ನು ನೋಡಲಾಗುತ್ತದೆ. ಹೀಗೆ ಪರಸ್ಪರ ಮುಖಾಮುಖಿಯಲ್ಲಿ ಹೆಚ್ಚು ಗೆದ್ದಿರುವ ತಂಡ ಮುಂದಿನ ಹಂತಕ್ಕೇರುತ್ತದೆ.
  • ಐಸಿಸಿ ಶ್ರೇಯಾಂಕ: ಅಂತರಾಷ್ಟ್ರೀಯ ಪಂದ್ಯಗಳಲ್ಲಿ (ವಿಶ್ವಕಪ್‌ನಂತಹ ಟೂರ್ನಿಗಳಲ್ಲಿ), ಎಲ್ಲವೂ ಸಮನಾದಾಗ ಪಂದ್ಯಾವಳಿ ಆರಂಭಕ್ಕೂ ಮೊದಲು ಇದ್ದ ICC ಟೀಮ್ ರ‍್ಯಾಂಕಿಂಗ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂದರೆ ಗೆಲುವು, ನೆಟ್ ರನ್ ರೇಟ್, ಹೆಡ್ ಟು ಹೆಡ್ ಎಲ್ಲವೂ ಸಮವಾಗಿದ್ದರೆ ಈ ವೇಳೆ ಈ ಐಸಿಸಿ ರ್ಯಾಂಕಿಂಗ್​ನಲ್ಲಿ ಯಾವ ತಂಡ ಮೇಲಿರುತ್ತದೆಯೋ ಆ ತಂಡ ಮುಂದಿನ ಹಂತಕ್ಕೇರಲಿದೆ.
  • ಹೆಚ್ಚು ವಿಕೆಟ್ ಲೆಕ್ಕಾಚಾರ: ಕೆಲವು ಟೂರ್ನಿಗಳಲ್ಲಿ (ಉದಾಹರಣೆಗೆ IPL), ಮೇಲಿನ ಹಂತಗಳಲ್ಲೂ ಫಲಿತಾಂಶ ಸಿಗದಿದ್ದರೆ, ಇಡೀ ಟೂರ್ನಿಯಲ್ಲಿ ಯಾವ ತಂಡ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದೆ ಎಂದು ನೋಡಲಾಗುತ್ತದೆ. ಈ ಮೂಲಕ ಮುಂದಿನ ಹಂತಕ್ಕೇರುವುದನ್ನು ನಿರ್ಧರಿಸಲಾಗುತ್ತದೆ.

ಅಂದರೆ ಐಸಿಸಿ ಟೂರ್ನಿಗಳಲ್ಲಿ ಪಾಯಿಂಟ್ಸ್, ಗೆಲುವು, ನೆಟ್ ರನ್ ರೇಟ್, ಹೆಡ್ ಟು ಹೆಡ್ ಎಲ್ಲವೂ ಸಮವಾಗಿದ್ದರೂ ತಂಡಗಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲು ಕೊನೆಗೆ ಐಸಿಸಿ ತಂಡಗಳ ರ್ಯಾಂಕಿಂಗ್ ಅನ್ನು ಬಳಸಲಾಗುತ್ತದೆ. ಹೀಗಾಗಿ ಪ್ರಸ್ತುತ ಟೂರ್ನಿಯಲ್ಲಿ ತಂಡಗಳ ಅಂಕಗಳು, ಗೆಲುವು, ನೆಟ್ ರನ್​ ರೇಟ್ ಎಲ್ಲವೂ ಸಮವಾದರೂ ಸೂಪರ್-8 ಸುತ್ತಿನಿಂದ 4 ತಂಡಗಳು ಮುಂದಿನ ಹಂತಕ್ಕೇರುವುದು ಖಚಿತ.

Source link

ಪ್ರತ್ಯೇಕ ಘಟನೆ: ರಸ್ತೆ ಅಪಘಾತದಲ್ಲಿ ಮೂವರು ಸಾವು; ಮಾಜಿ ಶಾಸಕ ಸುರೇಶ್ ಗೌಡರಿಗೆ ಗಾಯ – Kannada News | Karnataka Road Accidents: 3 Dead, Ex MLA Suresh Gowda Injured in Separate Crashes

ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬಲಿImage Credit source: Tv9 Kannada

ಚಿತ್ರದುರ್ಗ/ ಮಂಡ್ಯ, ಫೆಬ್ರವರಿ 22: ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬಲಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಕೆಟ್ಟಿದ್ದರಿಂದ ರಿಪೇರಿಗೆಂದು ರಸ್ತೆ ಬದಿ ನಾಲ್ವರು ನಿಂತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ಅಪಘಾತದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೈಕ್​​ಗಳ ಮುಖಾಮುಖಿ ಡಿಕ್ಕಿ: ಓರ್ವ ಸಾವು

ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ 2 ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ. ದಾಸಗೊಂಡನಹಳ್ಳಿಯ ನರಸಿಂಹಪ್ಪ(67) ಮೃತರಾಗಿದ್ದು, ಗಾಯಗೊಂಡ ಮತ್ತೋರ್ವನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮದುವೆ ಮುಗಿಸಿಕೊಂಡು ಮನೆಗೆ ಹೋಗ್ತಿದ್ದ ನರಸಿಂಹಪ್ಪಗೆ ಎದುರಿನಿಂದ ಬಂದ ಬೈಕ್​​ ಡಿಕ್ಕಿಯಾಗಿದ್ದು, ತೀವ್ರ ರಕ್ತ ಸಾವ್ರದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಫೆ.20ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್​ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ

ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ

ಅಪಘಾತದಲ್ಲಿ ಜಖಂ ಆಗಿರುವ ಕಾರು

ಪಕ್ಷದ ಕಾರ್ಯಕರ್ತರ ಮದುವೆಗೆಂದು ಮಂಡ್ಯ ಜಿಲ್ಲೆ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ  ಸುರೇಶ್ ಗೌಡ ಪ್ರಯಾಣಿಸುತ್ತಿದ್ದ ಕಾರು ಮಂಡ್ಯದ ಬೊಂತೆಕೊಪ್ಪಲು ಸಮೀಪ ನಿನ್ನೆ ರಾತ್ರಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಮಾಜಿ ಶಾಸಕರು ಪ್ರಾಣಾಪಾಯದಿಂದ ಪಾರಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ‌ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ಭಾಗಶಃ ಜಖಂಗೊಂಡಿದ್ದು, ಸುರೇಶ್ ಗೌಡ ಕೈಗೆ ಪೆಟ್ಟಾಗಿದೆ. ಚಾಲಕನಿಗೂ ಸಣ್ಣಪುಟ್ಟ ಗಾಯಗಲಾಗಿದ್ದು, ತಕ್ಷಣ ಗನ್​ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ: ಬೆಂಬಲಿಗರಿಂದ ಹೈಡ್ರಾಮಾ – Kannada News | MLA Chandru Lamani Trapped by Lokayukta in Bribe Case: Supporters Create High Drama

ಗದಗ, ಫೆಬ್ರವರಿ 22: 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ಕರೆತರುವಾಗ ಬೆಂಬಲಿಗರು ಲಕ್ಷ್ಮೇಶ್ವರದಲ್ಲಿ ವಾಹನ ಅಡ್ಡಗಟ್ಟಿ ತೀವ್ರ ಹೈಡ್ರಾಮಾ ನಡೆಸಿದ್ದಾರೆ. ಶಾಸಕರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನವನ್ನು ಬೆಂಬಲಿಗರು ತಡೆಯಲು ಯತ್ನಿಸಿದ್ದು, ಪರಿಸ್ಥಿತಿ ಕೆಲಕಾಲ ಉದ್ವಿಗ್ನಗೊಂಡಿತ್ತು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ ಪ್ರಸಂಗ ನಡೆದಿದೆ. ಈ ವೇಳೆ, ಮಾಧ್ಯಮದವರು ಶಾಸಕ ಚಂದ್ರು ಲಮಾಣಿ ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದರು. ಆದರೆ, ಶಾಸಕರು ಯಾವುದೇ ಹೇಳಿಕೆ ನೀಡಲಿಲ್ಲ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಒಂದು ಪಾಯಿಂಟ್ ಸಿಕ್ಕಿರುವುದೇ ಪಾಕಿಸ್ತಾನ್ ಪಾಲಿಗೆ ಪ್ಲಸ್ ಪಾಯಿಂಟ್ – Kannada News | How Can Pakistan Qualify For T20 World Cup 2026 Semi Final

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಭಾರೀ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ಪಂದ್ಯ ರದ್ದಾಗಿರುವ ಕಾರಣ ಉಭಯ ತಂಡಗಳು ಒಂದೊಂದು ಪಾಯಿಂಟ್ ಹಂಚಿಕೊಂಡಿದೆ. ಹೀಗೆ ಸಿಕ್ಕ ಒಂದು ಪಾಯಿಂಟ್ ಪಾಕಿಸ್ತಾನ್ ಪಾಲಿಗೆ ಪ್ಲಸ್ ಪಾಯಿಂಟ್ ಎಂಬುದೇ ವಿಶೇಷ.

ಏಕೆಂದರೆ ಸೂಪರ್-8 ಸುತ್ತಿನ ಗ್ರೂಪ್-2 ನಲ್ಲಿರುವ ಕಾಣಿಸಿಕೊಂಡಿರುವ ನ್ಯೂಝಿಲೆಂಡ್, ಇಂಗ್ಲೆಂಡ್, ಶ್ರೀಲಂಕಾ ತಂಡಗಳಿಗೆ ಹೋಲಿಸಿದರೆ ಪಾಕ್ ತಂಡವು ತುಂಬಾ ದುರ್ಬಲ. ಅದರಲ್ಲೂ ಪಾಕಿಸ್ತಾನ್ ವಿರುದ್ಧ ನ್ಯೂಝಿಲೆಂಡ್ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿತ್ತು. ಆದರೀಗ ಮ್ಯಾಚ್ ರದ್ದಾದ ಕಾರಣ ಪಾಕಿಸ್ತಾನ್ ತಂಡಕ್ಕೆ ಒಂದು ಪಾಯಿಂಟ್ ಲಭಿಸಿದೆ.

ಈ ಒಂದು ಪಾಯಿಂಟ್​ನೊಂದಿಗೆ ಪಾಕಿಸ್ತಾನ್ ತಂಡವು ಸೆಮಿಫೈನಲ್​ಗೇರಬಹುದು. ಆದರೆ ಅದಕ್ಕೂ ಮುನ್ನ ಇಂಗ್ಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ಜಯ ಸಾಧಿಸಬೇಕು.

  • ಪಾಕಿಸ್ತಾನ್ ತನ್ನ ಮುಂದಿನ ಎರಡೂ ಪಂದ್ಯಗಳನ್ನು ಗೆದ್ದರೆ ನೇರವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಏಕೆಂದರೆ ಈ ಎರಡು ಗೆಲುವಿನೊಂದಿಗೆ ಪಾಕ್ ತಂಡ ಒಟ್ಟು ಪಾಯಿಂಟ್ಸ್ 5 ಕ್ಕೇರಲಿದೆ.
  • ಒಂದು ಪಂದ್ಯ ಸೋತರೆ, ಇತರ ತಂಡಗಳ ಫಲಿತಾಂಶ ಮತ್ತು ನೆಟ್ ರನ್ ರೇಟ್ (NRR) ಮೇಲೆ ಅವಲಂಬಿತವಾಗಬೇಕಾಗುತ್ತದೆ.
  • ಒಂದೊಮ್ಮೆ ಮುಂದಿನ ಎರಡೂ ಪಂದ್ಯಗಳಲ್ಲಿ ಸೋತರೆ ಮಾತ್ರ ಅವರು ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದ್ದಾರೆ.

ಅಂದರೆ ಪಾಕಿಸ್ತಾನ್ ತಂಡವು ಮುಂದಿನ ಎರಡು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಒಟ್ಟು 5 ಅಂಕಗಳನ್ನು ಪಡೆದು ಸೆಮಿಫೈನಲ್ ಹಾದಿಯನ್ನು ಸುಗಮಗೊಳಿಸಬಹುದು.

ಇತ್ತ ಪಾಕ್ ತಂಡ ಶ್ರೀಲಂಕಾ ಹಾಗೂ ಇಂಗ್ಲೆಂಡ್ ತಂಡಗಳಿಗೆ ಸೋಲುಣಿಸಿದರೆ, ಉಳಿದ ಪಂದ್ಯಗಳನ್ನು ಗೆದ್ದರೂ ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು 5 ಪಾಯಿಂಟ್ಸ್ ಕಲೆಹಾಕಲು ಸಾಧ್ಯವಾಗುವುದಿಲ್ಲ.

ಅತ್ತ ನ್ಯೂಝಿಲೆಂಡ್ ಕೂಡ ಶ್ರೀಲಂಕಾ ಮತ್ತು ಇಂಗ್ಲೆಂಡ್ ವಿರುದ್ಧ ಗೆದ್ದರೆ 5 ಪಾಯಿಂಟ್ಸ್ ಗಳಿಸಿ ಸೆಮಿಫೈನಲ್​ಗೇರಲು ಉತ್ತಮ ಅವಕಾಶವಿದೆ.

ಅಂದರೆ ಇಲ್ಲಿ ಇಂಗ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳು 6 ಅಂಕಗಳನ್ನು ಕಲೆಹಾಕಿದರೆ ಮಾತ್ರ ನೇರವಾಗಿ ಸೆಮಿಫೈನಲ್​ಗೇರಬಹುದು. ಅದೇ ಮೊದಲ ಪಂದ್ಯದ ರದ್ದತಿಯಿಂದಾಗಿ ನ್ಯೂಝಿಲೆಂಡ್ ಮತ್ತು ಪಾಕಿಸ್ತಾನ್ ಮುಂದಿನ ಎರಡು ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೆ 5 ಅಂಕಗಳೊಂದಿಗೆ ಸೆಮಿಫೈನಲ್​ ಆಡುವುದನ್ನು ಖಚಿತಪಡಿಸಿಕೊಳ್ಳಬಹುದು.

ಒಂದು ವೇಳೆ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಂದಿನ 2 ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ ಶ್ರೀಲಂಕಾ ಮತ್ತು ಇಂಗ್ಲೆಂಡ್​ಗೆ 4 ಅಂಕಗಳೊಂದಿಗೆ ಸೆಮಿಫೈನಲ್​ಗೇರುವ ಅವಕಾಶ ದೊರೆಯಲಿದೆ.

ಆದರೆ ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಶ್ರೀಲಂಕಾ ಮತ್ತು ಇಂಗ್ಲೆಂಡ್ ಮುಖಾಮುಖಿಯಲ್ಲಿ ಒಂದು ಟೀಮ್ ಸೋಲುತ್ತೆ ಎಂಬುದು. ಇದರಿಂದ ಈ ಎರಡು ಟೀಮ್​ಗಳಲ್ಲಿ ಒಂದು ತಂಡಕ್ಕೆ ಕೇವಲ 4 ಅಂಕಗಳನ್ನು ಮಾತ್ರ ಸಾಧಿಸಲು ಸಾಧ್ಯವಾಗಲಿದೆ.

ಇನ್ನೂ ಸರಳವಾಗಿ ಹೇಳಬೇಕೆಂದರೆ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಗೆದ್ದು, ಇಂಗ್ಲೆಂಡ್ ವಿರುದ್ಧ ನ್ಯೂಝಿಲೆಂಡ್ ಗೆದ್ದರೆ ಪಾಕಿಸ್ತಾನ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿ ಸೆಮಿಫೈನಲ್​ ಅನ್ನು ಖಚಿತಪಡಿಸಿಕೊಳ್ಳಬಹುದು. ಏಕೆಂದರೆ ಇಂಗ್ಲೆಂಡ್ ಮತ್ತು ಶ್ರೀಲಂಕಾ ಒಂದೊಂದು ಪಂದ್ಯಗಳನ್ನು ಸೋತರೆ ಉಳಿದ 2 ಮ್ಯಾಚ್​ಗಳ ಮೂಲಕ ಕೇವಲ 4 ಅಂಕಗಳನ್ನು ಮಾತ್ತ ಪಡೆಯಬಹುದು.

ಇದನ್ನೂ ಓದಿ: ಸ್ಮೃತಿ ಮಂಧಾನ ಆರ್ಭಟಕ್ಕೆ ಬಾಬರ್ ಆಝಂ ವಿಶ್ವ ದಾಖಲೆಯೇ ಶೇಕಿಂಗ್

ಇತ್ತ ಮುಂದಿನ ಎರಡು ಪಂದ್ಯಗಳಲ್ಲೂ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್​ಗಳು ಜಯ ಸಾಧಿಸಿದರೆ ಒಟ್ಟು 5 ಅಂಕಗಳನ್ನು ಪಡೆಯುವ ಮೂಲಕ ಶ್ರೀಲಂಕಾ ಮತ್ತು ಇಂಗ್ಲೆಂಡ್ ತಂಡಗಳನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ಮೂಲಕ ಸೆಮಿಫೈನಲ್​ಗೆ ಎಂಟ್ರಿ ಕೊಡಬಹುದು.

Source link

ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ – Kannada News | Gilli Nata and Ashwini Gowda attend Hayagrriva movie trailer launch event

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಸ್ಪರ್ಧಿಗಳ ಹವಾ ಕಡಿಮೆ ಆಗಿಲ್ಲ. ಹಲವು ಕಾರ್ಯಕ್ರಮಗಳಿಗೆ ಅವರು ಅತಿಥಿಗಳಾಗಿ ತೆರಳುತ್ತಿದ್ದಾರೆ. ಮಂಡ್ಯದಲ್ಲಿ ‘ಹಯಗ್ರೀವ’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ನಡೆದಿದೆ. ಆ ವೇದಿಕೆಯಲ್ಲಿ ಅಶ್ವಿನಿ ಗೌಡ (Ashwini Gowda) ಮತ್ತು ಗಿಲ್ಲಿ ನಟ ಅವರ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ‘ಈಗ ನಮ್ಮ ಅತ್ತೆ ಮಗಳು ಮಾತಾಡುತ್ತಾರೆ’ ಎಂದು ಗಿಲ್ಲಿ ನಟ ಅವರು ಅಶ್ವಿನಿಯ ಕಾಲೆಳೆದರು. ‘ಬಿಗ್ ಬಾಸ್ ಬಳಿಕ ಮೊದಲ ಬಾರಿ ಮಾವನ ಮಗನ ಜೊತೆ ವೇದಿಕೆ ಹಂಚಿಕೊಳ್ಳುತ್ತಾ ಇದ್ದೇನೆ. ಖುಷಿ ಆಗುತ್ತಿದೆ. ಹಯಗ್ರೀವ ಸಿನಿಮಾಗೆ ನಿಮ್ಮೆಲ್ಲರ ಪ್ರೀತಿ, ಆಶೀರ್ವಾದ ಇರಲಿ’ ಎಂದು ಅಶ್ವಿನಿ ಗೌಡ ಅವರು ಹೇಳಿದರು. ಮಂಡ್ಯ ಜನರ ಪ್ರೀತಿಗೆ ಗಿಲ್ಲಿ ನಟ (Gilli Nata) ಅವರು ಧನ್ಯವಾದ ತಿಳಿಸಿದರು. ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ವೇಳೆ ಮಳೆ ಬಂದಿದ್ದು, ಅದನ್ನು ಶುಭ ಸೂಚನೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru Air Quality: ಶಿವಮೊಗ್ಗದಲ್ಲಿ ಕುಸಿಯುತ್ತಲೇ ಇದೆ ವಾಯುಗುಣಮಟ್ಟ! – Kannada News | Bangalore Air Pollution Crisis: Shivamogga’s Air quality is getting worse

ಶಿವಮೊಗ್ಗದಲ್ಲಿ ಕುಸಿಯುತ್ತಲೇ ಇದೆ ವಾಯುಗುಣಮಟ್ಟ!

ಬೆಂಗಳೂರು, ಫೆಬ್ರವರಿ 22: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಶಿವಮೊಗ್ಗ, ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಶಿವಮೊಗ್ಗದ AQI ಇನ್ನಷ್ಟು ಹದಗೆಟ್ಟಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 125ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಶಿವಮೊಗ್ಗದ ಏರ್ ಕ್ವಾಲಿಟಿ 176 ಆಗಿದೆ. ಹಲವು ದಿನಗಳಿಂದ ವಿಪರೀತ ಏರಿಕೆ ಕಾಣುತ್ತಿರುವ ಶಿವಮೊಗ್ಗದ ಏರ್ ಕ್ವಾಲಿಟಿ ಇಂದು 200ರ ಗಡಿ ತಲುಪಿರುವುದು ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –125
  • ಮಂಗಳೂರು-150
  • ಮೈಸೂರು –137
  • ಬೆಳಗಾವಿ – 157
  • ಕಲಬುರ್ಗಿ-126
  • ಶಿವಮೊಗ್ಗ – 176
  • ಬಳ್ಳಾರಿ – 114
  • ಹುಬ್ಬಳ್ಳಿ- 151
  • ಉಡುಪಿ –150
  • ವಿಜಯಪುರ –121

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸ್ಮೃತಿ ಮಂಧಾನ ಆರ್ಭಟಕ್ಕೆ ಬಾಬರ್ ಆಝಂ ವಿಶ್ವ ದಾಖಲೆಯೇ ಶೇಕಿಂಗ್ – Kannada News | Smriti Mandhana is rapidly closing the gap on Babar Azam’s total T20I runs

ಇದೀಗ ಸ್ಮೃತಿ ಮಂಧಾನ ಅವರ ಮುಂದಿರುವುದು ಪಾಕಿಸ್ತಾನದ ಬಾಬರ್ ಆಝಂ. ಅಂದರೆ ಪುರುಷರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಬಾಬರ್ ಅಗ್ರಸ್ಥಾನದಲ್ಲಿದ್ದು, ಈವರೆಗೆ 135 ಇನಿಂಗ್ಸ್​ಗಳ ಮೂಲಕ 4571 ರನ್​ ಕಲೆಹಾಕಿದ್ದಾರೆ.

Source link

ಮದುವೆಗೂ ಮುನ್ನ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಗಡಿಬಿಡಿ; ವಿಡಿಯೋ ವೈರಲ್ – Kannada News | Rashmika Mandanna Vijay Deverakonda seen in a hurry ahead of marriage

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಸಿನಿಮಾ ಕೆಲಸಗಳನ್ನು ಬದಿಗಿಟ್ಟು, ಮದುವೆ (Rashmika Mandanna Marriage) ತಯಾರಿಯಲ್ಲಿ ಅವರಿಬ್ಬರು ತೊಡಗಿಕೊಂಡಿದ್ದಾರೆ. ಸದ್ಯಕ್ಕಂತೂ ಸಖತ್ ಗಡಿಬಿಡಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋ ವೈರಲ್ ಆಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ವಿವಾಹ ನಡೆಯಲಿದೆ. ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ. ಹಾಗಿದ್ದರೂ ಕೂಡ ಅವರು ಸಾರ್ವಜನಿಕವಾಗಿ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಕೇವಲ ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯಲಿದೆ.

ಹಲವು ಸಿನಿಮಾಗಳನ್ನು ಒಪ್ಪಿಕೊಂಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬ್ರೇಕ್ ತೆಗೆದುಕೊಂಡಿದ್ದಾರೆ. ವಿಜಯ್ ದೇವರಕೊಂಡ ಕೂಡ ಮದುವೆ ಸಲುವಾಗಿ ಬಿಡುವು ಮಾಡಿಕೊಂಡಿದ್ದಾರೆ. ಅವರಿಬ್ಬರು ಈಗ ಹೈದರಾಬಾದ್​ನಿಂದ ಬೇರೆ ಕಡೆಗೆ ಹಾರಿದ್ದಾರೆ. ವಿಮಾನ ನಿಲ್ದಾಣಕ್ಕೆ ಪ್ರತ್ಯೇಕವಾಗಿ ಬಂದ ಅವರು ಪಾಪಪಾಜಿಗಳ ಕ್ಯಾಮೆರಾದಲ್ಲಿ ಸೆರೆ ಆಗಿದ್ದಾರೆ.

ಸಾಮಾನ್ಯವಾಗಿ ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳನ್ನು ನೋಡಿದಾಗ ರಶ್ಮಿಕಾ ಮಂದಣ್ಣ ಅವರು ಪೋಸ್ ನೀಡುತ್ತಾರೆ. ಸಾಧ್ಯವಾದರೆ ಒಂದೆರಡು ಮಾತನಾಡುತ್ತಾರೆ. ವಿಜಯ್ ದೇವರಕೊಂಡ ಕೂಡ ಹಾಗೆಯೇ ಮಾಡುತ್ತಾರೆ. ಆದರೆ ಈ ಬಾರಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ನೀಡಲು ಕೂಡ ಅವರು ಒಂದು ಕ್ಷಣ ನಿಂತಿಲ್ಲ. ಸಖತ್ ಗಡಿಬಿಡಿಯಲ್ಲಿ ಅವರು ಮುಂದೆ ಸಾಗಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ವಿವಾಹ ಆಗುತ್ತಿರೋ ಹೋಟೆಲ್​​ ಸಖತ್ ದುಬಾರಿ; ಇಲ್ಲಿದೆ ದರ ವಿವರ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಇದೆ. ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಯ ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಕೆಲಸ ಮಾಡಿದ್ದಾರೆ. ವಿಜಯ್ ದೇವರಕೊಂಡ ಕೂಡ ತೆಲುಗು ಮತ್ತು ಬಾಲಿವುಡ್​​ನಲ್ಲಿ ಫೇಮಸ್ ಆಗಿದ್ದಾರೆ. ಈ ಜೋಡಿಯ ಮದುವೆಗೆ ಯಾರೆಲ್ಲ ಬರುತ್ತಾರೆ ಎಂಬುದನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ಹಾಸನ, ಕೊಡಗು ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! – Kannada News | Bengaluru temperature: Light rain and Thunderstorm in Karnataka

ಹಾಸನ, ಕೊಡಗು ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇಂದು ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಎಲ್ಲೆಲ್ಲಿ ಮಳೆ ?

ದಕ್ಷಿಣ ಕನ್ನಡ , ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡಗು ಸಹಿತ ಸಾಧಾರಣ ಮಳೆಯಾಗಬಹುದೆಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಗುವ ಸಂಭವವಿದ್ದು, ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಸಮಯದಲ್ಲಿ 30 ರಿಂದ 40 kmph ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ. ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು,ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 18°C ಇದ್ದು, ಗರಿಷ್ಠ 31°C ಇರಲಿದೆ ಎಂದು ಇಲಾಖೆ ತಿಳಿಸಿದೆ. ನಗರದ ತಾಪಮಾನದಲ್ಲಿ ತಕ್ಕಮಟ್ಟಿಗೆ ಸುಧಾರಣೆಯಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

60 ಸಾವಿರದ ಕ್ಯಾಮರಾ ಆರ್ಡರ್​​ ಮಾಡಿದ್ದ ಉದ್ಯಮಿಗೆ ಶಾಕ್​​: ಬಾಕ್ಸ್​​ನಲ್ಲಿದ್ದಿದ್ದು ವಾಷಿಂಗ್​ ಪೌಡರ್​! – Kannada News | Online Shopping Scam: Hubballi Man’s Camera Order Replaced by Washing Powder

ಕ್ಯಾಮರಾ ಬದಲು ಬಂದ ವಾಷಿಂಗ್​​ ಪೌಡರ್​​ ತೋರಿಸುತ್ತಿರುವ ಉದ್ಯಮಿ

ಹುಬ್ಬಳ್ಳಿ, ಫೆಬ್ರವರಿ 22: ಏನೇ ವಸ್ತುಗಳನ್ನ ಖರೀದಿಸಬೇಕು ಅಂದ್ರೂ ಜನ ಅಂಗಡಿಗಳಿಗೆ ಹೋಗುವ ಬದಲು ಮೊಬೈಲ್​​ನಲ್ಲಿಯೇ ವಿವಿಧ ಶಾಪಿಂಗ್​​ ಆ್ಯಪ್​​ಗಳ ಮೂಲಕ ಅವನ್ನು ಆರ್ಡರ್​ ಮಾಡೋದು ಇತ್ತೀಚೆಗೆ ಟ್ರೆಂಡ್​​ ಆಗಿ ಮಾರ್ಪಟ್ಟಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ವಂಚಕರು ವ್ಯವಸ್ಥೆಯ ದುರುಪಯೋಗವನ್ನೂ ದೊಡ್ಡ ಪ್ರಮಾಣದಲ್ಲಿಯೇ ಮಾಡುತ್ತಿದ್ದಾರೆ. ಆರ್ಡರ್​​ ಮಾಡಿರೋದು ಒಂದು ವಸ್ತುವಾದರೆ, ಗ್ರಾಹಕರ ಕೈಗೆ ತಲುಪೋದು ಮತ್ತೊಂದು ವಸ್ತು ಆಗಿರುತ್ತೆ. ಇಂತಹ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇವೆ. ಇದೇ ರೀತಿ ಆನ್​​ಲೈನ್​​ ಮೂಲಕ ಕ್ಯಾಮರಾ ಆರ್ಡರ್​​ ಮಾಡಿದ್ದ ಉದ್ಯಮಿಯೋರ್ವರು ತಮಗೆ ಕಂಪನಿ ಡೆಲಿವರಿ ಮಾಡಿರೋದು ವಾಷಿಂಗ್​ ಪೌಡರ್ ಎಂಬ ಆರೋಪ ಮಾಡಿದ್ದಾರೆ.

ಹೌದು, ಶಾರ್ಜಾದಲ್ಲಿ ನೆಲೆಸಿರುವ ಹುಬ್ಬಳ್ಳಿ ಮೂಲದ ಉದ್ಯಮಿ ಅಲ್ಫ್ರೆಡ್ ಎಂಬವರು ಆತ್ಮೀಯರೊಬ್ಬರಿಗೆ ಉಡುಗೊರೆಯಾಗಿ ನೀಡಲು ಅಮೆಜಾನ್​ನಲ್ಲಿ ಕ್ಯಾಮರಾ ಬುಕ್​​ ಮಾಡಿದ್ದರು. ಅದರಂತೆ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನ ವಿಳಾಸಕ್ಕೆ ನಿನ್ನೆ ಕೊರಿಯರ್​​ ತಲುಪಿದೆ. ಅದನ್ನು ತೆರೆದು ನೋಡಿದಾಗ ಕ್ಯಾಮರಾ ಬದಲು, 2 ಪಾಕೆಟ್ ವಾಷಿಂಗ್ ಪೌಡರ್ ಇರೋದು ಕಂಡಿದೆ. ತಾನು ಆರ್ಡರ್​​ ಮಾಡಿದ್ದು 60,990 ರೂ. ಬೆಲೆಯ ಕ್ಯಾಮರಾ. ಆದರೆ ಅವರು ಕಳುಹಿಸಿರುವ ಈ ವಾಷಿಂಗ್ ಪೌಡರ್ ಪ್ಯಾಕೇಟ್​​ ನೋಡಿ ತನಗೆ ಶಾಕ್​​ ಆಗಿದೆ. ಈ ಬಗ್ಗೆ ಅಮೆಜಾನ್​ಗೆ ದೂರು ನೀಡಿದ್ರೂ ಅವರಿಂದ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದು ಅಲ್ಫ್ರೆಡ್ ಅಲವತ್ತುಕೊಂಡಿದ್ದಾರೆ.

ಇದನ್ನೂ ಓದಿ: ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ; ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ

ಎರಡು ದಿನಗಳ ಹಿಂದೆ ತಾನು ಕ್ಯಾಮರಾ ಅರ್ಡರ್​​ ಮಾಡಿದ್ದೆ. ದುಬೈನಲ್ಲಿಯೂ ತಾನು ಅಮೆಜಾನ್​ ಮೂಲಕ ಅನೇಕ ಬಾರಿ ವಸ್ತುಗಳನ್ನು ಆರ್ಡರ್​​ ಮಾಡಿದ್ದು, ಅಲ್ಲಿ ಒಮ್ಮೆಯೂ ತನಗೆ ಈ ರೀತಿ ಮೋಸ ಆಗಿರಲಿಲ್ಲ. ಆದರೆ ಸ್ನೇಹಿತ ವೈದ್ಯನಿಗಾಗಿ ಪಾಕೆಟ್​​ ಕ್ಯಾಮರಾ ಆರ್ಡರ್​​ ಮಾಡಿದ್ದ ತಾನು ಈ ಬಾರಿ ಮೋಸ ಹೋಗಿದ್ದೇನೆ. ಕೊರಿಯರ್​​ ಬಾಕ್ಸ್​​ ಓಪನ್​​ ಮಾಡುವ ದೃಶ್ಯಗಳನ್ನೂ ತಾನು ಚಿತ್ರೀಕರಿಸಿದ್ದು, ವಂಚನೆಗೆ ಸಾಕ್ಷಿ ಸಮೇತ ಆರೋಪ ಮಾಡುತ್ತಿದ್ದೇನೆ ಎಂದು ಅಲ್ಫ್ರೆಡ್ ತಿಳಿಸಿದ್ದಾರೆ. ಬುಕ್​​ ರಿಲೀಸ್​​ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರ ಸ್ನೇಹಿತ, ಅತಿಥಿಗೆ ಉಡುಗೊರೆ ನೀಡಲೆಂದು ಅಲ್ಫ್ರೆಡ್ ಕ್ಯಾಮರಾ ಆರ್ಡರ್​​ ಮಾಡಿದ್ದರು ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version