ಬೆಂಗಳೂರಿನಲ್ಲಿ 2,384 ಕೋಟಿ ರೂ. ನಕಲಿ ಜಿಎಸ್‌ಟಿ ಜಾಲ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ! – Kannada News | Karnataka Tax Dept Uncovers Massive 2384 Cr Fake ITC Fraud in Bengaluru

ಬೆಂಗಳೂರು, ಮೇ.13: ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯು ರಾಜ್ಯದ ರಾಜಧಾನಿಯಲ್ಲಿ ಭಾರಿ ಪ್ರಮಾಣದ ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ವಂಚನೆ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಸುಮಾರು 2,384 ಕೋಟಿ ರೂ. ಮೊತ್ತದ ಈ ನಕಲಿ ಜಾಲಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ) ಹಾಗೂ ಸೇವಾ ವಿಶ್ಲೇಷಣೆ ಮತ್ತು ಗುಪ್ತಚರ ವಿಭಾಗದ ಅಧಿಕಾರಿಗಳು ಅತ್ಯಂತ ಚಾಣಾಕ್ಷತನದಿಂದ ಈ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಆರೋಪಿಗಳು ನಕಲಿ ಕಂಪನಿಗಳನ್ನು ಸೃಷ್ಟಿಸಿ, ಯಾವುದೇ ಸರಕು ಅಥವಾ ಸೇವೆಗಳ ಪೂರೈಕೆ ಮಾಡದೆಯೇ ಬಿಲ್‌ಗಳನ್ನು ಸೃಷ್ಟಿಸುವ ಮೂಲಕ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದರು.

ಇದನ್ನೂ ಓದಿ: ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ: 1969ರ ಬ್ಯಾಚ್‌ನ ಗುಂಡುಗಳನ್ನು ವಶಪಡಿಸಿಕೊಂಡ ಪೊಲೀಸರು

ನಕಲಿ ಐಟಿಸಿ ಹಗರಣಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆಯು ಈ ವರ್ಷ ತನಿಖೆಯನ್ನು ತೀವ್ರಗೊಳಿಸಿದ್ದು, ಈ ಇಬ್ಬರ ಬಂಧನದೊಂದಿಗೆ ಈ ವರ್ಷ ಒಟ್ಟು ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಕೆಕೆಆರ್ ವಿರುದ್ಧ ಕಣಕ್ಕಿಳಿದು ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ

Source link

ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ, ಜನಾರ್ದನ ರೆಡ್ಡಿ ನಿರಾಳ – Kannada News | Anjanadri Temple Gold Row: hyderabad businessman Donates real Gold clarified By gangavathi tahsildar

ಕೊಪ್ಪಳ, (ಮೇ 13): ಜಿಲ್ಲೆಯ ಅಂಜನಾದ್ರಿಯ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರದ ಆಭರಣಗಳ ಕುರಿತು ಹರಿದಾಡುತ್ತಿದ್ದ ವದಂತಿಗೆ ಕೊನೆಗೂ ತೆರೆ ಬಿದ್ದಿದೆ. ಗಂಗಾವತಿ ಶಾಸಕ‌ ಜನಾರ್ದನರೆಡ್ಡಿ ಆಪ್ತ ಉದ್ಯಮಿ ಮಹೇಶ ರೆಡ್ಡಿ ಅವರು ನೀಡಿದ್ದ ಬಂಗಾರ ನಕಲಿ ಎಂದು ಸುದ್ದಿ ಹರಿದಾಡಿದ್ದು, ಇದರ ಬೆನ್ನಲ್ಲೇ ಕೂಲಂಕಷವಾಗಿ ಪರಿಶೀಲನೆ ಮಾಡಲಾಗಿದೆ. ಈ ವೇಳೆ 1400 ಗ್ರಾಂ ಬಂಗಾರದಲ್ಲಿ 1280 ಗ್ರಾಂ ಬಂಗಾರ ಸಂಪೂರ್ಣ ಅಸಲಿ ಎಂದು ಸಾಬೀತಾಗಿದೆ.

ಉದ್ಯಮಿ ಮಹೇಶ ರೆಡ್ಡಿ ಒಟ್ಟು 1400 ಗ್ರಾಂ ಬಂಗಾರ ಆಭರಣಗಳು ನೀಡಿದ್ದು, ಇದರಲ್ಲಿ 120 ಗ್ರಾಂ ವೇಸ್ಟೇಜ್ ತೆಗೆದು 1280 ಗ್ರಾಂ ಬಂಗಾರ ಸಂಪೂರ್ಣ ಅಸಲಿಯದ್ದು ಎಂದು ವಾಸ್ತುಶಿಲ್ಪಿ ಗುಂಡಾಚಾರಿ ಸ್ಥಪತಿ ತಿಳಿಸಿದ್ದಾರೆ. ಬಳಿಕ ಗಂಗಾವತಿ ತಹಶಿಲ್ದಾರ್, ಎಲ್ಲಾ ಬಂಗಾರವನ್ನು ಸ್ವೀಕಾರ ಮಾಡಿ ಖಜಾನೆಗೆ ಕಳುಹಿಸಿದರು. ಇನ್ನು ಆಪ್ತ ನೀಡಿದ್ದ ಚಿನ್ನ ಅಸಲಿ ಎಂದು ಸಾಬೀತಾಗುತ್ತಿದ್ದಂತಯೇ ಶಾಸಕ‌ ಜನಾರ್ದನರೆಡ್ಡಿ ನಿರಾಳರಾಗಿದ್ದಾರೆ.

ಇದನ್ನೂ ಓದಿ: 2.5 ಕೋಟಿ ರೂ. ಮೌಲ್ಯದ ಆಭರಣದಲ್ಲಿ ಇರೋದು ಬರೀ 28 ಗ್ರಾಂ ಬಂಗಾರ! ಅಂಜನಾದ್ರಿ ದೇಣಿಗೆಯಲ್ಲಿ ಮಹಾ ಗೋಲ್‌ಮಾಲ್?

Source link

ಒಟಿಟಿಗೆ ಬರುತ್ತಿದೆ ‘ಅವತಾರ್ 3’ ಎಲ್ಲಿ ನೋಡಬಹುದು? – Kannada News | Avatar 3 movie to be released on OTT soon here is the details

ಅವತಾರ್’ (Avatar) ಸಿನಿಮಾದ ಮೊದಲ ಭಾಗ 2009 ರಲ್ಲಿ ಬಿಡುಗಡೆ ಆಗಿತ್ತು. ಅಂದರೆ 17 ವರ್ಷದ ಹಿಂದೆ. ಆಗ ಸಿನಿಮಾ ಟಿಕೆಟ್ ದರಗಳು ಈಗಿರುವುದಕ್ಕಿಂತ ಅರ್ಧದಷ್ಟು ಸಹ ಇರಲಿಲ್ಲ. ಆದರೆ ಆಗ ಆ ಸಿನಿಮಾ ಬರೆದಿದ್ದ ಬಾಕ್ಸ್ ಆಫೀಸ್ ದಾಖಲೆಯನ್ನು ಈಗಲೂ ಇನ್ಯಾವ ಸಿನಿಮಾಕ್ಕೂ ಮುರಿಯಲಾಗಿಲ್ಲ. ಈಗಲೂ ಸಹ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಅತಿ ಹೆಚ್ಚು ಹಣ ಬಾಚಿದ ದಾಖಲೆ ಇರುವುದು 2009 ರಲ್ಲಿ ಬಿಡುಗಡೆ ಆಗಿದ್ದ ‘ಅವತಾರ್’ ಹೆಸರಿನಲ್ಲಿ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ‘ಅವತಾರ್’ ಸಿನಿಮಾದ ಮೂರನೇ ಭಾಗವಾದ ‘ಅವತಾರ್: ಫೈರ್ ಆಂಡ್ ಆಶ್’ ಬಿಡುಗಡೆ ಆಯ್ತು. ಸಿನಿಮಾ ನಿರೀಕ್ಷೆಯಂತೆ ಸೂಪರ್ ಹಿಟ್ ಆಯ್ತು. ಇದೀಗ ಈ ಸಿನಿಮಾ ಒಟಿಟಿಗೆ ಬರುತ್ತಿದೆ.

ಜೇಮ್ಸ್ ಕ್ಯಾಮರನ್ ನಿರ್ದೇಶನದ ‘ಅವತಾರ್ 3’ ಸಿನಿಮಾ ಜೂನ್ 24 ರಂದು ಡಿಜಿಟಲ್ ಪ್ಲಾಟ್‌ಫಾರ್ಮ್‌ಗೆ ಬರಲಿದೆ. ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ಗನಲ್ಲಿ ವೀಕ್ಷಿಸಬಹುದಾಗಿದೆ. ನಾವಿ ಜನಗಳ ಕತೆಯನ್ನು ಒಳಗೊಂಡ ಈ ಸಿನಿಮಾ ಅದ್ಧೂರಿ ವಿಎಫ್​​ಎಕ್ಸ್ ಜೊತೆಗೆ ಲೈವ್ ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದ ಮೂಲಕ ಅತ್ಯದ್ಭುತ ದೃಶ್ಯ ವೈಭವವನ್ನು ಒಳಗೊಂಡಿದ್ದು, ಸಖತ್ ಆಕ್ಷನ್ ಜೊತೆಗೆ ಭಾವುಕ ಅಂಶಗಳನ್ನು ಸಹ ಸಿನಿಮಾ ಒಳಗೊಂಡಿದೆ.

ಇದನ್ನೂ ಓದಿ:‘ಅವತಾರ್ 3’ ಬಳಿಕ ಬಾಕ್ಸ್ ಆಫೀಸ್​​ನಲ್ಲಿ ಮುಗ್ಗರಿಸಿದ ಮತ್ತೊಂದು ಹಾಲಿವುಡ್ ಸಿನಿಮಾ

‘ಅವತಾರ್ 3’ ಸಿನಿಮಾವು 2009 ರ ‘ಅವತಾರ್’ ಸಿನಿಮಾದ ಕತೆಯ ಮುಂದುವರೆದ ಭಾಗವಾಗಿದೆ. ನಾವಿ ಜನರ ಮೇಲೆ ಮನುಷ್ಯರ ದಬ್ಬಾಳಿಕೆ ಹಾಗೂ ಪ್ರಕೃತಿ ಮಾತೆಯ ಜೊತೆ ಸೇರಿಕೊಂಡು ಹೇಗೆ ನಾವಿ ಜನರು ಮನುಷ್ಯರನ್ನು ಹಿಮ್ಮೆಟ್ಟಿಸುತ್ತಾರೆ, ತಮ್ಮ ನೆಲವನ್ನು, ಪ್ರಕೃತಿಯನ್ನು ಹೇಗೆ ಉಳಿಸಿಕೊಳ್ಳುತ್ತಾರೆ ಎಂಬುದೇ ‘ಅವತಾರ್’ ಸಿನಿಮಾದ ಎಲ್ಲ ಕತೆಗಳ ಮೂಲ ಧಾತು ಆಗಿದೆ. ‘ಅವತಾರ್ 3’ ಸಿನಿಮಾ ಸಹ ಇದನ್ನೇ ಒಳಗೊಂಡಿದೆ, ಆದರೆ ಕತೆಯಲ್ಲಿ ತುಸು ಭಿನ್ನತೆಗಳು ಇವೆ. ‘ಅವತಾರ್ 3’ ನಲ್ಲಿ ನಾವಿ ರೀತಿಯದ್ದೇ ಆದರೆ ಆಶ್ ಪೀಪಲ್ ಎಂಬ ಬೆಂಕಿಯನ್ನು ಆರಾಧಿಸುವ ಜನರನ್ನು ಪರಿಚಯಿಸಲಾಗಿದ್ದು, ಈ ಜನರು ಮನುಷ್ಯರ ಜೊತೆಗೆ ಸೇರಿ ನಾವಿ ಜನರ ವಿರುದ್ಧ ನಿಂತಿದ್ದಾರೆ.

ಈಗಾಗಲೇ ಚಿತ್ರಮಂದಿರಗಳಲ್ಲಿ 1.4 ಶತಕೋಟಿ ಡಾಲರ್‌ಗಿಂತಲೂ ಹೆಚ್ಚು ಹಣ ಗಳಿಸಿರುವ ಈ ಸಿನಿಮಾ, ಇದೀಗ ಜೂನ್ 24, 2026 ರಂದು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಅದ್ಭುತ ದೃಶ್ಯ ವೈಭವ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಈ ಚಿತ್ರವು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಲಭ್ಯವಿರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಣ್ಣ ಮಳೆಗೂ ಬಯಲಾಯ್ತು ಪಂಚಾಯಿತಿ ಯೋಗ್ಯತೆ: ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ – Kannada News | Karnataka Road Crisis: Chamarajanagar Main Road Turns Filthy, Affecting Mahadeshwara Devotees

ಚಾಮರಾಜನಗರ, ಮೇ.13: ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಮುಖ್ಯರಸ್ತೆಯು ಸಂಜೆ ಸುರಿದ ಸಣ್ಣ ಮಳೆಗೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ರಸ್ತೆಯು ಕೊಳಚೆ ನೀರು ಮತ್ತು ಕಸದಿಂದ ತುಂಬಿ, ಕೊಳಚೆ ಗುಂಡಿಯಂತೆ ಕಾಣಿಸುತ್ತಿದೆ. ಕಾದಳ್ಳಿ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ರಸ್ತೆಯು ಚರಂಡಿ ನೀರು ಮತ್ತು ತ್ಯಾಜ್ಯದಿಂದ ಆವೃತವಾಗಿರುವುದರಿಂದ ಸಾರ್ವಜನಿಕರಿಗೆ, ವಿಶೇಷವಾಗಿ ಮಾದಪ್ಪನ ಭಕ್ತರಿಗೆ ತೀವ್ರ ತೊಂದರೆಯಾಗಿದೆ. ಮಳೆಯ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ, ರಸ್ತೆಯ ಮೇಲೆ ಕಸ ಮತ್ತು ಕೊಳಚೆ ನೀರು ನಿಂತು ದುರ್ವಾಸನೆ ಹರಡುತ್ತಿದೆ. ಈ ಕೆಟ್ಟ ವಾಸನೆಗೆ ಭಕ್ತರು ಕಸಿವಿಸಿಗೊಂಡಿದ್ದಾರೆ. ಪೊದೆಹಳ್ಳಿ ಪಂಚಾಯಿತಿ ವ್ಯಾಪ್ತಿಗೆ ಬರುವ ಈ ರಸ್ತೆಯ ದುಸ್ಥಿತಿಗೆ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಳೆ ಅಷ್ಟೇನೂ ಜೋರಾಗಿ ಸುರಿಯದಿದ್ದರೂ, ರಸ್ತೆಯ ಮೇಲೆ ಈ ಪ್ರಮಾಣದ ಅವಾಂತರ ಸೃಷ್ಟಿಯಾಗಿರುವುದು ನಿರ್ವಹಣೆಯ ಕೊರತೆಯನ್ನು ಎತ್ತಿ ತೋರಿಸುತ್ತದೆ. ಸಾರ್ವಜನಿಕರು ಈ ವಿಷಯವನ್ನು ಶಾಸಕರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತರುವಂತೆ ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಯಸ್ಸಾದವರು ಮನೆಯಲ್ಲಿದ್ದಾರಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆಗಳು ಬರದಂತೆ ಎಚ್ಚರಿಕೆ ವಹಿಸಿ – Kannada News | How To Protect Seniors During Seasonal Changes: Expert Care Tips

ದೇಶದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ನಿರಂತರ ಬದಲಾವಣೆ ಕಾಣಿಸುತ್ತಿದ್ದು, ಇದರ ಪರಿಣಾಮ ಹಿರಿಯರ ಆರೋಗ್ಯದ (Elderly Health) ಮೇಲೆ ಹೆಚ್ಚು ಪರಿಣಾಮ ಬೀಳಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಬೇಸಿಗೆಯ ನಡುವೆ ಮಳೆ, ತಣ್ಣನೆಯ ಗಾಳಿ ಹಾಗೂ ತಾಪಮಾನದಲ್ಲಿ ಏರುಪೇರು ಕಾಣಿಸಿಕೊಳ್ಳುವುದರಿಂದ ದೇಹಕ್ಕೆ ಹೊಸ ಪರಿಸ್ಥಿತಿಗೆ ಹೊಂದಿಕೊಳ್ಳುವುದು ಕಷ್ಟವಾಗಬಹುದು. ವಯಸ್ಸು ಹೆಚ್ಚಾದಂತೆ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ವೈರಲ್ ಸೋಂಕು, ಜ್ವರ, ಶೀತ, ಉಸಿರಾಟದ ತೊಂದರೆ ಮತ್ತು ನೋವುಗಳ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಅದರಲ್ಲಿಯೂ ಮಧುಮೇಹ, ಹೈ ಬಿಪಿ, ಅಸ್ತಮಾ ಅಥವಾ ಹೃದಯ ಸಂಬಂಧಿ ಸಮಸ್ಯೆಗಳಿರುವ ಹಿರಿಯರು ಹೆಚ್ಚು ಜಾಗ್ರತೆ ವಹಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಯಾವ ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಹೇಳುವ ಪ್ರಕಾರ, ಹವಾಮಾನ ಬದಲಾವಣೆಯ ಸಮಯದಲ್ಲಿ ಹಿರಿಯರಲ್ಲಿ ಶೀತ-ಜ್ವರ, ವೈರಲ್ ಇನ್ಫೆಕ್ಷನ್, ಉಸಿರಾಟದ ತೊಂದರೆ, ಸಂಧಿವಾತದ ನೋವು ಹಾಗೂ ದೌರ್ಬಲ್ಯದಂತಹ ಸಮಸ್ಯೆಗಳು ಹೆಚ್ಚಾಗಿ ಕಾಣಿಸಬಹುದು. ಕೆಲವರಲ್ಲಿ ರಕ್ತದೊತ್ತಡ ಏರುಪೇರು, ದೇಹದಲ್ಲಿ ನೀರಿನ ಕೊರತೆ, ಹಸಿವು ಕಡಿಮೆಯಾಗುವುದು ಹಾಗೂ ಹೆಚ್ಚು ಆಯಾಸ ಕಾಣಿಸಬಹುದು. ಹವಾಮಾನದಲ್ಲಿನ ತೀವ್ರ ಬದಲಾವಣೆಗಳಿಂದ ದೇಹದ ರೋಗನಿರೋಧಕ ಶಕ್ತಿ ಕುಂದಿ ಸೋಂಕುಗಳು ಬೇಗ ತಗುಲುವ ಸಾಧ್ಯತೆ ಹೆಚ್ಚುತ್ತದೆ.

ಇದನ್ನೂ ಓದಿ: ಜೆರಿಯಾಟ್ರಿಕ್ ಕಿಟ್ ಎಂದರೇನು? 60 ವರ್ಷ ಮೇಲ್ಪಟ್ಟವರು ಮನೆಯಲ್ಲಿದ್ದರೆ ಈ ಕಿಟ್ ಯಾಕೆ ಮುಖ್ಯ?

ಹಿರಿಯರ ಆರೋಗ್ಯದ ಕಡೆ ಹೇಗೆ ಗಮನ ಕೊಡಬೇಕು?

ಸಾಮಾನ್ಯವಾಗಿ ಹಿರಿಯರು ಹವಾಮಾನಕ್ಕೆ ತಕ್ಕ ಬಟ್ಟೆ ಧರಿಸುವುದು ಮುಖ್ಯ. ಸಾಕಷ್ಟು ನೀರು ಕುಡಿಯುವಂತೆ ನೋಡಿಕೊಳ್ಳಬೇಕು. ಆಹಾರದಲ್ಲಿ ಹಣ್ಣು, ತರಕಾರಿ, ಪ್ರೋಟೀನ್ ಹಾಗೂ ಪೌಷ್ಟಿಕಾಂಶ ಇರುವ ಪದಾರ್ಥಗಳನ್ನು ಸೇರಿಸಬೇಕು. ಮನೆಯೊಳಗಿನ ತಾಪಮಾನ ಸಮತೋಲನದಲ್ಲಿರಬೇಕು ಮತ್ತು ಅತಿಯಾದ ಚಳಿ ಅಥವಾ ಬಿಸಿ ಗಾಳಿಯಿಂದ ದೂರ ಇರುವಂತೆ ನೋಡಿಕೊಳ್ಳಬೇಕು. ಸಮಯಕ್ಕೆ ಸರಿಯಾಗಿ ಔಷಧಿ ತೆಗೆದುಕೊಳ್ಳುವುದು, ಸಾಕಷ್ಟು ವಿಶ್ರಾಂತಿ ಪಡೆಯುವುದು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಕೂಡ ಮುಖ್ಯ. ಕೈ ತೊಳೆಯುವ ಅಭ್ಯಾಸ ಮತ್ತು ಸ್ವಚ್ಛ ಆಹಾರ ಸೇವನೆಯಿಂದ ಸೋಂಕಿನ ಅಪಾಯ ಕಡಿಮೆ ಮಾಡಬಹುದು.

ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು?

ತೀವ್ರ ಜ್ವರ, ಉಸಿರಾಟದ ತೊಂದರೆ, ಎದೆನೋವು, ಅತಿಯಾದ ದೌರ್ಬಲ್ಯ, ತಲೆಸುತ್ತು ಅಥವಾ ಗೊಂದಲದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಸಮಯಕ್ಕೆ ಸರಿಯಾದ ಚಿಕಿತ್ಸೆ ಪಡೆದರೆ ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಮಿಳುನಾಡಿನಲ್ಲಿ 2 ಬಣವಾದ ಎನ್​ಡಿಎ; ಎಐಎಡಿಎಂಕೆಯಿಂದ ಬಂಡಾಯ ನಾಯಕರನ್ನು ಉಚ್ಛಾಟಿಸಿದ ಇಪಿಎಸ್ – Kannada News | AIADMK Leader Palaniswami removes Velumani and Shanmugam from party posts

ಚೆನ್ನೈ, ಮೇ 13: ತಮಿಳುನಾಡಿನಲ್ಲಿ ಒಂದೆಡೆ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಯಾಗಿದೆ. ಇನ್ನೊಂದೆಡೆ ಎಐಎಡಿಎಂಕೆ (AIADMK) ವಿಭಜನೆಯಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಎರಡು ಬಣವಾದಂತೆ ತಮಿಳುನಾಡಿನಲ್ಲಿ ಎಐಎಡಿಎಂಕೆ ಕೂಡ ಇಬ್ಭಾಗವಾಗಿದೆ. ಇಂದು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯ ಸಂದರ್ಭದಲ್ಲಿ 25 ಎಐಎಡಿಎಂಕೆ ಶಾಸಕರು ತಮಿಳುನಾಡು ಮುಖ್ಯಮಂತ್ರಿ ವಿಜಯ್‌ಗೆ ಬೆಂಬಲ ನೀಡಿತ್ತು. ಇದಾದ ನಂತರ ಎಐಎಡಿಎಂಕೆ ನಾಯಕ ಪಳನಿಸ್ವಾಮಿ ಬಂಡಾಯ ನಾಯಕರನ್ನು ವಜಾಗೊಳಿಸಿದ್ದಾರೆ. ಬಂಡಾಯ ನಾಯಕರು ಎಐಎಡಿಎಂಕೆ ನಾಯಕನ ಸ್ಥಾನದಿಂದ ಪಳನಿಸ್ವಾಮಿ ಅವರನ್ನು ಕೆಳಗಿಳಿಸಬೇಕೆಂದು ಪ್ರಯತ್ನಿಸುತ್ತಿದ್ದರೆ ಇನ್ನೊಂದೆಡೆ ಪಳನಿಸ್ವಾಮಿಯೇ ಬಂಡಾಯ ನಾಯಕರನ್ನು ಪಕ್ಷದಿಂದ ವಜಾಗೊಳಿಸುವ ಮೂಲಕ ಶಾಕ್ ನೀಡಿದ್ದಾರೆ.

ಇದೀಗ ತಮಿಳುನಾಡಿನಲ್ಲಿ ಇನ್ನೊಂದು ಗೊಂದಲ ಉಂಟಾಗಿದೆ. ಟಿವಿಕೆಗೆ ಬೆಂಬಲ ನೀಡಿರುವ ಕಾಂಗ್ರೆಸ್ ಒಂದು ಷರತ್ತನ್ನು ವಿಧಿಸಿತ್ತು. ಬಿಜೆಪಿ ಅಥವಾ ಕೋಮು ಶಕ್ತಿಗಳನ್ನು ಸರ್ಕಾರದ ಮೈತ್ರಿಯಲ್ಲಿ ಸೇರಿಸಿಕೊಳ್ಳಬಾರದು ಎಂಬ ಏಕೈಕ ಷರತ್ತು ವಿಧಿಸಲಾಗಿತ್ತು. ಅದಕ್ಕೆ ವಿಜಯ್ ಕೂಡ ಒಪ್ಪಿಗೆ ನೀಡಿದ್ದರು. ಆದರೆ, ಇದೀಗ ಬಹುಮತಕ್ಕೆ ಬೆಂಬಲ ನೀಡಿರುವ 25 ಎಐಎಡಿಎಂಕೆ ಶಾಸಕರು ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದಲ್ಲಿ ಇರುವುದರಿಂದ ಇದಕ್ಕೆ ಕಾಂಗ್ರೆಸ್ ಒಪ್ಪಲಿದೆಯೇ? ಅಥವಾ ಎಐಎಡಿಎಂಕೆಯ ಬಂಡಾಯ ಬಣ ಎನ್​ಡಿಎ ಮೈತ್ರಿಕೂಟದಿಂದ ಹೊರಬರಲಿದೆಯೇ? ಎಂಬ ಪ್ರಶ್ನೆ ಉದ್ಭವಿಸಿದೆ.

ಇದನ್ನೂ ಓದಿ: 2 ಬಣಗಳಾಗಿ ಒಡೆದ ಎಐಎಡಿಎಂಕೆ; ಪಳನಿಸ್ವಾಮಿಗೆ 17 ಶಾಸಕರು, ವೇಲುಮಣಿ​ಗೆ 30 ಶಾಸಕರ ಬೆಂಬಲ

ತಮಿಳುನಾಡಿನಲ್ಲಿ 4 ದಿನಗಳ ಹಿಂದೆ ಅಸ್ತಿತ್ವಕ್ಕೆ ಬಂದಿದ್ದ ಟಿವಿಕೆ ಸರ್ಕಾರ ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಗೆದ್ದಿದೆ. ಎಐಎಡಿಎಂಕೆಯ 25 ಬಂಡಾಯ ಶಾಸಕರ ಬೆಂಬಲದೊಂದಿಗೆ ಮುಖ್ಯಮಂತ್ರಿ ವಿಜಯ್ ಸದನದ ವಿಶ್ವಾಸ ಗಳಿಸಿದರು. 234 ಸ್ಥಾನಗಳ ವಿಧಾನಸಭೆಯಲ್ಲಿ 59 ಸದಸ್ಯರನ್ನು ಹೊಂದಿರುವ ವಿರೋಧ ಪಕ್ಷ ಡಿಎಂಕೆ, ಪ್ರತಿಭಟಿಸಿ ಕಲಾಪದ ಸಮಯದಲ್ಲಿ ಸಭಾತ್ಯಾಗ ಮಾಡಿತು.

ಹೀಗಾಗಿ, ಎಐಎಡಿಎಂಕೆ ಪಕ್ಷದ ವಿಪ್‌ ಜಾರಿಯಲ್ಲಿದ್ದರೂ ಟಿವಿಕೆ ನೇತೃತ್ವದ ಸರ್ಕಾರವನ್ನು ಬೆಂಬಲಿಸಲು ಮತ ಚಲಾಯಿಸಿದ 25 ಶಾಸಕರ ಅನರ್ಹತೆಗೆ ಅರ್ಜಿ ಸಲ್ಲಿಸಿರುವುದಾಗಿ ಎಐಎಡಿಎಂಕೆ ತಿಳಿಸಿದೆ. ಇದು ಇಪಿಎಸ್ ನಾಯಕತ್ವದಲ್ಲಿ ಪಕ್ಷದಲ್ಲಿನ ಅತ್ಯಂತ ಗಂಭೀರ ಬಿಕ್ಕಟ್ಟನ್ನು ಸೂಚಿಸುತ್ತದೆ. ಇದೀಗ 13 ಹಾಲಿ ಶಾಸಕರು ಸೇರಿದಂತೆ ಒಟ್ಟು 29 ಎಐಎಡಿಎಂಕೆ ನಾಯಕರನ್ನು ಜಿಲ್ಲಾ ಕಾರ್ಯದರ್ಶಿ ಸ್ಥಾನಗಳು ಸೇರಿದಂತೆ ಪಕ್ಷದ ವಿವಿಧ ಹುದ್ದೆಗಳಿಂದ ತೆಗೆದುಹಾಕಲಾಗಿದೆ. ಷಣ್ಮುಗಂ ಮತ್ತು ವೇಲುಮಣಿ ಅವರಲ್ಲದೆ, ಆರ್.ಕಾಮರಾಜ್, ಸಿ.ವಿಜಯಭಾಸ್ಕರ್, ತಂಗಮಣಿ, ಕೆ.ಪಿ.ಅನ್ಬಜಗನ್, ಕೆ.ಸಿ.ವೀರಮಣಿ ಮತ್ತು ಎಂ.ಆರ್.ವಿಜಯಭಾಸ್ಕರ್ ಸೇರಿದಂತೆ ಹಲವಾರು ಹಿರಿಯ ಎಐಎಡಿಎಂಕೆ ನಾಯಕರನ್ನು ಸಹ ಅವರ ಹುದ್ದೆಗಳಿಂದ ವಜಾಗೊಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಬರ್ ಆಝಂಗೆ ಮತ್ತೆ ಪಾಕ್ ತಂಡದ ನಾಯಕತ್ವ – Kannada News | Babar Azam to Replace Shan Masood as Pakistan Test Captain? PCB Eyes Return

ಪಾಕಿಸ್ತಾನ ಸೂಪರ್ ಲೀಗ್ (PSL) ಬಳಿಕ ಪಾಕಿಸ್ತಾನ ತಂಡ ಪ್ರಸ್ತತ ಬಾಂಗ್ಲಾದೇಶ ಪ್ರವಾಸದಲ್ಲಿದೆ. ಅಲ್ಲಿ ಟೆಸ್ಟ್ ಸರಣಿಯನ್ನಾಡುತ್ತಿರುವ ಪಾಕ್ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ತಂಡ ಆಡಿದ ಮೊದಲ ಪಂದ್ಯದಲ್ಲೇ ಸೋತಿದೆ. ಢಾಕಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ ತಂಡ 104 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಈ ಅವಮಾನಕರ ಸೋಲಿನಿಂದ ಕೆರಳಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಶಾನ್ ಮಸೂದ್ (Shan Masood) ಅವರನ್ನು ನಾಯಕತ್ವದಿಂದ ತೆಗೆದುಹಾಕಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಅಲ್ಲದೆ ಮಸೂದ್ ಸ್ಥಾನಕ್ಕೆ ತಂಡದ ಮಾಜಿ ನಾಯಕ ಬಾಬರ್ ಆಝಂ (Babar Azam) ಅವರನ್ನು ಮತ್ತೊಮ್ಮೆ ಟೆಸ್ಟ್ ತಂಡದ ನಾಯಕನಾಗಿ ನೇಮಿಸಲು ಮುಂದಾಗಿದೆ ಎಂದು ವರದಿಯಾಗಿದೆ.

ಬಾಬರ್ ಆಝಂಗೆ ನಾಯಕತ್ವ

ವಾಸ್ತವವಾಗಿ ಗಾಯದಿಂದಾಗಿ ಬಾಬರ್ ಆಝಂ ಮೊದಲ ಟೆಸ್ಟ್ ಪಂದ್ಯವನ್ನು ಆಡಿರಲಿಲ್ಲ. ಇದೀಗ ವರದಿಗಳ ಪ್ರಕಾರ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಾಲ್ಕನೇ ಆವೃತ್ತಿಯ ಉಳಿದ ಪಂದ್ಯಗಳಿಗೆ ಬಾಬರ್ ಆಝಂ ಅವರನ್ನು ಟೆಸ್ಟ್ ನಾಯಕರನ್ನಾಗಿ ನೇಮಿಸಬಹುದು. ಪಾಕಿಸ್ತಾನ ತಂಡದೊಳಗಿನ ಮೂಲಗಳ ಪ್ರಕಾರ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಕೆಲವು ಪ್ರಭಾವಿ ಅಧಿಕಾರಿಗಳು ಸಹ ಬಾಬರ್ ಅವರನ್ನು ಮತ್ತೆ ನಾಯಕರನ್ನಾಗಿ ನೇಮಿಸಲು ಮುಂದಾಗಿದ್ದು, ಅವರಿಗೆ ಮತ್ತೊಂದು ಅವಕಾಶ ನೀಡಲು ಯೋಚಿಸಿದ್ದಾರೆ. ಇದಕ್ಕೆ ಕಾರಣ ಶಾನ್ ಮಸೂದ್ ಅವರ ಕಳಪೆ ನಾಯಕತ್ವ. ಡಿಸೆಂಬರ್ 2023 ರಿಂದ, ಮಸೂದ್ ನಾಯಕತ್ವದಲ್ಲಿ ಪಾಕಿಸ್ತಾನ ತನ್ನ 15 ಪಂದ್ಯಗಳಲ್ಲಿ 11 ಪಂದ್ಯಗಳನ್ನು ಸೋತಿದೆ. ಹೀಗಾಗಿ ಪಿಸಿಬಿ ಅಧಿಕಾರಿಗಳು ಈಗ ಪಾಕಿಸ್ತಾನದ ಉಳಿದ ಏಳು ಟೆಸ್ಟ್ ಪಂದ್ಯಗಳಿಗೆ ಬಾಬರ್ ಅವರನ್ನು ನಾಯಕನನ್ನಾಗಿ ನೇಮಿಸಲು ಮುಂದಾಗಿದ್ದಾರೆ.

ಮೂಲಗಳ ಪ್ರಕಾರ, ‘ಬಾಬರ್ ಎರಡನೇ ಟೆಸ್ಟ್‌ನಲ್ಲಿ ಆಡಿ, ಉತ್ತಮ ಪ್ರದರ್ಶನ ನೀಡಿದರೆ, ಅವರಿಗೆ ತಂಡದ ನಾಯಕತ್ವ ಸಿಗುವುದು ಖಚಿತವಾಗಿದೆ. ಈ ಬಗ್ಗೆ ಮಂಡಳಿಯ ಅಧಿಕಾರಿಗಳು ಚರ್ಚೆ ನಡೆಸಿದ್ದು, ಬಾಬರ್​ಗೆ ಮತ್ತೆ ನಾಯಕತ್ವ ನೀಡುವುದರ ಬಗ್ಗೆ ಯಾರಿಗೂ ಯಾವುದೇ ಆಕ್ಷೇಪಣೆಗಳಿಲ್ಲ ಎಂದು ವರದಿಯಾಗಿದೆ.

ಭಾರತೀಯರಿಲ್ಲದ ವಿಶ್ವ ಏಕದಿನ ಪ್ಲೇಯಿಂಗ್ XI ಪ್ರಕಟಿಸಿದ ಬಾಬರ್ ಆಝಂ

ಬಾಬರ್ ನಾಯಕತ್ವ ಕಳೆದುಕೊಂಡಿದ್ದು ಹೀಗೆ

ಬಾಬರ್ 2019 ಮತ್ತು 2023 ರ ನಡುವೆ ಮೂರು ಸ್ವರೂಪಗಳ ತಂಡಗಳ ನಾಯಕತ್ವ ವಹಿಸಿದ್ದರು, ಆದರೆ 2023 ರಲ್ಲಿ ಭಾರತದಲ್ಲಿ ನಡೆದ ವಿಶ್ವಕಪ್ ನಂತರ ನಾಯಕತ್ವವನ್ನು ತ್ಯಜಿಸಬೇಕಾಯಿತು. 2024 ರ ವಿಶ್ವಕಪ್‌ಗಾಗಿ ಅವರನ್ನು ಟಿ20 ನಾಯಕರನ್ನಾಗಿ ಮರಳಿ ತರಲಾಯಿತು. ಆದರೆ ಕಳಪೆ ಟೂರ್ನಮೆಂಟ್ ನಂತರ ಮತ್ತೆ ನಾಯಕತ್ವವನ್ನು ತ್ಯಜಿಸಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಮಧುಬಂಗಾರಪ್ಪ ಹೇಳಿದ್ದೇನು ಗೊತ್ತಾ? – Kannada News | Madhu Bangarappa talks about Kesari Shawl after Governmnet Allowed Hijab In Schools

ಬೆಂಗಳೂರು, (ಮೇ 13): ಕರ್ನಾಟಕ ಸರ್ಕಾರವು (Karnataka Governmnet)  2022ರ ಹಿಜಾಬ್ (Hijab) ನಿಷೇಧ ಆದೇಶವನ್ನು ಅಧಿಕೃತವಾಗಿ ಹಿಂಪಡೆದಿದೆ. ಹೊಸ ಮಾರ್ಗಸೂಚಿಯ ಅನ್ವಯ, ವಿದ್ಯಾರ್ಥಿನಿಯರು ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ನೀಡಲಾಗಿದ್ದು, ಈ ನಿಯಮವು ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ಅನ್ವಯವಾಗಲಿದೆ. ಇಂದು (ಮೇ 13) ಹೊಸ ವಸ್ತ್ರಸಂಹಿತೆ ಆದೇಶವನ್ನು ಹೊರಡಿಸಿದ್ದು, ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ‘ಹಿಜಾಬ್’ (ತಲೆವಸ್ತ್ರ) ಧರಿಸಲು ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಜನಿವಾರ ಮತ್ತು ಹಿಜಾಬ್ (Hijab) ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದ್ರೆ, ಸರ್ಕಾರದ ಆದೇಶದಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇದೆಯೋ, ಇಲ್ಲವೋ ಎಂದು ಸ್ಪಷ್ಟತೆ ಇಲ್ಲ. ಹೀಗಾಗಿ ಗೊಂದಲವಾಗಿದ್ದು, ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ 2022ರ ಆದೇಶ ಹಿಂಪಡೆದ ಸರ್ಕಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ

Source link

1ರಿಂದ 12ನೇ ತರಗತಿ ಮಕ್ಕಳಿಗೆ ನಿಖರ ವಸ್ತ್ರ ಸಂಹಿತೆ: ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು – Kannada News | Education Minister Madhu Bangarappa Reacts Over Karnataka Governmnet Allows Hijab And Sacred Threads In Schools

ಬೆಂಗಳೂರು (ಮೇ 13): ರಾಜ್ಯದ ಶೈಕ್ಷಣಿಕ (Karnataka Education) ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ‘ಹಿಜಾಬ್’ ವಿವಾದಕ್ಕೆ ಕರ್ನಾಟಕ ಸರ್ಕಾರವು ಈಗ ಅಧಿಕೃತವಾಗಿ ತೆರೆ ಎಳೆದಿದೆ. 2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧಕ್ಕೆ ಪೂರಕವಾಗಿದ್ದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಗ ಹಿಂಪಡೆದಿದೆ. ಈ ಕುರಿತು ಇಂದು (ಮೇ 13) ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ‘ಹಿಜಾಬ್’ (ತಲೆವಸ್ತ್ರ) ಧರಿಸಲು ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಇನ್ನು ಈ ಬಗ್ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu bangarappa) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಜನಿವಾರ ತೆಗೆಸುವ ವಿಚಾರ ಸಾಕಷ್ಟು ಜನರ ಭಾವನೆಗೆ ಧಕ್ಕೆ ಉಂಟಾಗಿತ್ತು. ಮಕ್ಕಳ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ಆದೇಶ ಆಗಿದೆ. ಅವರವರ ಸಂಪ್ರದಾಯಕ್ಕೆ ಅನುಗುಣವಾಗಿ ವಸ್ತ್ರ ತೊಡುತ್ತಾರೆ ಎಂದರು.

ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ಶಾಲಾ ಕಾಲೇಜುಗಳಲ್ಲಿ ಒಂದು ಕ್ಲಾರಿಟಿ ಇರಬೇಕು. 1ರಿಂದ 12ನೇ ತರಗತಿ ಮಕ್ಕಳಿಗೆ ನಿಖರ ವಸ್ತ್ರ ಸಂಹಿತೆ ನಿಗದಿ ಮಾಡುತ್ತಿದ್ದೇವೆ. ಶೈಕ್ಷಣಿಕ ವರ್ಷ ಆರಂಭ ಮುನ್ನ ಇದನ್ನು ಜಾರಿ ಮಾಡಬೇಕೆಂಬ ಉದ್ದೇಶವಿದೆ. ಸಾಂಪ್ರದಾಯಿಕ ರೀತಿಯಲ್ಲಿ ಹೇಗೆ ಶೈಕ್ಷಣಿಕ ಸಂಸ್ಥೆಗಳಿಗೆ ಹೋಗಬೇಕು ಅನ್ನೋದು ಈ ಆದೇಶದಲ್ಲಿ ಇದೆ. ಒತ್ತಡದ ಮೇಲೆ ಯಾವ ವಿದ್ಯಾರ್ಥಿ ಕೂಡ ಶಾಲೆಗೆ ಹೋಗಬಾರದು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇದಕ್ಕಾಗಿ ಸಂವಿಧಾನ ಮಾಡಿಲ್ಲ. ಶಾಲೆಗೆ ಹೋಗೋದಕ್ಕೆ, ಪರೀಕ್ಷೆಗೆ ಹೋಗೋದಕ್ಕೂ ಈ ಪದ್ಧತಿ ಅನ್ವಯವಾಗಲಿದೆ. ವಸ್ತ್ರ ಸಂಹಿತೆ ಅಂತ ಕರೆಯೋಕೆ ಆಗಲ್ಲ, ಸಾಂಪ್ರದಾಯಿಕ ಪದ್ಧತಿ ಎನ್ನಬಹುದು ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿಯ 2022ರ ಆದೇಶ ಹಿಂಪಡೆದ ಸರ್ಕಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ

Source link

Exit mobile version