ಜೂ ಎನ್​​ಟಿಆರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಹಬ್ಬದೂಟ – Kannada News | Three movie update on Jr NTR birthday on May 20

ಜೂ ಎನ್​​ಟಿಆರ್ (Jr NTR) ದಕ್ಷಿಣದ ಸ್ಟಾರ್ ನಟ. ಪವನ್ ಕಲ್ಯಾಣ್, ಪ್ರಭಾಸ್ ಅವರಂತೆ ಭಾರಿ ಸಂಖ್ಯೆಯ ಅಭಿಮಾನಿಗಳನ್ನು ದಕ್ಷಿಣದಲ್ಲಿ ಹೊಂದಿರುವ ನಟ ಜೂ ಎನ್​​ಟಿಆರ್. ‘ಆರ್​​ಆರ್​ಆರ್’ ಸಿನಿಮಾದ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿದ್ದಾರೆ. ಅವರ ಈ ಹಿಂದಿನ ಸಿನಿಮಾ ‘ದೇವರ’ ದೊಡ್ಡ ಯಶಸ್ಸು ಕಾಣಲಿಲ್ಲವಾದರೂ ಫ್ಲಾಪ್ ಎನಿಸಿಕೊಳ್ಳಲಿಲ್ಲ. ಇದೀಗ ಅವರ ಪ್ರಶಾಂತ್ ನೀಲ್ ಜೊತೆಗೆ ಸಿನಿಮಾನಲ್ಲಿ ನಟಿಸುತ್ತಿದ್ದು, ಈ ಸಿನಿಮಾಕ್ಕಾಗಿ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಜೂ ಎನ್​​ಟಿಆರ್ ಅಭಿಮಾನಿಗಳು ಸಹ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಸ್ವರ ಎತ್ತಿದ್ದರು. ಆದರೆ ಇದೀಗ ಜೂ ಎನ್​​ಟಿಆರ್ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಖತ್ ಟ್ರೀಟ್ ಕೊಡಲು ಜೂ ಎನ್​​ಟಿಆರ್ ಸಜ್ಜಾಗಿದ್ದಾರೆ.

ಮೇ 20 ರಂದು ಜೂ ಎನ್​​ಟಿಆರ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಆ ದಿನ ಅವರ ಮೂರು ಸಿನಿಮಾಗಳ ಅಪ್​​ಡೇಟ್ ಒಟ್ಟಿಗೆ ಸಿಗಲಿದೆ. ಪ್ರಶಾಂತ್ ನೀಲ್ ಜೊತೆಗೆ ನಟಿಸುತ್ತಿರುವ ಸಿನಿಮಾದ ಟೈಟಲ್ ಟೀಸರ್ ಅಂದು ಬಿಡುಗಡೆ ಆಗಲಿದೆ. ಈ ವರೆಗೆ ಆ ಸಿನಿಮಾವನ್ನು ಅಭಿಮಾನಿಗಳು ‘ಡ್ರ್ಯಾಗನ್’ ಎಂದು ಕರೆಯುತ್ತಿದ್ದರು, ಆದರೆ ಅದು ಸಿನಿಮಾದ ಅಧಿಕೃತ ಹೆಸರಾಗಿರಲಿಲ್ಲ. ಮೇ 20 ರಂದು ಸಿನಿಮಾದ ಹೆಸರು ಬಿಡುಗಡೆ ಮಾಡಲಿದೆ ಚಿತ್ರತಂಡ. ಅದೂ ಮೇ 19ರ ಮಧ್ಯರಾತ್ರಿ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಆಗಲಿರುವುದು ವಿಶೇಷ.

ಇದನ್ನೂ ಓದಿ:‘ವಾರ್ 2’ ಸೋತರೂ ಜೂ ಎನ್​ಟಿಆರ್​​ಗೆ ಮತ್ತೊಂದು ಅವಕಾಶ ಕೊಟ್ಟ ವೈಆರ್​ಎಫ್

ಇನ್ನು ಮೇ 20ರಂದು ಜೂ ಎನ್​​ಟಿಆರ್ ನಟಿಸಲಿರುವ ‘ಗಾಡ್ ಆಫ್ ವಾರ್ಸ್’ ಸಿನಿಮಾದ ಘೋಷಣೆ ಆಗಲಿದೆ. ದೇವರು ಮುರುಗನ್ ಅಥವಾ ಕಾರ್ತಿಕೇಯ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದ್ದು, ಕಾರ್ತಿಕೇಯನನ್ನು ‘ಯುದ್ಧಗಳ ದೇವತೆ’ ಎಂದು ಸಹ ಕರೆಯಲಾಗುತ್ತದೆ. ಇದೀಗ ಜೂ ಎನ್​​ಟಿಆರ್ ಅವರು ಕಾರ್ತಿಕೇಯ ದೇವರ ಆಧರಿಸಿ ರಚಿಸಿದ ಕತೆಯನ್ನು ಆಧರಿಸಿದ ಸಿನಿಮಾನಲ್ಲಿ ನಟಿಸಲಿದ್ದಾರೆ. ಈ ಸಿನಿಮಾವನ್ನು ಜೂ ಎನ್​​ಟಿಆರ್ ಅವರ ಮೆಚ್ಚಿನ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಲಿದ್ದು, ಸಿನಿಮಾ ಘೋಷಣೆ ಮೇ 20ರಂದು ಅಧಿಕೃತವಾಗಿ ಆಗಲಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗುತ್ತದೆ ಎನ್ನಲಾಗುತ್ತಿದೆ.

ಇನ್ನು ಜೂ ಎನ್​​ಟಿಆರ್ ಅವರ ಈ ಹಿಂದಿನ ಸಿನಿಮಾ ‘ದೇವರ’ದ ಸೀಕ್ವೆಲ್ ‘ದೇವರ 2’ ಬಗ್ಗೆಯೂ ಮೇ 20ರಂದೇ ಘೋಷಣೆ ಆಗಲಿದೆ ಎನ್ನಲಾಗುತ್ತಿದೆ. ‘ದೇವರ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಿಡುಗಡೆ ಆಗಿ ಎರಡು ವರ್ಷಗಳಾದರೂ ಸಹ ‘ದೇವರ 2’ ಸಿನಿಮಾ ಬಗ್ಗೆ ಯಾವುದೇ ಅಪ್​​ಡೇಟ್ ಹೊರಬಿದ್ದಿರಲಿಲ್ಲ. ‘ದೇವರ 2’ ನಿಂತು ಹೋಗಿದೆ, ಆ ಸಿನಿಮಾ ನಿರ್ಮಾಣ ಆಗುವುದಿಲ್ಲ ಎಂಬ ಮಾತುಗಳು ಸಹ ಕೇಳಿ ಬರುತ್ತಿದ್ದವು. ಆದರೆ ಇದೀಗ ಮೇ 20ರಂದು ‘ದೇವರ 2’ ಬಗ್ಗೆ ಅಪ್​​ಡೇಟ್ ಸಿಗಲಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ: 1969ರ ಬ್ಯಾಚ್‌ನ ಗುಂಡುಗಳನ್ನು ವಶಪಡಿಸಿಕೊಂಡ ಪೊಲೀಸರು – Kannada News | Bangarpet Border Bullet Discovery: 135 Live Rounds Found, Sparks Alarm

ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ

ಕೋಲಾರ, ಮೇ.13: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಭಾರಿ ಪ್ರಮಾಣದ ಬುಲೆಟ್‌ಗಳು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಎಸ್‌ಎಲ್‌ಆರ್ (SLR) ಅಥವಾ ಮಿಷನ್ ಗನ್‌ಗಳಿಗೆ ಬಳಸುವ ಒಟ್ಟು 214 ಬುಲೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಗಾರಪೇಟೆ ತಾಲೂಕಿನ ದಾಸರಮಲ್ಲ ಬ್ರಿಡ್ಜ್ ಬಳಿ ಅಪರಿಚಿತರು ಈ ಬುಲೆಟ್‌ಗಳನ್ನು ಬಿಸಾಡಿ ಹೋಗಿದ್ದಾರೆ. ಪತ್ತೆಯಾದ ಬುಲೆಟ್‌ಗಳು 1969ರಲ್ಲಿ ಮಹಾರಾಷ್ಟ್ರದಲ್ಲಿ ತಯಾರಾದವುಗಳಾಗಿದ್ದು, ಇವುಗಳಲ್ಲಿ 7.6 mm ಮಾದರಿಯ ಗುಂಡುಗಳಿವೆ. ಕಾಮಸಮುದ್ರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, 214 ಬುಲೆಟ್‌ಗಳ ಪೈಕಿ 135 ಜೀವಂತ ಬುಲೆಟ್‌ಗಳಿದ್ದರೆ (Live Bullets), 85 ಖಾಲಿಯಾಗಿರುವುದು ಕಂಡುಬಂದಿದೆ.

ಇದನ್ನೂ ಓದಿ: ಹಿಜಾಬ್‌ಗೆ ಸರ್ಕಾರ ಗ್ರೀನ್ ಸಿಗ್ನಲ್! ಅಮೆರಿಕ, ಆಸ್ಟ್ರೇಲಿಯಾಕ್ಕೆ ರೊಟ್ಟಿ ರಫ್ತು

ಇವುಗಳನ್ನು ಮಿಸ್ ಫೈರ್ ಅಥವಾ ಡಮ್ಮಿ ಬುಲೆಟ್‌ಗಳಿರಬಹುದು ಎಂದು ಶಂಕಿಸಲಾಗಿದ್ದು, ಹಲವು ತಿಂಗಳ ಹಿಂದೆಯೇ ಇಲ್ಲಿ ಬಿಸಾಡಿರಬಹುದು ಎನ್ನಲಾಗಿದೆ. ಗಡಿ ಭಾಗದಲ್ಲಿ ಇಷ್ಟು ದೊಡ್ಡ ಪ್ರಮಾಣದ ಗುಂಡುಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಾಮಸಮುದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಈ ಬುಲೆಟ್‌ಗಳನ್ನು ತಂದವರು ಯಾರು ಮತ್ತು ಇದರ ಉದ್ದೇಶವೇನು ಎಂಬ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇನ್ನೂ ನಿಗೂಢವಾಗಿಯೇ ಇದೆ ಕೇರಳಂ ಸಿಎಂ ಹೆಸರು; ನಾಳೆ ಕಾಂಗ್ರೆಸ್​​ನಿಂದ ಅಧಿಕೃತ ಘೋಷಣೆ – Kannada News | Congress will Announce Kerala Chief Minister Name Tomorrow Jairam Ramesh Keralam CM

ನವದೆಹಲಿ, ಮೇ 13: ಕೇರಳಂನಲ್ಲಿ ಇನ್ನೂ ಮುಖ್ಯಮಂತ್ರಿಯ ಆಯ್ಕೆಯ ಬಿಕ್ಕಟ್ಟು ಬಗೆಹರಿದಿಲ್ಲ. ಇಂದು ಕೇರಳಂನ (Keralam CM) ಮುಖ್ಯಮಂತ್ರಿಯ ಹೆಸರನ್ನು ಘೋಷಣೆ ಮಾಡಲಾಗುವುದು ಎನ್ನಲಾಗಿತ್ತು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದ್ದಾರೆ. ಇದಾದ ಬಳಿಕ ಕಾಂಗ್ರೆಸ್ ಕೇರಳಂನ ಮುಖ್ಯಮಂತ್ರಿ (Kerala CM) ಹೆಸರನ್ನು ಘೋಷಿಸುವ ನಿರೀಕ್ಷೆಯಿತ್ತು. ಆದರೆ, ಮತ್ತೊಮ್ಮೆ ಸಿಎಂ ಹೆಸರು ಘೋಷಣೆ ಮುಂದೂಡಲ್ಪಟ್ಟಿದೆ. ಇಂದಿನ ಸಭೆಯಲ್ಲಿ ಸಿಎಂ ಹೆಸರು ಅಂತಿಮವಾಗಿದ್ದು, ನಾಳೆ ಅಧಿಕೃತವಾಗಿ ಹೆಸರು ಘೋಷಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಕೇರಳಂನಲ್ಲಿ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಮತ್ತು ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಅವರ ಹೆಸರುಗಳು ಸಿಎಂ ರೇಸ್​​ನಲ್ಲಿದ್ದವು. ಕೇರಳದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್​ ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಆದರೂ ಇನ್ನೂ ಸರ್ಕಾರ ರಚನೆಗೆ ಮುಹೂರ್ತ ನಿಗದಿಯಾಗಿಲ್ಲ.

ಕೇರಳಂ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ನಡೆಯುತ್ತಿರುವ ತೀವ್ರ ಜಗಳದ ನಡುವೆ, ರಾಹುಲ್ ಗಾಂಧಿ ನಿನ್ನೆ ದೆಹಲಿಯಲ್ಲಿ ಮಾಜಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನು ಭೇಟಿ ಮಾಡಿ ಅವರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದರು. ಇದಾದ ನಂತರ ಇಂದು ಮಲ್ಲಿಕಾರ್ಜುನ ಖರ್ಗೆಯವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ: ಹೈಕಮಾಂಡ್​​ ಸಭೆ ಬಳಿಕವೂ ಆಗದ ಅಂತಿಮ ನಿರ್ಧಾರ: ಕೇರಳದ ನೂತನ ಸಿಎಂ ಯಾರೆಂಬುದು ಇನ್ನೂ ಸಸ್ಪೆನ್ಸ್​!

ಮಂಗಳವಾರ ನಡೆದ ನಿರ್ಣಾಯಕ ಚರ್ಚೆಗಳ ಸಂದರ್ಭದಲ್ಲಿ ಪಕ್ಷದ ನಾಯಕತ್ವವು ದೆಹಲಿಗೆ ಕರೆಸಿದ್ದ ಕೇರಳಂ ನಾಯಕರು ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ರಾಹುಲ್ ಗಾಂಧಿಯನ್ನು ಭೇಟಿಯಾದ ನಂತರ ಮಾಜಿ ಕೆಪಿಸಿಸಿ ಮುಖ್ಯಸ್ಥ ಕೆ ಮುರಳೀಧರನ್, ಪಕ್ಷವು ಬುಧವಾರದೊಳಗೆ ಮುಖ್ಯಮಂತ್ರಿಯ ಹೆಸರನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದರು. ಆದರೆ, ಅದು ನಾಳೆಗೆ ಮುಂದೂಡಲ್ಪಟ್ಟಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದ್ದಾರೆ. ಕೆ.ಸಿ. ವೇಣುಗೋಪಾಲ್ ಸಿಎಂ ಆಗುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ, ವಿ.ಡಿ. ಸತೀಶನ್ ಕೇರಳಂ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ. ಕೇರಳಂನ ಹಿರಿಯ ನಾಯಕರೊಂದಿಗೆ ವಿವರವಾದ ಚರ್ಚೆಯ ನಂತರ ನಾಳೆ ಈ ಕ್ರಮವನ್ನು ಘೋಷಿಸಲಾಗುವುದು.

ಇದನ್ನೂ ಓದಿ: ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ ಆಗೋದು ಪಕ್ಕಾ?

ವಿ.ಡಿ. ಸತೀಶನ್ ಜೊತೆಗೆ ಕೆ.ಸಿ. ವೇಣುಗೋಪಾಲ್, ರಮೇಶ್ ಚೆನ್ನಿತ್ತಲ ಮತ್ತು ಇತರರು ಕೇರಳಂನ ಮುಖ್ಯಮಂತ್ರಿಯಾಗುವ ರೇಸ್‌ನಲ್ಲಿದ್ದರು. ಕೇರಳಂ ಮುಖ್ಯಮಂತ್ರಿಯನ್ನು ಘೋಷಿಸುವಲ್ಲಿನ ವಿಳಂಬಕ್ಕೆ ಕಾಂಗ್ರೆಸ್ ನಾಯಕರು ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಕೂಡ ಕೂಡಲೇ ಸಿಎಂ ಹೆಸರು ಘೋಷಿಸುವ ಒತ್ತಡಕ್ಕೆ ಸಿಲುಕಿದೆ.

ಕೇರಳಂ ವಿಧಾನಸಭಾ ಚುನಾವಣೆ:

ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೇರಳಂನಲ್ಲಿ 140 ವಿಧಾನಸಭಾ ಸ್ಥಾನಗಳಲ್ಲಿ 102 ಸ್ಥಾನಗಳನ್ನು ಗೆದ್ದುಕೊಂಡಿತು. ಇದು ಒಂದು ದಶಕದ ನಂತರ ಐತಿಹಾಸಿಕ ಪುನರಾಗಮನವನ್ನು ಗುರುತಿಸುತ್ತದೆ. ಮತ್ತೊಂದೆಡೆ, ಎಡ ಪ್ರಜಾಸತ್ತಾತ್ಮಕ ರಂಗವು ಕೇವಲ 35 ಸ್ಥಾನಗಳನ್ನು ಗಳಿಸಿತು. ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೆ ಬಂದಂತಾಗಿದೆ. ಇದು ಎಲ್‌ಡಿಎಫ್‌ನ ದಶಕಗಳಷ್ಟು ಹಳೆಯದಾದ ಆಡಳಿತವನ್ನು ಕೊನೆಗೊಳಿಸಿತು. ಆದರೆ, ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸಲು ಸಾಧ್ಯವಾಗಿರಲಿಲ್ಲ. ಇದೀಗ ಇಂದು ಸಿಎಂ ಹೆಸರನ್ನು ಘೋಷಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಈ ಸೀಸನ್ ಬಳಿಕ ಈ ಐದು ತಂಡಗಳ ನಾಯಕತ್ವದಲ್ಲಿ ಬದಲಾವಣೆ – Kannada News | IPL 2026: 5 Underperforming Teams Likely to Get New Captains for 2027 Season

ಅಕ್ಷರ್ ಪಟೇಲ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 2025 ರಲ್ಲಿಯೂ ಪ್ಲೇಆಫ್ ತಲುಪಲು ವಿಫಲವಾಗಿತ್ತು. ಇದೀಗ, ತಂಡವು 2026 ರಲ್ಲಿಯೂ ಪ್ಲೇಆಫ್ ತಲುಪುವ ಸಾಧ್ಯತೆಯಿಲ್ಲ. ನಾಯಕನಾದ ನಂತರ ಅಕ್ಷರ ಪಟೇಲ್ ಅವರ ಪ್ರದರ್ಶನವೂ ಕುಸಿದಿದೆ. ಅದಕ್ಕಾಗಿಯೇ ದೆಹಲಿ ತಂಡವು 2027 ರ ಆವೃತ್ತಿಗೆ ಹೊಸ ನಾಯಕನನ್ನು ನೇಮಿಸಬಹುದು.

Source link

Chanakya Niti: ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದು ಸರಿಯಲ್ಲ – Kannada News | Chanakya Niti: Don’t tell anyone these five personal details of yours

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಗೌಪ್ಯತೆ ಮತ್ತು ವಿವೇಕದ ಮಹತ್ವವನ್ನು ವಿವರಿಸಿದ್ದಾರೆ. ಬುದ್ಧಿವಂತ ವ್ಯಕ್ತಿಗಳು ಈ ಕೆಲವೊಂದು ವೈಯಕ್ತಿಕ ವಿಚಾರಗಳನ್ನು, ಸೀಕ್ರೆಟ್‌ಳನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ನೀವು ಸಹ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಬಯಸಿದರೆ, ನೆಮ್ಮದಿಯ ಜೀವನವನ್ನು ನಡೆಸಲು ಬಯಸಿದರೆ, ತಪ್ಪಿಯೂ ಸಹ ಯಾರೊಂದಿಗೂ ಈ ಕೆಲವೊಂದು ವಿಚಾರಗಳನ್ನು ಶೇರ್‌ ಮಾಡಬೇಡಿ. ಆಪ್ತ ಸ್ನೇಹಿತರು, ಪ್ರೀತಿಪಾತ್ರರು ಸೇರಿದಂತೆ ಯಾರ ಬಳಿಯೂ ವೈಯಕ್ತಿಕ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಚಾಣಕ್ಯರು ಹೇಳಿರುವಂತೆ ಯಾವೆಲ್ಲಾ ರಹಸ್ಯಗಳನ್ನು ಹಂಚಿಕೊಳ್ಳುವುದು ತಪ್ಪು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ನಿಮ್ಮ ಈ ಸೀಕ್ರೆಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ:

ನಿಮ್ಮ ದೌರ್ಬಲ್ಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ: ಪ್ರತಿಯೊಬ್ಬರಲ್ಲೂ ಏನಾದರೊಂದು ದೌರ್ಬಲ್ಯಗಳಿರುತ್ತವೆ, ಆದರೆ ನೀವು ಅವುಗಳನ್ನು ಯಾರಿಗಾದರೂ ಹೇಳಿದರೆ, ಅವರು ಅದರ  ಲಾಭವನ್ನು ಪಡೆಯಬಹುದು. ಮತ್ತು ನಿಮ್ಮ ಇಮೇಜ್‌ಗೆ ಕಳಂಕ ತರಬಹುದು. ಹಾಗಾಗಿ ನಿಮ್ಮ ದೌರ್ಬಲ್ಯಗಳ ಬಗ್ಗೆ ಯಾರಿಗೂ ಹೇಳಬೇಡಿ.

ನಿಮಗಾದ ಹಣದ ನಷ್ಟದ ಬಗ್ಗೆ ಯಾರಿಗೂ ಹೇಳಬೇಡಿ:  ನೀವು ನಿಮಗಾದ ಹಣದ ನಷ್ಟದ ಬಗ್ಗೆ ಯಾರಿಗಾದರೂ ಹೇಳಿದರೆ, ಜನರು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಗೇಲಿ ಮಾಡಬಹುದು ಅಥವಾ ನಿಮ್ಮ ಈ ಅಸಹಾಯಕ ಪರಿಸ್ಥಿತಿಯ ಲಾಭವನ್ನು ಪಡೆಯಬಹುದು.

ಮನಸ್ಸಿನಲ್ಲಿರುವ ದುಃಖ, ನೋವಿನ ಬಗ್ಗೆ ಯಾರಿಗೂ ಹೇಳಬಾರದು:  ಆಚಾರ್ಯ ಚಾಣಕ್ಯರು ಹೇಳುವಂತೆ ನಿಮ್ಮ ಮನಸ್ಸಿನಲ್ಲಿ ಯಾವುದೇ ದುಃಖವಿದ್ದರೆ ಅದನ್ನು ಯಾರಿಗೂ ಹೇಳಬೇಡಿ. ಏಕೆಂದರೆ ಕೆಲವರು ನಿಮ್ಮ ಮುಂದೆ ನಿಮ್ಮ ದುಃಖಕ್ಕೆ ಸಹಾನುಭೂತಿ ತೋರಿಸುತ್ತಾರೆ, ಆದರೆ ನಿಮ್ಮ ಬೆನ್ನ ಹಿಂದೆ ನಗುತ್ತಾರೆ, ಇತರರೊಂದಿಗೆ ನಿಮ್ಮ ಅಸಹಾಯಕ ಪರಿಸ್ಥಿತಿಯ ಬಗ್ಗೆ ತಮಾಷೆಯ ಮಾತುಗಳನ್ನಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಐದು ಗುಣಗಳಿರುವ ಹೆಣ್ಣಿನ ಮನೆ ಸ್ವರ್ಗದಂತಿರುತ್ತದೆ ಎಂದಿದ್ದಾರೆ ಚಾಣಕ್ಯ

ಮನೆಯ ವಿಷಯಗಳನ್ನು ಯಾರಿಗೂ ಹೇಳಬೇಡಿ:   ನಿಮ್ಮ ಕುಟುಂಬದ ದೌರ್ಬಲ್ಯಗಳನ್ನು, ಕುಟುಂಬದಲ್ಲಿ ನಡೆಯುವ ಜಗಳ, ಮನಸ್ತಾಪಗಳನ್ನು ಇತರರೊಂದಿಗೆ  ಬಹಿರಂಗಪಡಿಸುವುದರಿಂದ ನಿಮ್ಮ ಕುಟುಂಬದ ಖ್ಯಾತಿಗೆ ಹಾನಿಯಾಗಬಹುದು ಅಥವಾ  ನಿಮ್ಮ ಮನೆಯ ಪರಿಸ್ಥಿತಿಯ ಲಾಭವನ್ನು ಯಾರಾದರೂ ಪಡೆಯಲು ಕಾರಣವಾಗಬಹುದು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಹಾಗಾಗಿ ಎಷ್ಟೇ ಆಪ್ತರಾದರೂ ಸರಿ ಅವರ ಬಳಿ ನಿಮ್ಮ ಮನೆಯ ಸಮಸ್ಯೆಗಳ ಬಗ್ಗೆ ಹೇಳಿಕೊಳ್ಳಬೇಡಿ.

ನಿಮ್ಮ ಭವಿಷ್ಯದ ಯೋಜನೆಗಳನ್ನು ಯಾವಾಗಲೂ ಮರೆಮಾಡಿ: ನಿಮ್ಮ ದೊಡ್ಡ ಕನಸುಗಳು, ಯೋಜನೆಗಳು ಮತ್ತು ಗುರಿಗಳನ್ನು ಅವು ಪೂರ್ಣಗೊಂಡ ನಂತರ ಮಾತ್ರವೇ ಹಂಚಿಕೊಳ್ಳಿ. ಅದಕ್ಕೂ ಮುನ್ನ ನಿಮ್ಮ ಯೋಜನೆಗಳ ಬಗ್ಗೆ ಇತರರಿಗೆ ಹೇಳಿದರೆ ಜನ ನಿಮ್ಮ ಸ್ಥೈರ್ಯ ಕುಗ್ಗಿಸಲು ಅಥವಾ ಅಡೆತಡೆಗಳನ್ನು ಸೃಷ್ಟಿಸಲು ಪ್ರಯತ್ನಿಸಬಹುದು. ಆದ್ದರಿಂದ ನಿಮ್ಮ ಗುರಿಗಳು, ಮುಂದಿನ ನಡೆಯ ಬಗ್ಗೆ ಯಾರಿಗೂ ಹೇಳಬಾರದು ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಲಗುವ ಮುನ್ನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದು ಒಳ್ಳೆಯದೋ ಅಲ್ಲವೋ ತಜ್ಞರು ನೀಡಿರುವ ಸಲಹೆ ಇಲ್ಲಿದೆ – Kannada News | Drinking Liquids At Night: Doctor Tips For Better Sleep Quality

ಇಂದಿನ ಜೀವನಶೈಲಿಯಲ್ಲಿ ಹಲವರಿಗೆ ಮಲಗುವ ಮುನ್ನ ನೀರು (Water) ಅಥವಾ ಇತರ ಲಿಕ್ವಿಡ್‌ ರೂಪದ ಪಾನೀಯ ಅಥವಾ ಆಹಾರಗಳ ಸೇವನೆ ಮಾಡುವ ಅಭ್ಯಾಸ ಇರುತ್ತದೆ. ಕೆಲವರು ಇದರಿಂದ ದೇಹ ಹೈಡ್ರೇಟ್ ಆಗಿರುತ್ತದೆ ಎಂದು ನಂಬಿದರೆ, ಇನ್ನೂ ಕೆಲವರಿಗೆ ರಾತ್ರಿ ಪದೇಪದೇ ಮೂತ್ರಕ್ಕೆ ಹೋಗಬೇಕಾಗುವುದು ಮತ್ತು ನಿದ್ರೆ ಭಂಗವಾಗುವಂತಹ ಸಮಸ್ಯೆಯಾಗುತ್ತದೆ. ಆರೋಗ್ಯ ತಜ್ಞರ ಪ್ರಕಾರ, ರಾತ್ರಿ ಸಮಯದಲ್ಲಿ ಎಷ್ಟು ಪ್ರಮಾಣದಲ್ಲಿ ಲಿಕ್ವಿಡ್ ಸೇವಿಸುತ್ತೇವೆ ಎಂಬುದು ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೌದು, ದೇಹವನ್ನು ಹೈಡ್ರೇಟ್ ಇಟ್ಟುಕೊಳ್ಳುವುದು ಅಗತ್ಯವಾದರೂ, ರಾತ್ರಿ ವೇಳೆ ಅತಿಯಾಗಿ ನೀರು ಅಥವಾ ಇತರ ಪಾನೀಯಗಳನ್ನು ಸೇವಿಸುವುದು ಎಲ್ಲರಿಗೂ ಸೂಕ್ತವಲ್ಲ. ವಿಶೇಷವಾಗಿ ಚಹಾ, ಕಾಫಿ ಅಥವಾ ಕ್ಯಾಫಿನ್ ಇರುವ ಪಾನೀಯಗಳನ್ನು ಹೆಚ್ಚು ಸೇವಿಸಿದರೆ ನಿದ್ರೆಯ ಗುಣಮಟ್ಟದ ಮೇಲೆ ಪರಿಣಾಮ ಬೀಳಬಹುದು. ಆದ್ದರಿಂದ ಮಲಗುವ ಮುನ್ನ ಎಷ್ಟು ಪ್ರಮಾಣದಲ್ಲಿ ಲಿಕ್ವಿಡ್ ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ.

ಮಲಗುವ ಮುನ್ನ ಎಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು?

ಆರೋಗ್ಯ ತಜ್ಞರ ಪ್ರಕಾರ, ಮಲಗುವ ಮೊದಲು ಸುಮಾರು 100 ರಿಂದ 200 ಮಿಲಿ ಲೀಟರ್‌ವರೆಗೆ ನೀರು ಅಥವಾ ಇತರ ಲಿಕ್ವಿಡ್ ಸೇವಿಸುವುದು ಸಾಮಾನ್ಯವಾಗಿ ಸುರಕ್ಷಿತ ಎಂದು ಪರಿಗಣಿಸಲಾಗುತ್ತದೆ. ಈ ಪ್ರಮಾಣ ದೇಹದಲ್ಲಿ ನೀರಿನ ಸಮತೋಲನ ಕಾಪಾಡಲು ಸಹಾಯ ಮಾಡುತ್ತದೆ ಮತ್ತು ರಾತ್ರಿ ವೇಳೆ ಪದೇಪದೇ ಮೂತ್ರಕ್ಕೆ ಹೋಗುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಆದರೆ ಇದು ಅವರವರ ದೇಹದ ಸ್ಥಿತಿಯ ಮೇಲೆ ಅವಲಂಬಿತವಾಗಿರುತ್ತದೆ. ದಿನವಿಡೀ ಸಾಕಷ್ಟು ನೀರು ಕುಡಿದಿದ್ದರೆ ರಾತ್ರಿ ಹೆಚ್ಚು ನೀರು ಕುಡಿಯುವ ಅಗತ್ಯವಿಲ್ಲ ಎಂದು ವೈದ್ಯರು ಹೇಳುತ್ತಾರೆ.

ಹೆಚ್ಚು ನೀರು ಕುಡಿದರೆ ಏನಾಗಬಹುದು?

ರಾತ್ರಿ ವೇಳೆ ಅತಿಯಾಗಿ ನೀರು ಅಥವಾ ಪಾನೀಯಗಳನ್ನು ಕುಡಿಯುವುದರಿಂದ ಪದೇಪದೇ ನಿದ್ರೆ ಭಂಗವಾಗಬಹುದು. ಇದರಿಂದ ಬೆಳಿಗ್ಗೆ ದಣಿವು, ಏಕಾಗ್ರತೆಯ ಕೊರತೆ ಮತ್ತು ತಲೆಭಾರ ಅನುಭವಿಸಬಹುದು. ಕೆಲವರಿಗೆ ಹೊಟ್ಟೆ ಉಬ್ಬರ ಅಥವಾ ಅಸ್ವಸ್ಥತೆ ಕೂಡ ಉಂಟಾಗಬಹುದು. ಅದರಲ್ಲಿಯೂ ಕಿಡ್ನಿ, ಹೃದಯ ಅಥವಾ ಮೂತ್ರಾಶಯ ಸಮಸ್ಯೆ ಇರುವವರು ಮಲಗುವ ಮುನ್ನ ನೀರು ಅಥವಾ ಇನ್ನಿತರ ಪಾನೀಯಗಳನ್ನು ಕುಡಿಯುವಾಗ ವಿಶೇಷ ಎಚ್ಚರಿಕೆ ವಹಿಸಬೇಕು. ಮಧುಮೇಹ ಅಥವಾ ರಾತ್ರಿ ಪದೇಪದೇ ಮೂತ್ರಕ್ಕೆ ಹೋಗುವ ಸಮಸ್ಯೆ ಇರುವವರು ವೈದ್ಯರ ಸಲಹೆ ಪಡೆಯುವುದು ಉತ್ತಮ.

ಇದನ್ನೂ ಓದಿ: ತರಕಾರಿಯಷ್ಟೇ ಅಲ್ಲ ರಾಜ್ಯದ ಜನರು ಕುಡಿಯುವ ನೀರೂ ಕಲುಷಿತ!: ಶಾಕಿಂಗ್​ ವಿಚಾರ ಬಹಿರಂಗ

ಆರೋಗ್ಯ ಕಾಪಾಡಲು ಈ ಸಲಹೆಯನ್ನು ತಪ್ಪದೆ ಪಾಲಿಸಿ:

  • ಮಲಗುವ 1 ಗಂಟೆ ಮೊದಲು ಹೆಚ್ಚು ನೀರು ಕುಡಿಯುವುದನ್ನು ತಪ್ಪಿಸಿ
  • ಕ್ಯಾಫಿನ್ ಇರುವ ಪಾನೀಯಗಳ ಸೇವನೆಯನ್ನು ರಾತ್ರಿ ಕಡಿಮೆ ಮಾಡಿ
  • ದಿನವಿಡೀ ಸಮರ್ಪಕವಾಗಿ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ
  • ನಿದ್ರೆ ಸಮಸ್ಯೆ ಮುಂದುವರಿದರೆ ವೈದ್ಯರನ್ನು ಸಂಪರ್ಕಿಸಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ; ನಾಳೆಯಿಂದಲೇ ಅಮುಲ್ ಹಾಲಿನ ಬೆಲೆ ಲೀಟರ್​​ಗೆ 2 ರೂ. ಏರಿಕೆ – Kannada News | Amul raises milk prices Rs 2 more per litre across India Effective from May 14

ನವದೆಹಲಿ, ಮೇ 13: ಪ್ರಮುಖ ಡೈರಿ ಬ್ರಾಂಡ್ ಅಮುಲ್ (Amul) ತನ್ನ ಹಲವಾರು ಹಾಲಿನ ಉತ್ಪನ್ನಗಳಲ್ಲಿ ಪ್ರತಿ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಳವನ್ನು ಘೋಷಿಸಿದೆ. ಪರಿಷ್ಕೃತ ಬೆಲೆಗಳು ಮೇ 14ರಿಂದ (ನಾಳೆಯಿಂದ) ಜಾರಿಗೆ ಬರಲಿದೆ. ಮೇ 14ರಿಂದ ದೇಶಾದ್ಯಂತ ಅಮುಲ್ ಹಾಲು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಳವಾಗಲಿದೆ. ದಿನನಿತ್ಯ ಬಳಸುವ ಹಾಲಿನ ಬೆಲೆಯನ್ನು ಏರಿಕೆ ಮಾಡಿರುವುದರಿಂದ ಜನಸಾಮಾನ್ಯರ ಮೇಲೆ ಮತ್ತೆ ಹೊರೆಬೀಳುವುದು ಖಂಡಿತ.

ಮೇ 14ರಿಂದಲೇ ಲೀಟರ್‌ಗೆ 2 ರೂ. ಹೆಚ್ಚಳದ ನಿಯಮ ಜಾರಿಗೆ ಬಂದಿದೆ. ಇದರರ್ಥ ಮೇ 14ರಿಂದ ಗ್ರಾಹಕರು ಚಿಲ್ಲರೆ ಮಾರುಕಟ್ಟೆಗಳು ಮತ್ತು ಅಂಗಡಿಗಳಲ್ಲಿ ಅಮುಲ್ ಹಾಲನ್ನು ಖರೀದಿಸಲು ಹೊಸ ದರಗಳ ಪ್ರಕಾರ ಪಾವತಿಸಬೇಕಾಗುತ್ತದೆ. ಹಸುಗಳ ಮೇವು ಮತ್ತು ಪ್ಯಾಕೇಜಿಂಗ್‌ನ ಹೆಚ್ಚುತ್ತಿರುವ ವೆಚ್ಚವು ಈ ಬೆಲೆ ಏರಿಕೆಗೆ ಕಾರಣವಾಗಿದೆ.

ಇದನ್ನೂ ಓದಿ: ಸೆ. 22ರಿಂದ ಬೆಣ್ಣೆ, ಐಸ್ ಕ್ರೀಮ್, ತುಪ್ಪ ಸೇರಿ 700ಕ್ಕೂ ಹೆಚ್ಚು ಅಮುಲ್ ಉತ್ಪನ್ನಗಳ ಬೆಲೆ ಕಡಿತ

ಅಮುಲ್ ಕಂಪನಿಯ ಪ್ರಕಾರ, ಬೆಲೆ ಹೆಚ್ಚಳವು ಅಮುಲ್‌ನ ಅತ್ಯಂತ ಹೆಚ್ಚು ಸೇವಿಸುವ ಕೆಲವು ಹಾಲಿನ ಉತ್ಪನ್ನಗಳನ್ನು ಒಳಗೊಳ್ಳುತ್ತದೆ, ಅವುಗಳೆಂದರೆ, ಅಮುಲ್ ಗೋಲ್ಡ್, ಅಮುಲ್ ತಾಜಾ, ಅಮುಲ್ ಹಸು ಹಾಲು, ಅಮುಲ್ ಎಮ್ಮೆ ಹಾಲು, ಅಮುಲ್ ಸ್ಲಿಮ್ ಆ್ಯಂಡ್ ಟ್ರಿಮ್, ಅಮುಲ್ ಸ್ಟ್ಯಾಂಡರ್ಡ್ ಮಿಲ್ಕ್, ಅಮುಲ್ ಟಿ-ಸ್ಪೆಷಲ್.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಜೆಪಿಯ 2022ರ ಆದೇಶ ಹಿಂಪಡೆದ ಸರ್ಕಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ – Kannada News | Karnataka passes a new order allowing students to wear Hijab, Rudraksh, Janivara And other faith based symbols along with prescribed uniforms in schools & PU colleges.

ಬೆಂಗಳೂರು, (ಮೇ 13): ಕರ್ನಾಟಕದಲ್ಲಿ (Karnataka)  ಶಾಲೆ-ಕಾಲೇಜುಗಳಲ್ಲಿ (schools And colleges) ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಜನಿವಾರ ಮತ್ತು ಹಿಜಾಬ್ (Hijab) ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ಮತ್ತು ಶಿಸ್ತನ್ನು ಕಾಪಾಡುವ ಜೊತೆಗೆ, ತಾರತಮ್ಯವಿಲ್ಲದ ಮತ್ತು ಸಾಂವಿಧಾನಿಕವಾಗಿ ಸಮತೋಲಿತವಾದ ರೀತಿಯಲ್ಲಿ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸಲು ಅನುಮತಿಸುವ ಉದ್ದೇಶದಿಂದ 2022ರ ಆದೇಶವನ್ನು ಹಿಂಪಡೆದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಹೊಸ ನಿರ್ದೇಶನಗಳನ್ನು ನೀಡುವುದು ಅಗತ್ಯವೆಂದು ಸರ್ಕಾರವು ತೀರ್ಮಾನಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

  • ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ.
  • ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳ ವಸ್ತ್ರಗಳಿಗೆ ಅವಕಾಶ ನೀಡಿ ಆದೇಶದಲ್ಲಿ ಉಲ್ಲೇಖ.
  • ಬಿಜೆಪಿ ಸರಕಾರ ಹೊರಡಿಸಿದ್ದ ಹಿಜಾಬ್‌ ನಿಷೇಧ ಆದೇಶ ವಾಪಸ್ ಪಡೆದುಕೊಂಡ ಸಿದ್ದರಾಮಯ್ಯ ಸರ್ಕಾರ.

ವಿದ್ಯಾರ್ಥಿಗಳು ಜನಿವಾರ, ಶಿವದಾರ, ರುದ್ರಾಕ್ಷಿ, ಪೇಟ, ತಲೆ ವಸ್ತ್ರ ಅಥವಾ ಹಿಜಾಬ್ ಇತರೆ ಯಾವುದೇ ಸ್ವರೂಪದ ಸಾಂಪ್ರದಾಯಿಕ ಸಂಕೇತವನ್ನು ನಿಗದಿಪಡಿಸಲಾದ ಸಮವಸ್ತ್ರ ಜೊತೆಗೆ ಧರಿಸಬಹುದು. ಸಾಂಪ್ರದಾಯಿಕ ಮತ್ತು ಪದ್ಧತಿ ಆಧಾರಿತ ಸಂಕೇತ ಸಮವಸ್ತ್ರಕ್ಕೆ ಪೂರಕವಾಗಿರಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕೇಸರಿ ಶಾಲು ಬಗ್ಗೆ ಸ್ಪಷ್ಟತೆ ಇಲ್ಲ

2022ರಲ್ಲಿ ಉಡುಪಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಗಲಾಟೆ ಇಡೀ ದೇಶದಲ್ಲೇ ಹಿಜಾಬ್ ವಿಚಾರ ದೊಡ್ಡ ಸುದ್ದಿಯಾಗಿತ್ತು. ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದಿದ್ದಕ್ಕೆ ಹಿಂದೂ ಹುಡುಗರು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಹೀಗಾಗಿ ಇದು ಧರ್ಮದಂಗಲ್​ಗೆ ಕಾರಣವಾಗಿತ್ತು.  ಇದೀಗ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳ ವಸ್ತ್ರಗಳಿಗೆ ಅವಕಾಶ ಎಂದು ಹೊಸ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ. ಆದ್ರೆ, ಸಿಂಧೂರ, ಕುಂಕುಮ, ವಿಭೂತಿ, ಕೇಸರಿ ಶಾಲು ಮುಂತಾದವುಗಳ ಧರಿಸುವಿಕೆ ಬಗ್ಗೆ ಈ ಹೊಸ ಆದೇಶದಲ್ಲಿ ಉಲ್ಲೇಖವಾಗಿಲ್ಲ. ಕೇಸರಿ ಶಾಲು ಧರಿಸಲು ಅವಕಾಶ ಇದೆಯೋ, ಇಲ್ಲವೋ ಎಂದು ಸ್ಪಷ್ಟನೆ ನೀಡಿಲ್ಲ. ಹೀಗಾಗಿ ಮತ್ತೆ ಗೊಂದಲಗಳು ಶುರುವಾಗುವ ಸಾಧ್ಯತೆಗಳಿವೆ.

ಬಿಜೆಪಿ ಅವಧಿಯ ಆದೇಶ ಹಿಂಪಡೆದ ಸಿದ್ದರಾಮಯ್ಯ ಸರ್ಕಾರ

ಉಡುಪಿಯಲ್ಲಿ ಶುರುವಾದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ 2022ರಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಹೊರಡಿಸಿದ್ದ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸುವ ಕುರಿತ ಆದೇಶವನ್ನು ಇಂದು(ಮೇ 13) ಸಿದ್ದರಾಮಯ್ಯ ಸರಕಾರ ಹಿಂಪಡೆದಿದೆ. ಬಿಜೆಪಿ ಸರಕಾರ ಹೊರಡಿಸಿದ್ದ ಆದೇಶದ ಮೂಲಕ ಹಿಜಾಬ್‌ ಧರಿಸಲು ಅವಕಾಶ ನಿರಾಕರಿಸಲಾಗಿತ್ತು. ಇದೀಗ ಈ ಅದೇಶವನ್ನು ವಾಪಸ್‌ ಪಡೆಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 7:57 pm, Wed, 13 May 26

Source link

Tv9 Kannada News Live: ಕೇಸರಿ ಶಾಲ್‌ಗೆ ನಿರ್ಬಂಧ, ಹಿಜಾಬ್‌ಗೆ ಸರ್ಕಾರ ಗ್ರೀನ್ ಸಿಗ್ನಲ್! ಅಮೆರಿಕ, ಆಸ್ಟ್ರೇಲಿಯಾಕ್ಕೆ ರೊಟ್ಟಿ ರಫ್ತು – Kannada News | Karnataka News: Hijab Allowed, Temples Record Income, Kalaburagi Rotti Global

ಬೆಂಗಳೂರು, ಮೇ.13: 2022ರಲ್ಲಿ ರಾಜ್ಯದಾದ್ಯಂತ ದೊಡ್ಡ ಮಟ್ಟದ ಧರ್ಮದಂಗಲ್‌ಗೆ ಕಾರಣವಾಗಿದ್ದ ಹಿಜಾಬ್ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2025-26ರಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಾಲಯಗಳು ದಾಖಲೆಯ ಆದಾಯ ಗಳಿಸಿವೆ. ಕುಕ್ಕೆ ಸುಬ್ರಹ್ಮಣ್ಯ 167.89 ಕೋಟಿ ರೂ. ಗಳಿಸಿ ಸತತ 15ನೇ ವರ್ಷವೂ ರಾಜ್ಯದ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ. ಕಲಬುರಗಿ ರೊಟ್ಟಿ ಈಗ ಜಾಗತಿಕ ಮಟ್ಟಕ್ಕೆ ಕಾಲಿಟ್ಟಿದೆ. ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘಗಳು ಸಿದ್ಧಪಡಿಸಿದ ಈ ವಿಶಿಷ್ಟ ಆಹಾರ ಅಮೆರಿಕ, ಕೆನಡಾ, ಆಸ್ಟ್ರೇಲಿಯಾದ ಕನ್ನಡಿಗರನ್ನು ತಲುಪಲಿದೆ. ಇ-ಖಾತಾ, ನಂಬಿಕೆ ನಕ್ಷೆ ಸೇರಿ ಬೆಂಗಳೂರಿನ ಜನರಿಗಾಗಿ ಈಗಾಗಲೇ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದೆ.

ಕೇಸರಿ ಶಾಲ್‌ಗೆ ನೋ, ಹಿಜಾಬ್‌ಗೆ ಎಸ್ ಎಂದ ಸರ್ಕಾರ

2022ರಲ್ಲಿ ರಾಜ್ಯದಾದ್ಯಂತ ದೊಡ್ಡ ಮಟ್ಟದ ಧರ್ಮದಂಗಲ್‌ಗೆ ಕಾರಣವಾಗಿದ್ದ ಹಿಜಾಬ್ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದ್ದು, ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. 2022ರಲ್ಲಿ ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕೆ ಪ್ರತಿಯಾಗಿ ಇತರ ವಿದ್ಯಾರ್ಥಿಗಳು ಕೇಸರಿ ಶಾಲ್ ಧರಿಸಿ ಕಾಲೇಜಿಗೆ ಬಂದಿದ್ದರು. ಇದು ಇಡೀ ದೇಶಾದ್ಯಂತ ದೊಡ್ಡ ಸುದ್ದಿಯಾಗಿದ್ದಲ್ಲದೆ, ಕಾನೂನು ಸಮರಕ್ಕೂ ಕಾರಣವಾಗಿತ್ತು. ಅಂದು ಈ ವಿಚಾರವು ರಾಜ್ಯದಲ್ಲಿ ದೊಡ್ಡ ಮಟ್ಟದ ಪರ-ವಿರೋಧ ಚರ್ಚೆಗಳಿಗೆ ದಾರಿ ಮಾಡಿಕೊಟ್ಟಿತ್ತು. ದೀರ್ಘಕಾಲದ ವಿವಾದದ ಬಳಿಕ ಈಗ ರಾಜ್ಯ ಸರ್ಕಾರ ಹಿಜಾಬ್ ವಿಚಾರದಲ್ಲಿ ತನ್ನ ನಿಲುವನ್ನು ಬದಲಿಸಿದ್ದು, ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅನುಮತಿ ನೀಡಿದೆ. ಆದರೆ, ಇದೇ ವೇಳೆ ಕೇಸರಿ ಶಾಲ್ ಧರಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದೆ. ಸರ್ಕಾರದ ಈ ನಿರ್ಧಾರವು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಹೇಳಿದಂತೆ ಗುಡ್​​ನ್ಯೂಸ್​​ ಕೊಟ್ಟ ಡಿಕೆಶಿ, ಕೇರಳದಲ್ಲಿ ಕಾಂಗ್ರೆಸ್​​ಗೆ ಕಸಿವಿಸಿ; ಈ ಹೊತ್ತಿನ ಟಾಪ್​​ 5 ಸುದ್ದಿಗಳು ಇಲ್ಲಿವೆ

ಕರ್ನಾಟಕದ ದೇವಸ್ಥಾನಗಳ ಆದಾಯದಲ್ಲಿ ನವ ದಾಖಲೆ

ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆದಾಯ ಗಳಿಕೆಯಲ್ಲಿ ಹೊಸ ಇತಿಹಾಸ ನಿರ್ಮಿಸಿವೆ. ಭಕ್ತರ ಸಂಖ್ಯೆಯಲ್ಲಿನ ಗಣನೀಯ ಏರಿಕೆ ಮತ್ತು ಕಾಣಿಕೆಗಳ ಮಹಾಪೂರವೇ ಈ ಸಾಧನೆಕ್ಕೆ ಕಾರಣವಾಗಿದೆ.

ಅಮೆರಿಕ, ಆಸ್ಟ್ರೇಲಿಯಾಕ್ಕೆ ರೊಟ್ಟಿ ರಫ್ತು

ಜಿಲ್ಲೆಯ ಸಾಂಪ್ರದಾಯಿಕ ಆಹಾರ ಮತ್ತು ವಿಶಿಷ್ಟ ಗುರುತಾಗಿರುವ ‘ಕಲಬುರಗಿ ರೊಟ್ಟಿ’ ಈಗ ಜಾಗತಿಕ ಮಾರುಕಟ್ಟೆಗೆ ಭರ್ಜರಿಯಾಗಿ ಲಗ್ಗೆ ಇಟ್ಟಿದೆ. ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘಗಳು ಸಿದ್ಧಪಡಿಸಿದ ರೊಟ್ಟಿಗಳ ಮೊದಲ ರಫ್ತು ಘಟಕಕ್ಕೆ ಚಾಲನೆ ನೀಡಲಾಗಿದ್ದು, ಇನ್ನು ಮುಂದೆ ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾದಲ್ಲಿರುವ ಕನ್ನಡಿಗರು ತಮ್ಮೂರಿನ ರೊಟ್ಟಿಯ ಸವಿಯನ್ನು ಸವಿಯಬಹುದಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ವೃದ್ಧಿಸಲು ನೀವು ಮಾಡಬೇಕಾದದ್ದು ಇಷ್ಟೇ – Kannada News | Follow these tips to ensure peace and tranquility at home

ಮನೆಯ (home) ವಾತಾವರಣ ಕುಟುಂಬ ಸದಸ್ಯರ ಮೇಲೆ ಸಾಕಷ್ಟು ಪರಿಣಾಮಗಳನ್ನು ಬೀರುತ್ತದೆ. ಮನೆಯ ವಾತಾವರಣ ನಕಾರಾತ್ಮಕವಾಗಿದ್ದರೆ, ದಾರಿದ್ರ್ಯ ಅಶಾಂತಿ ನೆಲೆಸಲು ಕಾರಣವಾಗುತ್ತದೆ. ಅದೇ ಮನೆಯ ವಾತಾವರಣ ಸಕಾರಾತ್ಮಕವಾಗಿದ್ದರೆ  ಕುಟುಂಬ ಸದಸ್ಯರ ಜೀವನದಲ್ಲಿ ಯಶಸ್ಸು, ಅದೃಷ್ಟ ಹೆಚ್ಚಾಗುತ್ತದೆ,  ಆರೋಗ್ಯ ಮತ್ತು ಸಂತೋಷ ಸಹ ಹೆಚ್ಚಾಗುತ್ತದೆ. ಆದರೆ ಹೆಚ್ಚಿನವರಿಗೆ ಮನೆಯಲ್ಲಿ ಧನಾತ್ಮಕ ಶಕ್ತಿ ನೆಲೆಸಲು ಏನು ಮಾಡಬೇಕು ಎಂಬುದು ಗೊತ್ತಿಲ್ಲ. ಹೀಗಿರುವಾಗ ಈ ಕೆಲವೊಂದು ಸರಳ ಸಲಹೆಗಳನ್ನು ಪಾಲಿಸುವ ಮೂಲಕ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬಬಹುದು, ಮನೆಯಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸುವಂತೆ ಮಾಡಬಹುದು.

ಮನೆಯಲ್ಲಿನ ಧನಾತ್ಮಕ ಶಕ್ತಿಯನ್ನು ವೃದ್ಧಿಸಲು ಏನು ಮಾಡಬೇಕು?

ಮನೆಯನ್ನು ಆದಷ್ಟು ಸ್ವಚ್ಛವಾಗಿರಿಸಿ: ಮನೆ ಅಚ್ಚುಕಟ್ಟಾಗಿದ್ದರೆ, ವಾತಾವರಣವೂ ಸಕಾರಾತ್ಮಕವಾಗಿರುತ್ತದೆ. ಅದೇ ಮನೆ ಅಸ್ತವ್ಯಸ್ತವಾಗಿದ್ದರೆ ಇದು  ಧನಾತ್ಮಕ ಶಕ್ತಿ ಹರಡುವುದನ್ನು ತಡೆಯುತ್ತದೆ. ಹಾಗಾಗಿ ಸಾಧ್ಯವಾದಷ್ಟು ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಮನೆ ಸ್ವಚ್ಛವಾಗಿದ್ದರೆ, ಮನೆ ಸದಸ್ಯರು ಖುಷಿ ಖುಷಿಯಾಗಿರುತ್ತಾರೆ.

ಮನೆಯಲ್ಲಿ ನೈಸರ್ಗಿಕ ಬೆಳಕು ಮತ್ತು ಗಾಳಿಯ ಹರಿವನ್ನು ಹೆಚ್ಚಿಸಿ: ಬೆಳಗಿನ ಸೂರ್ಯನ ಬೆಳಕು ಮನೆಯನ್ನು ಪ್ರವೇಶಿಸುವಂತೆ ನೋಡಿಕೊಳ್ಳಿ.  ತಾಜಾ ಗಾಳಿ ಮತ್ತು ನೈಸರ್ಗಿಕ ಬೆಳಕು ಸ್ವಯಂಚಾಲಿತವಾಗಿ ಮನೆಯ ಧನಾತ್ಮಕ  ಶಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ಮನೆಯ  ಪರಿಸರವನ್ನು ರಿಫ್ರೆಶ್ ಮಾಡುತ್ತದೆ.

ಸಾಧ್ಯವಾದಷ್ಟು ಸಸ್ಯಗಳನ್ನು ನೆಡಿ:
ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಅತ್ಯುತ್ತಮ ಮೂಲವೆಂದರೆ ಸಸ್ಯಗಳು. ಮನಿ ಪ್ಲಾಂಟ್, ಬಿದಿರು ಸೇರಿದಂತೆ ಒಂದಷ್ಟು ಇನ್‌ಡೋರ್‌ ಪ್ಲಾಂಟ್‌ಗಳನ್ನು ಮನೆಯ ಒಳಗೆ ಇರಿಸಿ. ಈ ಹಸಿರು ಸಸ್ಯಗಳು ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ಹರಡುತ್ತದೆ. ಇವು ಒತ್ತಡವನ್ನು ಕಡಿಮೆ ಮಾಡುವುದಲ್ಲದೆ, ಮನಸ್ಥಿತಿಯನ್ನು ಸುಧಾರಿಸುತ್ತದೆ.

ಮನೆಯಲ್ಲಿಯಲ್ಲಿ ಸುಗಂಧ ಮತ್ತು ಉತ್ತಮ ಧ್ವನಿ ಹಡುವಂತೆ ನೋಡಿಕೊಳ್ಳಿ:   ಧ್ವನಿ ಮತ್ತು ಸುಗಂಧ ಎರಡೂ ಧನಾತ್ಮಕ ಶಕ್ತಿಯನ್ನು ಸಕ್ರಿಯಗೊಳಿಸುತ್ತವೆ. ಗಾಳಿಯ ಗಂಟೆಗಳು, ಗಂಟೆಗಳು ಮತ್ತು ಸಕಾರಾತ್ಮಕ ಸಂಗೀತವು ಮನೆಯ ವಾತಾವರಣವನ್ನು ಶಾಂತ ಮತ್ತು ಶಕ್ತಿಯುತವಾಗಿಸುತ್ತದೆ. ಮತ್ತು ತಾಜಾ ಪರಿಮಳವು ನೆಮ್ಮದಿಯನ್ನು ನೀಡುತ್ತದೆ. ಇದಕ್ಕಾಗಿ ರೂಮ್‌ ಫ್ರೆಶ್ನರ್‌, ಪರಿಮಳಯುಕ್ತ ಕ್ಯಾಂಡಲ್‌ಗಳನ್ನು ಬಳಸಿ.

ಇದನ್ನೂ ಓದಿ: ಬೇಸಿಗೆಯಲ್ಲಿ ಹಾವುಗಳು ಪದೇ ಪದೇ ಮನೆ ಬಳಿ ಕಾಣಿಸಿಕೊಳ್ಳಲು ಮರ ಗಿಡಗಳೇ ಮುಖ್ಯ ಕಾರಣ

ಉತ್ತಮ ಬಣ್ಣವನ್ನು ಆರಿಸಿ: ನಿಮ್ಮ ಮನೆಯ ಗೋಡೆಗಳಿಗೆ ಬಿಳಿ, ಕ್ರೀಮ್‌, ಮತ್ತು ತಿಳಿ ನೀಲಿ ಬಣ್ಣದ ಪೈಂಟ್‌ ಬಳಿಯಿರಿ. ತಿಳಿ ಬಣ್ಣದ ಕರ್ಟನ್‌ಗಳನ್ನೇ ಆರಿಸಿ. ಈ ಬಣ್ಣಗಳು ಮನಸ್ಸನ್ನು ಶಾಂತಗೊಳಿಸುತ್ತದೆ.

ಹಾಳಾದ ವಸ್ತುಗಳನ್ನು ತೆಗೆದು ಹಾಕಿ: ಕೆಲವರು ಹಾಳಾದ ವಸ್ತುಗಳನ್ನು ಎಸೆಯದೆ ಮನೆಯಲ್ಲೇ ಇಟ್ಟುಬಿಡುತ್ತಾರೆ. ಇದು ನಕಾರಾತ್ಮಕತೆಯನ್ನು ಹರಡುತ್ತದೆ. ಹಾಗಾಗಿ ಹಾಳಾದ ವಸ್ತುಗಳನ್ನು, ಕಸಗಳನ್ನು ಮನೆಯಿಂದ ಹೊರಗೆ ಹಾಕಿ, ಮನೆಯನ್ನು ಆದಷ್ಟು ಸ್ವಚ್ಛವಾಗಿಟ್ಟುಕೊಳ್ಳಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version