Headlines

IPL 2026: RCB ಸೋಲಿಗೆ ಈ 5 ಅಂಶಗಳೇ ಕಾರಣ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಆರ್‌ಸಿಬಿ ನೀಡಿದ್ದ 202 ರನ್‌ಗಳ ಬೃಹತ್ ಗುರಿಯನ್ನು ರಾಜಸ್ಥಾನ್ ತಂಡ ಇನ್ನು 12 ಎಸೆತಗಳು ಬಾಕಿ ಇರುವಂತೆಯೇ ತಲುಪಿದೆ. ಈ ಮೂಲಕ 6 ವಿಕೆಟ್​ಗಳ ಜಯ ಸಾಧಿಸಿದೆ. ಇತ್ತ ಆರ್​ಸಿಬಿ ತಂಡವು ಬೃಹತ್ ಮೊತ್ತ ಪೇರಿಸಿದರೂ ಈ ಪಂದ್ಯದಲ್ಲಿ ಗೆಲ್ಲಲು ಸಾಧ್ಯವಾಗದಿರುವುದು ಅಚ್ಚರಿ. ಅಂದರೆ ಆರ್​ಸಿಬಿಗಿಂತ ರಾಜಸ್ಥಾನ್ ರಾಯಲ್ಸ್…

Read More

ನನ್ನಿಂದ ತಪ್ಪಾಗಿದೆ: ತ್ರಿಷಾ ಬಗ್ಗೆ ಮಾತನಾಡಿ ಕ್ಷಮೆ ಕೇಳಿದ ಬಿಜೆಪಿ ಮುಖಂಡ ನೈನಾರ್ ನಾಗೇಂದ್ರನ್ – Kannada News | Nainar Nagendran apologises for remark on Trisha and Thalapathy Vijay

ಖ್ಯಾತ ನಟಿ ತ್ರಿಷಾ (Trisha Krishnan) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಈಗ ಕ್ಷಮೆ ಕೇಳಿದ್ದಾರೆ. ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ (Thalapathy Vijay) ಬಗ್ಗೆ ಟೀಕೆ ಮಾಡುವಾಗ ನಾಗೇಂದ್ರನ್ ಅವರು ನಾಲಿಗೆ ಹರಿಬಿಟ್ಟಿದ್ದರು. ‘ವಿಜಯ್ ಅವರಿಗೆ ರಾಜಕೀಯದ ಅನುಭವ ಕಡಿಮೆ. ರಾಜಕೀಯದ ಅನುಭವ ಆಗಬೇಕಾದ್ರೆ ತ್ರಿಷಾ ಮನೆಯಿಂದ ವಿಜಯ್ ಹೊರಬರಲಿ’ ಎಂದು ನೈನಾರ್ ನಾಗೇಂದ್ರನ್ (Nainar Nagendran) ಹೇಳಿದ್ದರು. ಅವರ ಆ ಹೇಳಿಕೆಗೆ ತೀವ್ರ ಖಂಡನೆ…

Read More

ಭಾರತ- ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನ; ಹರ್ಮನ್ ಪಡೆ ಗೆದ್ದರಷ್ಟೇ ಸೆಮೀಸ್ ಆಸೆ ಜೀವಂತ – Kannada News | India Women vs Australia T20 World Cup: Semifinal Decider! Match Details and Squads

2026 ರ ಮಹಿಳಾ ಟಿ20 ವಿಶ್ವಕಪ್‌ನ (2026 Women’s T20 World Cup) ಕೊನೆಯ ಗುಂಪು ಪಂದ್ಯದಲ್ಲಿ ಭಾರತ ಮಹಿಳಾ ತಂಡ, ಆಸ್ಟ್ರೇಲಿಯಾ ಮಹಿಳಾ (India Women vs Australia Women) ತಂಡವನ್ನು ಎದುರಿಸಲಿದೆ. ಈ ಸುತ್ತಿನಲ್ಲಿ ಇದುವರೆಗೆ ನಾಲ್ಕು ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ ಮೂರು ಪಂದ್ಯಗಳನ್ನು ಗೆದ್ದು, ಆರು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇತ್ತ ಆಸ್ಟ್ರೇಲಿಯಾ ತಂಡ ಆಡಿರುವ ನಾಲ್ಕು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸೆಮಿಫೈನಲ್‌ ದೃಷ್ಟಿಯಿಂದ ಈ ಪಂದ್ಯ ಉಭಯ…

Read More

Gold Rate: ವಾರಾಂತ್ಯದಲ್ಲಿ ತಗ್ಗಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

ನವದೆಹಲಿ, ಮೇ 31: ಚಿನ್ನದ ಬೆಲೆ (Gold Rate) ಮತ್ತೆ ಇಳಿಕೆಯ ಹಾದಿಗೆ ಬಂದಿದೆ. ಈ ವಾರದ ಬಹುತೇಕ ದಿನ ಇಳಿಕೆಯಾಗಿದ್ದ ಚಿನ್ನದ ಬೆಲೆ ಶುಕ್ರವಾರ 145 ರೂಗಳಷ್ಟು ಹೆಚ್ಚಳಗೊಂಡಿತ್ತು. ಈಗ ವಾರಾಂತ್ಯದಲ್ಲಿ 55 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಿದೆ. ಇನ್ನು, ಬೆಳ್ಳಿ ಬೆಲೆ ಮತ್ತೊಮ್ಮೆ ಯಾವ ಬದಲಾವಣೆ ಇಲ್ಲದೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,500 ರುಪಾಯಿ ಇದೆ. 24…

Read More

Daily Devotional: ನಾಲಿಗೆ ಮೇಲೆ ಮಚ್ಚೆ ಇದ್ರೆ ನಿಜಕ್ಕೂ ನುಡಿದಂತೆ ನಡೆಯುತ್ತಾ? – Kannada News | Daily Devotional: Do Words Spoken by Those with Tongue Moles Come True?

ಬೆಂಗಳೂರು, ಫೆಬ್ರುವರಿ​ 07: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ನಾಲಿಗೆ ಮೇಲೆ ಮಚ್ಚೆ ಇರುವವರ ಕುರಿತಾದ ನಂಬಿಕೆಗಳನ್ನು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಹಿರಿಯರ ಪ್ರಕಾರ, ನಾಲಿಗೆ ಮೇಲೆ ಮಚ್ಚೆ ಇರುವವರ ಮಾತುಗಳು ನಿಜವಾಗುತ್ತವೆ. ಇದು ನಿಜವೇ ಎಂಬ ಪ್ರಶ್ನೆಗೆ ಉತ್ತರವಾಗಿ, ಶಾಸ್ತ್ರಗಳು ಮತ್ತು ನಂಬಿಕೆಗಳ ಪ್ರಕಾರ ಇದು ಸತ್ಯವಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಸಾಮುದ್ರಿಕ ಶಾಸ್ತ್ರದ ಪ್ರಕಾರ, ನಾಲಿಗೆಯ ಮೇಲೆ ಮಚ್ಚೆ ಇರುವ ವ್ಯಕ್ತಿಗಳು ಪೂರ್ವಜನ್ಮದಲ್ಲಿ ಪುಣ್ಯ ಕಾರ್ಯಗಳನ್ನು ಮಾಡಿರುತ್ತಾರೆ. ಸಮಾಜಸೇವೆ, ದೀನದಲಿತರ ಸೇವೆ,…

Read More

ಟಿ20 ವಿಶ್ವಕಪ್​ನಿಂದ ಹೊರಬಿದ್ದ ಕನ್ನಡತಿ ಶ್ರೇಯಾಂಕ ಪಾಟೀಲ್..! – Kannada News | Shreyanka Patil Out of T20 World Cup: India Women’s Big Setback

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಲ್ಲಿ ಭೀಗುತ್ತಿದ್ದ ಭಾರತದ ವನಿತಾ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಆಲ್‌ರೌಂಡರ್ ಶ್ರೇಯಾಂಕ ಪಾಟೀಲ್ ಗಾಯದಿಂದಾಗಿ ಇಡೀ ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದಾರೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ವೇಳೆ ಶ್ರೇಯಾಂಕ ಪಾಟೀಲ್ ಗಾಯಕ್ಕೆ ಒಳಗಾಗಿದ್ದರು. ಇದರಿಂದಾಗಿ ಅವರು ಆಟವನ್ನು ಅರ್ಧಕ್ಕೆ ನಿಲ್ಲಿಸಿ ಮೈದಾನ ತೊರೆದಿದ್ದರು. ಇದಾದ ಬಳಿಕ ಶ್ರೇಯಾಂಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೇಯಾಂಕ ಅವರ ಗಾಯ ಗಂಭೀರವಾಗಿರುವುದರಿಂದ ಅವರನ್ನು ಪಂದ್ಯಾವಳಿಯಿಂದ…

Read More

ಹಿಮಾಚಲ ಪ್ರದೇಶ: ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಶಿರಚ್ಛೇದ ಮಾಡಿದ ಕ್ರೂರಿಗಳು

ಶಿಮ್ಲಾ, ಏಪ್ರಿಲ್ 13: ಹಿಮಾಚಲ ಪ್ರದೇಶ ಇಂದು(ಏಪ್ರಿಲ್ 13) ನಡೆದ ಒಂದು ಪೈಶಾಚಿಕ ಕೃತ್ಯ ಜನತೆಯನ್ನು ಆತಂಕಕ್ಕೆ ದೂಡಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆ(Murder) ಮಾಡಿರುವ ಘಟನೆ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಸುಮಾರು 9.15ರ ಸಮಯ. ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಜನಜಂಗುಳಿ ನಡುವೆಯೇ ಈ ಘೋರ ದುರಂತ ಸಂಭವಿಸಿದೆ. ಎಂದಿನಂತೆ ಕಾಲೇಜಿಗೆಂದು ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು…

Read More

ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ? ಕಾರಣ ಬಿಚ್ಚಿಟ್ಟ ಅಳಿಯ – Kannada News | Dr Manjunath Gives Reasons about Why Chennamma Funeral Nearr Bettada Ranganath Temple

ಹಾಸನ, (ಜುಲೈ 19): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (Chennamma Deve Gowda) ಅವರ ಅಂತ್ಯಕ್ರಿಯೆ ನಾಳೆ (ಜುಲೈ 20) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಬೆಟ್ಟದ ರಂಗನಾಥ ಸ್ವಾಮಿ ತಪ್ಪಲಿನಲ್ಲಿ ನಡೆಯಲಿದೆ. ಸಕಲ ಸರ್ಕಾರಿ ಗೌರವಗೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಖುದ್ದು ದೇವೇಗೌಡ, ಅಳಿಯ ಡಾ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಇನ್ನು ಇದೇ…

Read More

ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ! – Kannada News | Cow suddenly jumped onto the highway causing major accident in Rajasthan

ಜೈಪುರ, ಏಪ್ರಿಲ್ 20: ರಾಜಸ್ಥಾನದ ಜನನಿಬಿಡ ಹೆದ್ದಾರಿಯಲ್ಲಿ ನಡೆದ ಘಟನೆಯೊಂದು ರಸ್ತೆ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ದಿಢೀರನೆ ಹೈವೇಯಲ್ಲಿ ಅಡ್ಡ ಬಂದ ಹಸುವನ್ನು ಕಾಪಾಡಲು ಪ್ರಯತ್ನಿಸಿದ ಕಾರು ಚಾಲಕ ಬ್ರೇಕ್ ಹಾಕಿದ್ದಾನೆ. ಆಗ ಹಿಂದಿನಿಂದ ಬಂದ ಕಾರು ಚಾಲಕ ನಿಯಂತ್ರಣವನ್ನು ಕಳೆದುಕೊಂಡನು. ಆಗ ಆ ಕಾರು ಡಿವೈಡರ್ ಮೇಲೆ ಹಾರಿ ಅಪಘಾತಕ್ಕೀಡಾಗಿದೆ (Accident). ಇದೆಲ್ಲವೂ ಕಣ್ಣುಮುಚ್ಚಿ ಬಿಡುವಷ್ಟರಲ್ಲಿ ನಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಭಾರತದ ಜನರೇ ನೆಹರೂ, ಇಂದಿರಾ ಗಾಂಧಿಗೆ ಸಮಸ್ಯೆಯಾಗಿದ್ದರು; ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ – Kannada News | Nehru, Indira Gandhi saw Indians as problems PM Modi attacks Congress in Rajya Sabha

ನವದೆಹಲಿ, ಫೆಬ್ರವರಿ 5: ಇಂದು ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿಗಳಾದ ನೆಹರೂ, ಇಂದಿರಾ ಗಾಂಧಿಯ ಹೆಸರನ್ನು ಕೂಡ ಪ್ರಸ್ತಾಪಿಸಿದ ಮೋದಿ, “ಅವರಿಬ್ಬರಿಗೂ ಭಾರತೀಯರು ಸಮಸ್ಯೆಯಾಗಿದ್ದರು. ಕಾಂಗ್ರೆಸ್ ಅವಧಿಯಲ್ಲಿ ಒಪ್ಪಂದ ಎಂದರೆ ಬೋಫೋರ್ಸ್ ಎಂಬಂತಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ವಿಷನ್, ಐಡಿಯಾ, ಪ್ಲಾನ್ ಇರಲಿಲ್ಲ” ಎಂದು ಕಿಡಿಕಾರಿದ್ದಾರೆ. “ಕಾಂಗ್ರೆಸ್ 2014ರಲ್ಲಿ ಒಂದು ಅವ್ಯವಸ್ಥೆಯನ್ನು ಬಿಟ್ಟು…

Read More