ಬೆಂಗಳೂರು ಮಳೆ ಅವಾಂತರ: ಬನಶಂಕರಿ ಮೆಟ್ರೋ ನಿಲ್ದಾಣಕ್ಕೂ ನುಗ್ಗಿದ ನೀರು – Kannada News | Heavy Rain Batters Bengaluru: Waterlogging at Banashankari Metro Causes Chaos

ಬೆಂಗಳೂರು, ಏ.29: ರಾಜಧಾನಿಯಲ್ಲಿ ಮುಂದುವರಿದಿರುವ ಧಾರಾಕಾರ ಮಳೆಯು ಮೆಟ್ರೋ ನಿಲ್ದಾಣಗಳನ್ನೂ ಬಿಟ್ಟಿಲ್ಲ. ನಗರದ ಜನನಿಬಿಡ ಬನಶಂಕರಿ ಮೆಟ್ರೋ ನಿಲ್ದಾಣದ ಒಳಭಾಗಕ್ಕೆ ಮಳೆ ನೀರು ನುಗ್ಗಿದ್ದು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಗರದಾದ್ಯಂತ ಗುಡುಗು ಸಹಿತ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ಬನಶಂಕರಿ ಮೆಟ್ರೋ ನಿಲ್ದಾಣದ ಒಳಗೆ ನೀರು ಹರಿದು ಬಂದಿದೆ. ನಿಲ್ದಾಣದ ಟಿಕೆಟ್ ಕೌಂಟರ್ ಪ್ರದೇಶ ಸೇರಿದಂತೆ ಪ್ರಯಾಣಿಕರು ಓಡಾಡುವ ಜಾಗಗಳಲ್ಲಿ ಮಳೆ ನೀರು ನಿಂತಿದೆ. ಛಾವಣಿಯಿಂದ ನೀರು ತೊಟ್ಟಿಕ್ಕುತ್ತಿರುವುದರಿಂದ ಮೆಟ್ರೋ ಏರಲು ಬಂದ ಜನರು ಅತ್ತ ಇತ್ತ ಚಲಿಸಲಾಗದೆ ಪರದಾಡುವಂತಾಯಿತು. ಮಳೆ ಹಾನಿಯಿಂದಾಗಿ ಮೆಟ್ರೋ ನಿಲ್ದಾಣದ ಆವರಣದ ಸ್ವಚ್ಛತೆಗೂ ಧಕ್ಕೆಯುಂಟಾಗಿದ್ದು, ಬಿಡುವುವಿಲ್ಲದೆ ಸುರಿಯುತ್ತಿರುವ ಮಳೆಯಿಂದಾಗಿ ಸಾರ್ವಜನಿಕರು ಮೆಟ್ರೋ ಸೇವೆ ಪಡೆಯಲು ಹರಸಾಹಸ ಪಡುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

MI vs SRH IPL 2026 Live Score: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ – Kannada News | Mumbai Indians vs Sunrisers Hyderabad IPL 2026 Live Cricket Score MI vs SRH Match on 29th April latest news in Kannada

ಐಪಿಎಲ್ 19 ನೇ ಸೀಸನ್‌ನ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯುತ್ತಿದೆ. ಇದು ಮುಂಬೈಗೆ ಎಂಟನೇ ಪಂದ್ಯ ಮತ್ತು ಹೈದರಾಬಾದ್‌ಗೆ ಒಂಬತ್ತನೇ ಪಂದ್ಯ. ಮುಂಬೈ ಇದುವರೆಗೆ 7 ಪಂದ್ಯಗಳಲ್ಲಿ 5 ರಲ್ಲಿ ಸೋತಿದೆ. ಅಲ್ಲದೆ, ವಾಂಖೆಡೆ ಕ್ರೀಡಾಂಗಣದಲ್ಲಿ ಕಳೆದ 3 ಸತತ ಪಂದ್ಯಗಳಲ್ಲಿ ಮುಂಬೈ ಸೋತಿದೆ. ಆದ್ದರಿಂದ, ಮುಂಬೈ ತಂಡವು ಮತ್ತೆ ಗೆಲುವಿನ ಲಯಕ್ಕೆ ಮರಳುವ ಸವಾಲನ್ನು ಎದುರಿಸಲಿದೆ. ಹೈದರಾಬಾದ್ 8 ಪಂದ್ಯಗಳಲ್ಲಿ 5 ರಲ್ಲಿ ಗೆದ್ದಿದೆ. ಆದ್ದರಿಂದ, ಹೈದರಾಬಾದ್ 2 ಅಂಕಗಳನ್ನು ಪಡೆಯುವ ಮೂಲಕ ಪ್ಲೇಆಫ್‌ನತ್ತ 1 ಹೆಜ್ಜೆ ಮುಂದಿಡಲು ಸಿದ್ಧವಾಗಿದೆ.

Source link

ಹಿಜಾಬ್ ಧರಿಸಿದ್ದಕ್ಕೆ CET ಬರೆಯಲು ಅವಕಾಶ ನಿರಾಕರಣೆ: ವಿದ್ಯಾರ್ಥಿನಿಯ ತಂದೆಯಿಂದ ದೂರು – Kannada News | Chikkaballapur CET Exam:Student Barred Over Hijab, Father Files Complaint, Minister Assures Action

ಚಿಕ್ಕಬಳ್ಳಾಪುರ, ಏಪ್ರಿಲ್​​ 29: ಬಿಜಿಎಸ್ ಸೈನ್ಸ್ ಅಕಾಡೆಮಿಯಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಕಾರಣ, ವಿದ್ಯಾರ್ಥಿನಿಯ ತಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಲಿಖಿತ ದೂರನ್ನು ಸಲ್ಲಿಸಿದ್ದಾರೆ. ದೂರಿನ ಆಧಾರದ ಮೇಲೆ, ಘಟನೆಯ ಕುರಿತು ತನಿಖೆ ನಡೆಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ತನಿಖಾ ವರದಿಯನ್ನು ಶೀಘ್ರವಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈ ಪ್ರಕರಣದ ಕುರಿತು ತನಿಖಾ ತಂಡವು ವಿದ್ಯಾರ್ಥಿನಿ, ಆಕೆಯ ತಂದೆ ಮತ್ತು ಪರೀಕ್ಷಾ ಕೇಂದ್ರದ ಪ್ರಾಂಶುಪಾಲರನ್ನು ವಿಚಾರಣೆಗೊಳಪಡಿಸಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮವನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

5 State Assembly Election Exit Poll Results 2026: ಅಸ್ಸಾಂ, ಬಂಗಾಳದಲ್ಲಿ ಬಿಜೆಪಿಗೆ ಭರ್ಜರಿ ಜಯ, ಕೇರಳ, ತಮಿಳುನಾಡಿನಲ್ಲಿ ಕಾಂಗ್ರೆಸ್ ಮೈತ್ರಿಗೆ ಗೆಲುವು; ಎಕ್ಸಿಟ್ ಪೋಲ್ ಸಮೀಕ್ಷೆ ಇಲ್ಲಿದೆ – Kannada News | 5 State Assembly Election Exit Poll Results 2026 News and Updates in Kannada Kerala, Assam, Puducherry, Tamil Nadu and West Bengal Vidhan Sabha BJP Congress TMC

ನವದೆಹಲಿ, ಏಪ್ರಿಲ್ 29: ಈಗಾಗಲೇ ಅಸ್ಸಾಂ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ (Assermbly Electiopns 2026) ನಡೆದಿದೆ. ಮೇ 4ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. 5 ರಾಜ್ಯಗಳ ಚುನಾವಣಾ ಫಲಿತಾಂಶಗಳ ಮೊದಲು ಎಲ್ಲರ ಗಮನವು ಚುನಾವಣೋತ್ತರ ಸಮೀಕ್ಷೆಗಳ (Exit Poll Results) ಮೇಲೆ ಇದೆ. ಇದಿಗ ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟವಾಗಿದ್ದು, ಯಾವ ಸಮೀಕ್ಷೆ ಏನು ಹೇಳುತ್ತದೆ ಎಂಬುದರ ಮಾಹಿತಿ ಇಲ್ಲಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯ ಎಕ್ಸಿಟ್ ಪೋಲ್ ಹೊರಬಿದ್ದಿದೆ. ಎಕ್ಸಿಟ್ ಪೋಲ್ ಪ್ರಕಾರ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಬಿಜೆಪಿ ಗೆಲುವಿನ ನಗು ಬೀರಲಿದೆ. ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಕೇರಳದಲ್ಲಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಬಹುಮತ ಪಡೆಯಲಿದ್ದು, ಬಿಜೆಪಿ ಹೀನಾಯ ಸೋಲನ್ನು ಅನುಭವಿಸಲಿದೆ. ಪುದುಚೆರಿಯ ಎಕ್ಸಿಟ್ ಪೋಲ್ ಫಲಿತಾಂಶ ಮಾತ್ರ ಹೊರಬೀಳುವುದು ಬಾಕಿ ಇದೆ.

ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆದರೆ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಿತು. ಇಂದು ಪಶ್ಚಿಮ ಬಂಗಾಳದ 2ನೇ ಮತ್ತು ಕೊನೆಯ ಹಂತದ ಮತದಾನ ನಡೆದಿದೆ. ನಿಖರವಾದ ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ.

Published On – 6:55 pm, Wed, 29 April 26

Source link

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯ ಅಬ್ಬರ: ಕೇವಲ 30 ನಿಮಿಷಗಳಲ್ಲಿ ನಗರ ಸ್ತಬ್ಧ – Kannada News | Bengaluru Battles Aftermath of Severe Downpour: Widespread Flooding and Fallen Trees Reported

ಬೆಂಗಳೂರು, ಏ.29: ರಾಜ್ಯ ರಾಜಧಾನಿಯಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯು ನಗರದಲ್ಲಿ ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದೆ. ಶಿವಾಜಿನಗರ, ಕೆಆರ್ ಪುರ, ಕೋರಮಂಗಲ, ವಸಂತನಗರ, ಹೆಬ್ಬಾಳ ಮತ್ತು ಯಲಹಂಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಳೆಯ ತೀವ್ರತೆಗೆ ನಗರದ ಹಲವೆಡೆ ಮರಗಳು ಮತ್ತು ಮರದ ರೆಂಬೆ ಕೊಂಬೆಗಳು ಧರೆಗೆ ಉರುಳಿವೆ. ಬೆಂಗಳೂರಿನ ಕಮಿಷನರ್ ಕಚೇರಿ ಆವರಣದಲ್ಲಿ ಮರದ ಕೊಂಬೆಗಳು ಮುರಿದು ಬಿದ್ದಿದ್ದು, ಕೆಲವು ವಾಹನಗಳಿಗೆ ಹಾನಿಯಾಗಿದೆ. ಆವರಣದಲ್ಲಿ ನೀರು ತುಂಬಿ ಹೊಳೆಯಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ತಗ್ಗು ಪ್ರದೇಶದ ರಸ್ತೆಗಳು ಜಲಾವೃತವಾಗಿ ದ್ವಿಚಕ್ರ ವಾಹನ ಸವಾರರ ಸಂಚಾರ ಅಸ್ತವ್ಯಸ್ತಗೊಂಡಿದೆ. ಕ್ರೆಸೆಂಟ್ ರಸ್ತೆ ಮತ್ತು ಶಿವಾನಂದ ಸರ್ಕಲ್‌ನಲ್ಲೂ ಮರಗಳು ಬಿದ್ದಿರುವ ಘಟನೆಗಳು ವರದಿಯಾಗಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Rain Tragedy: ಬೆಂಗಳೂರಿನಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನರ ಸಾವು – Kannada News | Bengaluru Rain Tragedy: 7 Dead After Compound Wall Collapse near Bowring Hospital

ಬೆಂಗಳೂರು, ಏಪ್ರಿಲ್​ 29: ಬೆಂಗಳೂರಿನಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನರು ಸಾವನ್ನಪ್ಪಿರುವಂತಹ ಭೀಕರ ದುರಂತ ನಡೆದಿದೆ. ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಜನರು ದುರ್ಮರಣ ಹೊಂದಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Published On – 6:40 pm, Wed, 29 April 26

Source link

RBI Recruitment 2026: ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ನ್ಯೂಸ್; RBIನಲ್ಲಿ 60 ಗ್ರೇಡ್ ಬಿ ಹುದ್ದೆಗಳಿಗೆ ನೇಮಕಾತಿ – Kannada News | RBI Grade B Officer Recruitment 2026: 60 Vacancies – Apply Now!

ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ (RBI) ವೃತ್ತಿ ಜೀವನ ಆರಂಭಿಸುವ ಕನಸು ಹೊತ್ತಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವೊಂದು ಒದಗಿಬಂದಿದೆ. ಆರ್‌ಬಿಐ ವಿವಿಧ ಇಲಾಖೆಗಳಲ್ಲಿ ‘ಗ್ರೇಡ್ ಬಿ’ ಅಧಿಕಾರಿಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಜನರಲ್, ಡಿಎಸ್‌ಐಎಂ (DSIM) ಮತ್ತು ಡಿಇಪಿಆರ್ (DEPR) ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 60 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉನ್ನತ ಹುದ್ದೆ ಅಲಂಕರಿಸಲು ಬಯಸುವವರಿಗೆ ಇದು ಉತ್ತಮ ವೇದಿಕೆಯಾಗಿದೆ.

ಈ ನೇಮಕಾತಿ ಪ್ರಕ್ರಿಯೆಯು ಏಪ್ರಿಲ್ 29 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಮೇ 20 ರೊಳಗೆ ಆರ್‌ಬಿಐನ ಅಧಿಕೃತ ವೆಬ್‌ಸೈಟ್ rbi.org.in ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಟ್ಟು 60 ಹುದ್ದೆಗಳಲ್ಲಿ, ಗ್ರೇಡ್ ಬಿ ಅಧಿಕಾರಿ (ಸಾಮಾನ್ಯ) ವಿಭಾಗಕ್ಕೆ 40 ಹುದ್ದೆಗಳು, ಆರ್ಥಿಕತೆ ಮತ್ತು ನೀತಿ ಸಂಶೋಧನಾ ಇಲಾಖೆ (DEPR) ಗೆ 10 ಹಾಗೂ ಅಂಕಿಅಂಶ ಮತ್ತು ಮಾಹಿತಿ ನಿರ್ವಹಣಾ ಇಲಾಖೆ (DSIM) ಗೆ 10 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ಪ್ರಮುಖ ದಿನಾಂಕಗಳು ಮತ್ತು ಅರ್ಹತೆ:

ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಸೂಕ್ಷ್ಮವಾಗಿ ಗಮನಿಸುವುದು ಅಗತ್ಯವಾಗಿದೆ. ಸಾಮಾನ್ಯ ವಿಭಾಗದ ಮೊದಲ ಹಂತದ ಪರೀಕ್ಷೆಯು ಜೂನ್ 13 ರಂದು ನಡೆದರೆ, DEPR ಮತ್ತು DSIM ವಿಭಾಗಗಳ ಪರೀಕ್ಷೆ ಜೂನ್ 14 ರಂದು ನಡೆಯಲಿದೆ. ಇನ್ನು ಎರಡನೇ ಹಂತದ ಪರೀಕ್ಷೆಗಳು ಜುಲೈ 25 ಮತ್ತು 26 ರಂದು ನಿಗದಿಯಾಗಿವೆ. ಅರ್ಹತೆಯ ವಿಷಯಕ್ಕೆ ಬಂದರೆ, ಸಾಮಾನ್ಯ ವಿಭಾಗಕ್ಕೆ ಅರ್ಜಿ ಸಲ್ಲಿಸುವವರು ಪದವಿಯಲ್ಲಿ ಕನಿಷ್ಠ ಶೇ. 60 ಅಥವಾ ಸ್ನಾತಕೋತ್ತರ ಪದವಿಯಲ್ಲಿ ಶೇ. 55 ಅಂಕಗಳನ್ನು ಹೊಂದಿರಬೇಕು. ಇತರೆ ವಿಶೇಷ ವಿಭಾಗಗಳಿಗೆ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಕಡ್ಡಾಯವಾಗಿದೆ. ಅಭ್ಯರ್ಥಿಗಳ ವಯೋಮಿತಿ 21 ರಿಂದ 30 ವರ್ಷಗಳ ಒಳಗೆ ಇರಬೇಕು.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಆಯ್ಕೆ ಪ್ರಕ್ರಿಯೆ ಮತ್ತು ಆಕರ್ಷಕ ವೇತನ:

ಆರ್‌ಬಿಐ ಗ್ರೇಡ್ ಬಿ ಅಧಿಕಾರಿಗಳ ಆಯ್ಕೆಯು ಮೂರು ಹಂತದ ಕಠಿಣ ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ. ಮೊದಲಿಗೆ ಪ್ರಾಥಮಿಕ ಪರೀಕ್ಷೆ ನಡೆಯಲಿದ್ದು, ಅದರಲ್ಲಿ ಅರ್ಹತೆ ಪಡೆದವರು ಮುಖ್ಯ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಅಂತಿಮವಾಗಿ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಸಂದರ್ಶನಕ್ಕೆ ಕರೆಯಲಾಗುವುದು. ಈ ಎಲ್ಲಾ ಹಂತಗಳಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ. ವಿಶೇಷವೆಂದರೆ, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ಸುಮಾರು 1.50 ಲಕ್ಷದವರೆಗೆ ಆಕರ್ಷಕ ವೇತನ ಮತ್ತು ಇತರೆ ಸೌಲಭ್ಯಗಳು ಲಭ್ಯವಿರುತ್ತವೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರಗಳು ಧರೆಗೆ; ಕಮಿಷನರ್ ಕಚೇರಿ ಬಳಿ ಕಾರು ಜಖಂ! – Kannada News | Bengaluru Witnessed Intense Storm with Gusty Winds and Significant Damage

ಬೆಂಗಳೂರು, ಏ.29: ಭಾರಿ ಗುಡುಗು ಸಿಡಿಲು ಸಹಿತ ಮಳೆ ಮತ್ತು ಬಿರುಗಾಳಿ ಸಹಿತ ಹವಾಮಾನವು ನಗರದಾದ್ಯಂತ ಅವಾಂತರ ಸೃಷ್ಟಿಸಿದೆ. ಸಂಜೆಯ ವೇಳೆಗೆ ಶುರುವಾದ ಈ ಮಳೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ವಾಹನ ಸವಾರರು ಮತ್ತು ಪಾದಚಾರಿಗಳು ತೊಂದರೆಗೊಳಗಾಗಿದ್ದಾರೆ. ಬಿರುಗಾಳಿಯ ರಭಸಕ್ಕೆ ಹಲವು ಕಡೆಗಳಲ್ಲಿ ಮರದ ರೆಂಬೆ ಕೊಂಬೆಗಳು ಮುರಿದು ಬಿದ್ದಿವೆ. ನಿರ್ದಿಷ್ಟವಾಗಿ ಕಮಿಷನರ್ ಕಚೇರಿ ಸಮೀಪದ ಪ್ರದೇಶಗಳಲ್ಲಿ ದೊಡ್ಡ ಕೊಂಬೆಗಳು ನೆಲಕ್ಕುರುಳಿವೆ. ಈ ಸಂದರ್ಭದಲ್ಲಿ, ಗಾಳಿಯ ತೀವ್ರತೆಗೆ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಹಾನಿಯಾಗಿದೆ. ವೀಡಿಯೊದಲ್ಲಿ ಸೆರೆಯಾದ ದೃಶ್ಯಗಳ ಪ್ರಕಾರ, ಗಾಳಿಯ ರಭಸಕ್ಕೆ ಕಾರು ಒಂದು ಕಡೆಗೆ ಜಾರಿದ್ದು, ಅದರ ಮೇಲೆ ದೊಡ್ಡ ವಸ್ತು ಬಿದ್ದಂತೆ ಅಥವಾ ಕಾರು ಜಖಂಗೊಂಡಂತೆ ಕಾಣುತ್ತದೆ. “ಕಾರ್ ಯಾರ್ದೋ ಕಾರ್ ಕಥೆ ಮುಗೀತು” ಎಂದು ವೀಕ್ಷಕರು ಆಘಾತದಿಂದ ಹೇಳುತ್ತಿರುವುದು ಘಟನೆಯ ತೀವ್ರತೆಯನ್ನು ಎತ್ತಿ ತೋರಿಸುತ್ತದೆ. ಈ ಘಟನೆಗಳು ಬೆಂಗಳೂರಿನಲ್ಲಿ ಮಳೆಯಿಂದ ಉಂಟಾದ ಹಾನಿಯ ಪರಿಣಾಮವನ್ನು ಸ್ಪಷ್ಟಪಡಿಸುತ್ತವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಮಿಳುನಾಡು ಚುನಾವಣೆ ಫಲಿತಾಂಶಕ್ಕೂ ಮುನ್ನ ಶಿರಡಿ ಸಾಯಿಬಾಬಾ ದರ್ಶನ ಪಡೆದ ವಿಜಯ್ – Kannada News | Tamil Nadu Assembly Elections TVK Chief Vijay Visits Shirdi Seeks Sai Baba Blessings

ಶಿರಡಿ, ಏಪ್ರಿಲ್ 29: ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Assembly Elections) ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ (Vijay) ಇಂದು ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಸಾಮಾಜಿಕ ಮಾಧ್ಯಮಗಳಲ್ಲಿ ವಿಜಯ್ ಅವರ ಈ ವಿಡಿಯೋ ವೈರಲ್ ಆಗಿವೆ. ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ವಿಜಯ್ ದೇವಾಲಯದ ಅಧಿಕಾರಿಗಳಿಂದ ಪ್ರಸಾದ ಸ್ವೀಕರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Vastu Guide: ವಾಸ್ತು ಪ್ರಕಾರ ದೇವರ ಕೋಣೆ ಎಲ್ಲಿರಬೇಕು? ತಪ್ಪಾದ ದಿಕ್ಕಿನಲ್ಲಿದ್ದರೆ ಎದುರಾಗಬಹುದು ಈ ಸಮಸ್ಯೆಗಳು – Kannada News | Vastu Guide: Pooja Room Placement for Harmony and Prosperity in Your Home

ಹಿಂದೂ ಧರ್ಮದಲ್ಲಿ ಮನೆಯ ದೇವರ ಕೊಠಡಿಯನ್ನು ಕೇವಲ ಒಂದು ಸ್ಥಳವೆಂದು ಪರಿಗಣಿಸದೆ, ಅದನ್ನು ಸಕಾರಾತ್ಮಕ ಶಕ್ತಿಯ ಕೇಂದ್ರವೆಂದು ನಂಬಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಪೂಜಾ ಮಂದಿರವು ಸರಿಯಾದ ದಿಕ್ಕು ಮತ್ತು ಸ್ಥಳದಲ್ಲಿದ್ದರೆ ಮಾತ್ರ ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲು ಸಾಧ್ಯ. ಒಂದು ವೇಳೆ ಪೂಜಾ ಸ್ಥಳವು ವಾಸ್ತು ನಿಯಮಗಳಿಗೆ ವಿರುದ್ಧವಾಗಿದ್ದರೆ, ಅದು ಕುಟುಂಬದ ಪ್ರಗತಿಗೆ ಅಡ್ಡಿಪಡಿಸುವುದಲ್ಲದೆ ಮಾನಸಿಕ ಅಶಾಂತಿಗೂ ಕಾರಣವಾಗಬಹುದು. ಆದ್ದರಿಂದ ದೈವಿಕ ಕೃಪೆಗೆ ಪಾತ್ರರಾಗಲು ಪೂಜಾ ಕೊಠಡಿಯನ್ನು ಸ್ಥಾಪಿಸುವ ಮುನ್ನ ಕೆಲವು ಪ್ರಮುಖ ಅಂಶಗಳನ್ನು ಅರಿಯುವುದು ಅತ್ಯಗತ್ಯ.

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಈಶಾನ್ಯ ಮೂಲೆಯು (ಈಶಾನ್ಯ ದಿಕ್ಕು) ದೇವಾಲಯಕ್ಕೆ ಅತ್ಯಂತ ಮಂಗಳಕರವಾದ ಸ್ಥಳವಾಗಿದೆ. ಈ ದಿಕ್ಕಿನಲ್ಲಿ ಧನಾತ್ಮಕ ಶಕ್ತಿಯ ಹರಿವು ಅಧಿಕವಾಗಿರುತ್ತದೆ, ಇದು ಆಧ್ಯಾತ್ಮಿಕ ಸಾಧನೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುತ್ತದೆ. ಆದರೆ ದಕ್ಷಿಣ ದಿಕ್ಕನ್ನು ಪಿತೃದೇವತೆಗಳ ಮತ್ತು ಯಮನ ದಿಕ್ಕು ಎಂದು ಪರಿಗಣಿಸುವುದರಿಂದ, ಈ ದಿಕ್ಕಿನಲ್ಲಿ ಪೂಜಾ ಮಂದಿರವನ್ನು ನಿರ್ಮಿಸುವುದನ್ನು ತಪ್ಪಿಸಬೇಕು. ಹಾಗೆಯೇ, ದೇವರ ವಿಗ್ರಹ ಅಥವಾ ಪಟಗಳನ್ನು ನೇರವಾಗಿ ನೆಲದ ಮೇಲೆ ಇರಿಸುವ ಬದಲು, ಸ್ವಚ್ಛವಾದ ಮರದ ಪೀಠ ಅಥವಾ ಎತ್ತರದ ಸ್ಥಳದಲ್ಲಿ ಇರಿಸುವುದು ಪದ್ಧತಿ.

ಇದನ್ನೂ ಓದಿ: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಮೋದಿ ವಿಶೇಷ ಪೂಜೆ; ಸರ್ವಾರ್ಥ ಸಿದ್ಧಿ ಯೋಗದ ಮಹತ್ವವೇನು ಗೊತ್ತಾ?

ಪೂಜಾ ಸ್ಥಳದ ಸುತ್ತಮುತ್ತಲಿನ ಪರಿಸರವು ಪವಿತ್ರವಾಗಿರುವುದು ಅಷ್ಟೇ ಮುಖ್ಯ. ಅಡುಗೆಮನೆಯು ಬೆಂಕಿಯ ಸಂಕೇತವಾಗಿರುವುದರಿಂದ ಮತ್ತು ದೇವಾಲಯವು ಶಾಂತಿಯ ಸಂಕೇತವಾಗಿರುವುದರಿಂದ, ಅಡುಗೆಮನೆಯಲ್ಲಿ ಪೂಜಾ ಸ್ಥಳವನ್ನು ಇರಿಸುವುದರಿಂದ ಮನೆಯಲ್ಲಿ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಅದೇ ರೀತಿ, ವಿಶ್ರಾಂತಿಯ ಸ್ಥಳವಾದ ಮಲಗುವ ಕೋಣೆಯಲ್ಲಿ ಪೂಜಾ ಮಂದಿರವನ್ನು ಇರಿಸುವುದು ದೈವಕ್ಕೆ ತೋರುವ ಅಗೌರವವೆಂದು ಪರಿಗಣಿಸಲಾಗುತ್ತದೆ. ಇದು ವ್ಯಕ್ತಿಯ ಮಾನಸಿಕ ಅಸ್ಥಿರತೆಗೆ ಕಾರಣವಾಗಬಹುದು ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ.

ಇನ್ನು ಮನೆಯ ಮೆಟ್ಟಿಲುಗಳ ಕೆಳಗಿನ ಜಾಗವನ್ನು ಅಸ್ಥಿರತೆಯ ಸಂಕೇತವೆಂದು ನೋಡಲಾಗುವುದರಿಂದ, ಅಲ್ಲಿ ದೇವರ ಕೊಠಡಿ ನಿರ್ಮಿಸುವುದು ವಾಸ್ತು ದೋಷಕ್ಕೆ ನಾಂದಿಯಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ, ಶೌಚಾಲಯ ಅಥವಾ ಸ್ನಾನಗೃಹದ ಪಕ್ಕದಲ್ಲಿ ಅಥವಾ ಅದರ ಗೋಡೆಗೆ ಹೊಂದಿಕೊಂಡಂತೆ ಪೂಜಾ ಮಂದಿರ ಇರಬಾರದು. ಅಶುದ್ಧ ಸ್ಥಳಗಳ ಸನಿಹದಲ್ಲಿ ದೇವರನ್ನು ಇರಿಸುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ಪೂಜೆಯ ಫಲ ಲಭಿಸುವುದಿಲ್ಲ ಎಂಬ ನಂಬಿಕೆಯಿದೆ. ಒಟ್ಟಾರೆಯಾಗಿ, ಪೂಜಾ ಸ್ಥಳವು ಯಾವಾಗಲೂ ಸ್ವಚ್ಛ, ಶಾಂತ ಮತ್ತು ಪವಿತ್ರವಾಗಿದ್ದಾಗ ಮಾತ್ರ ಮನೆಯಲ್ಲಿ ದೈವಿಕ ಚೈತನ್ಯ ಸದಾ ಜಾಗೃತವಾಗಿರುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version