ಮೆಡಿಸಿನ್ ಇಲ್ಲ, ಎಕ್ಸ್‌ರೇ ಶೀಟ್ ಕೂಡ ಇಲ್ಲ! ಗ್ಯಾರಂಟಿ ಯೋಜನೆಗೆ ಹಣ ಒದಗಿಸುವ ಭರದಲ್ಲಿ ಔಷಧಿಗಳಿಗೆ ಸರ್ಕಾರದಿಂದ ಕತ್ತರಿ? – Kannada News | Severe Medicine Shortage at Devanahalli Government Hospital: Patients Struggle Without Antibiotics and X ray Sheets

ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಗಳ ಅಭಾವ

ದೇವನಹಳ್ಳಿ, ಮೇ 13: ಸರ್ಕಾರದ ಗ್ಯಾರೆಂಟಿ ಯೋಜನೆಗಳಿಗೆ ಹಣ ಒದಗಿಸುವ ಭರಾಟೆಯಲ್ಲಿ ಆರೋಗ್ಯ ಇಲಾಖೆಯ ಮೆಡಿಸಿನ್‌ಗಳಿಗೆ (Medicine) ಕತ್ತರಿ ಹಾಕಲಾಗಿದೆಯೇ ಎಂಬ ಅನುಮಾನ ಈಗ ಸಾರ್ವಜನಿಕರಲ್ಲಿ ಮೂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಗಳ ತೀವ್ರ ಕೊರತೆ ಎದುರಾಗಿದ್ದು, ಬಡ ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ.

ಮುಖ್ಯಾಂಶಗಳು

  • ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಆಂಟಿಬಯೋಟಿಕ್ ಮಾತ್ರೆ ಹಾಗೂ ಚುಚ್ಚುಮದ್ದುಗಳ ತೀವ್ರ ಅಭಾವ
  •  ಎಕ್ಸ್‌ರೇ ಶೀಟ್ ಇಲ್ಲದೆ ರೋಗಿಗಳು ಮೊಬೈಲ್‌ನಲ್ಲಿ ಫೋಟೋ ಹಿಡಿಯುವ ದುಸ್ಥಿತಿ
  •  ಗ್ಯಾರೆಂಟಿ ಯೋಜನೆಗಳ ಅಬ್ಬರದಲ್ಲಿ ಬಡವರ ಆರೋಗ್ಯ ಸೇವೆಗೆ ಸರ್ಕಾರದಿಂದ ಕತ್ತರಿ

ಆಂಟಿಬಯೋಟಿಕ್ ಮಾತ್ರೆಗಳಿಲ್ಲ!

ತಾಲೂಕು ಆಸ್ಪತ್ರೆಗೆ ಪ್ರತಿದಿನ ನೂರಾರು ರೋಗಿಗಳು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಜ್ವರ, ನೆಗಡಿ ಮತ್ತು ಗ್ಯಾಸ್ಟ್ರಿಕ್ ಮಾತ್ರೆಗಳನ್ನು ಹೊರತುಪಡಿಸಿ ಯಾವುದೇ ಪ್ರಮುಖ ಆಂಟಿಬಯೋಟಿಕ್ ಮಾತ್ರೆಗಳು ಲಭ್ಯವಿಲ್ಲ. ವೈದ್ಯರು ಬರೆದುಕೊಡುವ ಬಹುತೇಕ ಮದ್ದುಗಳು ಆಸ್ಪತ್ರೆಯ ಫಾರ್ಮಸಿಯಲ್ಲಿ ಸಿಗುತ್ತಿಲ್ಲ. ಆಂಟಿಬಯೋಟಿಕ್ ಚುಚ್ಚುಮದ್ದುಗಳ ಕೊರತೆಯೂ ಕಾಡುತ್ತಿದ್ದು, ಲಭ್ಯವಿರುವ ಇಂಜೆಕ್ಷನ್‌ಗಳನ್ನು ಮಾತ್ರ ನೀಡಿ ಸಿಬ್ಬಂದಿ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ದುರಂತ: ಐದು ವರ್ಷದ ಮಗು ಸಾವು

ತಮ್ಮ ಮೊಬೈಲ್​ನಲ್ಲೇ ಎಕ್ಸ್‌ರೇ ಫೋಟೋ ತಗೊಳ್ಳುತ್ತಿರುವ ರೋಗಿಗಳು

ಆಸ್ಪತ್ರೆಯ ಅವ್ಯವಸ್ಥೆ ಇಲ್ಲಿಗೆ ನಿಂತಿಲ್ಲ. ಎಕ್ಸ್‌ರೇ ಮಾಡಿಸಿದ ರೋಗಿಗಳಿಗೆ ಫಿಲ್ಮ್ ಗ್ರಾಫ್ ಶೀಟ್ ನೀಡಲಾಗುತ್ತಿಲ್ಲ. ರೋಗಿಗಳೇ ತಮ್ಮ ಮೊಬೈಲ್‌ನಲ್ಲಿ ಎಕ್ಸ್‌ರೇ ಫೋಟೋ ಹಿಡಿದುಕೊಂಡು ಹೋಗಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಔಷಧಗಳಿಗಾಗಿ ಇಂಡೆಂಟ್ ಸಲ್ಲಿಸಿ ಹಲವು ದಿನಗಳು ಕಳೆದರೂ ಇಲಾಖೆಯಿಂದ ಸರಬರಾಜಾಗಿಲ್ಲ ಎಂದು ಸಿಬ್ಬಂದಿಯೇ ಒಪ್ಪಿಕೊಳ್ಳುತ್ತಿದ್ದಾರೆ. ದೇವನಹಳ್ಳಿ ತಾಲೂಕು ಆಸ್ಪತ್ರೆಯ ಸ್ಥಿತಿಯನ್ನು ಕಂಡು ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸರ್ಕಾರ ಕೂಡಲೇ ಬಡವರ ಆರೋಗ್ಯದ ಕಡೆ ಗಮನಹರಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ಸಿ. ಜೋಸೆಫ್​​ ವಿಜಯ್​​ – Kannada News | CM C. Joseph Vijay Makes Major Announcement After Winning Floor Test in Tamil Nadu Assembly

ಚೆನ್ನೈ, ಮೇ 13: ತಮಿಳುನಾಡು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಸಿಎಂ ವಿಜಯ್ ನೇತೃತ್ವದ ಸರ್ಕಾರ ಬಹುಮತ ಸಾಬೀತುಪಡಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ವಿಜಯ್, ತಮ್ಮ ಸರ್ಕಾರಕ್ಕೆ ಯಾರ ಮೇಲೂ ದ್ವೇಷವಿಲ್ಲ, ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ ಪಕ್ಷವು ಯಾವುದೇ ಮೈತ್ರಿ ಇಲ್ಲದೆ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸಿ, 1.72 ಕೋಟಿಗೂ ಹೆಚ್ಚು ಮತಗಳನ್ನು ಪಡೆದು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು, ಯುವಕರು, ಸರ್ಕಾರಿ ನೌಕರರು, ಶಿಕ್ಷಕರು ಮತ್ತು ದುಡಿಯುವ ವರ್ಗ ಸೇರಿದಂತೆ ಸಮಾಜದ ಎಲ್ಲಾ ವರ್ಗದ ಜನರಿಗಾಗಿ ಈ ಸರ್ಕಾರವಿದೆ. ಪ್ರಾಮಾಣಿಕ ಮತ್ತು ಅಂತಃಸಾಕ್ಷಿಯ ಆಡಳಿತವನ್ನು ನೀಡಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ವಿಧಾನಸಭೆಯಲ್ಲೂ ನಿರೀಕ್ಷೆಗೂ ಮೀರಿ ವಿಶ್ವಾಸಮತ ಗೆದ್ದ ಸಿಎಂ ವಿಜಯ್: ಯಾರದ್ದೆಲ್ಲ ಬೆಂಬಲ ಸಿಕ್ತು? ಇಲ್ಲಿದೆ ವಿವರ – Kannada News | CM Joseph Vijay Wins Trust Vote: TVK Government Proves Majority with 144 Votes in Tamil Nadu Assembly

ತಮಿಳುನಾಡು ಸಿಎಂ ಜೋಸೆಫ್ ವಿಜಯ್Image Credit source: tv9

ಚೆನ್ನೈ, ಮೇ 13: ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ನಡೆದ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಸಿಎಂ ಜೋಸೆಫ್ ವಿಜಯ್ (CM Joseph Vijay) ನಿರೀಕ್ಷೆಗೂ ಮೀರಿ ಭರ್ಜರಿ ಬಹುಮತ ಸಾಬೀತುಪಡಿಸಿದ್ದಾರೆ. ವಿಜಯ್ ಸರ್ಕಾರಕ್ಕೆ ಕಾಂಗ್ರೆಸ್​ನ ಐವರು ಶಾಸಕರು, ವಿಸಿಕೆಯ ಇಬ್ಬರು, ಸಿಪಿಐನ ಇಬ್ಬರು ಶಾಸಕರು, ಸಿಪಿಐ(ಎಂ) ಇಬ್ಬರು, ಐಯುಎಂಎಲ್​ ಪಕ್ಷದ ಇಬ್ಬರು ಶಾಸಕರು ಶಾಸಕರು ಸೇರಿದಂತೆ ಒಟ್ಟು 144 ಜನ ಶಾಸಕರ ಬೆಂಬಲ ದೊರೆತಿದೆ. ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ (Tamilaga Vettri Kazhagam) 107 ಸ್ಥಾನಗಳನ್ನು ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಹುಮತಕ್ಕೆ 118 ಸ್ಥಾನಗಳು ಬೇಕಿರುವ ಕಾರಣ ಸರ್ಕಾರ ರಚನೆ ತುಸು ವಿಳಂಬವಾಗಿತ್ತು.

ಎಐಎಡಿಎಂಕೆ ಬಂಡಾಯ ಶಾಸಕರಿಂದಲೂ ಬೆಂಬಲ

ಎಐಎಡಿಎಂಕೆಯ 25 ಮಂದಿ ಬಂಡಾಯ ಶಾಸಕರೂ ವಿಜಯ್ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ವೇಲುಮಣಿ ಮತ್ತು ಷಣ್ಮುಗಂ ಶಾಸಕರು ನೇತೃತ್ವದ ಬಂಡಾಯ ಶಾಸಕರು ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ನಿಲುವನ್ನು ಧಿಕ್ಕರಿಸಿ ವಿಜಯ್ ಸರ್ಕಾರವನ್ನು ಬೆಂಬಲಿಸಿದ್ದಾರೆ.

ಬೆಂಬಲಿಸಿದ ಶಾಸಕರಿಗೆ ವಿಜಯ್ ಧನ್ಯವಾದ: ದ್ವೇಷ ರಾಜಕಾರಣ ಮಾಡಲ್ಲವೆಂದು ಅಭಯ

ವಿಶ್ವಾಸಮತ ಗೆದ್ದ ನಂತರ ಮಾತನಾಡಿದ ಸಿಎಂ ವಿಜಯ್, ನಮ್ಮ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಎಲ್ಲಾ ಶಾಸಕರಿಗೂ ಧನ್ಯವಾದ. ನಮ್ಮದು ಮೈತ್ರಿಕೂಟ ಸರ್ಕಾರ. ಜನರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸಲು ನಾವು ಬದ್​ಧ. ನಮ್ಮ ಸರ್ಕಾರ ಯಾವಾಗಲೂ ಜನಪರವಾಗಿರುತ್ತದೆ. ನಮಗೆ ಯಾರ ಮೇಲೂ ದ್ವೇಷವಿಲ್ಲ, ದ್ವೇಷ ರಾಜಕಾರಣ ಮಾಡಲ್ಲ. ಮತ ಹಾಕಿದವರು, ಹಾಕದಏ ಇರುವವರು ಎಂಬ ಭೇದ-ಭಾವ ಮಾಡಲ್ಲ. ಪೆರಿಯಾರ್​, ಕಾಮರಾಜ್​, ಅಂಬೇಡ್ಕರ್​​ ತತ್ವದಡಿ ಕೆಲಸ ಮಾಡುತ್ತೇವೆ ಎಂದರು.

ಜಾತಿ, ಧರ್ಮ ಎಂದು ಪರಿಗಣಿಸದೆ ಜನರ ಅಭಿವೃದ್ಧಿಗೆ ಶ್ರಮಿಸುತ್ತೇವೆ. ತಮಿಳುನಾಡು ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ ಎಂದು ವಿಜಯ್ ಹೇಳಿದರು.

ಟಿವಿಕೆ ಸರ್ಕಾರದ ವಿರುದ್ಧ ಉದಯನಿಧಿ ಆಕ್ರೋಶ

ವಿಶ್ವಾಸಮತ ಯಾಚನೆಗೂ ಮುನ್ನ ನಡೆದ ಚರ್ಚೆಯಲ್ಲಿ ಪ್ರತಿಪಕ್ಷ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಟಿವಿಕೆ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಂದು, ವಿಶ್ವಾಸಮತ ಯಾಚನೆ ನಡೆಯುತ್ತಿದೆ. ರಾಜ್ಯದ ಎಲ್ಲಾ ಜನರು ಟಿವಿಕೆಗೆ ಮತ ಹಾಕಿಲ್ಲ. ಒಟ್ಟು 4.93 ಕೋಟಿ ಮತಗಳಲ್ಲಿ, ಕೇವಲ 1.72 ಕೋಟಿ ಜನರು ಟಿವಿಕೆಗೆ ಮತ ಹಾಕಿದ್ದಾರೆ. ಉಳಿದ ಶೇ 65 ಜನರು ಟಿವಿಕೆ ವಿರುದ್ಧ ಮತ ಹಾಕಿದ್ದಾರೆ. ಟಿವಿಕೆಗೆ ಮತ ಹಾಕಿದ ಜನರಿಗೂ ಈಗ ಜ್ಞಾನೋದಯವಾಗುತ್ತಿದೆ. 118 ರ ಬಹುಮತದ ಚಿಹ್ನೆಯನ್ನು ಹೊಂದಿರುವ ಪಕ್ಷ ಮಾತ್ರ ಸರ್ಕಾರ ರಚಿಸಬಹುದು. ಟಿವಿಕೆ ನಾಯಕ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಈಗ ಜನರನ್ನು ಭೇಟಿ ಮಾಡಿ ಧನ್ಯವಾದ ಹೇಳುವುದಕ್ಕೂ ಮೊದಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರಿಗೆ (ತಿರುಪತ್ತೂರು ಶಾಸಕ ಆರ್. ಸೀನಿವಾಸ ಸೇತುಪತಿ) ವಿಶ್ವಾಸಮತದಲ್ಲಿ ಪಾಲ್ಗೊಳ್ಳದಂತೆ ನ್ಯಾಯಾಲಯ ನಿರ್ಬಂಧ ವಿಧಿಸಿರುವುದರಿಂದ ಟಿವಿಕೆ ಈಗ ಕೇವಲ 106 ಸದಸ್ಯರನ್ನು ಹೊಂದಿದೆ. ಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಂಡ ಪಕ್ಷಗಳಿಂದ ಬೆಂಬಲವನ್ನು ಟಿವಿಕೆ ಪಡೆದುಕೊಂಡಿದೆ ಎಂದು ಉದಯನಿಧಿ ಸ್ಟಾಲಿನ್ ಹೇಳಿದರು.

ಇದನ್ನೂ ಓದಿ: ಮತ್ತೆ ಸನಾತನ ಧರ್ಮದ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್

‘ಎಐಎಡಿಎಂಕೆ ಎರಡು ಭಾಗವಾಗಿದೆ. ಈ ರಾಜಕೀಯ ಬದಲಾವಣೆಯ ಹಿಂದೆ ಯಾವ ಲೆಕ್ಕಾಚಾರ ಇದೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಪ್ರಚಾರದ ಸಮಯದಲ್ಲಿ ಪ್ರಣಾಳಿಕೆಯಲ್ಲಿ ಎಐಎಡಿಎಂಕೆ ಹೆಸರಿಸಲು ಸಹ ನೀವು (ಟಿವಿಕೆ) ನಿರಾಕರಿಸಿದ್ದೀರಿ ಮತ್ತು ಅವರನ್ನು ‘ಇತರ ಪಕ್ಷಗಳು’ ಎಂದು ಮಾತ್ರ ಉಲ್ಲೇಖಿಸಿದ್ದೀರಿ. ಆದರೆ ಈಗ ನೀವು ಅದೇ ನಾಯಕರನ್ನು ಭೇಟಿಯಾಗುತ್ತಿದ್ದೀರಿ, ಮತ್ತು ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಮಾತುಕತೆ ನಡೆಯುತ್ತಿದೆ. ನಾವು ವಿಧಾನಸಭೆಯಿಂದ ಹೊರನಡೆಯುತ್ತಿದ್ದೇವೆ. ನಾವು ಹೊರನಡೆದ ನಂತರ, ನಿಮಗೆ ಬಹುಮತ ಸಿಗುತ್ತದೆ. ನಮ್ಮ ಸರ್ಕಾರ ಪರಿಚಯಿಸಿದ ಕಲ್ಯಾಣ ಯೋಜನೆಗಳನ್ನು ರಾಜಕೀಯಗೊಳಿಸಬೇಡಿ ಎಂದು ನಾನು ನಿಮ್ಮನ್ನು ವಿನಂತಿಸುತ್ತೇನೆ’ ಎಂದು ಉದಯನಿಧಿ ಸ್ಟಾಲಿನ್ ಹೇಳಿದರು. ನಂತರ ಡಿಎಂಕೆ ಸದಸ್ಯರು ಸಬಾತ್ಯಾಗ ಮಾಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:49 am, Wed, 13 May 26

Source link

‘ನನಗಿಂತ ಮೊದಲು ಫೇಮಸ್ ಆಗಿದ್ದ’: ದಿಲೀಪ್ ರಾಜ್ ಬೆಳೆದು ಬಂದ ಹಾದಿ ನೆನಪಿಸಿಕೊಂಡ ನಟ ಗಣೇಶ್ – Kannada News | Kannada actor Dileep Raj Death: Golden Star Ganesh pays last tribute

ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ನಿಧನರಾಗಿದ್ದು, ಹಲವು ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ದಿಲೀಪ್ ರಾಜ್ ಜೊತೆ ಒಡನಾಟ ಹೊಂದಿದ್ದರು. ಆ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ. ‘ಏನು ಹೇಳಬೇಕು ಅಂತ ತಿಳಿಯುತ್ತಿಲ್ಲ. ಮನಸ್ಸಿಗೆ ತುಂಬ ನೋವಾಗುತ್ತಿದೆ. ದಿಲೀಪ್ ರಾಜ್ ಅವರು ಒಳ್ಳೆಯ ವ್ಯಕ್ತಿ ಆಗಿದ್ದರು. ಅದ್ಭುತ ನಟನಾಗಿದ್ದರು. ನಮ್ಮದೆಲ್ಲ ಒಂದು ಚಿಕ್ಕ ತಂಡ. ಕಾಲೇಜು ಮುಗಿಸಿ ಜೊತೆಯಲ್ಲಿ ಬಂದವರು ನಾವು. ನಾವೆಲ್ಲ ರಂಗಭೂಮಿಯಲ್ಲಿ ನಾಟಕಗಳನ್ನು ಮಾಡುತ್ತಿದ್ದೆವು. ನಮ್ಮ ತಂಡದಲ್ಲಿ ಮೊದಲು ಜನಪ್ರಿಯತೆ ಪಡೆದಿದ್ದೇ ದಿಲೀಪ್’ ಎಂದು ಗಣೇಶ್ ಅವರು ಹೇಳಿದ್ದಾರೆ.

‘ದಿಲೀಪ್ ರಾಜ್ ಅವರು ಅತ್ಯುತ್ತಮ ಡ್ಯಾನ್ಸರ್ ಆಗಿದ್ದರು. ಅವರನ್ನು ನೋಡಿ ನಮಗೆಲ್ಲ ಖುಷಿ ಆಗುತ್ತಿತ್ತು. ಪ್ರೀತಿಗಾಗಿ ಅಂತ ಒಂದು ಸೀರಿಯಲ್ ಬರುತ್ತಿತ್ತು. ಕಿಟ್ಟಿ ಮತ್ತು ದಿಲೀಪ್ ಜೊತೆಯಾಗಿ ನಟನೆ ಮಾಡುತ್ತಿದ್ದರು. ನಾವೆಲ್ಲ ಸೆಟ್​ಗೆ ಹೋಗುತ್ತಿದ್ದೆವು. ಆರಂಭದ ದಿನಗಳಿಂದಲೂ ನಾನು ದಿಲೀಪ್ ಅವರನ್ನು ನೋಡಿಕೊಂಡು ಬಂದಿದ್ದೇನೆ. ಬಹಳ ಶ್ರಮಜೀವಿ ಅವರು’ ಎಂದಿದ್ದಾರೆ ಗಣೇಶ್.

‘ಅವರಿಗೆ ಇನ್ನೂ ಚಿಕ್ಕ ವಯಸ್ಸು. 48 ವರ್ಷಕ್ಕೆ ಹೀಗಾಯಿತು ಎಂಬುದು ತಿಳಿದು ನಮಗೆಲ್ಲ ಶಾಕ್ ಆಗಿದೆ. ಬೆಳಗ್ಗೆ ಸುದ್ದಿ ತಿಳಿದ ಕೂಡಲೇ ಇದು ನಿಜನೋ ಸುಳ್ಳೋ ಎನಿಸಿತು. ಇಡೀ ಕುಟುಂಬಕ್ಕೆ, ಅವರ ಆಪ್ತರಿಗೆ ಈ ನಷ್ಟ ಭರಿಸುವ ಶಕ್ತಿಯನ್ನು ದೇವರು ನೀಡಲಿ ಅಂತ ಕೇಳಿಕೊಳ್ಳುತ್ತೇನೆ. ದಿಲೀಪ್ ರಾಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಗಣೇಶ್ ಅವರು ಹೇಳಿದ್ದಾರೆ.

ನಟ ಸುಂದರ್ ಕೂಡ ಮಾತನಾಡಿದ್ದಾರೆ. ‘ಕಾಲೇಜು ದಿನಗಳಿಂದಲೂ ನಾನು ದಿಲೀಪ್​ನನ್ನು ನೋಡಿದ್ದೇನೆ. ಒಂದು ವರ್ಷ ನಾನು ಅವನಿಗೆ ಅಕೌಂಟ್ಸ್ ಪಾಠ ಮಾಡಿದ್ದೇನೆ. ಆಗ ಅವನು ಇನ್ನೂ ಸೀರಿಯಲ್​ಗೆ ಬಂದಿರಲಿಲ್ಲ. ತುಂಬಾ ಪ್ರತಿಭಾವಂತ ನಟ. ಇದು ಅವನು ಹೋಗುವಂತಹ ವಯಸ್ಸು ಅಲ್ಲ. ಸಿನಿಮಾದಲ್ಲಿ ಹೀರೋ ಆಗಿ ಮಿಂಚಬೇಕು ಎಂಬ ಆಸೆ ಅವನಿಗೆ ಇತ್ತು. ಅದು ಈಡೇರಲಿಲ್ಲ’ ಎಂದು ಸುಂದರ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು

‘ಅವನ ಬಳಿ ಮಾತನಾಡಿ 6-7 ತಿಂಗಳು ಆಗಿತ್ತು. ಅಲ್ಲಿಯವರೆಗೂ ಅವನು ತುಂಬಾ ಚೆನ್ನಾಗಿದ್ದ. ದೈಹಿಕವಾಗಿ ಅವನು ಫಿಟ್ ಆಗಿದ್ದ. ಒಳ್ಳೆಯ ಪಾತ್ರಗಳನ್ನು ಮಾಡಿದ್ದೇನೆ ಎಂಬ ಖುಷಿ ಅವನಿಗೆ ಇತ್ತು. ಸ್ಟುಡಿಯೋ ಮಾಡಿದ್ದ, ಸೀರಿಯಲ್ ನಿರ್ಮಾಣ ಮಾಡಿದ್ದ. ಹೆಂಡತಿ ಮತ್ತು ಮಕ್ಕಳಿಗೆ ಈಗ ದೊಡ್ಡ ಆಘಾತ ಆಗಿದೆ’ ಎಂದಿದ್ದಾರೆ ಸುಂದರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಫಲನಾಭವಿಗಳು ಮೃತಪಟ್ಟ ಬಳಿಕವೂ ಖಾತೆಗೆ ಗೃಹಲಕ್ಷ್ಮಿ ಹಣ: ದಕ್ಷಿಣ ಕನ್ನಡದಲ್ಲಿ 22 ಕೋಟಿ ಜಮೆ ಬೆಳಕಿಗೆ – Kannada News | Gruhalakshmi Scheme: 22 Crore Paid to Deceased Beneficiaries in Dakshina Kannada

ಮಂಗಳೂರು, ಮೇ 12: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ತಿಂಗಳು ತಿಂಗಳು ಸರಿಯಾಗಿ ಪಾವತಿಯಾಗುತ್ತಿಲ್ಲ ಎಂಬ ಜನರ ಆರೋಪದ ನಡುವೆ, ಶಾಕಿಂಗ್​​ ವಿಚಾರವೊಂದು ಬಹಿರಂಗಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದಾಗಲೇ ಮೃತಪಟ್ಟಿರುವ ಫಲಾನುಭವಿಗಳ ಖಾತೆಗಳಿಗೆ ಸುಮಾರು 22 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಬೆಳಕಿಗೆ ಬಂದಿದೆ. ವಿಷಯ ಗೊತ್ತಾಗುತ್ತಲೇ ಈ ಬಗ್ಗೆ ತಕ್ಷಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾದ ಹಣವನ್ನು ಸರ್ಕಾರಕ್ಕೆ ಮರಳಿ ಪಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್​​ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪರಿಶೀಲನಾ ಸಮಿತಿ ಸಭೆಯಲ್ಲಿ ಅಧ್ಯಕ್ಷ ಭರತ್ ಮುಂಡೋಡಿ  ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯ ಕಚೇರಿಯಿಂದ ಬಂದ ಮಾಹಿತಿಯ ಪ್ರಕಾರ ಬಳಕೆಯಲ್ಲಿಲ್ಲದ ಖಾತೆಗಳಿಗೆ ಸಹ ಹಣ ವರ್ಗಾವಣೆ ಮುಂದುವರಿದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಮೃತ ಫಲಾನುಭವಿಗಳ ವಿವರಗಳನ್ನು ಸಂಗ್ರಹಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ!

ಅಲ್ಲದೆ, ಕೆಲವು ಜೀವಂತ ಫಲಾನುಭವಿಗಳನ್ನು ಇಲಾಖೆಯ ದಾಖಲೆಗಳಲ್ಲಿ ಮೃತಪಟ್ಟವರು ಎಂದು ಗುರುತಿಸಿರುವ ಗಂಭೀರ ವ್ಯತ್ಯಾಸಗಳೂ ಕಂಡುಬಂದಿರುವ ಬಗ್ಗೆಯೂ ಉಲ್ಲೇಖಿಸಿದ ಅವರು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಮುಂದಿನ ಪರಿಶೀಲನಾ ಸಭೆಯಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಯಡಿ 4,25,759 ರೇಷನ್ ಕಾರ್ಡ್ ಹೊಂದಿದವರು ಇದ್ದು, ಇದುವರೆಗೆ 3,82,178 ಫಲಾನುಭವಿಗಳು ನೋಂದಾಯಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮೃತ ಫಲಾನುಭವಿಗಳ ಹೆಸರು, ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಬ್ಯಾಂಕ್ ವಿವರಗಳು ಲಭ್ಯವಿದ್ದರೆ, ಬ್ಯಾಂಕ್‌ಗಳ ಮೂಲಕ ಖಾತೆಗಳನ್ನು ಸ್ಥಗಿತಗೊಳಿಸಿ ಮುಂದಿನ ವ್ಯವಹಾರಗಳನ್ನು ತಡೆಯಬಹುದು ಎಂದು ಭಾರತ್ ಮುಂಡೋಡಿ ಹೇಳಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗಳಲ್ಲಿಯೂ ಮರಣ ದಾಖಲೆಗಳು ಲಭ್ಯವಿರುವುದರಿಂದ, ಸಂಬಂಧಿತ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಮೃತಪಟ್ಟವರ ಖಾತೆಗಳಿಗೆ ನೆರವು ಬಿಡುಗಡೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 12:24 pm, Wed, 13 May 26

Source link

16 ಅಂಕಗಳಿದ್ದರೂ ಗುಜರಾತ್ ಟೈಟಾನ್ಸ್​ ಇನ್ನೂ ಪ್ಲೇಆಫ್‌ಗೆ ಕ್ವಾಲಿಫೈ ಆಗಿಲ್ಲವೇಕೆ? – Kannada News | IPL 2026: Why Gujarat Titans’s 16 Points Don’t Guarantee a Playoff Spot

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಪ್ರಸಕ್ತ ಸೀಸನ್ ರೋಚಕ ಘಟ್ಟವನ್ನು ತಲುಪಿದ್ದು, ಪ್ಲೇಆಫ್ ರೇಸ್ ದಿನದಿಂದ ದಿನಕ್ಕೆ ಜಟಿಲವಾಗುತ್ತಿದೆ. ಸಾಮಾನ್ಯವಾಗಿ ಯಾವುದೇ ಐಪಿಎಲ್ ಟೂರ್ನಿಯಲ್ಲಿ 16 ಅಂಕಗಳನ್ನು ಗಳಿಸಿದ ತಂಡವು ಅತ್ಯಂತ ಸುಲಭವಾಗಿ ಪ್ಲೇಆಫ್​ ಹಂತಕ್ಕೆ ಅರ್ಹತೆ ಪಡೆಯುತ್ತದೆ. ಆದರೆ, ಈ ಬಾರಿ ಗುಜರಾತ್ ಟೈಟಾನ್ಸ್ (GT) ಈಗಾಗಲೇ 16 ಅಂಕಗಳನ್ನು ತನ್ನ ಖಾತೆಗೆ ಜಮೆ ಮಾಡಿಕೊಂಡಿದ್ದರೂ, ಅಧಿಕೃತವಾಗಿ ಇನ್ನೂ ಸಹ ಪ್ಲೇಆಫ್ ಸ್ಥಾನವನ್ನು ಖಚಿತ ಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಅಂಕ ಪಟ್ಟಿಯಲ್ಲಿ ಸೃಷ್ಟಿಯಾಗಿರುವ ತೀವ್ರ ಪೈಪೋಟಿ. ಇದಕ್ಕೆ ಕಾರಣವಾಗಿರುವ ಗಣಿತದ ಲೆಕ್ಕಾಚಾರಗಳು ಮತ್ತು ಸಮೀಕರಣಗಳ ವಿವರ ಇಲ್ಲಿದೆ:

ಗುಜರಾತ್ ಟೈಟಾನ್ಸ್​ ತಂಡಕ್ಕೆ ಇನ್ನು 2 ಪಂದ್ಯಗಳು ಬಾಕಿ ಇವೆ. ಆದರೆ ಅವರ ಹಿಂದೆ ಇರುವ ಇತರೆ ತಂಡಗಳು ಇನ್ನೂ ಹೆಚ್ಚಿನ ಅಂಕಗಳನ್ನು ಗಳಿಸುವ ಅವಕಾಶವನ್ನು ಹೊಂದಿವೆ:

  •  ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಗರಿಷ್ಠ 20 ಅಂಕಗಳನ್ನು ತಲುಪಬಲ್ಲದು.
  • ಪಂಜಾಬ್ ಕಿಂಗ್ಸ್ (PBKS): ಗರಿಷ್ಠ 19 ಅಂಕಗಳನ್ನು ಗಳಿಸಬಲ್ಲದು.
  • ಸನ್‌ರೈಸರ್ಸ್ ಹೈದರಾಬಾದ್, ಸಿಎಸ್‌ಕೆ ಮತ್ತು ರಾಜಸ್ಥಾನ್ ರಾಯಲ್ಸ್: ಈ ತಂಡಗಳು ಗರಿಷ್ಠ 18 ಅಂಕಗಳನ್ನು ಪಡೆಯುವ ಅವಕಾಶ ಹೊಂದಿವೆ.

ಅಂಕ ಪಟ್ಟಿಯಲ್ಲಿ ಇಷ್ಟೊಂದು ತೀವ್ರ ಪೈಪೋಟಿ ಇರುವುದರಿಂದ, 6 ತಂಡಗಳು 16 ಅಥವಾ ಅದಕ್ಕಿಂತ ಹೆಚ್ಚು ಅಂಕಗಳೊಂದಿಗೆ ಲೀಗ್ ಹಂತವನ್ನು ಮುಗಿಸುವ ಸಾಧ್ಯತೆಯಿದೆ.

ನೆಟ್ ರನ್ ರೇಟ್ (NRR) ಆತಂಕ:

ಗುಜರಾತ್ ಟೈqಆನ್ಸ್ ತನ್ನ ಮುಂದಿನ ಎರಡೂ ಪಂದ್ಯಗಳಲ್ಲಿ (ಕೋಲ್ಕತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ) ಸೋತರೆ, ಅದು 16 ಅಂಕಗಳಲ್ಲೇ ಉಳಿಯುತ್ತದೆ. ಒಂದು ವೇಳೆ ಇತರ 4-5 ತಂಡಗಳು ಸಹ 16 ಅಂಕಗಳೊಂದಿಗೆ ಸಮಬಲ ಸಾಧಿಸಿದರೆ, ಅಗ್ರ 4 ತಂಡಗಳನ್ನು ಆಯ್ಕೆ ಮಾಡಲು ನೆಟ್ ರನ್ ರೇಟ್ (NRR) ಅನ್ನು ಪರಿಗಣಿಸಲಾಗುತ್ತದೆ. ಈ ಪರಿಸ್ಥಿತಿಯಲ್ಲಿ ಜಿಟಿ ತಂಡದ ರನ್ ರೇಟ್ ಕಡಿಮೆಯಾದರೆ, ಅವರು ಟೂರ್ನಿಯಿಂದ ಹೊರಬೀಳಬಹುದು.

18 ಅಂಕಗಳ ಸುರಕ್ಷತಾ ಕವಚ:

10 ತಂಡಗಳ ಐಪಿಎಲ್ ಮಾದರಿಯಲ್ಲಿ, ಯಾವುದೇ ಇತರ ತಂಡಗಳ ಫಲಿತಾಂಶದ ಮೇಲೆ ಅವಲಂಬಿತವಾಗದೆ ನೇರವಾಗಿ ಪ್ಲೇಆಫ್ ತಲುಪಲು 18 ಅಂಕಗಳು ಅತ್ಯಗತ್ಯ. ಗುಜರಾತ್ ಟೈಟಾನ್ಸ್ ತಂಡ ಸದ್ಯ ಈ ಸುರಕ್ಷಿತ ರೇಖೆಗಿಂತ ಒಂದು ಹೆಜ್ಜೆ ಹಿಂದೆಯಷ್ಟೇ ಇದೆ.

ಇದನ್ನೂ ಓದಿ: RCB vs KKR: ಫಿಲ್ ಸಾಲ್ಟ್ ಆಡ್ತಾರಾ? ಆಡಲ್ವಾ? ಇಲ್ಲಿದೆ ಮಾಹಿತಿ

ಪ್ಲೇಆಫ್ ತಲುಪಲು ಮುಂದೇನು ಮಾಡಬೇಕು?

  • ಒಂದು ಗೆಲುವು: ಗುಜರಾತ್ ಟೈಟಾನ್ಸ್ ತಂಡ ತನ್ನ ಉಳಿದ 2 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಗೆದ್ದರೂ 18 ಅಂಕಗಳನ್ನು ಪಡೆದು ಅಧಿಕೃತವಾಗಿ ಕ್ವಾಲಿಫೈ ಆಗುತ್ತದೆ.
  • ಮಳೆ ಅಥವಾ ರದ್ದತಿ: ಒಂದು ವೇಳೆ ಮುಂದಿನ ಯಾವುದೇ ಪಂದ್ಯ ಮಳೆಯಿಂದಾಗಿ ರದ್ದಾಗಿ 1 ಅಂಕ ಸಿಕ್ಕರೂ, ಒಟ್ಟು 17 ಅಂಕಗಳೊಂದಿಗೆ ಗುಜರಾತ್ ಪ್ಲೇಆಫ್ ಸ್ಥಾನ ಭದ್ರಪಡಿಸಿಕೊಳ್ಳುತ್ತದೆ.
  • ಇತರ ತಂಡಗಳ ಸೋಲು: ಗುಜರಾತ್ಟಿ ಟೈಟಾನ್ಸ್​ ತಂಡ ತನ್ನ ಎರಡೂ ಪಂದ್ಯಗಳನ್ನು ಸೋತರೂ,  ಆರ್‌ಸಿಬಿ, ಪಂಜಾಬ್ ಕಿಂಗ್ಸ್ ಅಥವಾ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ತಮ್ಮ ಮುಂದಿನ ಪಂದ್ಯಗಳಲ್ಲಿ ಸೋತರೆ, ಗುಜರಾತ್ ಟೈಟಾನ್ಸ್​  ಸ್ವಯಂಚಾಲಿತವಾಗಿ ಮುಂದಿನ ಹಂತಕ್ಕೇರಲಿದೆ.

Source link

Video: ವಂದೇ ಭಾರತ್ ರೈಲು ಟಿಕೆಟ್‌ ಹಾಫ್ ರೇಟ್‌ಗೆ ಮಾರಾಟ, ಟಿಟಿಇ ಅಮಾನತು – Kannada News | Vande Bharat train tickets sold at half rate, Railways suspends TTE

ದುಡ್ಡು ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ, ದುಡ್ಡಿನ ಮಹಿಮೆಯೇ ಅಂತಹದ್ದು. ಕೆಲವರು ಹಣ ಮಾಡಲು ಕಳ್ಳ ದಾರಿಯನ್ನು ಹಿಡಿಯುವುದನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ‘ವಂದೇ ಭಾರತ್ ಎಕ್ಸ್‌ಪ್ರೆಸ್’ (Vande Bharath Express) ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಅಧಿಕೃತ ದರಕ್ಕಿಂತ ಕಡಿಮೆ ದರಕ್ಕೆ ಟಿಕೆಟ್ ಮಾರುತ್ತಿದ್ದ ವೇಳೆ ಟಿಟಿಇ ಸಿಕ್ಕಿ ಬಿದ್ದಿದ್ದಾನೆ. ತಕ್ಷಣವೇ ಕ್ರಮ ಕೈಗೊಂಡ ರೈಲ್ವೆ ಇಲಾಖೆಯೂ ಟಿಟಿಇಯನ್ನು (TTE) ಕೆಲಸದಿಂದ ಅಮಾನತುಗೊಳಿಸಿದೆ.

ಘರ್ ಕೆ ಕಲೇಷ್ (Ghar Ke Kalesh) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ, ಟಿಟಿಇ ಹಾಗೂ ಪ್ರಯಾಣಿಕರ ನಡುವಿನ ಸಂಭಾಷಣೆ ನೀವು ಗಮನಿಸಬಹುದು. 700 ರೂಪಾಯಿ ವಂದೇ ಭಾರತ್ ಟಿಕೆಟ್ ನ್ನು ಕೇವಲ 380 ರೂಪಾಯಿಗಳಿಗೆ ಕೊಡುವುದಾಗಿ ಟಿಟಿಇ ಹೇಳುತ್ತಿರುವುದನ್ನು ಕಾಣಬಹುದು. ಟಿಟಿಇ ಇದು ನಿಯಮಕ್ಕೆ ವಿರುದ್ಧ ಎಂದು ಹೇಳುತ್ತಲೇ, ಕಡಿಮೆ ಹಣಕ್ಕೆ ಪ್ರಯಾಣದ ವ್ಯವಸ್ಥೆ ಮಾಡುವುದಾಗಿ ಹೇಳುತ್ತಿರುವುದನ್ನು ನೀವು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ. ದಾನಾಪುರ ವಿಭಾಗದ ರೈಲ್ವೆ ವ್ಯವಸ್ಥಾಪಕರು, ಸಂಬಂಧಿತ ಟಿಟಿಇಯನ್ನು ತನಿಖೆ ಮುಗಿಯುವವರೆಗೆ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರೈಲಿನ ಸೀಟುಗಳ ಹರಿದು ಯುವಕರ ಪುಂಡಾಟ

ಈ ವಿಡಿಯೋ ನಲವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡುಕೊಂಡಿದ್ದು, ಒಬ್ಬ ಬಳಕೆದಾರ, ಭ್ರಷ್ಟಾಚಾರದ ಪರಮಾವಧಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನಮ್ಮ ದೇಶದ ವ್ಯವಸ್ಥೆಯನ್ನು ಹಾಳು ಮಾಡುವವರು ಇಂತಹವರೇ ಎಂದು ಹೇಳಿದ್ದಾರೆ. ಮತ್ತೊಬ್ಬರು, ಟಿಟಿಇ ಸಹಾಯ ಮಾಡುವ ಮನೋಭಾವ ತುಂಬಾನೇ ಇದೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೋದಿ ಕರೆಗೆ ಓಗೊಟ್ಟ ವಿವಿಧ ರಾಜ್ಯಗಳ ನಾಯಕರು; ಯೋಗಿಯಿಂದ ಹಿಡಿದು ರೇಖಾವರೆಗೆ ಯಾರಿಂದೇನು ಕ್ರಮ? – Kannada News | Fuel Conservation: State Leaders Adopt PM Modi’s Call; Cost Cutting Measures Implemented

ನವದೆಹಲಿ, ಮೇ 13: ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ಇಂಧನ ಸಂರಕ್ಷಣೆ ಮತ್ತು ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವಂತೆ (Austerity measures) ನೀಡಿದ ಕರೆಯ ಬೆನ್ನಲ್ಲೇ, ದೇಶದ ವಿವಿಧ ರಾಜ್ಯಗಳಲ್ಲಿ ಆಡಳಿತಾರೂಢ ನಾಯಕರು ಮಾದರಿ ಕ್ರಮಗಳನ್ನು ಘೋಷಿಸಿದ್ದಾರೆ. ಅದರಲ್ಲೂ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿನ ಸಿಎಂ ಮತ್ತಿತರ ನಾಯಕರು ಮೋದಿ ಅವರ ಮಾತಿಗೆ ಬೆಲೆ ನೀಡಿ, ಇಂಧನ ಬಳಕೆ ತಗ್ಗಿಸಲು ಕ್ರಮ ತೆಗೆದುಕೊಂಡಿದ್ದಾರೆ. ಸಲಹೆ ಪಾಲನೆಯನ್ನು ತಮ್ಮಿಂದಲೇ ಶುರು ಮಾಡಿದ್ದಾರೆ. ವಿವಿಧ ರಾಜ್ಯಗಳ ನಾಯಕರು ಇಂಧನ ಉಳಿತಾಯಕ್ಕೆ ತೆಗೆದುಕೊಂಡಿರುವ ಕ್ರಮಗಳ ವಿವರ ಈ ಕೆಳಕಾಣಿಸಿದಂತಿದೆ:

ಉತ್ತರ ಪ್ರದೇಶ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಹಾಗೂ ಸಚಿವರ ವಾಹನಗಳ ಸಂಖ್ಯೆಯಲ್ಲಿ ತಕ್ಷಣವೇ 50% ಕಡಿತ ಮಾಡುವಂತೆ ಆದೇಶಿಸಿದ್ದಾರೆ. ಅಲ್ಲದೆ, ಸಚಿವರು ಮತ್ತು ಶಾಸಕರು ವಾರಕ್ಕೊಮ್ಮೆ ಕಡ್ಡಾಯವಾಗಿ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಿದ್ದಾರೆ. ರಾಜ್ಯದಲ್ಲಿ ವರ್ಕ್ ಫ್ರಂ ಹೋಮ್ ವ್ಯವಸ್ಥೆಗೆ ಉತ್ತೇಜನ ಕೊಡಲು, ಮತ್ತು ಹೆಚ್ಚು ಸಿಬ್ಬಂದಿ ಇರುವ ಸಂಸ್ಥೆಗಳಲ್ಲಿ ವಾರಕ್ಕೆ ಎರಡು ದಿನ ವರ್ಕ್ ಫ್ರಂ ಮಾಡಲು ಶಿಫಾರಸು ಮಾಡುವಂತೆ ಸಿಎಂ ತಿಳಿಸಿದ್ದಾರೆ.

ಮಧ್ಯಪ್ರದೇಶ: ಮುಖ್ಯಮಂತ್ರಿ ಮೋಹನ್ ಯಾದವ್ ಅವರು ತಮ್ಮ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವುದಾಗಿ ಘೋಷಿಸಿದ್ದು, ಇತರ ಸಚಿವರಿಗೂ ಇದೇ ಹಾದಿ ತುಳಿಯಲು ಮನವಿ ಮಾಡಿದ್ದಾರೆ. ಸಾಮಾನ್ಯ ಜನರು ಸಾರ್ವಜನಿಕ ಸಾರಿಗೆ ಬಳಸುವಂತೆಯೂ ಕೇಳಿಕೊಂಡಿದ್ದಾರೆ.

ದೆಹಲಿ: ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಅಧಿಕೃತ ಕೆಲಸಗಳಿಗೆ ಕನಿಷ್ಠ ವಾಹನ ಬಳಸುವುದಾಗಿ ತಿಳಿಸಿದ್ದಾರೆ. ತಮ್ಮನ್ನೂ ಒಳಗೊಂಡಂತೆ ದೆಹಲಿಯ ಎಲ್ಲಾ ಬಿಜೆಪಿ ಶಾಸಕರು ಮತ್ತು ಅಧಿಕಾರಿಗಳು ಕಾರ್-ಪೂಲಿಂಗ್ (ವಾಹನ ಹಂಚಿಕೆ) ಮತ್ತು ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರಧಾನಿಗಳ ಸಲಹೆ ಪಾಲಿಸುವಂತೆ ಸಾರ್ವಜನಿಕರಿಗೂ ಅವರು ಮನವಿ ಮಾಡಿದ್ದಾರೆ.

ರಾಜಸ್ಥಾನ: ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಭದ್ರತೆಯ ಹೆಸರಿನಲ್ಲಿ ಬಳಸುವ ಅನಗತ್ಯ ವಾಹನಗಳನ್ನು ನಿಲ್ಲಿಸಲು ಸೂಚಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ಈ ನಿಯಮ ಅನ್ವಯವಾಗಲಿದೆ.

ಮಹಾರಾಷ್ಟ್ರ: ಇಲ್ಲಿ ಸರ್ಕಾರಿ ವಿಮಾನ ಮತ್ತು ಹೆಲಿಕಾಪ್ಟರ್ ಬಳಕೆಗೆ ಬ್ರೇಕ್ ಹಾಕಲಾಗಿದೆ. ಸಚಿವರು ತುರ್ತು ಕೆಲಸಗಳಿಗಾಗಿ ವಿಮಾನ ಬಳಸಬೇಕಿದ್ದರೆ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: ಡಿಜಿಲಾಕರ್ ಬಳಕೆಯಲ್ಲಿ ಕರ್ನಾಟಕ ಟಾಪ್! ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಪ್ರಶಸ್ತಿ ಗೌರವ

ಬಿಹಾರ: ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಚೌಧರಿ ಅವರು ತಮ್ಮ ವೈಯಕ್ತಿಕ ಬಳಕೆಯ ವಾಹನಗಳ ಸಂಖ್ಯೆಯನ್ನು ಅರ್ಧದಷ್ಟು ಕಡಿತಗೊಳಿಸಿದ್ದು, ಅತ್ಯಗತ್ಯವಿದ್ದಾಗ ಮಾತ್ರ ಅಧಿಕೃತ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಗುಜರಾತ್‌: ಗುಜರಾತ್ ರಾಜ್ಯಪಾಲರು ಹೆಲಿಕಾಪ್ಟರ್ ಅಥವಾ ವಿಮಾನಗಳ ಬದಲಿಗೆ ರಾಜ್ಯದೊಳಗೆ ಪ್ರಯಾಣಿಸಲು ರೈಲು ಮತ್ತು ಎಸ್‌ಟಿ (ST) ಬಸ್‌ಗಳನ್ನು ಬಳಸಲು ನಿರ್ಧರಿಸಿದ್ದಾರೆ. ಇನ್ನು ರಾಜ್ಯದ ಉಪಮುಖ್ಯಮಂತ್ರಿ ಹರ್ಷ ಸಂಘವಿ ಅವರು ತಮ್ಮ ನಿಗದಿತ ಅಮೆರಿಕ ಪ್ರವಾಸವನ್ನು ರದ್ದುಗೊಳಿಸುವ ಮೂಲಕ ವಿದೇಶಿ ಪ್ರಯಾಣದ ವೆಚ್ಚಕ್ಕೆ ಕಡಿವಾಣ ಹಾಕಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಲ್ಲೂ ನಿರೀಕ್ಷೆಗೂ ಮೀರಿ ವಿಶ್ವಾಸಮತ ಗೆದ್ದ ಸಿಎಂ ವಿಜಯ್: ಯಾರದ್ದೆಲ್ಲ ಬೆಂಬಲ ಸಿಕ್ತು? ಇಲ್ಲಿದೆ ವಿವರ

ಸರ್ಕಾರದ ಈ ಕ್ರಮಗಳು ಕೇವಲ ಇಂಧನ ಉಳಿತಾಯ ಮಾತ್ರವಲ್ಲದೆ, ಸಾರ್ವಜನಿಕ ಹಣದ ದುಂದುವೆಚ್ಚವನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ. ಜನಪ್ರತಿನಿಧಿಗಳೇ ನೇರವಾಗಿ ಸಾರ್ವಜನಿಕ ಸಾರಿಗೆ ಬಳಕೆಗೆ ಮುಂದಾಗಿರುವುದು ಜನಸಾಮಾನ್ಯರಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕೊರಗಜ್ಜ ಸರ್ಕಲ್​​ ವಿವಾದ: ಯು.ಟಿ. ಖಾದರ್​​ಗೆ ಘೇರಾವ್​ ಹಾಕಿದ್ದವರ ವಿರುದ್ಧ FIR – Kannada News | Koragajja Circle Row: FIR Against 10 for Gharaoing Speaker UT Khader in Mangaluru

ಯು.ಟಿ. ಖಾದರ್​​

ಮಂಗಳೂರು, ಮೇ 13: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್​ಗೆ ಘೇರಾವ್ ವಿಚಾರ ಸಂಬಂಧೇ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಖಾದರ್ ಅಂಗರಕ್ಷಕ ಮೊಹಮ್ಮದ್ ಯಾಸಿನ್ ದೂರು ಆಧರಿಸಿ ಘೇರಾವ್ ಹಾಕಿದ ಮದನಿನಗರ ನಿವಾಸಿ ಜುನೈದ್ ಸೇರಿದಂತೆ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕೊರಗಜ್ಜ ಸರ್ಕಲ್​​ ವಿಚಾರವಾಗಿ ಉಳ್ಳಾಲದಲ್ಲಿ ಯು.ಟಿ.ಖಾದರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೆಲ ಯುವಕರು ಅವರಿಗೆ ಘೇರಾವ್​​ ಹಾಕಿದ್ದರು. ಸಾಲದ್ದಕ್ಕೆ ವಾಗ್ವಾದವನ್ನೂ ನಡೆಸಿದ್ದರು.

ಏನಿದು ಕೊರಗಜ್ಜ ಸರ್ಕಲ್​​ ವಿವಾದ?

ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಿಂದ ಕುತ್ತಾರಿನಲ್ಲಿ ಸರ್ಕಲ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದರ ನಿರ್ವಹಣೆಯ ಜವಾಬ್ದಾರಿಯನ್ನೂ ಸರ್ಕಾರ ಮೆಡಿಕಲ್ ಕಾಲೇಜಿಗೇ ವಹಿಸಿದೆ. ಆದರೆ ಸರ್ಕಲ್ ನಿರ್ಮಾಣದ ಬಗ್ಗೆ ಅಪಸ್ವರ ಎತ್ತಿ ಖಾದರ್ ವಿರುದ್ದ ಕೆಲ ಮುಸ್ಲಿಮರು ತಿರುಗಿ ಬಿದ್ದಿದ್ದಾರೆ. ಕುತ್ತಾರು ತುಳುನಾಡಿನ ಕಾರ್ಣಿಕ ದೈವ ಕೊರಗಜ್ಜನ ಮೂಲ ಕ್ಷೇತ್ರವಾಗಿದ್ದು, ಅಪಾರ ಸಂಖ್ಯೆಯ ಭಕ್ತರು ಕೊರಗಜ್ಜ ದೈವವನ್ನು ನಂಬಿದ್ದಾರೆ. ಹೀಗಾಗಿ ವೃತ್ತ ನಿರ್ಮಾಣಕ್ಕೆ ತಿಂಗಳ ಹಿಂದೆಯೇ ಕೊರಗಜ್ಜ ದೈವದ ಕೆಲ ವಸ್ತುಗಳ ಪ್ರತಿಕೃತಿಯನ್ನು ಈ ಜಾಗದಲ್ಲಿ ವಿಶ್ವಹಿಂದೂ ಪರಿಷತ್​​ ಇಟ್ಟಿತ್ತು. ಸದ್ಯ ಹೊಸದಾಗಿ ನಿರ್ಮಾಣವಾಗ್ತಿರೋ ವೃತ್ತದಲ್ಲೂ ದೈವದ ಪ್ರತಿಕೃತಿ ಇಡಲು ಯೋಜನೆ ರೂಪಿಸಿದ್ದು, ಸರ್ಕಲ್​​ಗೆ ಕೊರಗಜ್ಜ ವೃತ್ತ ಎಂದು ಹೆಸರಿಡಲೂ ಪ್ಲ್ಯಾನ್​​ ಮಾಡಿದೆ. ಆದರೆ ಈ ಸರ್ಕಲ್​​ ವಿಚಾರವೀಗ ಸಾಮಾಜಿಕ ಜಾಲತಾಣದಲ್ಲಿಯೂ ಭಾರೀ ಚರ್ಚೆ ಹುಟ್ಟು ಹಾಕಿದೆ. ಆಕ್ಷೇಪ ಕುತ್ತಾರು ವೃತ್ತಕ್ಕೆ ಕೊರಗಜ್ಜ ಹೆಸರು ಇಡೋದಕ್ಕಾ? ಅಥವಾ ಅವೈಜ್ಞಾನಿಕ ಕಾಮಗಾರಿಗಾ? ಎಂಬ ಗೊಂದಲೂ ಇದೆ. ವೃತ್ತ ದೊಡ್ಡದಾಗಿ ನಿರ್ಮಿಸಿದ್ರೆ ಸಂಚಾರ ಸಮಸ್ಯೆ ಎಂಬ ನೆಪದಲ್ಲಿ ಕೆಲವರ ಅಪಸ್ವರ ತೆಗೆದಿದ್ದರೆ, ಇನ್ನು ಕೆಲವರು ಕೊರಗಜ್ಜ ಹೆಸರಿಗೇ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ ಎಂಬ ಮಾತುಗಳೂ ಇವೆ.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾಖಲೆಯ ಆದಾಯ, ಸತತ 15 ವರ್ಷಗಳ ಕಾಲ ನಂ.1

ಯು.ಟಿ.ಖಾದರ್ ತಿರುಗೇಟು

ಇನ್ನು ಕೊರಗಜ್ಜ ಸರ್ಕಲ್​​ ವಿರೋಧಿಸುವವರಿಗೆ ಸ್ಪೀಕರ್​​, ಉಳ್ಳಾಲ ಶಾಸಕ ಯು.ಟಿ. ಖಾದರ್ ತಿರುಗೇಟು ನೀಡಿದ್ದಾರೆ. ಯಾರೋ ಕೆಲವರು ದಾರಿ ತಪ್ಪಿದವರು ಇದ್ದಾರೆ. ಅವರು ಏನೋ ಹೇಳ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಏನೋ ಮಾಡ್ತಾರೆ ಎಂದು ಅದನ್ನೆಲ್ಲ ಕೇಳ್ಕೊಂಡು ಇರಲು ಸಾಧ್ಯವಿಲ್ಲ.ಅವರೇನು ಮದನಿ ನಗರದವರು ಅಲ್ಲ, ಬೇರೆ ಸಂಘಟನೆಗೆ ಸೇರಿದವರು. ಅಲ್ಲದೇ ಹೊರಗಿನಿಂದ ಬಂದವರು. ಅಲ್ಲಿ ಏನು ಆಗುತ್ತೋ ಒಳ್ಳೆಯದಕ್ಕೇ ಆಗುತ್ತದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Santana Dosha: ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ವಿಳಂಬ ಮಾಡುವುದು ದೋಷಕ್ಕೆ ಕಾರಣವಾಗುತ್ತಾ? – Kannada News | Santana Dosha: The Impact of Postponing Children According to Astrology

ಇಂದಿನ ವೇಗದ ಜೀವನಶೈಲಿಯಲ್ಲಿ, ಅನೇಕ ದಂಪತಿಗಳು ಮಕ್ಕಳನ್ನು ಪಡೆಯುವುದನ್ನು ಮುಂದೂಡಲು ನಿರ್ಧರಿಸುತ್ತಾರೆ. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳುವ ಅಥವಾ ವೈಯಕ್ತಿಕ ಬೆಳವಣಿಗೆಗೆ ಗಮನಹರಿಸುವ ಬಯಕೆಯಿಂದ, ಇನ್ನೊಂದು ಮೂರು ವರ್ಷ ಬೇಡ, ಇನ್ನೊಂದು ಎರಡು ವರ್ಷ ಬೇಡ ಎಂಬಂತಹ ಮಾತುಗಳು ಸರ್ವೇ ಸಾಮಾನ್ಯವಾಗಿವೆ. ಆದರೆ, ಧಾರ್ಮಿಕ ಮತ್ತು ಜ್ಯೋತಿಷ್ಯದ ದೃಷ್ಟಿಕೋನದಿಂದ, ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವುದು ಹಲವು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ಸಂತಾನವನ್ನು ವಿಳಂಬಗೊಳಿಸಿದರೆ ವೃದ್ಧಾಪ್ಯದಲ್ಲಿ ಅದರ ಫಲವನ್ನು ಅನುಭವಿಸಬೇಕಾಗುತ್ತದೆ. ಮಕ್ಕಳು ಚಿಕ್ಕವರಿದ್ದಾಗ ತಂದೆ-ತಾಯಿ ವಯಸ್ಸಾಗಿದ್ದರೆ, ಅವರ ಪಾಲನೆ-ಪೋಷಣೆ ಕಷ್ಟವಾಗುತ್ತದೆ. ಇದು ಮಕ್ಕಳಿಗೂ, ಪೋಷಕರಿಗೂ ದ್ರೋಹ ಮಾಡಿದಂತೆ ಆಗುತ್ತದೆ. ಇಂತಹ ನಿರ್ಲಕ್ಷ್ಯದಿಂದ ಮುಖ್ಯವಾಗಿ ಕಾಡತಕ್ಕದ್ದು ಸರ್ಪ ಶಾಪ. ಈ ಶಾಪವು ಬೆನ್ನಿಗೆ ಅಂಟಿಕೊಂಡು ದೇಹಕ್ಕೆ ಹಾನಿ ಮಾಡಬಹುದು. ಕಡೆಯ ಕಾಲದಲ್ಲಿ ಮಕ್ಕಳಿದ್ದರೂ ಸಹ, ಒಂಟಿತನ ಕಾಡಿ ಯಾರೂ ನೋಡಿಕೊಳ್ಳುವವರಿಲ್ಲದೆ ದುರ್ಬರವಾಗಿ, ನರಕ ಸದೃಶ ಜೀವನವನ್ನು ಎದುರಿಸಬೇಕಾಗಬಹುದು, ಏಕೆಂದರೆ ಮಕ್ಕಳು ನಿರ್ಲಕ್ಷ್ಯಕ್ಕೆ ಒಳಗಾಗಿದ್ದರಿಂದ ಈ ದೋಷವು ಕಾಡುತ್ತಿರುತ್ತದೆ.

ದೈವಾನುಗ್ರಹದಿಂದ ವಿವಾಹ ಸಂಭವಿಸುತ್ತದೆ, ಏಕೆಂದರೆ ಮದುವೆ ಸ್ವರ್ಗದಲ್ಲಿ ನಿಗದಿಯಾಗಿದೆ ಎಂಬ ನಂಬಿಕೆ ಇದೆ. ವಿವಾಹದ ನಂತರ ಸಂತಾನ, ನಂತರ ಜೀವನ, ಮುಕ್ತಿ ಮತ್ತು ಮೋಕ್ಷ – ಇವೆಲ್ಲವೂ ಒಂದಕ್ಕೊಂದು ಸಂಬಂಧಿಸಿವೆ. ಜ್ಯೋತಿಷ್ಯದಲ್ಲಿ, ಐದನೇ ಮನೆ ಸಂತಾನ ಸ್ಥಾನವಾಗಿದೆ. ಗುರು ಗ್ರಹವು ಸಂತಾನದ ಮುಖ್ಯ ಕಾರಕನಾಗಿದ್ದಾನೆ. ಸಂತಾನವನ್ನು ನಿರ್ಲಕ್ಷಿಸಿದಾಗ, ಗುರು ಕೋಪಗೊಳ್ಳುತ್ತಾನೆ. ಈ ಕೋಪವು ಗಂಡ ಮತ್ತು ಹೆಂಡತಿ ಇಬ್ಬರಿಗೂ ಕಷ್ಟಗಳನ್ನು ತರಬಹುದು. ಗುರು ನೀಚನಾಗಿದ್ದಾಗ, ವಕ್ರಿಯಾಗಿದ್ದಾಗ ಅಥವಾ ಗುರುವಿನ ಸ್ಥಿತಿ ಕೆಟ್ಟದಾಗಿದ್ದಾಗ, ಗರ್ಭಸ್ರಾವ ಸಂಭವಿಸಿದರೆ, ಅದು ಸಂಪೂರ್ಣವಾಗಿ ಸರ್ಪ ದೋಷಕ್ಕೆ ಕಾರಣವಾಗುತ್ತದೆ. ಇದನ್ನು ಸಂತಾನ ದೋಷ ಅಥವಾ ಸರ್ಪ ದೋಷ ಎಂದೂ ಕರೆಯುತ್ತಾರೆ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ

ಇದಲ್ಲದೆ, ಶನಿ ಗ್ರಹವು ಐದನೇ ಮನೆಯನ್ನು ದೃಷ್ಟಿಸಿದರೆ, ಶಾಶ್ವತವಾಗಿ ಸಂತಾನವಿಲ್ಲದ ಪರಿಸ್ಥಿತಿ ಉಂಟಾಗಬಹುದು. ಕೆಲವರು ಇನ್ನು ಕೆಲವು ವರ್ಷಗಳು ಹೋಗಲಿ ಎಂದು ಮಕ್ಕಳನ್ನು ಮುಂದೂಡುತ್ತಾರೆ, ಆದರೆ ಆ ಸಮಯದಲ್ಲಿ ಶನಿ ಐದನೇ ಮನೆಯನ್ನು ನೋಡಿದರೆ ಶಾಶ್ವತವಾಗಿ ಮಕ್ಕಳಿಲ್ಲದಂತೆ ಆಗಬಹುದು. ಒಂದು ಅಬಾರ್ಷನ್ ಅಥವಾ ಮಗು ಬೇಡವೆಂದು ನಿರ್ಧರಿಸಿದ ನಂತರ, ಮಕ್ಕಳಿಲ್ಲದಿರಲು ಇದು ಒಂದು ಕಾರಣವಾಗಿರಬಹುದು. ಗರ್ಭಪಾತಕ್ಕೆ ಮಂಗಳ ಗ್ರಹವು ಕಾರಣನಾಗುತ್ತಾನೆ. ಮಂಗಳನ ಅನುಗ್ರಹ ಕಡಿಮೆಯಾದಾಗ ಗರ್ಭಪಾತವಾಗುತ್ತದೆ. ಮಂಗಳನ ಕೋಪವು ಪಿತೃ ದೋಷಗಳನ್ನು ತರಬಹುದು.

ಹಾಗಾಗಿ, ಮಕ್ಕಳು ಯಾವ ಕಾಲಕ್ಕೆ ಆಗಬೇಕೋ ಆ ಕಾಲಕ್ಕೆ ಆಗುವುದು ಶುಭ. ಒತ್ತಡದಿಂದ ಅಥವಾ ಮನಸ್ಸಿನಿಂದ ಮಕ್ಕಳನ್ನು ಮುಂದೂಡುವುದು ಶುಭವಲ್ಲ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version