ರಾಜೀವ್ ಗಾಂಧಿ ವಸತಿ ನಿಗಮದ ಅಡಿಯಲ್ಲಿ ಮನೆ ಪಡೆದವರಿಗೆ ಬಿಗ್​ ಶಾಕ್: ಹಂಚಿಕೆ ರದ್ದುಗೊಳಿಸಲು ಸರ್ಕಾರ ಆದೇಶ! – Kannada News | RGRHCL: Bengaluru 1 Lakh Housing Scheme Allotments Cancelled Due to Pending Dues

ಬೆಂಗಳೂರು, ಏ.29: ರಾಜೀವ್ ಗಾಂಧಿ ವಸತಿ ನಿಗಮದ ಅಡಿಯಲ್ಲಿ ಮನೆ ಪಡೆದು, ದೀರ್ಘಕಾಲದಿಂದ ಬಾಕಿ ಹಣ ಪಾವತಿಸದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿದೆ. ನೋಟಿಸ್ ನೀಡಿದರೂ ಸ್ಪಂದಿಸದವರ ಮನೆ ಹಂಚಿಕೆಯನ್ನು ರದ್ದುಗೊಳಿಸಿ, ಆ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಲು ವಸತಿ ಇಲಾಖೆ ಆದೇಶ ಹೊರಡಿಸಿದೆ. ‘ಮುಖ್ಯಮಂತ್ರಿ 1 ಲಕ್ಷ ಮನೆ ಯೋಜನೆ’ ಅಡಿ ಬೆಂಗಳೂರು ನಗರ ಜಿಲ್ಲೆಯ 20 ವಿವಿಧ ಕಡೆಗಳಲ್ಲಿ ವಸತಿ ಸಮುಚ್ಚಯಗಳನ್ನು ನಿರ್ಮಿಸಿ ಬಡವರಿಗೆ ಮನೆ ಹಂಚಿಕೆ ಮಾಡಲಾಗಿತ್ತು. ಫಲಾನುಭವಿಗಳು ಪ್ರಾರಂಭಿಕ ಠೇವಣಿಯಾಗಿ…

Read More

5 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದ ಅರ್ಜುನ್ ತೆಂಡೂಲ್ಕರ್ – Kannada News | Arjun Tendulkar Enters Mumbai T20 Auction; LSG Status and Special Permission to Play

ವಾಸ್ತವವಾಗಿ ಮುಂಬೈ ಟಿ20 ಲೀಗ್​ಗಾಗಿ ಮೇ 2 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಅರ್ಜುನ್ ಕೂಡ ಮೂಲ ಬೆಲೆ 5 ಲಕ್ಷ ರೂಗಳೊಂದಿಗೆ ಈ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಾಸ್ತವವಾಗಿ ಅರ್ಜುನ್ ತೆಂಡೂಲ್ಕರ್ ಗೋವಾ ಪರ ದೇಶೀಯ ಕ್ರಿಕೆಟ್ ಆಡುತ್ತಾರೆ, ಆದರೆ ಇದರ ಹೊರತಾಗಿಯೂ, ಅವರಿಗೆ ಮುಂಬೈ ಟಿ20 ಲೀಗ್‌ನಲ್ಲಿ ಆಡಲು ಅನುಮತಿ ನೀಡಲಾಗಿದೆ. ಅರ್ಜುನ್ ಜೊತೆಗೆ, ಪಾಂಡಿಚೇರಿ ಆಟಗಾರ ಸಿದ್ಧಾಂತ್ ಅಧತರಾವ್ ಅವರಿಗೆ ಮುಂಬೈ ಟಿ20 ಲೀಗ್‌ನಲ್ಲಿ ಆಡಲು ವಿಶೇಷ ಅನುಮತಿ ನೀಡಲಾಗಿದೆ. Source link

Read More

ವಾರಾಣಸಿಯಲ್ಲಿ ತಮಗಾಗಿ ಕಾದಿದ್ದ ಮಕ್ಕಳಿಗೆ ಮುದ್ದುಗರೆದ ಮೋದಿ ತಾತ – Kannada News | PM Modi interacted with children during his Varanasi visit

ವಾರಾಣಸಿ, ಏಪ್ರಿಲ್ 29: ಉತ್ತರ ಪ್ರದೇಶದ ವಾರಾಣಸಿ ಭೇಟಿಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಚಿಕ್ಕ ಮಕ್ಕಳೊಂದಿಗೆ ಕೆಲಕಾಲ ಸಮಯ ಕಳೆದರು. ಪ್ರಧಾನಿ ಮೋದಿಗಾಗಿ ಅಪ್ಪ-ಅಮ್ಮನ ಜೊತೆ ಸಾಕಷ್ಟು ಹೊತ್ತಿನಿಂದ ಕಾಯುತ್ತಿದ್ದ ಮಕ್ಕಳು ಮೋದಿಯನ್ನು ಕಂಡ ಕೂಡಲೆ ಕೈ ಬೀಸತೊಡಗಿದರು. ಇದನ್ನು ನೋಡಿದ ಮೋದಿ ಆ ಮಕ್ಕಳನ್ನು ತನ್ನತ್ತ ಕರೆದು ಮಾತನಾಡಿಸಿದ್ದಾರೆ. ಈ ಹೃದಯಸ್ಪರ್ಶಿ ದೃಶ್ಯಗಳು ವೈರಲ್ ಆಗಿವೆ. ಕಾಶಿ ವಿಶ್ವನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಪ್ರಧಾನಿ ಮೋದಿ ಅವರು ಹೊರಡುವ ಹೊತ್ತಿಗೆ…

Read More

ಕೊಪ್ಪಳ: 21 ಸಾವಿರ ರೂ. ಲಂಚ ಪಡೆಯುವಾಗ ಲೋಕಯುಕ್ತ ಕೈಗೆ ಸಿಕ್ಕಿಬಿದ್ದ ಎಸ್‌ಡಿಎ ರಂಜಿತ್ – Kannada News | Lokayukta Raid Koppal: RTO Clerk Ranjith Caught Taking Bribe for Showroom License

ಕೊಪ್ಪಳ, ಏ.29: ರಾಜ್ಯದ ಹಲವು ಕಡೆ ಲೋಕಯುಕ್ತ ದಾಳಿಗಳು ನಡೆಯುತ್ತಿದೆ. ಭಷ್ಟ ಅಧಿಕಾರಿಗಳ ಹೆಡೆಮುರಿ ಕಟ್ಟುತ್ತಿದ್ದಾರೆ. ಇದೀಗ ಕೊಪ್ಪಳದ ಪ್ರಾದೇಶಿಕ ಸಾರಿಗೆ ಕಚೇರಿಯ (RTO) ದ್ವಿತೀಯ ದರ್ಜೆ ಸಹಾಯಕ (SDA) ರಂಜಿತ್ ಎಂಬುವವರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶೋರೂಮ್ ಟ್ರೇಡ್ ಲೈಸೆನ್ಸ್ ನೀಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಈ ಸಿಬ್ಬಂದಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ದೂರುದಾರರಾದ ನಯೀಮ್ ಎಂಬುವವರು ಕುಷ್ಟಗಿ, ಕಾರಟಗಿ ಹಾಗೂ ಹುಲಿಗಿಯಲ್ಲಿ ಹೊಸ ಶೋರೂಮ್‌ಗಳನ್ನು ತೆರೆಯಲು ಪರವಾನಿಗೆ (Trade License)…

Read More

ಮೇ 4ರಂದು ಬಿಜೆಪಿ ಹ್ಯಾಟ್ರಿಕ್ ಸಾಧಿಸಲಿದೆ; ಹರ್ದೋಯ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ – Kannada News | BJP to make historic hat trick of victories PM Modi in Hardoi West Bengal Elections

ಹರ್ದೋಯ್, ಏಪ್ರಿಲ್ 29: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಉತ್ತರ ಪ್ರದೇಶದ ಹರ್ದೋಯ್‌ನಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದರು. ಈ ವೇಳೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮೀರತ್ ಮತ್ತು ಪ್ರಯಾಗ್‌ರಾಜ್ ನಡುವಿನ ಎಕ್ಸ್‌ಪ್ರೆಸ್‌ವೇ ಗಂಗಾ ಮಾತೆಯ ಆಶೀರ್ವಾದವಾಗಿದ್ದು, ಜನರು ಎರಡೂ ನಗರಗಳ ನಡುವೆ ಸುಲಭವಾಗಿ ಪ್ರಯಾಣಿಸಲು ಅನುವು ಮಾಡಿಕೊಡುತ್ತದೆ. ಈ ಹೆದ್ದಾರಿ ಉತ್ತರ ಪ್ರದೇಶದ ಜೀವನಾಡಿ ಎಂದು ಬಣ್ಣಿಸಿದರು. ಇದೇ ವೇಳೆ ಪಶ್ಚಿಮ ಬಂಗಾಳ ಚುನಾವಣೆಯ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಿದರು. ಎರಡನೇ…

Read More

ಕುವೆಂಪು ವಿವಿಯಲ್ಲಿ ತಾರಕ್ಕೇರಿದ್ದ ವಿದ್ಯಾರ್ಥಿಗಳ ಪ್ರತಿಭಟನೆ: ಕುಲಪತಿ, ಕುಲಸಚಿವರನ್ನ ವಜಾಗೊಳಿಸುವಂತೆ ಪಟ್ಟು – Kannada News | Shivamogga: Kuvempu University Students Protest, Demand Dismissal of Chancellor and Registrar

ಶಿವಮೊಗ್ಗ, ಏಪ್ರಿಲ್​ 29: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಲ್ಕ ಹೆಚ್ಚಳ, ಫಲಿತಾಂಶ ಗೊಂದಲಗಳು ಮತ್ತು ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ಎನ್ಎಸ್ ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕುಲಪತಿ, ಕುಲಸಚಿವ ಮತ್ತು ಮೌಲ್ಯಮಾಪನ ರಿಜಿಸ್ಟ್ರಾರ್‌ಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ತಾಂತ್ರಿಕ ಸಮಸ್ಯೆಗಳ ನೆಪದಲ್ಲಿ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಹಿಂದೆ ಪಾಸ್ ಆಗಿದ್ದ ಫಲಿತಾಂಶಗಳು ಈಗ ಮಾಸ್ ಕಾರ್ಡ್‌ಗಳಲ್ಲಿ ಫೇಲ್ ಎಂದು…

Read More

ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ದಂಪತಿ: ಬೇಬಿ ಬಂಪ್ ಫೋಟೊಶೂಟ್

ನಟ, ನಿರ್ಮಾಪಕ ಡಾಲಿ ಧನಂಜಯ್ ಅವರು ಇದೀಗ ತಂದೆಯಾಗುವ ಶುಷಿಯಲ್ಲಿದ್ದಾರೆ. ಡಾಲಿ ಅವರ ಪತ್ನಿ ಡಾ ಧನ್ಯತಾ ಗರ್ಭಿಣಿ ಆಗಿದ್ದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಧನ್ಯತಾ ಅವರು ಬೇಬಿ ಬಂಪ್ ಫೋಟೊಶೂಟ್ ಮಾಡಿಸಿದ್ದು, ಪತಿ ಡಾಲಿ ಸಹ ಪತ್ನಿಯ ಫೋಟೋಶೂಟ್​ನಲ್ಲಿ ಜೊತೆಯಾಗಿದ್ದಾರೆ. ಧನ್ಯತಾ ಮತ್ತು ಡಾಲಿ ಧನಂಜಯ್ ಅವರುಗಳು ಫೋಟೊಶೂಟ್​​ನಲ್ಲಿ ಮುದ್ದಾಗಿ ಕಾಣುತ್ತಿದ್ದು, ಮಗುವಿನ ನಿರೀಕ್ಷೆಯಲ್ಲಿರುವ ಪೋಷಕರ ಖುಷಿಯಲ್ಲಿದ್ದಾರೆ. ಡಾಲಿ ಹಾಗೂ ಧನ್ಯತಾ ಅವರು ಪ್ರಕೃತಿಯ ನಡುವೆ ಫೋಟೊಶೂಟ್ ಮಾಡಿಸಿದ್ದು, ಡಾಲಿ, ಗರ್ಭಿಣಿ ಪತ್ನಿಯ ಕೈ…

Read More

ತಂದೆ ಬಗ್ಗೆ ಹೆಚ್​​ಡಿಕೆ ಹೇಳಿಕೆಯಿಂದ ನೋವಾಗಿದೆ ಎಂದ ಸಚಿವ ಡಿ. ಸುಧಾಕರ್​​ ಪುತ್ರನಿಗೆ JDS ಕೌಂಟರ್​​ – Kannada News | JDS Questions Congress Over D. Sudhakar Health Secrecy, Hits Back at Minister’s Son

ಹೆಚ್​​ಡಿಕೆ ಹೇಳಿಕೆಯಿಂದ ನೋವಾಗಿದೆ ಎಂದ ಸುಧಾಕರ್​​ ಪುತ್ರಗೆ JDS ಕೌಂಟರ್​​ ಬೆಂಗಳೂರು, ಏಪ್ರಿಲ್​​ 29: ಸಚಿವ ಡಿ.ಸುಧಾಕರ್​ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಈ ನಡುವೆ ಅವರ ಆರೋಗ್ಯದ ಬಗ್ಗೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಆಡಿದ್ದ ಮಾತುಗಳೀಗ ರಾಜಕೀಯ ಸ್ವರೂಪ ಪಡೆದುಕೊಂಡಿವೆ. ಆ ವ್ಯಕ್ತಿ ಎಷ್ಟು ನೋವು ಅನುಭವಿಸುತ್ತಿದ್ದಾನೆ. ಯಾವ ಕಾರಣಕ್ಕೆ ಕೆಲವು ವಿಷಯಗಳನ್ನು ಮುಚ್ಚಿಟ್ಟಿದ್ದಾರೆ. ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಮುಚ್ಚಿಡಲಾಗಿದೆಯೇ? ಎಂದು ಹೆಚ್​ಡಿಕೆ ಪ್ರಶ್ನಿಸಿದ್ದರು. ಅವರ ಈ ಹೇಳಿಕೆಗೆ ಸಚಿವ…

Read More

IPL 2026: ಐಪಿಎಲ್ ಮಧ್ಯದಲ್ಲಿ ಮುಂಬೈ ಆಲ್‌ರೌಂಡರ್​ನ ಟ್ರಯಲ್​ಗೆ ಕರೆದ ಸಿಎಸ್​ಕೆ – Kannada News | IPL 2026: CSK’s Injury Woes and Ayush Vartak Trial Amid Playoff Push Challenges

2026 ರ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಪ್ರದರ್ಶನ ಅಷ್ಟೇನೂ ಹೇಳಿಕೊಳ್ಳುವಂತಿಲ್ಲ. ಇದುವರೆಗೆ ಆಡಿರುವ ಪಂದ್ಯಗಳಲ್ಲಿ ಸಿಎಸ್​​ಕೆ ಗೆದ್ದಿರುವುದಕ್ಕಿಂತ ಸೋತಿರುವುದೇ ಹೆಚ್ಚು. ತಂಡವು ಇಲ್ಲಿಯವರೆಗೆ ಆಡಿರುವ ಎಂಟು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಸೋತಿದ್ದು, ಪ್ಲೇಆಫ್ ತಲುಪುವ ಸಾಧ್ಯತೆಗಳು ಮಸುಕಾಗುತ್ತಿವೆ. ಇದರ ನಡುವೆ ತಂಡದ ಆಟಗಾರರ ಗಾಯದ ಸಮಸ್ಯೆ ಸಿಎಸ್​ಕೆ ನುಂಗಲಾರದ ತುತ್ತಾಗಿದೆ. ಕೆಲವು ಸ್ಟಾರ್ ಆಟಗಾರರು ಗಾಯದಿಂದಾಗಿ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇನ್ನು ಕೆಲವು ಆಟಗಾರರು ಗಾಯದಿಂದ ಚೇತರಿಸಿಕೊಳ್ಳುವ ಹಂತದಲ್ಲಿದ್ದಾರೆ. ಇದರಲ್ಲಿ ಎಂಎಸ್ ಧೋನಿ ಕೂಡ…

Read More

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್​​​ ನ್ಯೂಸ್​​: ವೇತನ ಹಿಂಬಾಕಿ ಪಾವತಿಗೆ 450 ಕೋಟಿ ರೂ. ಬಿಡುಗಡೆ! – Kannada News | Transport Employees Get Rs.450 Cr Arrears: Karnataka Govt’s First Phase Payment

ಬೆಂಗಳೂರು, ಏ.29: ಹಲವು ದಿನಗಳಿಂದ ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವೆ ಹಲವು ಬೇಡಿಕೆಗಳ ಕುರಿತು ಭಾರೀ ಗೊಂದಲಗಳು ಉಂಟಾಗಿದೆ. ಇದಕ್ಕಾಗಿ ಪ್ರತಿಭಟನೆಗಳನ್ನು ಕೂಡ ನಡೆಸಿದರು. ಆದರೆ ಇದೀಗ ಸಾರಿಗೆ ನೌಕರರಿಗೆ ಬಿಗ್​​​​​ ಗುಡ್​​ ನ್ಯೂಸ್​ ನೀಡಿದೆ. ದೀರ್ಘಕಾಲದ ಕಾಯುವಿಕೆಯ ನಂತರ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಬಾಕಿ ಇರುವ ವೇತನ ಹಿಂಬಾಕಿಯನ್ನು (Arrears) ಪಾವತಿಸಲು ಮೊದಲ ಹಂತದಲ್ಲಿ 450 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿ ಸರ್ಕಾರ…

Read More