35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ! – Kannada News | Mangaluru Drug Bust: BCA Student Arrested with Hydroponic Weed Worth rs 35 Lakh

ಮಂಗಳೂರು, ಮೇ 13: ಕರಾವಳಿಯಲ್ಲಿ ಮಾದಕ ದ್ರವ್ಯ ಜಾಲದ ಬೇರುಗಳು ಎಷ್ಟು ಆಳವಾಗಿ ಇಳಿದಿವೆ ಎಂಬುದಕ್ಕೆ ಸಾಕ್ಷಿಯೆಂಬಂತೆ, ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕೋಟಿ ಮೊತ್ತದ ಮಾದಕ ವಸ್ತುವನ್ನು (Drugs) ವಶಪಡಿಸಿಕೊಂಡಿದ್ದಾರೆ. ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮುಖ್ಯಾಂಶಗಳು

  • ಚೆನ್ನೈನಿಂದ ಮಂಗಳೂರಿಗೆ ಮಾದಕ ವಸ್ತು ಸಾಗಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಸುಹಾನ ಬಂಧನ.
  •  ಆರೋಪಿಯಿಂದ 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ ಪೊಲೀಸರ ವಶ.
  •  ಬಂಧಿತ ವಿದ್ಯಾರ್ಥಿನಿ ಮೇಲೆ ಈಗಾಗಲೇ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿವೆ.

ನಡೆದಿದ್ದೇನು?

ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ ಸುಹಾನ (21) ಎಂದು ಗುರುತಿಸಲಾಗಿದೆ. ಈಕೆ ಕುಂದಾಪುರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಂತಿಮ ವರ್ಷದ BCA ವಿದ್ಯಾರ್ಥಿನಿಯಾಗಿದ್ದಾಳೆ. ಮಂಗಳವಾರ (ಮೇ 12) ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಈಕೆಯನ್ನು ಬಂಧಿಸಿದ್ದಾರೆ.

ಏನೆಲ್ಲಾ ವಶಕ್ಕೆ?

ಬಂಧಿತ ವಿದ್ಯಾರ್ಥಿನಿಯಿಂದ ಸುಮಾರು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾ ಎಂಬ ಅತೀ ದುಬಾರಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಮತ್ತು ಇತರ ದಾಖಲೆಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಸುಹಾನ ಈ ಮಾದಕ ವಸ್ತುವನ್ನು ಚೆನ್ನೈನಿಂದ ಮಂಗಳೂರಿಗೆ ತರಿಸಿಕೊಂಡಿದ್ದಳು. ಇಲ್ಲಿನ ಕಾಲೇಜು ವಿದ್ಯಾರ್ಥಿಗಳು ಹಾಗೂ ಶ್ರೀಮಂತ ಗ್ರಾಹಕರಿಗೆ ಇದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸುವ ಸಂಚು ರೂಪಿಸಿದ್ದಳು ಎನ್ನಲಾಗಿದೆ.

ಇದನ್ನೂ ಓದಿ ಬೆಂಗಳೂರಿನ ಡ್ರಗ್ಸ್ ಮಾಫಿಯಾಗೆ ಪೊಲೀಸರ ಬಿಗ್ ಶಾಕ್: 13 ಕೆಜಿಗೂ ಹೆಚ್ಚು ಮಾದಕ ವಸ್ತುಗಳು ಸೀಜ್!

ಹಳೆ ಪ್ರಕರಣಗಳ ನಂಟು

ಕೇವಲ 21 ವರ್ಷದ ಈ ವಿದ್ಯಾರ್ಥಿನಿ ಈಗಾಗಲೇ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಈಕೆಯ ಮೇಲೆ ಈ ಹಿಂದೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಲ್ಲದೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯಲ್ಲೂ ಈಕೆಯ ವಿರುದ್ಧ ಮಾದಕ ದ್ರವ್ಯ ಸಾಗಾಟದ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ. ಪ್ರಸ್ತುತ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದ ಹಿಂದೆ ಇರುವ ದೊಡ್ಡ ತಲೆಗಳ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:49 am, Wed, 13 May 26

Source link

ನನ್ನನ್ನು ಯಾರೂ ಕಣ್ಣೆತ್ತಿ ನೋಡಲಿಲ್ಲ: ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಅನುಭವ ಬಿಚ್ಚಿಟ್ಟ ರಜನಿಕಾಂತ್ – Kannada News | Rajinikanth shares profound experience at Art Of Living Ashram Bengaluru

ಆರ್ಟ್ ಆಫ್ ಲಿವಿಂಗ್ (Art Of Living) ಸಂಸ್ಥೆಯ 45ನೇ ವರ್ಷಾಚರಣೆ ಮತ್ತು ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar) ಅವರ 70ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೂಪರ್‌ ಸ್ಟಾರ್ ರಜನಿಕಾಂತ್ (Rajinikanth) ಅವರು ಆಶ್ರಮದಲ್ಲಿ ತಮಗಾದ ಒಂದು ಮರೆಯಲಾಗದ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಆ ಘಟನೆಯು ತಮ್ಮ ಅಹಂಕಾರವನ್ನು ಹೇಗೆ ಮಣ್ಣುಪಾಲಾಗಿಸಿತು ಎಂಬುದನ್ನು ಅವರು ಹಾಸ್ಯಭರಿತವಾಗಿ ವಿವರಿಸಿದ್ದಾರೆ. ವೇದಿಕೆಯಲ್ಲಿ ಅವರು ಮಾತನಾಡಿದ ವಿಡಿಯೋ ವೈರಲ್ ಆಗಿದೆ.

ಆರಂಭದಲ್ಲಿ ಕೇವಲ ಎರಡು ದಿನಗಳ ಕಾಲ ಆಶ್ರಮದಲ್ಲಿ ಇರಲು ಯೋಜಿಸಿದ್ದ ರಜನಿಕಾಂತ್, ಅಲ್ಲಿನ ಸುಂದರ ಪರಿಸರಕ್ಕೆ ಮಾರುಹೋಗಿ ಬರೋಬ್ಬರಿ 15 ದಿನಗಳ ಕಾಲ ಅಲ್ಲೇ ಉಳಿದುಕೊಂಡರಂತೆ. ‘ಸುತ್ತಲೂ ಹಸಿರು, ಕೆರೆ, ನಗುಮುಖದ ಜನರನ್ನು ನೋಡಿ ನನಗೆ ಆಶ್ಚರ್ಯವಾಯಿತು. ಅಲ್ಲಿ ಆನೆ, ಕುದುರೆಗಳು ಮತ್ತು ನೂರಾರು ಹಸುಗಳಿದ್ದವು. ವಿಶೇಷವೆಂದರೆ ಅಲ್ಲಿನ ಒಂದು ಕುದುರೆಯ ಹೆಸರು ರಜಿನಿ ಎಂದಿತ್ತು’ ಎನ್ನುವ ಮೂಲಕ ಪ್ರೇಕ್ಷಕರಲ್ಲಿ ನಗೆಹೊನಲು ಹರಿಸಿದರು.

ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ ಆಶ್ರಮಕ್ಕೆ ಭೇಟಿ ನೀಡಿದ್ದ ರಜನಿಕಾಂತ್ ಅವರಿಗೆ ಗುರೂಜಿ ಒಮ್ಮೆ ಆಶ್ರಮದ ಸುತ್ತ ಒಂದು ರೌಂಡ್ ಹಾಕೋಣವೇ ಎಂದು ಕೇಳಿದರಂತೆ. ‘ನಾನು ದೊಡ್ಡ ನಟನಾಗಿರುವುದರಿಂದ ಅಲ್ಲಿನ ಜನ ನನ್ನನ್ನು ಗುರುತಿಸಿ ಮುತ್ತಿಕೊಳ್ಳಬಹುದು, ಆಟೋಗ್ರಾಫ್‌ಗಾಗಿ ಮುಗಿಬೀಳಬಹುದು ಎಂದು ನಾನು ಸ್ವಲ್ಪ ಹಿಂಜರಿದೆ. ಅಲ್ಲಿ ತಮಿಳುನಾಡಿನ ನೂರಾರು ಜನರಿದ್ದರು. ಆದರೆ ಸತ್ಯ ಏನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ ಕೂಡ ನನ್ನನ್ನು ಕಣ್ಣೆತ್ತಿಯೂ ನೋಡಲಿಲ್ಲ’ ಎಂದು ರಜನಿಕಾಂತ್ ಹೇಳಿದರು.

‘ನಾನು ಅಲ್ಲಿದ್ದ ಜನರಿಗೆ ಕೈಬೀಸುತ್ತಿದ್ದರೂ ಯಾರೂ ನನ್ನ ಕಡೆ ಗಮನ ಹರಿಸಲಿಲ್ಲ. ಫೋಟೋ, ಆಟೋಗ್ರಾಫ್ ಬಿಡಿ, ನನ್ನ ಜೊತೆ ಮಾತನಾಡಲೂ ಯಾರೂ ಬರಲಿಲ್ಲ. ನಾನು ಅನೇಕ ರಾಜಕಾರಣಿಗಳು ಮತ್ತು ಉದ್ಯಮಿಗಳನ್ನು ಭೇಟಿ ಮಾಡಿದ್ದೇನೆ, ಆದರೆ ಈ ಅನುಭವ ನನ್ನ ಅಹಂಕಾರವನ್ನು ಸಂಪೂರ್ಣವಾಗಿ ಮುರಿಯಿತು. ಅಧ್ಯಾತ್ಮದ ಶಕ್ತಿಯ ಮುಂದೆ ನನ್ನ ಸ್ಟಾರ್‌ಡಮ್ ಏನೂ ಅಲ್ಲ ಎಂಬುದು ಅಂದು ನನಗೆ ಅರ್ಥವಾಯಿತು’ ಎಂದು ಅವರು ಮನಬಿಚ್ಚಿ ಮಾತನಾಡಿದರು.

ಇದನ್ನೂ ಓದಿ: ಪ್ರತಿಯೊಬ್ಬ ಭಾರತೀಯ ನೋಡಬೇಕಾದ ಸಿನಿಮಾ: ‘ಧುರಂಧರ್ 2’ ಬಗ್ಗೆ ರಜನಿಕಾಂತ್ ಮೆಚ್ಚುಗೆ

ಸಿನಿಮಾದ ಪ್ರಸಿದ್ಧಿ ತಾತ್ಕಾಲಿಕ, ಆದರೆ ಆಧ್ಯಾತ್ಮಿಕ ಶಕ್ತಿ ಶಾಶ್ವತ ಎಂದು ರಜನಿಕಾಂತ್ ಅಭಿಪ್ರಾಯಪಟ್ಟರು. ‘ಸಿನಿಮಾದ ಸ್ಟಾರ್‌ಡಮ್ ಬರುತ್ತದೆ ಮತ್ತು ಹೋಗುತ್ತದೆ. ಆದರೆ ಆಧ್ಯಾತ್ಮಿಕ ಸ್ಟಾರ್‌ಡಮ್ ಅತ್ಯುನ್ನತವಾದುದು. ಅದು ಸಾವಿನ ನಂತರವೂ ಶಾಶ್ವತವಾಗಿ ಉಳಿಯುತ್ತದೆ ಮತ್ತು ಬೆಳೆಯುತ್ತದೆ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Sonia Gandhi Hospitalised: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ, ಮೇ 13: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಮಾಜಿ ಅಧ್ಯಕ್ಷೆ ಆಸ್ಪತ್ರೆಯಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಸೋನಿಯಾ ಗಾಂಧಿ ಅವರು ದಾಖಲಾಗಿರುವ ಬಗ್ಗೆ ಆಸ್ಪತ್ರೆ ಆಡಳಿತದಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

(ಮಾಹಿತಿ ಅಪ್​ಡೇಟ್ ಆಗುತ್ತಿದೆ)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Rates: ಆಮದು ಸುಂಕ ಎಫೆಕ್ಟ್; 10 ಗ್ರಾಂ ಚಿನ್ನದ ಬೆಲೆ 12,750 ರೂ ಏರಿಕೆ – Kannada News | Gold Price Today on 13th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 13: ಚಿನ್ನ, ಬೆಳ್ಳಿ ಮೇಲೆ ಸರ್ಕಾರ ದಿಢೀರನೇ ಆಮದು ಸುಂಕ (Customs Duty) ಏರಿಕೆ ಮಾಡಿದ ಬೆನ್ನಲ್ಲೇ ಇವುಗಳ ಬೆಲೆ (Gold and Silver Rates) ಭರ್ಜರಿ ಏರಿಕೆ ಕಂಡಿವೆ. ಸರ್ಕಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಆಮದು ಸುಂಕವನ್ನು ಶೇ. 6ರಿಂದ ಶೇ. 15ಕ್ಕೆ ಏರಿಸಿತು. ಇದರಿಂದ ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಈ ಅಮೂಲ್ಯ ವಸ್ತುಗಳ ಬೆಲೆಯಲ್ಲಿ ಶೇ. 6ರಷ್ಟು ಹೆಚ್ಚಳವಾಗಿದೆ. ಜ್ಯುವೆಲರಿ ಅಸೋಸಿಯೇಶನ್​ನ ಬೆಲೆ ಪಟ್ಟಿ ಪ್ರಕಾರ ಆಭರಣ ಚಿನ್ನದ ಬೆಲೆಯಲ್ಲಿ ಒಂದು ಗ್ರಾಮ್​ಗೆ ಬರೋಬ್ಬರಿ 1,275 ರೂ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯಲ್ಲಿ 20 ರೂ ಜಂಪ್ ಆಗಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಕಡಿಮೆ ಆದರೂ, ಭಾರತದಲ್ಲಿ ಆಮದು ಸಂಕ ಹೆಚ್ಚಳದಿಂದಾಗಿ ಬೆಲೆಗಳು ಭಾರೀ ಏರಿಕೆ ಪಡೆದಿವೆ.

ಎರಡು ವರ್ಷದ ಹಿಂದೆ, 2024-25ರ ಬಜೆಟ್​ನಲ್ಲಿ ಚಿನ್ನದ ಮೇಲಿನ ಆಮದು ಸುಂಕವನ್ನು ಶೇ. 15ರಿಂದ ಶೇ. 6ಕ್ಕೆ ಇಳಿಸಲಾಗಿತ್ತು. ಈ ಅದೇ ಮಟ್ಟಕ್ಕೆ ಏರಿಸಲಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,53,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,67,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 31,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,53,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 31,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 33,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 13ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,789 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,390 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,592 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 310 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,789 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,390 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 310 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 15,390 ರೂ
  • ಚೆನ್ನೈ: 15,400 ರೂ
  • ಮುಂಬೈ: 15,390 ರೂ
  • ದೆಹಲಿ: 15,405 ರೂ
  • ಕೋಲ್ಕತಾ: 15,390 ರೂ
  • ಕೇರಳ: 15,390 ರೂ
  • ಅಹ್ಮದಾಬಾದ್: 15,395 ರೂ
  • ಜೈಪುರ್: 15,405 ರೂ
  • ಲಕ್ನೋ: 15,405 ರೂ
  • ಭುವನೇಶ್ವರ್: 15,395 ರೂ

ಇದನ್ನೂ ಓದಿ: ಚಿನ್ನ, ಬೆಳ್ಳಿ ದರ ಇನ್ನಷ್ಟು ಏರಿಕೆಯಾಗೋದು ಫಿಕ್ಸ್: ಆಮದು ಸುಂಕ ಭರ್ಜರಿ ಹೆಚ್ಚಿಸಿದ ಕೇಂದ್ರ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 569 ರಿಂಗಿಟ್ (13,853 ರುಪಾಯಿ)
  • ದುಬೈ: 522 ಡಿರಾಮ್ (13,586 ರುಪಾಯಿ)
  • ಅಮೆರಿಕ: 146 ಡಾಲರ್ (13,966 ರುಪಾಯಿ)
  • ಸಿಂಗಾಪುರ: 185.90 ಸಿಂಗಾಪುರ್ ಡಾಲರ್ (13,972 ರುಪಾಯಿ)
  • ಕತಾರ್: 519.50 ಕತಾರಿ ರಿಯಾಲ್ (13,625 ರೂ)
  • ಸೌದಿ ಅರೇಬಿಯಾ: 531 ಸೌದಿ ರಿಯಾಲ್ (13,529 ರುಪಾಯಿ)
  • ಓಮನ್: 55.55 ಒಮಾನಿ ರಿಯಾಲ್ (13,794 ರುಪಾಯಿ)
  • ಕುವೇತ್: 42.93 ಕುವೇತಿ ದಿನಾರ್ (13,402 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 310 ರೂ
  • ಚೆನ್ನೈ: 330 ರೂ
  • ಮುಂಬೈ: 310 ರೂ
  • ದೆಹಲಿ: 310 ರೂ
  • ಕೋಲ್ಕತಾ: 310 ರೂ
  • ಕೇರಳ: 330 ರೂ
  • ಅಹ್ಮದಾಬಾದ್: 310 ರೂ
  • ಜೈಪುರ್: 310 ರೂ
  • ಲಕ್ನೋ: 310 ರೂ
  • ಭುವನೇಶ್ವರ್: 330 ರೂ
  • ಪುಣೆ: 310

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಒಂದು ಸೋಲಿನಿಂದ ನಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಅಳೆಯಬೇಡಿ! – Kannada News | Pat Cummins Post Match Interview After GTvs SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ತಂಡವು ಹೀನಾಯವಾಗಿ ಸೋಲನುಭವಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 168 ರನ್​ಗಳನ್ನು ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡ 14.5 ಓವರ್​ಗಳಲ್ಲಿ 86 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಎಸ್​ಆರ್​ಹೆಚ್ ತಂಡ ಬರೋಬ್ಬರಿ 82 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ಎಸ್​ಆರ್​ಹೆಚ್ ತಂಡದ ನಾಯಕ ಪ್ಯಾಟ್ ಕಮಿನ್ಸ್,  ಎರಡನೇ ಇನ್ನಿಂಗ್ಸ್‌ನಲ್ಲಿ ಪಿಚ್ ಬ್ಯಾಟಿಂಗ್ ಮಾಡಲು ಸಾಕಷ್ಟು ಕಷ್ಟಕರವಾಗಿತ್ತು. ವಿಶೇಷವಾಗಿ ಎದುರಾಳಿ ಬೌಲರ್‌ಗಳು ‘ಬ್ಯಾಕ್ ಆಫ್ ದಿ ಲೆಂತ್’  ಎಸೆತಗಳನ್ನು ನಿರಂತರವಾಗಿ ಹಾಕಿ ನಮಗೆ ರನ್ ಗಳಿಸಲು ಯಾವುದೇ ಅವಕಾಶ ನೀಡಲಿಲ್ಲ. ಇದು ಟಿ20 ಕ್ರಿಕೆಟ್‌ನಲ್ಲಿ ಕಂಡುಬಂದ ಅತ್ಯುತ್ತಮ ಬೌಲಿಂಗ್ ಪ್ರದರ್ಶನಗಳಲ್ಲಿ ಒಂದಾಗಿದೆ ಎಂದರು.

ಎದುರಾಳಿಗಳ ಬೌಲಿಂಗ್ ಶೈಲಿಯನ್ನು ಗಮನಿಸಿದಾಗ, ನಮ್ಮ ಬೌಲಿಂಗ್ ಅವಧಿಯಲ್ಲಿ ನಾವೂ ಕೂಡ ಲೈನ್ ಮತ್ತು ಲೆಂತ್ ಅನ್ನು ಇನ್ನು ಸ್ವಲ್ಪ ದೀರ್ಘಕಾಲ ಕಾಯ್ದುಕೊಳ್ಳಬೇಕಿತ್ತೇನೋ ಎನಿಸುತ್ತದೆ. ಈ ತಪ್ಪುಗಳಿಂದ ನಾವು ಪಾಠ ಕಲಿಯಲಿದ್ದೇವೆ ಎಂದು ಪ್ಯಾಟ್ ಕಮಿನ್ಸ್ ಹೇಳಿದ್ದಾರೆ.

ಈ ಸೋಲಿನ ಹೊರತಾಗಿಯೂ ನಮ್ಮ ಅಗ್ರ ಕ್ರಮಾಂಕದ ಬ್ಯಾಟಿಂಗ್ ಅತ್ಯುತ್ತಮವಾಗಿದೆ. ಅಗ್ರ ನಾಲ್ಕು ಬ್ಯಾಟರ್‌ಗಳಲ್ಲಿ ಪ್ರತಿಯೊಬ್ಬರೂ ಈಗಾಗಲೇ 400ಕ್ಕೂ ಹೆಚ್ಚು ರನ್‌ಗಳನ್ನು ಕಲೆಹಾಕಿದ್ದಾರೆ. ಆದ್ದರಿಂದ ಈ ಒಂದು ಪಂದ್ಯದ ಪ್ರದರ್ಶನವನ್ನು ಅತಿಯಾಗಿ ವಿಶ್ಲೇಷಿಸುವ ಅಗತ್ಯವಿಲ್ಲ. ಟಿ20 ಕ್ರಿಕೆಟ್‌ನಲ್ಲಿ ಇಂತಹ ಏರಿಳಿತಗಳು ಸಹಜ ಎಂದು ಕಮಿನ್ಸ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: IPL 2026: 4+2+6 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB

ಇನ್ನು ಪ್ಲೇಆಫ್ ಹಾದಿ ಬಗ್ಗೆ ಮಾತನಾಡಿದ ಪ್ಯಾಟ್ ಕಮಿನ್ಸ್, ಕಳೆದ ಏಳು ಪಂದ್ಯಗಳಲ್ಲಿ ನಾವು 5 ಅಥವಾ 6 ಪಂದ್ಯಗಳನ್ನು ಗೆದ್ದಿರುವುದರಿಂದ ಸದ್ಯಕ್ಕೆ ನಮ್ಮ ತಂಡ ಸುಸ್ಥಿತಿಯಲ್ಲಿದೆ. ಪ್ಲೇಆಫ್ ತಲುಪಲು ಇನ್ನು ಎರಡು ಪಂದ್ಯಗಳು ಬಾಕಿ ಇವೆ. ನಮಗೆ ಪರಿಚಿತವಿರುವ ಕ್ರೀಡಾಂಗಣಗಳಲ್ಲಿ ಮುಂದಿನ ಪಂದ್ಯಗಳು ನಡೆಯಲಿದ್ದು, ಹಳೆಯ ಗೆಲುವಿನ ಸೂತ್ರಕ್ಕೆ ಮರಳಿ, ಈ ಸೋಲನ್ನು ಮರೆತು ಮುನ್ನಡೆಯಲಿದ್ದೇವೆ ಎಂದಿದ್ದಾರೆ.

ಈ ಮೂಲಕ ಮುಂಬರುವ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಪ್ಲೇಆಫ್​ಗೇರಲಿದೆ ಎಂದು ಪ್ಯಾಟ್ ಕಮಿನ್ಸ್​ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Source link

NEET UG Paper Leak: ನೀಟ್ ಹಗರಣ ಬಯಲಿಗೆಳೆದ ಹಾಸ್ಟೆಲ್ ಮಾಲೀಕ; ಕೋಟಿ ಕೋಟಿ ಹಗರಣಕ್ಕೆ ಬ್ರೇಕ್ ಹಾಕಿದ ಒಂದು ವಾಟ್ಸಾಪ್ ಸಂದೇಶ! – Kannada News | NEET UG Paper Leak: Sikar Hostel Owner Exposes Scandal, Leads to Exam Cancellation

ನೀಟ್ ಹಗರಣ ಬಯಲಿಗೆಳೆದ ಹಾಸ್ಟೆಲ್ ಮಾಲೀಕImage Credit source: gemini ai

ಸೀಕರ್, ರಾಜಸ್ಥಾನ: ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ನೀಟ್ (NEET-UG) ಪರೀಕ್ಷೆಯ ಪಾರದರ್ಶಕತೆಯ ಬಗ್ಗೆ ಇಂದು ಪ್ರಶ್ನೆಗಳು ಎದ್ದಿರುವಾಗ, ರಾಜಸ್ಥಾನದ ಸೀಕರ್ ಜಿಲ್ಲೆಯ ಹಾಸ್ಟೆಲ್ ಮಾಲೀಕರೊಬ್ಬರು ದೇಶದ “ರಿಯಲ್ ಹೀರೋ” ಆಗಿ ಹೊರಹೊಮ್ಮಿದ್ದಾರೆ. ಪೊಲೀಸರ ಉದಾಸೀನತೆ ಮತ್ತು ವ್ಯವಸ್ಥೆಯ ಅಡೆತಡೆಗಳ ನಡುವೆಯೂ ಎದೆಗುಂದದ ಇವರ ಹೋರಾಟ, ಇಂದು ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಿದೆ.

ಟ್ವಿಸ್ಟ್ ಕೊಟ್ಟ ವಾಟ್ಸಾಪ್ ಮೆಸೇಜ್:

ಎಲ್ಲವೂ ಆರಂಭವಾಗಿದ್ದು ಕಳೆದ ಮೇ 2ರ ರಾತ್ರಿ. ಕೇರಳದಲ್ಲಿ ವೈದ್ಯಕೀಯ(MBBS) ಶಿಕ್ಷಣ ಪಡೆಯುತ್ತಿರುವ ಮಗ, ಸೀಕರ್‌ನಲ್ಲಿ ಹಾಸ್ಟೆಲ್ ನಡೆಸುತ್ತಿರುವ ತನ್ನ ತಂದೆಗೆ ವಾಟ್ಸಾಪ್ ಮೂಲಕ ಒಂದು ಪಿಡಿಎಫ್ (PDF) ಫೈಲ್ ಕಳುಹಿಸಿದ್ದನು. “ಇದು ನಾಳಿನ ಪರೀಕ್ಷೆಯ ‘ಗೆಸ್ ಪೇಪರ್’ ಇರಬಹುದು, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಓದಲು ಹೇಳಿ” ಎಂಬುದು ಮಗನ ಮುಗ್ಧ ಆಶಯವಾಗಿತ್ತು. ಆದರೆ, ಆ ಒಂದು ಫೈಲ್ ಅಸಲಿ ಪರೀಕ್ಷೆಯ ಹಣೆಬರಹವನ್ನೇ ಬದಲಿಸುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ಸತ್ಯ ಶೋಧನೆಯ ಹಾದಿ:

ಮರುದಿನ ಬೆಳಿಗ್ಗೆ ಹಾಸ್ಟೆಲ್ ಮಾಲೀಕರು ಆ ಪತ್ರಿಕೆಯನ್ನು ಹಿಡಿದು ವಿದ್ಯಾರ್ಥಿಗಳ ಬಳಿ ಹೋದಾಗ ಅವರು ಈಗಾಗಲೇ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದರು. ಬಳಿಕ ಕುತೂಹಲದಿಂದ ಆ ಪತ್ರಿಕೆಯನ್ನು ಸ್ಥಳೀಯ ರಸಾಯನಶಾಸ್ತ್ರ (Chemistry) ಶಿಕ್ಷಕರೊಬ್ಬರಿಗೆ ತೋರಿಸಿದರು. ಸಂಜೆ ಪರೀಕ್ಷೆ ಮುಗಿದು ಅಸಲಿ ಪತ್ರಿಕೆ ಕೈ ಸೇರಿದಾಗ ಶಿಕ್ಷಕರು ಬೆಚ್ಚಿಬಿದ್ದಿದ್ದರು. ಮಗ ಕಳುಹಿಸಿದ್ದ ಪತ್ರಿಕೆಯಲ್ಲಿದ್ದ 135 ಪ್ರಶ್ನೆಗಳು ಅಸಲಿ ಪರೀಕ್ಷೆಯಲ್ಲಿ ಯಥಾವತ್ತಾಗಿ ಬಂದಿದ್ದವು. ಇದು ಕೇವಲ ಕಾಕತಾಳೀಯವಾಗಿರದೆ, ವ್ಯವಸ್ಥಿತವಾಗಿ ನಡೆದ “ಪೇಪರ್ ಲೀಕ್” ಎಂಬುದು ಸಾಬೀತಾಗಿತ್ತು.

ಪೊಲೀಸರ ನಿರಾಕರಣೆ:

ತಮ್ಮ ಬಳಿ ಇದ್ದ ಸಾಕ್ಷ್ಯಗಳೊಂದಿಗೆ ಹಾಸ್ಟೆಲ್ ಮಾಲೀಕ ಪೊಲೀಸ್​ ಠಾಣೆಯ ಮೆಟ್ಟಿಲೇರಿದರು. ಆದರೆ ಪೊಲೀಸರು ಸಹಾಯ ಮಾಡುವ ಬದಲು, “ಪರೀಕ್ಷೆ ರದ್ದು ಮಾಡಿಸುವ ಉದ್ದೇಶದಿಂದ ನೀವು ಸುಳ್ಳು ಹೇಳುತ್ತಿದ್ದೀರಿ” ಎಂದು ದೂರುದಾರರನ್ನೇ ದಬಾಯಿಸಿ ವಾಪಸ್ ಕಳುಹಿಸಿದ್ದರು. ಈ ಹಂತದಲ್ಲಿ ಯಾರಾದರೂ ಧೃತಿಗೆಡುವುದು ಸಹಜ, ಆದರೆ ಈ ಹಾಸ್ಟೆಲ್ ಮಾಲೀಕ ಮಾತ್ರ ಹಿಂದೆ ಸರಿಯಲಿಲ್ಲ.

ತನಿಖೆಯ ಕಿಚ್ಚು ಹಚ್ಚಿದ ಇಮೇಲ್:

ಪೊಲೀಸರು ಕೈಬಿಟ್ಟರೂ ಹೋರಾಟ ನಿಲ್ಲಿಸದ ಅವರು, ಸೋರಿಕೆಯಾದ ಪತ್ರಿಕೆ ಮತ್ತು ಅಸಲಿ ಪತ್ರಿಕೆಯ ಪ್ರತಿಗಳನ್ನು ಲಗತ್ತಿಸಿ ನೇರವಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಇಮೇಲ್ ಮಾಡಿದ್ದಾರೆ. ಈ ಇಮೇಲ್ ನೀಡಿದ ಶಾಕ್‌ನಿಂದ ಎಚ್ಚೆತ್ತ ಎನ್‌ಟಿಎ ತಕ್ಷಣ ತನಿಖೆಗೆ ಆದೇಶಿಸಿತು.

ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು!

ತನಿಖೆಯ ಪ್ರಮುಖ ಅಂಶಗಳು:

ರಾಜಸ್ಥಾನದ ವಿಶೇಷ ಕಾರ್ಯಾಚರಣಾ ತಂಡ (SOG) ಹಗರಣದ ಆಳಕ್ಕೆ ಇಳಿದಾಗ ಇದು ಕೇವಲ ಸೀಕರ್ ಜಿಲ್ಲೆಗೆ ಸೀಮಿತವಾಗಿರದೆ ಹರಿಯಾಣ, ಬಿಹಾರ ಮತ್ತು ಮಹಾರಾಷ್ಟ್ರದವರೆಗೂ ಹಬ್ಬಿರುವುದು ಪತ್ತೆಯಾಯಿತು. ಪರೀಕ್ಷೆಗೂ ಮೊದಲೇ ಪ್ರಶ್ನೆ ಪತ್ರಿಕೆಗಳನ್ನು ಪ್ರಭಾವಿಗಳಿಗೆ ಮತ್ತು ಶ್ರೀಮಂತ ಅಭ್ಯರ್ಥಿಗಳಿಗೆ ಕೋಟ್ಯಂತರ ರೂಪಾಯಿಗೆ ಮಾರಾಟ ಮಾಡಿರುವುದು ಬಯಲಾಯಿತು.

ಅಂತಿಮ ಜಯ ಪರೀಕ್ಷೆ ರದ್ದು:

ಸೋರಿಕೆಯಾದ ಪತ್ರಿಕೆಯ ಪ್ರಶ್ನೆಗಳಿಗೂ ಅಸಲಿ ಪತ್ರಿಕೆಗೂ ಇದ್ದ ಸಾಮ್ಯತೆಯನ್ನು ಅಲ್ಲಗಳೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಎನ್‌ಟಿಎ ನೀಟ್ ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಹಾಸ್ಟೆಲ್ ಮಾಲೀಕರ ಈ ದಿಟ್ಟ ನಿರ್ಧಾರ ಮತ್ತು ಪ್ರಾಮಾಣಿಕ ಹೋರಾಟದ ಫಲವಾಗಿ ಇಂದು ಬೃಹತ್ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲ ಪತ್ತೆಯಾಗಿದ್ದು, ಲಕ್ಷಾಂತರ ಅರ್ಹ ವಿದ್ಯಾರ್ಥಿಗಳ ಭವಿಷ್ಯಕ್ಕೆ ನ್ಯಾಯ ಸಿಗುವಂತಾಗಿದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಕೇಸ್‌ಗೆ ಬಿಗ್ ಟ್ವಿಸ್ಟ್: ಉದ್ಯಮಿಯ ಕಳ್ಳಾಟ ಬಯಲಿಗೆಳೆದ ಪತ್ನಿ! – Kannada News | Shocking Twist in Kannada Influencer Blackmail Case: Wife Exposes Husband’s Real Face

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಕೇಸ್‌ಗೆ ಬಿಗ್ ಟ್ವಿಸ್ಟ್

ಬೆಂಗಳೂರು, ಮೇ 13: ಕನ್ನಡದ ಪ್ರಭಾವಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ 1.5 ಕೋಟಿ ರೂ. ಬ್ಲ್ಯಾಕ್‌ಮೇಲ್ (Blackmail) ಆರೋಪ ಕೇಳಿಬಂದಿತ್ತು. ಆದರೆ ಪ್ರಕರಣವು ಈಗ ಸಿನಿಮಾ ಶೈಲಿಯ ತಿರುವು ಪಡೆದುಕೊಂಡಿದೆ. ತನ್ನ ಪತಿ ಕಾರ್ತಿಕ್ ಮಾಡಿರುವ ಎಲ್ಲಾ ಆರೋಪಗಳು ಸುಳ್ಳು ಎಂದು ಸ್ವತಃ ಆತನ ಪತ್ನಿ ಹರ್ಷಿತಾ ಅವರೇ ಪೊಲೀಸರಿಗೆ ಪತ್ರ ಬರೆಯುವ ಮೂಲಕ ಉದ್ಯಮಿಯ ಅಸಲಿ ಮುಖವನ್ನು ಬಯಲು ಮಾಡಿದ್ದಾರೆ.

ಮುಖ್ಯಾಂಶಗಳು

  • ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಪತ್ನಿಯ ದೂರಿನಿಂದ ಸ್ಫೋಟಕ ತಿರುವು ಸಿಕ್ಕಿದೆ
  •  ಪತಿ ಕಾರ್ತಿಕ್ ತನ್ನ ಲೈಂಗಿಕ ಅಕ್ರಮ ಮುಚ್ಚಿಹಾಕಲು ಸುಳ್ಳು ಕಥೆ ಸೃಷ್ಟಿಸಿದ್ದಾನೆ ಎಂದ ಪತ್ನಿ
  •  ಹಲವು ಯುವತಿಯರಿಗೆ ವಂಚಿಸಿರುವ ಕಾರ್ತಿಕ್

ನನ್ನ ಪತಿ ಸುಳ್ಳು ಆರೋಪ ಮಾಡಿದ್ದಾರೆಂದ ಪತ್ನಿ

ಹೆಚ್‌ಕೆ ಪರ್ಮನೆಂಟ್ ಮೇಕ್ ಅಪ್ ಕ್ಲಿನಿಕ್’ ಮಾಲೀಕನೆಂದು ಹೇಳಿಕೊಂಡಿರುವ ಕಾರ್ತಿಕ್, ತನಗೆ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ಬ್ಲ್ಯಾಕ್ ಮೇಲ್ ಮಾಡಿದ್ದಾಳೆ. ನನ್ನ ಖಾಸಗಿ ಫೋಟೋಗಳನ್ನು ಪತ್ನಿ ಹರ್ಷಿತಾಗೆ ಕಳುಹಿಸಿದ್ದಲ್ಲದೆ ನನ್ನ ಬಳಿ ಕೋಟಿಗಟ್ಟಲೆ ಹಣ ಕೇಳಿದ್ದಾಳೆ ಎಂದು ಆರೋಪಿಸಿದ್ದ. ಆದರೆ ಈ ಪ್ರಕರಣಕ್ಕೀಗ ಆತನ ಪತ್ನಿಯಿಂದಲೇ ಸ್ಫೋಟಕ ತಿರುವು ಸಿಕ್ಕಿದೆ. ಹರ್ಷಿತಾ ಜಯನಗರ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತನ್ನ ಪತಿ ಸೃಷ್ಟಿಸಿರುವ ಬ್ಲ್ಯಾಕ್‌ಮೇಲ್ ಕಥೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.

ಸಾಧನಾ ಶೆಟ್ಟಿ ಯಾವತ್ತೂ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ನನ್ನ ಪತಿಯೇ ತನ್ನ ಲೈಂಗಿಕ ಅಕ್ರಮಗಳನ್ನು ಮುಚ್ಚಿಹಾಕಲು ಆಕೆಯನ್ನು ಬ್ಲ್ಯಾಕ್‌ಮೇಲರ್ ಎಂದು ಚಿತ್ರಿಸುತ್ತಿದ್ದಾನೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಕಾರ್ತಿಕ್ ಒಬ್ಬ ದೊಡ್ಡ ಉದ್ಯಮಿಯೇನಲ್ಲ, ಆತ ಕೇವಲ ತನ್ನ ಕ್ಲಿನಿಕ್‌ನ ಮಾರ್ಕೆಟಿಂಗ್ ನೋಡಿಕೊಳ್ಳುತ್ತಿದ್ದ ಕೆಲಸಗಾರ ಅಷ್ಟೇ ಎಂದು ಕ್ಲಿನಿಕ್​ನ ನಿರ್ದೇಶಕಿಯೂ ಆಗಿರುವ ಹರ್ಷಿತಾ ಸತ್ಯ ಬಿಚ್ಚಿಟ್ಟಿದ್ದಾರೆ.

ಕಾರ್ತಿಕ್ ಮನೆಗೆ ಬಂದಿದ್ದ ಸಾಧನಾ

ಮದುವೆಯಾಗುವುದಾಗಿ ನಂಬಿಸಿ ಸಾಧನಾ ಶೆಟ್ಟಿಯನ್ನು ಹೈದರಾಬಾದ್, ಬೆಂಗಳೂರು ಮತ್ತು ಮಾಲ್ಡೀವ್ಸ್‌ಗೆ ಕರೆದೊಯ್ದಿದ್ದ ಕಾರ್ತಿಕ್, ಆಕೆಗಾಗಿ ಹೈದರಾಬಾದ್​ನಲ್ಲಿ ಪಿಜಿ ವ್ಯವಸ್ಥೆಯನ್ನೂ ಮಾಡಿದ್ದ. ಆದರೆ ಆತನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ನಂತರ 2025ರ ಆಗಸ್ಟ್ 8ರಂದು ಕಾರ್ತಿಕ್ ನಿವಾಸಕ್ಕೆ ಆಗಮಿಸಿದ್ದ ಇನ್ಪುಯೆನ್ಸರ್ ಸಾಧನಾ, ಆತ ನನಗೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾನೆಂದು ಕುಟುಂಬಸ್ಥರ ಮುಂದೆ ಆರೋಪಿಸಿದ್ದಳು. ಈ ವೇಳೆ ನಮ್ಮ ಬಳಿ ಹಣವಿದೆ ಎಂದು ಅವಳು ಸುಳ್ಳು ಆರೋಪ ಮಾಡುತ್ತಿದ್ದಾಳೆ ಎಂದು ಕಾರ್ತಿಕ್ ತನ್ನ ಪತ್ನಿಯನ್ನು ನಂಬಿಸಿದ್ದ.

ಇದನ್ನೂ ಓದಿ ಉದ್ಯಮಿ ಜತೆ ಡೇಟಿಂಗ್, ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಆರೋಪ: ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ವಿರುದ್ಧ ದೂರು

ಕಾರ್ತಿಕ್ ಮಾಸ್ಟರ್ ಪ್ಲ್ಯಾನ್

ಸಾಧನಾ ಏನಾದರೂ ಪೊಲೀಸರಿಗೆ ದೂರು ನೀಡಿದರೆ ಕಷ್ಟ ಎಂದು ಅರಿತ ಕಾರ್ತಿಕ್, ಆಕೆಯನ್ನೇ ಸಿಲುಕಿಸಲು ಮಾಸ್ಟರ್ ಪ್ಲ್ಯಾನ್ ಮಾಡಿದ್ದ. ತನ್ನ ಸ್ನೇಹಿತರ ಸಹಾಯದಿಂದ ಆಕೆಯ ಫೋನ್ ಕಳವು ಮಾಡಿಸಿ, ವಾಪಸ್ ನೀಡಿದ್ದಲ್ಲದೆ ಸಾಧನಾಗೆ ಹಲವು ಬಾರಿ ಬೆದರಿಕೆ ಕರೆಯನ್ನೂ ಮಾಡಿದ್ದ. ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆಂದು ಕತೆಯನ್ನೂ ಕಟ್ಟಿದ್ದ. ಇಷ್ಟೆಲ್ಲಾ ಆದ ನಂತರ ಪತಿ ಬದಲಾಗಿದ್ದಾನೆಂದು ಹರ್ಷಿತಾ ನಂಬಿದ್ದರು.

ಉದ್ಯಮಿಯ ಕರಾಳ ಮುಖ ಬಯಲು

ಆದರೆ ಸಾಧನಾ ಕಳುಹಿಸಿದ ಸಾಕ್ಷ್ಯಗಳನ್ನು ನೋಡಿದ ಬಳಿಕ ಹರ್ಷಿತಾ ಕೂಡ ಕಂಗಾಲಾಗಿದ್ದರು. ಕಾರ್ತಿಕ್ ಕೇವಲ ಸಾಧನಾ ಮಾತ್ರವಲ್ಲದೆ ಇನ್ನೂ ಹಲವು ಯುವತಿಯರಿಗೆ ಇದೇ ರೀತಿ ವಂಚಿಸಿರುವುದು ಅವರಿಗೆ ಯುವತಿಯಿಂದ ತಿಳಿದುಬಂತು. ನಂತರ ಎರಡು ತಿಂಗಳಿಂದ ಪತಿಯಿಂದ ದೂರವಿದ್ದ ಆಕೆ, ಪ್ರಕರಣ ಸಂಬಂಧ ಮಾಹಿತಿ ಕೇಳಿದ ಪೊಲೀಸರ ಮುಂದೆ ಪತಿಯ ಕರಾಳ ಮುಖ ಬಯಲಿಗೆಳೆದಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಜಯನಗರ ಪೊಲೀಸರು, ಕರ್ನಾಟಕ ಮತ್ತು ತೆಲಂಗಾಣ ಡಿಐಜಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಹರ್ಷಿತಾ ರವಾನಿಸಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಜಿತ್ ಪವಾರ್ ವಿಮಾನ ಅಪಘಾತಕ್ಕೀಡಾದ ಬಾರಾಮತಿಯ ಗ್ರಾಮದಲ್ಲೇ ಮತ್ತೊಂದು ವಿಮಾನ ಪತನ – Kannada News | Baramati Plane Crash: Training Aircraft Crashes in the Same Village Where Ajit Pawar Lost His Life

ಬಾರಾಮತಿಯ ಗೋಜ್‌ಬಾಬಿ ಗ್ರಾಮದ ಬಳಿ ರೆಡ್‌ಬರ್ಡ್ ಕಂಪನಿಯ ತರಬೇತಿ ವಿಮಾನ ಪತನImage Credit source: TV9 Network

ಮುಂಬೈ, ಮೇ 13: ಮಹಾರಾಷ್ಟ್ರದ (Maharashtra) ಬಾರಾಮತಿಯಲ್ಲಿ ಮತ್ತೆ ವಿಮಾನ ದುರಂತ ಸಂಭವಿಸಿದೆ. ಈ ವರ್ಷದ ಆರಂಭದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರಿದ್ದ ವಿಮಾನ ಅಪಘಾತಕ್ಕೀಡಾಗಿದ್ದ ಅದೇ ಗ್ರಾಮದ ವ್ಯಾಪ್ತಿಯಲ್ಲೇ ಬುಧವಾರ ತರಬೇತಿ ವಿಮಾನವೊಂದು ಪತನಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಮುಖ್ಯಾಂಶಗಳು

  • ಬಾರಾಮತಿಯ ಗೋಜ್‌ಬಾಬಿ ಗ್ರಾಮದ ಬಳಿ ರೆಡ್‌ಬರ್ಡ್ ಕಂಪನಿಯ ತರಬೇತಿ ವಿಮಾನ ಪತನ.
  • ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪೈಲಟ್; ವಿಮಾನಕ್ಕೆ ಭಾರಿ ಹಾನಿ.
  • ಅಜಿತ್ ಪವಾರ್ ಅವರು ಮೃತಪಟ್ಟಿದ್ದ ಅದೇ ಸ್ಥಳದಲ್ಲಿ ನಡೆದ ಮತ್ತೊಂದು ವಿಮಾನ ದುರಂತ.

ಬಾರಾಮತಿಯ ಗೋಜ್‌ಬಾಬಿ ಗ್ರಾಮದ ಬಳಿ ತರಬೇತಿ ನಿರತ ವಿಮಾನ ಪತನಗೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇದು ‘ರೆಡ್‌ಬರ್ಡ್’ ವಿಮಾನಯಾನ ಸಂಸ್ಥೆಗೆ ಸೇರಿದ ತರಬೇತಿ ವಿಮಾನವಾಗಿದ್ದು, ಹಾರಾಟದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡು ಪತನವಾಗಿದೆ ಎಂಬುದು ತಿಳಿದುಬಂದಿದೆ. ವಿಮಾನಕ್ಕೆ ಭಾರಿ ಹಾನಿಯಾಗಿದೆ. ಆದಾಗ್ಯೂ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಜಿತ್ ಪವಾರ್ ವಿಮಾನ ಪತನದ ಕರಾಳ ನೆನಪು

ಇದೇ ವರ್ಷದ ಜನವರಿ 28 ರಂದು ಮಹಾರಾಷ್ಟ್ರದ ಪ್ರಭಾವಿ ನಾಯಕ ಅಜಿತ್ ಪವಾರ್ ಅವರಿದ್ದ ಚಾರ್ಟರ್ ವಿಮಾನವು ಇದೇ ಗ್ರಾಮದ ವ್ಯಾಪ್ತಿಯಲ್ಲಿ ಪತನಗೊಂಡಿತ್ತು. ಆ ಭೀಕರ ದುರಂತದಲ್ಲಿ ಅಜಿತ್ ಪವಾರ್ ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಜಿತ್ ಪವಾರ್ ಮೃತಪಟ್ಟ ಅದೇ ಸ್ಥಳದಲ್ಲಿ ಈಗ ಮತ್ತೊಂದು ವಿಮಾನ ಬಿದ್ದಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

ಇದನ್ನೂ ಓದಿ: ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು ಹೇಗೆ? ತನಿಖೆಯಲ್ಲಿ ಬಯಲಾದ ಸಂಗತಿಗಳಿವು

ಬಾರಾಮತಿಯಲ್ಲಿ ಪೈಲಟ್ ತರಬೇತಿ ನೀಡುವ ಪ್ರಮುಖ ಸಂಸ್ಥೆಗಳಲ್ಲಿ ರೆಡ್‌ಬರ್ಡ್ ಕೂಡ ಒಂದು. ಆದರೆ, ಈ ಹಿಂದೆಯೂ ಈ ಸಂಸ್ಥೆಯ ವಿಮಾನಗಳು ಪದೇ ಪದೇ ಅಪಘಾತಕ್ಕೀಡಾಗಿದ್ದರಿಂದ ಇದರ ಮೇಲೆ ನಿಷೇಧ ಹೇರಲಾಗಿತ್ತು. ಇಲ್ಲಿನ ರನ್‌ವೇಗಳು ‘ಟೇಬಲ್ ಟಾಪ್’ ಮಾದರಿಯಲ್ಲಿದ್ದು, ಲ್ಯಾಂಡಿಂಗ್ ಸಮಯದಲ್ಲಿ ಪೈಲಟ್‌ಗಳ ಜಾಣ್ಮೆ ಅತ್ಯಂತ ಮುಖ್ಯವಾಗಿರುತ್ತದೆ ಎಂದು ಎನ್‌ಸಿಪಿ ಶಾಸಕ ಅನಿಲ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಘಟನೆ ಬಗ್ಗೆ ಡಿಜಿಸಿಎ ತನಿಖೆ ಆರಂಭಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB vs KKR ಪಂದ್ಯವನ್ನೇಕೆ ‘ಎಲ್​ ಪ್ರಿಮೊರೊ’ ಮ್ಯಾಚ್ ಎಂದು ಕರೆಯಲಾಗುತ್ತೆ? – Kannada News | Why is RCB vs KKR Match called ‘El Primero’ of IPL?

ವರ್ಷ 2008, ಏಪ್ರಿಲ್ 18ರ ರಾತ್ರಿ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣವು ಮದುವಣಗಿತ್ತಿಯಂತೆ ಕಂಗೊಳಿಸುತ್ತಿತ್ತು. ಅಂದು ಕೇವಲ ಒಂದು ಕ್ರಿಕೆಟ್ ಪಂದ್ಯ ನಡೆಯುತ್ತಿರಲಿಲ್ಲ, ಬದಲಾಗಿ ವಿಶ್ವ ಕ್ರಿಕೆಟ್‌ನ ದಿಕ್ಕನ್ನೇ ಬದಲಿಸಲಿರುವ ‘ಇಂಡಿಯನ್ ಪ್ರೀಮಿಯರ್ ಲೀಗ್‘ (IPL) ಎಂಬ ಮಹಾಕ್ರಾಂತಿಗೆ ಮುನ್ನುಡಿ ಬರೆಯಲಾಗುತ್ತಿತ್ತು. ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು.

ಅಂದು ಶುರುವಾದ ಉಭಯ ತಂಡಗಳ ಪೈಪೋಟಿ 19ನೇ ಸೀಸನ್​ನಲ್ಲೂ ಮುಂದುವರೆದಿದೆ. ಆದರೆ ಇದೀಗ ಈ ಪೈಪೋಟಿಯನ್ನು ಎಲ್​ ಪ್ರಿಮೆರೊ ಎಂದು ಕರೆಯಲಾಗುತ್ತಿದೆ. ಅಷ್ಟಕ್ಕೂ ಆರ್​ಸಿಬಿ ಮತ್ತು ಕೆಕೆಆರ್​ ನಡುವಣ ಪಂದ್ಯವನ್ನು ಎಲ್ ಪ್ರಿಮೆರೊ ಎಂದು ಏಕೆ ಕರೆಯಲಾಗುತ್ತೆ ಎಂದು ನೋಡುವುದಾದರೆ…

‘ಎಲ್ ಪ್ರಿಮೆರೊ’ (El Primero) ಸ್ಪ್ಯಾನಿಷ್ ಭಾಷೆಯಲ್ಲಿ “ಮೊದಲನೆಯದು” ಎಂದರ್ಥ. ಐಪಿಎಲ್ ಇತಿಹಾಸದ ಮೊಟ್ಟಮೊದಲ ಪಂದ್ಯ ಇದಾದ ಕಾರಣ ಇದಕ್ಕೆ ಈ ಹೆಸರು ಬಂದಿದೆ. ಈ ಹೆಸರು ಹೆಚ್ಚು ಪ್ರಚಲಿತವಾಗಲು ಕಾರಣ ಉಭಯ ತಂಡಗಳ ನಡುವಣ ಪೈಪೋಟಿ.

ಏಕೆಂದರೆ ಉಭಯ ತಂಡಗಳು ಈವರೆಗೆ 36 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ 20 ಪಂದ್ಯಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆದ್ದರೆ, 15 ಮ್ಯಾಚ್​ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಅಂದರೆ ಉಭಯ ತಂಡಗಳ ತಂಡಗಳ ನಡುವೆ ಸಮಬಲದ ಹೋರಾಟ ಕಂಡು ಬಂದಿರುವುದಕ್ಕೆ ಈ ಅಂಕಿ ಅಂಶಗಳು ಸಾಕ್ಷಿ.

ಅದರಲ್ಲೂ ಇಂಟ್ರೆಸ್ಟಿಂಗ್ ಎಂದರೆ ಎರಡೂ ತಂಡಗಳು ಪರಸ್ಫರ 200+ ಸ್ಕೋರ್​ಗಳಿಸಿದೆ. ಹಾಗೆಯೇ ಉಭಯ ತಂಡಗಳು 100 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದೆ.

  • ಆರ್​ಸಿಬಿ ಕೆಕೆಆರ್ ವಿರುದ್ಧ ಕೇವಲ 49 ರನ್​ಗಳಿಗೆ ಆಲೌಟ್ ಆಗಿ ಅತ್ಯಂತ ಹೀನಾಯ ದಾಖಲೆ ಬರೆದಿದೆ.
  • ಕೆಕೆಆರ್ ತಂಡವು ಆರ್​ಸಿಬಿ ವಿರುದ್ಧ 84 ರನ್​ಗಳಿಗೆ ಆಲೌಟ್ ಆಗಿ ಭಾರೀ ಮುಖಭಂಗಕ್ಕೆ ಒಳಗಾಗಿತ್ತು.

ಇದನ್ನೂ ಓದಿ: RCB vs KKR ಪಂದ್ಯಕ್ಕೆ 5 ಆಟಗಾರರು ಅಲಭ್ಯ!

ಇದರ ನಡುವೆ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ಜಿದ್ದಾಜಿದ್ದಿಗೂ ಆರ್​ಸಿಬಿ ಮತ್ತು ಕೆಕೆಆರ್ ಪಂದ್ಯಗಳು ಸಾಕ್ಷಿಯಾಗಿದ್ದವು. ಈ ಎಲ್ಲಾ ಕಾರಣಗಳಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವಣ ಪಂದ್ಯಗಳು ಅಭಿಮಾನಿಗಳ ಹಾಟ್ ಫೇವರೇಟ್ ಆಗಿ ಮಾರ್ಪಟ್ಟಿತ್ತು.

ಇದೀಗ ಉಭಯ ತಂಡಗಳು ಬದಲಾಗಿದೆ. ಈ ಬದಲಾವಣೆಯೊಂದಿಗೆ ಎಲ್​ ಪ್ರಿಮೆರೊ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅದು ಕೂಡ ದೂರದ ರಾಯ್​ಪುರ್​ನಲ್ಲಿ. ಅಂದರೆ ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ರಾಯ್​ಪುರ್​ನ ಶಾಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಅದರಂತೆ ಈ ಬಾರಿಯ ಮುಖಾಮುಖಿಯಲ್ಲಿ ಗೆಲುವು ಯಾರಿಗೆ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

Source link

Video: ಮುಗ್ಧ ಮನಸ್ಸುಗಳ ಶುದ್ಧ ಸಂಭಾಷಣೆ; ಕರುವಿನ ಜತೆಗೆ ಮಾತಿಗಿಳಿದ ಪುಟಾಣಿ – Kannada News | A little girl who spoke to the calf, video goes viral

ಪುಟಾಣಿಗಳು (little girl) ಏನು ಮಾಡಿದ್ರು ಮುದ್ದಾಗಿ ಕಾಣುತ್ತಾರೆ. ಅಪ್ಪ ಅಮ್ಮನನ್ನು ಮುದ್ದಿಸುವ ರೀತಿ ನೋಡುವುದೇ ಚಂದ. ಕೆಲವೊಮ್ಮೆ ಈ ಪುಟಾಣಿಗಳು ತಮ್ಮ ನಡೆ ನುಡಿ, ಮಾತಿನಿಂದಲೇ ಎಲ್ಲರಿಗೂ ಇಷ್ಟವಾಗಿ ಬಿಡುತ್ತಾರೆ. ಆದರೆ ಇದೀಗ ಈ ಪುಟಾಣಿ ಕರುವಿನ ಜತೆಗೆ ಸಂಭಾಷಣೆಗೆ ಇಳಿದಿದೆ. ನಿನ್ನ ಹೆಸರೇನು ಎನ್ನುತ್ತಾ ಕರುವಿನ ಜತೆಗೆ ಮಾತನಾಡಲು ಶುರು ಮಾಡಿದೆ. ಈ ಮುಗ್ಧತೆ ತುಂಬಿದ ಈ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ.

lifewithdevisha ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಮುಗ್ಧ ಮನಸ್ಸುಗಳ ನಡುವಿನ ಶುದ್ಧ ಸಂಭಾಷಣೆಯನ್ನು ಕಾಣಬಹುದು. ಪುಟಾಣಿಯೊಂದು ಕರುವಿನ ಜತೆಗೆ ಮಾತಿಗಿಳಿಗಿದೆ. ಕರುವಿನ ಮುಂದೆ ಕುಳಿತು ನಿನ್ನ ಹೆಸರೇನು ಎಂದು ಕೇಳುತ್ತಿದ್ದಂತೆ ಕರುವು ಮಾತ್ರ ಅತ್ತಿಂದ ಇತ್ತ ನೋಡುತ್ತಾ ಕುಳಿತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮನೆಯಂಗಳಕ್ಕೆ ಬಂದ ನವಿಲಿಗೆ ಕ್ಲಾಸ್ ತೆಗೆದುಕೊಂಡ ಪುಟಾಣಿ, ಮುಂದೇನಾಯ್ತು ನೋಡಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ನಾನು ಬಾಲ್ಯದಲ್ಲಿ ಹೀಗೆಯೇ ಇದ್ದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನನ್ನ ಹೆಸರು ಕ್ಯೂಟಿ ಎಂದು ಕಾಮೆಂಟ್ ಮಾಡಿದ್ದಾರೆ.. ಮತ್ತೊಬ್ಬರು, ಮುಗ್ಧ ಮನಸ್ಸುಗಳು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version