Headlines

ಮೇ 4ರಂದು ಬಿಜೆಪಿ ಹ್ಯಾಟ್ರಿಕ್ ಸಾಧಿಸಲಿದೆ; ಹರ್ದೋಯ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ – Kannada News | BJP to make historic hat trick of victories PM Modi in Hardoi West Bengal Elections

ಹರ್ದೋಯ್, ಏಪ್ರಿಲ್ 29: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಉತ್ತರ ಪ್ರದೇಶದ ಹರ್ದೋಯ್‌ನಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದರು. ಈ ವೇಳೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮೀರತ್ ಮತ್ತು ಪ್ರಯಾಗ್‌ರಾಜ್ ನಡುವಿನ ಎಕ್ಸ್‌ಪ್ರೆಸ್‌ವೇ ಗಂಗಾ ಮಾತೆಯ ಆಶೀರ್ವಾದವಾಗಿದ್ದು, ಜನರು ಎರಡೂ ನಗರಗಳ ನಡುವೆ ಸುಲಭವಾಗಿ ಪ್ರಯಾಣಿಸಲು ಅನುವು ಮಾಡಿಕೊಡುತ್ತದೆ. ಈ ಹೆದ್ದಾರಿ ಉತ್ತರ ಪ್ರದೇಶದ ಜೀವನಾಡಿ ಎಂದು ಬಣ್ಣಿಸಿದರು. ಇದೇ ವೇಳೆ ಪಶ್ಚಿಮ ಬಂಗಾಳ ಚುನಾವಣೆಯ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಿದರು. ಎರಡನೇ…

Read More

ಕುವೆಂಪು ವಿವಿಯಲ್ಲಿ ತಾರಕ್ಕೇರಿದ್ದ ವಿದ್ಯಾರ್ಥಿಗಳ ಪ್ರತಿಭಟನೆ: ಕುಲಪತಿ, ಕುಲಸಚಿವರನ್ನ ವಜಾಗೊಳಿಸುವಂತೆ ಪಟ್ಟು – Kannada News | Shivamogga: Kuvempu University Students Protest, Demand Dismissal of Chancellor and Registrar

ಶಿವಮೊಗ್ಗ, ಏಪ್ರಿಲ್​ 29: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಲ್ಕ ಹೆಚ್ಚಳ, ಫಲಿತಾಂಶ ಗೊಂದಲಗಳು ಮತ್ತು ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ಎನ್ಎಸ್ ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕುಲಪತಿ, ಕುಲಸಚಿವ ಮತ್ತು ಮೌಲ್ಯಮಾಪನ ರಿಜಿಸ್ಟ್ರಾರ್‌ಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ತಾಂತ್ರಿಕ ಸಮಸ್ಯೆಗಳ ನೆಪದಲ್ಲಿ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಹಿಂದೆ ಪಾಸ್ ಆಗಿದ್ದ ಫಲಿತಾಂಶಗಳು ಈಗ ಮಾಸ್ ಕಾರ್ಡ್‌ಗಳಲ್ಲಿ ಫೇಲ್ ಎಂದು…

Read More

ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ದಂಪತಿ: ಬೇಬಿ ಬಂಪ್ ಫೋಟೊಶೂಟ್

ನಟ, ನಿರ್ಮಾಪಕ ಡಾಲಿ ಧನಂಜಯ್ ಅವರು ಇದೀಗ ತಂದೆಯಾಗುವ ಶುಷಿಯಲ್ಲಿದ್ದಾರೆ. ಡಾಲಿ ಅವರ ಪತ್ನಿ ಡಾ ಧನ್ಯತಾ ಗರ್ಭಿಣಿ ಆಗಿದ್ದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಧನ್ಯತಾ ಅವರು ಬೇಬಿ ಬಂಪ್ ಫೋಟೊಶೂಟ್ ಮಾಡಿಸಿದ್ದು, ಪತಿ ಡಾಲಿ ಸಹ ಪತ್ನಿಯ ಫೋಟೋಶೂಟ್​ನಲ್ಲಿ ಜೊತೆಯಾಗಿದ್ದಾರೆ. ಧನ್ಯತಾ ಮತ್ತು ಡಾಲಿ ಧನಂಜಯ್ ಅವರುಗಳು ಫೋಟೊಶೂಟ್​​ನಲ್ಲಿ ಮುದ್ದಾಗಿ ಕಾಣುತ್ತಿದ್ದು, ಮಗುವಿನ ನಿರೀಕ್ಷೆಯಲ್ಲಿರುವ ಪೋಷಕರ ಖುಷಿಯಲ್ಲಿದ್ದಾರೆ. ಡಾಲಿ ಹಾಗೂ ಧನ್ಯತಾ ಅವರು ಪ್ರಕೃತಿಯ ನಡುವೆ ಫೋಟೊಶೂಟ್ ಮಾಡಿಸಿದ್ದು, ಡಾಲಿ, ಗರ್ಭಿಣಿ ಪತ್ನಿಯ ಕೈ…

Read More

ತಂದೆ ಬಗ್ಗೆ ಹೆಚ್​​ಡಿಕೆ ಹೇಳಿಕೆಯಿಂದ ನೋವಾಗಿದೆ ಎಂದ ಸಚಿವ ಡಿ. ಸುಧಾಕರ್​​ ಪುತ್ರನಿಗೆ JDS ಕೌಂಟರ್​​ – Kannada News | JDS Questions Congress Over D. Sudhakar Health Secrecy, Hits Back at Minister’s Son

ಹೆಚ್​​ಡಿಕೆ ಹೇಳಿಕೆಯಿಂದ ನೋವಾಗಿದೆ ಎಂದ ಸುಧಾಕರ್​​ ಪುತ್ರಗೆ JDS ಕೌಂಟರ್​​ ಬೆಂಗಳೂರು, ಏಪ್ರಿಲ್​​ 29: ಸಚಿವ ಡಿ.ಸುಧಾಕರ್​ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಈ ನಡುವೆ ಅವರ ಆರೋಗ್ಯದ ಬಗ್ಗೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಆಡಿದ್ದ ಮಾತುಗಳೀಗ ರಾಜಕೀಯ ಸ್ವರೂಪ ಪಡೆದುಕೊಂಡಿವೆ. ಆ ವ್ಯಕ್ತಿ ಎಷ್ಟು ನೋವು ಅನುಭವಿಸುತ್ತಿದ್ದಾನೆ. ಯಾವ ಕಾರಣಕ್ಕೆ ಕೆಲವು ವಿಷಯಗಳನ್ನು ಮುಚ್ಚಿಟ್ಟಿದ್ದಾರೆ. ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಮುಚ್ಚಿಡಲಾಗಿದೆಯೇ? ಎಂದು ಹೆಚ್​ಡಿಕೆ ಪ್ರಶ್ನಿಸಿದ್ದರು. ಅವರ ಈ ಹೇಳಿಕೆಗೆ ಸಚಿವ…

Read More

IPL 2026: ಐಪಿಎಲ್ ಮಧ್ಯದಲ್ಲಿ ಮುಂಬೈ ಆಲ್‌ರೌಂಡರ್​ನ ಟ್ರಯಲ್​ಗೆ ಕರೆದ ಸಿಎಸ್​ಕೆ – Kannada News | IPL 2026: CSK’s Injury Woes and Ayush Vartak Trial Amid Playoff Push Challenges

2026 ರ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಪ್ರದರ್ಶನ ಅಷ್ಟೇನೂ ಹೇಳಿಕೊಳ್ಳುವಂತಿಲ್ಲ. ಇದುವರೆಗೆ ಆಡಿರುವ ಪಂದ್ಯಗಳಲ್ಲಿ ಸಿಎಸ್​​ಕೆ ಗೆದ್ದಿರುವುದಕ್ಕಿಂತ ಸೋತಿರುವುದೇ ಹೆಚ್ಚು. ತಂಡವು ಇಲ್ಲಿಯವರೆಗೆ ಆಡಿರುವ ಎಂಟು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಸೋತಿದ್ದು, ಪ್ಲೇಆಫ್ ತಲುಪುವ ಸಾಧ್ಯತೆಗಳು ಮಸುಕಾಗುತ್ತಿವೆ. ಇದರ ನಡುವೆ ತಂಡದ ಆಟಗಾರರ ಗಾಯದ ಸಮಸ್ಯೆ ಸಿಎಸ್​ಕೆ ನುಂಗಲಾರದ ತುತ್ತಾಗಿದೆ. ಕೆಲವು ಸ್ಟಾರ್ ಆಟಗಾರರು ಗಾಯದಿಂದಾಗಿ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇನ್ನು ಕೆಲವು ಆಟಗಾರರು ಗಾಯದಿಂದ ಚೇತರಿಸಿಕೊಳ್ಳುವ ಹಂತದಲ್ಲಿದ್ದಾರೆ. ಇದರಲ್ಲಿ ಎಂಎಸ್ ಧೋನಿ ಕೂಡ…

Read More

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್​​​ ನ್ಯೂಸ್​​: ವೇತನ ಹಿಂಬಾಕಿ ಪಾವತಿಗೆ 450 ಕೋಟಿ ರೂ. ಬಿಡುಗಡೆ! – Kannada News | Transport Employees Get Rs.450 Cr Arrears: Karnataka Govt’s First Phase Payment

ಬೆಂಗಳೂರು, ಏ.29: ಹಲವು ದಿನಗಳಿಂದ ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವೆ ಹಲವು ಬೇಡಿಕೆಗಳ ಕುರಿತು ಭಾರೀ ಗೊಂದಲಗಳು ಉಂಟಾಗಿದೆ. ಇದಕ್ಕಾಗಿ ಪ್ರತಿಭಟನೆಗಳನ್ನು ಕೂಡ ನಡೆಸಿದರು. ಆದರೆ ಇದೀಗ ಸಾರಿಗೆ ನೌಕರರಿಗೆ ಬಿಗ್​​​​​ ಗುಡ್​​ ನ್ಯೂಸ್​ ನೀಡಿದೆ. ದೀರ್ಘಕಾಲದ ಕಾಯುವಿಕೆಯ ನಂತರ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಬಾಕಿ ಇರುವ ವೇತನ ಹಿಂಬಾಕಿಯನ್ನು (Arrears) ಪಾವತಿಸಲು ಮೊದಲ ಹಂತದಲ್ಲಿ 450 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿ ಸರ್ಕಾರ…

Read More

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿಗೆ ಟಿಎಂಸಿಗೆ ಬೆಂಬಲಿಗರಿಂದ ಮುತ್ತಿಗೆ; ಮತಗಟ್ಟೆ ಬಳಿ ಲಾಠಿ ಚಾರ್ಜ್ – Kannada News | West Bengal Elections TMC Supporters surrounded BJP Leader Suvendu Adhikari Near polling Booth

ಕೊಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ (West Bengal Elections) ಎರಡನೇ ಹಂತದ ಮತದಾನವು ಪ್ರಸ್ತುತ 7 ಜಿಲ್ಲೆಗಳಲ್ಲಿರುವ 142 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಇದರ ನಡುವೆ ಮತ್ತೊಮ್ಮೆ ಟಿಎಂಸಿ ಮತ್ತು ಬಿಜೆಪಿ ನಡುವೆ ಜಗಳ ನಡೆದಿದ್ದು, ಗಲಾಟೆ ನಿಲ್ಲಿಸಲು ಪೊಲೀಸರು ಲಾಠಿಚಾರ್ಜ್ ಮಾಡಬೇಕಾಯಿತು. ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಭವಾನಿಪುರ ಮತಗಟ್ಟೆಯನ್ನು ಪರಿಶೀಲಿಸಲು ಬಂದಾಗ ಟಿಎಂಸಿ ಬೆಂಬಲಿಗರು ಅವರನ್ನು ಘೇರಾವ್…

Read More

ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ರಾಜ್ಯ ಸರ್ಕಾರದ ‘ಶಿಕ್ಷಣ ಗ್ಯಾರಂಟಿ’ ಅಸ್ತ್ರ! – Kannada News | Karnataka government’s Education Guarantee to attract children to government schools and colleges affter SSLC, PUC Results

ಶಿಕ್ಷಣ ಗ್ಯಾರಂಟಿImage Credit source: x.com/siddaramaiah ಬೆಂಗಳೂರು, ಏಪ್ರಿಲ್​ 29: 2025–26ನೇ ಶೈಕ್ಷಣಿಕ ಸಾಲಿನ ಎಸ್​​​ಎಸ್​​​ಎಲ್​​ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆ ಫಲಿತಾಂಶ ಇತ್ತೀಚೆಗೆ ಬಿಡುಗಡೆಗೊಂಡಿದೆ. ಈ ಬೆನ್ನಲ್ಲೇ ವಿದ್ಯಾರ್ಥಿಗಳನ್ನು ಸೆಳೆಯುವ ನಿಟ್ಟಿನಲ್ಲಿ ಖಾಸಗಿ ಶಾಲಾ-ಕಾಲೇಜುಗಳು ನಾನಾ ಕಸರತ್ತು ನಡೆಸುತ್ತಿವೆ. ವಿಶೇಷವೆಂದರೆ, ಕಾಂಗ್ರೆಸ್​ ಸರ್ಕಾರ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳಕ್ಕಾಗಿ ಜಾಹೀರಾತು ನೀಡುವ ಮೂಲಕ ಗಮನಸೆಳೆದಿದೆ. ಆ ಮೂಲಕ ರಾಜ್ಯದಲ್ಲಿ ಉತ್ತಮಗುಣಮಟ್ಟದ ಶಿಕ್ಷಣ ಒದಗಿಸುವ ‘ಗ್ಯಾರಂಟಿ’ ನೀಡಿದೆ. ಎಸ್​​ಎಸ್​​ಎಲ್​ಸಿ ಮತ್ತು ದ್ವಿತೀಯ…

Read More

ಜಪಾನ್​ಗೆ ಲಗ್ಗೆ ಇಡಲು ರೆಡಿಯಾದ ‘ಧುರಂಧರ್’ ಸಿನಿಮಾ; ಹೆಚ್ಚಲಿದೆ ಗಳಿಕೆ – Kannada News | Dhurandhar in Japan: Ranveer Singh’s Blockbuster Set for July 10 Release, Boosts Global Box Office

ವಿಶ್ವ ಬಾಕ್ಸ್ ಆಫೀಸ್‌ನಲ್ಲಿ ಆದಿತ್ಯ ಧಾರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಸುನಾಮಿ ಎಬ್ಬಿಸಿತ್ತು. ಇದಾದ ಬಳಿಕ ಬಂದ ‘ಧುರಂಧರ್ 2’ ಚಿತ್ರವನ್ನು ಮತ್ತಷ್ಟು ಮೆಚ್ಚುಗೆ ಪಡೆಯಿತು. ಈ ಸಿನಿಮಾ ಅನೇಕ ದಾಖಲೆಗಳನ್ನು ಉಡೀಸ್ ಮಾಡಿದೆ. ಈಗ ‘ಧುರಂಧರ್’ ಚಿತ್ರ ಜುಲೈ 10ರಂದು, ಜಪಾನ್‌ನಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಜಪಾನ್ ಭಾಷೆಗೆ ಡಬ್ ಆಗಿ ರಿಲೀಸ್ ಆಗಲಿದೆ ಅನ್ನೋದು ವಿಶೇಷ. ಜಪಾನ್ ಅಲ್ಲಿ ಭಾರತದ ಸಿನಿಮಾಗಳಿಗೆ ಬೇಡಿಕೆ ಇದೆ. ಅದರಲ್ಲೂ ಆ್ಯಕ್ಷನ್ ಹಾಗೂ ಫ್ಯಾಂಟಸಿ…

Read More

ಉಡುಪಿಯಲ್ಲಿ ಭೀಕರ ಅಪಘಾತ: ರಸ್ತೆ ಬದಿ ನಿಂತಿದ್ದ ಟ್ರಕ್​​ಗೆ ಪ್ರವಾಸಿ ಬಸ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಸಾವು! – Kannada News | Tragic Udupi Road Crash: Byndoor Bus Hits Tanker, 2 College Students Dead

ಉಡುಪಿ, ಏ.29: ಬೇಸಿಗೆ ರಜೆಯಲ್ಲಿ ಊರೆಲ್ಲ ಸುತ್ತುವ ಎಂದು ಕರಾವಳಿ ಕಡೆ ಪ್ರವಾಸ ಕೈಗೊಂಡಿದ್ದ ವಿದ್ಯಾರ್ಥಿಗೆ ಯಮನ ದರ್ಶನವಾಗಿದೆ, ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರವಾಸಿಗರಿದ್ದ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್​​ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಶಂಕರಘಟ್ಟದ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು….

Read More