Headlines

ಮಳೆ ಕೊರತೆಯಿಂದ ಬತ್ತಿದ ತುಂಗಭದ್ರಾ ನದಿ: ನೀರಿಲ್ಲದೆ ಸಾವಿರಾರು ಮೀನುಗಳು ಸಾವು – Kannada News | Tungabhadra river dries up due to rainfall deficit thousands of fish die in koppal raising epidemic fears

ನೀರಿಲ್ಲದೆ ಸಾವಿರಾರು ಮೀನುಗಳು ಸಾವು ಕೊಪ್ಪಳ, ಜುಲೈ 20: ಸಮರ್ಪಕ ಮಳೆಯ ಕೊರತೆಯಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿದ್ದು, ಕೊಪ್ಪಳ ಜಿಲ್ಲೆಯ ಕೆಲ ಭಾಗಗಳಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. ಕಾರಟಗಿ ತಾಲೂಕಿನ ಸಿದ್ದಾಪುರ ಹೋಬಳಿಯ ಕಕ್ಕರಗೋಳ ಹಾಗೂ ನಂದಿಹಳ್ಳಿ ಗ್ರಾಮಗಳ ಸಮೀಪ ತುಂಗಭದ್ರಾ ನದಿಯ ಪಾತ್ರ ಬಹುತೇಕ ಒಣಗಿದ್ದು, ಅಲ್ಲಲ್ಲಿ ಕೆಸರುಮಯ ಹಾಗೂ ನಿಂತ ನೀರಿನ ಗುಂಡಿಗಳು ಮಾತ್ರ ಉಳಿದಿವೆ. ಪರಿಣಾಮ ನದಿಯ ದಡದಲ್ಲಿ ಸತ್ತ ಮೀನುಗಳು ಮತ್ತು ಒಣಗಿದ ಪಾಚಿಗಳು…

Read More

ಅಬಕಾರಿ ಸುಂಕ ಕಡಿತದಿಂದ ಸರ್ಕಾರಕ್ಕೆ ಎರಡೇ ವಾರದಲ್ಲಿ 7,000 ಕೋಟಿ ರೂ ಆದಾಯನಷ್ಟದ ಅಂದಾಜು

ನವದೆಹಲಿ, ಮಾರ್ಚ್ 27: ಜನರಿಗೆ ತೈಲ ಬೆಲೆ ಏರಿಕೆಯ ಬಿಸಿ ತಾಗದಿರಲೆಂದು ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು (Excise Duty) ಕಡಿಮೆಗೊಳಿಸಿದೆ. ಪೆಟ್ರೋಲ್ ಮತ್ತು ಡೀಸಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು 10 ರೂ ಇಳಿಸಿದೆ. ಇದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ಆಗಬಹುದಾಗಿದ್ದ ನಷ್ಟದ ಹೊರೆ ಕಡಿಮೆ ಆಗಲಿದೆ. ಜನಸಾಮಾನ್ಯರಿಗೆ ಪೆಟ್ರೋಲ್, ಡೀಸಲ್ ಬೆಲೆ (Petrol Price) ಏರಿಕೆಯ ಭಾರವೂ ತಪ್ಪಿದಂತಾಗುತ್ತದೆ. ಅಬಕಾರಿ ಸುಂಕ ಇಳಿಕೆಯಿಂದ ಸರಕಾರದ ಆದಾಯಕ್ಕೆ ಸಾಕಷ್ಟು ನಷ್ಟ ಆಗಲಿದೆ. ಕೇಂದ್ರೀಯ ನೇರ…

Read More

ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್: ಕೈ ಸಾಲದು ಎಂದು ಮೆಷಿನ್ ತಂದ ಅಧಿಕಾರಿಗಳು – Kannada News | Karnataka Corruption: KREIS and PWD Engineers Raided, 23 Cr Unaccounted Assets Found

ಬೆಂಗಳೂರು, ಫೆ.13: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀಕ್ಷಕ ಎಂಜಿನಿಯರ್ ಎಚ್.ಎಂ. ಜನಾರ್ದನ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಏಕಕಾಲದಲ್ಲಿ ಆರು ಕಡೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದರು. ಈ ದಾಳಿಯ ವೇಳೆ ಅತ್ಯಂತ ಶಾಕಿಂಗ್ ವಿಚಾರವೊಂದು ಹೊರಬಿದ್ದಿದೆ. ಜನಾರ್ದನ್ ಅವರ ಆಪ್ತ ಸುಜಯ್ ಶೆಟ್ಟಿ ಎಂಬುವವರಿಗೆ ಸೇರಿದ ಪ್ಲಾಟ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ…

Read More

‘ಅಣ್ಣಯ್ಯ’ ಸೀರಿಯಲ್ ನಟ ವಿಕಾಶ್ ಹೊಸ ಸಿನಿಮಾ ‘ಪಾರ್ಥನ್ ಪರಪಂಚ’ – Kannada News | Vikash Uthaiah new movie Parthan Parapancha shooting in Bengaluru

ಕಿರುತೆರೆಯ ‘ಅಣ್ಣಯ್ಯ’ ಸೀರಿಯಲ್ ಮೂಲಕ ಖ್ಯಾತಿ ಪಡೆದ ನಟ ವಿಕಾಶ್ ಉತ್ತಯ್ಯ (Vikash Uthaiah) ಅವರು ಈಗ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ ‘ಪಾರ್ಥನ್ ಪರಪಂಚ’ (Parthan Parapancha) ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ಇದೊಂದು ಕೋರ್ಟ್ ಹಾಲ್ ಡ್ರಾಮಾ ಸಿನಿಮಾ. ಶ್ರೀಹರ್ಷ ಎಂ.ಎನ್. ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಸಿರಿ ಸಿನಿಮಾಸ್’ ಮೂಲಕ ಸೀತಾ ಹರ್ಷವರ್ಧನ್ ಅವರು ನಿರ್ಮಾಣ‌‌ ಮಾಡುತ್ತಿದ್ದಾರೆ. ವಿಕಾಶ್ ಜೊತೆ ಮಂದಾರ, ರಂಗಾಯಣ ರಘು, ಅಮಿತ್, ಸಂಪತ್ ಮೈತ್ರೇಯ ಮುಖ್ಯ…

Read More

ಕ್ರಿಕೆಟಿಗ ಸೂರ್ಯ ಹಾಗೂ ದೇವಿಶಾ ದಂಪತಿಗೆ ಮುದ್ದಾದ ಹೆಣ್ಣು ಮಗು ಜನನ – Kannada News | Suryakumar yadav and devisha shetty Welcomes Baby Girl

2026 ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿರುವ ಸೂರ್ಯಕುಮಾರ್ ಯಾದವ್​ಗೆ ಈ ಸೀಸನ್​ ಅಂದುಕೊಂಡಂತೆ ನಡೆದಿಲ್ಲ. ಈ ಆವೃತ್ತಿಯಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಸೂರ್ಯಕುಮಾರ್ ರನ್ ಬರ ಎದುರಿಸುತ್ತಿದ್ದಾರೆ. ಹೀಗಾಗಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿರುವ ಸೂರ್ಯಕುಮಾರ್​ಗೆ ವೈಯಕ್ತಿಕ ಬದುಕಿನಲ್ಲಿ ಸಿಹಿ ಸುದ್ದಿಯೊಂದು ಸಿಕ್ಕಿದೆ. ಅವರ ಮಡದಿ ದೇವಿಶಾ ಶೆಟ್ಟಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸ್ವತಃ ಈ ವಿಚಾರವನ್ನು ಸೂರ್ಯಕುಮಾರ್ ಯಾದವ್ ತಮ್ಮ ಅಧಿಕೃತ ಇನ್ಸ್​ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ….

Read More

Chanakya Niti: ಮಹಿಳೆಯ ಈ ಗುಣಗಳು ಕುಟುಂಬದ ಬಹುದೊಡ್ಡ ಶಕ್ತಿ ಎಂದಿದ್ದಾರೆ ಚಾಣಕ್ಯ

ಹೆಣ್ಣು ಸಂಸಾರದ ಕಣ್ಣು, ಮನೆಯ ಏಳುಬೀಳು, ಕುಟುಂಬ ಸದಸ್ಯರ ಉನ್ನತಿ-ಅವನತಿ ಇವೆಲ್ಲವೂ ಆ ಮನೆಯ ಮಹಿಳೆಯ ಕೈಯಲ್ಲಿ ಇರುತ್ತದೆ. ಆದ್ದರಿಂದ ಮಹಿಳೆಯಾದವಳು ಸರಿಯಾದ ರೀತಿಯಲ್ಲಿ ಸಂಸಾರವನ್ನು ಸಾಗಿಸಿದರೆ, ಆ ಸಂಸಾರದಲ್ಲಿ ಸುಖ, ಶಾಂತಿ, ಸಮೃದ್ಧಿ ಎನ್ನುವಂತಹದ್ದು ನೆಲೆಸುತ್ತದೆ ಎಂದು ಆಚಾರ್ಯ ಚಾಣಕ್ಯ (Acharya Chanakya). ಅದರಲ್ಲೂ ಮಹಿಳೆಯಲ್ಲಿ ಈ ಕೆಲವು ಗುಣಗಳಿದ್ದರೆ ಆಕೆ ಮತ್ತು ಆಕೆಯ ಕುಟುಂಬದ ಭವಿಷ್ಯ ಉತ್ತಮ ರೀತಿಯಲ್ಲಿ ಇರುತ್ತದೆ. ಕುಟುಂಬದಲ್ಲಿ ಸುಖ, ಸಮೃದ್ಧಿ ನೆಲೆಸುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ರೆ ಮಹಿಳೆಯಾದವಳು…

Read More

ನೀಟ್ ಮರು-ಪರೀಕ್ಷೆಗೂ ಮುನ್ನವೇ ಆಘಾತ; ರಾಜಸ್ಥಾನದ ಸೀಕರ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಸಾವು! – Kannada News | NEET Aspirant Suicide in Sikar: Second Student Death in Coaching Hub, Exam Pressure

ನೀಟ್ ಮರು-ಪರೀಕ್ಷೆಗೂ ಮುನ್ನ ಮತ್ತೊಬ್ಬ ವಿದ್ಯಾರ್ಥಿ ಸಾವುImage Credit source: Pinterest ರಾಜಸ್ಥಾನದ ಪ್ರಮುಖ ಕೋಚಿಂಗ್ ಹಬ್ ಆಗಿರುವ ಸೀಕರ್ (Sikar) ಜಿಲ್ಲೆಯಲ್ಲಿ ಮಂಗಳವಾರದಂದು ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಜೂನ್ 21 ರಂದು ದೇಶಾದ್ಯಂತ ನೀಟ್ ಮರು-ಪರೀಕ್ಷೆ ನಡೆಯಲಿದ್ದು, ಅದಕ್ಕೆ ಸಜ್ಜಾಗುತ್ತಿದ್ದ 22 ವರ್ಷದ ನೀಟ್ ಅಭ್ಯರ್ಥಿ ಉಮೇಶ್ ಮಾಲಿ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಯುವಕನನ್ನು ಜುಂಜುನು ಜಿಲ್ಲೆಯ ನವಲಗಢ ಪ್ರದೇಶದ ಕಾರಿ ಗ್ರಾಮದ ನಿವಾಸಿ ಉಮೇಶ್ ಮಾಲಿ…

Read More

ಪತನವಾಗುವ ಮುನ್ನ ಪಲ್ಟಿಯಾಗಿ ಬಿತ್ತು ವಿಮಾನ; ಅಜಿತ್ ಪವಾರ್ ಕೊನೆಯ ಕ್ಷಣಗಳ ಹೊಸ ವಿಡಿಯೋ ವೈರಲ್ – Kannada News | New CCTV Video Shows DCM Ajit Pawar Plane Tilting Before Crash

ಪುಣೆ, ಜನವರಿ 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಮತ್ತು ಇತರ ನಾಲ್ವರು ಪ್ರಯಾಣಿಸುತ್ತಿದ್ದ ವಿಮಾನ ಇಂದು ಬೆಳಿಗ್ಗೆ ಬಾರಾಮತಿ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗುವ ಮೊದಲು ಎಡಕ್ಕೆ ವಾಲುತ್ತಾ ಪಲ್ಟಿಯಾಗುವುದನ್ನು ತೋರಿಸುವ ಹೊಸ ಸಿಸಿಟಿವಿ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಿಮಾನವು ವೇಗವಾಗಿ ಕೆಳಗೆ ಇಳಿಯುತ್ತಾ ಎಡಕ್ಕೆ ಉರುಳುತ್ತಿರುವುದನ್ನು ನೋಡಬಹುದು. ಈ ರೀತಿ ಪಲ್ಟಿಯಾಗುವುದು ತಾಂತ್ರಿಕ ದೋಷದ ಪರಿಣಾಮವಾಗಿರಬಹುದು ಅಥವಾ ಪೈಲಟ್‌ಗಳು ವಿಮಾನದಲ್ಲಿನ ಕೆಲವು ರೀತಿಯ ಒತ್ತಡಗಳನ್ನು ಸರಿದೂಗಿಸಲು…

Read More

ಸೋನು ಶ್ರೀನಿವಾಸ್ ಗೌಡಗೆ ಇನ್‌ಸ್ಟಾಗ್ರಾಮ್‌ನಿಂದ ತಿಂಗಳಿಗೆ ಬರೋ ಹಣ ಎಷ್ಟು? – Kannada News | Sonu Srinivas Gowda’s Instagram Earnings Revealed: Less than 30K month

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುವ ಸೋನು ಶ್ರೀನಿವಾಸ್ ಗೌಡ, ಈಗ ಬೆಳ್ಳಿಪರದೆಗೆ ಹೆಜ್ಜೆ ಇಟ್ಟಿದ್ದಾರೆ. ಈ ಹಿಂದೆ ಅವರ ಖಾಸಗಿ ವಿಡಿಯೋ ವೈರಲ್ ಆಗಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿತ್ತು. ಆ ಬಳಿಕ ಬಿಗ್ ಬಾಸ್ ಒಟಿಟಿ ಶೋಗೆ ಸ್ಪರ್ಧಿಯಾಗಿ ಬಂದ ಅವರು, ತಮ್ಮ ಮೇಲಿದ್ದ ನೆಗೆಟಿವ್ ಅಭಿಪ್ರಾಯಗಳನ್ನು ಬದಲಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅವರು ಬಿಗ್ ಬಾಸ್‌ಗೆ ಬಂದಾಗ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು, ಆದರೆ ಶೋ ಹೋಸ್ಟ್ ಕಿಚ್ಚ ಸುದೀಪ್ ಅವರು ‘ತಪ್ಪನ್ನು ತಿದ್ದಿಕೊಳ್ಳಲು ಪ್ರತಿಯೊಬ್ಬರಿಗೂ…

Read More

Donald Trump: 48 ಗಂಟೆಯೊಳಗೆ ಹಾರ್ಮುಜ್ ಜಲಸಂಧಿ ತೆರೀರಿ, ಇಲ್ದಿದ್ರೆ.. ಇರಾನ್​ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಮಾರ್ಚ್​ 22: ವಿಶ್ವದ ತೈಲ ಪೂರೈಕೆಯ ಐದನೇ ಒಂದು ಭಾಗದಷ್ಟು ತೈಲವನ್ನು ಸಾಗಿಸುವ ಹಾರ್ಮುಜ್(Hormuz) ಜಲಸಂಧಿಯನ್ನು ಹಡಗು ಸಂಚಾರಕ್ಕಾಗಿ ಟೆಹ್ರಾನ್ ಮತ್ತೆ ತೆರೆಯದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ, ಅಮೆರಿಕವು ತನ್ನ ಹಲವಾರು ವಿದ್ಯುತ್ ಸ್ಥಾವರಗಳನ್ನು ಗುರಿಯಾಗಿರಿಸಿ ಸಂಪೂರ್ಣವಾಗಿ ನಾಶಪಡಿಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ…

Read More