Headlines

ಧಾರವಾಡದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಪೊಲೀಸ್​ ಸಿಬ್ಬಂದಿಗೆ ಬಿಗ್​​ ಶಾಕ್​​ – Kannada News | Dharwad Police Suspends Three staffs After Student Death Over Harassment

ಧಾರವಾಡ, ಏಪ್ರಿಲ್​​ 29: ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಪೇದೆಗಳನ್ನು ಸಸ್ಪೆಂಡ್​​ ಮಾಡಲಾಗಿದೆ. ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಮತ್ತು ಸಯದ್ ತಹಸಿಲ್ದಾರ್ ಅಮಾನತುಗೊಂಡಿರುವ ಅಧಿಕಾರಿಗಳು. ಗಾಂಜಾ ಸೇವನೆ ಆರೋಪದಡಿ ವಿದ್ಯಾರ್ಥಿ ಆದಿತ್ಯನನ್ನು ವಶಕ್ಕೆ ಪಡೆಯಲಾಗಿತ್ತು. ಪರೀಕ್ಷೆಯಲ್ಲಿ ಗಾಂಜಾ ಸೇವನೆ ನೆಗೆಟಿವ್ ಬಂದಿದ್ದರೂ, ಪೊಲೀಸರು ಆದಿತ್ಯನಿಂದ 2000 ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ತಾಯಿಯಿಂದ ಹಣ ಕೊಡಿಸಲು ಆದಿತ್ಯ ಯತ್ನಿಸಿದ್ದು, ತಾಯಿ ನಿರಾಕರಿಸಿದ ಕಾರಣ ನೇಣಿಗೆ…

Read More

Video: ನಿಯಂತ್ರಣ ತಪ್ಪಿ ಸೈಕಲ್ ಸವಾರನ ಮೇಲೆ ಹರಿದು, ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್ – Kannada News | Speeding Tractor in Kasganj Causes Fatal Crash, CCTV Surfaces

ಲಕ್ನೋ, ಏಪ್ರಿಲ್ 29:ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿ ಬೆಚ್ಚಿಬೀಳಿಸುವ ಅಪಘಾತವೊಂದು ನಡೆದಿದೆ. ವೇಗವಾಗಿ ಬಂದ ಮರಳು ತುಂಬಿದ ಟ್ರ್ಯಾಕ್ಟರ್ ಟ್ರಾಲಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಸೈಕಲ್ ಸವಾರನ ಮೇಲೆ ಹರಿದಿದೆ. ಅಪಘಾತದ ತೀವ್ರತೆಗೆ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರ್ಯಾಕ್ಟರ್ ಅಷ್ಟಕ್ಕೇ ನಿಲ್ಲದೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೂ ಡಿಕ್ಕಿ ಹೊಡೆದಿದೆ. ಚಾಲಕರು ಮಿತಿಯೊಳಗೆ ವಾಹನ ಚಾಲನೆ ಮಾಡಬೇಕು ಮತ್ತು ನಿಯಮ ಮೀರಿ ಭಾರವನ್ನು ಹೇರುವುದು ಕೇವಲ ತಮಗಷ್ಟೇ ಅಲ್ಲ, ರಸ್ತೆಯಲ್ಲಿರುವ ಇತರ ಅಮಾಯಕರಿಗೂ ಪ್ರಾಣಕ್ಕೆ…

Read More

Video: ಕಿರಿದಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Asansol Car Attack: Viral CCTV Captures Violent Conflict in West Bengal Street

ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ ಭೀಕರ ಸಂಘರ್ಷವೊಂದು ಸಂಭವಿಸಿದ್ದು, ಕಿರಿದಾದ ಗಲ್ಲಿಯೊಂದರಲ್ಲಿ ನಡೆದ ಈ ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಜನರ ಗುಂಪಿನ ಮೇಲೆ ಕಾರೊಂದು ನುಗ್ಗಲು ಪ್ರಯತ್ನಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಕುಪಿತಗೊಂಡ ಸಾರ್ವಜನಿಕರು ಕಾರಿನ ಮೇಲೆ ಮನಬಂದಂತೆ ದಾಳಿ ನಡೆಸಿ ಜಖಂಗೊಳಿಸಿದ್ದಾರೆ. ಕಾರಿನ ಗಾಜುಗಳನ್ನು ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದು ಪುಡಿಪುಡಿ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. Source link

Read More

ಬಂದೇ ಬಿಡ್ತು ‘ಹೌಸ್ ಆಫ್ ದಿ ಡ್ರ್ಯಾಗನ್ 3’: ಬಿಡುಗಡೆ ದಿನಾಂಕ ಘೋಷಣೆ – Kannada News | House Of The Dragon season 3 trailer released

ವಿಶ್ವದ ಈ ವರೆಗಿನ ಅತ್ಯುತ್ತಮ ವೆಬ್ ಸರಣಿ ‘ಗೇಮ್ ಆಫ್ ಥ್ರೋನ್ಸ್’ (Game Of  Thrones) ಎನ್ನಲಾಗುತ್ತದೆ. ವಿಶ್ವದಲ್ಲಿ ಅತಿ ಹೆಚ್ಚು ಜನ ನೋಡಿರುವ ವೆಬ್ ಸರಣಿ ಸಹ ಇದೇ ಆಗಿದೆ. ಜಾರ್ಜ್​ ಆರ್​​ಆರ್ ಮಾರ್ಟಿನ್ ಬರೆದಿರುವ ‘ಆ ಸಾಂಗ್ ಆಫ್ ಐಸ್ ಆಂಡ್ ಫೈರ್’ ಪುಸ್ತಕ ಸರಣಿಯನ್ನು ಆಧರಿಸಿದ ಕತೆಯನ್ನು ಇದು ಒಳಗೊಂಡಿದೆ. ‘ಗೇಮ್ ಆಫ್ ಥ್ರೋನ್’ ವೆಬ್ ಸರಣಿ 2019 ರಲ್ಲಿ ಕೊನೆಗೊಂಡಿತ್ತು. ಅದರ ಪ್ರೀಕ್ವೆಲ್ ‘ಹೌಸ್ ಆಫ್ ದಿ ಡ್ರ್ಯಾಗನ್’ 2022 ರಲ್ಲಿ…

Read More

ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಹೋರಾಟದ ವೇಳೆ ರೈತರು, ಪೊಲೀಸರ ನಡುವೆ ಘರ್ಷಣೆ – Kannada News | Chikkaballapur Farmers Clash with Police Over KIADB Land Acquisition Protest

ಚಿಕ್ಕಬಳ್ಳಾಪುರ, ಏಪ್ರಿಲ್​​ 29: ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ ವೇಳೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಭಾರಿ ಹೈಡ್ರಾಮಾವೇ ನಡೆದಿದೆ. ರೈತರ ಕೊರಳುಪಟ್ಟಿಗೆ ಕೈ ಹಾಕಿ ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪ ಕಾರಣಕ್ಕೆ ಕೆಲ ಕಾಲ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದು, ರೈತರು ಹಾಗೂ ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆದಿದೆ. ಪೊಲೀಸರ ವಿರುದ್ದ ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ ಬಣ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ದೌರ್ಜನ್ಯ…

Read More

ಕೆಲಸ ಮಾಡುತ್ತಲೇ ಸಾವನ್ನಪ್ಪಿದ ಉದ್ಯೋಗ ಖಾತ್ರಿ ಕಾರ್ಮಿಕ: ಅಧಿಕಾರಿಗಳ ನಿರ್ಲಕ್ಷ್ಯ ಬಯಲು ಮಾಡಿದ ಟಿವಿ9 ರಿಯಾಲಿಟಿ ಚೆಕ್! – Kannada News | Raichur Heatwave Death: MGNREGA Worker Dies Due to Lack of Facilities; TV9 Reality Check Exposes PDO Negligence

ರಾಯಚೂರು, ಏಪ್ರಿಲ್ 29: ಯಾಪಲದಿನ್ನಿ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವಾಗ ಬಿಸಿಲ ಬೇಗೆಗೆ ಕಾರ್ಮಿಕ ಹುಸೇನಪ್ಪ ಸಾವನ್ನಪ್ಪಿದ್ದಾರೆ ಎಂದು ಆತನ ಕುಟುಂಬಸ್ಥರು ಹೇಳುತ್ತಿದ್ದಾರೆ. ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಕೆಲಸದ ಸ್ಥಳದಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದಿರುವುದು ಬಯಲಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಮೃತನ ಕುಟುಂಬ ಮತ್ತು ರೈತ ಸಂಘಟನೆಗಳು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿವೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

6+2+4 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI For Gujarat Titans Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಹಾಗೂ ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ (ಏ.30) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 6+2+4 ಸಂಯೋಜನೆಯನ್ನು ರೂಪಿಸಲಿದ್ದಾರೆ. ಅದರಂತೆ ಆರ್​ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ…

Read More

Video: ಇದು ಉತ್ತರ ಪ್ರದೇಶದ ಅಭಿವೃದ್ಧಿಯ ಜೀವಸೆಲೆ, ಗಂಗಾ ಎಕ್ಸ್​ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | Narendra Modi Unveils Ganga Expressway Linking Uttar Pradesh End to End

ಮೀರತ್, ಏಪ್ರಿಲ್ 29: ಪ್ರಧಾನಿ ನರೇಂದ್ರ ಮೋದಿ ಇಂದು ಗಂಗಾ ಎಕ್ಸ್​ಪ್ರೆಸ್​ ವೇ ಉದ್ಘಾಟಿಸಿದ್ದಾರೆ. ಪಶ್ಚಿಮ ಉತ್ತರ ಪ್ರದೇಶವನ್ನು ಪೂರ್ವ ಉತ್ತರ ಪ್ರದೇಶದೊಂದಿಗೆ ಸಂಪರ್ಕಿಸುವ ಈ ಎಕ್ಸ್‌ಪ್ರೆಸ್‌ವೇ ಮೀರತ್‌ನಿಂದ ಪ್ರಯಾಗ್‌ರಾಜ್‌ವರೆಗಿನ 594 ಕಿ.ಮೀ ದೂರವನ್ನು ಕಡಿಮೆ ಮಾಡುತ್ತದೆ. ಈಗ, ಕೆಲವೇ ಗಂಟೆಗಳಲ್ಲಿ, ನೀವು ಪ್ರಯಾಗ್‌ರಾಜ್‌ನಲ್ಲಿರುವ ಸಂಗಮವನ್ನು ತಲುಪಬಹುದು ಮತ್ತು ಕಾಶಿಯಲ್ಲಿ ಬಾಬಾ ವಿಶ್ವನಾಥನನ್ನು ಭೇಟಿ ಮಾಡಿ ಹಿಂತಿರುಗಬಹುದು. ಸಾವಿರಾರು ವರ್ಷಗಳಿಂದ ಗಂಗಾ ತಾಯಿ ಉತ್ತರ ಪ್ರದೇಶ ಮತ್ತು ದೇಶದ ಜೀವನಾಡಿಯಾಗಿರುವಂತೆ, ಆಧುನಿಕ ಪ್ರಗತಿಯ ಈ ಯುಗದಲ್ಲಿ ಆಕೆಯ…

Read More

ರಣಾಂಗಣವಾದ ಕುವೆಂಪು ವಿಶ್ವವಿದ್ಯಾಲಯದ ಆವರಣ: ಕುಲಪತಿ ಕಚೇರಿಯ ಕುರ್ಚಿ, ಪಾಟ್​​ಗಳು ಧ್ವಂಸ – Kannada News | NSUI Leads Student Uprising at Kuvempu University Against VC, Office Vandalised

ರಣಾಂಗಣವಾದ ಕುವೆಂಪು ವಿಶ್ವವಿದ್ಯಾಲಯದ ಆವರಣ ಶಿವಮೊಗ್ಗ, ಏಪ್ರಿಲ್​​ 29: ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಕುಲಪತಿಗಳ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ವಿಶ್ವವಿದ್ಯಾಲಯದ ಆವರಣವು ರಣರಂಗವಾಗಿ ಮಾರ್ಪಟ್ಟಿದ್ದು, NSUI ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆ ವೇಳೆ ಕುಲಪತಿಗಳ ಕಚೇರಿಯಲ್ಲಿದ್ದ ಕುರ್ಚಿ ಮತ್ತು ಪಾಟ್‌ಗಳನ್ನು ದ್ವಂಸ ಮಾಡಲಾಗಿದೆ. ಅಲ್ಲದೆ, ಕುಲಪತಿ ಕಚೇರಿಯ ನಾಮಫಲಕಕ್ಕೆ ಮಸಿ ಬಳಿದು ತಮ್ಮ ಅಸಮಾಧಾನ ಹೊರಹಾಕಿದ್ದು, ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆಕ್ರೋಶಕ್ಕೆ ಕಾರಣ ಏನು? ಕಳೆದ ಕೆಲವು ತಿಂಗಳಿಂದ ವಿದ್ಯಾರ್ಥಿ ವೇತನ…

Read More

ಕೊಳ್ಳೇಗಾಲ: ಮದುವೆ ಮನೆಯಲ್ಲಿ ಚಿನ್ನದ ವಿಚಾರಕ್ಕೆ ಭಾರಿ ಗಲಾಟೆ, ಚಾಕುವಿನಿಂದ ಇರಿದು ಮರ್ಮಾಂಗಕ್ಕೆ ಒದ್ದು ಹಲ್ಲೆ – Kannada News | Kollegal Wedding Horror: Groom’s Relative Stabbed Over Gold Ornament Dispute; Police Investigation Underway

ಗಲಾಟೆ ನಡೆದ ಆರ್​ಎಸ್ ಫಂಕ್ಷನ್ ಹಾಲ್‌ ಹಾಗೂ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿರುವುದುImage Credit source: tv9 ಚಾಮರಾಜನಗರ, ಏಪ್ರಿಲ್ 29: ಮದುವೆ (Marriage) ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು ಇರಿತದಲ್ಲಿ ಅಂತ್ಯವಾಗಿರುವ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಕೊಳ್ಳೇಗಾಲದ ಆರ್​ಎಸ್ ಫಂಕ್ಷನ್ ಹಾಲ್‌ನಲ್ಲಿ ನಡೆದಿದೆ. ಕೇವಲ 70 ಗ್ರಾಂ ಚಿನ್ನದ ವ್ಯತ್ಯಾಸಕ್ಕಾಗಿ ವಧು-ವರರ ಕಡೆಯವರು ಬೀದಿಯಲ್ಲಿ ಬಡಿದಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಚಾಕುವಿನಿಂದ ಇರಿದು, ಮರ್ಮಾಂಗಕ್ಕೆ ಒದ್ದು…

Read More