Bengaluru Air Quality: ಇಂದೂ ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಕುಸಿತ – Kannada News | Bangalore Air Pollution Crisis: Bengaluru, Manglore, Ballari and Shivamogga Air quality

ಇಂದೂ ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಕುಸಿತ

ಬೆಂಗಳೂರು, ಫೆಬ್ರವರಿ 13: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಬೆಂಗಳೂರಿನ AQI (Bengaluru Air Quality) ಇಂದು ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಮಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 150ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 147ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಶಿವಮೊಗ್ಗದ ಏರ್ ಕ್ವಾಲಿಟಿ 143 ಆಗಿದೆ. ಜೊತೆಗೆ ಬಳ್ಳಾರಿಯ ವಾಯು ಗುಣಮಟ್ಟವೂ ಸಹ 149 ಆಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –147
  • ಮಂಗಳೂರು-166
  • ಮೈಸೂರು –159
  • ಬೆಳಗಾವಿ – 161
  • ಕಲಬುರ್ಗಿ-153
  • ಶಿವಮೊಗ್ಗ – 143
  • ಬಳ್ಳಾರಿ – 149
  • ಹುಬ್ಬಳ್ಳಿ- 149
  • ಉಡುಪಿ –169
  • ವಿಜಯಪುರ –149

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಿನಿಮಾ ಸಂಭಾವನೆಯಲ್ಲಿ ಹೆಣ್ಣುಮಕ್ಕಳಿಗಾಗಿ ಶಾಲೆ ಆರಂಭಿಸಲು ಮುಂದಾದ ಮಹಾಕುಂಭ ಸುಂದರಿ – Kannada News | Kumbh Mela Viral Monalisa: From Pearl Seller to Actress and Girls’ School Dream

ಮಹಾ ಕುಂಭಮೇಳದಲ್ಲಿ ಮಣಿ ಹಾರಗಳನ್ನು ಮಾರಾಟ ಮಾಡುವ ಮೂಲಕ ಮೊನಾಲಿಸಾ (Monalisa) ಇದ್ದಕ್ಕಿದ್ದಂತೆ ಪ್ರಸಿದ್ಧರಾದರು. ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಸಂಚಲನ ಮೂಡಿಸಿದರು. ಈಗ ಈ ಸುಂದರಿ ಚಲನಚಿತ್ರಗಳು ಮತ್ತು ಜಾಹೀರಾತುಗಳಲ್ಲಿಯೂ ಕಾಣಿಸಿಕೊಳ್ಳುತ್ತಿದ್ದಾತೆ. ಅವರು ಯಾವಾಗಲೂ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ, ಈ ಕುಂಭಮೇಳ ಸುಂದರಿಯ ಬಗ್ಗೆ ಒಂದು ಕುತೂಹಲಕಾರಿ ವಿಷಯ ಬೆಳಕಿಗೆ ಬಂದಿದೆ.

ಮೊನಾಲಿಸಾ ಕೈಯಲ್ಲಿ ಮೂರು ಚಿತ್ರಗಳಿವೆ. ಅವುಗಳಲ್ಲಿ, ‘ದಿ ಡೈರಿ ಆಫ್ ಮಣಿಪುರ’ ಮೊದಲು ಬಿಡುಗಡೆಯಾಗಲಿದೆ. ಅಂದರೆ ಇದು ಅವರ ಮೊದಲ ಚಿತ್ರ. ಪ್ರಸ್ತುತ, ಈ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರ ಶೀಘ್ರದಲ್ಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಮಧ್ಯೆ, ಮೊನಾಲಿಸಾ ಪ್ರಯಾಗರಾಜ್‌ಗೆ ಭೇಟಿ ನೀಡಿದರು. ಅದು ಅವರಿಗೆ ತುಂಬಾ ಮನ್ನಣೆ ತಂದುಕೊಟ್ಟಿತು. ಅವರು ಅಲ್ಲಿ ಗಂಗಮ್ಮನಿಗೆ ವಿಶೇಷ ಪೂಜೆಗಳನ್ನು ಮಾಡಿದರು. ಮಹಾ ಕುಂಭಮೇಳದಲ್ಲಿ ಹೂಮಾಲೆಗಳನ್ನು ಮಾರಾಟ ಮಾಡುವ ದಿನ ನೆನೆದು ಅವರು ಭಾವುಕರಾದರು.

‘ನನಗೆ ಇಷ್ಟು ಸುಂದರವಾದ ಜೀವನವನ್ನು ನೀಡಿದ ಸಮಾಜಕ್ಕೆ ಮರಳಿ ನೀಡುವ ಆಲೋಚನೆಯೊಂದಿಗೆ ತಾನು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನ್ನ ಮೊದಲ ಚಲನಚಿತ್ರ ಸಂಭಾವನೆಯೊಂದಿಗೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಹುಡುಗಿಯರಿಗಾಗಿ ಶಾಲೆಯನ್ನು ಪ್ರಾರಂಭಿಸುವುದು ತನ್ನ ಕನಸು’ ಎಂದು ಮೊನಾಲಿಸಾ ಹೇಳಿದರು.

ಇದನ್ನೂ ಓದಿ: ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ

‘ಈ ಪ್ರದೇಶಗಳಲ್ಲಿ ಹುಡುಗಿಯರಿಗೆ ಸರಿಯಾದ ಶೈಕ್ಷಣಿಕ ಅವಕಾಶಗಳಿಲ್ಲ. ಅವಿದ್ಯಾವಂತ ಹುಡುಗಿಯರು ಜೀವನದಲ್ಲಿ ಹಿಂದುಳಿದಿದ್ದಾರೆ. ಸಮಾಜದಲ್ಲಿ ನಿಜವಾದ ಬದಲಾವಣೆ ಹೆಣ್ಣುಮಕ್ಕಳ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ನಾನು ನಂಬುತ್ತೇನೆ. ಅದಕ್ಕಾಗಿಯೇ ನಾನು ನನ್ನ ಗಳಿಕೆಯನ್ನು ಭವಿಷ್ಯದ ಪೀಳಿಗೆಗೆ ಬಳಸಲು ಬಯಸುತ್ತೇನೆ ಹೊರತು ವೈಯಕ್ತಿಕ ಸೌಕರ್ಯಕ್ಕಾಗಿ ಅಲ್ಲ’ ಎಂದು ಮೊನಾಲಿಸಾ ಹೇಳಿದರು. ಈ ಕಾಮೆಂಟ್‌ಗಳು ವೈರಲ್ ಆಗಿವೆ. ಈ ನಿರ್ಧಾರಕ್ಕಾಗಿ ಎಲ್ಲರೂ ಮೊನಾಲಿಸಾಳನ್ನು ಹೊಗಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರೋಸ್​​ ಡೇ ದಿನ ಗಂಡನಿಗೆ ಗುಲಾಬಿ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಮಹಿಳೆ – Kannada News | Rose Day Reel Lands Bihar Woman in Legal Trouble, FIR Registered

ಪಾಟ್ನಾ, ಫೆಬ್ರವರಿ 13: ರೋಸ್​ ಡೇ(Rose Day) ದಿನ ಗಂಡನಿಗೆ ಗುಲಾಬಿ ಕೊಟ್ಟ ಮಹಿಳೆ ವಿರುದ್ಧ ಎಫ್​ಐಆರ್ ದಾಖಲಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕೇವಲ ಪತ್ನಿ ಮಾತ್ರವಲ್ಲ ಪತಿ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಅದಕ್ಕೊಂದು ಕಾರಣವಿದೆ. ಆಕೆ ಪತಿಗೆ ಗುಲಾಬಿ ನೀಡುವ ಮೊದಲು ಗಂಡನಿಗೆ ವೈನ್ ಬಾಟಲಿಯನ್ನು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ. ಬಿಹಾರದಲ್ಲಿ ಮದ್ಯಪಾನ ನಿಷೇಧವಿರುವ ಕಾರಣ ಅವರಿಬ್ಬರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಕಾಂಚನ್ ಬ್ಯೂಟಿ ಪಾರ್ಲರ್ ಒಳಗೆ ಪಿಸ್ತೂಲ್ ಹಿಡಿದು ಪೋಸ್ ನೀಡುತ್ತಿರುವ ಪ್ರತ್ಯೇಕ ಫೋಟೋ ವಿಡಿಯೋ ಕಾಣಿಸಿಕೊಂಡಾಗ ಮತ್ತಷ್ಟು ಸಂಕಷ್ಟವಾಗಿ ಪರಿಣಮಿಸಿತ್ತು. ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಮುಂಗರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸೈಯದ್ ಇಮ್ರಾನ್ ಮಸೂದ್ ದೃಢಪಡಿಸಿದರು. ನಂತರ ಪೊಲೀಸರು ಮಹಿಳೆಯ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

ತನಿಖೆಯಲ್ಲಿ ಫೋಟೋದಲ್ಲಿರುವ ಪಿಸ್ತೂಲ್ ದೀನದಯಾಳ್ ಚೌಕ್ ನಿವಾಸಿ ವಿಶಾಲ್ ಕುಮಾರ್ ಅವರಿಗೆ ಸೇರಿದ ಪರವಾನಗಿ ಪಡೆದ ಗನ್ ಅದಾಗಿತ್ತು ಎಂದು ತಿಳಿದುಬಂದಿದೆ. ಪೊಲೀಸರು ಈಗ ಕಾಂಚನ್ ದೇವಿ ಮತ್ತು ಗನ್ ಮಾಲೀಕ ವಿಶಾಲ್ ಕುಮಾರ್ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಕಾಂಚನ್ ದೇವಿ ಎಂಬ ಮಹಿಳೆ ಈ ವೀಡಿಯೊವನ್ನು ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಸ್ವತಃ ಪೋಸ್ಟ್ ಮಾಡಿದ್ದರು. ವೀಡಿಯೊದಲ್ಲಿ, ಅವರು ತಮ್ಮ ಪತಿಗೆ ಗುಲಾಬಿಯನ್ನು ನೀಡಿ, ಅವರಿಗೆ ಒಂದು ಲೋಟ ವೈನ್ ಬಡಿಸಿ, ವೈನ್ ಬಾಟಲಿಯನ್ನು ನೀಡುತ್ತಿರುವುದನ್ನು ಕಾಣಬಹುದು.

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾದ ಈ ಕ್ಲಿಪ್ ಅನ್ನು ತೆಗೆದುಹಾಕುವ ಮೊದಲು ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದೆ. ಆದಾಗ್ಯೂ, ನಂತರ ಮಹಿಳೆ ಪಿಸ್ತೂಲ್ ಹಿಡಿದು ಭೋಜ್‌ಪುರಿ ಹಾಡಿಗೆ ಲಿಪ್ ಸಿಂಕ್ ಮಾಡುತ್ತಿರುವುದನ್ನು ತೋರಿಸುವ ಮತ್ತೊಂದು ವೀಡಿಯೊ ಕಾಣಿಸಿಕೊಂಡಿತ್ತು.

ಮತ್ತಷ್ಟು ಓದಿ: Valentine’s Week 2026: ರೋಸ್‌ ಡೇಯಂದು ನಿಮ್ಮ ಲೈಫ್‌ ಪಾರ್ಟ್ನರ್‌ಗಾಗಿ ತಯಾರಿಸಿ ಈ ಸ್ವಾದಿಷ್ಟ ಗುಲಾಬಿ ತಿನಿಸು; ಇಲ್ಲಿದೆ ರೆಸಿಪಿ

ವೀಡಿಯೊದಲ್ಲಿರುವ ವ್ಯಕ್ತಿ ಉದ್ಯಮಿಯಾಗಿದ್ದರೆ, ಅವರ ಪತ್ನಿ ಇನ್​ಫ್ಲುಯೆನ್ಸರ್ ಮತ್ತು ಬ್ಯೂಟಿ ಪಾರ್ಲರ್ ಮಾಲೀಕರಾಗಿದ್ದಾರೆ. ಈ ವೀಡಿಯೊವನ್ನು ಫೆಬ್ರವರಿ 7, ರೋಸ್ ಡೇ ರಂದು ರೆಕಾರ್ಡ್ ಮಾಡಲಾಗಿದೆ. ವೀಡಿಯೊವನ್ನು ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಕಾಂಚನ್ ಇನ್ಸ್ಟಾಗ್ರಾಮ್ನಲ್ಲಿ 2.99 ಲಕ್ಷ ಫಾಲೋವರ್ಸ್​​ ಹೊಂದಿದ್ದಾರೆ. ಕಾಂಚನ್ ವೀಡಿಯೊವನ್ನು ಮಾಡಿದ್ದು ವಿಶಾಲ್ ಅವರ ಪರವಾನಗಿ ಪಡೆದ ಗನ್​ ಇಂದ ಆಗಿದ್ದರೂ ಮೂವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಲೋಕಾಯುಕ್ತ ದಾಳಿ ವೇಳೆ ಸಿಕ್ತು ಕಂತೆ ಕಂತೆ ನೋಟಿನ ಖಜಾನೆ! – Kannada News | Lokayukta Raids in Karnataka: Cash, Gold, and Disproportionate Assets Unearthed Across Bengaluru and Other Cities

ಬೆಂಗಳೂರು, ಫೆಬ್ರವರಿ 13: ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಹಲವು ಅಕ್ರಮಗಳನ್ನು ಪತ್ತೆ ಮಾಡಿದ್ದಾರೆ. ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧ್ಯಕ್ಷಕ ಎಂಜಿನಿಯರ್ ಎಚ್.ಎಂ. ಜನಾರ್ಧನ್ ಅವರಿಗೆ ಸೇರಿದ ಆರು ಸ್ಥಳಗಳಲ್ಲಿ ರೇಡ್ ಮಾಡಲಾಗಿದೆ. ಅಲ್ಲಿ ಆದಾಯ ಮೀರಿದ ಶೇಕಡ 216ರಷ್ಟು ಆಸ್ತಿ, ಅಂದರೆ 4.42 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ.

PWD ಮುಖ್ಯ ಎಂಜಿನಿಯರ್ ಪುರುಷೋತ್ತಮ್ ಅವರ ಪದ್ಮನಾಭನಗರದ ಐಷಾರಾಮಿ ಮನೆ ಸೇರಿದಂತೆ ಬೆಂಗಳೂರಿನಲ್ಲಿ ಎರಡು ಕಡೆ ಹಾಗೂ ಮೈಸೂರಿನಲ್ಲಿ ಐದು ಕಡೆ ದಾಳಿ ನಡೆಸಲಾಗಿದೆ. ಇಲ್ಲಿ ಲಕ್ಷಾಂತರ ರೂಪಾಯಿ ನಗದು, ಚಿನ್ನಾಭರಣ, ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಸಿಕ್ಕಿವೆ. ಪುರುಷೋತ್ತಮ್ ಅವರು ಎರಡು ಶಾಲೆಗಳನ್ನು ಸಹ ನಡೆಸುತ್ತಿದ್ದಾರೆ.

ದಾವಣಗೆರೆ ಬೆಸ್ಕಾಂ ಸಿವಿಲ್ ಎಂಜಿನಿಯರ್ ಆರ್.ಎಚ್. ಅರ್ಜುನ್ ಅವರ ಶಿವಮೊಗ್ಗದ ಗೋಪಾಳದಲ್ಲಿರುವ ಮನೆಯ ಮೇಲೆ ದಾಳಿ ಮಾಡಲಾಗಿದ್ದು, ಎರಡು ನಿವೇಶನ, ಮೂರು ಮನೆ ಮತ್ತು ಎರಡು ಎಕರೆ ಕೃಷಿ ಭೂಮಿಯ ದಾಖಲೆಗಳು ಪತ್ತೆಯಾಗಿವೆ. ಇದೇ ರೀತಿ ಧಾರವಾಡ ಸರ್ವೆ ಇಲಾಖೆ ಸೂಪರ್​ವೈಸರ್ ಸೋಮಲಿಂಗಪ್ಪ ಅವರಿಗೆ ಸೇರಿದ ಭಾರತಿ ನಗರ ಬಡಾವಣೆ ಮನೆ, ಐಸ್ ಗೇಟ್ ಬಳಿಯ ಸರ್ವೆ ಕಚೇರಿ, ಹಾಗೂ ಬೆಳಗಾವಿಯ ಮುರಗೋಡದ ಮನೆ ಸೇರಿದಂತೆ ಒಟ್ಟು ನಾಲ್ಕು ಕಡೆ ರೇಡ್ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ರಾಜ್‌ಪಾಲ್ ಯಾದವ್ ಜೈಲಿಗೆ ಹೋಗ್ತಾರೆ’; ಹಿಂದೆಯೇ ಸೂಚನೆ ಕೊಟ್ಟಿದ್ದ ಪ್ರೇಮಾನಂದ ಮಹಾರಾಜ್‌ – Kannada News | Rajpal Yadav’s Crisis: Premanand Maharaj’s Viral Spiritual Advice Amidst Jail Term

ನಟ ರಾಜ್‌ಪಾಲ್ ಯಾದವ್ (Rajpal Yadav) ಕೆಲವು ವರ್ಷಗಳ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. 9 ಕೋಟಿ ರೂ. ಸಾಲ ಮರುಪಾವತಿಸಲು ವಿಫಲವಾದ ನಂತರ ಅವರು ಜೈಲಿಗೆ ಶರಣಾಗಬೇಕಾಯಿತು. ಈ ಕಷ್ಟದ ಸಮಯದಲ್ಲಿ, ಬಾಲಿವುಡ್ ಉದ್ಯಮದ ಅನೇಕ ಜನರು ಈಗ ಅವರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದಾರೆ. ಏತನ್ಮಧ್ಯೆ, ರಾಜ್‌ಪಾಲ್ ಅವರ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಸುಮಾರು ಎರಡು ತಿಂಗಳ ಹಿಂದೆ ಅವರು ವೃಂದಾವನಕ್ಕೆ ಹೋಗಿದ್ದರು. ಅಲ್ಲಿ ಅವರು ಪ್ರೇಮಾನಂದ ಮಹಾರಾಜ್ ಅವರನ್ನು ಭೇಟಿಯಾದರು. ಈ ವೀಡಿಯೊವನ್ನು ನೋಡಿದ ನೆಟ್ಟಿಗರು, ಬಹುಶಃ ಪ್ರೇಮಾನಂದ ಮಹಾರಾಜ್ ಅವರು ರಾಜ್‌ಪಾಲ್‌ಗೆ ಬರಲಿರುವ ಬಿಕ್ಕಟ್ಟನ್ನು ಈಗಾಗಲೇ ಗ್ರಹಿಸಿರಬಹುದು ಎಂದು ಹೇಳುತ್ತಿದ್ದಾರೆ. ಅದಕ್ಕಾಗಿಯೇ ಅವರು ಬಲಶಾಲಿಯಾಗಿರಲು ಮತ್ತು ಸವಾಲುಗಳನ್ನು ಎದುರಿಸಲು ಸಲಹೆ ನೀಡುತ್ತಿದ್ದರು. ಈ ಭೇಟಿಯ ಸಮಯದಲ್ಲಿ ರಾಜ್‌ಪಾಲ್ ಭಾವುಕರಾದರು.

‘ನಿಮ್ಮ ಮನಸ್ಸನ್ನು ದೇವರೊಂದಿಗೆ ಸಂಪರ್ಕದಲ್ಲಿರಿಸಿಕೊಳ್ಳುವುದು ಜೀವನದಲ್ಲಿ ಅತ್ಯಂತ ಮುಖ್ಯವಾದ ವಿಷಯ. ಏಕೆಂದರೆ ಜೀವನದಲ್ಲಿ ದುಃಖಗಳು ಮತ್ತು ತೊಂದರೆಗಳು ಬರುತ್ತಲೇ ಇರುತ್ತವೆ. ಕೆಲವೊಮ್ಮೆ ನಾವು ನಮ್ಮ ಹತ್ತಿರವಿರುವ ಜನರಿಂದ ದೂರವಾಗುತ್ತೇವೆ. ಅಂತಹ ಪರಿಸ್ಥಿತಿಯಲ್ಲಿ, ಜೀವನವು ಕಷ್ಟಕರವೆಂದು ಭಾವಿಸಲು ಪ್ರಾರಂಭಿಸುತ್ತದೆ. ಆರ್ಥಿಕ ಸಮಸ್ಯೆಗಳು, ವ್ಯವಹಾರ ಸಮಸ್ಯೆಗಳಂತಹ ಅನೇಕ ಸಮಸ್ಯೆಗಳಿವೆ. ಆ ಕಷ್ಟದ ಸಮಯದಲ್ಲಿ, ದೇವರು ಮಾತ್ರ ನಮ್ಮನ್ನು ರಕ್ಷಿಸಬಲ್ಲನು’ ಎಂದು ಹೇಳಿದ್ದರು ಸ್ವಾಮೀಜಿ.

‘ಇಂದು ಒಬ್ಬ ವ್ಯಕ್ತಿ ನಿಮ್ಮೊಂದಿಗೆ ಕೈಜೋಡಿಸಬಹುದು, ಆದರೆ ನೀವು ಸಮಸ್ಯೆಯಲ್ಲಿ ಸಿಲುಕಿದಾಗ, ಅವನು ನಿಮ್ಮನ್ನು ಬಿಟ್ಟು ಹೋಗುತ್ತಾನೆ. ಕಷ್ಟದ ಸಮಯದಲ್ಲಿ ದೇವರು ಮಾತ್ರ ನಿಮ್ಮನ್ನು ಬೆಂಬಲಿಸುತ್ತಾನೆ. ಆದ್ದರಿಂದ, ದೇವರ ಹೆಸರನ್ನು ಜಪಿಸಿ. ಪ್ರತಿಯೊಂದು ಕಷ್ಟ ಮತ್ತು ದುಃಖವನ್ನು ಎದುರಿಸಲು ಕಲಿಯಿರಿ, ಬಿಟ್ಟುಕೊಡಬೇಡಿ’ ಎಂದಿದ್ದರು.

ಇದನ್ನೂ ಓದಿ: 11 ಕೋಟಿ ಹಾಕಿ ಮಾಡಿದ ಚಿತ್ರದ ಗಳಿಕೆ ಇಷ್ಟೇನಾ? ರಾಜ್​ಪಾಲ್ ಅವನತಿಗೆ ಇದುವೇ ಕಾರಣ

‘ಪ್ರತಿಯೊಂದು ಸಮಸ್ಯೆಯಲ್ಲೂ ಧೈರ್ಯದಿಂದಿರಿ, ಬಲಶಾಲಿಯಾಗಿರಿ. ನಿರುತ್ಸಾಹಗೊಳ್ಳಬೇಡಿ. ದೇವರ ಹೆಸರನ್ನು ಜಪಿಸುತ್ತಲೇ ಇರಿ. ದೇವರು ಸಾಕಷ್ಟು ಶಕ್ತಿ ಮತ್ತು ಬೆಂಬಲವನ್ನು ನೀಡುತ್ತಾನೆ. ನಾವು ದೇವರನ್ನು ಮರೆತಿದ್ದೇವೆ, ಆದ್ದರಿಂದ ನಾವು ಇಂದು ಪಶ್ಚಾತ್ತಾಪ ಪಡುತ್ತಿದ್ದೇವೆ’ ಎಂದು ಅವರು ರಾಜ್‌ಪಾಲ್‌ಗೆ ಸಲಹೆ ನೀಡಿದ್ದರು.
ಈ ವೀಡಿಯೋಗೆ ನೆಟ್ಟಿಗರು ವಿವಿಧ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ರಾಜ್‌ಪಾಲ್‌ಗೆ ಬರಲಿರುವ ಬಿಕ್ಕಟ್ಟಿನ ಬಗ್ಗೆ ಪ್ರೇಮಾನಂದ ಮಹಾರಾಜ್‌ಗೆ ಎರಡು ತಿಂಗಳ ಮೊದಲೇ ತಿಳಿದಿತ್ತು ಎಂದು ಹಲವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:56 am, Fri, 13 February 26

Source link

ಮನೆಯ ಹಿಂದೆ ಸೆಪ್ಟಿಕ್ ಟ್ಯಾಂಕ್​​ನಲ್ಲಿ ತಲೆಬುರುಡೆ ಸಿಕ್ಕಾಗಲೇ ಪ್ರೀತಿ, ಮದುವೆ, ದ್ರೋಹದ ಕಥೆ ಬಯಲಾಗಿದ್ದು – Kannada News | Sagar Septic Tank Murder: Love, Betrayal and Prince’s Disappearance Unravels

ಪ್ರಿನ್ಸ್​, ಶೋಯೆಬ್ ಹಾಗೂ ತುಳಸಿImage Credit source: NDTV

ಸಾಗರ್, ಫೆಬ್ರವರಿ 13: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದ ಘಟನೆ ಇದು. ಆಗಸ್ಟ್​ 20ರಂದು ಪ್ರಿನ್ಸ್​ ಎಂಬುವವರು ಏಕಾಏಕಿ ನಾಪತ್ತೆ(Missing)ಯಾಗಿದ್ದರು. ಅವರು ಕಾಣೆಯಾಗಿದ್ದಾರೆಂದು ಪತ್ನಿ ತುಳಸಿ ದೂರು ನೀಡಿದ್ದರು. ಆರಂಭದಲ್ಲಿ ಪೊಲೀಸರಿಗೆ ಯಾವುದೇ ಸುಳಿವು ಸಿಗದ ಕಾರಣ ಸದ್ದಿಲ್ಲದೆ ಪ್ರಕರಣದ ವಿಚಾರಣೆ ಅಂತ್ಯ ಕಂಡಿತ್ತು. ಆದರೆ ಕುಟುಂಬದವರಿಗೆ ಮಾತ್ರ ಅನುಮಾನ ಹಾಗೇ ಮುಂದುವರೆದಿತ್ತು.

ಸೆಪ್ಟಿಕ್ ಟ್ಯಾಂಕ್​​ನಲ್ಲಿ ಸಿಕ್ಕ ತಲೆ ಬುರುಡೆ, ಮೂಳೆಗಳು ಬೇರೆಯದೇ ಕಥೆಯನ್ನು ಹೇಳಿವೆ. ಪ್ರೇಮ, ಮದುವೆ, ದ್ರೋಹದ ಕಥೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿವೆ. ಮಧ್ಯಪ್ರದೇಶದ ದಿಯೋರಿ ನಗರದಲ್ಲಿ ನಾಪತ್ತೆ ಪ್ರಕರಣ ದಾಖಲಾಗಿ ಆರು ತಿಂಗಳ ನಂತರ ಸತ್ಯವನ್ನು ಪೊಲೀಸರು ಬಯಲು ಮಾಡಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿ ಶೋಯೆಬ್​​ನನ್ನು ನರಸಿಂಗ್​ಪುರದಲ್ಲಿ ಬಂಧಿಸಲಾಯಿತು. ವಿಚಾರಣೆಯ ಸಮಯದಲ್ಲಿ ತುಳಸಲಿ ಹಾಗೂ ಶೋಯೆಬ್​ಗೆ ಮದುವೆಗೂ ಮುಂಚೆಯೇ ಸಂಬಂಧವಿತ್ತು ಎಂಬುದು ತಿಳಿದುಬಂದಿದೆ. ಪ್ರಿನ್ಸ್​ಗೆ ಮಾದಕ ದ್ರವ್ಯ ನೀಡಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಮದುವೆಯ ನಂತರವೂ ಅಕ್ರಮ ಸಂಬಂಧ ಮುಂದುವರೆದಿದೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಮನೆಯಲ್ಲಿ ಮಲಗಿದ್ದವರೂ ಇಲ್ಲ, ಜಗಳವಾಡಿ ಹೋದವರೂ ಹಿಂದಿರುಗಿಲ್ಲ, ದೆಹಲಿಯಲ್ಲಿ ಹೆಚ್ಚುತ್ತಿವೆ ಮಕ್ಕಳ ನಾಪತ್ತೆ ಪ್ರಕರಣಗಳು

ಮದುವೆಯಾದ ಒಂದು ತಿಂಗಳಿಗೆ ತುಳಸಿಯ ನಡವಳಿಕೆ ಬದಲಾಯಿತು, ಮನೆಯಲ್ಲಿ ಆಗಾಗ ಜಗಳಗಳು ನಡೆಯುತ್ತಿದ್ದವು, ಇಬ್ಬರೂ ಆಕೆಯ ಪೋಷಕರ ಮನೆಯಲ್ಲಿರಬೇಕೆಂದು ದಿಯೋರಿಗೆ ತೆರಳಿದ್ದರು. ನಂತರ ನಡೆದಿದ್ದು ಈ ಕೊಲೆ, ಶೋಯೆಬ್ ಪ್ರಿನ್ಸ್ ದೇವೋರಿಯಲ್ಲಿ ವಾಸಿಸುತ್ತಿದ್ದಾಗ ಅವನೊಂದಿಗೆ ಸ್ನೇಹ ಬೆಳೆಸಿದ್ದ ಎನ್ನಲಾಗಿದೆ. ಪದೇ ಪದೇ ಪ್ರಿನ್ಸ್​​ಗೆ ಮಾದಕ ದ್ರವ್ಯ ನೀಡುತ್ತಿದ್ದ. ಶೋಯೆಬ್ ತುಳಸಿಯನ್ನು ರಹಸ್ಯವಾಗಿ ಭೇಟಿಯಾಗುತ್ತಿದ್ದ. ಆದರೆ ಅದ್ಹೇಗೋ ಪ್ರಿನ್ಸ್​​ಗೆ ಈ ವಿಚಾರ ತಿಳಿದಾಗ ಇಬ್ಬರ ಸಂಬಂಧದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಆಗ ಉದ್ವಿಗ್ನತೆ ಹೆಚ್ಚಾಗಿತ್ತು.

ಆಗಸ್ಟ್ 20 ರಂದು ಪ್ರಿನ್ಸ್‌ಗೆ ಮಾದಕ ದ್ರವ್ಯ ನೀಡಿ ಕೊಲೆ ಮಾಡಿದ್ದಾಗಿ ಶೋಯೆಬ್ ಒಪ್ಪಿಕೊಂಡಿದ್ದಾನೆ. ಅನುಮಾನ ಬರದಂತೆ ಶವವನ್ನು ತನ್ನ ಮನೆಯ ಹಿಂದಿನ ಸೆಪ್ಟಿಕ್ ಟ್ಯಾಂಕ್‌ಗೆ ಎಸೆದು ಕಸದಿಂದ ಮುಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರು ಶೋಯೆಬ್ ಅವರನ್ನು ಅಪರಾಧ ಸ್ಥಳಕ್ಕೆ ಕರೆದೊಯ್ದು ಸೆಪ್ಟಿಕ್ ಟ್ಯಾಂಕ್ ಅನ್ನು ಅಗೆದು, ತಲೆಬುರುಡೆ ಮತ್ತು ಇತರ  ಅವಶೇಷಗಳನ್ನು ವಶಪಡಿಸಿಕೊಂಡರು. ಅವರ ಗುರುತನ್ನು ದೃಢೀಕರಿಸಲು ಅವಶೇಷಗಳನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿದೆ.

ಕೊಲೆಯ ನಂತರ, ಶೋಯೆಬ್ ತುಳಸಿ ಜೊತೆ ಗುಜರಾತ್‌ಗೆ ಪರಾರಿಯಾಗಿದ್ದ ಎನ್ನಲಾಗಿದೆ, ಅಲ್ಲಿ ಇಬ್ಬರೂ ಒಟ್ಟಿಗೆ ವಾಸಿಸುತ್ತಿದ್ದರು. ಇದು ಪ್ರಿನ್ಸ್​ ಕುಟುಂಬ ಸದಸ್ಯರಲ್ಲಿ ಅನುಮಾನ ಹುಟ್ಟುಹಾಕಿತ್ತು. ಪೊಲೀಸರಿಗೆ ದೂರು ನೀಡಿದ್ದರು. ಪ್ರಿನ್ಸ್ ನಾಪತ್ತೆ ಆಕಸ್ಮಿಕವಲ್ಲ ಎಂದು ಕುಟುಂಬ ಸದಸ್ಯರು ಯಾವಾಗಲೂ ಹೇಳುತ್ತಲೇ ಇದ್ದರು. ಇಬ್ಬರ ವಿಡಿಯೋಗಳು ವೈರಲ್ ಆದಾಗ ಪೊಲೀಸರಿಗೆ ಅನುಮಾನ ಬಂದು ಶೋಯೆಬ್​​ನನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ – Kannada News | Bengaluru temperature: Dry weather all over the state, clear sky at Bengaluru today

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ

ಬೆಂಗಳೂರು, ಫೆಬ್ರವರಿ 13: ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಶುಷ್ಕ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 16°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Daily Devotional: ಕುಂಭ ಸಂಕ್ರಮಣ ಯಾವ ರಾಶಿಗೆ ಶುಭ, ಯಾವ ರಾಶಿಗೆ ಅಶುಭ? – Kannada News | Daily Devotional: Kumbha Sankramana 2026: Auspicious and Inauspicious Effects on All Zodiac Signs

ಬೆಂಗಳೂರು, ಫೆಬ್ರವರಿ​ 13: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕುಂಭ ಸಂಕ್ರಮಣ ಯಾವ ರಾಶಿಗೆ ಶುಭ, ಯಾವ ರಾಶಿಗೆ ಅಶುಭ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ನವಗ್ರಹಗಳ ಸಂಚಾರವು ನಮ್ಮ ಜೀವನದ ಮೇಲೆ ಆಳವಾದ ಪ್ರಭಾವ ಬೀರುತ್ತದೆ. ಅದರಂತೆ, ಸೂರ್ಯ ಭಗವಾನ್‌ರು ಒಂದು ತಿಂಗಳಿಗೆ ಒಮ್ಮೆ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸುತ್ತಾರೆ. 2026 ರ ಫೆಬ್ರವರಿ 13 ರಂದು ಸಂಜೆ 4 ಗಂಟೆ 14 ನಿಮಿಷಕ್ಕೆ ಸೂರ್ಯ ಭಗವಾನ್‌ ಕುಂಭ ರಾಶಿಗೆ ಪ್ರವೇಶಿಸಿದ್ದು, ಇದನ್ನು ಕುಂಭ ಸಂಕ್ರಮಣ ಎಂದು ಕರೆಯಲಾಗುತ್ತದೆ. ಈ ಸಂಚಾರವು ಮಾರ್ಚ್ 15 ರವರೆಗೆ ಮುಂದುವರೆಯಲಿದೆ.

ಈ ಅವಧಿಯಲ್ಲಿ ಕೆಲವು ರಾಶಿಗಳಿಗೆ ಸೂರ್ಯನ ಸಂಚಾರವು ಶುಭ ಫಲಗಳನ್ನು ತರಲಿದೆ, ಇನ್ನು ಕೆಲವು ರಾಶಿಗಳಿಗೆ ಮಿಶ್ರ ಅಥವಾ ಅಶುಭ ಫಲಗಳನ್ನು ನೀಡಲಿದೆ. ಮೇಷ, ವೃಷಭ, ಮಿಥುನ, ಕನ್ಯಾ, ಧನುಸ್ಸು ಮತ್ತು ಮಕರ ರಾಶಿಗಳಿಗೆ ಈ ಸಂಕ್ರಮಣವು ಆರ್ಥಿಕವಾಗಿ, ವೃತ್ತಿ ಕ್ಷೇತ್ರದಲ್ಲಿ ಮತ್ತು ಅದೃಷ್ಟದ ದೃಷ್ಟಿಯಿಂದ ಉತ್ತಮ ಫಲಗಳನ್ನು ನೀಡಲಿದೆ. ಆದರೆ, ಕರ್ಕಾಟಕ, ಸಿಂಹ, ವೃಶ್ಚಿಕ, ಕುಂಭ ಮತ್ತು ಮೀನ ರಾಶಿಯವರು ಆರೋಗ್ಯ, ಸಂಬಂಧಗಳು ಮತ್ತು ಇತರೆ ವಿಷಯಗಳಲ್ಲಿ ಜಾಗರೂಕರಾಗಿರಬೇಕಾಗುತ್ತದೆ. ತುಲಾ ರಾಶಿಯವರಿಗೆ ಮಿಶ್ರ ಫಲಗಳು ದೊರೆಯಲಿವೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

ಶೇ.85ರಷ್ಟು ದೃಷ್ಟಿ ಕಳೆದುಕೊಂಡಿದ್ದಾರಂತೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್, ಸುಪ್ರೀಂಕೋರ್ಟ್​​ನಲ್ಲಿ ಕಣ್ಣೀರಿಟ್ಟ ಸಹೋದರಿ – Kannada News | Imran Khan Losing Eyesight in Adiala Jail: Sister Pleads in Pakistan Supreme Court

ಇಸ್ಲಾಮಾಬಾದ್, ಫೆಬ್ರವರಿ 13: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಆರೋಗ್ಯದ ಬಗ್ಗೆ ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ. ಅವರನ್ನು ಜೈಲಿನಲ್ಲಿ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ, ಅದರ ಪರಿಣಾಮವಾಗಿ ಶೇ.85ರಷ್ಟು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಸುಪ್ರೀಂಕೋರ್ಟ್​ ಎದುರು ಇಮ್ರಾನ್ ಸಹೋದರಿ ಕಣ್ಣೀರಿಟ್ಟಿದ್ದಾರೆ. ಪಾಕಿಸ್ತಾನದ ಸುಪ್ರೀಂ ಕೋರ್ಟ್ ತಕ್ಷಣದ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ವರದಿಯಲ್ಲಿ ಇಮ್ರಾನ್ ಖಾನ್ ಅವರ ಬಲಗಣ್ಣಿನ ಸುಮಾರು ಶೇ. 85 ರಷ್ಟು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಮುಖ್ಯ ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ ಮತ್ತು ನ್ಯಾಯಮೂರ್ತಿ ಶಾಹಿದ್ ಬಿಲಾಲ್ ಹಸನ್ ಅವರನ್ನೊಳಗೊಂಡ ಇಬ್ಬರು ಸದಸ್ಯರ ಪೀಠದ ಮಂದೆ ಪ್ರಕರಣದ ವಿಚಾರಣೆ ನಡೆಯಿತು. ವಿಚಾರಣೆಯ ಸಮಯದಲ್ಲಿ ಫೆಬ್ರವರಿ 16ರ ಮೊದಲು ಇಮ್ರಾನ್ ಖಾನ್ ಅವರ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸುವಂತೆ, ಕಣ್ಣಿನ ತಜ್ಞರಿಂದ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿತು.

ನ್ಯಾಯಾಲಯದಿಂದ ನೇಮಿಸಲ್ಪಟ್ಟ ಅಮಿಕಸ್ ಕ್ಯೂರಿ ಬ್ಯಾರಿಸ್ಟರ್ ಸಲ್ಮಾನ್ ಸಫ್ದಾರ್, ರಾವಲ್ಪಿಂಡಿ ಅಡಿಯಾಲ ಜೈಲಿನಲ್ಲಿ ಇಮ್ರಾನ್ ಖಾನ್ ಅವರನ್ನು ಭೇಟಿಯಾದ ನಂತರ ವಿವರವಾದ ವರದಿಯನ್ನು ಮಂಡಿಸಿದ್ದಾರೆ. ವರದಿಯ ಪ್ರಕಾರ, ಇಮ್ರಾನ್ ಖಾನ್ ಅವರ ಬಲಗಣ್ಣಿನಲ್ಲಿ ಈಗ ಕೇವಲ 15 ಪ್ರತಿಶತದಷ್ಟು ದೃಷ್ಟಿ ಉಳಿದಿದೆ.

ಮತ್ತಷ್ಟು ಓದಿ: ಇಮ್ರಾನ್ ಖಾನ್ ಎಲ್ಲಿದ್ದಾರೆ? ಮಾಜಿ ಪ್ರಧಾನಿ ಸಾವಿನ ಬಗ್ಗೆ ಕೊನೆಗೂ ಮೌನ ಮುರಿದ ಪಾಕಿಸ್ತಾನ

ಅಕ್ಟೋಬರ್ 2025ರವರೆಗೆ ಇಮ್ರಾನ್ ಖಾನ್ ಅವರ ಎರಡೂ ಕಣ್ಣುಗಳ ದೃಷ್ಟಿ ಸಾಮಾನ್ಯವಾಗಿತ್ತು ಎಂದು ವೈದ್ಯಕೀಯ ವರದಿಗಳು ಹೇಳುತ್ತವೆ. ಅದರ ನಂತರ ಅವರ ದೃಷ್ಟಿ ಮಸುಕಾಗುತ್ತಿದೆ. ಇಮ್ರಾನ್ ಖಾನ್ ಜೈಲು ಆಡಳಿತಕ್ಕೆ ಹಲವಾರು ಬಾರು ದೂರು ನೀಡಿದ್ದರು. ಆದರೆ ಇದ್ದಕ್ಕಿದ್ದಂತೆ ಬಲಗಣ್ಣ ದೃಷ್ಟಿ ಹೋಗುತ್ತಾ ಬಂದಿದೆ ಎಂದು ತಿಳಿಸಿದ್ದಾರೆ.

ಪಾಕಿಸ್ತಾನದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೇತ್ರಜ್ಞರು ಕಣ್ಣಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಆಗಿರುವುದನ್ನು ದೃಢಪಡಿಸಿದ್ದಾರೆ.ಇದರಿಂದಾಗಿ ಗಂಭೀರ ಹಾನಿಯಾಗಿದೆ. ಜನವರಿ 24ರಂದಿ ಪಿಮ್ಸ್​ ಆಸ್ಪತ್ರೆಯಲ್ಲಿ ನಡೆಸಲಾದ ವೈದ್ಯಕೀಯ ವಿಧಾನಗಳ ಮರುಪರೀಕ್ಷೆ ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಯಾವುದೇ ಕೈದಿಯ ಆರೋಗ್ಯಕ್ಕೆ ರಾಜ್ಯವು ಜವಾಬ್ದಾರನಾಗಿರುತ್ತದೆ, ಕೈದಿಯ ಸುರಕ್ಷತೆ ಖಚಿತಪಡಿಸಿಕೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದಾರೆ.

ಇಮ್ರಾನ್ ಖಾನ್ ಪುತ್ರರಾದ ಖಾಸಿಮ್ ಮತ್ತು ಸುಲೇಮಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಲು ಅವಕಾಶ ನೀಡುವಂತೆ ಸುಪ್ರೀಂಕೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತು. ವಿಚಾರಣೆಯ ನಂತರ ನ್ಯಾಯಾಲಯದ ಆವರಣದ ಹೊರಗೆ ಭಾವನಾತ್ಮಕ ವಾತಾವರಣ ಸೃಷ್ಟಿಯಾಗಿತ್ತು. ಇಮ್ರಾನ್ ಖಾನ್ ಸಹೋದರಿ ಅಲೀಮಾ ಖಾನ್ ಕಣ್ಣೀರು ಹಾಕಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Horoscope Today 13 February​: ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 13, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಏಕಾದಶಿ, ಮೂಲಾ ನಕ್ಷತ್ರ, ವಜ್ರ ಯೋಗ, ಬಾಲಕ ವರ್ಣ ಇರುತ್ತದೆ. ರಾಹುಕಾಲವು ಬೆಳಗ್ಗೆ 11:05 ರಿಂದ ಮಧ್ಯಾಹ್ನ 12:33 ರವರೆಗೆ ಇರುತ್ತದೆ. ಸಂಕಲ್ಪ ಕಾಲವು ಮಧ್ಯಾಹ್ನ 12:34 ರಿಂದ ಮಧ್ಯಾಹ್ನ 2:01 ರವರೆಗೆ ಇರುತ್ತದೆ.

ಇಂದು ಕುಂಭ ಸಂಕ್ರಮಣದ ವಿಶೇಷ ದಿನವಾಗಿದ್ದು, ಸೂರ್ಯ ಭಗವಾನ್ ಬೆಳಗಿನ ಜಾವ 4:14 ಕ್ಕೆ ಕುಂಭ ರಾಶಿಗೆ ಪ್ರವೇಶ ಮಾಡುತ್ತಾರೆ. ಇದು ಶನಿಯ ಮನೆ ಆದರೂ ಮೂಲ ತ್ರಿಕೋನದ ಮನೆಯಾಗಿದೆ. ಅಲ್ಲದೆ, ಇಂದಿನ ದಿನ ಸರ್ವತ್ರ ವಿಜಯದ ಏಕಾದಶಿಯಾಗಿದ್ದು, ಸೌಕೂರು ದುರ್ಗಾ ಪರಮೇಶ್ವರಿ ರಥೋತ್ಸವವೂ ನಡೆಯುತ್ತದೆ. ಸೂರ್ಯ ಸಂಕ್ರಮಣದ ದಿನ ಸೂರ್ಯ ಭಗವಾನರ ದರ್ಶನ, ಅಷ್ಟೋತ್ತರ, ಸ್ತೋತ್ರ, ಮಂತ್ರ, ಆದಿತ್ಯ ಹೃದಯ ಪಠಿಸುವುದು ಶ್ರೇಷ್ಠವೆಂದು ಗುರೂಜಿ ತಿಳಿಸಿದ್ದಾರೆ.

 

 

 

Source link

Exit mobile version