‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾಗೆ ಲೀಕ್ ಕಾಟ; ವಿಡಿಯೋ ವೈರಲ್ – Kannada News | Rajinikanth Jailer 2 Leaked Video goes Viral Sun Pictures warns fans

ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಜೈಲರ್ 2’ (Jailer 2) ಚಿತ್ರದ ಶೂಟಿಂಗ್ ಸೆಟ್‌ನ ವಿಡಿಯೋವೊಂದು ಲೀಕ್ ಆಗಿದೆ. ಇದರಿಂದ ಚಿತ್ರತಂಡಕ್ಕೆ ದೊಡ್ಡ ತಲೆನೋವು ಶುರವಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಿರ್ಮಾಣ ಸಂಸ್ಥೆಯಾದ ‘ಸನ್ ಪಿಕ್ಚರ್ಸ್’ (Sun Pictures) ಪ್ರತಿಕ್ರಿಯೆ ನೀಡಿದೆ. ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

‘ಜೈಲರ್ 2’ ಸಿನಿಮಾದ ಸೆಟ್‌ನಲ್ಲಿ ಚಿತ್ರೀಕರಿಸಲಾದ ಸಣ್ಣ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ‘ಸನ್ ಪಿಕ್ಚರ್ಸ್’ ವಕ್ತಾರರು, ‘ನಮ್ಮ ಆ್ಯಂಟಿ ಪೈರಸಿ ತಂಡವು ಪರಿಸ್ಥಿತಿಯನ್ನು ಗಮನಿಸುತ್ತಿದೆ. ಲೀಕ್ ಆಗಿರುವ ವಿಡಿಯೋಗಳನ್ನು ತೆಗೆದುಹಾಕುವ ಕೆಲಸ ನಡೆಯುತ್ತಿದೆ. ಈ ವಿಡಿಯೋಗಳನ್ನು ಹಂಚಿಕೊಳ್ಳುವ ಅಥವಾ ಪ್ರಚಾರ ಮಾಡುವ ಸಾಮಾಜಿಕ ಜಾಲತಾಣಗಳ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ವಿಶೇಷವಾಗಿ ಅಭಿಮಾನಿಗಳಿಗೆ ಮತ್ತು ಮಾಧ್ಯಮಗಳಿಗೆ ಕೂಡ ಎಚ್ಚರಿಕೆ ನೀಡಿರುವ ಸಂಸ್ಥೆಯು, ‘ಈ ವಿಡಿಯೋವನ್ನು ಹಂಚಿಕೊಳ್ಳಬೇಡಿ ಅಥವಾ ಮರುಪೋಸ್ಟ್ ಮಾಡಬೇಡಿ. ಇದರಿಂದ ನಿಮ್ಮ ಖಾತೆಗಳು ಸಸ್ಪೆಂಡ್ ಆಗಬಹುದು ಅಥವಾ ನಿರ್ಬಂಧಕ್ಕೆ ಒಳಗಾಗಬಹುದು. ಒಂದು ವೇಳೆ ಖಾತೆ ಸಸ್ಪೆಂಡ್ ಆದರೆ ಅದಕ್ಕೆ ನಿರ್ಮಾಣ ಸಂಸ್ಥೆ ಜವಾಬ್ದಾರಿಯಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ.

ಏಪ್ರಿಲ್ 9ರಂದು ನಟ ದಳಪತಿ ವಿಜಯ್ ಅವರ ‘ಜನ ನಾಯಗನ್’ ಚಿತ್ರದ ಎಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು ಈಗಾಗಲೇ 9 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬರು ಬೇರೆ ಸಿನಿಮಾದ ಫ್ರೀಲಾನ್ಸ್ ಅಸಿಸ್ಟೆಂಟ್ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ‘ಜೈಲರ್ 2’ ಸಿನಿಮಾದಲ್ಲಿ ಪವನ್ ಕಲ್ಯಾಣ್? ಶಾರುಖ್ ಮಾಡಬೇಕಿದ್ದ ಪಾತ್ರ ಈಗ ಪವರ್ ಸ್ಟಾರ್ ಪಾಲು

ತಮಿಳು ಚಿತ್ರರಂಗಕ್ಕೆ ಪದೇ ಪದೇ ಲೀಕ್ ಕಾಟ ಎದುರಾಗುತ್ತಿದೆ. ದೊಡ್ಡ ದೊಡ್ಡ ಪ್ರೊಡಕ್ಷನ್ ಕಂಪನಿಗಳನ್ನೇ ಕಿಡಿಗೇಡಿಗಳು ಟಾರ್ಗೆಟ್ ಮಾಡುತ್ತಿದ್ದಾರೆ. ‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾದ ಶೂಟಿಂಗ್ ದೃಶ್ಯವನ್ನು ಸೋರಿಕೆ ಮಾಡಲಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಚಿತ್ರತಂಡಗಳಿಗೆ ತೊಂದರೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಿನಲ್ಲಿ ರಣ ಬಸಿಲು: ಆರೋಗ್ಯ ಇಲಾಖೆಯ ಮಾರ್ಗಸೂಚಿ, ಗರ್ಭಿಣಿಯರು, ಮಕ್ಕಳಿಗೆ ಎಚ್ಚರಿಕೆ – Kannada News | Bengaluru Heatwave: Health Advisory for Rising Temperatures and Dehydration Risks

ಪ್ರಾತಿನಿಧಿಕ ಚಿತ್ರImage Credit source: indianexpress

ಬೆಂಗಳೂರ, ಏಪ್ರಿಲ್​ 17: ಕೂಲ್ ಸಿಟಿ ಎಂದು ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು (bangaluru) ಸದ್ಯ ಹಾಟ್ ಸಿಟಿಯಾಗಿ (Heatwave) ಬದಲಾಗಿದೆ. ಸೆಕೆ ಜೊತೆಗೆ ಏರಿಕೆಯಾಗುತ್ತಿರುವ ತಾಪಮಾನಕ್ಕೆ ಸಿಟಿ ಜನ ಶಾಪ್ ಹಾಕುವುದಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಗರ್ಭಿಣಿಯರು, ಮಕ್ಕಳ ಬಗ್ಗೆ ಎಚ್ಚರ 

ಬೆಂಗಳೂರಿನಲ್ಲಿ ಇಂದು 36ರ ಗರಿಷ್ಠ ತಾಪಮಾನ ದಾಖಲಾಗಿದೆ. ಕ್ಷಣಕ್ಷಣಕ್ಕೂ ಏರಿಕೆ ಆಗುತ್ತಿರುವ ರಾಜಧಾನಿಯ ವಾತಾವರಣ ಬೆಂಗಳೂರಿಗರನ್ನ ಹೈರಾಣಾಗಿಸಿದೆ. ಮುಂಜಾನೆ ಸೂರ್ಯನ ಉದಯವಾಗುತ್ತಿದ್ದಂತೆ ಬಿರುಬಿಸಿಲು, ರಾತ್ರಿ ಆದರೆ ಬಿಸಿ ಗಾಳಿ, ಈ ವರ್ಷದ ತಾಪಮಾನ ಹಾಗೂ ಸೆಕೆಯಿಂದ ಜನರು ಕಂಗಾಲಾಗಿದ್ದರೆ ಗರ್ಭಿಣಿಯರು, ವೃದ್ಧರು, ಮಕ್ಕಳ ಬಗ್ಗೆ ವೈದ್ಯರು ತುಸು ಎಚ್ಚರ ಎನ್ನುತ್ತಿದ್ದಾರೆ.

ಇದನ್ನೂ ಓದಿ: ಬಿಸಿಲ ಝಳದಿಂದ ತತ್ತರಿಸಿದ ಜನತೆ: ಇನ್ನೂ 3 ದಿನ ಉಷ್ಣ ಅಲೆ, ಬೆಂಗಳೂರಿಗೂ ತಟ್ಟಲಿದೆ ತಾಪಮಾನ ಏರಿಕೆ ಬಿಸಿ

ಕೂಲ್ ಕೂಲ್ ಸಿಟಿಗೆ ಈಗ ವೆದರ್ ಟ್ರಬಲ್ ಶುರುವಾಗಿದೆ. ಬಿಸಿಲಿನ ಎಫೆಕ್ಟ್ ಜನರ ಆರೋಗ್ಯಕ್ಕೆ ಸಂಕಷ್ಟ ತರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರಿಗೆ ವೆದರ್ ತೊಂದರೆ ಕೊಡುತ್ತಿದೆ. ಹೀಗಾಗಿ ಸಿಟಿಯ ಆಸ್ಪತ್ರೆಗಳಲ್ಲಿ ನಿತ್ರಾಣ, ನಿರ್ಜಲೀಕರಣ , ಚರ್ಮದಲ್ಲಿ ಅಲರ್ಜಿ ಹಾಗೂ ಅಜೀರ್ಣ ಸೇರಿದಂತೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿ ಏನು?

ಇನ್ನು ಆರೋಗ್ಯ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿ ನೀಡಲಾಗಿದೆ. ತಾಪಮಾನ ಇಳಿಕೆಯವರೆಗೂ ಅಂದರೆ 11 ರಿಂದ 4 ಗಂಟೆ ವರೆಗೆ ಹೆಚ್ಚು ಬಿಸಿಲಿಗೆ ಮೈ ಒಡ್ಡದೆ ಇರುವಂತೆ ಸಲಹೆ ನೀಡಲಾಗಿದೆ. ಇನ್ನು ಹೈ ಬಿಪಿ, ಹೃದಯ ಸಂಬಂಧಿ ಖಾಯಿಲೆ ಇರುವವರು ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಎಚ್ಚರಿಕೆ ನೀಡಲಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಿಷ್ಟು

ಬಿಸಿ ಗಾಳಿ ಬೀಸುವ ಪ್ರದೇಶಗಳ ಬಗ್ಗೆ ಗಮನ ಹರಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ ಇದೆ. ಈ ತಿಂಗಳು ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಸೂಕ್ತ‌ ಎಚ್ಚರಿಕೆ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇದನ್ನೂ ಓದಿ: ಬಿಸಿಲಿನ ಬೇಗೆಗೆ ಬೆಂದ ಕರ್ನಾಟಕ: ಬೆಂಗಳೂರು ಸೇರಿ ವಿವಿಧೆಡೆ ಹೀಟ್‌ವೇವ್ ಅಲರ್ಟ್

ತಾಪಮಾನ ಏರಿಕೆಯಿಂದ ನಿರ್ಜಲೀಕರಣ ಹಾಗೂ ಉಸಿರಾಟದ ಸಮಸ್ಯೆ ಎದುರಾಗುವ ಸಮಸ್ಯೆ ಇದ್ದು, ದೇಹವನ್ನು ಹೈಡ್ರೇಟ್ ಆಗಿ ಇಟ್ಟುಕೊಳ್ಳುವಂತೆ ತಿಳಿಸಲಾಗಿದೆ. ಹೀಗಾಗಿ‌ ಸಿಲಿಕಾ‌ನ್ ಸಿಟಿ ಜನರು ದೇಹದ ತಾಪಮಾನವನ್ನ ಚೆನ್ನಾಗಿ ಇಟ್ಟುಕೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದಿದ್ದಕ್ಕೆ ಸಂಸತ್ ಆವರಣದಲ್ಲಿ ಎನ್​ಡಿಎ ನಾಯಕರ ಪ್ರತಿಭಟನೆ – Kannada News | NDA leaders protest in Parliament premises as the womens reservation bill fails to pass in Lok Sabha

ನವದೆಹಲಿ, ಏಪ್ರಿಲ್ 17: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ (Women’s Reservation) ನೀಡುವ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗದ ಕಾರಣದಿಂದಾಗಿ ಸಂಸತ್ತಿನ ಆವರಣದಲ್ಲಿ ಎನ್‌ಡಿಎ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಇಂದು ಲೋಕಸಭೆಯ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲ. 298 ಸದಸ್ಯರು ಈ ಮಸೂದೆಯ ಪರವಾಗಿ ಮತ್ತು 230 ಸದಸ್ಯರು ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಈ ಮಸೂದೆಗೆ ಅಗತ್ಯವಿರುವ 3ನೇ 2ರಷ್ಟು ಬಹುಮತವನ್ನು ಪಡೆಯಲು ಸಾಧ್ಯವಾಗಲಿಲ್ಲ. ಇದರಿಂದ ಈ ಮಸೂದೆ ಸೋಲನ್ನು ಅನುಭವಿಸಿತು. ಹೀಗಾಗಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆ 2026, ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆಯನ್ನು ಕೂಡ ಕೈಬಿಡಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ದೇವರು ಕೈಗಳನ್ನು ಕೊಟ್ಟಿಲ್ಲ ಎಂಬ ವಿಷಾದವಿಲ್ಲ, ಆಡಲು ಜತೆಗಾರರಿಲ್ಲ ಎಂಬ ಬೇಸರವಿಲ್ಲ, ಮುಖದಲ್ಲೊಂದು ಮಂದಹಾಸ

ಜಗತ್ತು ಎಲ್ಲರಿಗೂ ಒಂದೇ ರೀತಿ ಇರುವುದಿಲ್ಲ. ಕೆಲವರಿಗೆ ಎಲ್ಲವೂ ಸುಲಭವಾಗಿ ಸಿಕ್ಕರೆ, ಇನ್ನು ಕೆಲವರಿಗೆ ಒಂದು ಸಾಮಾನ್ಯ ಕ್ಷಣವೂ ಒಂದು ದೊಡ್ಡ ಕನಸಾಗಿರುತ್ತದೆ. ಇತ್ತೀಚೆಗೆ ಕಂಡುಬಂದ ಈ ದೃಶ್ಯವು ನಮ್ಮನ್ನು ಸ್ತಬ್ಧಗೊಳಿಸುತ್ತದೆ. ಅವಳೊಬ್ಬಳು ಪುಟ್ಟ ಹುಡುಗಿ. ಹುಟ್ಟುತ್ತಲೇ ಆಕೆಗೆ ಕೈಗಳಿರಲಿಲ್ಲ, ಅಂಗಳದಲ್ಲಿ ಅವಳ ವಯಸ್ಸಿನ ಇತರ ಮಕ್ಕಳು ಓಡುತ್ತಾ, ಆಟವಾಡುತ್ತಾ, ಒಬ್ಬರನ್ನೊಬ್ಬರು ಕೈಹಿಡಿದು ಎಳೆಯುತ್ತಾ ಸಂಭ್ರಮಿಸುತ್ತಿದ್ದರು.

ಆದರೆ ಈ ಮಗು? ಒಂದು ಮೂಲೆಯಲ್ಲಿ ಸದ್ದಿಲ್ಲದೆ ಕುಳಿತು ಸಂತೋಷದಿಂದಲೇ ನೋಡುತ್ತಿದ್ದಳು. ಜೀವನದ ಬಗ್ಗೆ ಯಾವುದೇ ವಿಷಾದವಿರಲಿಲ್ಲ. ಅವಳ ಮುಖದಲ್ಲಿ ದ್ವೇಷವಿರಲಿಲ್ಲ, ಅಸೂಯೆ ಇರಲಿಲ್ಲ. ಬದಲಿಗೆ, ಒಂದು ಮಂದಹಾಸವಿತ್ತು. ಆದರೆ ಆ ನಗುವಿನ ಹಿಂದೆ ಒಂದು ಭಾರವಾದ ಮೌನವಿತ್ತು. ಅವಳ ಕಣ್ಣುಗಳು ತುಂಬಿ ಬಂದಿದ್ದವು, ಆ ಕಣ್ಣುಗಳು ಏನೋ ಹೇಳಲು ಪ್ರಯತ್ನಿಸುತ್ತಿದ್ದವು, ಆದರೆ ನಮ್ಮ ವೇಗದ ಬದುಕಿನಲ್ಲಿ ಯಾರಿಗೂ ಅದು ಅರ್ಥವಾಗುತ್ತಿರಲಿಲ್ಲ. ಜೀವನ ಕೆಲವೊಮ್ಮೆ ಕಷ್ಟಗಳು ಬರಬಹುದು, ಆದರೆ ಅಂತಹ ಸಂದರ್ಭದಲ್ಲೂ ಈ ಪುಟ್ಟ ಹುಡುಗಿಯಂತೆ ನಗುನಗುತ್ತಾ ಬದುಕನ್ನು ಎದುರಿಸುವುದು ನಿಜವಾದ ಶೌರ್ಯ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಯಾದಗಿರಿ: ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ – Kannada News | Yadagiri Car Bus Collision: Six Burnt Alive in Tragic Accident; SP Provides Details

ಯಾದಗಿರಿ, ಏಪ್ರಿಲ್​ 17: ಕಾರು ಮತ್ತು ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 6 ಜನ ಸಜೀವದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಬಳಿ ನಡೆದಿದೆ. ಘಟನೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್​ಪಿ ಪೃಥ್ವಿಕ್ ಶಂಕರ್​​, ಕಾರಿನಲ್ಲಿ ಒಂದೇ ಕುಟುಂಬದ ಎಂಟು ಜನ ಪ್ರಯಾಣಿಸುತ್ತಿದ್ದರು. ಇದರಲ್ಲಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದ ಎಲ್ಲರೂ ರಾಯಚೂರು ಜಿಲ್ಲೆಯ ಶಿರವಾರ್ ಪಟ್ಟಣ ನಿವಾಸಿಗಳು. ಸುರಪುರ ಪಟ್ಟಣದ ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ಹೋಗುವಾಗ ಕಾರು ಓವರ್ ಟೆಕ್ ಮಾಡಲು ಹೋದಾಗ ಘಟನೆ ಸಂಭವಿಸಿದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಮದುವೆ ಆಗ್ತಾರಾ ‘ಹೃದಯಂ’ ಜೋಡಿ ಪ್ರಣವ್, ಕಲ್ಯಾಣಿ? ಸ್ಪಷ್ಟನೆ ನೀಡಿದ ತಾಯಿ – Kannada News | Lissy Lakshmi slams Kalyani Priyadarshan and Pranav Mohanlal wedding rumours

ಸೂಪರ್ ಹಿಟ್ ‘ಹೃದಯಂ’ ಸಿನಿಮಾದಲ್ಲಿ ನಟಿಸಿದ ಬಳಿಕ ಪ್ರಣವ್ ಮೋಹನ್‌ಲಾಲ್ ಮತ್ತು ಕಲ್ಯಾಣಿ ಪ್ರಿಯದರ್ಶನ್ (Kalyani Priyadarshan) ಬಗ್ಗೆ ವದಂತಿಗಳು ಜಾಸ್ತಿ ಆದವು. ನಿಜಜೀವನದಲ್ಲೂ ಅವರಿಬ್ಬರು ಜೋಡಿಯಾಗಬೇಕು ಎಂಬುದು ಅಭಿಮಾನಿಗಳ ಆಸೆ. ಕಲ್ಯಾಣಿ ಮತ್ತು ಪ್ರಣವ್ (Pranav Mohanlal) ನಡುವಿನ ಸಂಬಂಧ ಯಾವ ರೀತಿ ಇದೆ ಎಂಬ ಬಗ್ಗೆ ಗಾಸಿಪ್ ಮಂದಿ ಹಲವು ರೀತಿಯ ಕಥೆ ಕಟ್ಟಿದ್ದಾರೆ. ಆದರೆ ಆ ಎಲ್ಲ ಅಂತೆ-ಕಂತೆಗಳಿಗೆ ಕಲ್ಯಾಣಿ ತಾಯಿ ಲಿಸ್ಸಿ ಲಕ್ಷ್ಮಿ ಅವರು ತೆರೆ ಎಳೆದಿದ್ದಾರೆ.

ಇತ್ತೀಚೆಗೆ ಮಲಯಾಳಂ ಹೊಸ ವರ್ಷವಾದ ವಿಷು ಹಬ್ಬದ ಪ್ರಯುಕ್ತ ಲಿಸ್ಸಿ ಲಕ್ಷ್ಮಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಶುಭಾಶಯ ಕೋರಿ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ಪೋಸ್ಟ್‌ಗೆ ಅಭಿಮಾನಿಯೊಬ್ಬರು, ‘ಕಲ್ಯಾಣಿ ಮತ್ತು ಪ್ರಣವ್ ಮದುವೆಯ ನಿರೀಕ್ಷೆಯಲ್ಲಿ..’ ಎಂದು ಕಮೆಂಟ್ ಮಾಡಿದ್ದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಲಿಸ್ಸಿ, ‘ಇದು ಸುಳ್ಳು ಸುದ್ದಿ’ ಕಮೆಂಟ್ ಮಾಡುವ ಮೂಲಕ ಎಲ್ಲ ವದಂತಿಗಳಿಗೆ ಅಂತ್ಯ ಹಾಡಿದ್ದಾರೆ.

ಕಲ್ಯಾಣಿ ಮತ್ತು ಪ್ರಣವ್ ಬಾಲ್ಯದ ಸ್ನೇಹಿತರು. ಚಿತ್ರರಂಗಕ್ಕೆ ಬರುವ ಮೊದಲಿನಿಂದಲೂ ಇಬ್ಬರ ಕುಟುಂಬಗಳ ನಡುವೆ ಉತ್ತಮ ಸಂಬಂಧವಿದೆ. ಕಲ್ಯಾಣಿ ಅವರು ಪ್ರಣವ್ ಅವರನ್ನು ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಾರೆ. ಅವರಿಬ್ಬರ ನಡುವೆ ಒಡಹುಟ್ಟಿದವರ ರೀತಿ ಬಾಂಧವ್ಯ ಇದೆ. ಆ ಬಗ್ಗೆ ಕಲ್ಯಾಣಿ ಪ್ರಿಯದರ್ಶನ್ ಅವರು ಈ ಮೊದಲು ಕೂಡ ಹೇಳಿದ್ದರು.

ತಮ್ಮ ಸಂಬಂಧದ ಬಗ್ಗೆ ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಲ್ಯಾಣಿ, ‘ನನ್ನ ಸ್ವಂತ ಸಹೋದರನಿಗಿಂತ ಅಪ್ಪು ಜೊತೆಗೇ ನನ್ನ ಫೋಟೋಗಳು ಹೆಚ್ಚಿವೆ. ನಮ್ಮದು ಒಡಹುಟ್ಟಿದವರ ರೀತಿಯ ಬಾಂಧವ್ಯ. ಚೆನ್ನೈನಲ್ಲಿ ನನ್ನ ಸ್ನೇಹಿತರಿಗೆ ನಾನು ಆತನನ್ನು ಕಸಿನ್ ಎಂದೇ ಪರಿಚಯಿಸುತ್ತಿದ್ದೆ’ ಎಂದು ಹೇಳಿದ್ದರು. ಆದರೂ ಜನರು ಗಾಸಿಪ್ ಮಾಡೋದು ನಿಲ್ಲಿಸಿಲ್ಲ.

ಇದನ್ನೂ ಓದಿ: ಮೋಹನ್​ಲಾಲ್ ಪುತ್ರ ಪ್ರಣವ್ ಜೀವನಕ್ಕೆ ವಿದೇಶಿ ಮಹಿಳೆ ಎಂಟ್ರಿ

‘ಹೃದಯಂ’ ಸಿನಿಮಾದಲ್ಲಿ ಕಲ್ಯಾಣಿ ಮತ್ತು ಪ್ರಣವ್ ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿ ನೋಡಿ ಫಿದಾ ಆಗಿದ್ದ ಅಭಿಮಾನಿಗಳು, ಇವರು ನಿಜ ಜೀವನದಲ್ಲೂ ಒಂದಾಗಲಿ ಎಂದು ಹಾರೈಸುತ್ತಿದ್ದರು. ಆದರೆ ಲಿಸ್ಸಿ ಅವರ ಈ ಸ್ಪಷ್ಟನೆಯಿಂದ ಪ್ರಣವ್ ಮತ್ತು ಕಲ್ಯಾಣಿ ಕೇವಲ ಆತ್ಮೀಯ ಸ್ನೇಹಿತರು ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಕೇವಲ ಈ 4 ಕ್ರಮಗಳನ್ನು ಅನುಸರಿಸಿ ಸಾಕು! – Kannada News | Lower Your Cancer Risk: 4 Science Backed Daily Habits

Lower Your Cancer Risk: 5 Science-Backed Daily HabitsImage Credit source: Getty Images

ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ. ಇದು ಗಂಭೀರ ಕಾಯಿಲೆಯಾದರೂ, ಸರಿಯಾದ ಜೀವನಶೈಲಿ ಮತ್ತು ಆಹಾರ ಪದ್ಧತಿಗಳನ್ನು ಅನುಸರಿಸುವ ಮೂಲಕ ಇದರ ಅಪಾಯವನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಹೇಳುತ್ತಾರೆ. ಡಾ. ರೋಹಿತ್ ಕಪೂರ್ ಅವರ ಪ್ರಕಾರ, ಜೀನ್ಸ್ ಸಂಬಂಧಿತ ಕೆಲವು ಪ್ರಕರಣಗಳನ್ನು ಹೊರತುಪಡಿಸಿದರೆ, ಹೆಚ್ಚಿನ ಕ್ಯಾನ್ಸರ್ ಪ್ರಕರಣಗಳು ನಮ್ಮ ದಿನನಿತ್ಯದ ಅಭ್ಯಾಸಗಳು ಮತ್ತು ಆಹಾರ ಪದ್ಧತಿಗಳೊಂದಿಗೆ ಸಂಬಂಧ ಹೊಂದಿವೆ. ಆದ್ದರಿಂದ ಜೀವನಶೈಲಿಯಲ್ಲಿ ಬದಲಾವಣೆ ತರುವುದು ಅತ್ಯಂತ ಮುಖ್ಯ ಎನ್ನುತ್ತಾರೆ. ಹಾಗಾದರೆ ಯಾವ ರೀತಿಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಆರೋಗ್ಯಕರ ಆಹಾರ ಸೇವನೆ ಮಾಡಿ

ಹಸಿರು ತರಕಾರಿ, ಹಣ್ಣು ಮತ್ತು ಪೋಷಕಾಂಶಯುಕ್ತ ಆಹಾರಗಳನ್ನು ಸೇವಿಸುವುದು ಬಹಳ ಮುಖ್ಯ. ಕಿತ್ತಳೆ, ಮಾವಿನ ಹಣ್ಣುಗಳಂತಹ ಸಿಟ್ರಸ್ ಹಣ್ಣುಗಳು ಮತ್ತು ಡ್ರೈ ಫ್ರೂಟ್ಸ್‌ಗಳನ್ನು ಆಹಾರದಲ್ಲಿ ಸೇರಿಸುವುದು ಫ್ರೀ ರ್ಯಾಡಿಕಲ್‌ಗಳಿಂದ ರಕ್ಷಿಸುತ್ತದೆ. ಫಾಸ್ಟ್ ಫುಡ್ ಮತ್ತು ಹೆಚ್ಚು ಮಸಾಲೆ ಬಳಕೆಯನ್ನು ತಪ್ಪಿಸುವುದು ಉತ್ತಮ.

ತಂಬಾಕು ಮತ್ತು ಮದ್ಯಪಾನದಿಂದ ದೂರವಿರಿ

ತಂಬಾಕು ಮತ್ತು ಮದ್ಯಪಾನ ಕ್ಯಾನ್ಸರ್‌ಗೆ ಪ್ರಮುಖ ಕಾರಣಗಳಾಗಿವೆ. ಧೂಮಪಾನ ಮತ್ತು ತಂಬಾಕು ಸೇವನೆ ಬಾಯಿ, ಶ್ವಾಸಕೋಶ ಮತ್ತು ಗಂಟಲಿನ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಮದ್ಯಪಾನ ಯಕೃತ್ತಿನ ಕ್ಯಾನ್ಸರ್‌ಗೆ ಕಾರಣವಾಗಬಹುದು. ಆದ್ದರಿಂದ ಈ ಅಭ್ಯಾಸಗಳಿಂದ ದೂರವಿರುವುದು ಅತ್ಯಗತ್ಯ.

ಇದನ್ನೂ ಓದಿ: ಮೌತ್ ಕಾಂಡೋಮ್‌ ಎಂದರೇನು? ಇದು ಓರಲ್ ಕ್ಯಾನ್ಸರ್‌ನಿಂದ ರಕ್ಷಣೆ ನೀಡುತ್ತದೆಯೇ?

ತೂಕ ನಿಯಂತ್ರಣದಲ್ಲಿರಲಿ

ಅತಿಯಾದ ತೂಕ ಹಲವಾರು ಕ್ಯಾನ್ಸರ್‌ಗಳ ಅಪಾಯವನ್ನು ಹೆಚ್ಚಿಸುತ್ತದೆ. ದಿನಕ್ಕೆ ಕನಿಷ್ಠ 15– 20 ನಿಮಿಷ ವ್ಯಾಯಾಮ ಮಾಡುವ ಮೂಲಕ ತೂಕವನ್ನು ನಿಯಂತ್ರಿಸಬಹುದು.

ಕುಟುಂಬ ಇತಿಹಾಸ ಇದ್ದರೆ ಜಾಗೃತೆಯಲ್ಲಿರಿ

ಕುಟುಂಬದಲ್ಲಿ ಕ್ಯಾನ್ಸರ್ ಇತಿಹಾಸ ಇದ್ದರೆ ಹೆಚ್ಚಿನ ಎಚ್ಚರಿಕೆ ಅಗತ್ಯ. ವಿಶೇಷವಾಗಿ ಸ್ತನ ಕ್ಯಾನ್ಸರ್‌ನಂತಹ ಕಾಯಿಲೆಗಳು ತಲೆಮಾರಿನಿಂದ ತಲೆಮಾರಿಗೆ ಬರುವ ಸಾಧ್ಯತೆ ಇದೆ. ಆದ್ದರಿಂದ 20 ವರ್ಷದ ನಂತರ ನಿಯಮಿತ ಕ್ಯಾನ್ಸರ್ ತಪಾಸಣೆ ಮಾಡಿಸಿಕೊಳ್ಳುವುದು ಮುಖ್ಯ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಎಷ್ಟು? ಎಂದಿನಿಂದ ಜಾರಿ? ಇಲ್ಲಿದೆ ವಿವರ – Kannada News | Karnataka KERC Hikes Electricity 56 Paise per Unit, effect From May

ಬೆಂಗಳೂರು, ಏಪ್ರಿಲ್​ 17: ರಾಜ್ಯದ ಜನರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ದರ ಏರಿಕೆಯ ಶಾಕ್ ನೀಡಿದೆ. ಪ್ರತಿ ಯೂನಿಟ್ ವಿದ್ಯುತ್ ದರದ ಮೇಲೆ ಸರಾಸರಿ 56 ಪೈಸೆ ಹೆಚ್ಚಳ ಮಾಡಿ ಕೆಇಆರ್​​ಸಿ ಶುಕ್ರವಾರ ಆದೇಶ ಹೊರಡಿಸಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Source link

1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ – Kannada News | Kalalughatta Panchayat PDP And Local youtuber Caught Lokayukta With Rs 1.2 Lakh Bribe at Bengaluru

ಬೆಂಗಳೂರು, (ಏಪ್ರಿಲ್ 17): ನಿವೇಶನದ ಖಾತೆ ಮಾಡಿಕೊಡಲು ಲಂಚ  (Bribe) ಸ್ವೀಕರಿಸುತ್ತಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ  (Lokayukta) ಬಲೆಗೆ ಬಿದ್ದಿದ್ದಾರೆ. ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ, ಹಾಗೂ ಸ್ಥಳೀಯ ಖಾಸಗಿ ವಾಹಿನಿ ಪ್ರತಿನಿಧಿ ಗಂಗಾಧರ್ ಒಂದು ಲಕ್ಷ ರೂ. ಲಂಚದ ಹಣದ ಸಮೇತ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸದ್ಯ ಗೀತಾಮಣಿ ಹಾಗೂ ಗಂಗಾಧರ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಪಿಡಿಓ ಗೀತಾಮಣಿ ಅವರು ⁠1,50,000 ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಈ ಹಣವನ್ನು ಯುಟ್ಯೂಬರ್ ಗಂಗಾಧರ್ ಗೆ ನೀಡುವಂತೆ ಸೂಚಿಸಿದ್ದರು. ಈ ವಿಚಾರವನ್ನು ಗೀತಾಮಣಿ, ಗಂಗಾಧರ್​​ಗೆ ಹೇಳಿದ್ದರು. ಡೀಲ್​​ ನಂತೆ ಫೈಜಲ್ ನಿಂದ ಗಂಗಾಧರ್ 1,20,000 ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಅಧಿಕಾರಿಗಳು ಪಿಐ ಉಮಾ ಮಹೇಶ್, ಹಾಗೂ ಎಸ್ ಪಿ ಮಹಾಂತೇಶ್ವರ ಜಿದ್ದಿ ತಂಡ ದಾಳಿ ಮಾಡಿದ್ದು, ರೆಡ್​ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ವಿಜಯಪುರ: ಇನ್ನೊಂದೆಡೆ ಪೆಟ್ರೋಲ್ ಬಂಕ್ ಜಾಗದ ನಕಾಶೆ ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಲು ಲಂಚ ಸ್ವೀಕರಿಸುತ್ತಿದ್ದಾಗ ಎಸ್​​ಡಿಎ ಹಾಗೂ ಕಂಪ್ಯೂಟರ್ ಆಪರೇಟರ್ ಸಿಕ್ಕಿಬಿದ್ದಿದ್ದಾರೆ. ಜಿಲ್ಲಾಡಳಿತ ಕಚೇರಿಯ ಎಸ್ ಡಿ ಎ ಅರವಿಂದ ಪವಾರ್ ಹಾಗೂ ಕಂಪ್ಯೂಟರ ಆಪರೇಟರ್ ಅಯ್ಯಬ್ ತೊಣಸ್ಯಾಳ ಲೋಕಾಯುಕ್ತ ಬಲೆಗೆ ಬಿದ್ದಿವರು. 15,000 ನಗದು ಸ್ವೀಕಾರ ಮಾಡುವ ವೇಳೆ ರೆಡ್ ಹ್ಯಾಂಡ್ ಅಗಿ ಸಿಕ್ಕಿಬಿದ್ದಿದ್ದು, ಸದ್ಯ ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: ಆರ್​​ಸಿಬಿ ಗ್ರೀನ್ ಜೆರ್ಸಿ ತೊಡುವುದು ಏಕೆ? ಈ ಜೆರ್ಸಿಯ ವಿಶೇಷತೆ ಏನು? – Kannada News | RCB’s Green Jersey Game vs Delhi Capitals: IPL 2026 Match 26 Preview and History

ಐಪಿಎಲ್ 2026 (IPL 2026) ರ 26ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳ ನಡುವೆ ನಡೆಯಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3:30 ರಿಂದ ಆರಂಭವಾಗಲಿರುವ ಈ ಪಂದ್ಯ ಕನ್ನಡಿಗರು vs ಕರ್ನಾಟಕದ ತಂಡದ ನಡುವಿನ ಕಾಳಗ ಎನ್ನಬಹುದು. ಏಕೆಂದರೆ ಡೆಲ್ಲಿ ತಂಡದಲ್ಲಿ ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಕರುಣ್ ನಾಯರ್ ಇದ್ದಾರೆ. ಹೀಗಾಗಿ ಈ ಪಂದ್ಯ ಕನ್ನಡಿಗರಿಗೆ ತುಂಬಾ ವಿಶೇಷವಾಗಿರಲಿದೆ. ಇನ್ನು ಈ ಪಂದ್ಯವನ್ನು ಮತ್ತಷ್ಟು ವಿಶೇಷಗೊಳಿಸುವ ಸಲುವಾಗಿ ಆರ್​ಸಿಬಿ ಈ ಪಂದ್ಯದಲ್ಲಿ ಗ್ರೀನ್ ಜೆರ್ಸಿಯನ್ನು ಧರಿಸಿ ಕಣಕ್ಕಿಳಿಯಲಿದೆ.

ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ

ವಾಸ್ತವವಾಗಿ, 2011 ರ ಐಪಿಎಲ್​ ಆವೃತ್ತಿಯಿಂದ ಆರ್​ಸಿಬಿ ತಂಡ ಸೀಸನ್​ನಲ್ಲಿ ಆಡುವ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ. ತನ್ನ ಅಭಿಮಾನಿಗಳಲ್ಲಿ ಸ್ವಚ್ಛ ಮತ್ತು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆರ್​ಸಿಬಿ ಈ ಹಸಿರು ಜೆರ್ಸಿಯನ್ನು ಧರಿಸಲಿದೆ. ಅದರಂತೆ ಈ ಬಾರಿಯೂ ಆರ್​ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹಸಿರು ಜೆರ್ಸಿ ತೊಟ್ಟು ಆಡಲಿದೆ. ತಂಡದ ಹೊಸ ಜೆರ್ಸಿ ಸಾಕಷ್ಟು ಆಕರ್ಷಕವಾಗಿದೆ. ಈ ಜೆರ್ಸಿಯ ಟೀ ಶರ್ಟ್‌ನಲ್ಲಿ ಹಸಿರು ಮತ್ತು ನೀಲಿ ಬಣ್ಣಗಳನ್ನು ಬಳಸಲಾಗಿದೆ.

ಗ್ರೀನ್ ಜೆರ್ಸಿಯಲ್ಲಿ ದಾಖಲೆ

ಮೇಲೆ ಹೇಳಿದಂತೆ 2011 ರಿಂದ, ಆರ್‌ಸಿಬಿ ಪ್ರತಿ ಐಪಿಎಲ್ ಆವೃತ್ತಿಯಲ್ಲಿ ಹಸಿರು ಜೆರ್ಸಿ ಧರಿಸಿ ಒಂದು ಪಂದ್ಯವನ್ನು ಆಡುತ್ತದೆ. ಮರುಬಳಕೆಯ ವಸ್ತುಗಳಿಂದ ತಯಾರಿಸಿದ ಈ ಜೆರ್ಸಿಯನ್ನು ಆರ್​ಸಿಬಿ ಮಧ್ಯಾಹ್ನದ ಪಂದ್ಯಗಳಲ್ಲಿ ಧರಿಸಿ ಆಡುತ್ತದೆ. ಇನ್ನು ಹಸಿರು ಜೆರ್ಸಿಯಲ್ಲಿ ಆರ್‌ಸಿಬಿಯ ರಿಪೋರ್ಟ್ ಕಾರ್ಡ್ ನೋಡುವುದಾದರೆ.. ಆರ್​ಸಿಬಿ ಇದುವರೆಗೆ ಹಸಿರು ಜೆರ್ಸಿ ತೊಟ್ಟು 15 ಪಂದ್ಯಗಳನ್ನಾಡಿದೆ. ಇದರಲ್ಲಿ ಕೇವಲ 5 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ 9 ಪಂದ್ಯಗಳಲ್ಲಿ ಸೋತಿದೆ. ಉಳಿದಂತೆ 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

IPL 2026: ಆರ್​​ಸಿಬಿ ನಾಯಕನ ಈ ಎರಡು ಗುಣಗಳನ್ನು ಮನಸಾರೆ ಮೆಚ್ಚಿಕೊಂಡ ಶ್ರೇಯಸ್ ಅಯ್ಯರ್

ಇನ್ನು ಕಳೆದ ಆವೃತ್ತಿಯಲ್ಲಿ ರಾಜಸ್ಥಾನ್ ವಿರುದ್ಧ ಗ್ರೀನ್ ಜೆರ್ಸಿ ತೊಟ್ಟು ಆಡಿದ್ದ ಆರ್​ಸಿಬಿ ಭರ್ಜರಿ ಗೆಲುವು ದಾಖಲಿಸಿತ್ತು. ಆ ಪಂದ್ಯದಲ್ಲಿ ಆರ್​ಸಿಬಿ ಆರಂಭಿಕರಾದ ಫಿಲ್ ಸಾಲ್ಟ್ (65) ಹಾಗೂ ವಿರಾಟ್ ಕೊಹ್ಲಿ (62) ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದ್ದರು. ಹೀಗಾಗಿ ಈ ಬಾರಿಯೂ ಅದೇ ಪ್ರದರ್ಶನವನ್ನು ಮುಂದುವರೆಸಲು ಆರ್​ಸಿಬಿ ಪ್ರಯತ್ನಿಸಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version