ಧರ್ಮಸ್ಥಳ ಪ್ರವಾಸ ಮುಗಿಸಿ ಬರುವಾಗ ದುರಂತ: ಹೇಮಾವತಿ ಹಿನ್ನೀರಿನಲ್ಲಿ ಮೂವರು ಯುವಕರು ಜಲಸಮಾಧಿ – Kannada News | Hemavathi Dam Tragedy: Three Youths Drown in Gorur Shettyhalli Church Backwaters
ಹಾಸನ, ಜೂನ್ 14: ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಪ್ರವಾಸಿ ತಾಣವಾದ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಹೋಗಿದ್ದ ಬೆಂಗಳೂರು ಮೂಲದ ಮೂವರು ಯುವಕರು (Youths) ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ (death). ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ಜಲಸಮಾಧಿಯಾದ ಕರುಣಾಜನಕ ಘಟನೆ ಹಾಸನ ತಾಲೂಕಿನ ಗೊರೂರು ಬಳಿಯಿರುವ ಹೇಮಾವತಿ ಜಲಾಶಯದಲ್ಲಿ ನಡೆದಿದೆ. ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಈಜಲು ಹೋಗಿ ಮೂವರು ಯುವಕರು ನೀರುಪಾಲು ಹಾಸನ ತಾಲೂಕಿನ ಗೊರೂರು ಬಳಿಯಿರುವ…