Video: ಕಾರ್ಪೊರೇಟ್ ಉದ್ಯೋಗಗಳಲ್ಲಿ ನಿಷ್ಠಾವಂತರಿಗೆ ಕಿವಿಮಾತು ಹೇಳಿದ ಬೆಂಗಳೂರಿನ ವ್ಯಕ್ತಿ – Kannada News | A Bengaluru man says it’s not good for employees to be loyal to one company.

ಕಾರ್ಪೊರೇಟ್ (corporate) ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರ ಕಷ್ಟ ಹೇಳಲಾಗದು. ಕೆಲವರು ತಮ್ಮ ಉದ್ಯೋಗಕ್ಕೆ ತುಂಬಾ ನಿಷ್ಠಾವಂತರಾಗಿರುತ್ತಾರೆ. ಆಫೀಸು ಬಿಟ್ಟು ಮನೆಗೆ ಬಂದರೂ ಮುರೊತ್ತು ಕೆಲಸ ಕೆಲಸ ಎಂದು ಗೊಣಗುವವರನ್ನು ನೀವು ನೋಡಿರುತ್ತೀರಿ. ಬೆಂಗಳೂರಿನ (Bengaluru) ವ್ಯಕ್ತಿಯೊಬ್ಬರು ಉದ್ಯೋಗಿಗಳು ಒಂದೇ ಕಂಪನಿಗೆ ನಿಷ್ಠರಾಗಿರಬೇಕೇ, ಇಲ್ಲವಾದ್ರೆ ವೃತ್ತಿಜೀವನದ ಬೆಳವಣಿಗೆ ನಿಧಾನವಾದಾಗ ಉದ್ಯೋಗ ಬದಲಾಯಿಸುವ ಬಗ್ಗೆ ಯೋಚಿಸಬೇಕೇ ಎಂಬ ಪೋಸ್ಟ್ ಚರ್ಚೆಯನ್ನು ಹುಟ್ಟುಹಾಕಿದೆ. ನೆಟ್ಟಿಗರು ಕಾಮೆಂಟ್ ಮಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾಣಿಕ್ ಸಲಾರಿಯಾ (life_with_manik) ಹೆಸರಿನ ಇನ್ಸ್ಟಾಗ್ರಾಮ್…

Read More

ಪ್ರತ್ಯೇಕ ಘಟನೆ: ಭೂಸ್ವಾಧೀನ ಪರಿಹಾರ ನೀಡದಕ್ಕೆ NHAI ಕಚೇರಿ, ಡಿಸಿ ಕಾರು ಜಪ್ತಿ – Kannada News | Land Compensation Row: Dharwad NHAI Office and Hassan DC Car Seized by Court Order

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿ ಧಾರವಾಡ/ಹಾಸನ: ರೈತರಿಗೆ ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆ ಧಾರವಾಡ ಜಿಲ್ಲಾ ಪ್ರಧಾನ ನ್ಯಾಯಾಲಯದ ಆದೇಶದ ಅನ್ವಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧಾರವಾಡ ಕಚೇರಿ ಜಪ್ತಿ ಮಾಡಲಾಗಿದೆ. ರೈತರಿಗೆ ನೀಡಬೇಕಿದ್ದ 10 ಕೋಟಿ ರೂ. ಬಡ್ಡಿ ಹಣ ಪಾವತಿ ಮಾಡದ ಕಾರಣ, ನಗರದ ವಿದ್ಯಾಗಿರಿ ಬಡಾವಣೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ಕಚೇರಿಯ ಪೀಠೋಪಕರಣ, ಕಂಪ್ಯೂಟರ್, ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿ 63ಕ್ಕೆಂದು 2012ರಲ್ಲಿ ಗದಗ ನಗರದ ಹೊರಭಾಗದಲ್ಲಿನ…

Read More

Bengaluru Air Quality: ಮಾಲಿನ್ಯ ಮುಕ್ತವಾಯ್ತು ಕರ್ನಾಟಕ! ಬೆಂಗಳೂರು, ಮೈಸೂರು, ಮಂಗಳೂರಿನ ಇಂದಿನ AQI ಎಷ್ಟು ಗೊತ್ತಾ? – Kannada News | Bengaluru AQI Today: Air Quality Levels in Karnataka Cities on May 23

ಬೆಂಗಳೂರು, ಮೇ 23: ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ(AQI) ಒಟ್ಟಾರೆಯಾಗಿ ತೃಪ್ತಿಕರ ಮತ್ತು ಉತ್ತಮ ಮಟ್ಟದಲ್ಲಿದೆ. ಇತ್ತೀಚಿನ ಮಳೆ ಮತ್ತು ಹವಾಮಾನ ಬದಲಾವಣೆಗಳಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ ತೃಪ್ತಿಕರ ಮಟ್ಟದಲ್ಲಿ ದಾಖಲಾಗಿದೆ. ಮಳೆಯ ಕಾರಣದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಮೈಸೂರು ಮತ್ತು ಮಂಗಳೂರು ನಗರಗಳಲ್ಲಿ ಅತ್ಯುತ್ತಮ ಶುದ್ಧ ಗಾಳಿ ವಾತಾವರಣವಿದೆ. ಬೆಂಗಳೂರಿನ ಇಂದಿನ…

Read More

ಬಾಗಲಕೋಟೆ: ಕಲ್ಲು ತೂರಾಟದ ಕಾವು ಆರುವ ಮುನ್ನವೇ ಜಾಲತಾಣದಲ್ಲಿ ಮುಸ್ಲಿಂ ಯುವಕರಿಂದ ವಿವಾದಾತ್ಮಕ ಪೋಸ್ಟ್ – Kannada News | Bagalkot Tension: Controversial Social Media Post by Youth Surfaces Amid Ongoing Stone Pelting Probe

ಮುಸ್ಲಿಂ ಯುವಕರ ವಿವಾದಾತ್ಮಕ ಪೋಸ್ಟ್ ಸ್ಕ್ರೀನ್​ಶಾಟ್Image Credit source: tv9 ಬಾಗಲಕೋಟೆ, ಫೆಬ್ರವರಿ 25: ಬಾಗಲಕೋಟೆ (Bagalkot) ನಗರದಲ್ಲಿ ಛತ್ರಪತಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲೆಸೆತ ಪ್ರಕರಣದ ಕಾವು ಆರುವ ಮುನ್ನವೇ ಸಾಮಾಜಿಕ ಜಾಲತಾಣ ಪೋಸ್ಟ್​ನಿಂದಾಗಿ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ಕೆಲವು ಮುಸ್ಲಿಂ ಯುವಕರು ಪಂಕಾ ಮಸೀದಿಯ ಭಾವಚಿತ್ರ ಹಾಗೂ ವಿಡಿಯೋವನ್ನು ಹಂಚಿಕೊಂಡು ಪ್ರಚೋದನಕಾರಿ ಪೋಸ್ಟ್ ಮಾಡಿರುವುದು ಗಮನಸೆಳೆದಿದೆ. ‘15 ನಿಮಿಷ ಪೊಲೀಸರು ಸುಮ್ಮನಿರಲಿ, ಇಸ್ಲಾಂ ಪವರ್ ತೋರಿಸುತ್ತೇವೆ’ ಎಂಬ ಅರ್ಥದ ಹೇಳಿಕೆಯನ್ನು ಪೋಸ್ಟ್‌ನಲ್ಲಿ…

Read More

ಭುವನೇಶ್ವರ್ ಕುಮಾರ್​ ಯಶಸ್ಸಿನ ಗುಟ್ಟು ರಟ್ಟು ಮಾಡಿದ ಸಚಿನ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದರು. ಪ್ರತಿ ಪಂದ್ಯದಲ್ಲೂ ಅತ್ಯುತ್ತಮ ದಾಳಿ ಸಂಘಟಿಸಿದ್ದ ಭುವಿ ರನ್​ ನಿಯಂತ್ರಿಸುವುದರೊಂದಿಗೆ 28 ವಿಕೆಟ್​ಗಳನ್ನೂ ಸಹ ಪಡೆದಿದ್ದರು. ಭುವನೇಶ್ವರ್ ಕುಮಾರ್ ಅವರ ಈ ಭರ್ಜರಿ ಯಶಸ್ಸಿಗೆ ಕಾರಣ ವೋಬ್ಲಿ ಸೀಮ್ ಕೌಶಲ್ಯವೇ ಎಂದಿದ್ದಾರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ವಿಶ್ಲೇಷಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾತನಾಡಿರುವ ಸಚಿನ್ ತೆಂಡೂಲ್ಕರ್, “ಭುವನೇಶ್ವರ್ ಕುಮಾರ್ ಈ ಬಾರಿ ವೋಬ್ಲಿ…

Read More

‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು – Kannada News | Minister Santosh Lad request Dhurandar director to make movie on Vyapam case

ನೀಟ್ (NEET) ಪರೀಕ್ಷೆ ರದ್ದಾದ ಕುರಿತು ಪತ್ರಿಕಾ ಗೋಷ್ಠಿ ನಡೆಸಿದ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರವನ್ನು ಟೀಕೆ ಮಾಡುತ್ತಾ, ‘ಧುರಂಧರ್’ ಸಿನಿಮಾದ ನಿರ್ದೇಶಕ ಆದಿತ್ಯ ಧರ್​​ಗೆ ಸವಾಲೊಂದನ್ನು ಹಾಕಿದರು. ‘ನಿರ್ದೇಶಕ ಆದಿತ್ಯ ಧರ್ ಅವರು ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾ ಮಾಡಿದ್ದಾರೆ. ನಾನು ಅವರಿಗೆ ಮನವಿ ಮಾಡುತ್ತಿದ್ದೇನೆ. ಅವರು ‘ವ್ಯಾಪಂ’ ಹಗರಣದ ಬಗ್ಗೆಯೂ ಸಿನಿಮಾ ಮಾಡಬೇಕು. ಅದೊಂದು ಕುತೂಹಲಕಾರಿ ಹಗರಣ’ ಎಂದು ಸಂತೋಷ್ ಲಾಡ್ ವ್ಯಂಗ್ಯ ಮಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಐಸಿಸಿ ನಾಕೌಟ್‌ಗಳಲ್ಲಿ ಭಾರತ- ಕಿವೀಸ್ ಎಷ್ಟು ಬಾರಿ ಮುಖಾಮುಖಿಯಾಗಿವೆ? ಯಾರದ್ದು ಮೇಲುಗೈ?

2026 ರ ಟಿ20 ವಿಶ್ವಕಪ್​ನ ಫೈನಲ್ ಪಂದ್ಯ ಆತಿಥೇಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ಹಾಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಆದಾಗ್ಯೂ ಕಿವೀಸ್​ನಂತಹ ಬಲಿಷ್ಠ ತಂಡವನ್ನು ಮಣಿಸುವುದು ಅಷ್ಟು ಸುಲಭದ ಮಾತಲ್ಲ. ಅದರಲ್ಲೂ ಐಸಿಸಿ ನಾಕೌಟ್‌ಗಳಲ್ಲಿ ಭಾರತದ ವಿರುದ್ಧ ಕಿವೀಸ್ ಮೇಲುಗೈ ಸಾಧಿಸಿರುವುದರಿಂದ ಭಾರತ ಗೆಲುವಿಗಾಗಿ ಸಾಕಷ್ಟು ಬೆವರು ಹರಿಸಬೇಕಿದೆ. ಐಸಿಸಿ ಟೂರ್ನಮೆಂಟ್‌ಗಳ ನಾಕೌಟ್ ಸುತ್ತಿನಲ್ಲಿ ಭಾರತ…

Read More

ದುಬೈನಲ್ಲಿ ಎಂಜಾಯ್ ಮಾಡ್ತಿರುವಾಗ್ಲೇ ದಾಳಿ ಆಯ್ತು: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ – Kannada News | Kannadiga Recalls Horror During Israel Iran Conflict in Dubai; Praises UAE Security Measures

ಬೆಂಗಳೂರು, ಮಾರ್ಚ್ 3: ಇರಾನ್-ಇಸ್ರೇಲ್ ಯುದ್ಧದಿಂದ ದುಬೈಯಲ್ಲಿ ಸಿಲುಕಿದ್ದ ಹಲವು ಮಂದಿ ಕನ್ನಡಿಗರು ಬೆಂಗಳೂರಿಗೆ ವಾಪಸಾಗಿದ್ದಾರೆ. ಇದೀಗ, ಕನ್ನಡಿಗ ಗೌತಮ್ ದುಬೈನಲ್ಲಿದ್ದಾಗ ಇಸ್ರೇಲ್-ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ದಾಳಿ ನಡೆಯುತ್ತಿದ್ದಾಗ ಅನುಭವಿಸಿದ ಭಯಾನಕ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ದಾಳಿಗಳು ನಡೆಯುತ್ತಿದ್ದಾಗ ತೀವ್ರ ಭಯಗೊಂಡಿದ್ದೆವು. ಆ ಸಂದರ್ಭದಲ್ಲಿ ಭಾರತೀಯ ರಾಯಭಾರ ಕಚೇರಿಯಿಂದ ಯಾವುದೇ ಸಂಪರ್ಕ ಅಥವಾ ಸಹಾಯ ದೊರೆಯದಿರುವುದು ತಮಗೆ ಬೇಸರ ತಂದಿದೆ ಎಂದು ಗೌತಮ್ ತಿಳಿಸಿದರು. ಹಲವಾರು ಸ್ನೇಹಿತರು ಇನ್ನೂ ದುಬೈನಲ್ಲೇ ಸಿಲುಕಿಕೊಂಡಿದ್ದು, ವಿಮಾನಗಳು ಸಂಪೂರ್ಣವಾಗಿ ಭರ್ತಿಯಾಗಿರುವುದರಿಂದ ಅವರಿಗೆ ವಾಪಸ್…

Read More

Good Governance Day 2025: ಉತ್ತಮ ಆಡಳಿತ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | Good Governance Day 2025: What is the purpose behind celebrating Good Governance Day on December 25?

ಉತ್ತಮ ಆಡಳಿತ (Good Governance) ಎಂದರೆ ಪಾರದರ್ಶಕತೆ, ಹೊಣೆಗಾರಿಕೆ, ಸಾರ್ವಜನಿಕ ಕಲ್ಯಾಣ ಮತ್ತು ಜವಾಬ್ದಾರಿಯುತವಾಗಿ, ಪರಿಣಾಮಕಾರಿಯಾಗಿ ಆಡಳಿತವನ್ನು ನಡೆಸುವುದಾಗಿದೆ. ಸರ್ಕಾರಿ ನೀತಿಗಳನ್ನು ಸಾಮಾನ್ಯ ನಾಗರಿಕರಿಗೆ ಪ್ರಾಮಾಣಿಕವಾಗಿ ತಲುಪಿಸಿದಾಗ, ಭ್ರಷ್ಟಾಚಾರವನ್ನು ನಿಗ್ರಹಿಸಿ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಅವಕಾಶಗಳನ್ನು ಒದಗಿಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹಾಗಾಗಿ ಹಳ್ಳಿಯಿಂದ ದಿಲ್ಲಿಯವರೆಗೆ ಪ್ರತಿಯೊಂದು ಆಡಳಿತ ವರ್ಗಗಳು ಉತ್ತಮ ರೀತಿಯಲ್ಲಿ ಆಡಳಿತ ನಡೆಸಬೇಕು ಹಾಗೂ ಸರ್ಕಾರದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಡಿಸೆಂಬರ್‌…

Read More

ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ಮೊದಲ ಸಿನಿಮಾಗೆ ಪ್ರೀತಂ ಗುಬ್ಬಿ ನಿರ್ದೇಶನ

ಪ್ರೀತಂ ಗುಬ್ಬಿ ನಿರ್ದೇಶನದ ನೂತನ ಚಿತ್ರದ ಮೂಲಕ ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ಅವರು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಇಶಾ ಲಂಕೇಶ್ ನಟನೆಯ ಈ ಹೊಸ ಚಿತ್ರಕ್ಕೆ ‘ನವಿಶಾ ಫಿಲ್ಮ್ಸ್’ ಬಂಡವಾಳ ಹೂಡಲಿದೆ. ಖ್ಯಾತ ಪತ್ರಕರ್ತ, ಲೇಖಕ ಪಿ. ಲಂಕೇಶ್ ಮೊಮ್ಮಗಳ ಸಿನಿಮಾ ಎಂಬ ಕಾರಣಕ್ಕೆ ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿದೆ. ಈ ಸಿನಿಮಾವನ್ನು ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪ್ರೀತಂ ಗುಬ್ಬಿ ನಿರ್ದೇಶಿಸಲಿದ್ದಾರೆ. ‘ನವಿಶಾ ಫಿಲ್ಮ್ಸ್’ ಮೂಲಕ…

Read More