ಕರ್ನಾಟಕ ಹವಾಮಾನ ವರದಿ: ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ! 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ – Kannada News | Karnataka Weather Forecast: Hailstorm and Thunderstorm  in south Karnataka, Rain in Bengaluru

ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ

ಬೆಂಗಳೂರು, ಮೇ 01: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 2 ದಿನಗಳಿಂದ ಆಲಿಕಲ್ಲು  (Karnataka Weather) ಮಳೆಯಾಗುತ್ತಿದ್ದು, ಇಂದೂ ಸಹ ಕರಾವಳಿ ಹೊರತುಪಡಿಸಿ ಉಳಿದೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಆಲಿಕಲ್ಲು ಮಳೆಯ ಅಲರ್ಟ್​!

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಶುಷ್ಕ ವಾತಾವರಣವಿರಲಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಎಲ್ಲೆಡೆ ಶುಷ್ಕ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಾಮರಾಜನಗರದಲ್ಲಿ ಗುಡುಗು ಸಿಡಿಲು, ಆಲಿಕಲ್ಲು ಸಹಿತ ಜೋರು ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ನೀಡಲಾಗಿದೆ. ಮಂಡ್ಯ ಮತ್ತು ತುಮಕೂರಿನಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮಂಡ್ಯ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರು ಮಳೆಗೆ ಮತ್ತೊಂದು ಸಾವು; ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ದುರ್ಮರಣ, ಒಟ್ಟು 9 ಬಲಿ!

ಮಳೆಯ ಅವಾಂತರ!

ಬುಧವಾರ ಸಂಜೆ ಬೆಂಗಳೂರಿನಲ್ಲಿ ಸುರಿದ ಮಳೆ ಹಲವರನ್ನು ಬಲಿ ಪಡೆದಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುಸ್ಲಿಮರ ಮುನಿಸು ತಣಿಸಲು ಕಾಂಗ್ರೆಸ್ ಸರ್ಕಾರ ಮತ್ತೊಂದು ಹೆಜ್ಜೆ: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 600 ಕೋಟಿ ರೂ. – Kannada News | Karnataka Cabinet Decisions: Rs 600 Cr for Minority Colony Development, Bidadi Township Approved

ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಹೆಚ್​ಕೆ ಪಾಟೀಲ್Image Credit source: tv9

ಬೆಂಗಳೂರು, ಮೇ 1: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಗೊಂದಲದಿಂದ ಮುಸ್ಲಿಂ (Muslims) ಸಮುದಾಯ ಕಾಂಗ್ರೆಸ್ (Congress) ವಿರುದ್ಧ ತೀವ್ರ ಅಸಮಾಧಾನ ಹೊಂದಿತ್ತು. ಇದೀಗ ಅಲ್ಪಸಂಖ್ಯಾತರ ಮುನಿಸು ತಣಿಸಲು ಮುಂದಾಗಿರುವ ಸರ್ಕಾರ, 2026-27 ಮತ್ತು 2027-28ನೇ ಸಾಲಿನಲ್ಲಿ ಅವರ ಕಾಲೋನಿಗಳ ಅಭಿವೃದ್ಧಿಗೆ 600 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಕಾನೂನು ಸಚಿವ ಹೆಚ್​​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

1 ರಿಂದ 12ನೇ ತರಗತಿಯವರೆಗೆ ಓದುತ್ತಿರುವ ಕಾರ್ಮಿಕರ ಮಕ್ಕಳಿಗೆ 115.84 ಕೋಟಿ ರೂ. ವೆಚ್ಚದಲ್ಲಿ 8,600 ಮೌಲ್ಯದ ಲೇಖನ ಸಾಮಗ್ರಿ, ಪುಸ್ತಕಗಳನ್ನೊಳಗೊಂಡ ಶಾಲಾ ಕಿಟ್ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಬಲ ತುಂಬಲು ಉಚಿತ ರೋಗ ಪತ್ತೆಗಾಗಿ 6 ಎಂಆರ್‌ಐ ಸ್ಕ್ಯಾನಿಂಗ್ ಯಂತ್ರಗಳನ್ನು ಖರೀದಿಸಲು ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.

ರೈತರ ವಿರೋಧದ ನಡುವೆ ಬಿಡದಿ ಟೌನ್​​ಶಿಪ್​​ಗೆ ಅನುಮೋದನೆ

ಬಹು ದಿನಗಳಿಂದ ಬಾಕಿ ಇದ್ದ ಬಿಡದಿ ಟೌನ್‌ಶಿಪ್ ಯೋಜನೆಗೆ ಮರುಜೀವ ನೀಡಲಾಗಿದೆ. ಸುಮಾರು 7,481 ಎಕರೆ ಪ್ರದೇಶದಲ್ಲಿ ಈ ಯೋಜನೆ ನಿರ್ಮಾಣವಾಗಲಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದಲೇ ಈ ಬೃಹತ್ ಉಪನಗರ ತಲೆ ಎತ್ತಲಿದೆ. ಈ ಹಿಂದೆ ರೈತರ ವಿರೋಧದಿಂದ ವಿಳಂಬವಾಗಿದ್ದ ಯೋಜನೆಗೆ ಈಗ ಹೊಸ ರೂಪ ನೀಡಲಾಗಿದ್ದು, ಭೂಮಿ ಕಳೆದುಕೊಳ್ಳುವ ರೈತರಿಗೆ ಪ್ರತಿ ಎಕರೆಗೆ 9600 ಚದರ ಅಡಿ ಅಭಿವೃದ್ಧಿಪಡಿಸಿದ ಭೂಮಿ ನೀಡಲು ಸರ್ಕಾರ ನಿರ್ಧರಿಸಿದೆ.

  • ಆರೋಗ್ಯ ಮತ್ತು ಮೂಲಸೌಕರ್ಯ: ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರೋಗ ಪತ್ತೆಗಾಗಿ 6 ಹೊಸ ಎಂಆರ್‌ಐ (MRI) ಸ್ಕ್ಯಾನಿಂಗ್ ಯಂತ್ರಗಳನ್ನು ಖರೀದಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.
  • ಕಲಬುರ್ಗಿ-ಬೆಂಗಳೂರು ಹಾಗೂ ಬೀದರ್-ಬೆಂಗಳೂರು ವಿಮಾನಯಾನ ಸೇವೆಗಳ ನಿರ್ವಹಣೆಗಾಗಿ ವರ್ಷಕ್ಕೆ ₹28.7 ಕೋಟಿ ಪ್ರೋತ್ಸಾಹಧನ ನೀಡಲು ಅನುಮೋದನೆ.
  • ವಾಯವ್ಯ ಸಾರಿಗೆ ಸಂಸ್ಥೆಗೆ 80 ಹೊಸ ಬಸ್‌ಗಳ ಖರೀದಿಗಾಗಿ ₹32 ಕೋಟಿ ಬಿಡುಗಡೆ.
    ಬೆಂಗಳೂರು-ಹೈದ್ರಾಬಾದ್ ಹೈಸ್ಪೀಡ್ ರೈಲು ಯೋಜನೆಯಡಿ ಕರ್ನಾಟಕದಲ್ಲಿ ಬರಲಿರುವ 15 ನಿಲ್ದಾಣಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
  • ರೈತರಿಂದ ಬಿಳಿಜೋಳ ಖರೀದಿಸಲು ಅಗತ್ಯವಿರುವ ಹೆಚ್ಚುವರಿ ಗೋಣಿ ಚೀಲಗಳ ಖರೀದಿಗಾಗಿ ₹21.35 ಕೋಟಿ ವೆಚ್ಚ ಮಾಡಲು ಒಪ್ಪಿಗೆ ನೀಡಲಾಗಿದೆ.
  • ತಿರುಮಲ ಕರ್ನಾಟಕ ರಾಜ್ಯ ಛತ್ರ: ಆಂಧ್ರಪ್ರದೇಶದ ತಿರುಮಲದಲ್ಲಿರುವ ಕರ್ನಾಟಕ ರಾಜ್ಯ ಛತ್ರದ ನಿರ್ವಹಣೆಯನ್ನು
  • ಕಂದಾಯ ಇಲಾಖೆಯಿಂದ ಪ್ರವಾಸೋದ್ಯಮ ಇಲಾಖೆಗೆ (KSTDC) ವರ್ಗಾಯಿಸಲು ನಿರ್ಧರಿಸಲಾಗಿದೆ.
  • ಶಿಕ್ಷಣ ನೀತಿ: ರಾಜ್ಯ ಶಿಕ್ಷಣ ನೀತಿ ಆಯೋಗ ನೀಡಿರುವ ಅಂತಿಮ ವರದಿಯ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದರೂ, ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳದೆ ಮುಂದಿನ ಸಭೆಗೆ ಮುಂದೂಡಲಾಗಿದೆ.

ಸಚಿವ ಸಂಪುಟ ಸಭೆಯ ವಿವರವಾದ ಮಾಹಿತಿಗೆ ಓದಿ: ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್ ಜಾರಿಗೆ ಸಂಪುಟ ಅಸ್ತು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ‘ಕೆಡಿ’; ಮೊದಲ ದಿನದ ಗಳಿಕೆ ಎಷ್ಟು? – Kannada News | KD Movie Box Office Collection Day 1: Dhruva Sarja’s Film Earns 4 Cr on Day 1

‘ಕೆಡಿ: ದಿ ಡೆವಿಲ್’ ಸಿನಿಮಾ (KD Movie) ಏಪ್ರಿಲ್ 30ರಂದು ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಸಂಜಯ್ ದತ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಅನೇಕರು ಚಿತ್ರದ ಬಗ್ಗೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಫ್ಯಾನ್​​ಶೋಗಳು ಹೌಸ್​​ಫುಲ್ ಪ್ರದರ್ಶನ ಕಂಡವು. ಹಾಗಾದರೆ ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಈ ಚಿತ್ರದಿಂದ ಕೆವಿಎನ್​ ಪ್ರೊಡಕ್ಷನ್​​ಗೆ ಲಾಭ ತಂದುಕೊಡಲಿದೆಯೇ ಎಂಬುದು ಸದ್ಯದ ಪ್ರಶ್ನೆ.

‘ಕೆಡಿ’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ‘ಮಾರ್ಟಿನ್’ ಸಿನಿಮಾ ಕೆಲಸಗಳು ನಡೆಯುತ್ತಿದ್ದ ಕಾರಣ, ‘ಕೆಡಿ’ ಸಿನಿಮಾಗೆ ಸಮಯ ಕೊಡಲು ಧ್ರುವ ಸರ್ಜಾ ಅವರ ಬಳಿ ಸಾಧ್ಯವಾಗಿರಲಿಲ್ಲ. ಆ ಬಳಿಕ ‘ಕೆಡಿ’ ಸಿನಿಮಾದಲ್ಲಿ ತೊಡಗಿಕೊಂಡರು ಧ್ರುವ.ಈ ಸಿನಿಮಾ ರೆಟ್ರೋ ಶೈಲಿ ಮಾದರಿಯಲ್ಲಿದೆ. ದೊಡ್ಡ ದೊಡ್ಡ ಸೆಟ್​​ಗಳ ನಿರ್ಮಾಣ ಮಾಡಿ ಶೂಟ್ ಮಾಡಲಾಗಿದೆ.

‘ಕೆಡಿ’ ಸಿನಿಮಾಗೆ ಮೊದಲ ದಿನ 845 ಶೋಗಳನ್ನು ನೀಡಲಾಗಿತ್ತು. ಮುಂಜಾನೆ ಫ್ಯಾನ್ಸ್ ಶೋ ಕೂಡ ಇಟ್ಟಿದ್ದರಿಂದ ಸಿನಿಮಾ ಹೆಚ್ಚಿನ ಗಳಿಕೆ ಮಾಡಿದೆ. ಈ ಚಿತ್ರ ಮೊದಲ ದಿನ 4.10 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಆಗಿದೆ ಎಂದು ‘ಸ್ಯಾಕ್‌ನಿಲ್ಕ್ (sacnilk) ವರದಿ ಮಾಡಿದೆ. ಇನ್ನು, ಚಿತ್ರದ ನೆಟ್ ಕಲೆಕ್ಷನ್ ಮೂರುವರೆ ಕೋಟಿ ರೂಪಾಯಿ ಆಗಿದೆ.

ಸಿನಿಮಾಗೆ ಈ ಮೂರು ದಿನ ತುಂಬಾನೇ ಮುಖ್ಯವಾಗಲಿದೆ. ಇಂದು (ಮೇ 1) ಕಾರ್ಮಿಕರ ದಿನಾಚರಣೆ ಪ್ರಯುಕ್ತ ಸರ್ಕಾರಿ ರಜೆ ಇದ್ದು ಚಿತ್ರ ಹೆಚ್ಚಿನ ಗಳಿಕೆ ಮಾಡುವ ನಿರೀಕ್ಷೆ ಇದೆ. ಇನ್ನು ಶನಿವಾರ ಹಾಗೂ ಭಾನುವಾರ ಎಂದಿನಂತೆ ಜನರು ಸಿನಿಮಾ ವೀಕ್ಷಣೆಗೆ ತೆರಳುತ್ತಾರೆ. ಹೀಗಾಗಿ, ಸಿನಿಮಾದ ಕಲೆಕ್ಷನ್ ಹೆಚ್ಚಬಹುದು.

ಇದನ್ನೂ ಓದಿ: KD Movie Review: ಧ್ರುವ ಸರ್ಜಾ ಅಭಿಮಾನಿಗಳಿಗೆ ಇಷ್ಟ ಆಗುವ ರಕ್ತದೋಕುಳಿಯ ‘ಕೆಡಿ’ ಕಹಾನಿ

ಕೆಡಿ ಸಿನಿಮಾಗೆ ದೊಡ್ಡ ಮಟ್ಟದ ಬಜೆಟ್ ಖರ್ಚಾಗಿದೆ. ಪ್ರೇಮ್ ಹಲವು ವರ್ಷ ಇದಕ್ಕಾಗಿ ಮೀಸಲಿಟ್ಟಿದ್ದಾರೆ. ಈಗ ಸಿನಿಮಾಗೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿರುವುದು ಅವರ ಪಾಲಿಗೆ ಖುಷಿ ನೀಡಿದೆ. ಸಿನಿಮಾದ ಹಿನ್ನೆಲೆ ಸಂಗೀತವನ್ನು ಜನರು ಇಷ್ಟಪಟ್ಟಿದ್ದಾರೆ. ಸುದೀಪ್, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ ಸೇರಿದಂತೆ ಅನೇಕರು ಚಿತ್ರದ ಭಾಗ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Commercial LPG Cylinder Price: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 993 ರೂ. ಏರಿಕೆ – Kannada News | Commercial LPG Cylinder Price Jumps Rs 993: Hotels and Restaurants Face Impact

ನವದೆಹಲಿ, ಮೇ 1: ಇಂದು ವಾಣಿಜ್ಯ ಸಿಲಿಂಡರ್​ ಬೆಲೆ(Commercial Cylinder Price)ಯಲ್ಲಿ ಭಾರಿ ಏರಿಕೆಯಾಗಿದೆ. ಇಂದಿನಿಂದ (ಮೇ 1) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಬರೋಬ್ಬರಿ 993 ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಭಾರಿ ಏರಿಕೆಯ ನಂತರ, ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್‌ನ ಬೆಲೆ 3,071.50 ರೂ.ಗೆ ತಲುಪಿದೆ. ಇದು ಹೋಟೆಲ್, ರೆಸ್ಟೋರೆಂಟ್ ಮತ್ತು ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ನೇರ ಪರಿಣಾಮ ಬೀರಲಿದೆ.

ಗ್ರಾಹಕರಿಗೆ ನಿರಾಳ: ಪೆಟ್ರೋಲ್, ಡೀಸೆಲ್ ಮತ್ತು ದೇಶೀಯ ಸಿಲಿಂಡರ್ ದರ ಸ್ಥಿರ
ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ, ಸಾರ್ವಜನಿಕರಿಗೆ ನೇರವಾಗಿ ಅನ್ವಯವಾಗುವ ಪ್ರಮುಖ ಇಂಧನ ದರಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ದೇಶೀಯ ಎಲ್‌ಪಿಜಿ: ಸುಮಾರು 33 ಕೋಟಿ ಗ್ರಾಹಕರು ಬಳಸುವ 14.2 ಕೆಜಿ ದೇಶೀಯ ಸಿಲಿಂಡರ್ ಬೆಲೆಗಳು ಯಥಾಸ್ಥಿತಿಯಲ್ಲಿವೆ.

ಒಟ್ಟು ಬಳಕೆಯ ಶೇಕಡಾ 90 ರಷ್ಟು ಪಾಲನ್ನು ಹೊಂದಿರುವ ವಾಹನ ಸವಾರರಿಗೆ ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ವಿತರಿಸಲಾಗುವ ಸೀಮೆಎಣ್ಣೆಯ ಬೆಲೆಗಳು ಕೂಡ ಬದಲಾಗದೆ ಉಳಿದಿವೆ. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 1,950– 2,200 ರೂ. ಇತ್ತು.

ಮತ್ತಷ್ಟು ಓದಿ: LPG Price Hike: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ, ಗ್ರಾಹಕರಿಗೆ ಬಿಗ್ ಶಾಕ್

ವಿಮಾನಯಾನ ದರಗಳೂ ಸ್ಥಿರ: ಎಟಿಎಫ್ ಬೆಲೆ ಯಥಾಸ್ಥಿತಿ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ಏರಿಕೆಯಾಗಿದ್ದರೂ, ದೇಶೀಯ ವಿಮಾನಯಾನ ಸಂಸ್ಥೆಗಳಿಗೆ ನೀಡಲಾಗುವ ವಿಮಾನಯಾನ ಟರ್ಬೈನ್ ಇಂಧನ (ATF) ಬೆಲೆಗಳನ್ನು ಶುಕ್ರವಾರವೂ ಬದಲಾಗದಂತೆ ಉಳಿಸಿಕೊಳ್ಳಲಾಗಿದೆ. ಗ್ರಾಹಕರು ಮತ್ತು ವಿಮಾನಯಾನ ಸಂಸ್ಥೆಗಳನ್ನು ರಕ್ಷಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅಂತರರಾಷ್ಟ್ರೀಯ ಬೆಲೆ ಏರಿಕೆಯ ಹೊರೆಯನ್ನು ತಾವೇ ಹೀರಿಕೊಳ್ಳಲು ನಿರ್ಧರಿಸಿವೆ ಎಂದು ಐಒಸಿ ತಿಳಿಸಿದೆ. ಆದರೆ, ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳಿಗೆ ಇಂಧನ ಬೆಲೆಗಳನ್ನು ಹೆಚ್ಚಿಸಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳ ಈ ನಿರ್ಧಾರದಿಂದಾಗಿ, ಮಾರುಕಟ್ಟೆಯಲ್ಲಿ ಲಭ್ಯವಿರುವ ಸುಮಾರು ಶೇ 80 ರಷ್ಟು ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದು ಬಹುಪಾಲು ಗ್ರಾಹಕರಿಗೆ ಸ್ಥಿರತೆಯನ್ನು ಖಚಿತಪಡಿಸಿದೆ. ಶೇ 4 ರಷ್ಟು ಉತ್ಪನ್ನಗಳು ಬೆಲೆ ಇಳಿಕೆಯನ್ನು ಕಂಡಿದ್ದರೆ, ಕೇವಲ ಶೇ 16 ರಷ್ಟು ಇಂಧನಗಳು (ಮುಖ್ಯವಾಗಿ ಕೈಗಾರಿಕಾ ಬಳಕೆಯವು) ಬೆಲೆ ಏರಿಕೆಯನ್ನು ದಾಖಲಿಸಿವೆ.

ಅಂತಾರಾಷ್ಟ್ರೀಯ ಬೆಲೆ ಏರಿಳಿತಗಳಿಂದ ದೇಶೀಯ ಗ್ರಾಹಕರನ್ನು ರಕ್ಷಿಸುವ ಮತ್ತು ಆರ್ಥಿಕ ಸ್ಥಿರತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಐಒಸಿ ಸ್ಪಷ್ಟಪಡಿಸಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಗಳೂರಿನಲ್ಲಿ ಒಂದೇ ಮಳೆಗೆ ಸಂಕಷ್ಟಗಳ ಪ್ರವಾಹ: ಅಧ್ವಾನಗಳ ಅಸಲಿ ರಹಸ್ಯ ಜಿಬಿಎ ವರದಿಯಲ್ಲಿ ಬಯಲು – Kannada News | Bengaluru Rain Fury: GBA Report Reveals Shocking Details of 10 Deaths and Massive Infrastructure Damage

ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಮಳೆImage Credit source: tv9

ಬೆಂಗಳೂರು, ಮೇ 1: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಏಪ್ರಿಲ್ 29 ರಂದು ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಮೃತ್ಯು ರೂಪಿಯಾಗಿ ಪರಿಣಮಿಸಿದೆ. ಒಂದೇ ಒಂದು ಮಳೆಗೆ ರಾಜಧಾನಿ ತತ್ತರಿಸಿ ಹೋಗಿದ್ದು, ಈ ಭೀಕರ ಮಳೆ ಒಟ್ಟು 10 ಜನರ ಪ್ರಾಣವನ್ನು ಬಲಿ ಪಡೆದಿದೆ. ನಗರದಲ್ಲಿ ಸಂಭವಿಸಿದ ಅಧ್ವಾನಗಳ ಕುರಿತು ಇದೀಗ ಜಿಬಿಎ (GBA) ವರದಿ ಸಲ್ಲಿಸಿದ್ದು, ಮಳೆ ಸೃಷ್ಟಿಸಿದ ಅವಾಂತರಗಳ ಸತ್ಯಾಂಶಗಳು ಈಗ ಬಯಲಾಗಿವೆ.

ಹತ್ತು ಜನರ ಬಲಿ ಪಡೆದ ಮಳೆ

ಬೆಂಗಳೂರಿನ ಇತಿಹಾಸದಲ್ಲೇ ಅತ್ಯಂತ ಘೋರ ಎನ್ನಲಾದ ಈ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಮೃತಪಟ್ಟಿದ್ದಾರೆ. ಇನ್ನು ಕೆ.ಜೆ.ಹಳ್ಳಿಯಲ್ಲಿ ಸುಫಿಯಾನ್ ಎಂಬ ಬಾಲಕ ವಿದ್ಯುತ್ ಕಂಬದಿಂದ ಶಾಕ್ ಹೊಡೆದು ಮೃತಪಟ್ಟರೆ, ಬನ್ನೇರುಘಟ್ಟ ರಸ್ತೆಯಲ್ಲಿ ರಘು ಎಂಬುವವರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಕಸ್ತೂರ್ಬಾ ನಗರದಲ್ಲಿ ಸಿಮೆಂಟ್ ಶೀಟ್ ಬಿದ್ದು ಮಂಜು ಎಂಬಾತ ಉಸಿರು ಚೆಲ್ಲಿದ್ದಾನೆ.

ಬಿರುಗಾಳಿ ಮಳೆಗೆ 226 ಮರಗಳು

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಒಟ್ಟು 226 ಮರಗಳು ಧರೆಗುರುಳಿವೆ. ಒಂದಲ್ಲ ಎರಡಲ್ಲ ಬರೋಬ್ಬರಿ 623 ಕೊಂಬೆಗಳು ಮುರಿದು ಬಿದ್ದಿವೆ. ಹಲವರು ಗಾಯಗೊಂಡಿದ್ದು ಆಸ್ಪತ್ರೆ ಪಾಲಾಗಿದ್ದಾರೆ. ಇನ್ನು ಕೂಡ ರಸ್ತೆಗಪ್ಪಳಿಸಿರುವ ಹಲವು ಮರಗಳು, ರೆಂಬೆಕೊಂಬೆಗಳ ತೆರವು ಕಾರ್ಯ ಬಾಕಿ ಇದೆ.

186 ವಿದ್ಯುತ್ ಕಂಬಗಳು, 38 ಟ್ರಾನ್ಸ್​ಫಾರ್ಮರ್​ ಧರೆಗೆ

ಬಿರುಗಾಳಿ ಮಳೆಗೆ 186 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. 38 ಟ್ರಾನ್ಸ್​ಫಾರ್ಮರ್​ಗಳು ಧರೆಗಪ್ಪಳಿಸಿವೆ. ಹಲವು ಏರಿಯಾಗಳಲ್ಲಿ ಜನ ಕತ್ತಲೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಮರ ಮತ್ತು ರೆಂಬೆ ಕೊಂಬೆಗಳು ಬಿದ್ದು 0.9 ಕಿಲೋ ಮೀಟರ್ ಉದ್ದದ ವಿದ್ಯುತ್ ತಂತಿ ಹಾನಿಯಾಗಿದೆ. ಒಂದೇ ಒಂದು ಮಳೆ ಅಧ್ವಾನದಿಂದ ಬೆಸ್ಕಾಂಗೆ 87.32 ಲಕ್ಷ ರೂ. ನಷ್ಟವಾಗಿದೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲೇ 50.52 ಲಕ್ಷ ರೂಪಾಯಿ ಮೌಲ್ಯದ ವಿದ್ಯುತ್ ಕಂಬಗಳಿಗೆ ಹಾನಿಯಾಗಿವೆ. ಈಗಾಗಲೇ 112 ವಿದ್ಯುತ್ ಕಂಬಗಳು, 18 ಟ್ರಾನ್ಸ್‌ಫಾರ್ಮರ್‌ಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ ಎಂದು ಜಿಬಿಎ ಹೇಳಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮನೇಲಿದ್ದಾಗ್ಲೇ ಕಂಪೌಂಡ್ ಮೇಲೆ ಬಿದ್ದ ಮರದ ಕೊಂಬೆಗಳು, ಕಬ್ಬಿಣದ ವಾಲ್‌ಗಳು! ತಪ್ಪಿದ ಅನಾಹುತ

ನಗರದ 62ಕ್ಕೂ ಹೆಚ್ಚು ಪ್ರದೇಶಗಳ ರಸ್ತೆಗಳು ನದಿಗಳಂತಾಗಿದ್ದು, 105ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಜನರು ಬೀದಿಗೆ ಬೀಳುವಂತಾಗಿದೆ. ಕೆ.ಆರ್. ವೃತ್ತ, ಮಡಿವಾಳ ಸೇರಿದಂತೆ ನಗರದ ಪ್ರಮುಖ ಅಂಡರ್‌ಪಾಸ್‌ಗಳು ಸಂಪೂರ್ಣ ಜಲಾವೃತಗೊಂಡಿದ್ದವು. ಬೆಂಗಳೂರು ಕೇಂದ್ರ ಭಾಗದಲ್ಲಿ ಗರಿಷ್ಠ 92.00 ಮಿಲಿ ಮೀಟರ್ ಮಳೆ ದಾಖಲಾಗಿದ್ದು, ಮಳೆ ಹಾನಿ ತಡೆಯಲು ಎಸ್‌ಡಿಆರ್‌ಎಫ್ (SDRF) ಮತ್ತು ಅಗ್ನಿಶಾಮಕ ದಳದ ಹಲವು ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಜನ್ಮ ದಿನಾಂಕದ ಪ್ರಕಾರ ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ? – Kannada News | Love marriage or Arranged Marriage: What is your Destiny

ನಿಮ್ಮ ಜನ್ಮ ದಿನಾಂಕ ಮದುವೆಯ ಪ್ರಕಾರವನ್ನು ಹೇಗೆ ನಿರ್ಧರಿಸುತ್ತದೆ? ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಿಮ್ಮ ಜನ್ಮ ದಿನಾಂಕವು ನಿಮ್ಮ ಜೀವನದ ಅನೇಕ ಅಂಶಗಳ ಮೇಲೆ ಪ್ರಭಾವ ಬೀರಬಹುದು. ವಿಶೇಷವಾಗಿ, ಮದುವೆಯಂತಹ ಮಹತ್ವದ ವಿಷಯದಲ್ಲಿ ನಿಮ್ಮ ಜನ್ಮ ಸಂಖ್ಯೆಯು ಪ್ರೇಮ ವಿವಾಹ (Love Marriage) ಅಥವಾ ಅರೇಂಜ್ ಮ್ಯಾರೇಜ್ (Arranged Marriage) ಆಯ್ಕೆಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಸಂಖ್ಯಾಶಾಸ್ತ್ರ ವಿವರವಾಗಿ ತಿಳಿಸುತ್ತದೆ. ಈ ವಿಶ್ಲೇಷಣೆಯು ಒಂದು ದಿನಾಂಕದಲ್ಲಿ ಜನಿಸಿದವರ ಸಂಖ್ಯೆಯ ಆಧಾರದ ಮೇಲೆ, ಅವರ ಅದೃಷ್ಟ ಮತ್ತು ದುರಾದೃಷ್ಟದ ಪ್ರಭಾವವನ್ನು ಅರಿಯಲು ಸಹಾಯ ಮಾಡುತ್ತದೆ. ಒಂದು ದಿನಾಂಕವು ಒಂದೇ ಸಂಖ್ಯೆಗೆ ಸೇರಿದ್ದರೂ (ಉದಾಹರಣೆಗೆ 1, 10, 19, 28 ಇವೆಲ್ಲವೂ ಸಂಖ್ಯೆ 1 ಕ್ಕೆ ಸೇರುತ್ತವೆ), ಪ್ರತಿಯೊಂದು ದಿನಾಂಕಕ್ಕೂ ತನ್ನದೇ ಆದ ವೈಶಿಷ್ಟ್ಯಗಳಿರುತ್ತವೆ ಎಂದು ಗುರೂಜಿ ವಿವರಿಸಿದ್ದಾರೆ.

 

 

 

Source link

Horoscope Today: ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 1, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಚತುರ್ದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ರಾಹುಕಾಲವು ಬೆಳಗ್ಗೆ 10:42 ರಿಂದ ಮಧ್ಯಾಹ್ನ 12:16 ರವರೆಗೆ ಇದ್ದು, ಶುಭಕಾಲವು ಬೆಳಗ್ಗೆ 9:02 ರಿಂದ 10:41 ರವರೆಗೆ ಮತ್ತು ಮಧ್ಯಾಹ್ನ 12:16 ರಿಂದ 1:51 ರವರೆಗೆ ಇರುತ್ತದೆ ಎಂದು ಗುರೂಜಿ ವಿವರಿಸಿದ್ದಾರೆ.

 

 

 

Source link

ದಿನ ಭವಿಷ್ಯ: ಈ ರಾಶಿಯವರು ಇಂದು ತಮ್ಮ ದುರ್ವರ್ತನೆಯಿಂದ ಖ್ಯಾತರಾಗುವರು – Kannada News | Horoscope May 01 Friday 2026; Dina Rashi Bhavishya Today, Checkout the details here

ಮೇಷ ರಾಶಿ:

ಇಂದು ನಿಮಗೆ ಸ್ವಲ್ಪ ಆಯಾಸವು ಬಾಧಿಸಬಹುದು. ತಕ್ಕ ವಿಶ್ರಾಂತಿಯಿಂದ ಪರಿಹಾರವನ್ನು ಮಾಡಿಕೊಳ್ಳಿ. ನಿಮ್ಮ ಬುದ್ಧಿಯನ್ನು ಬೇಕಾದ ಕಡೆ ಉಪಯೋಗಿಸಿ. ಭೂಮಿಯ ವ್ಯವಹಾರದ ಬಗ್ಗೆ ತಾತ್ಸಾರವು ಯಾರದೋ ಕಾರಣಕ್ಕೆ ಬರಬಹುದು. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ಕೆಲವನ್ನು ನೀವು ಮನಸ್ಸಿನಿಂದ ತೆಗೆದರಷ್ಟೇ ನೆಮ್ಮದಿ ಸಾಧ್ಯ.

ವೃಷಭ ರಾಶಿ:

ನೀವು ಕೊಟ್ಟಿರುವ ಸಂಪತ್ತು ತಾನಾಗಿಯೇ ಬರಲಿದೆ. ಅಧಿಕವಾದ ಉತ್ಸಾಹದಿಂದ ಏನನ್ನಾದರೂ ಮಾಡಲು ಹೋಗಬೇಡಿ. ಸಾಮರ್ಥ್ಯ ಮತ್ತು ಸಂಪತ್ತಿಗೆ ಅನುಸಾರವಾಗಿ ಯೋಚನೆ ಹಾಗೂ ಯೋಜನೆಗಳು ಇರಲಿ. ಅನಿರೀಕ್ಷಿತ ಬಂಧುಗಳ ಆಗಮನದಿಂದ ನಿಮ್ಮ ಕಾರ್ಯಕ್ಕೆ ತೊಂದರೆಯಾದರೂ ತೋರಿಸಿಕೊಳ್ಳಲು ಹೋಗದೇ ಸಂತೋಷದಿಂದ ಇರುವಿರಿ. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ.

ಮಿಥುನ ರಾಶಿ:

ನಿಮಗೆ ಆಪ್ತರ ಮಾತುಗಳು ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು.‌ ಏನನ್ನಾದರೂ ಸಾಧಿಸಬೇಕು ಎನ್ನುವ ಛಲವು ನಿಮ್ಮ ನಿತ್ಯಮಂತ್ರವಾಗಲಿ. ವಿದ್ಯುತ್ ಯಂತ್ರದ ದುರಸ್ತಿಗೆ ಖರ್ಚು ಹೆಚ್ಚಾಗುವುದು. ಆರ್ಥಿಕ ವ್ಯವಹಾರ ಶುದ್ಧರಾಗಿರಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಆಲಸ್ಯದಿಂದ ಕೆಲವು ಅನಿವಾರ್ಯ ಕಾರ್ಯವನ್ನು ಮಾಡಲಾರಿರಿ.

ಕರ್ಕಾಟಕ ರಾಶಿ:

ಭೂಮಿಯ ವ್ಯವಹಾರದ ಕಾರಣಕ್ಕೆ ಹೆಚ್ಚು ಓಡಾಟವನ್ನು ಮಾಡಬೇಕಾಗಿ ಬರಬಹುದು. ನಿಮ್ಮ ಪ್ರಭಾವವು ಜೊತೆಗಾರರಿಗೆ ಗೊತ್ತಾಗಲಿದೆ. ನಿಮ್ಮ ಸಹಾಯಕ್ಕೆ ಬರುವವರನ್ನು ಗೌರವಿಸಿ. ಸರಿಯಾದ ಸ್ಥಾನವನ್ನೂ ಕೊಡಬೇಕಾಗುವುದು. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ನಿಮ್ಮ‌ ಪರೀಕ್ಷೆಯನ್ನು ನೀವು ಮಾಡಿಕೊಳ್ಳುವುದು ಉತ್ತಮ. ಉನ್ನತ ಅಧಿಕಾರದ ಆಸೆಯನ್ನು ಸಹೋದ್ಯೋಗಿಗಳು ನಿಮಗೆ ತಿಳಿಸಬಹುದು.

ಸಿಂಹ ರಾಶಿ :

ಇಂದು ನಿಮ್ಮಿಂದಾಗದ ಕಾರ್ಯವನ್ನು ಬೇರೆಯವರು ಮಾಡಿ ತೋರಿಸುವುದು ನಿಮಗೆ ಅಪಮಾನಕರವೆನಿಸವುದು. ಮಕ್ಕಳಿಗೆ ನಿಮ್ಮ ಪ್ರೀತಿಯ ಕೊರತೆಯು ಆದೀತು. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ವಿವಾಹದ ಬಗ್ಗೆ ಎಲ್ಲರೂ ನಿಮ್ಮನ್ನು ಪ್ರಶ್ನಿಸುವರು. ಮುಜುಗರಕ್ಕೆ ಸಿಕ್ಕಿಕೊಳ್ಳಬೇಕಾದೀತು.

ಕನ್ಯಾ ರಾಶಿ:

ಬೇಕಾದುದನ್ನು ಯಾರದೋ ಮೂಲಕ ಪಡೆಯುವುದು ಅನಿವಾರ್ಯವಾಗಬಹುದು. ಕಾಲಾನಂತರ ನಿಮಗೆ ಉತ್ತಮವಾದ ಫಲವನ್ನೇ ನೀಡುವುದು. ತಿಳಿದುಕೊಳ್ಳುವ ಕುತೂಹಲವು ನಿಮ್ಮಲಿಂದು ಅಧಿಕವಾಗಿರುವುದು. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು.

ತುಲಾ ರಾಶಿ:

ಎಲ್ಲರ ಜೊತೆ ಸಲುಗೆಯಿಂದ ಇರುವ ನಿಮ್ಮ ಬಗ್ಗೆ ಕೆಲವು ಅಪವಾದದ ಮಾತುಗಳು ಕೇಳಿಬರಬಹುದು. ನಿಮ್ಮನ್ನು ನೀವೇ ಆತ್ಮಾವಲೋಕನ ಮಾಡಿಕೊಳ್ಳಿ. ಮುಂದಿನ ಹೆಜ್ಜೆಯನ್ನು ಇಡುವಾಗ ಜಾಗರೂಕರಾಗಿರಿ. ಕೃಷಿಯಲ್ಲಿ ಹೊಸ ಯೋಜನೆ ಮಾಡಲಿದೆ. ಸೋಲಬಾರದು ಎಂಬ ಛಲವು ಇದ್ದು ಕಾರ್ಯವನ್ನು ಮಾಡುವಿರಿ. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಏಕಾಂಗಿಯಾಗಿ ಸುತ್ತುವುದು ಇಷ್ಟವಾಗುವುದು. ‌

ವೃಶ್ಚಿಕ ರಾಶಿ:

ಕ್ರೀಡೆಯಲ್ಲಿ ಉತ್ಸಾಹದಿಂದ ಭಾಗವಹಿಸುವಿರಿ. ತಂದೆ ಮತ್ತು ತಾಯಿಯರು ನಿಮಗೆ ಹಿತವಚನವನ್ನು ಹೇಳುವರು. ಆಲಿಸಿ ಮುಂದಿನ ಕ್ರಮವನ್ನು ಕೈಗೊಳ್ಳಿ. ರಕ್ಷಣೆಗೆ ಸಂಬಂಧಿಸಿದ ಯಾವುದಾದರೂ ಉದ್ಯೋಗವು ಸಿಗಬಹುದು. ಅವರ ಬಗ್ಗೆ ಅತಿಯಾದ ಕಾಳಜಿ ಬೇಕು. ನಿಮ್ಮ ನೆಮ್ಮದಿಯನ್ನು ನೀವೇ ಕಂಡುಕೊಳ್ಳಬೇಕು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು.

ಧನು ರಾಶಿ:

ನಿಮ್ಮ ಹಣವೂ ಖಾಲಿಯಾಗಿ ಸಂಗಾತಿಯಿಂದ ಹಣವನ್ನು ಪಡೆಯುವಿರಿ. ಖರ್ಚನ್ನು ಕಡಿಮೆಮಾಡಿಕೊಳ್ಳುವ ವಿಚಾರದಲ್ಲಿ ಚಿಂತಿಸುವುದು ಉತ್ತಮ. ಬಂಧುಗಳಿಂದ ನಿಮಗೆ ಬೇಕಾದುದು ಸಿಗದೇಹೋಗಬಹುದು. ಉದ್ವೇಗದಿಂದ ಏನನ್ನಾದರೂ ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು.

ಮಕರ ರಾಶಿ:

ಉಪಕಾರ ಮಾಡುವುದು ನಿಮಗೆ ಖುಷಿ ಕೊಡುವುದು. ಮಕ್ಕಳಿಂದ ನಿಮಗೆ ಖುಷಿಯಾಗಲಿದೆ. ಸ್ವಾವಲಂಬಿಯಾಗಲು ನಿಮ್ಮವರೇ ಬಿಡಲಾರರು. ಕುಟುಂಬವು ಯಾವತ್ತೂ ಇರುವಂತೆ ನಿಮ್ಮ ಬೆಂಬಲಕ್ಕೆ ಇರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ಉನ್ನತವಾದ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಆದಂತೆ ಅನಿಸುವುದು. ಕೃಷಿಯ ವ್ಯವಹಾರದಲ್ಲಿ ಲಾಭವು ಬರವಂತೆ ಆಲೋಚನೆ ಮಾಡುವಿರಿ.

ಕುಂಭ ರಾಶಿ:

ಅಶುಭದ ಸೂಚನೆಯನ್ನು ನಿರ್ಲಕ್ಷಿಸುವುದು ಬೇಡ. ಸಂಪಾದನೆಗೆ ನೂರು ದಾರಿಗಳಿದ್ದರೂ ನಿಮ್ಮ ಆಯ್ಕೆ ಸ್ಪಷ್ಟವೂ ಯೋಗ್ಯವೂ ಆಗಿರುತ್ತದೆ. ದುಡುಕಿ ಯಾವ ನಿರ್ಧಾರಗಳನ್ನೂ ತೆಗೆದುಕೊಳ್ಳಬೇಡಿ. ನಿಮಗೆ ಕೊಡುವ ಭರವಸೆಯು ನಿಮ್ಮಲ್ಲಿ ಬಲವನ್ನು ತರುವುದು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ಸಹೋದರರ ಶೀತಲ ಸಮರವು ತಿಳಿಯಾಗಬಹುದು ವ್ಯಾಪಾರದ ನಿರ್ಲಕ್ಷ್ಯದಿಂದ ಅಲ್ಪ ನಷ್ಟವು ಸಂಭವಿಸಬಹುದು.

ಮೀನ ರಾಶಿ:

ನೀವು ಇಂದು ಇರುವುದರಲ್ಲಿ ಖುಷಿಪಡುವುದು ಉತ್ತಮ. ಭೂಮಿಯ ಕ್ರಯ ಹಾಗೂ ವಿಕ್ರಯದ ವಿಚಾರದಲ್ಲಿ ನಿಮಗೆ ಲಾಭವಂತೂ ಸಿಗಲಿದೆ. ಕೃಷಿ ಭೂಮಿಗೆ ಸಂಬಂಧಪಟ್ಟ ವ್ಯವಹಾರದಲ್ಲಿ ಲಾಭವನ್ನು ಕಾಣಬಹುದು. ಸಂಗಾತಿಯ ಜೊತೆ ಖುಷಿಯಿಂದ ಇರಲಿದ್ದೀರಿ. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಸಿದ್ಧಿ, ಕರಣ : ಬವ, ಸೂರ್ಯೋದಯ – 06 – 03 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:47 – 12:22, ಯಮಗಂಡ ಕಾಲ 15:31 – 17:05, ಗುಳಿಕ ಕಾಲ 07:38 – 09:13

-ಲೋಹಿತ ಹೆಬ್ಬಾರ್ – 8762924271 (what’s app only)

Source link

GT vs RCB: ಕಳಪೆ ಬ್ಯಾಟಿಂಗ್‌, ಫಿಲ್ಡಿಂಗ್​ಗೆ ಸೋಲಿನ ಬೆಲೆ ತೆತ್ತ ಆರ್​ಸಿಬಿ – Kannada News | IPL 2026: GT Dominates RCB in 42nd Match; Gujarat Titans Secure Easy Win in Ahmedabad

ಐಪಿಎಲ್ 2026 (IPL 2026) ರ 42ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (GT vs RCB) ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಲೀಗ್​ನಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ಗೆದ್ದಿದ್ದರೆ, ಇದೀಗ ಎರಡನೇ ಪಂದ್ಯವನ್ನು ಗುಜರಾತ್ ಟೈಟಾನ್ಸ್ ಸುಲಭವಾಗಿ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಕೇವಲ 155 ರನ್​​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಗುಜರಾತ್ ಇನ್ನು 25 ಬಾಲ್​ಗಳು ಬಾಕಿ ಇರುವಂತೆಯೇ ಜಯ ಸಾಧಿಸಿತು. ಈ ಆವೃತ್ತಿಯಲ್ಲಿ ಇದು ಆರ್​ಸಿಬಿಯ ಮೂರನೇ ಸೋಲಾದರೆ, ಇತ್ತ ಗುಜರಾತ್ ತಂಡಕ್ಕೆ 5ನೇ ಗೆಲುವಾಗಿದೆ.

ಆರ್‌ಸಿಬಿ ಬ್ಯಾಟಿಂಗ್ ವಿಫಲ

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಕಳಪೆ ಆರಂಭ ಪಡೆಯಿತು. ಜಾಕೋಬ್ ಬೆಥೆಲ್ ಕೇವಲ 5 ರನ್‌ಗಳಿಗೆ ಔಟಾದರು. ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ, ರಬಾಡ ಅವರ ಓವರ್‌ನಲ್ಲಿ ಸತತ ಐದು ಬೌಂಡರಿಗಳನ್ನು ಬಾರಿಸಿದರು. ಆದರೆ ಅದೇ ರಬಾಡ ಬೌಲ್ ಮಾಡಿದ ಮುಂದಿನ ಓವರ್​ನಲ್ಲಿ ಔಟಾದರು. ಪಡಿಕ್ಕಲ್ ಮತ್ತು ಪಾಟಿದಾರ್ ಜೊತೆಯಾಟವನ್ನು ನಿರ್ಮಿಸಲು ಪ್ರಯತ್ನಿಸಿದರು, ಆದರೆ ಆರ್‌ಸಿಬಿ ನಾಯಕ ಪಾಟಿದಾರ್ 19 ರನ್‌ಗಳಿಗೆ ಔಟಾದರು. ಜಿತೇಶ್ ಶರ್ಮಾ ಮತ್ತೊಮ್ಮೆ ನಿರಾಶೆಗೊಳಿಸಿ 1 ರನ್‌ಗೆ ಔಟಾದರು. ಟಿಮ್ ಡೇವಿಡ್ ಅವರನ್ನು ರಶೀದ್ ಖಾನ್ 9 ರನ್‌ಗೆ ಔಟ್ ಮಾಡಿದರು. ತಂಡದ ಪರ ಏಕಾಂಗಿ ಹೋರಾಟ ನೀಡಿದ ದೇವದತ್ (40 ರನ್), ರಶೀದ್ ಖಾನ್ ಅವರ ಅದ್ಭುತ ಎಸೆತದಲ್ಲಿ ಬೌಲ್ಡ್ ಆದರು. ಅಂತಿಮವಾಗಿ ಆರ್​ಸಿಬಿ 19.1 ಓವರ್​ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 155 ರನ್ ಕಲೆಹಾಕಿತು.

ಗಿಲ್, ಬಟ್ಲರ್ ಅದ್ಭುತ ಬ್ಯಾಟಿಂಗ್

ಗುರಿ ಬೆನ್ನಟ್ಟಿದ ಗುಜರಾತ್ ತಂಡ ಕೂಡ ಕಳಪೆ ಆರಂಭ ಪಡೆಯಿತು. ಸಾಯಿ ಸುದರ್ಶನ್ 6 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಆದರೆ ಶುಭಮನ್ ಗಿಲ್ ಅಬ್ಬರದ ಬ್ಯಾಟಿಂಗ್‌ ನಡೆಸಿ ಜೋಶ್ ಹ್ಯಾಜಲ್‌ವುಡ್ ಅವರ ಮೊದಲ ಓವರ್‌ನಲ್ಲಿ 24 ರನ್ ಕಲೆಹಾಕಿದರು. ಅವರು 18 ಎಸೆತಗಳಲ್ಲಿ 3 ಸಿಕ್ಸರ್‌ಗಳು ಮತ್ತು 4 ಬೌಂಡರಿಗಳನ್ನು ಒಳಗೊಂಡಂತೆ 43 ರನ್ ಗಳಿಸಿ ಔಟಾದರು. ಜೋಸ್ ಬಟ್ಲರ್ 19 ಎಸೆತಗಳಲ್ಲಿ 4 ಸಿಕ್ಸರ್‌ಗಳು ಮತ್ತು 2 ಬೌಂಡರಿಗಳನ್ನು ಒಳಗೊಂಡಂತೆ 39 ರನ್ ಗಳಿಸಿದರು. ಕೊನೆಯಲ್ಲಿ, ರಾಹುಲ್ ತೆವಾಟಿಯಾ ಗುಜರಾತ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

GT vs RCB IPL 2026 Highlights: ಆರ್​​ಸಿಬಿ ವಿರುದ್ಧ ಸುಲಭವಾಗಿ ಗೆದ್ದ ಗುಜರಾತ್

ಆರ್​​ಸಿಬಿ ಕಳಪೆ ಫಿಲ್ಡಿಂಗ್

ಗುಜರಾತ್ ತಂಡದ ಈ ಗೆಲುವಿನಲ್ಲಿ ಆರ್​ಸಿಬಿಯ ಕಳಪೆ ಫಿಲ್ಡಿಂಗ್ ಕೂಡ ಕಾರಣವಾಯಿತು. ಶುಭ್​ಮನ್ ಗಿಲ್ ನೀಡಿದ ರನೌಟ್ ಅವಕಾಶಗಳನ್ನು ಆರ್​ಸಿಬಿ ಸರಿಯಾಗಿ ಬಳಸಿಕೊಳ್ಳಲಿಲ್ಲ. ಹಾಗೆಯೇ ಜೋಸ್ ಬಟ್ಲರ್ ಕೇವಲ 1 ರನ್​ ಬಾರಿಸಿದ್ದಾಗ ನೀಡಿದ ಸುಲಭ ಕ್ಯಾಚ್ ಅನ್ನು ವಿಕೆಟ್ ಕೀಪರ್ ಜಿತೇಶ್ ಶರ್ಮಾ ಕೈಚೆಲ್ಲಿದರು. ಈ ಜೀವದಾನದ ಲಾಭ ಪಡೆದ ಬಟ್ಲರ್ 39 ರನ್ ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:11 pm, Thu, 30 April 26

Source link

ಮತ ಎಣಿಕೆಗೂ ಮುನ್ನ ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ – Kannada News | West Bengal elections BJP and TMC leaders face off as clash erupts outside EVM strong room in Kolkata

ಕೊಲ್ಕತ್ತಾ, ಏಪ್ರಿಲ್ 30: ಪಶ್ಚಿಮ ಬಂಗಾಳದ ಚುನಾವಣೆಯ (West Bengal Elections) ಮತ ಎಣಿಕೆ ಮೇ 4ರಂದು ನಡೆಯಲಿದೆ. ಆದರೆ, ಮತ ಎಣಿಕೆಗೂ ಮುನ್ನ ವಿದ್ಯುನ್ಮಾನ ಮತಯಂತ್ರಗಳನ್ನು ತೆರೆದ ಆರೋಪ ಮಾಡಿರುವ ಟಿಎಂಸಿ ಬಿಜೆಪಿಯವರು ಅಕ್ರಮವಾಗಿ ಇವಿಎಂ ಓಪನ್ ಮಾಡಿದ್ದಾರೆಂದು ಇವಿಎಂಗಳನ್ನು ಇರಿಸಿರುವ ಸ್ಟ್ರಾಂಗ್​ರೂಮ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊಲ್ಕತ್ತಾದ ಸ್ಟ್ರಾಂಗ್​ರೂಮ್ ಹೊರಗೆ ಟಿಎಂಸಿ ನಾಯಕರ ಪ್ರತಿಭಟನೆ ನಡೆದಿದೆ. ಟಿಎಂಸಿ ನಾಯಕರಾದ ಕುನಾಲ್ ಘೋಷ್, ಶಶಿ ಪಂಜಾ ಪ್ರತಿಭಟನೆ ನಡೆಸಿದ್ದಾರೆ. ಸ್ಟ್ರಾಂಗ್​ರೂಮ್ ಸೀಲ್ ಟ್ಯಾಂಪರಿಂಗ್ ಮಾಡಿದ್ದಾರೆಂದು ಆರೋಪಿಸಿ ಧರಣಿ ನಡೆಸಲಾಗಿದೆ. ಇವಿಎಂಗಳನ್ನು ತೆರೆದಿರುವ ವಿಡಿಯೋ ಕೂಡ ಟಿಎಂಸಿ ಬಿಡುಗಡೆ ಮಾಡಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಟಿಎಂಸಿ ಮುಖ್ಯಸ್ಥೆ ಮತ್ತು ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸ್ಟ್ರಾಂಗ್​ ಎದುರು ಜಮಾಯಿಸಿರುವ ಬಿಜೆಪಿ, ಟಿಎಂಸಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version