Headlines

IND vs NZ: ಕಿವೀಸ್ ವಿರುದ್ಧ 50 ರನ್​ಗಳಿಂದ ಸೋತ ಟೀಂ ಇಂಡಿಯಾ – Kannada News | India vs NZ 4th T20: New Zealand Wins by 50 Runs; Shivam Dube’s Heroics

ವಿಶಾಖಪಟ್ಟಣದ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ 4ನೇ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ನ್ಯೂಜಿಲೆಂಡ್ ತಂಡ ಕೊನೆಗೂ ಈ ಟಿ20 ಸರಣಿಯಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ. ಸರಣಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿತ್ತು. ಇತ್ತ ಸತತ ಸೋಲುಗಳಿಂದ ಕಂಗೆಟ್ಟಿದ್ದ ಕಿವೀಸ್, ಕೊನೆಗೂ ಗೆಲುವು ಕಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕಿವೀಸ್ 215…

Read More

ತಮಿಳುನಾಡಿನ ಎಐಎಡಿಎಂಕೆಯಲ್ಲಿ ಬಿಕ್ಕಟ್ಟು; ಷಣ್ಮುಗಂ ನೇತೃತ್ವದ ಬಣದಿಂದ ಇಪಿಎಸ್ ರಾಜೀನಾಮೆಗೆ ಒತ್ತಾಯ – Kannada News | Tamil Nadu AIADMK MLAs split into two groups after Tamil Nadu elections Edappadi K Palaniswami

ಚೆನ್ನೈ, ಮೇ 11: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಹೀನಾಯ ಸೋಲಿನಿಂದಾಗಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕುವ ಮತ್ತು ಹೊಸ ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡುವ ಬಗ್ಗೆ ಭಾರೀ ಚರ್ಚೆ ನಡೆದಿದೆ. ಈ ನಿಟ್ಟಿನಲ್ಲಿ ಎಡಪ್ಪಾಡಿ ಪಳನಿಸ್ವಾಮಿ ವಿರುದ್ಧದ ಎಲ್ಲ ಭಿನ್ನಮತೀಯರು ಒಟ್ಟಾಗಿ ಕೆಲಸ ಮಾಡಿ ಸಾಧ್ಯವಾದಷ್ಟು ಬೇಗ ಸಾಮಾನ್ಯ ಸಮಿತಿ ಸಭೆ ಕರೆಯಲು ನಿರ್ಧರಿಸಲಾಗಿದೆ. ಎಐಎಡಿಎಂಕೆಯ ಉನ್ನತ ಮೂಲಗಳ ಪ್ರಕಾರ, ಪಕ್ಷದ ಹಿರಿಯ ನಾಯಕ ಸಿ.ವಿ ಷಣ್ಮುಗಂ ಅವರೊಂದಿಗೆ ಇರುವ…

Read More

ಸಮಂತಾ ಸಿನಿಮಾಕ್ಕೆ ನಿರ್ಮಾಪಕರೇ ಇರಲಿಲ್ಲ, ಈಗ ಕೋಟಿಗಳಲ್ಲಿ ಗಳಿಕೆ – Kannada News | Producers backed out from Samantha Ruth Prabhu’s Maa Inti Bangaram movie

ಸಮಂತಾ ಋತ್ ಪ್ರಭು (Samantha Ruth Prabhu) ದಕ್ಷಿಣ ಭಾರತದ ಬಲು ಬೇಡಿಕೆಯ ನಟಿಯಾಗಿದ್ದವರು. ಆದರೆ ಕಳೆದ ಕೆಲ ವರ್ಷಗಳಿಂದ ಅವರಿಗೆ ಬೇಡಿಕೆ ಕಡಿಮೆ ಆಗಿದೆ. ಈ ಬಗ್ಗೆ ಕೆಲ ಬಾರಿ ಅವರೇ ಹೇಳಿಕೊಂಡಿದ್ದರು. ಇತ್ತೀಚೆಗೆ ಅವಕಾಶಗಳು ಕಡಿಮೆ ಆಗಿವೆ ಎಂದು. ಇತ್ತೀಚೆಗಷ್ಟೆ ಅವರ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆ ಆಯ್ತು. ಸಿನಿಮಾ ಒಂದು ವಾರದ ಒಳಗೆ 50 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಅನ್ನು ಕುಟುಂಬ ಪ್ರೇಕ್ಷಕರು ವೀಕ್ಷಿಸುತ್ತಿದ್ದಾರೆ. ವಿಶೇಷವಾಗಿ…

Read More

‘ನಾನು ಸಾಯೋವರೆಗೂ ಚಿರಋಣಿ’; ಧನ್ಯವಾದ ಹೇಳಿದ ಆ್ಯಂಕರ್ ಅನುಶ್ರೀ – Kannada News | Anchor Anushree’s 20 Year Career Milestone: Thanks Zee Kannada for Success

ಅನುಶ್ರೀ (Anushree) ಅವರು ಈಗ ಆ್ಯಂಕರ್ ಅನುಶ್ರೀ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ವೃತ್ತಿ ಜೀವನ. ಅವರು ಆ್ಯಂಕರಿಂಗ್ ಮಾಡಿ, ಆ್ಯಂಕರ್ ಅನುಶ್ರೀ ಎಂದೇ ಫೇಮಸ್ ಆಗಿದ್ದಾರೆ. ಈಗ ಅನುಶ್ರೀ ಅವರು ವೃತ್ತಿ ಜೀವನಕ್ಕೆ 20 ವರ್ಷಗಳು ತುಂಬಿವೆ. ಈ ವಿಶೇಷ ಕ್ಷಣವನ್ನು ಜೀ ಕನ್ನಡದವರು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್-2025 ಮತ್ತು ‘ಕಿಲಾಡಿ ಜೂನಿಯರ್ಸ್’ಮಹಾಸಂಗಮ’ದಲ್ಲಿ ಆಚರಿಸಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಅನುಶ್ರೀ ಅವರು ಈ ಸಂದರ್ಭದಲ್ಲಿ ಭಾವುಕರಾದರು. ಅನುಶ್ರೀ ಅವರು ಆ್ಯಂಕರಿಂಗ್ ಮೂಲಕ ಗಮನ…

Read More

IND vs ENG: ಲಾರ್ಡ್ಸ್‌ನಲ್ಲಿ ಟೆಸ್ಟ್ ಶತಕ ಬಾರಿಸಿದ ಮೊದಲ ಮಹಿಳಾ ಆಟಗಾರ್ತಿ ಯಾಸ್ತಿಕಾ ಭಾಟಿಯಾ – Kannada News | Yastika Bhatia Makes History: First Woman to Score Test Century at Lord’s

ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ಭಾರತ ಹಾಗೂ ಇಂಗ್ಲೆಂಡ್‌ ಮಹಿಳಾ ತಂಡಗಳ ನಡುವೆ ಏಕೈಕ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೂರನೇ ದಿನದಾಟದಂದು ಭಾರತ ಮಹಿಳಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಯಾಸ್ತಿಕಾ ಭಾಟಿಯಾ ತಮ್ಮ ವೃತ್ತಿಜೀವನದ ಮೊಟ್ಟ ಮೊದಲ ಟೆಸ್ಟ್ ಶತಕ ಬಾರಿಸಿದರು. ಭಾರತದ ಎರಡನೇ ಇನ್ನಿಂಗ್ಸ್​ನಲ್ಲಿ ಈ ಶತಕದ ಇನ್ನಿಂಗ್ಸ್ ಆಡುವ ಮೂಲಕ ಯಾಸ್ತಿಕಾ, ಲಾರ್ಡ್ಸ್‌ ಮೈದಾನದಲ್ಲಿ ಟೆಸ್ಟ್ ಶತಕ ಬಾರಿಸಿದ ಮೊಟ್ಟ ಮೊದಲ ಮಹಿಳಾ ಕ್ರಿಕೆಟರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದರು. ಯಾಸ್ತಿಕಾ…

Read More

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಖಾಜಾನ ಪ್ರೀತಿಗೆ ಮನಸೋತು ಹೆಣವಾದಳು – Kannada News | Vijayanagara: Love Affair Ends in Tragic Murder of Mother of Three

ಬಳ್ಳಾರಿ, ಜನವರಿ 15: ಆಕೆ ಮೂರು ಮಕ್ಕಳ ತಾಯಿ (mother). ಕಳೆದ 8 ವರ್ಷಗಳಿಂದ ಗಂಡನಿಂದ ದೂರವಾಗಿದ್ದರು. ರೈಲ್ವೆ ಸ್ಟೇಷನ್​​ನಲ್ಲಿ ಸ್ಟಾಲ್‌‌ವೊಂದರಲ್ಲಿ ಕೆಲಸ ಮಾಡಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದರು. ತಾವಾಯ್ತು ತಮ್ಮ ಕುಟುಂಬವಾಯ್ತು ಅಂತಾ ಇದ್ದವರಿಗೆ ಯುವಕನೊಬ್ಬನ ಪರಿಚಯವಾಗಿದೆ. ಪರಿಚಯ ಸಲುಗೆಗೆ ತಿರುಗಿ ಯಾರಿಗೂ ಗೊತ್ತಾಗದ ಹಾಗೆ ನಾಲ್ಕು ತಿಂಗಳ ಹಿಂದೆ ಮದುವೆ ಆಗಿದ್ದರು. ಆದರೆ ಅವರಿಬ್ಬರ ನಡುವೆ ಅದೇನಾಯ್ತು ಏನೋ ಗೊತ್ತಿಲ್ಲ ನಸುಕಿನ ಜಾವವೇ ಆಕೆಯ ಕತ್ತು ಕೊಯ್ದು ಭೀಕರ ಕೊಲೆ (Murder) ಮಾಡಿಯೇ ಬಿಟ್ಟಿದ್ದ….

Read More

Video: ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ: ಟ್ರಂಪ್ – Kannada News | Trump Vows Continued Military Action Against Iran Until Objectives Are Achieved

ವಾಷಿಂಗ್ಟನ್, ಮಾರ್ಚ್​ 03: ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಅಮೆರಿಕ ಸೈನಿಕರು ಪ್ರಾಣ ಕಳೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಎಚ್ಚರಿಸಿದ್ದಾರೆ. ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಟ್ರಂಪ್ ಅವರು ಅಸ್ತಿತ್ವವಾದದ ಬೆದರಿಕೆ ಎಂದು ಕರೆದಿದ್ದಕ್ಕೆ ಪ್ರತಿಕ್ರಿಯೆಯಾಗಿ ಯುದ್ಧವನ್ನು ವಿವರಿಸಿದ್ದಾರೆ. ಕ್ಷಿಪಣಿಗಳು ಮತ್ತು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಇರಾನಿನ ಆಡಳಿತವು ಪ್ರತಿಯೊಬ್ಬ ಅಮೆರಿಕನ್ನರಿಗೂ ಭೀಕರ ಬೆದರಿಕೆಯಾಗಿದೆ ಎಂದರು. ಅಯತೊಲ್ಲ ಖಮೇನಿ…

Read More

Gold Rate Today: ಮುಂದುವರಿದ ಕುಸಿತ; ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ – Kannada News | Gold Price Today on 2nd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 2: ಕಳೆದ ವಾರ ಶುರುವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಕುಸಿತ ಈ ವಾರ ಮುಂದುವರಿಯುತ್ತಿರುವಂತಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ (Gold Rates) ಒಂದು ಗ್ರಾಮ್​ಗೆ 830 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಇದರ ಬೆಲೆಯಲ್ಲಿ ಬಹುತೇಕ ಎರಡು ಸಾವಿರ ರೂ ತಗ್ಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸೋಮವಾರ ಭರ್ಜರಿ ಇಳಿಕೆ ಆಗಿದೆ….

Read More

Adhika Jyeshtha Masa 2026: 3 ವರ್ಷಕ್ಕೊಮ್ಮೆ ಬರುವ ‘ಅಧಿಕ ಜ್ಯೇಷ್ಠ ಮಾಸ’ ರಹಸ್ಯವೇನು? ಈ ಸಮಯದಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು? – Kannada News | Adhika Jyeshtha Masa 2026: Dates, Significance and Rituals for Spiritual Growth

ಹಿಂದೂ ಪಂಚಾಂಗದಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಬರುವ ‘ಅಧಿಕ ಮಾಸ’ಕ್ಕೆ ಅತ್ಯಂತ ವಿಶಿಷ್ಟವಾದ ಸ್ಥಾನವಿದೆ. ಈ ಬಾರಿ 2026ರಲ್ಲಿ ಜ್ಯೇಷ್ಠ ತಿಂಗಳಿನಲ್ಲಿ ಈ ಹೆಚ್ಚುವರಿ ಮಾಸ ಬಂದಿರುವುದರಿಂದ, ಇದನ್ನು ‘ಅಧಿಕ ಜ್ಯೇಷ್ಠ ಮಾಸ’ ಎಂದು ಕರೆಯಲಾಗುತ್ತದೆ. ಭಗವಾನ್ ವಿಷ್ಣುವಿನ ಕೃಪೆಗೆ ಪಾತ್ರರಾಗಲು ಪ್ರಕೃತಿ ನಮಗೆ ಕರುಣಿಸಿರುವ ಈ ಪವಿತ್ರ ಮಾಸದ ಹಿನ್ನೆಲೆ, ಮಹತ್ವ ಮತ್ತು ಈ ವರ್ಷದ ನಿಖರ ದಿನಾಂಕಗಳ ವಿವರ ಇಲ್ಲಿದೆ. ಅಧಿಕ ಮಾಸ ಎಂದರೇನು? ಇದು ಹೇಗೆ ಸಂಭವಿಸುತ್ತದೆ? ಸಂಪ್ರದಾಯದಲ್ಲಿ ಸೌರಮಾನ (ಸೂರ್ಯನ ಚಲನೆ)…

Read More

IPL 2026: ಆರ್​ಸಿಬಿಯ ಸಾರ್ವಕಾಲಿಕ ಪ್ಲೇಯಿಂಗ್ 11 ಹೆಸರಿಸಿದ ಡಿಕೆ; ಕೊಹ್ಲಿಗಿಲ್ಲ ನಾಯಕತ್ವ

2026 ರ ಐಪಿಎಲ್ (IPL 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಮೊದಲ 20 ಪಂದ್ಯಗಳ ವೇಳಾಪಟ್ಟಿಯ ಪ್ರಕಾರ, ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್​ ಹೈದರಾಬಾದ್ (RCB vs SRH) ನಡುವೆ ನಡೆಯಲಿದೆ. ಮೊದಲ ಪಂದ್ಯಕ್ಕೆ ಆರ್​ಸಿಬಿಯ ಪ್ಲೇಯಿಂಗ್ 11 ಹೇಗಿರಲಿದೆ ಎಂಬ ಕುತೂಹದ ನಡುವೆ ತಂಡದ ಮಾಜಿ ಆಟಗಾರ ಹಾಗೂ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ (Dinesh Karthik) ಆರ್​ಸಿಬಿಯ ಸಾರ್ವಕಾಲಿಕ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದಾರೆ….

Read More