Headlines

ಉದ್ಯೋಗ ಖಾತ್ರಿ ಕೆಲಸದ ವೇಳೆ ದುರ್ಘಟನೆ: ಬೆಂಕಿಯಂಥ ಬಿಸಿಲಿಗೆ ಬಲಿಯಾದ್ನಾ ಕಾರ್ಮಿಕ? – Kannada News | Raichur MGNREGA Worker Dies: Heat Stroke Suspected, Negligence Alleged

ರಾಯಚೂರು, ಏಪ್ರಿಲ್​​ 28: ಉದ್ಯೋಗ ಖಾತ್ರಿ ಯೋಜನೆಯ ಕೆಲಸಕ್ಕೆ ತೆರಳಿದ್ದ ಕಾರ್ಮಿಕನೋರ್ವ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ರಾಯಚೂರಿನ (Raichur) ಯಾಪಲದಿನ್ನಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ಹುಸೇನಪ್ಪ ಮಡಿವಾಳ (49) ಮೃತ ದುರ್ದೈವಿಯಾಗಿದ್ದು, ಕುಸಿದು ಬಿದ್ದ ಈತನನ್ನು ಕೂಡಲೇ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆಯೇ ಹುಸೇನಪ್ಪ ಉಸಿರು ಚೆಲ್ಲಿದ್ದಾರೆ. ಘಟನೆ ಬೆನ್ನಲ್ಲೇ ಸುಡು ಬಿಸಿಲಿನಲ್ಲಿ ಕಾರ್ಮಿಕರನ್ನು ದುಡಿಸುತ್ತಿದ್ದ ಪಿಡಿಒ ವಿರುದ್ಧ ಆಕ್ರೋಶ ಕೇಳಿಬಂದಿದೆ. ಹೀಟ್​​ ಸ್ಟ್ರೋಕ್​​ಗೆ ಬಲಿ? ಇನ್ನು ಸುಮಾರು 40…

Read More

‘ಕೆರೆಬೇಟೆ’ ಬಳಿಕ ‘ಕಾಮನ್ ಮ್ಯಾನ್’: ಓಂ ಸಾಯಿ ಪ್ರಕಾಶ್ ಜೊತೆ ಗೌರಿ ಶಂಕರ್ ಸಿನಿಮಾ – Kannada News | Common Man Kannada movie ft Gowri Shankar directed by Om Sai Prakash

ನಟ ಗೌರಿ ಶಂಕರ್ (Gowri Shankar) ಅವರು ‘ಕೆರೆಬೇಟೆ’ ಸಿನಿಮಾ ಮೂಲಕ ಗಮನ ಸೆಳೆದಿದ್ದರು. ಆ ಬಳಿಕ ಸಣ್ಣ ಬ್ರೇಕ್ ತೆಗೆದುಕೊಂಡ ಅವರು ಈಗ ಹೊಸ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ (Om Sai Prakash) ಜೊತೆ ಗೌರಿ ಶಂಕರ್ ಸಿನಿಮಾ ಮಾಡುತ್ತಿದ್ದಾರೆ. ಇದು ಓಂ ಸಾಯಿ ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 106ನೇ ಸಿನಿಮಾ. ಈ ಚಿತ್ರಕ್ಕೆ ‘ಕಾಮನ್ ಮ್ಯಾನ್’ (Common Man) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ…

Read More

‘ಸೋಫಾ ಅಳತೆ ಮಾಡಿಕೊಡು ಬಾ’ ಎಂದು ಕರೆದು ಬರ್ಬರವಾಗಿ ಹತ್ಯೆ; ಬಾರ್ ಎದುರೇ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿದ ಆಟೋ ಚಾಲಕ! – Kannada News | Kolar Crime News: Sofa Maker Murdered in Drug Fueled Brawl; Accused Arrested

ಕೋಲಾರ, ಏ.28: ಜಿಲ್ಲೆಯಲ್ಲಿ ಒಂದು ಆರ್ಡರ್​ ಇದೆ ಎಂದು ನಂಬಿಸಿ ಕರೆದೊಯ್ದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಹೊರವಲಯದಲ್ಲಿ ನಡೆದಿದೆ. ಬೀಡಿ ಕಾಲೋನಿಯ ನಿವಾಸಿ ಸಲ್ಮಾನ್ ಪಾಷಾ (26) ಕೊಲೆಯಾದ ದುರ್ದೈವಿ ಎಂದು ಹೇಳಲಾಗಿದ . ಸೋಫಾ ತಯಾರಿಕೆ ಮತ್ತು ರಿಪೇರಿ ಕೆಲಸ ಮಾಡಿಕೊಂಡಿದ್ದ ಸಲ್ಮಾನ್ ಪಾಷಾ ಮನೆಗೆ ನಿನ್ನೆ ರಾತ್ರಿ 11:30ರ ಸುಮಾರಿಗೆ ಪರಿಚಯಸ್ಥ ಹುಡುಗರು ಬಂದಿದ್ದರು. “ಹೊಸ ಸೋಫಾ ಆರ್ಡರ್ ಬಂದಿದೆ, ಅದರ ಅಳತೆ ತೆಗೆದುಕೊಳ್ಳಲು ಬಾ” ಎಂದು ಹೇಳಿ…

Read More

31 ವರ್ಷ ಜೈಲಿನಲ್ಲಿದ್ದ ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಈಗ ಹೈಕೋರ್ಟ್ ವಕೀಲ! – Kannada News | After 31 years in jail Rajiv Gandhi assassination convict becomes High Court advocate

ಚೆನ್ನೈ, ಏಪ್ರಿಲ್ 28: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಎ.ಜಿ. ಪೆರಾರಿವಾಲನ್ ಇದೀಗ ಹೈಕೋರ್ಟ್​ ವಕೀಲರಾಗಿದ್ದಾರೆ. 2022ರಲ್ಲಿ ಶಿಕ್ಷೆಯಿಂದ ವಿನಾಯಿತಿ ಪಡೆದು ಬಿಡುಗಡೆಯಾದ ಪೆರಾರಿವಾಲನ್ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಕಾನೂನು ಅಧ್ಯಯನ ಮಾಡಿದರು. 2025ರಲ್ಲಿ ಅಖಿಲ ಭಾರತ ವಕೀಲರ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಅವರು ಈಗ ವಕೀಲರಾಗಿದ್ದಾರೆ. ರಾಜೀವ್ ಗಾಂಧಿ ಹತ್ಯೆಯ ಆರೋಪಿಯಾಗಿದ್ದ ಪೆರಾರಿವಾಲನ್ ಅವರನ್ನು 2022ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬಿಡುಗಡೆ…

Read More

ಶೂಟಿಂಗ್ ವೇಳೆ ಕೆಟ್ಟದಾಗಿ ಪ್ರ್ಯಾಂಕ್ ಮಾಡಿ ನಟಿಗೆ ಆಘಾತ ಉಂಟುಮಾಡಿದ್ದ ಅಕ್ಷಯ್ ಕುಮಾರ್ – Kannada News | Jacqueline Fernandez reveals traumatizing Prank by Akshay Kumar on Wheel Of Fortune finale

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಜನಪ್ರಿಯ ರಿಯಾಲಿಟಿ ಗೇಮ್ ಶೋ ‘ವೀಲ್ ಆಫ್ ಫಾರ್ಚೂನ್’ (Wheel of Fortune) ಏಪ್ರಿಲ್ 27ರಂದು ಮುಕ್ತಾಯವಾಗಿದೆ. ಈ ಫಿನಾಲೆ ಸಂಚಿಕೆಯಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಒಂದು ಇಂಟರೆಸ್ಟಿಂಗ್ ವಿಷಯ ಹಂಚಿಕೊಂಡಿದ್ದಾರೆ. ಅಕ್ಷಯ್ ಕುಮಾರ್ (Akshay Kumar) ಅವರು ಈ ಹಿಂದೆ ತಮಗೆ ಮಾಡಿದ್ದ ಒಂದು ಕೆಟ್ಟ ಪ್ರ್ಯಾಂಕ್ ಬಗ್ಗೆ ಈಗ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಬಾಯಿ ಬಿಟ್ಟಿದ್ದಾರೆ. ಆ ಪ್ರ್ಯಾಂಕ್​ನಿಂದ ತಮಗೆ ಆಘಾತ…

Read More

PBKS vs RR Playing XI: ಬಲಿಷ್ಠ ಪಡೆಗಳನ್ನೇ ಕಣಕ್ಕಿಳಿಸಿದ ಕಿಂಗ್ಸ್ ಮತ್ತು ರಾಯಲ್ಸ್ – Kannada News | PBKS vs RR Playing XI Punjab Kings vs Rajasthan Royals Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಿವೆ. ಮುಲ್ಲನ್​ಪುರ್​ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಈ ಪಂದ್ಯದಲ್ಲಿ ಶಿಮ್ರಾನ್ ಹೆಟ್ಮೆಯರ್…

Read More

ಉಮರ್ ಸಂಬಂಧಿತ ಕಾರ್ಯಕ್ರಮಕ್ಕೆ ವಿರೋಧ: BJP ಪ್ರತಿಭಟನೆ ವೇಳೆ ಹೈಡ್ರಾಮಾ; ಪ್ರತಿಭಟನಾ ನಿರತರು ಖಾಕಿ ವಶಕ್ಕೆ – Kannada News | Umar Khalid Book Event in Bengaluru: BJP Protests Amidst Tight Police Security

ಬೆಂಗಳೂರು, ಏಪ್ರಿಲ್​​ 28: ದೊಮ್ಮಲೂರು ಸಮೀಪದ ಬೆಂಗಳೂರು ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಉಮರ್ ಖಲೀದ್ ಅಂಡ್ ಹಿಸ್ ವರ್ಲ್ಡ್ ಪುಸ್ತಕ ಸಂಬಂಧ ಕಾರ್ಯಕ್ರಮಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಆರೋಪಿಯಾಗಿರುವ ಉಮರ್ ಖಲೀದ್ ಕುರಿತ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಬಿಜೆಪಿ ಒತ್ತಾಯಿಸಿತ್ತು. ಹೀಗಾಗಿ ಕಾರ್ಯಕ್ರಮ ನಡೆಯುವ ಸ್ಥಳದ ಹೊರಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ, ಕಾರ್ಯಕ್ರಮ ಆರಂಭವಾಗುವ ಒಂದು ಗಂಟೆ ಮುನ್ನವೇ ಪೊಲೀಸರು…

Read More

ಎಂ.ಜಿ. ರೋಡ್​ನಲ್ಲಿರುವ ಪ್ರತಿಷ್ಠಿತ ಹೋಟೆಲ್‌ನಲ್ಲಿ ಯುವತಿ ಮೇಲೆ ಹಲ್ಲೆ; ಮ್ಯಾನೇಜರ್ ಮೇಲೆ ಬಟ್ಟೆ ಹರಿಯಲು ಯತ್ನಿಸಿದ ಆರೋಪ – Kannada News | Bengaluru Shock: Tandoor Hotel Manager Accused of Misbehavior, Assault on MG Road

ಬೆಂಗಳೂರು, ಏ.28: ಸಿಲಿಕಾನ್ ಸಿಟಿಯ ಹೃದಯಭಾಗ ಎಂ.ಜಿ. ರಸ್ತೆಯಲ್ಲಿರುವ (MG Road) ಪ್ರಖ್ಯಾತ ‘ತಂದೂರ್ ಹೋಟೆಲ್’ನಲ್ಲಿ ಯುವತಿಯೊಬ್ಬಳ ಮೇಲೆ ಮ್ಯಾನೇಜರ್ ಅಸಭ್ಯವಾಗಿ ವರ್ತಿಸಿ, ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹೋಟೆಲ್ ಮ್ಯಾನೇಜರ್ ರವಿ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೀರ್ತಿ ಎಂಬ ಯುವತಿ ನಿನ್ನೆ (ಏ.27) ಮಧ್ಯಾಹ್ನ ಸುಮಾರು 2:30ರ ಸಮಯದಲ್ಲಿ ತಮ್ಮ ಸ್ನೇಹಿತರೊಂದಿಗೆ ಊಟಕ್ಕಾಗಿ ತಂದೂರ್ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಗ್ರಾಹಕರು ಮತ್ತು ಹೋಟೆಲ್ ಮ್ಯಾನೇಜರ್…

Read More

ಸೋಲಿನ ನಡುವೆಯೂ RCBಯ ಕಾಲೆಳೆದ ಡೆಲ್ಲಿ ಕ್ಯಾಪಿಟಲ್ಸ್ ಫ್ಯಾನ್ಸ್​! – Kannada News | IPL 2026: DC Fans Celebrate Avoiding RCB’s Infamous Record

ಸೋಲಿನ ಅಂಚಿನಲ್ಲಿದ್ದಾಗಲೂ ಅಭಿಮಾನಿಗಳು ಸಂಭ್ರಮಿಸಲು ಸಾಧ್ಯವೇ? ಸಾಧ್ಯ ಎಂಬುದಕ್ಕೆ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಣ ಪಂದ್ಯ ಸಾಕ್ಷಿ. ಆರ್​ಸಿಬಿ ವಿರುದ್ಧದ ಈ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೂ, ಅಭಿಮಾನಿಗಳು ಮಾತ್ರ ತಮ್ಮ ತಂಡವು ಕನಿಷ್ಠ 50 ರನ್ ಬಾರಿಸಲಿ ಎಂದು ಕಾತರದಿಂದ ಕಾಯುತ್ತಿದ್ದರು. ಯಾವಾಗ ತಂಡದ ಸ್ಕೋರ್ 49 ದಾಟಿತೋ, ಆಗ ಸ್ಟೇಡಿಯಂನಲ್ಲಿ ಮೊಳಗಿದ ಸಂಭ್ರಮದ ಅಲೆ ಅಷ್ಟಿಷ್ಟಲ್ಲ. ಆ ಅಪರೂಪದ ಕ್ಷಣ ಮತ್ತು…

Read More

CRPF Recruitment 2026: 9,175 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC ಮತ್ತು ITI ಪಾಸಾದವರಿಗೆ ಸುವರ್ಣವಕಾಶ – Kannada News | CRPF Recruitment 2026: 9175 Constable/Tradesman Vacancies Announced! Apply Now

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಕಾನ್ಸ್‌ಟೇಬಲ್ (ತಾಂತ್ರಿಕ, ಟ್ರೇಡ್ಸ್‌ಮನ್ ಮತ್ತು ಪಯೋನಿಯರ್) ವಿಭಾಗಗಳಲ್ಲಿ ಒಟ್ಟು 9,175 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಆಂಧ್ರಪ್ರದೇಶಕ್ಕೆ 504 ಮತ್ತು ತೆಲಂಗಾಣಕ್ಕೆ 353 ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ದೇಶಾದ್ಯಂತ ಮಹಿಳಾ ಅಭ್ಯರ್ಥಿಗಳಿಗೆ 79 ಹುದ್ದೆಗಳು ಮೀಸಲಿವೆ. ಪಯೋನಿಯರ್ ವಿಭಾಗದ ಹುದ್ದೆಗಳಿಗೆ ಎಲ್ಲಾ ರಾಜ್ಯದ ಅಭ್ಯರ್ಥಿಗಳು ಸ್ಪರ್ಧಿಸಬಹುದಾಗಿದೆ. ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…

Read More