ಉದ್ಯೋಗ ಖಾತ್ರಿ ಕೆಲಸದ ವೇಳೆ ದುರ್ಘಟನೆ: ಬೆಂಕಿಯಂಥ ಬಿಸಿಲಿಗೆ ಬಲಿಯಾದ್ನಾ ಕಾರ್ಮಿಕ? – Kannada News | Raichur MGNREGA Worker Dies: Heat Stroke Suspected, Negligence Alleged
ರಾಯಚೂರು, ಏಪ್ರಿಲ್ 28: ಉದ್ಯೋಗ ಖಾತ್ರಿ ಯೋಜನೆಯ ಕೆಲಸಕ್ಕೆ ತೆರಳಿದ್ದ ಕಾರ್ಮಿಕನೋರ್ವ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ರಾಯಚೂರಿನ (Raichur) ಯಾಪಲದಿನ್ನಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ಹುಸೇನಪ್ಪ ಮಡಿವಾಳ (49) ಮೃತ ದುರ್ದೈವಿಯಾಗಿದ್ದು, ಕುಸಿದು ಬಿದ್ದ ಈತನನ್ನು ಕೂಡಲೇ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆಯೇ ಹುಸೇನಪ್ಪ ಉಸಿರು ಚೆಲ್ಲಿದ್ದಾರೆ. ಘಟನೆ ಬೆನ್ನಲ್ಲೇ ಸುಡು ಬಿಸಿಲಿನಲ್ಲಿ ಕಾರ್ಮಿಕರನ್ನು ದುಡಿಸುತ್ತಿದ್ದ ಪಿಡಿಒ ವಿರುದ್ಧ ಆಕ್ರೋಶ ಕೇಳಿಬಂದಿದೆ. ಹೀಟ್ ಸ್ಟ್ರೋಕ್ಗೆ ಬಲಿ? ಇನ್ನು ಸುಮಾರು 40…