Headlines

Video: ಐಸಿಯು ಬೆಡ್ ಮೇಲೆ ಮಲಗಿದ್ದ ವೃದ್ಧ ರೋಗಿಯ ಮೇಲೆ ಹಲ್ಲೆ ನಡೆಸಿದ ವೈದ್ಯ – Kannada News | Caught on Camera: Haryana Doctor Accused of Assaulting Elderly Patient

ಚಂಡೀಗಢ, ಏಪ್ರಿಲ್ 17: ಹರಿಯಾಣ ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಯೊಂದರ ಐಸಿಯು (ICU) ವಾರ್ಡ್‌ನಲ್ಲಿ ನಡೆದ ದೃಶ್ಯವೊಂದು ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಚಿಕಿತ್ಸೆ ನೀಡಬೇಕಾದ ಕೈಗಳೇ ವೃದ್ಧ ರೋಗಿಯ ಎದೆಯನ್ನು ಅಪ್ಪಳಿಸಿರುವ ಆಘಾತಕಾರಿ ವಿಡಿಯೋ ಈಗ ಬಹಿರಂಗಗೊಂಡಿದೆ. ವೈದ್ಯರೊಬ್ಬರು ವೃದ್ಧ ರೋಗಿಯಿದ್ದ ಹಾಸಿಗೆಯ ಬಳಿ ಬಂದು ಮೊದಲು ಸುತ್ತಲೂ ಕಣ್ಗಾವಲು ಕ್ಯಾಮೆರಾ ಎಲ್ಲಿವೆ ಎಂದು ಗಮನಿಸುತ್ತಾನೆ. ನಂತರ ಯಾರಿಗೂ ಕಾಣದಂತೆ ಹಾಸಿಗೆಯ ಸುತ್ತಲಿನ ಪರದೆಗಳನ್ನು (Curtains) ಎಳೆದು, ಹಾಸಿಗೆಯ ಮೇಲಿದ್ದ ಅಸಹಾಯಕ ವೃದ್ಧ ರೋಗಿಯ ಎದೆಗೆ ತನ್ನ…

Read More

Vastu Guide: ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ? ಸರಳ ವಾಸ್ತು ಪರಿಹಾರ ಇಲ್ಲಿದೆ – Kannada News

ಮನೆಯಲ್ಲಿ ನಕಾರಾತ್ಮಕ ಶಕ್ತಿImage Credit source: Pinterest ಕೆಲವೊಮ್ಮೆ ಎಷ್ಟೇ ಪ್ರಯತ್ನಪಟ್ಟರೂ ಜೀವನದಲ್ಲಿ ಎಲ್ಲವೂ ಸುಗಮವಾಗಿ ಸಾಗುವುದಿಲ್ಲ. ಮನೆಯಲ್ಲಿ ಶಾಂತಿ ಕಳೆದುಹೋಗುವುದು, ಸಣ್ಣ ವಿಷಯಗಳಿಗೂ ಜಗಳಗಳು ಉಂಟಾಗುವುದು, ಆರ್ಥಿಕ ಸಮಸ್ಯೆಗಳು ಎದುರಾಗುವುದು ಮುಂತಾದ ಸಂದರ್ಭಗಳು ಹಲವರನ್ನು ಕಾಡುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ನಕಾರಾತ್ಮಕ ವಾತಾವರಣವೂ ಇದಕ್ಕೆ ಒಂದು ಕಾರಣವಾಗಿರಬಹುದು. ನಕಾರಾತ್ಮಕ ಶಕ್ತಿಯ ಲಕ್ಷಣಗಳು ಯಾವುವು? ವಾಸ್ತು ತಜ್ಞರ ಪ್ರಕಾರ, ಮನೆಯಲ್ಲಿನ ನಕಾರಾತ್ಮಕ ಶಕ್ತಿಯನ್ನು ಸೂಚಿಸುವ ಕೆಲವು ಸಾಮಾನ್ಯ ಲಕ್ಷಣಗಳಿವೆ. ಕಾರಣವಿಲ್ಲದೆ ಕುಟುಂಬ ಸದಸ್ಯರ ನಡುವೆ ಆಗಾಗ್ಗೆ…

Read More

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಷರತ್ತುಬದ್ಧ ಅನುಮೋದನೆ – Kannada News | Hubballi Dharwad Bifurcation: Governor Thawarchand Gehlot Gives Conditional Approval for Separate Dharwad Civic Body

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆImage Credit source: One India ಧಾರವಾಡ, ಮೇ 27: ಅವಳಿ ನಗರದ ಜನರಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ವಿಭಜನೆ ಪ್ರಸ್ತಾವನೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮಹತ್ವದ ಷರತ್ತುಬದ್ಧ ಅನುಮೋದನೆ ನೀಡಿದ್ದಾರೆ. ಆದರೆ, ರಾಜ್ಯಪಾಲರು ವಿಧಿಸಿರುವ ಕಠಿಣ ನಿಬಂಧನೆಗಳಿಂದಾಗಿ ಪ್ರತ್ಯೇಕ ಪಾಲಿಕೆ ರಚನೆಯ ಕಡತ ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ವಾಪಸ್ ಹೋಗಿದ್ದು, ಧಾರವಾಡಿಗರ ಹೋರಾಟ ಮತ್ತೊಂದು ತಿರುವು ಪಡೆದುಕೊಂಡಿದೆ. ಮುಖ್ಯಾಂಶಗಳು ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ…

Read More

ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಹಿಂದೂ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ: ಭದ್ರಾವತಿಯಲ್ಲೊಂದು ವಿಚಿತ್ರ ಕೇಸ್ – Kannada News | A Husband complaint against wife Who forced conversion To Christian from Hindu at Shivamogga

ಶಿವಮೊಗ್ಗ, (ಫೆಬ್ರವರಿ 08): ಮಹಿಳೆಯೊಬ್ಬರು ಹಿಂದೂ ಧರ್ಮವನ್ನು ತೊರೆದು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಬಳಿಕ ಪತಿ ಹಾಗೂ ಮಕ್ಕಳನ್ನೂ ಸಹ ಮತಾಂತರಗೊಳ್ಳುವಂತೆ ಮಾನಸಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿಯಾದ ಬಿ. ವಿನಯ್ ಎಂಬುವವರು ತಮ್ಮ ಪತ್ನಿ ಪ್ರಿಯತಾ ಆರ್. ವಿರುದ್ಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಈಗ ನನ್ನನ್ನೂ ಹಾಗೂ ನನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿ…

Read More

ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಪತ್ನಿಯ ಸ್ಥಿತಿ ಗಂಭೀರ – Kannada News | Domestic Violence: Man burns Wife over wearing nighty instead of saree at home

ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಬೆಳಗಾವಿ , ಏಪ್ರಿಲ್ 22: ಜಿಲ್ಲೆಯಲ್ಲಿ ಪತ್ನಿಯ (Wife) ಉಡುಪಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ದಾರುಣ ಅಂತ್ಯ ಕಂಡಿರುವ ಘಟನೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ನೈಟಿ ಧರಿಸಿದ್ದ ಕಾರಣಕ್ಕೆ ಪತ್ನಿಗೇ ಕಿರಾತಕ ಗಂಡ ಬೆಂಕಿ ಹಚ್ಚಿದ್ದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಸೀರೆ ಉಡುತ್ತಿರಲಿಲ್ಲ ಅಂತ ಜಗಳ ಪತಿ ಪತ್ನಿಯರ ನಡುವೆ ಸಾವಿರ ಅಸಮಾಧಾನವಿರುತ್ತದೆ. ಕೆಲವರು ಬುದ್ಧಿ ಜೀವಿಗಳಂತೆ ಪರಸ್ಪರ ಮಾತನಾಡಿಕೊಂಡು ಸಮಸ್ಯೆ ಬಗೆಹರಿಸಿಕೊಂಡರೆ, ಇನ್ನೂ ಕೆಲವರು…

Read More

ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ಇಂಟರ್ನೆಟ್​​​ನಲ್ಲಿ ವಿಡಿಯೋ ವೈರಲ್ – Kannada News | Telangana CM Revanth Reddy prepared Pooris for his grandson Video went Viral

ಹೈದರಾಬಾದ್, ಜುಲೈ 9: ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ (Revanth Reddy) ಸದಾ ರಾಜಕೀಯದಲ್ಲಿ ಬ್ಯುಸಿಯಾಗಿರುತ್ತಾರೆ. ಆದರೆ, ಅದರಷ್ಟೇ ತಮ್ಮ ಕುಟುಂಬಕ್ಕೂ ಸಮಯ ನೀಡಲು ಪ್ರಯತ್ನಿಸುತ್ತಾರೆ. ಸಿಎಂ ರೇವಂತ್ ರೆಡ್ಡಿ ತಮ್ಮ ಮೊಮ್ಮಗನಿಗಾಗಿ ಪೂರಿ ತಯಾರಿಸಲು ಅಡುಗೆಮನೆ ಸೇರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Video Viral) ಆಗಿದೆ. ಸಿಎಂ ರೇವಂತ್ ರೆಡ್ಡಿ ಸ್ವತಃ ಅಡುಗೆಮನೆಗೆ ಹೋಗಿ ತಮ್ಮ ಮೊಮ್ಮಗನನ್ನು ಅಡುಗೆಮನೆಯ ಕಟ್ಟೆಯ ಮೇಲೆ ಕೂರಿಸಿಕೊಂಡು ಪೂರಿಗಳನ್ನು ತಯಾರಿಸುವ ವಿಡಿಯೋ ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಮೊಮ್ಮಗನಿಗಾಗಿ…

Read More

Weather Report: ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ! – Kannada News | Karnataka Weather Update: IMD Predicts Heavy Rain, Thunderstorms, Yellow Alert for Coastal and Malnad Regions

ಬೆಂಗಳೂರು, ಮೇ 21: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ, ಇಂದು ( ಮೇ.21) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ಮುಂಗಾರು ಪೂರ್ವ ಮಾರುತಗಳ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು,…

Read More

‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು – Kannada News | Dhanveer Gowda talks about Hayagrriva movie release problem

ದರ್ಶನ್ ಜೊತೆ ಆಪ್ತವಾಗಿರುವ ನಟ ಧನ್ವೀರ್ ಗೌಡ ಅಭಿನಯದ ‘ಹಯಗ್ರೀವ’ (Hayagrriva) ಸಿನಿಮಾದ ಬಿಡುಗಡೆ ವೇಳೆ ತೊಂದರೆ ಉಂಟಾಯಿತು. ಆ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಫೆಬ್ರವರಿ 27ರಂದು ರಿಲೀಸ್ ಆಗಬೇಕಿದ್ದ ಸಿನಿಮಾ ಸಂಜೆ ತನಕ ರಿಲೀಸ್ ಆಗಲೇ ಇಲ್ಲ. ಸಂಜೆ ಬಳಿಕ ಬಿಡುಗಡೆಗೆ ಅವಕಾಶ ಸಿಕ್ಕಿತು. ಆ ಬಗ್ಗೆ ಧನ್ವೀರ್ ಗೌಡ ಮಾತನಾಡಿದ್ದಾರೆ. ‘ಅಂಥವರನ್ನು ವಿರೋಧಿಗಳು ಅಂತ ಹೇಳಬಾರದು. ನಮಗೆ ಸಿಕ್ಕಾಪಟ್ಟೆ ಪ್ರೀತಿ ತೋರಿಸುವವರು. ನನ್ನ ಮೇಲೆ ಅವರಿಗೆ ಬಹಳ ಲವ್ ಆಗಿದೆ. ಅವರ ರೀತಿಯೇ…

Read More

Suresh Kalmadi Death: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ – Kannada News | Former union minister, Senior Congress Leader Suresh Kalmadi Passes Away at 81 in Pune

ನವದೆಹಲಿ, ಜನವರಿ 06: ಕೇಂದ್ರದ ಮಾಜಿಸ ಚಿವ, ಕಾಂಗ್ರೆಸ್​​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ(Suresh Kalmadi) ನಿಧನರಾಗಿದ್ದಾರೆ. ಸುರೇಶ್ ಕಲ್ಮಾಡಿ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾನೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು. ಮಧ್ಯಾಹ್ನ 3.30 ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷರಾಗಿದ್ದರು.ಕಳೆದ ಕೆಲವು ದಿನಗಳಿಂದ ಆರೋಗ್ಯ…

Read More

ಮಥುರಾದಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ – Kannada News | Five Members of a Family Found Dead in Suspected Suicide Case in Mathura

ಮಥುರಾ, ಫೆಬ್ರವರಿ 10: ಒಂದೇ ಕುಟುಂಬ ಐವರು ಸದಸ್ಯರು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಅವರ ಮೂವರು ಮಕ್ಕಳು ರಾತ್ರಿಯಿಡೀ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ ಅವರು ಎಚ್ಚರಗೊಳ್ಳದಿದ್ದಾಗ, ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ಐವರೂ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಕುಟುಂಬ ಸದಸ್ಯರು…

Read More