Headlines

ಶೂಟಿಂಗ್ ವೇಳೆ ಕೆಟ್ಟದಾಗಿ ಪ್ರ್ಯಾಂಕ್ ಮಾಡಿ ನಟಿಗೆ ಆಘಾತ ಉಂಟುಮಾಡಿದ್ದ ಅಕ್ಷಯ್ ಕುಮಾರ್ – Kannada News | Jacqueline Fernandez reveals traumatizing Prank by Akshay Kumar on Wheel Of Fortune finale

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಜನಪ್ರಿಯ ರಿಯಾಲಿಟಿ ಗೇಮ್ ಶೋ ‘ವೀಲ್ ಆಫ್ ಫಾರ್ಚೂನ್’ (Wheel of Fortune) ಏಪ್ರಿಲ್ 27ರಂದು ಮುಕ್ತಾಯವಾಗಿದೆ. ಈ ಫಿನಾಲೆ ಸಂಚಿಕೆಯಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಒಂದು ಇಂಟರೆಸ್ಟಿಂಗ್ ವಿಷಯ ಹಂಚಿಕೊಂಡಿದ್ದಾರೆ. ಅಕ್ಷಯ್ ಕುಮಾರ್ (Akshay Kumar) ಅವರು ಈ ಹಿಂದೆ ತಮಗೆ ಮಾಡಿದ್ದ ಒಂದು ಕೆಟ್ಟ ಪ್ರ್ಯಾಂಕ್ ಬಗ್ಗೆ ಈಗ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಬಾಯಿ ಬಿಟ್ಟಿದ್ದಾರೆ. ಆ ಪ್ರ್ಯಾಂಕ್​ನಿಂದ ತಮಗೆ ಆಘಾತ…

Read More

PBKS vs RR Playing XI: ಬಲಿಷ್ಠ ಪಡೆಗಳನ್ನೇ ಕಣಕ್ಕಿಳಿಸಿದ ಕಿಂಗ್ಸ್ ಮತ್ತು ರಾಯಲ್ಸ್ – Kannada News | PBKS vs RR Playing XI Punjab Kings vs Rajasthan Royals Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಿವೆ. ಮುಲ್ಲನ್​ಪುರ್​ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಈ ಪಂದ್ಯದಲ್ಲಿ ಶಿಮ್ರಾನ್ ಹೆಟ್ಮೆಯರ್…

Read More

ಉಮರ್ ಸಂಬಂಧಿತ ಕಾರ್ಯಕ್ರಮಕ್ಕೆ ವಿರೋಧ: BJP ಪ್ರತಿಭಟನೆ ವೇಳೆ ಹೈಡ್ರಾಮಾ; ಪ್ರತಿಭಟನಾ ನಿರತರು ಖಾಕಿ ವಶಕ್ಕೆ – Kannada News | Umar Khalid Book Event in Bengaluru: BJP Protests Amidst Tight Police Security

ಬೆಂಗಳೂರು, ಏಪ್ರಿಲ್​​ 28: ದೊಮ್ಮಲೂರು ಸಮೀಪದ ಬೆಂಗಳೂರು ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಉಮರ್ ಖಲೀದ್ ಅಂಡ್ ಹಿಸ್ ವರ್ಲ್ಡ್ ಪುಸ್ತಕ ಸಂಬಂಧ ಕಾರ್ಯಕ್ರಮಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಆರೋಪಿಯಾಗಿರುವ ಉಮರ್ ಖಲೀದ್ ಕುರಿತ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಬಿಜೆಪಿ ಒತ್ತಾಯಿಸಿತ್ತು. ಹೀಗಾಗಿ ಕಾರ್ಯಕ್ರಮ ನಡೆಯುವ ಸ್ಥಳದ ಹೊರಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ, ಕಾರ್ಯಕ್ರಮ ಆರಂಭವಾಗುವ ಒಂದು ಗಂಟೆ ಮುನ್ನವೇ ಪೊಲೀಸರು…

Read More

ಎಂ.ಜಿ. ರೋಡ್​ನಲ್ಲಿರುವ ಪ್ರತಿಷ್ಠಿತ ಹೋಟೆಲ್‌ನಲ್ಲಿ ಯುವತಿ ಮೇಲೆ ಹಲ್ಲೆ; ಮ್ಯಾನೇಜರ್ ಮೇಲೆ ಬಟ್ಟೆ ಹರಿಯಲು ಯತ್ನಿಸಿದ ಆರೋಪ – Kannada News | Bengaluru Shock: Tandoor Hotel Manager Accused of Misbehavior, Assault on MG Road

ಬೆಂಗಳೂರು, ಏ.28: ಸಿಲಿಕಾನ್ ಸಿಟಿಯ ಹೃದಯಭಾಗ ಎಂ.ಜಿ. ರಸ್ತೆಯಲ್ಲಿರುವ (MG Road) ಪ್ರಖ್ಯಾತ ‘ತಂದೂರ್ ಹೋಟೆಲ್’ನಲ್ಲಿ ಯುವತಿಯೊಬ್ಬಳ ಮೇಲೆ ಮ್ಯಾನೇಜರ್ ಅಸಭ್ಯವಾಗಿ ವರ್ತಿಸಿ, ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹೋಟೆಲ್ ಮ್ಯಾನೇಜರ್ ರವಿ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೀರ್ತಿ ಎಂಬ ಯುವತಿ ನಿನ್ನೆ (ಏ.27) ಮಧ್ಯಾಹ್ನ ಸುಮಾರು 2:30ರ ಸಮಯದಲ್ಲಿ ತಮ್ಮ ಸ್ನೇಹಿತರೊಂದಿಗೆ ಊಟಕ್ಕಾಗಿ ತಂದೂರ್ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಗ್ರಾಹಕರು ಮತ್ತು ಹೋಟೆಲ್ ಮ್ಯಾನೇಜರ್…

Read More

ಸೋಲಿನ ನಡುವೆಯೂ RCBಯ ಕಾಲೆಳೆದ ಡೆಲ್ಲಿ ಕ್ಯಾಪಿಟಲ್ಸ್ ಫ್ಯಾನ್ಸ್​! – Kannada News | IPL 2026: DC Fans Celebrate Avoiding RCB’s Infamous Record

ಸೋಲಿನ ಅಂಚಿನಲ್ಲಿದ್ದಾಗಲೂ ಅಭಿಮಾನಿಗಳು ಸಂಭ್ರಮಿಸಲು ಸಾಧ್ಯವೇ? ಸಾಧ್ಯ ಎಂಬುದಕ್ಕೆ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಣ ಪಂದ್ಯ ಸಾಕ್ಷಿ. ಆರ್​ಸಿಬಿ ವಿರುದ್ಧದ ಈ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೂ, ಅಭಿಮಾನಿಗಳು ಮಾತ್ರ ತಮ್ಮ ತಂಡವು ಕನಿಷ್ಠ 50 ರನ್ ಬಾರಿಸಲಿ ಎಂದು ಕಾತರದಿಂದ ಕಾಯುತ್ತಿದ್ದರು. ಯಾವಾಗ ತಂಡದ ಸ್ಕೋರ್ 49 ದಾಟಿತೋ, ಆಗ ಸ್ಟೇಡಿಯಂನಲ್ಲಿ ಮೊಳಗಿದ ಸಂಭ್ರಮದ ಅಲೆ ಅಷ್ಟಿಷ್ಟಲ್ಲ. ಆ ಅಪರೂಪದ ಕ್ಷಣ ಮತ್ತು…

Read More

CRPF Recruitment 2026: 9,175 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC ಮತ್ತು ITI ಪಾಸಾದವರಿಗೆ ಸುವರ್ಣವಕಾಶ – Kannada News | CRPF Recruitment 2026: 9175 Constable/Tradesman Vacancies Announced! Apply Now

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಕಾನ್ಸ್‌ಟೇಬಲ್ (ತಾಂತ್ರಿಕ, ಟ್ರೇಡ್ಸ್‌ಮನ್ ಮತ್ತು ಪಯೋನಿಯರ್) ವಿಭಾಗಗಳಲ್ಲಿ ಒಟ್ಟು 9,175 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಆಂಧ್ರಪ್ರದೇಶಕ್ಕೆ 504 ಮತ್ತು ತೆಲಂಗಾಣಕ್ಕೆ 353 ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ದೇಶಾದ್ಯಂತ ಮಹಿಳಾ ಅಭ್ಯರ್ಥಿಗಳಿಗೆ 79 ಹುದ್ದೆಗಳು ಮೀಸಲಿವೆ. ಪಯೋನಿಯರ್ ವಿಭಾಗದ ಹುದ್ದೆಗಳಿಗೆ ಎಲ್ಲಾ ರಾಜ್ಯದ ಅಭ್ಯರ್ಥಿಗಳು ಸ್ಪರ್ಧಿಸಬಹುದಾಗಿದೆ. ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…

Read More

ಕಲ್ಮಾ ಪಠಿಸಲು ಒಪ್ಪದ ಸೆಕ್ಯುರಿಟಿಗೆ ಚಾಕುವಿನಿಂದ ಇರಿತ; ಮುಂಬೈನಲ್ಲಿ ಮತ್ತೆ ಉಗ್ರನ ನೆರಳು? – Kannada News | Pahalgam like incident in Mumbai Security guards stabbed for refusing to recite Kalma

ಮುಂಬೈ, ಏಪ್ರಿಲ್ 28: ಮುಂಬೈನ ನಯಾ ನಗರ ಪ್ರದೇಶದಲ್ಲಿ ಅಮೆರಿಕದಿಂದ ಬಂದಿರುವ ವ್ಯಕ್ತಿ ಇಬ್ಬರು ಭದ್ರತಾ ಸಿಬ್ಬಂದಿಗೆ ಇರಿದಿದ್ದಾನೆ. ಚಾಕುವಿನಿಂದ ಇರಿಯುವ ಮುನ್ನ ಆತ ಅವರ ಧರ್ಮವನ್ನು ಕೇಳಿದ್ದಾನೆ. ನೀವು ಯಾವ ಧರ್ಮದವರು ಎಂದು ಕೇಳಿದ ಆತ ಕಲ್ಮಾ ಪಠಿಸಲು ಸೂಚಿಸಿದ್ದಾನೆ. ಸೆಕ್ಯುರಿಟಿ ಕಲ್ಮಾ ಪಠಣ ಮಾಡದೆ ಇದ್ದಾಗ ಅವರಿಗೆ ಇರಿದಿದ್ದಾನೆ. ಇದು ಪಹಲ್ಗಾಮ್​​ನಲ್ಲಿ (Pahalgam Attack) ನಡೆದ ದಾಳಿಯನ್ನು ನೆನಪಿಸುತ್ತಿದೆ. ಆರೋಪಿ 31 ವರ್ಷದ ಜೈಬ್ ಜುಬೇರ್ ಅನ್ಸಾರಿ ಇಸ್ಲಾಂನ ಮೂಲಭೂತ ಸಿದ್ಧಾಂತಗಳಾದ ‘ಕಲ್ಮಾ’ ಅಥವಾ…

Read More

ಗೊಂದಲದ ಗೂಡಾದ ಕುಂದಗೋಳ ಜನಸಂಪರ್ಕ ಸಭೆ: ವೇದಿಕೆಯಲ್ಲೇ ಅಧಿಕಾರಿಗಳಿಗೆ ಸಚಿವ ಸಂತೋಷ್​​ ಲಾಡ್​​ ತರಾಟೆ – Kannada News | Farmers’ Outburst at Kundagol Public Meeting Led by Minister Santhosh Lad

ಧಾರವಾಡ, ಏಪ್ರಿಲ್​​ 28: ಕುಂದಗೋಳ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ನಡೆದ  ಜನಸಂಪರ್ಕ ಸಭೆಯ ಮಧ್ಯೆ, ರೈತರೊಬ್ಬರು ತಮ್ಮ ಸಮಸ್ಯೆಗಳ ಕುರಿತು ಕೂಗಾಡಿದ್ದಾರೆ. ಅಧಿಕಾರಿಗಳು ವೈಯಕ್ತಿಕವಾಗಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಿದರೂ, ರೈತರು ಸಭೆಯಲ್ಲಿಯೇ ತಮ್ಮ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕೇಳುವ ಪ್ರಯತ್ನ ಮಾಡಿದ ಪ್ರಸಂಗ ನಡೆದಿದೆ. ಈ ಘಟನೆಯು ಕುಂದಗೋಳದ ಜನಸಂಪರ್ಕ ಸಭೆಯಲ್ಲಿ ಅಲ್ಪ ಕಾಲ ಗೊಂದಲಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಭೆ ಗೊಂದಲದ ಗೂಡಾದ ಕಾರಣ, ವೇದಿಕೆಯಲ್ಲೇ ಅಧಿಕಾರಿಗಳನ್ನು…

Read More

PBKS vs RR IPL 2026 Live Score: ಕಿಂಗ್ಸ್​ ಪಡೆಗೆ ರಾಯಲ್ಸ್ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಏಕೆಂದರೆ ಉಭಯ ತಂಡಗಳಲ್ಲಿ ಸ್ಫೋಟಕ ದಾಂಡಿಗರ ದಂಡೇ ಇದ್ದು, ಹೀಗಾಗಿ ಪವರ್​ಪ್ಲೇನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಎದುರು ನೋಡಬಹುದಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಉಭಯ ತಂಡಗಳು ಈವರೆಗೆ 30 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ 17 ಮ್ಯಾಚ್​ಗಳಲ್ಲಿ ಜಯ…

Read More

ಸವಾರರೇ ಎಚ್ಚರ! ಬೆಂಗಳೂರಲ್ಲಿ ಮತ್ತೆ ತಲೆ ಎತ್ತಿದ ‘ಪಂಕ್ಚರ್ ಮಾಫಿಯಾ’; ಹೆಬ್ಬಾಳ ರಸ್ತೆಯಲ್ಲಿ ಮೊಳೆಗಳ ರಾಶಿ! – Kannada News | Bangalore Puncture Mafia: Hebbal Goraguntepalya Drivers Face Extortion, Road Safety Risk

ಬೆಂಗಳೂರು, ಏ.28: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಈಗ ಹೊಸದೊಂದು ಆತಂಕ ಎದುರಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾದ ಹೆಬ್ಬಾಳ (Hebbal) ಮತ್ತು ಗೊರಗುಂಟೆಪಾಳ್ಯ (Goraguntepalya) ನಡುವಿನ ಸಂಚಾರ ಈಗ ಪಂಕ್ಚರ್ ದಂಧೆಕೋರರ ಸಂಚಿನಿಂದಾಗಿ ಪ್ರಾಣಾಪಾಯಕಾರಿಯಾಗುತ್ತಿದೆ. ಈ ಹಿಂದೆ ಪ್ಲೈಓವರ್​​​ಗಳಲ್ಲಿ ಇಂತಹ ಸಂಚುಗಳನ್ನು ಮಾಡಿ. ಹಣ ವಸೂಲಿ ಮಾಡುತ್ತಿದ್ದರು. ಇದೀಗ ನಗರ ಪ್ರದೇಶದಲ್ಲಿ ಪ್ರಮುಖ ರಸ್ತೆಗಳಲ್ಲೂ ಈ ದಂಧೆ ಬಂದಿದೆ. ಈ ಬಗ್ಗೆ ವಿಡಿಯೋವೊಂದನ್ನು @KarnatakaPortfolio ಎಂಬ ಎಕ್ಸ್​​ ಖಾತೆ ಹಂಚಿಕೊಂಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ…

Read More