Headlines

ಫೆಬ್ರವರಿ 14ರಂದು ‘ಕಲರ್ಸ್‌ ದೊಡ್ಮನೆ ಹಬ್ಬ’: ಸತತ 3 ಗಂಟೆಗಳ ಮನರಂಜನೆ – Kannada News | BBK 12 Gilli Nata Colors Dodmane Habba special show on 14 February on Colors Kannada

ಬಿಗ್ ಬಾಸ್ ಮುಗಿಯಿತು, ಮುಂದೇನು ಎಂದು ಕೇಳುತ್ತಿದ್ದ ವೀಕ್ಷಕರಿಗೆ ಇಲ್ಲಿದೆ ಮಸ್ತ್ ಅವಕಾಶ. ‘ಬಿಗ್ ಬಾಸ್ ಕನ್ನಡ 12’ (BBK 12) ಮುಕ್ತಾಯದ ನಂತರವೂ ಆ ಗುಂಗಿನಲ್ಲೇ ಇರುವ ಅಭಿಮಾನಿಗಳಿಗೆ ‘ಕಲರ್ಸ್ ಕನ್ನಡ’ (Colors Kannada) ವಾಹಿನಿಯು ಭರ್ಜರಿ ಉಡುಗೊರೆಯೊಂದನ್ನು ನೀಡಲು ಮುಂದಾಗಿದೆ. ಫೆಬ್ರವರಿ 14ರಂದು ‘ಕಲರ್ಸ್‌ ದೊಡ್ಮನೆ ಹಬ್ಬ’ (Colors Dodmane Habba) ಎಂಬ ಅದ್ದೂರಿ ಕಾರ್ಯಕ್ರಮ ಪ್ರಸಾರ ಆಗಲಿದೆ. ಸತತ ಮೂರು ಗಂಟೆಗಳ ಕಾಲ ವೀಕ್ಷಕರನ್ನು ರಂಜಿಸಲಿದೆ ಈ ಕಾರ್ಯಕ್ರಮ. ಫೆಬ್ರವರಿ 14ರಂದು ಕರುನಾಡಿನ…

Read More

ಲಾಟರಿ ಹೊಡೆಯುತ್ತಿದ್ದ ಸುಚಿತ್ರಾ ಜೀವನವನ್ನೇ ಬದಲಾಯಿಸಿದ್ದೇಗೆ ಕಮಲಾಕರ್​​ ಭಟ್​​ ಪರಿಚಯ? ಸತ್ಯ ಬಿಚ್ಚಿಟ್ಟ ಸ್ನೇಹಿತೆ – Kannada News | Suchitra’s Life Transformed from Lottery to Luxury After Relationship with Kamalakar Bhat

ಕಮಲಾಕರ್​​ ಭಟ್​ ಮತ್ತು ಸುಚಿತ್ರಾ ಕಾರವಾರ, ಫೆಬ್ರವರಿ 10: ಸಿದ್ದಾಪುರದ ವಸಂತ್​​ ನಾಯ್ಕ್​​ ಕೊಲೆ ಪ್ರಕರಣದಲ್ಲಿ ಜೈಲು ಸೇರಿರೋ ಸುಚಿತ್ರಾಳ ಕುರಿತ ಒಂದೊಂದೇ ಮಾಹಿತಿಯೀಗ ಬಯಲಾಗುತ್ತಿದೆ. ಜ್ಯೋತಿಷಿ ಕಮಲಾಕರ್​​ ಭಟ್​​ ಸೇರಿದಂತೆ ಸಿರಿವಂತರನ್ನು ಬುಟ್ಟಿಗೆ ಹಾಕಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದ ಇದೇ ಸುಚಿತ್ರಾ ಒಂದು ಕಾಲದಲ್ಲಿ 10 ರೂಪಾಯಿಗೂ ಲಾಟರಿ ಹೊಡೆಯುತ್ತಿದ್ದಳು. ಅಷ್ಟಕ್ಕೂ ಈಕೆ ಜ್ಯೋತಿಷಿ ಕಮಲಾಕರ್​​ ಭಟ್​​ಗೆ ಪರಿಚಯವಾಗಿದ್ದು ಹೇಗೆ ಎಂಬ ಮಾಹಿತಿಯೀಗ ಬಹಿರಂಗಗೊಂಡಿದೆ. ಸುಚಿತ್ರಾಳನ್ನು ಕಮಲಾಕರ ಭಟ್​ಗೆ ಪರಿಚಯಿಸಿದ್ದು ನಾನೇ ಎಂದು ಉತ್ತರ ಕನ್ನಡ…

Read More

ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿ ಗಂಧದ ಮರ ಕಡಿದು ರೈತ ಆಕ್ರೋಶ – Kannada News | Chikkamagaluru Farmer Protest Against Governmnet via a Cutting Sandalwood Tree Near Vidhana Soudha

ಬೆಂಗಳೂರು, (ಫೆಬ್ರವರಿ 10): ಅಭಿವೃದ್ಧಿ ಹೆಸರಿನಲ್ಲಿ ಜಮೀನಿನಲ್ಲಿ 30 ಮರಗಳನ್ನು ಕಡಿದು ಪರಿಹಾರ ಕೊಡದ ಸರ್ಕಾರದ ವಿರುದ್ಧ ರೈತ ಆಕ್ರೋಶಗೊಂಡಿದ್ದು, ವಿಧಾನಸೌಧದ ಮುಂದೆ ಇರುವ ಶ್ರೀಗಂಧದ ಮರ ಕಡಿದು ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಮಗಳೂರಿನ ವಿಶುಕುಮಾರ್ ಎನ್ನುವರ ಜಮೀನಿನಲ್ಲಿ 30 ಮರಗಳನ್ನು ಕಡಿಯಲಾಗಿದೆ. ಆದ್ರೆ, ಇದಕ್ಕೆ ಪರಿಹಾರ ಕೊಟ್ಟಿಲ್ಲ. ಹೀಗಾಗಿ ಸೇಡಿಗಾಗಿ ವಿಧಾನಸೌಧದ ಬಳಿ ಇರುವ ಗಂಧದ ಮರವನ್ನು ಕಡಿದು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಶುಕುಮಾರ್,ಪರಿಹಾರ ಕೊಟ್ಟಿಲ್ಲ, ನನ್ನ ಮಕ್ಕಳ ಬರ್ತಡೆ ನೆನಪಿಗಾಗಿ ಗಿಡ ನೆಟ್ಟಿದ್ದೆ. ಹೆದ್ದಾರಿ…

Read More

ಬೆಂಗಳೂರು: ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಗೆ ಕನ್ನ ಹಾಕಿದ ಯುವಕ – Kannada News | Bangalore Basavanagudi Crime: 241g Gold Stolen, Recovered After Police Catch Accused

ಬೆಂಗಳೂರು, ಫೆ.10: ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಗೆ ಯುವಕನೊಬ್ಬ ಕನ್ನ ಹಾಕಿದ್ದಾನೆ. ಈ ಘಟನೆ ಬೆಂಗಳೂರಿನ ಬಸವನಗುಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿದ್ದ 241 ಗ್ರಾಂ ಚಿನ್ನಾಭರಣ, 2.8 ಕೆಜಿ ಬೆಳ್ಳಿ 1.3 ಲಕ್ಷ ನಗದು ಕಳ್ಳತನ ಮಾಡಲಾಗಿದೆ. ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದರು. ಮಾಲೀಕರು ಆಕೆಯ ಮೇಲೆ ಅತೀವ ನಂಬಿಕೆ ಇಟ್ಟು ಮನೆಯ ಕೀಲಿ ಕೈಯನ್ನು ಆಕೆಯ ಬಳಿಯೇ ನೀಡುತ್ತಿದ್ದರು. ಈ ಮಹಿಳೆಯ ಜೊತೆಗೆ ಆಕೆಯ ತಂಗಿಯ ಮಗನೂ…

Read More

ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ; ಏನಿದು ಪ್ರಕರಣ? – Kannada News | Assam CM Himanta Biswa Sarma files Rs 500 crore defamation case against Congress leaders

ನವದೆಹಲಿ, ಫೆಬ್ರವರಿ 10: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ (Himanta Biswa Sarma) ಇಂದು ತಮ್ಮ ವಿರುದ್ಧ ಮಾಡಲಾದ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳ ಹಿನ್ನೆಲೆಯಲ್ಲಿ  ಹಿರಿಯ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ಧ 500 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಎಕ್ಸ್​​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ, “ಇಂದು ಪತ್ರಿಕಾಗೋಷ್ಠಿಯ ಮೂಲಕ ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ ಮತ್ತು…

Read More

ಸೌದಿ ಸಿನಿಮಾನಲ್ಲಿ ಸಲ್ಮಾನ್ ಖಾನ್, ಸಂಜಯ್ ದತ್: ಸಿನಿಮಾ ಯಾವುದು? – Kannada News | Salman Khan and Sanjay Dutt acted in Saudi movie The seven dogs

ಭಾರತದ ಸ್ಟಾರ್ ನಟರುಗಳಿಗೆ ವಿಶ್ವದಾದ್ಯಂತ ಅಭಿಮಾನಿಗಳಿದ್ದಾರೆ. ಅದರಲ್ಲೂ ಅರಬ್ ದೇಶಗಳಲ್ಲಿ ಭಾರತೀಯ ಸಿನಿಮಾಗಳಿಗೆ (Indian Movies) ಭಾರಿ ದೊಡ್ಡ ಮಾರುಕಟ್ಟೆ ಇದೆ. ಯಾವ ಮಟ್ಟಿಗೆಂದರೆ ಅರಬ್ ದೇಶದ ಚಿತ್ರರಂಗದಲ್ಲಿ ನಿರ್ಮಾಣಗೊಂಡ ಸಿನಿಮಾಗಳಲ್ಲಿ ಭಾರತದ ಸ್ಟಾರ್ ನಟರುಗಳು ನಟಿಸಿದ್ದಾರೆ. ಅದುವೇ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್. ಬಾಲಿವುಡ್​ನ ಈ ಇಬ್ಬರು ಸ್ಟಾರ್ ನಟರು ಇದೀಗ ಸೌದಿಯ ಸಿನಿಮಾನಲ್ಲಿ ನಟಿಸಿದ್ದಾರೆ. ಸೌದಿ ಚಿತ್ರರಂಗದಲ್ಲಿ ನಿರ್ಮಾಣಗೊಂಡಿರುವ ‘ದಿ ಸೆವೆನ್ ಡಾಗ್ಸ್’ ಹೆಸರಿನ ಭರ್ಜರಿ ಆಕ್ಷನ್ ಸಿನಿಮಾನಲ್ಲಿ ಸಲ್ಮಾನ್ ಖಾನ್ ಮತ್ತು…

Read More

Chanakya Niti: ಮನುಷ್ಯನ ನೆಮ್ಮದಿ ಹಾಳಾಗಲು ಕಾರಣವೇ ಈ ಸಂಗತಿಗಳು – Kannada News | Chanakya Niti: Chanakya says these things are the reason for the destruction of happiness and peace

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲದೆ ಪ್ರತಿಯೊಬ್ಬ ವ್ಯಕ್ತಿಗೂ ಉಪಯುಕ್ತವಾದ ಜೀವನದ ಸತ್ಯಗಳನ್ನು ಬಹಿರಂಗಪಡಿಸಿದ್ದಾರೆ. ಯಾವ ರೀತಿ ಜೀವನ ನಡೆಸಬೇಕು, ಯಶಸ್ಸಿಗಾಗಿ ಏನು ಮಾಡಬೇಕು, ನೆಮ್ಮದಿಯ ಜೀವನ ನಡೆಸಲು ಮಾಡಬೇಕಾದದ್ದೇನು ಎಂಬಿತ್ಯಾದಿ ವಿಷಯಗಳನ್ನು ತಿಳಿಸಿದ್ದಾರೆ. ಅದೇ ರೀತಿ ಅವರು ಈ ಐದು ಬಗೆಯ ಸಮಸ್ಯೆಗಳು ಯಾರ ಜೀವನದಲ್ಲಿ ಇರುತ್ತದೆಯೋ ಅವರು ಖಂಡಿತವಾಗಿಯೂ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಿಲ್ಲ, ಅವರು ಯಾವಾಗಲೂ ಚಿಂತೆಯಲ್ಲಿಯೇ ಮುಳುಗಿರುತ್ತಾರೆ ಎಂದು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಯಾರು ನೆಮ್ಮದಿಯಿಂದ…

Read More

ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ ಬಹಿರಂಗ – Kannada News | Kamalakar Bhat And His Lover Suchitra one More video viral

ಕಾರವಾರ, (ಫೆಬ್ರವರಿ 10): ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಮೂಲದ ಸುಚಿತ್ರಾ ಹಾಗೂ ಪ್ರಿಯಕರ ಕಮಲಾಕರ್ ಭಟ್ ಗುರೂಜಿ ಹಿಂದಿನ ಕರಾಳ ಮತ್ತು ಕುತೂಹಲಕಾರಿ ಸಂಗತಿಗಳು ಇದೀಗ ಒಂದೊಂದಾಗಿ ಹೊರಬರುತ್ತಿವೆ. ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗುತ್ತಿದ್ದಂತೆಯೇ ಜೋಡಿ ಹಳ್ಳಿಯ ಬಗೆ ಬಗೆಯ ವಿಡಿಯೋಗಳು, ಆಡಿಯೋಗಳು ವೈರಲ್ ಆಗುತ್ತಿವೆ. ರೀಲ್ಸ್ ರಾಣಿಯಾಗಿರುವ ಸುಚಿತ್ರಾ, ಕಮಲಾಕರ್ ಭಟ್​​ ನೊಂದಿಗೆ ಹಲವು ರೀಲ್ಸ್​ ಮಾಡಿರುವ ವಿಡಿಯೋಗಳು ಸಹ ವೈರಲ್ ಆಗುತ್ತಿವೆ. ತನ್ನ ಮೈಮಾಟದಿಂದ ಕಮಲಾಕರ್ ಭಟ್​​ ನನ್ನು ಬುಟ್ಟಿಗೆ ಹಾಕಿಕೊಂಡ…

Read More

ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು – Kannada News | Producer K Manju demands government to rise subsidy for movies

ಸಿನಿಮಾ (Cinema) ಸಬ್ಸಿಡಿ ವಿಚಾರವಾಗಿ ಇತ್ತೀಚೆಗೆ ಮತ್ತೆ ಚರ್ಚೆ ಶುರುವಾಗಿದ್ದು, ಇದೀಗ ನಿರ್ಮಾಪಕರ ಸಂಘ ಕೆ ಮಂಜು ಅವರು ಈ ಬಗ್ಗೆ ಮಾತನಾಡಿದ್ದಾರೆ. ಸಿನಿಮಾ ಸಬ್ಸಿಡಿಯನ್ನು ಕಡಿಮೆ ಮಾಡಿ ಎಂದು ಕೆಲವರು ಹೇಳಿದ್ದಾರೆ, ಆದರೆ ನಿರ್ಮಾಪಕರಾಗಿ ನಾವು ಕೇಳುತ್ತಿರುವುದು ಸಬ್ಸಿಡಿ ಕಡಿಮೆ ಮಾಡುವುದು ಬೇಡ, ಈಗ 150 ಸಿನಿಮಾಗಳಿಗೆ ಕೊಡುತ್ತಿದ್ದಾರೆ ಅದನ್ನು 200 ಸಿನಿಮಾಗಳಿಗೆ ವಿಸ್ತರಿಸಿ, ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆ ಇದೆ, ಅದರಲ್ಲೂ ನಿರ್ಮಾಪಕರಿಗೆ ಇನ್ನೂ ಹೆಚ್ಚಿನ ಸಮಸ್ಯೆ ಇದೆ, ಸಬ್ಸಿಡಿಯನ್ನು ಕಡಿಮೆ ಮಾಡುವ ಬಗ್ಗೆ…

Read More

ಫೆ.27ಕ್ಕೆ ಗಿಲ್ಲಿ ಸಿನಿಮಾ ‘ಸೂಪರ್ ಹಿಟ್’ ರಿಲೀಸ್; ಈಗಲೇ ಬಂದಿದೆ ಒಟಿಟಿ ಡಿಮ್ಯಾಂಡ್ – Kannada News | BBK 12 Winner Gilli Nata starrer Super Hit Kannada movie releasing on 27 February

ಈ ಸಿನಿಮಾದ ಶೀರ್ಷಿಕೆಯೇ ‘ಸೂಪರ್ ಹಿಟ್’. ನಾಗೇಂದ್ರ ಪ್ರಸಾದ್ ಅವರ ಸಹೋದರ ವಿಜಯಾನಂದ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಗಿಲ್ಲಿ ನಟ (Gilli Nata), ಗೌರವ್ ಶೆಟ್ಟಿ, ಶ್ವೇತಾ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಫೆಬ್ರವರಿ 27ರಂದು ‘ಸೂಪರ್ ಹಿಟ್’ (Super Hit) ರಿಲೀಸ್ ಆಗಲಿದೆ. ರಿಲೀಸ್ ಡೇಟ್ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಲಾಯಿತು. ಅದರಲ್ಲಿ ಗಿಲ್ಲಿ ನಟ, ಸಾಧುಕೋಕಿಲ, ನಾಗೇಂದ್ರ ಪ್ರಸಾದ್, ನಿರ್ಮಾಪಕ ಜಿ. ಉಮೇಶ್…

Read More