Headlines

ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿ: 10ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ – Kannada News | Mini Bus Carrying Garment Workers Overturns in Gauribidanur, Eight Seriously Injured

ಚಿಕ್ಕಬಳ್ಳಾಪುರ, ಏಪ್ರಿಲ್ 28: ಗೌರಿಬಿದನೂರು ತಾಲೂಕಿನ ವೇದಲವೇಣಿ ಸಮೀಪ ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದು, ಅವರಲ್ಲಿ ಎಂಟು ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ದೊಡ್ಡಬಳ್ಳಾಪುರದ ಗಾರ್ಮೆಂಟ್ಸ್ ಒಂದಕ್ಕೆ ತೆರಳುತ್ತಿದ್ದ ಈ ಮಿನಿಬಸ್ ಚಾಲಕನ ಅಜಾಗರೂಕತೆಯಿಂದಾಗಿ ಏಕಾಏಕಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಿನಿಬಸ್‌ನ ಗಾಜುಗಳು ಒಡೆದುಹೋಗಿದ್ದು, ಬಸ್‌ನಲ್ಲಿ ಸುಮಾರು 20…

Read More

ಬಂಗಾಳದಲ್ಲಿ ವಿವಾದ ಸೃಷ್ಟಿಸಿದ ಎನ್‌ಕೌಂಟರ್ ಸ್ಪೆಷಲಿಸ್ಟ್ ಅಜಯ್ ಶರ್ಮಾ ಯಾರು? – Kannada News | Who is Uttar Pradesh’s Singham encounter specialist IPS Ajay Sharma why his deployment in Bengal caused stir

ನವದೆಹಲಿ, ಏಪ್ರಿಲ್ 28: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ (West Bengal Elections) ‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂದೇ ಜನಪ್ರಿಯವಾಗಿರುವ ಉತ್ತರ ಪ್ರದೇಶದ ಐಪಿಎಸ್ ಅಧಿಕಾರಿ ಅಜಯ್ ಪಾಲ್ ಶರ್ಮಾ ಅವರನ್ನು ದಕ್ಷಿಣ 24 ಪರಗಣ ಜಿಲ್ಲೆಯ ಪೊಲೀಸ್ ವೀಕ್ಷಕರಾಗಿ ನಿಯೋಜಿಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಹೊಸ ವಿವಾದ ಭುಗಿಲೆದ್ದಿದೆ. ಏಪ್ರಿಲ್ 29ರಂದು ಬಂಗಾಳದಲ್ಲಿ ನಡೆಯಲಿರುವ ಎರಡನೇ ಹಂತದ ಮತದಾನಕ್ಕೂ ಮೊದಲು ಅಜಯ್ ಶರ್ಮಾ ಅವರನ್ನು ನೇಮಿಸಿರುವುದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಭಾರತೀಯ ಜನತಾ…

Read More

ಚೇತನ್ ಅಹಿಂಸ ಭಾರತೀಯನೇ ಅಲ್ಲ: ನಟಿ ಜಯಮಾಲಾ – Kannada News | Film Chamber president Jayamala lashes out on Chethan Ahimsa

ಡಾ ರಾಜ್​ಕುಮಾರ್ (Dr Rajkumar) ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನೀಡಿರುವ ಹೇಳಿಕೆ ತೀವ್ರ ಆಕ್ರೋಶಕ್ಕೆ ಗುರಿಯಾಗಿವೆ. ಒಮ್ಮೆ ಕ್ಷಮಾಪಣೆ ಕೇಳಿ ಮತ್ತೆ ಹಳೆ ವರಸೆ ಮುಂದುವರೆಸಿರುವ ಚೇತನ್ ಅಹಿಂಸ ವಿರುದ್ಧ ಹಲವು ಕನ್ನಡಪರ ಸಂಘಟನೆಗಳು, ಅಣ್ಣಾವ್ರ ಅಭಿಮಾನಿಗಳು, ಅಭಿಮಾನಿ ಸಂಘಗಳ ಸದಸ್ಯರು ಫಿಲಂ ಚೇಂಬರ್ ಎದುರು ಪ್ರತಿಭಟನೆ ಮಾಡಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲಾ ಅವರಿಗೆ ದೂರು ಸಹ ನೀಡಿದ್ದಾರೆ. ಇದೀಗ ಜಯಾಮಾಲಾ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಪಾಕಿಸ್ತಾನಕ್ಕೆ ಜಯಕಾರ…

Read More

ನಗರಸಭೆ ಅಧಿಕಾರಿಗಳ ಸುಳ್ಳು ಹೇಳಿಕೆ ಡಿಸಿ ಎದುರೇ ಬಯಲು: ಕಳ್ಳಾಟ ತಿಳಿಯುತ್ತಿದ್ದಂತೆ TV9 ಕ್ಯಾಮರಾಮ್ಯಾನ್ ಮೇಲೆ ಅಧಿಕಾರಿ ದರ್ಪ – Kannada News | DC Office Drama: Chamarajanagar Residents Expose False Water Report; Official Attacks Cameraman

ಚಾಮರಾಜನಗರ, ಏ. 28: ಜಿಲ್ಲಾಧಿಕಾರಿ ಕಚೇರಿಯಲ್ಲೇ ಇಂದು ಭಾರಿ ಹೈಡ್ರಾಮಾ ನಡೆದಿದೆ. ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳು ನೀಡಿದ ಸುಳ್ಳು ಮಾಹಿತಿಯನ್ನು ನಿವಾಸಿಗಳು ಡಿಸಿ ಎದುರೇ ಸಾಕ್ಷಿ ಸಮೇತ ಬಯಲು ಮಾಡಿದ್ದು, ಈ ವೇಳೆ ಅಧಿಕಾರಿಗಳು ಮತ್ತು ಸಾರ್ವಜನಿಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಚಾಮರಾಜನಗರದ ವಾರ್ಡ್ ನಂ. 26ರ ನಿವಾಸಿಗಳು ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಶ್ರೀರೂಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಗರಸಭೆ ಆಯುಕ್ತರು…

Read More

ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ: ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ? – Kannada News | Chikkaballapur Newlywed Roopa Found Dead: Husband Suspected in Suspicious Hanging Incident

ಚಿಕ್ಕಬಳ್ಳಾಪುರ, ಏಪ್ರಿಲ್​​ 28: ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ರೂಪಾ (30) ಮೃತ ಯುವತಿಯಾಗಿದ್ದು, ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 5 ತಿಂಗಳ ಹಿಂದೆಯಷ್ಟೇ ಮುನಿರಾಜು ಜತೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ನಿವಾಸಿ ರೂಪಾ ಮದುವೆಯಾಗಿತ್ತು. ಪತಿಯ ಅನುಮಾನದ ಭೂತಕ್ಕೆ ರೂಪಾ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಪತಿ ವಿರುದ್ಧವೇ ಕೊಲೆ ಆರೋಪ ಇನ್ನು ಅನುಮಾನಾಸ್ಪದ ರೀತಿಯಲ್ಲಿ ಮನೆ ಮಗಳ…

Read More

ರಾಮ್ ಚರಣ್ ಮತ್ತು ನಾನಿ ಸಿನಿಮಾಗಳಿಗೆ ಲೀಕ್ ಸಂಕಷ್ಟ: ಆತಂಕದಲ್ಲಿ ‘ಪೆದ್ದಿ’, ‘ದಿ ಪ್ಯಾರಡೈಸ್’ – Kannada News | Ram Charan Peddi and Nani The Paradise leaked scenes viral on social media

ಚಿತ್ರರಂಗದಲ್ಲಿ ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ಲೀಕ್ (Leak) ಪಿಡುಗು ಮಾತ್ರ ಚಿತ್ರತಂಡಗಳನ್ನು ಬಿಡುತ್ತಿಲ್ಲ. ಸದ್ಯ ಸಿನಿಪ್ರಿಯರೆಲ್ಲ ಕುತೂಹಲದಿಂದ ಕಾಯುತ್ತಿರುವ ಎರಡು ದೊಡ್ಡ ಸಿನಿಮಾಗಳಾದ ರಾಮ್ ಚರಣ್ ಅಭಿನಯದ ‘ಪೆದ್ದಿ’ (Peddi) ಮತ್ತು ನಟ ನಾನಿ ಅಭಿನಯದ ‘ದಿ ಪ್ಯಾರಡೈಸ್’ (The Paradise) ಚಿತ್ರಗಳ ಪ್ರಮುಖ ದೃಶ್ಯಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ. ಇದರಿಂದ ಚಿತ್ರತಂಡಗಳಿಗೆ ತಲೆ ನೋವು ಶುರುವಾಗಿದೆ. ಕೆಲವು ದಿನಗಳ ಹಿಂದೆ ‘ಜನ ನಾಯಗನ್’ ಸಿನಿಮಾ ಲೀಕ್ ಆಗಿತ್ತು. ಹೀಗೆ ಒಂದೊಂದೇ ಸಿನಿಮಾಗಳು ಲೀಕ್ ಸಮಸ್ಯೆ ಎದುರಿಸುತ್ತಿವೆ. ಚಿತ್ರಮಂದಿರದಲ್ಲಿ…

Read More

‘ಡಾನ್ 3’ ಸಿನಿಮಾ ಬಗ್ಗೆ ಕೊನೆಗೂ ಬಾಯ್ಬಿಟ್ಟ ಫರ್ಹಾನ್ ಅಖ್ತರ್ – Kannada News | Farhan Akhtar talks about Don 3 movie, says he learned valid lesson

‘ಡಾನ್’ (Don) ಸಿನಿಮಾ ಸರಣಿ ಭಾರತದ ಬಲು ಜನಪ್ರಿಯ ಆಕ್ಷನ್ ಸಿನಿಮಾ ಸರಣಿಗಳಲ್ಲಿ ಒಂದಾಗಿದೆ. ಮೊದಲಿಗೆ ಅಮಿತಾಬ್ ಬಚ್ಚನ್ ನಟಿಸಿದ್ದ ಸಿನಿಮಾವನ್ನು ಶಾರುಖ್ ಖಾನ್ ನಾಯಕನನ್ನಾಗಿ ಹಾಕಿಕೊಂಡು ರೀಮೇಕ್ ಮಾಡಿಲಾಯ್ತು. ಸಿನಿಮಾ ನಿರ್ದೇಶನ ಮಾಡಿದ್ದು ಫರ್ಹಾನ್ ಅಖ್ತರ್, ಆ ಸಿನಿಮಾ ಬ್ಲಾಕ್ ಬಸ್ಟರ್ ಆಯ್ತು. ಬಳಿಕ ‘ಡಾನ್’ ಹೆಸರು, ಪಾತ್ರವನ್ನೇ ಇರಿಸಿಕೊಂಡು ಹೊಸದೊಂದು ಥ್ರಿಲ್ಲರ್ ಕತೆ ಹೆಣೆದ ಫರ್ಹಾನ್ ಅಖ್ತರ್ ಅದನ್ನು 2011 ರಲ್ಲಿ ರಿಲೀಸ್ ಮಾಡಿದರು. ಆ ಸಿನಿಮಾದಲ್ಲಿಯೂ ಶಾರುಖ್ ಖಾನ್ ನಾಯಕ. ಸಿನಿಮಾ ಬ್ಲಾಕ್…

Read More

ಹೆರಿಗೆಗೂ ಮೊದಲೇ ಮೃತಪಟ್ಟ ಹಸುಗೂಸು: ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಪುಟ್ಟ ಜೀವ? – Kannada News | Newborn Dies: Medical Negligence Allegations Rock Karnataka Hospital and Spark Protests

ರಾಯಚೂರು/ಹಾವೇರಿ, ಏಪ್ರಿಲ್​​ 28: ಹೆರಿಗೆಗೂ ಮೊದಲೇ  ಹಸುಗೂಸು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಆಗ್ರಹಿಸಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಜಂಗಮರ ಹಳ್ಳಿ ಗ್ರಾಮದ ಗುಂಡಪ್ಟ ಅವರ ಪತ್ನಿ ಪರಮ್ಮಳಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ…

Read More

ಗುಂಡ್ಲುಪೇಟೆಯಲ್ಲಿ ಫ್ಯಾಮಿಲಿ ಜೊತೆ ಯೂನಿಫಾರ್ಮ್‌ನಲ್ಲಿ ಶೋಕಿ; ಇನ್ಸ್‌ಪೆಕ್ಟರ್ ಜೈ ಕುಮಾರ್ ವಿಡಿಯೋ ವೈರಲ್ – Kannada News | Gundlepet Police Controversy: CPI Jai Kumar’s Family Trip in Uniform, Buffer Zone Violation

ಚಾಮರಾಜನಗರ, ಏ.28: ಕಾನೂನು ಪಾಲಿಸಬೇಕಾದ ಅಧಿಕಾರಿಯೇ ನಿಯಮಗಳನ್ನು ಗಾಳಿಗೆ ತೂರಿ ಶೋಕಿ ಮಾಡುತ್ತಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ (CPI) ಜೈ ಕುಮಾರ್ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ಪೊಲೀಸ್ ಯೂನಿಫಾರ್ಮ್‌ನಲ್ಲಿಯೇ ಓಪನ್ ಜೀಪ್‌ನಲ್ಲಿ ಸುತ್ತಾಡಿ ಈಗ ಸುದ್ದಿಯಾಗಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಊಟಿ ರಸ್ತೆಯ ಬಳಿಯಿರುವ ಇಕ್ರಮ್ ಸಿದ್ದಿಕಿ ಫಾರ್ಮ್ ಹೌಸ್ ಸುತ್ತಮುತ್ತ ಇನ್ಸ್‌ಪೆಕ್ಟರ್ ಜೈ ಕುಮಾರ್ ಅವರು ತಮ್ಮ ಕುಟುಂಬದೊಂದಿಗೆ ಬಿಂದಾಸ್ ಆಗಿ ರೌಂಡ್ಸ್ ಹಾಕಿದ್ದಾರೆ. ಈ ಪ್ರದೇಶವು…

Read More

ಬಿಗಿ ಭದ್ರತೆ ನಡುವೆ 5 ಬಾರಿ ಏಮ್ಸ್​ ಆಸ್ಪತ್ರೆಗೆ ಭೇಟಿ ನೀಡಿದ ಮುಂಬೈ ದಾಳಿಯ ಆರೋಪಿ ರಾಣಾ – Kannada News | 26/11 attack accused Tahawwur Rana visits 5 times to AIIMS amid tight security

ನವದೆಹಲಿ, ಏಪ್ರಿಲ್ 28: ಮುಂಬೈನ 26/11 ಭಯೋತ್ಪಾದಕ ದಾಳಿಯ ಆರೋಪಿ ತಹಾವೂರ್ ರಾಣಾ (Tahawwur Rana) ಬಿಗಿ ಭದ್ರತೆಯ ನಡುವೆ 5 ಬಾರಿ AIIMSಗೆ ಭೇಟಿ ನೀಡಿದ್ದಾರೆ. ಮುಂಬೈ ಭಯೋತ್ಪಾದಕ ದಾಳಿಯಲ್ಲಿನ ಕೈವಾಡಕ್ಕೆ ಸಂಬಂಧಿಸಿದಂತೆ ಕಳೆದ ಏಪ್ರಿಲ್‌ನಲ್ಲಿ ಅಮೆರಿಕದಿಂದ ಗಡಿಪಾರಾಗಿದ್ದ ತಹಾವೂರ್ ರಾಣಾ, ವೈದ್ಯಕೀಯ ಚಿಕಿತ್ಸೆಗಾಗಿ ಕಳೆದ 1 ತಿಂಗಳಲ್ಲಿ 5 ಬಾರಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS)ಗೆ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ…

Read More