Headlines

ದೆಹಲಿ ಉದ್ಯಮಿಯ ಕೊಲೆ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡ – Kannada News | Delhi Businessman Shot Dead Outside Factory in Bawana claims the responsibility of Murder

ನವದೆಹಲಿ, ಫೆಬ್ರವರಿ 10: ಸೋಮವಾರ ಮಧ್ಯಾಹ್ನ (ಫೆಬ್ರವರಿ 9) ದೆಹಲಿಯ ಹೊರವಲಯದ ಬವಾನಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಹೊರಗೆ 35 ವರ್ಷದ ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಉದ್ಯಮಿಯ (Delhi Businessman) ಮೇಲೆ ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಕೊಲೆಯ ಹೊಣೆಯನ್ನು ಹೊತ್ತುಕೊಂಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸಲಾರಂಭಿಸಿದ್ದಾರೆ. ನಿನ್ನೆ ದಾಳಿ ನಡೆದಾಗ ಉದ್ಯಮಿ ತನ್ನನ್ನು ತಾನು ಉಳಿಸಿಕೊಳ್ಳಲು ಓಡಿಹೋಗಲು…

Read More

ಪ್ರಧಾನಿ ಮೋದಿ ಬಗ್ಗೆ ಸಿದ್ದರಾಮಯ್ಯ ಪೋಸ್ಟ್​​​: ರಾಹುಲ್​​ ಹೆಸರು ಉಲ್ಲೇಖಿಸಿ ಬಿಜೆಪಿ ಗುದ್ದು – Kannada News | Karnataka bjp counters siddaramaiahs remarks on pm narendra modi

ಮೋದಿ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ವಿಜಯೇಂದ್ರ ಕೌಂಟರ್​Image Credit source: Tv9 Kannada ಬೆಂಗಳೂರು, ಫೆಬ್ರವರಿ 10: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾಡಿರುವ ಎಕ್ಸ್​​ ಪೋಸ್ಟ್​​ ವಿಚಾರವೀಗ ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿಗಳ ಪೋಸ್ಟ್​​ ಕಂಡು ಕೆರಳಿರುವ ರಾಜ್ಯದ ಕೆಸರಿ ಪಡೆ ರಾಹುಲ್​​ ಗಾಂಧಿ ಹೆಸರು ಉಲ್ಲೇಖಿಸಿ ಕೌಂಟರ್​​ ಕೊಟ್ಟಿದೆ. ಸಿಎಂ ಪದವಿ ವಿಚಾರವಾಗಿ ಕಿತ್ತಾಡುತ್ತಿರುವ ನೀವು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​​ ಸೇರಿ ಮೊದಲು ರಾಹುಲ್‌ ಗಾಂಧಿಯವರು ಎಲ್ಲಿದ್ದಾರೋ ಹುಡುಕಿಕೊಳ್ಳಿ…

Read More

IAF Recruitment 2026: ಭಾರತೀಯ ವಾಯುಪಡೆಯಲ್ಲಿ ನೇಮಕಾತಿ; 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ – Kannada News | IAF Agniveer Vayu Non Combatant Recruitment 2026: Apply for Air Force Jobs

ಅಗ್ನಿಪಥ್ ಯೋಜನೆಯ ಭಾಗವಾಗಿ ಭಾರತೀಯ ವಾಯುಪಡೆಯು ಅಗ್ನಿವೀರ್ ವಾಯು (Agniveer Vayu) ನಾನ್-ಕಾಂಬಟೆಂಟ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಇರುವ ವಾಯುಪಡೆ ನಿಲ್ದಾಣಗಳ ಹಾಸ್ಪಿಟಾಲಿಟಿ ಮತ್ತು ಹೌಸ್ ಕೀಪಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಷ್ಟ್ರಸೇವೆ ಮಾಡಲು ಆಸಕ್ತಿ ಹೊಂದಿರುವ ಯುವಕರಿಗೆ ಇದು ಉತ್ತಮ ಉದ್ಯೋಗಾವಕಾಶವಾಗಿದ್ದು, ಸರ್ಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸನ್ನು ನನಸು ಮಾಡುವ ಅವಕಾಶವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…

Read More

ಹೂಡಿಕೆಗಳು ಎತ್ತ..? ಕುಗ್ಗಿದ ಈಕ್ವಿಟಿ ಮ್ಯೂಚುವಲ್ ಫಂಡ್​ಗಳು; ಹಿಗ್ಗಿದ ಗೋಲ್ಡ್ ಇಟಿಎಫ್​ಗಳು – Kannada News | Gold ETFs attract more investment, while Equity mutual funds see decline in inflows

ನವದೆಹಲಿ, ಫೆಬ್ರುವರಿ 10: ಸತತ ಎರಡನೇ ತಿಂಗಳು ಈಕ್ವಿಟಿ ಮ್ಯೂಚುವಲ್ ಫಂಡ್​ಗಳಿಗೆ (Equity Mutual Funds) ಹೂಡಿಕೆಗಳ ಒಳಹರಿವು ಕಡಿಮೆ ಆಗಿದೆ. ಭಾರತೀಯ ಮ್ಯೂಚುವಲ್ ಫಂಡ್​ಗಳ ಸಂಘಟನೆಯಾದ ಎಎಂಎಫ್​ಐ ನೀಡಿರುವ ಮಾಹಿತಿ ಪ್ರಕಾರ ಜನವರಿ ತಿಂಗಳಲ್ಲಿ 24,029 ಕೋಟಿ ರೂ ಮೊತ್ತದಷ್ಟು ಹೂಡಿಕೆಗಳು ಈಕ್ವಿಟಿ ಫಂಡ್​ಗಳಿಗೆ ಬಂದಿವೆ. ಹಿಂದಿನ ತಿಂಗಳಿಗೆ ಹೋಲಿಸಿದರೆ ಜನವರಿಯಲ್ಲಿ ಈಕ್ವಿಟಿ ಫಂಡ್​ಗಳಿಗೆ ಸಿಕ್ಕ ಫಂಡ್​ನಲ್ಲಿ ಶೇ. 14 ಇಳಿಕೆ ಆಗಿದೆ. 2025ರ ಡಿಸೆಂಬರ್ ತಿಂಗಳಲ್ಲಿ ಈಕ್ವಿಟಿ ಫಂಡ್​ಗಳು 28,054 ಕೋಟಿ ರೂ ಹೂಡಿಕೆಯನ್ನು…

Read More

Video: 50 ಲಕ್ಷ ರೂ ಸಂಬಳದ ಉದ್ಯೋಗ ತೊರೆದು ಮೊಮೊ ಶಾಪ್ ತೆರೆದು ಕೋಟಿ ಸಂಪಾದಿಸಿದ ವ್ಯಕ್ತಿ – Kannada News | Gurgaon Man says goodbye to lakh salary job and opens Momo shop

ಕೈ ತುಂಬಾ ಸಂಬಳ ಸಿಗೋ ದುಡಿಮೆ (job) ಹೊಂದಿದ್ದರೂ ಕೆಲವರಿಗೆ ತೃಪ್ತಿ ಅನ್ನೋದೆ ಇರಲ್ಲ. ಜೀವನ ಪರ್ಯಂತ ಕೊರತೆಯೊಂದು ಕಾಡುತ್ತಿರುತ್ತದೆ. ಯಾರ ಕೈ ಕೆಳಗೂ ಕೆಲಸ ಮಾಡದೇ ಸ್ವಂತವಾಗಿ ಏನಾದ್ರು ಮಾಡಿಕೊಳ್ಳಬೇಕು ಎನ್ನುವುದಿರುತ್ತದೆ. ಆದರೆ, ಗುರ್ಗಾವ್ (Gurgaon) ಮೂಲದ ಉದ್ಯಮಿಯೊಬ್ಬರು ತಮ್ಮ ಸಣ್ಣದಾದ ಮೊಮೊ ಶಾಪ್  ತೆರೆದು, ಅದನ್ನು ಹೇಗೆ ಲಾಭದಾಯಕ ವ್ಯವಹಾರವಾಗಿ ಬದಲಾಯಿಸಿ ಕೊಂಡರು ಎನ್ನುವುದಕ್ಕೆ ಇದುವೇ ನೈಜ ಉದಾಹರಣೆ. ಈ ಉದ್ಯಮಿಯ ಹೆಸರು ಸಾಕೇತ್ ಸೌರಭ್ (Saketh Sowrabh). ಲಕ್ಷಾನುಗಟ್ಟಲೇ ಸಂಬಳದ ಉದ್ಯೋಗ ತೊರೆದು…

Read More

HVF Recruitment 2026: 220 ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | HVF Chennai Recruitment 2026: 220 Jr Technician Jobs in Defense Sector Apply Now!

ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಇಲ್ಲಿದೆ. ಚೆನ್ನೈನ ಅವಡಿಯಲ್ಲಿ ಇರುವ ಹೆವಿ ವೆಹಿಕಲ್ಸ್ ಫ್ಯಾಕ್ಟರಿ (Heavy Vehicles Factory – HVF) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ ಒಟ್ಟು 220 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ತಾಂತ್ರಿಕ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಇದು ಉತ್ತಮ ಉದ್ಯೋಗ ಅವಕಾಶವಾಗಿದೆ. ಆಸಕ್ತರು ಫೆಬ್ರವರಿ…

Read More

Promise Day 2026 Date: ಫೆಬ್ರವರಿ 11 ರಂದು ಪ್ರಾಮಿಸ್ ಡೇ ಆಚರಿಸುವುದೇಕೆ? ಈ ದಿನ ಇತಿಹಾಸ, ಮಹತ್ವ ತಿಳಿಯಿರಿ – Kannada News | Promise Day 2026: Why is Promise Day celebrated? Know the history and significance of this day

ವ್ಯಾಲೆಂಟೈನ್‌ ವೀಕ್‌ನ ಐದನೇ ದಿನ ಅಂದರೆ ಫೆಬ್ರವರಿ 11 ರಂದು ಪ್ರಾಮಿಸ್ ಡೇ (Promise Day)  ಆಚರಿಸಲಾಗುತ್ತದೆ. ಈ ದಿನದಂದು, ಸಂಗಾತಿಗಳು ತಮ್ಮ ಸಂಬಂಧದಲ್ಲಿ ನಂಬಿಕೆಯ ಬಂಧಗಳನ್ನು ಬಲಪಡಿಸಲು ಪರಸ್ಪರ ಅನೇಕ ಭರವಸೆಗಳನ್ನು ನೀಡುತ್ತಾರೆ. ಹೌದು ಟೆಡ್ಡಿ ಡೇಯ ನಂತರ ಬರುವ ಈ ದಿನದಂದು, ಜನರು ಪರಸ್ಪರ ವಾಗ್ದಾನ ಮಾಡುವ ಮೂಲಕ ತಮ್ಮ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತಾರೆ. ಸಂಬಂಧವನ್ನು ಬಲಪಡಿಸಲು, ನಂಬಿಕೆಯನ್ನು ಗಟ್ಟಿಗೊಳಿಸಲು ಇರುವಂತಹ ಈ ವಿಶೇಷ ದಿನದ ಆಚರಣೆಯ ಹಿನ್ನೆಲೆಯೇನು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.  ಪ್ರಾಮಿಸ್‌ ಡೇ…

Read More

ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ – Kannada News | Big HRA Boost for Bengaluru: 50% Tax Exemption as Metro City Status Confirmed

ಬೆಂಗಳೂರು, ಫೆ.10: ಬೆಂಗಳೂರಿಗರಿಗೆ ಕೇಂದ್ರ ಸರ್ಕಾರ ಹೊಸ ಸಿಹಿ ಸುದ್ದಿ ನೀಡಿದೆ. ಈ ಬಗ್ಗೆ ನವದೆಹಲಿಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಇಷ್ಟು ದಿನ ಆದಾಯ ತೆರಿಗೆ ನಿಯಮಗಳ ಪ್ರಕಾರ, ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ನಗರಗಳನ್ನು ಮಾತ್ರ ‘ಮೆಟ್ರೋ ನಗರಗಳು’ ಎಂದು ಪರಿಗಣಿಸಿ ಶೇ. 50 ರಷ್ಟು HRA (ಮನೆ ಬಾಡಿಗೆ ಭತ್ಯೆ) ವಿನಾಯಿತಿ ನೀಡಲಾಗುತ್ತಿತ್ತು. ಬೆಂಗಳೂರು ವಿಶ್ವಮಟ್ಟದ ನಗರವಾಗಿದ್ದರೂ ತಾಂತ್ರಿಕವಾಗಿ ಇದನ್ನು ‘ಬಾಕಿ ನಗರಗಳ’ ಪಟ್ಟಿಯಲ್ಲಿ ಇರಿಸಲಾಗಿತ್ತು, ಹೀಗಾಗಿ ಇಲ್ಲಿನವರಿಗೆ…

Read More

ದಿ ರಾಜಾ ಸಾಬ್: ಚಿತ್ರಮಂದಿರದಲ್ಲಿ ಪ್ರಭಾಸ್ ಸಿನಿಮಾ ಫ್ಲಾಪ್, ಒಟಿಟಿಯಲ್ಲಿ ಸೂಪರ್ ಹಿಟ್ – Kannada News | Prabhas starrer The Raja Saab movie is now trending at No 1 on Jio Hotstar

ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ (Prabhas) ಅವರು ನಟಿಸಿದ ‘ದಿ ರಾಜಾ ಸಾಬ್’ ಸಿನಿಮಾ ಮೇಲೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದರು. ಅವರು ನಟಿಸಿದ ಮೊದಲ ಹಾರರ್ ಸಿನಿಮಾ ಎಂಬ ಕಾರಣದಿಂದ ನಿರೀಕ್ಷೆ ಡಬಲ್ ಆಗಿತ್ತು. ಜನವರಿ 9ರಂದು ಚಿತ್ರಮಂದಿರಗಳಲ್ಲಿ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಬಿಡುಗಡೆ ಆಗಿತ್ತು. ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಲಿಲ್ಲ. ಗಲ್ಲಾಪೆಟ್ಟಿಗೆಯಲ್ಲಿ ಫ್ಲಾಪ್ ಆದ ಈ ಸಿನಿಮಾ ಇತ್ತೀಚೆಗೆ ಒಟಿಟಿಗೆ ಬಂತು. ಅಚ್ಚರಿ ಎಂದರೆ,…

Read More

ಫೆ. 4ರಂದು ಅಧಿವೇಶನದಲ್ಲಿ ನಡೆದಿದ್ದೇನು? ಕಾಂಗ್ರೆಸ್ ಮಹಿಳಾ ಸಂಸದರ 2 ವಿಡಿಯೋ ರಿಲೀಸ್ ಮಾಡಿದ ಬಿಜೆಪಿ – Kannada News | BJP Minister Kiren Rijiju releases 2 videos of Congress MPs gathering near PM Modis chair in Lok Sabha on Feb 4

ನವದೆಹಲಿ, ಫೆಬ್ರವರಿ 10: ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಭಾಷಣ ಮಾಡಬೇಕಾಗಿದ್ದ ದಿನವಾದ ಫೆ. 4ರಂದು ಲೋಕಸಭೆಯ ಒಳಗೆ ಏನೆಲ್ಲ ನಡೆಯಿತು ಎಂಬುದರ 2 ವಿಡಿಯೋಗಳನ್ನು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಂಚಿಕೊಂಡಿದ್ದಾರೆ. ಇಂದು ಬಿಜೆಪಿಯ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ದೂರನ್ನು ಕೂಡ ಅವರು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಸಂಸದರು ಸಂಸತ್ತಿನ ಮಿತಿಗಳನ್ನು ಮೀರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್‌ ಮಾಡಿದ…

Read More