ಗಂಧದ ನಾಡಿನ ಸೋಪಿಗೆ ಆಂಧ್ರ-ತೆಲಂಗಾಣದಲ್ಲಿ ಭಾರಿ ಕ್ರೇಜ್: ಮೈಸೂರು ಸ್ಯಾಂಡಲ್ ಸೋಪ್ ಕರ್ನಾಟಕಕ್ಕಿಂತ ನೆರೆ ರಾಜ್ಯಗಳಲ್ಲೇ ಹೆಚ್ಚು ಮಾರಾಟ! – Kannada News | Mysore Sandal Soap: M.B. Patil Reveals KSDLs Significant Financial Achievements

ಬೆಂಗಳೂರು, ಏ.28: ಕರ್ನಾಟಕದ ಐಕಾನಿಕ್ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುವ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆ.ಎಸ್.ಡಿ.ಎಲ್) ಇತ್ತೀಚೆಗೆ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಮೈಸೂರು ರಾಜರ ಕಾಲದಲ್ಲಿ ಆರಂಭವಾದ ಈ ಸಂಸ್ಥೆ ಇಂದು ಹಲವು ಉದ್ಯಮಗಳಲ್ಲಿ ಮೇಲ್ಪಂತಿಯಾಗಿದೆ. ಪ್ರಸ್ತುತ ಕೆ.ಎಸ್.ಡಿ.ಎಲ್‌ನ ವಾರ್ಷಿಕ ವಹಿವಾಟು 2 ಸಾವಿರ ಕೋಟಿ ರೂಪಾಯಿ ತಲುಪಿದೆ. ರಾಜ್ಯವಾರು ಮಾರಾಟದ ಅಂಕಿಅಂಶಗಳನ್ನು ನೀಡಿದ ಅವರು, ಕರ್ನಾಟಕ ಮತ್ತು ಗೋವಾದಲ್ಲಿ ಶೇ. 14 ರಷ್ಟು, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಶೇ. 45 ರಷ್ಟು, ಮತ್ತು ದೆಹಲಿಯಲ್ಲಿ ಶೇ. 6 ರಷ್ಟು ಮಾರಾಟವಿದೆ ಎಂದು ಹೇಳಿದರು. ಈ ಹಿಂದೆ ಇ-ಕಾಮರ್ಸ್‌ನಲ್ಲಿ ಸೊನ್ನೆ ಮಟ್ಟದಲ್ಲಿದ್ದ ಕೆ.ಎಸ್.ಡಿ.ಎಲ್ ಈಗ 500 ಕೋಟಿ ರೂಪಾಯಿ ವಹಿವಾಟು ತಲುಪಿದೆ. ಡೀಲರ್ ನೆಟ್‌ವರ್ಕ್ ಅನ್ನು 471 ರಿಂದ 1000ಕ್ಕೂ ಹೆಚ್ಚು ಮಾಡುವ ಮೂಲಕ ವಿಸ್ತರಿಸಲಾಗಿದೆ. ತಿಂಗಳಿಗೆ 20-30 ಕೋಟಿ ರೂಪಾಯಿ ವ್ಯವಹಾರ ನಡೆಸುವ ಈ ಸಂಸ್ಥೆಯ ಯಶಸ್ಸಿಗೆ ಕಾರ್ಮಿಕರು, ಸಿಬ್ಬಂದಿ ಮತ್ತು ಅಧ್ಯಕ್ಷರಾದ ಸಿ.ಎಸ್. ನಾಡಗೌಡರ ಕೊಡುಗೆ ಅಪಾರ ಎಂದು ಪಾಟೀಲ್ ಶ್ಲಾಘಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli Creates New World Record With 9000 Runs

ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ ಟಿ20 ಕ್ರಿಕೆಟ್​ನಲ್ಲಿ ಒಂದೇ ತಂಡದ ಪರ ಕಣಕ್ಕಿಳಿದು 9 ಸಾವಿರ ರನ್​ಗಳಿಸಿಲ್ಲ. ಈ ಪಟ್ಟಿಯಲ್ಲಿ 9012 ರನ್​ಗಳೊಂದಿಗೆ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (ಮುಂಬೈ ಇಂಡಿಯನ್ಸ್​) 6,013 ರನ್​ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಜೇಮ್ಸ್ ವಿನ್ಸ್ (ಹ್ಯಾಂಪ್​ಶೈರ್) 5,934 ರನ್​ಗಳೊಂದಿಗೆ ತೃತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

Source link

ಮೂರೇ ದಿನಕ್ಕೆ 2100 ಕೋಟಿ ಗಳಿಸಿದ ‘ಮೈಖಲ್’: ಭಾರತದಲ್ಲಿ ಎಷ್ಟು? – Kannada News | Michael movie collection report, how much in India

ಭಾರತದ ಹಲವಾರು ಸಿನಿಮಾಗಳು 100 ಕೋಟಿ ಗಳಿಕೆ ಮಾಡಲು ಒದ್ದಾಡುತ್ತಿವೆ. ಸೂಪರ್ ಹಿಟ್ ಸಿನಿಮಾ ಸಹ 500 ಕೋಟಿ ಗಳಿಸುವಷ್ಟರಲ್ಲಿ ಹೆಣಗಾಡುತ್ತದೆ. ಇತ್ತೀಚೆಗೆ ಬ್ಲಾಕ್ ಬಸ್ಟರ್ ಆದ ‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆ ಆಗಿ ಒಂದೂವರೆ ತಿಂಗಳಿಗೆ ಸುಮಾರು 1800 ಕೋಟಿ ಗಳಿಕೆ ಮಾಡಿದೆ. ಆದರೆ ಇಲ್ಲೊಂದು ಹಾಲಿವುಡ್ ಸಿನಿಮಾ, ಅದೂ ಬಿಡುಗಡೆ ಆದ ಬಳಿಕ ಬಹುತೇಕ ಋಣಾತ್ಮಕ ವಿಮರ್ಶೆಗಳನ್ನೇ ಪಡೆಯುತ್ತಿರುವ ಸಿನಿಮಾ ಬಿಡುಗಡೆ ಆದ ಮೂರೇ ದಿನಗಳಲ್ಲಿ 2100 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ.

ವಿಶ್ವದ ಡ್ಯಾನ್ಸಿಂಗ್ ಲಿಜೆಂಡ್ ಮೈಖಲ್ ಜಾಕ್ಸನ್ ಜೀವನ ಆಧರಿಸಿದ ‘ಮೈಖಲ್’ ಸಿನಿಮಾ ಏಪ್ರಿಲ್ 24 ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ ಬಿಡುಗಡೆ ಆಯ್ತು. ಮೈಖಲ್ ಜಾಕ್ಸನ್ ಜೀವನ ಆಧರಿಸಿದ ಸಿನಿಮಾ ಆದ್ದರಿಂದ ಭಾರಿ ಕುತೂಹಲವನ್ನು ಈ ಸಿನಿಮಾ ಹುಟ್ಟುಹಾಕಿತ್ತು. ಸಿನಿಮಾನಲ್ಲಿ, ಮೈಖಲ್ ಜಾಕ್ಸನ್ ಅವರ ಹತ್ತಿರದ ಸಂಬಂಧಿಯೇ ಆಗಿರುವ ಜಾಫರ್ ಜಾಕ್ಸನ್ ಅವರು ಮೈಖಲ್ ಜಾಕ್ಸನ್ ಪಾತ್ರದಲ್ಲಿ ನಟಿಸಿದ್ದಾರೆ.

ಸಿನಿಮಾ ಬಿಡುಗಡೆ ಆದ ಮೂರು ದಿನಗಳಲ್ಲಿ 220 ಮಿಲಿಯನ್​​ಗೂ ಹೆಚ್ಚು ಮೊತ್ತ ಅಂದರೆ ಭಾರತದ ರೂಪಾಯಿಗಳ ಲೆಕ್ಕದಲ್ಲಿ 2100 ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಕೆ ಮಾಡಿದೆ. ಇದು, ಬಯೋಪಿಕ್ ಆಧರಿಸಿದ ಸಿನಿಮಾ ಒಂದು ಗಳಿಸಿರುವ ಬಲು ದೊಡ್ಡ ಮೊತ್ತವಾಗಿದೆ. ಈ ಹಿಂದೆ ಖ್ಯಾತ ಗಾಯಕ ಬೊಹಿಮಿಹೆನ್ ರ್ಯಾಪಸ್​ಡಿ (ಪ್ರಿನ್ಸ್) ಜೀವನ ಆಧರಿಸಿದ ಸಿನಿಮಾ 141 ಮಿಲಿಯನ್ ಡಾಲರ್ 1300 ಕೋಟಿಗೂ ಹೆಚ್ಚು ಮೊತ್ತವನ್ನು ಮೊದಲ ವಾರ ಗಳಿಸಿತ್ತು. ಆ ದಾಖಲೆಯನ್ನು ‘ಮೈಖಲ್’ ಸಿನಿಮಾ ಮೊದಲ ಮೂರು ದಿನದಲ್ಲೇ ಮುರಿದಿದೆ.

ಇದನ್ನೂ ಓದಿ:ಈ ಸಿನಿಮಾ ದಾಖಲೆ ಮುರಿಯೋದು ‘ಧುರಂಧರ್ 2’ ಚಿತ್ರಕ್ಕೆ ಅಸಾಧ್ಯ?

ಸಿನಿಮಾದ ಬಗ್ಗೆ ಋಣಾತ್ಮಕ ವಿಮರ್ಶೆಗಳು ವ್ಯಕ್ತವಾಗಿವೆ. ಲಿಜೆಂಡರಿ ವ್ಯಕ್ತಿಯ ಬಗ್ಗೆ ಇನ್ನೂ ಒಳ್ಳೆಯ ರೀತಿಯಲ್ಲಿ ಸಿನಿಮಾ ಮಾಡಬಹುದಿತ್ತು ಎಂಬ ಮಾತುಗಳು ಕೇಳಿ ಬಂದಿವೆ. ಇದೆಲ್ಲದರ ನಡುವೆಯೂ ಸಹ ಸಿನಿಮಾ ಭಾರಿ ಕಲೆಕ್ಷನ್ ಮಾಡುತ್ತಿದೆ. ಇನ್ನು ಈ ಸಿನಿಮಾ ಭಾರತದಲ್ಲಿ ಸಹ ತಮ್ಮ ಮ್ಯಾಜಿಕ್ ಮಾಡುತ್ತಿದೆ. ‘ಧುರಂಧರ್ 2’ ಸೇರಿದಂತೆ ಇನ್ನೂ ಕೆಲ ಸಿನಿಮಾಗಳ ಪ್ರಬಲ ಪೈಪೋಟಿಯ ನಡುವೆಯೂ ಸಹ ‘ಮೈಖಲ್’ ಸಿನಿಮಾ ಮೂರು ದಿನಗಳಲ್ಲಿ ಸುಮಾರು 25 ಕೋಟಿ ಗಳಿಕೆ ಮಾಡಿದೆ. ಅಲ್ಲು ಅರ್ಜುನ್, ಅನುಪಮ್ ಖೇರ್ ಇನ್ನೂ ಕೆಲವು ಖ್ಯಾತನಾಮರು ‘ಮೈಖಲ್’ ಸಿನಿಮಾ ವೀಕ್ಷಿಸಿದ್ದಾರೆ.

ಮೈಖಲ್ ಜಾಕ್ಸನ್ ಅವರಿಗೆ ವಿಶ್ವದಾದ್ಯಂತ ಅಭಿಮಾನಿಗಳಿದ್ದು, ಸಿನಿಮಾ ಸಾಧಾರಣವಾಗಿದ್ದರೂ ಸಹ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ ಹಾಗಾಗಿ ಈ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ. ಭಾರತದಲ್ಲೂ ಸಹ ಉತ್ತಮ ಗಳಿಕೆಯ ಮುನ್ಸೂಚನೆಯನ್ನು ನೀಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘3 ಈಡೀಯಟ್ಸ್’ ಚಿತ್ರಕ್ಕೆ ಬರ್ತಿದೆ ಸೀಕ್ವೆಲ್; ಘೋಷಿಸಿದ ಆಮಿರ್ ಖಾನ್ – Kannada News | 3 Idiots Sequel Confirmed: Aamir Khan Announces Rajkumar Hirani to Direct

2009ರಲ್ಲಿ ಬಂದ ‘3 ಈಡಿಯಟ್ಸ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಲಿವುಡ್​​ನಲ್ಲಿ ದೊಡ್ಡ ಸಂಚಲನ ಸೃಷ್ಟಿ ಮಾಡಿತ್ತು. ಈಗಿನ ಕಾಲದಲ್ಲಿ ಈ ಚಿತ್ರ ತೆರೆಗೆ ಬಂದಿದ್ದರೆ ಸಿನಿಮಾ ಸುಮಾರು ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡುತ್ತಿತ್ತೇನೋ. ಈಗ ಆಮಿರ್ ಖಾನ್ ಅವರು ‘3 ಈಡಿಯಟ್ಸ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾಗೆ ಸೀಕ್ವೆಲ್ ಸಿದ್ಧವಾಗುತ್ತಿದೆ ಎಂದಿದ್ದಾರೆ. ರಾಜ್​​ಕುಮಾರ್ ಹಿರಾನಿ ಅವರು ಈ ಚಿತ್ರ ನಿರ್ದೇಶನ ಮಾಡಲಿದ್ದಾರೆ.

ರಾಜ್​​ಕುಮಾರ್ ಹಿರಾನಿಗೆ ಸಾಕಷ್ಟು ಮೈಲೇಜ್ ತಂದುಕೊಟ್ಟ ಚಿತ್ರ ಎಂದರೆ ಅದು ‘3 ಈಡಿಯಟ್ಸ್’ ಸಿನಿಮಾ. ಈ ಚಿತ್ರದಲ್ಲಿ ಆಮಿರ್ ಖಾನ್, ಆರ್​ ಮಾಧವನ್, ಶರ್ಮಣ್ ಜೋಶಿ, ಕರೀನಾ ಕಪೂರ್ ಮೊದಲಾದವರು ನಟಿಸಿದ್ದರು.ಈ ಸಿನಿಮಾ ರಿಲೀಸ್ ಆಗಿ 2 ದಶಕ ಪೂರೈಸುತ್ತಾ ಬಂದರೂ ಇದು ಅನೇಕರ ಫೇವರಿಟ್ ಎನಿಸಿಕೊಂಡಿದೆ. ಈ ಚಿತ್ರಕ್ಕೆ ಸೀಕ್ವೆಲ್ ಬರಲಿದೆ ಎಂಬ ಚರ್ಚೆ ಸಾಕಷ್ಟು ಮೊದಲಿನಿಂದಲೂ ಇತ್ತು. ಈಗ ಅದು ನಿಜವಾಗಿದೆ.

ನಿರ್ದೇಶಕ ರಾಜ್​​ಕುಮಾರ್ ಹಿರಾನಿ ಹಾಗೂ ಬರಹಗಾರ ಅಭಿಜಾತ್ ಜೋಶಿ ಅವರು ‘3 ಈಡಿಯಟ್ಸ್’ ಸೀಕ್ವೆಲ್ ಮೇಲೆ ಕೆಲಸ ಮಾಡುತ್ತಿದ್ದಾರೆ ಎಂದು ಆಮಿರ್ ಖಾನ್ ಹೇಳಿದ್ದಾರೆ. ಈ ಬಾರಿಯೂ ಚಿತ್ರದ ಕಥೆ ಕಾಲೇಜ್​​ನಲ್ಲಿ ಸಾಗುತ್ತದೆಯೇ ಅಥವಾ ಬೇರೆ ವಿಷಯವನ್ನು ಹೇಳಲಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

‘ದಾದಾ ಸಾಹೇಬ್ ಫಾಲ್ಕೆ’ ಮೇಲೂ ಆಮಿರ್ ಖಾನ್ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾತನಾಡಿರೋ ಅವರು, ‘ದಾದಾ ಸಾಹೇಬ್ ಫಾಲ್ಕೆ ಚಿತ್ರ ಸಾಕಷ್ಟು ಸ್ಫೂರ್ತಿದಾಯಕ. ರಾಜು (ರಾಜ್​​ಕುಮಾರ್ ಹಿರಾನಿ) ಅವರು ಇದರ ಮೇಲೆ ಕೆಲಸ ಮಾಡುತ್ತಿದ್ದಾರೆ. 3 ಡ್ರಾಫ್ಟ್​​ಗಳನ್ನು ಸಿದ್ಧಪಡಿಸಿದ್ದಾರೆ. ಅವರಿಗೆ ಸ್ಕ್ರಿಪ್ಟ್ ಬಗ್ಗೆ ಖುಷಿ ಇಲ್ಲ. ಮುಂದಿನ ದಿನಗಳಲ್ಲಿ ಪುನಃ ಬರೆಯಬಹುದು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  3 ಈಡಿಯಟ್ಸ್ ಚಿತ್ರಕ್ಕೆ ಆಡಿಷನ್ ಕೊಟ್ಟಿದ್ದ ಅನುಷ್ಕಾ ಶರ್ಮಾ; ರಿವೀಲ್ ಆಗಿದ್ದೆಲ್ಲಿ?

ರಾಜ್‌ಕುಮಾರ್ ಹಿರಾನಿ ಪ್ರಸ್ತುತ ‘3 ಈಡಿಯಟ್ಸ್’ ಮೇಲೆ ಗಮನ ಹರಿಸುತ್ತಿದ್ದಾರೆ ಎಂದು ಆಮಿರ್ ಹೇಳಿದ್ದಾರೆ. ‘ನಾನು ಕಥೆಯನ್ನು ಕೇಳಿದ್ದೇನೆ ಮತ್ತು ಅದು ತುಂಬಾ ಚೆನ್ನಾಗಿ ಬಂದಿದೆ’ ಎಂದಿದ್ದಾರೆ ಆಮಿರ್ ಖಾನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು ಖಾಸಗಿ ಕಾಲೇಜು ಹಾಸ್ಟೆಲ್‌ನಲ್ಲಿ ಜಗಳ; ಸಹಾಯಕ ಪ್ರಾಧ್ಯಾಪಕಿಯಿಂದ ಜಾತಿ ಕಿರುಕುಳ ಆರೋಪ! – Kannada News | Bengaluru College Hostel Fight: Assistant Professor Alleges Caste Based Harassment

ಬೆಂಗಳೂರು, ಏಪ್ರಿಲ್ 28: ಕೆ.ಎಸ್. ಲೇಔಟ್‌ನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಸಹಾಯಕ ಪ್ರಾಧ್ಯಾಪಕಿ ಜ್ಯೋತಿ ಕುಮಾರಿ ಮತ್ತು ಅವರ ರೂಮೇಟ್ ಪ್ರೀತಿ ಜೈನ್ ನಡುವೆ ಗಲಾಟೆ ನಡೆದಿದೆ. ಮಾರ್ಚ್‌ನಲ್ಲಿ ಹಾಸ್ಟೆಲ್ ಸೇರಿದ್ದ ಜ್ಯೋತಿ ಕುಮಾರಿಯವರಿಗೆ, ಪ್ರೀತಿ ಜೈನ್ ಜಾತಿ ಮತ್ತು ಆಹಾರ ಪದ್ಧತಿ ಆಧಾರದ ಮೇಲೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಕಿರುಕುಳವು ಕೊನೆಗೆ ಹಲ್ಲೆಯಾಗಿ ಪರಿಣಮಿಸಿದೆ ಎಂದು ಜ್ಯೋತಿ ಕುಮಾರಿ ದೂರಿದ್ದಾರೆ. ಈ ಘಟನೆ ಬಗ್ಗೆ ಜ್ಯೋತಿ ಕುಮಾರಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜ್ಯೋತಿ ಕುಮಾರಿ ಅವರು ತಮ್ಮ ದೂರಿನಲ್ಲಿ, ಪ್ರೀತಿ ಜೈನ್ ತಮ್ಮ ಜಾತಿಯ ಬಗ್ಗೆ ಪ್ರಶ್ನಿಸಿ, ನಂತರ ಈರುಳ್ಳಿ-ಬೆಳ್ಳುಳ್ಳಿ ಸೇವನೆಯ ಬಗ್ಗೆ ವಿಚಾರಿಸಿದ್ದರು ಎಂದು ತಿಳಿಸಿದ್ದಾರೆ. ಪ್ರೀತಿ ಜೈನ್ ಪದೇ ಪದೇ ಪ್ರಚೋದಿಸುತ್ತಿದ್ದರು ಎಂದು ಜ್ಯೋತಿ ಕುಮಾರಿ ಹೇಳಿದ್ದಾರೆ. ಮಾರ್ಚ್ 27ರಂದು ಪ್ರೀತಿ ಜೈನ್ ತಮ್ಮ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಅನ್ನು ಅತಿಯಾದ ಶಬ್ದದಲ್ಲಿ ಇಟ್ಟಿದ್ದಾಗಲೂ ಜಗಳ ಪ್ರಾರಂಭವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

೬ ಎಸೆತಗಳಿಂದ ಭರ್ಜರಿ ದಾಖಲೆ ತಪ್ಪಿಸಿಕೊಂಡ RCB – Kannada News | IPL 2026: RCB Just Miss IPL’s Fastest Run Chase

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಮೋಘ ಗೆಲುವು ದಾಖಲಿಸಿದೆ. ಅದು ಕೂಡ ಕೇವಲ 6.3 ಓವರ್​ಗಳಲ್ಲಿ ಪಂದ್ಯ ಮುಗಿಸುವ ಮೂಲಕ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಐಪಿಎಲ್​ನ ಫಾಸ್ಟೆಸ್ಟ್ ಚೇಸಿಂಗ್ ದಾಖಲೆಯನ್ನು ತನ್ನದಾಗಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

Source link

ಟಿಬೆಟನ್ ನಿರಾಶ್ರಿತರ ‘ಹಸಿರು’ ಸಾಧನೆಗೆ ಮೋದಿ ಮೆಚ್ಚುಗೆ! ಎಕೊ‌ ನಳಂದ‌ ಅರಣ್ಯ ಸಂಸ್ಥಾಪಕರ ಹರ್ಷ – Kannada News | PM Modi Praises ‘Eco Nalanda’ Tibetan Private Forest in Mann Ki Baat: A 30 Year Journey of Greenery

ಕೊಡಗು, ಏಪ್ರಿಲ್ 28: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕೊಡಗಿನ ಗಡಿಯಂಚಿನ ಬೈಲುಕುಪ್ಪೆಯ ಟಿಬೆಟನ್ ಖಾಸಗಿ ಅರಣ್ಯವನ್ನು ಶ್ಲಾಘಿಸಿರುವುದು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಟಿಬೆಟನ್ ಕ್ಯಾಂಪ್‌ನಲ್ಲಿರುವ ‘ಎಕೋ ನಳಂದ’ ಅರಣ್ಯದ ಸಂಸ್ಥಾಪಕ ಕರ್ಮ ಸಮ್ತೆನ್ಲಿಂಗ್ಪ ರಿನ್ಪೊಚೆ ಈ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ಕಳೆದ 30 ವರ್ಷಗಳಿಂದ ಶ್ರಮವಹಿಸಿ 100 ಎಕರೆ ಬರಡು ಭೂಮಿಯನ್ನು ದಟ್ಟ ಅರಣ್ಯವನ್ನಾಗಿ ಪರಿವರ್ತಿಸಿರುವ ಇವರು, ವಿಶ್ವದ ವಿವಿಧ ಭಾಗಗಳ ಔಷಧೀಯ ಗಿಡಗಳನ್ನು ಇಲ್ಲಿ ಬೆಳೆಸಿದ್ದಾರೆ. ನಮಗೆ ಆಶ್ರಯ ನೀಡಿದ ಭಾರತಕ್ಕೆ ನಾವು ನೀಡುತ್ತಿರುವ ಕಾಣಿಕೆ ಇದು ಎಂದು ಅವರು ಭಾವನಾತ್ಮಕವಾಗಿ ನುಡಿದಿದ್ದಾರೆ. ನೂರಾರು ಪಕ್ಷಿ-ಸಂಕುಲಗಳಿಗೆ ಆಶ್ರಯತಾಣವಾಗಿರುವ ಈ ಅರಣ್ಯದಿಂದಾಗಿ ಸ್ಥಳೀಯ ವಾತಾವರಣವೂ ತಂಪಾಗಿದೆ. ಪ್ರಧಾನಿಯವರ ಮಾತು ನಮಗೆ ಇನ್ನಷ್ಟು ಸ್ಫೂರ್ತಿ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಮ್ ಬದಲಾಯಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ – Kannada News | Telangana: Fuel Shortage Sparks Unique Offer, Free Petrol for SIM Switch Draws Crowds

ಆದಿಲಾಬಾದ್, ಏಪ್ರಿಲ್ 28: ಆದಿಲಾಬಾದ್​​ನಿಂದ ಚಿತ್ತೂರಿನವರೆಗೆ ಯಾವ ಪೆಟ್ರೋಲ್ ಬಂಕ್​ನಲ್ಲಿ ನೋಡಿದ್ರೂ ನೋ ಸ್ಟಾಕ್ ನೋರ್ಡ್​ಗಳದ್ದೇ ಕಾರುಬಾರು. ಬಂಕ್‌ಗಳ ಮುಂದೆ ಕಿಲೋಮೀಟರ್ ಉದ್ದದ ಸರತಿ ಸಾಲು, ಒಂದು ಲೀಟರ್ ಪೆಟ್ರೋಲ್ ಸಿಕ್ಕರೆ ಸಾಕು ಅನ್ನೋ ಮನಸ್ಥಿತಿ. ಈ ಹೊತ್ತಿನಲ್ಲಿ, ಉದ್ಯಮಿಯೊಬ್ಬರ ಬುದ್ಧಿವಂತ ಕಲ್ಪನೆ ಈಗ ಎಲ್ಲರ ಗಮನ ಸೆಳೆಯುತ್ತಿದೆ.

ಖಮ್ಮಂ ಮತ್ತು ಭದ್ರದ್ರಿ ಕೊಥಗುಡೆಮ್ ಜಿಲ್ಲೆಗಳಲ್ಲಿ ಇಂಧನ ಕೊರತೆ ತೀವ್ರವಾಗಿರುವ ಬೆನ್ನಲ್ಲೇ, ಏರ್‌ಟೆಲ್ ವಿತರಕ ರೆಲ್ಲಾ ಸತೀಶ್ ಎಂಬುವವರು ಘೋಷಿಸಿದ ಆಫರ್ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ದಮ್ಮಪೇಟ ಮಂಡಲ ಕೇಂದ್ರದಲ್ಲಿ ತಮ್ಮ ಹೊಸ ಅಂಗಡಿಯ ಉದ್ಘಾಟನೆಯ ಸಮಯದಲ್ಲಿ ಬಂಪರ್ ಆಫರ್ ಘೋಷಿಸಿದ್ದಾರೆ. ಯಾರ್ಯಾರು ಏರ್​ಟೆಲ್​ ಸಿಮ್​ಗೆ ತಮ್ಮ ಸಿಮ್ ಬದಲಾಯಿಸಿ, ಯಾರು ತಮ್ಮ ಸಿಮ್ ಅನ್ನು ಯಾವುದೇ ನೆಟ್‌ವರ್ಕ್‌ನಿಂದ ಏರ್‌ಟೆಲ್‌ಗೆ ಬದಲಾಯಿಸಿಕೊಳ್ಳುತ್ತಾರೋ (MNP), ಅವರಿಗೆ ಒಂದು ಲೀಟರ್ ಪೆಟ್ರೋಲ್ ಉಚಿತ ಎಂದು ಹೇಳಿದ್ದು, ಜನರು ಪೆಟ್ರೋಲ್ ಬಂಕ್​ ಎದುರಲ್ಲ, ಏರ್​ಟೆಲ್ ಅಂಗಡಿ ಎದುರು ಕ್ಯೂ ನಿಂತಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ, ಲಕ್ಷ್ಮೀಪುತ್ರ ಸಾವು! – Kannada News | Afzalpur Family Dispute: Husband Kills Wife, Dies by Suicide; Child Saved from Well

ಕಲಬುರಗಿ, ಏ.28: ಜಿಲ್ಲೆಯಲ್ಲಿ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದ ಬಳಿ ಸಂಭವಿಸಿದ ಘೋರ ಕೃತ್ಯವೊಂದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಕೌಟುಂಬಿಕ ಕಲಹದ ಕಾರಣ ಪತಿ ತನ್ನ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿ, ನಂತರ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಲಕ್ಷ್ಮೀಪುತ್ರ ಎಂಬಾತ ತನ್ನ 23 ವರ್ಷದ ಪತ್ನಿ ಅಂಜಲಿಯನ್ನು ಮನೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹೆಂಡತಿಯನ್ನು ಕೊಂದ ನಂತರ, ತನ್ನ ಪುಟ್ಟ ಮಗುವನ್ನು ಎತ್ತಿಕೊಂಡು ಲಕ್ಷ್ಮೀಪುತ್ರ ಮದರಾ (ಕೆ) ಗ್ರಾಮದ ಸಮೀಪದ ಬಾವಿಗೆ ಜಿಗಿದಿದ್ದಾನೆ.

ಲಕ್ಷ್ಮೀಪುತ್ರ ಮಗುವಿನೊಂದಿಗೆ ಬಾವಿಗೆ ಹಾರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸಮಯಪ್ರಜ್ಞೆ ಮೆರೆದ ಗ್ರಾಮಸ್ಥರು ಕೂಡಲೇ ಬಾವಿಗೆ ಜಿಗಿದು ಮಗುವನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಲಕ್ಷ್ಮೀಪುತ್ರ ಬಾವಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್‌ ಮುಖಂಡನ ಪೈಶಾಚಿಕ ಕೃತ್ಯ: ಕಬ್ಬಿಣದ ರಾಡ್‌ನಿಂದ ಏಟು; ಪೊಕ್ಸೋ ಅಡಿಯಲ್ಲಿ ಕೇಸ್!

ಈ ಘಟನೆ ನಡೆದ ತಕ್ಷಣ ರೇವೂರು ಪೊಲೀಸರು ಮತ್ತು ಸೋಕೋ (SOCO) ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಜಲಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಾವಿಯಿಂದ ಲಕ್ಷ್ಮೀಪುತ್ರನ ಶವವನ್ನು ಹೊರತೆಗೆಯಲಾಗಿದೆ. ಈ ಕುರಿತು ರೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮತ್ತು ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧಮ್​​ ಇದ್ರೆ ಚುನಾವಣೆಗೆ ನಿಲ್ಲಲು ಹೇಳಿ: ಚೇತನ್​​ಗೆ ನಿಖಿಲ್ ಕುಮಾರಸ್ವಾಮಿ​​ ಓಪನ್​​ ಚಾಲೆಂಜ್​

ಮೈಸೂರು, ಏಪ್ರಿಲ್​​ 28: ತಮ್ಮ ಬಗ್ಗೆ ಮಾತನಾಡಿದ್ದ ನಟ ಚೇತನ್​​ ಅಹಿಂಸ ಬಗ್ಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್​​ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಧಮ್​​ ಇದ್ದರೆ ಬಂದು ಅವರಿಗೆ ಚುನಾವಣೆಗೆ ನಿಲ್ಲಲು ಹೇಳಿ. ಅವರಂತೆ ಮನೆಯಲ್ಲಿ ಕುಳಿತು ಟ್ವಿಟ್ಟರ್​​ನಲ್ಲಿ ನಾನೂ ಸಾವಿರ ಬರೆಯುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರನಟ ಡಾ. ರಾಜ್​​ಕುಮಾರ್​​ ಅವರ ಬಗ್ಗೆ ಚೇತನ್​​ ಮಾತನಾಡಿದ್ದನ್ನು ನಿಖಿಲ್​​ ಇತ್ತೀಚೆಗೆ ಖಂಡಿಸಿದ್ದರು. ಅಣ್ಣಾವ್ರ ಹೆಸರು ಹೇಳಲು, ಅವರ ಬಗ್ಗೆ ಮಾತನಾಡಲು ನಟ ಚೇತನ್ ಅವರಿಗೆ ಯೋಗ್ಯತೆ ಇಲ್ಲ. ಅವರೊಬ್ಬ ಪ್ರಚಾರಪ್ರಿಯ ಎಂದು ದೂರಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದ ಚೇತನ್ ಅಹಿಂಸ, ನಿಖಿಲ್ ಕುಮಾರಸ್ವಾಮಿ ಮತ್ತು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಅವರನ್ನು ಟೀಕೆ ಮಾಡಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version