Video: ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಕುಟುಂಬದವರು ಔಷಧಿಯೊಂದಿಗೆ ಬಂದಾಗ ರೋಗಿಯೇ ಇರಲಿಲ್ಲ – Kannada News | Madhya Pradesh: Video Sparks Outrage After Doctor Appears Intoxicated on Duty

ಗುನಾ, ಫೆಬ್ರವರಿ 10: ಲಲ್ಲು ಸಿಂಗ್ ಎಂಬುವವರಿಗೆ ಅಸ್ತಮಾ ಜೋರಾಗಿತ್ತು, ಕೂಡಲೇ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದರು. ರಾತ್ರಿ ಡ್ಯೂಟಿಯಲ್ಲಿದ್ದ ವೈದ್ಯ ಕುಡಿದ ಮತ್ತಿನಲ್ಲಿದ್ದರು, ರೋಗಿಯನ್ನು ಅಡ್ಮಿಟ್ ಮಾಡಬೇಕೆಂದು ಹೇಳಿ, ಒಂದಷ್ಟು ಔಷಧಿಗಳನ್ನು ತೂರಾಡುತ್ತಲೇ ಬರೆದುಕೊಟ್ಟಿದ್ದರು. ಆ ಔಷಧಿಯನ್ನು ತೆಗೆದುಕೊಂಡು ಆಸ್ಪತ್ರೆಗೆ ಬರುವಷ್ಟರಲ್ಲಿ ರೋಗಿಯೇ ಅಲ್ಲಿರಲಿಲ್ಲ, ಯಾವ ವಾರ್ಡ್​​ನಲ್ಲಿ ಅಡ್ಮಿಟ್ ಮಾಡಲಾಗಿದೆ ಎಂದು ಕೇಳಿದರೆ ಉತ್ತರ ಕೊಡುವ ಸ್ಥಿತಿಯಲ್ಲಿ ವೈದ್ಯರಿರಲಿಲ್ಲ ಇದನ್ನು ಕಂಡು ರೋಗಿಯ ಕುಟುಂಬದವರು ಸಂಕಷ್ಟಕ್ಕೆ ಸಿಲುಕಿದ್ದ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ.

ರೋಗಿಯನ್ನು ದಾಖಲಿಸಿಕೊಂಡ ನಂತರ, ವೈದ್ಯರು ತಮ್ಮನ್ನು ಯಾವ ವಾರ್ಡ್‌ನಲ್ಲಿ ಇರಿಸಲಾಗಿತ್ತು ಎಂಬುದನ್ನು ಮರೆತಿದ್ದಾರೆ. ಸಣ್ಣ ಪ್ರಶ್ನೆಗೂ ಉತ್ತರ ಕೊಡಲು ವೈದ್ಯರು ಹೆಣಗಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ವಾರಗಳವರೆಗೆ ಅವರನ್ನು ಅಮಾನತು ಮಾಡಲಾಗಿದ್ದು, ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸಾವಿರ ರೂಪಾಯಿಗೆ ಹೆಂಡತಿಯನ್ನು ಸ್ನೇಹಿತರಿಗೆ ಮಾರಿದ ವ್ಯಕ್ತಿ, ಆಮೇಲೆ ನಡೀಬಾರದ್ದು ನಡೆದೇ ಹೋಯ್ತು – Kannada News | Uttar Pradesh: Man Accused of Handing Wife to Friends for Money, Physical Assault Case Registered

ಬದೌನ್, ಫೆಬ್ರವರಿ 10: ಸಾವಿರ ರೂಪಾಯಿಗಾಗಿ ವ್ಯಕ್ತಿಯೊಬ್ಬ ತನ್ನ ಹೆಂಡತಿ(Wife)ಯನ್ನೇ ಸ್ನೇಹಿತರಿಗೆ ಮಾರಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಒಂದು ಸಾವಿರ ರೂಪಾಯಿಗೆ ಬದಲಾಗಿ ತನ್ನ ಸ್ನೇಹಿತರಿಗೆ ಒಪ್ಪಿಸಿದ್ದಾನೆ ಎಂದು ಆರೋಪಿಸಲಾಗಿದೆ.ಇಬ್ಬರು ಸ್ನೇಹಿತರು ಆ ವ್ಯಕ್ತಿಯ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯ ನಂತರ, ಮಹಿಳೆ ಪೊಲೀಸರಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.

ಪೊಲೀಸರು ಇಬ್ಬರು ಸ್ನೇಹಿತರು ಮತ್ತು ಮಹಿಳೆಯ ಪತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಮಹಿಳೆಯ ಪತಿಯ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ. ಮಹಿಳೆಯ ಪತಿಗಾಗಿ ಹುಡುಕಾಟ ನಡೆಯುತ್ತಿದೆ.ಬದೌನ್ ಜಿಲ್ಲೆಯ ಫೈಜ್‌ಗಂಜ್ ಬೆಹ್ತಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಮಹಿಳೆಯೊಬ್ಬರ ಮೇಲೆ ಆಕೆಯ ಪತಿಯ ಸ್ನೇಹಿತರೇ ಅತ್ಯಾಚಾರವೆಸಗಿದ್ದಾರೆ. ಆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ಸಂಜೆ ಗ್ಯಾಸ್ ಏಜೆನ್ಸಿಗೆ ಹೋಗುತ್ತಿದ್ದಾಗ, ತನ್ನ ಪತಿ ಬಾಲ್ ಕಿಶನ್ ಮತ್ತು ಪಪ್ಪು ಎಂಬ ಯುವಕರಿಂದ ಒಂದು ಸಾವಿರ ರೂಪಾಯಿಗಳನ್ನು ತೆಗೆದುಕೊಂಡು ತನ್ನನ್ನು ಅವರೊಂದಿಗೆ ಕಳುಹಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಪೊಲೀಸರ ಪ್ರಕಾರ, ಮಹಿಳೆ ತನ್ನ ಗಂಡನ ಸ್ನೇಹಿತರೊಂದಿಗೆ ಹಿಂದಿರುಗುತ್ತಿದ್ದಾಗ, ಇಬ್ಬರೂ ತನ್ನನ್ನು ತೋಟಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಘಟನೆ ನಂತರ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರ ಆಧಾರದ ಮೇಲೆ ಬಾಲ್ ಕಿಶನ್, ಪಪ್ಪು ಮತ್ತು ಮಹಿಳೆಯ ಪತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಆರೋಪಿ ಬಾಲ್​ಕಿಶನ್ ಮತ್ತು ಪಪ್ಪುವನ್ನು ಬಂಧಿಸಿದ್ದಾರೆ, ಮಹಿಳೆಯ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ, ಸೋಮವಾರ ಪೊಲೀಸರು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 9:21 am, Tue, 10 February 26

Source link

‘ಅತ್ತೆ-ಮಾವ ನನ್ನ ಹೆಂಡತಿಯನ್ನು ಕಳುಹಿಸುತ್ತಿಲ್ಲ’; ಪೋಸ್ಟರ್ ಹಿಡಿದು ನಿಂತ ಅಮಿತಾಭ್ ಬಚ್ಚನ್ – Kannada News | Amitabh Bachchan’s Viral Poster: Unraveling the Mystery Behind His ‘Love Marriage’ Plea

ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ (ಅಮಿತಾಭ್ ಬಚ್ಚನ್) ಪ್ರತಿ ಭಾನುವಾರ ತಮ್ಮ ಬಂಗಲೆಯ ಹೊರಗೆ ತಮ್ಮ ಅಭಿಮಾನಿಗಳನ್ನು ಭೇಟಿಯಾಗುತ್ತಾರೆ. ಅಭಿಮಾನಿಗಳು ಅವರನ್ನು ನೋಡಲು ಅವರ ಬಂಗಲೆಯ ಹೊರಗೆ ಗಂಟೆಗಟ್ಟಲೆ ಕಾಯುತ್ತಾರೆ. ಬಿಗ್ ಬಿ ಕೂಡ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು ಅಷ್ಟೇ ಉತ್ಸುಕರಾಗಿದ್ದಾರೆ. ಆದ್ದರಿಂದ, ಯಾವುದೇ ಕಾರಣದಿಂದ ಅವರು ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗದಿದ್ದರೆ, ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಬರೆದು ಕ್ಷಮೆಯಾಚಿಸುತ್ತಾರೆ. ಬಿಗ್ ಬಿ ಅವರ ಬಂಗಲೆಯ ಹೊರಗೆ ಇರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಅಮಿತಾಭ್ ಬಚ್ಚನ್ ಅವರಿಗೆ ವಯಸ್ಸು 83 ಆದರೂ ಉತ್ಸಾಹ ಕಡಿಮೆ ಆಗಿಲ್ಲ. ಈ ಬಾರಿ ಅವರು ಮನೆಯ ಹೊರಗೆ ಕಾಣಿಸಿಕೊಳ್ಳುವಾಗ ಅವರ ಕೈಯಲ್ಲಿರುವ ಪೋಸ್ಟರ್ ಗಮನ ಸೆಳೆಯಿತು. ಈ ಪೋಸ್ಟರ್‌ನಲ್ಲಿರುವುದನ್ನು ಓದಿದ ಬಳಿಕ ಎಲ್ಲರೂ ಗೊಂದಲಕ್ಕೆ ಒಳಗಾದರು.

ಪಾಪರಾಜಿ ಖಾತೆಯಲ್ಲಿ ಹಂಚಿಕೊಂಡಿರುವ ಈ ವೀಡಿಯೊದಲ್ಲಿ, ಬಿಗ್ ಬಿ ಪೋಸ್ಟರ್ ಹಿಡಿದುಕೊಂಡಿರುವುದನ್ನು ಕಾಣಬಹುದು. ಈ ಪೋಸ್ಟರ್‌ನಲ್ಲಿ ‘ನನ್ನನ್ನು ಬೆಂಬಲಿಸಿ. ನನ್ನ ಅತ್ತೆ-ಮಾವ ನನ್ನ ಹೆಂಡತಿಯನ್ನು ಕಳುಹಿಸುತ್ತಿಲ್ಲ. 1992ರ ಪ್ರೇಮ ವಿವಾಹ’ ಎಂದು ಬರೆಯಲಾಗಿದೆ. ಈ ಪೋಸ್ಟರ್ ನೋಡಿ ಎಲ್ಲರೂ ಮೂಕವಿಸ್ಮಿತರಾಗಿದ್ದಾರೆ.

ಅಮಿತಾಭ್ ಬಚ್ಚನ್ ಏನು ಹೇಳಲು ಹೊರಟಿದ್ದಾರೆ ಎಂಬ ಕುತೂಹಲ ಇತ್ತು. ಅದಕ್ಕೂ ಉತ್ತರ ಸಿಕ್ಕಿದೆ. ಈ ಪೋಸ್ಟರ್‌ಗೂ ಅಮಿತಾಭ್ ಬಚ್ಚನ್‌ಗೂ ಯಾವುದೇ ಸಂಬಂಧವಿಲ್ಲ. ಇದು ಫೆಬ್ರವರಿ 13 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಮುಂಬರುವ ಚಿತ್ರದ ಪ್ರಚಾರದ ಪೋಸ್ಟರ್ ಆಗಿತ್ತು. ಬಿಗ್ ಬಿ ಈ ಪೋಸ್ಟರ್ ಅನ್ನು ಸ್ವಲ್ಪ ಸಮಯದವರೆಗೆ ಕೈಯಲ್ಲಿ ಹಿಡಿದು ನಂತರ ಅದನ್ನು ತಂಡಕ್ಕೆ ಹಿಂತಿರುಗಿಸಿದರು. ಸದ್ಯ ಆ ಸಿನಿಮಾ ಯಾವುದು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ: ‘ರಾಜ್​ಕುಮಾರ್ ಆಶೀರ್ವಾದ ನಾನೇ ಧನ್ಯ’; ಅಣ್ಣಾವ್ರ ಬಗ್ಗೆ ಅಮಿತಾಭ್ ಬಚ್ಚನ್ ಮೆಚ್ಚುಗೆಯ ಮಾತು

ಅಮಿತಾಭ್ ಬಚ್ಚನ್ ಅವರು ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್​​ನಲ್ಲಿ ನಟಿಸಬೇಕಿದೆ. ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈಗಾಗಲೇ ಸಿನಿಮಾದಿಂದ ದೀಪಿಕಾ ಪಡುಕೋಣೆ ಅವರು ಹೊರ ನಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:58 am, Tue, 10 February 26

Source link

ಹೊಸದಾಗಿ ಖರೀದಿಸಿದ ಹಿಟಾಚಿ ಕೆಟ್ಟುಹೋಯ್ತೆಂದು ಶೋರೂಮ್​ಗೇ ಬೀಗ ಹಾಕಿದ ಗ್ರಾಹಕ! – Kannada News | Customer Locks Tata Hitachi Showroom After New Excavator Breaks Down Within Months in Tumakuru

ಗುಬ್ಬಿ ಮೂಲದ ಗಿರೀಶ್ ಎಂಬವರು ಐದು ತಿಂಗಳ ಹಿಂದೆ ಸುಮಾರು 52 ಲಕ್ಷ ರೂಪಾಯಿ ನೀಡಿ ಹೊಸ ಹಿಟಾಚಿ ಖರೀದಿಸಿದ್ದರು. 7 ಲಕ್ಷ ರೂಪಾಯಿ ಡೌನ್ ಪೇಮೆಂಟ್ ನೀಡಿ, ಪ್ರತಿ ತಿಂಗಳು 1.15 ಲಕ್ಷ ರೂ. ಇಎಂಐ ಕಟ್ಟುತ್ತಿದ್ದರು. ಆದರೆ ಯಂತ್ರ ಖರೀದಿಸಿದ ಮೂರೇ ತಿಂಗಳಲ್ಲಿ ದೋಷ ಕಾಣಿಸಿಕೊಂಡು ಕೆಲಸ ಮಾಡದೇ ನಿಂತಿದೆ ಎಂದು ಅವರು ಆರೋಪಿಸಿದ್ದಾರೆ.

ಯಂತ್ರದಲ್ಲಿ ಸಮಸ್ಯೆ ಉಂಟಾದ ಬಳಿಕ ಹಲವು ಬಾರಿ ಶೋರೂಂ ಹಾಗೂ ಕಂಪನಿಯನ್ನು ಸಂಪರ್ಕಿಸಿದರೂ ಸಮರ್ಪಕ ಸ್ಪಂದನೆ ಸಿಗಲಿಲ್ಲ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಅಲೆದಾಡಿದರೂ ಹಿಟಾಚಿ ಸರಿಪಡಿಸಲಾಗಿಲ್ಲ ಎಂದು ಗಿರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಲು ಗಿರೀಶ್ ಬೆಳಿಗ್ಗೆ ಶೋರೂಂಗೆ ಭೇಟಿ ನೀಡಿದರು. ಆದರೆ ತಕ್ಷಣ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಅಲ್ಲದೆ, ಶೋರೂಂ ಬಾಗಿಲಿಗೆ ಹಿಟಾಚಿ ಯಂತ್ರವನ್ನು ಅಡ್ಡಲಾಗಿ ನಿಲ್ಲಿಸಿ ಗಮನ ಸೆಳೆದರು.

‘ಹಿಟಾಚಿ ಸರಿಪಡಿಸಿ ಕೊಡಬೇಕು, ಇಲ್ಲವಾದರೆ ನಾವು ಕಟ್ಟಿದ ಹಣವನ್ನು ವಾಪಸ್ ನೀಡಬೇಕು. ಯಂತ್ರ ಖರೀದಿ ಮಾಡಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದೇನೆ. ಕಂಪನಿ ಹೇಳುವುದೊಂದು, ಖರೀದಿಸಿದ ನಂತರ ಮಾಡುವುದೊಂದು’ ಎಂದು ಗಿರೀಶ್ ಆರೋಪಿಸಿದ್ದಾರೆ.

ಈ ಘಟನೆ ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಗ್ರಾಹಕ ಶೋರೂಂಗೆ ಬೀಗ ಹಾಕಿರುವುದನ್ನು ನೋಡಲು ಜನ ಆಗಮಿಸುತ್ತಿದ್ದಾರೆ. ಈ ಬಗ್ಗೆ ಶೋರೂಂ ಹಾಗೂ ಹಿಟಾಚಿ ಕಂಪನಿ ಇನ್ನಷ್ಟೇ ಅಧಿಕೃತ ಪ್ರತಿಕ್ರಿಯೆ ನೀಡಬೇಕಿದೆ.

Published On – 9:10 am, Tue, 10 February 26

Source link

ಕಟ್ ಆದ ಬಾಯ್ಕಾಟ್: ಭಾರತ vs ಪಾಕಿಸ್ತಾನ್ ಪಂದ್ಯ ಕನ್ಫರ್ಮ್​ – Kannada News | T20 World Cup 2026: Pakistan to play against India

ಫೆಬ್ರವರಿ 15 ಕ್ಕೆ ನಿಗದಿಯಾಗಿರುವ ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುಬುದು ಖಚಿತವಾಗಿದೆ. ಇದಕ್ಕೂ ಮುನ್ನ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೇಳಿಕೊಂಡಿತ್ತು. ಇದೀಗ ಪಿಸಿಬಿಯ ಮನವೊಲಿಸುವಲ್ಲಿ ಐಸಿಸಿ ಯಶಸ್ವಿಯಾಗಿದ್ದು, ಅದರಂತೆ ಫೆ.15 ರಂದು ಉಭಯ ತಂಡಗಳು ಕಣಕ್ಕಿಳಿಯಲಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ.

ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ತಿಳಿಸಿತ್ತು. ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಬಾಂಗ್ಲಾದೇಶ್ ತಂಡದ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರ ಮಾಡಬೇಕೆಂದು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಆಗ್ರಹಿಸಿತ್ತು.

ಆದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಈ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು. ಅಲ್ಲದೆ ಬಾಂಗ್ಲಾ ತಂಡವು ಭಾರತದಲ್ಲೇ ಆಡಬೇಕೆಂದು ಸೂಚಿಸಿದ್ದರು. ಐಸಿಸಿಯ ಈ ಸೂಚನೆಯನ್ನು ತಿರಸ್ಕರಿಸಿದ್ದರಿಂದ ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್​ನಿಂದ ಕೈ ಬಿಡಲಾಯಿತು.

ಇತ್ತ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವ ಐಸಿಸಿ ಹಾಗೂ ಬಿಸಿಸಿಐ ಕ್ರಮಕ್ಕೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಈ ನಡೆಯನ್ನು ಖಂಡಿಸುವ ಸಲುವಾಗಿ  ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಿಸಿಬಿ ತಿಳಿಸಿತ್ತು.

ಇತ್ತ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯದೇ ಇದ್ದರೆ ಐಸಿಸಿ ಆದಾಯಕ್ಕೆ ಆರ್ಥಿಕ ನಷ್ಟ ಉಂಟಾಗಲಿದೆ. ಹೀಗಾಗಿ ಇದೀಗ ಐಸಿಸಿ ಅಧಿಕಾರಿಗಳು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಮನವೊಲಿಸುವ ಕಾಯಕಕ್ಕೆ ಕೈ ಹಾಕಿದ್ದರು. ಅದರಂತೆ ಇದೀಗ ಕೆಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡುವ ಮೂಲಕ ಐಸಿಸಿ ಪಿಸಿಬಿಯ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದರೊಂದಿಗೆ ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ನಡೆಯುವುದು ಖಚಿತವಾಗಿದೆ. ಅದರಂತೆ ಮುಂದಿನ ಭಾನುವಾರ ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಇಂಡೊ-ಪಾಕ್ ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರುವುದು ಬಹುತೇಕ ಖಚಿತವಾಗಲಿದೆ.

ಇದನ್ನೂ ಓದಿ: ಮುಂದಿನ ವಿಶ್ವಕಪ್‌ನಲ್ಲಿ ವೈಭವ್ ಸೂರ್ಯವಂಶಿಗೆ ಇಲ್ಲ ಅವಕಾಶ..!

ಏಕೆಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದ ಬಳಿಕ ಟೀಮ್ ಇಂಡಿಯಾ ನೆದರ್​ಲೆಂಡ್ಸ್ ವಿರುದ್ಧ ಆಡಬೇಕಿದೆ. ಹೀಗಾಗಿ ಈ ಮ್ಯಾಚ್​ಗೂ ಮುನ್ನ ಭಾರತ ತಂಡವು ದ್ವಿತೀಯ ಸುತ್ತಿಗೆ ಪ್ರವೇಶಿಸುವುದು ಬಹುತೇಕ ಖಚಿತವಾಗಲಿದೆ.

Source link

‘ದೊಡ್ಮನೆ ಹಬ್ಬ’ದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು? – Kannada News | I never Met Ashwini Gowda After Bigg Boss Kannada Says Gilli Nata

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಹಾಗೂ ಗಿಲ್ಲಿ ನಟ ಸಾಕಷ್ಟು ಬಾರಿ ಕಿತ್ತಾಡಿಕೊಂಡಿದ್ದರು. ಆ ಬಳಿಕ ಗಿಲ್ಲಿ ನಟ ಅವರು ಕಪ್ ಗೆದ್ದ ಬಳಿಕ ಅಶ್ವಿನಿ ಗೌಡ ಅಸಮಾಧಾನ ಹೊರಹಾಕಿದರು. ಈಗ ಅಶ್ವಿನಿ ಗೌಡ ಹಾಗೂ ಗಿಲ್ಲಿ ಕಲರ್ಸ್​​ನ ‘ದೊಡ್ಮನೆ ಹಬ್ಬ’ದಲ್ಲಿ ಒಟ್ಟಿಗೆ ಭಾಗಿ ಆಗಿದ್ದರು. ಆದರೆ, ಪರಸ್ಪರ ಭೇಟಿ ಆಗಿಲ್ಲ ಎಂದು ಗಿಲ್ಲಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

Source link

ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ಹಂಚಿಕೊಂಡ ದಂಪತಿ – Kannada News | Rishab Shetty And Pragathi Shetty Celebrate 9th Wedding Anniversary cute video is here

ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಾಂಪತ್ಯಕ್ಕೆ ಈಗ 9 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಮುದ್ದಾದ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ವಿವಾಹ ಆದ ಸಂದರ್ಭದಲ್ಲಿನ ಪ್ರಯಾಣದಿಂದ ಈವರೆಗಿನ ಪ್ರಯಾಣದವರೆಗಿನ ವಿಡಿಯೋ ಇದೆ. ಈ ವಿಡಿಯೋ ಗಮನ ಸೆಳೆದಿದೆ. ದಂಪತಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ನೂರು ವರ್ಷ ಈ ಜೋಡಿ ಹೀಗೆಯೇ ಬಾಳಲಿ ಎಂದು ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ! – Kannada News | Video Recording of Women During Village Fair to Attract Rs 30000 Fine: Strict Warning in Nanjangud Goluru Festival

ಮೈಸೂರು, ಫೆಬ್ರವರಿ 10: ನಂಜನಗೂಡು ತಾಲೂಕು ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್ರಾಮ ದೇವತೆ ಜಾತ್ರೆ ಹಿನ್ನೆಲೆ ಗ್ರಾಮಸ್ಥರು ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಜಾತ್ರೆಯ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ವಿಡಿಯೋ ಚಿತ್ರೀಕರಣ ಹಾಗೂ ಕುಡಿದು ಗಲಾಟೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಲಾಗಿದೆ. ವಿಶೇಷವೆಂದರೆ, ಮಹಿಳೆಯರು ಹಾಗೂ ಯುವತಿಯರ ವಿಡಿಯೋ ತೆಗೆದರೆ ಅಥವಾ ಕುಡಿದು ಗಲಾಟೆ ಮಾಡಿದರೆ 30 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಡಂಗುರ ಸಾರಿಸಿದ್ದಾರೆ.

ಇಂದಿನಿಂದ (ಫೆಬ್ರವರಿ 10) ಮೂರು ದಿನಗಳ ಕಾಲ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿ ಗ್ರಾಮದಲ್ಲಿ ಡಂಗುರ ಬಾರಿಸಿ ಜಾಗೃತಿ ಮೂಡಿಸಲಾಗಿದೆ. ಗ್ರಾಮದ ನಿವಾಸಿ ಜವರ ಎಂಬುವರ ಮೂಲಕ ತಮಟೆ ಬಾರಿಸಿ ಗ್ರಾಮಾದ್ಯಂತ ಈ ನಿಯಮಗಳನ್ನು ಪ್ರಕಟಿಸಲಾಗಿದ್ದು, ಜಾತ್ರೆ ಶಾಂತಿಯುತವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Air Quality: ಇಂದೂ ರಾಜ್ಯದಲ್ಲಿ ಕಳಪೆ ಏರ್ ಕ್ವಾಲಿಟಿ; ಶಿವಮೊಗ್ಗ, ಬಳ್ಳಾರಿಯ ವಾಯು ಗುಣಮಟ್ಟ ಇನ್ನಷ್ಟು ಕುಸಿತ – Kannada News | Bangalore Air Pollution Crisis: Bengaluru, Manglore, Ballari and Shivamogga Air quality has gotten worse

ಇಂದೂ ರಾಜ್ಯದಲ್ಲಿ ಕಳಪೆ ಏರ್ ಕ್ವಾಲಿಟಿ; ಶಿವಮೊಗ್ಗ, ಬಳ್ಳಾರಿಯ ವಾಯು ಗುಣಮಟ್ಟ ಇನ್ನಷ್ಟು ಕುಸಿತ

ಬೆಂಗಳೂರು, ಫೆಬ್ರವರಿ 10: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಶಿವಮೊಗ್ಗದ AQI (Bengaluru Air Quality) ಇಂದು ಹಠಾತ್ತನೆ ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 169ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಶಿವಮೊಗ್ಗದ ಏರ್ ಕ್ವಾಲಿಟಿ 183 ಆಗಿದೆ. ಜೊತೆಗೆ ಬಳ್ಳಾರಿಯ ವಾಯು ಗುಣಮಟ್ಟವೂ ಸಹ 173 ಆಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –169
  • ಮಂಗಳೂರು-174
  • ಮೈಸೂರು –164
  • ಬೆಳಗಾವಿ – 168
  • ಕಲಬುರ್ಗಿ-150
  • ಶಿವಮೊಗ್ಗ – 183
  • ಬಳ್ಳಾರಿ – 173
  • ಹುಬ್ಬಳ್ಳಿ- 148
  • ಉಡುಪಿ –164
  • ವಿಜಯಪುರ –151

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version