Headlines

‘ಸರ್ಸೆ ಸೆರಗು’ ಹಾಡು ವಿವಾದ: ಪ್ರೇಮ್ ಪರ ಕಿಚ್ಚ ಸುದೀಪ್ ಬ್ಯಾಟಿಂಗ್ – Kannada News | KD Song controversy Sudeep supports Director Prem

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೆ ಸಿನಿಮಾದ ಟ್ರೈಲರ್ ಸಹ ಬಿಡುಗಡೆ ಆಗಿದೆ. ಚಿತ್ರತಂಡ ಇತ್ತೀಚೆಗಷ್ಟೆ ಸುದ್ದಿಗೋಷ್ಠಿ ಹಮ್ಮಿಕೊಂಡಿತ್ತು, ಸುದ್ದಿಗೋಷ್ಠಿಯಲ್ಲಿ ನಟ ಸುದೀಪ್ ಸಹ ಭಾಗಿ ಆಗಿದ್ದರು. ‘ಕೆಡಿ’ ಸಿನಿಮಾನಲ್ಲಿ ಸುದೀಪ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರು ಸಿನಿಮಾದ ಬಗ್ಗೆ, ತಮ್ಮ ಹಾಗೂ ಪ್ರೇಮ್ ಅವರ ಗೆಳೆತನದ ಬಗ್ಗೆ, ಧ್ರುವ ಸರ್ಜಾ ಬಗ್ಗೆ ಇನ್ನೂ ಸಾಕಷ್ಟು ವಿಷಯಗಳ ಬಗ್ಗೆ ಮಾತನಾಡಿದರು. ಅದೇ…

Read More

ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು – Kannada News | Producer K Manju demands government to rise subsidy for movies

ಸಿನಿಮಾ (Cinema) ಸಬ್ಸಿಡಿ ವಿಚಾರವಾಗಿ ಇತ್ತೀಚೆಗೆ ಮತ್ತೆ ಚರ್ಚೆ ಶುರುವಾಗಿದ್ದು, ಇದೀಗ ನಿರ್ಮಾಪಕರ ಸಂಘ ಕೆ ಮಂಜು ಅವರು ಈ ಬಗ್ಗೆ ಮಾತನಾಡಿದ್ದಾರೆ. ಸಿನಿಮಾ ಸಬ್ಸಿಡಿಯನ್ನು ಕಡಿಮೆ ಮಾಡಿ ಎಂದು ಕೆಲವರು ಹೇಳಿದ್ದಾರೆ, ಆದರೆ ನಿರ್ಮಾಪಕರಾಗಿ ನಾವು ಕೇಳುತ್ತಿರುವುದು ಸಬ್ಸಿಡಿ ಕಡಿಮೆ ಮಾಡುವುದು ಬೇಡ, ಈಗ 150 ಸಿನಿಮಾಗಳಿಗೆ ಕೊಡುತ್ತಿದ್ದಾರೆ ಅದನ್ನು 200 ಸಿನಿಮಾಗಳಿಗೆ ವಿಸ್ತರಿಸಿ, ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆ ಇದೆ, ಅದರಲ್ಲೂ ನಿರ್ಮಾಪಕರಿಗೆ ಇನ್ನೂ ಹೆಚ್ಚಿನ ಸಮಸ್ಯೆ ಇದೆ, ಸಬ್ಸಿಡಿಯನ್ನು ಕಡಿಮೆ ಮಾಡುವ ಬಗ್ಗೆ…

Read More

ಟ್ರಂಪ್ ಕದನ ವಿರಾಮ ಬಯಸುತ್ತಿದ್ದಾರೆ, ಇರಾನ್ ಅಮೆರಿಕದ ಷರತ್ತಿಗೆ ಒಪ್ಪುವುದು ಅನುಮಾನ; ಇಸ್ರೇಲ್ ಅಭಿಮತ

ಜೆರುಸಲೇಂ, ಮಾರ್ಚ್ 24: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)  ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ನಿಲ್ಲಿಸಲು ಇರಾನ್ ಜೊತೆ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದ್ದಾರೆ. ಅಮೆರಿಕ ಏಪ್ರಿಲ್ 9ರೊಳಗೆ ಯುದ್ಧವನ್ನು ಕೊನೆಗೊಳಿಸಲು ಬಯಸಿದೆ. ಆದರೆ, ಹೊಸ ಮಾತುಕತೆಗಳಲ್ಲಿ ಹಾಕಲಾದ ಷರತ್ತುಗಳನ್ನು ಒಪ್ಪಲು ಇರಾನ್ ಒಪ್ಪುವುದು ಅನುಮಾನ ಎಂದು ಇಸ್ರೇಲ್ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ರಾಯಿಟರ್ಸ್ ವರದಿ ಮಾಡಿದೆ. ಫೆಬ್ರವರಿ 28ರಂದು ಇರಾನ್ ವಿರುದ್ಧ ಯುಎಸ್- ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ಆರಂಭವಾಗಿತ್ತು. ಇದು ಇತ್ತೀಚಿನ ವರ್ಷಗಳಲ್ಲಿ ಮಧ್ಯಪ್ರಾಚ್ಯದಲ್ಲಿ ನಡೆದ…

Read More

Karnataka Air Quality: ಬೆಂಗಳೂರು, ಉಡುಪಿ, ಕಲಬುರಗಿಯಲ್ಲಿ ವಾಯು ಗುಣಮಟ್ಟ ಅಪಾಯಕಾರಿ

ಬೆಂಗಳೂರು, ಮಾ.11: ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟದ ಮಟ್ಟದಲ್ಲಿ ವ್ಯತ್ಯಯ ಕಂಡುಬರುತ್ತಿದೆ. ಇಂದು ಮಾರ್ಚ್ 11ರ ವರದಿಯ ಪ್ರಕಾರ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗಾಳಿಯ ಗುಣಮಟ್ಟವು ‘ತೃಪ್ತಿದಾಯಕ’ ಮತ್ತು ‘ಮಧ್ಯಮ’ (Moderate) ಮಟ್ಟದಲ್ಲಿದೆ. ಧೂಳು ಮತ್ತು ಹೊಗೆಯಿಂದಾಗಿ ಉಸಿರಾಟದ ತೊಂದರೆ ಎದುರಾಗುವ ಸಾಧ್ಯತೆ ಎಂದು ತಜ್ಞರು ಹೇಳಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿದ್ದಂತೆ ವಾಯು ಮಾಲಿನ್ಯದ ಮಟ್ಟವೂ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಇಂದು ಮಾರ್ಚ್ 11ರ ವರದಿಯ…

Read More

ಟಿವಿಯಲ್ಲೂ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’; ಜೀ ಕನ್ನಡದಲ್ಲಿ ಪ್ರಸಾರ – Kannada News | Kantara Chapter 1 movie gets record breaking TVR on Zee Kannada Television premiere

‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯು ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿತು. ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ಈ ಸಿನಿಮಾ ಹಲವು ದಾಖಲೆಗಳನ್ನು ಬರೆಯಿತು. ಅಲ್ಲದೇ, ಕಿರುತೆರೆಯಲ್ಲಿ ಪ್ರಸಾರ ಆದಾಗಲೂ ಬ್ಲಾಕ್‌ ಬಸ್ಟರ್ ಸಿನಿಮಾ ಎನಿಸಿಕೊಂಡಿದೆ. ಈ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ‘ಜೀ ಕನ್ನಡ’ (Zee Kannada) ವಾಹಿನಿಯಲ್ಲಿ ಆಯಿತು. ಅದರಲ್ಲಿ ಅತ್ಯುತ್ತಮ ಟಿಆರ್‌ಪಿ ಗಳಿಸಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2026ರ ಜನವರಿ 24ರಂದು ಸಂಜೆ 7 ಗಂಟೆಗೆ…

Read More

Devotion and Destiny: ಪೂಜೆ ಪುನಸ್ಕಾರ ಮಾಡುವುದರಿಂದ ನಿಜವಾಗಿಯೂ ಕಷ್ಟಗಳಿಂದ ಮುಕ್ತಿ ಸಿಗುತ್ತಾ?

ಪೂಜೆ ಪುನಸ್ಕಾರಗಳಿಂದ ಕಷ್ಟಗಳು ನಿವಾರಣೆಯಾಗುತ್ತವೆಯೇ ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರ ನೀಡಿದ್ದಾರೆ. ಮಾನವರಾಗಿ ಹುಟ್ಟಿದ ಮೇಲೆ ಕಷ್ಟ-ಸುಖಗಳು ಜೀವನದ ಸಹಜ ಭಾಗ. ಅವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಪೂರ್ವಜನ್ಮದ ಕರ್ಮಫಲ ಅಥವಾ ಹಣೆಬರಹವನ್ನು ಹರಿಹರರೂ ಸಹ ಬದಲಾಯಿಸಲು ಸಾಧ್ಯವಿಲ್ಲ ಎಂಬ ನಂಬಿಕೆಯಿದೆ. ಆದರೂ, ಈ ಪೂಜೆ, ಪುನಸ್ಕಾರ, ಹವನ, ಹೋಮ, ಯಜ್ಞ, ಯಾಗಾದಿ, ಜಪಗಳನ್ನು ಆಚರಿಸುವುದರಿಂದ ಆ ಸಮಸ್ಯೆಗಳನ್ನು, ಕಷ್ಟಗಳನ್ನು ಸಹಿಸಿಕೊಳ್ಳುವ,…

Read More

ಲೋಕಸಭೆಯಲ್ಲಿ ‘G Ram G’ ಮಸೂದೆ ಅಂಗೀಕಾರ, ಮಸೂದೆ ಪ್ರತಿಯನ್ನು ಹರಿದು ಸ್ಪೀಕರ್ ಕಡೆ ಎಸೆದ ವಿಪಕ್ಷ ನಾಯಕರು – Kannada News | Parliament Session: Lok Sabha Clears G RAM G Bill as Opposition Disrupts Proceedings

ನವದೆಹಲಿ, ಡಿಸೆಂಬರ್ 18: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇಂದು ಲೋಕಸಭೆ(Lok Sabha)ಯಲ್ಲಿ ವಿಬಿ ಜಿ ರಾಮ್ ಜಿ( VB G Ram G Bill)  ಮಸೂದೆಯನ್ನು ಅಂಗೀಕರಿಸಲಾಯಿತು.ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದ ಬಡವರ ಜೀವನಾಡಿಯಾಗಿದ್ದ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (MGNREGA) ಬದಲಾಗಿದೆ. ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಅಂದರೆ VB-G RAM G ಮಸೂದೆ-2025ಯನ್ನು ಅಂಗೀಕರಿಸಲಾಗಿದೆ. ವಿರೋಧ…

Read More

ಸಲ್ಮಾನ್ ಖಾನ್ ತಂದೆ ಸಲೀಂ ಆರೋಗ್ಯ ಹೇಗಿದೆ? ವೈದ್ಯರಿಂದ ಗುಡ್​ನ್ಯೂಸ್ – Kannada News | Salim Khan Hospitalized on Ventilator: Doctors Confirm Stable Condition, Fans Relieved

ನಟ ಸಲ್ಮಾನ್ ಖಾನ್ ಅವರ ತಂದೆ ಮತ್ತು ಬಾಲಿವುಡ್‌ನ ಹಿರಿಯ ಬರಹಗಾರ ಸಲೀಂ ಖಾನ್ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿದೆ. ಸಲೀಂ ಖಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರಬಹುದು ಎಂಬುದು ಅನೇಕರ ಊಹೆ. ಆದರೆ, ಈ ಬಗ್ಗೆ ವೈದ್ಯರು ಸ್ಪಷ್ಟನೆ ನೀಡಿದ್ದಾರೆ, ‘ಸಲೀಂ ಖಾನ್ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ಅರ್ಥವಲ್ಲ. ಅವರ ಸ್ಥಿತಿ ಸ್ಥಿರವಾಗಿದೆ ಮತ್ತು…

Read More

ಜೂ ಎನ್​​ಟಿಆರ್​ ಹಳೆ ಸಿನಿಮಾ ಸೀಕ್ವೆಲ್​​ಗೆ ಕತೆ ರೆಡಿ, ಆದರೆ ನಟಿಸುತ್ತಾರಾ ನಟ? – Kannada News | Adhurs 2 first half story is ready will Jr NTR accepted the movie

ಜೂ ಎನ್​​ಟಿಆರ್ (Jr NTR) ಈಗ ಪ್ಯಾನ್ ಇಂಡಿಯಾ ನಟ. ಮೊದಲಿನಿಂದಲೂ ಅವರಿಗೆ ಮಾಸ್ ಇಮೇಜಿದೆ. ಈಗಲೂ ಸಹ ಅವರು ಮಾಸ್, ಕಮರ್ಶಿಯನ್ ಸಿನಿಮಾಗಳಲ್ಲಿಯೇ ನಟಿಸುತ್ತಾರೆ, ಯಾವುದೇ ಹೆಚ್ಚಿನ ಪ್ರಯೋಗಕ್ಕೆ ಒಡ್ಡಿಕೊಳ್ಳುವುದಿಲ್ಲ. ಅವರು 2010ರಲ್ಲಿ ನಟಿಸಿದ್ದ ಹಿಟ್ ಸಿನಿಮಾ ‘ಅಧುರ್ಸ್’ ತುಸು ಭಿನ್ನವಾದ ಸಿನಿಮಾ ಆಗಿತ್ತು. ಸಿನಿಮಾನಲ್ಲಿ ಅಪ್ಪಟ ಹಾಸ್ಯ ಪಾತ್ರವೊಂದರಲ್ಲಿ ಜೂ ಎನ್​​ಟಿಆರ್ ನಟಿಸಿದ್ದರು. ಈಗ ಅದೇ ಸಿನಿಮಾದ ಸೀಕ್ವೆಲ್​​ನ ಕತೆಯನ್ನು ಕತೆಗಾರ ಕೋನ ವೆಂಕಟ್ ರೆಡಿ ಮಾಡಿದ್ದಾರೆ. ಆದರೆ ಜೂ ಎನ್​​ಟಿಆರ್ ನಟಿಸುತ್ತಾರಾ ಎಂಬುದೇ…

Read More

ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ – Kannada News | Hormuz Flashpoint: Iran Fires on Ships as Talks Stall

ಟೆಹ್ರಾನ್, ಏಪ್ರಿಲ್ 23: ಹಾರ್ಮುಜ್ ಜಲಸಂಧಿ(Hormuz Strait) ಮತ್ತೊಮ್ಮೆ ಜಾಗತಿಕ ಸಂಘರ್ಷದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ನಡುವೆ, ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮೂರು ಹಡಗುಗಳ ಮೇಲೆ ನಡೆದ ದಾಳಿ ಇಡೀ ಜಗತ್ತನ್ನು ಆತಂಕಕ್ಕೆ ತಳ್ಳಿದೆ. ಪಶ್ಚಿಮ ಏಷ್ಯಾದ ಅತ್ಯಂತ ನಿರ್ಣಾಯಕ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಾರ್ಮೋಡಗಳು ಮತ್ತಷ್ಟು ದಟ್ಟವಾಗಿವೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗನ್‌ಬೋಟ್‌ಗಳು ಮೂರು ಪ್ರತ್ಯೇಕ ವ್ಯಾಪಾರಿ ಹಡಗುಗಳ ಮೇಲೆ ಗುಂಡಿನ…

Read More