‘ಕೆಡಿ’ ವಿಳಂಬ ಆಗಿದ್ದೇಕೆ? ಪ್ರೇಮ್ ಪರವಾಗಿ ನಿಂತ ಸುದೀಪ್ – Kannada News | Kichcha Sudeep Supports Prem Over KD Movie Delay

ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿತ್ತು. ಇಷ್ಟು ವಿಳಂಬ ಏಕೆ ಎಂಬ ಪ್ರಶ್ನೆಗೆ ಸುದೀಪ್ ಉತ್ತರ ನೀಡಿದ್ದಾರೆ. ಸೆಟ್ ನಿರ್ಮಾಣ, ಧ್ರುವ ಸರ್ಜಾ ‘ಮಾರ್ಟಿನ್’ ಸಿನಿಮಾ ಕೆಲಸ ಹೀಗೆ ವಿವಿಧ ಕಾರಣಕ್ಕೆ ‘ಕೆಡಿ’ ಸಿನಿಮಾ ವಿಳಂಬ ಆಗಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೇಸಿಗೆ ಬೇಗೆ ಬೆನ್ನಲ್ಲೇ ಎಳನೀರಿಗೆ ಭಾರಿ ಬೇಡಿಕೆ, ದರವೂ ಏರಿಕೆ: ಪೂರೈಕೆಯಾಗದೆ ವ್ಯಾಪಾರಿಗಳು ಕಂಗಾಲು – Kannada News | Mandya Tender Coconut Crisis: Maddur Market Hits Record High Prices Amid Supply Shortage and Summer Heat

ಮಂಡ್ಯ, ಏಪ್ರಿಲ್ 28: ಸುಡು ಬೇಸಿಗೆಯಲ್ಲಿ ತಂಪಾದ ಪಾನೀಯಗಳಿಗೆ ಡಿಮ್ಯಾಂಡ್ ಹೆಚ್ಚಾಗಿದ್ದು, ಎಳನೀರಿಗೆ ಬಾರಿ ಬೇಡಿಕೆ ಸೃಷ್ಟಿಯಾಗಿದೆ. ಏಷ್ಯಾ ಖಂಡದಲ್ಲೇ ಅತಿ ದೊಡ್ಡ ಎಳನೀರು ಮಾರುಕಟ್ಟೆ ಎಂದು ಹೆಸರಾದ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿಯೂ ಎಳನೀರಿನ ಕೊರತೆ ಎದುರಾಗಿದೆ. ಹೆಚ್ಚುತ್ತಿರುವ ತಾಪಮಾನದಿಂದಾಗಿ ಎಳನೀರು ಸಿಗದೆ ವ್ಯಾಪಾರಸ್ಥರು ಪರದಾಡುತ್ತಿದ್ದಾರೆ. ಸಾಮಾನ್ಯವಾಗಿ ದಿನಕ್ಕೆ ಐದರಿಂದ ಆರು ಲಕ್ಷ ಎಳನೀರು ಬರುತ್ತಿದ್ದ ಮಾರುಕಟ್ಟೆಗೆ ಈಗ ಒಂದೂವರೆಯಿಂದ ಎರಡು ಲಕ್ಷ ಎಳನೀರು ಸಹ ಬರುತ್ತಿಲ್ಲ.

ನುಸಿ ರೋಗ ಹಾಗೂ ಬೇಸಿಗೆಯ ತೀವ್ರತೆಗೆ ಮರಗಳಿಂದ ಎಳನೀರು ಅಕಾಲಿಕವಾಗಿ ಉದುರುತ್ತಿರುವುದು ಪೂರೈಕೆ ಕುಸಿಯಲು ಪ್ರಮುಖ ಕಾರಣವಾಗಿದೆ. ಪರಿಣಾಮವಾಗಿ, ಎಳನೀರಿನ ಬೆಲೆ ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿಯೇ ಗುಣಮಟ್ಟಕ್ಕೆ ಅನುಗುಣವಾಗಿ ಒಂದು ಎಳನೀರಿಗೆ 50 ರಿಂದ 53 ರೂಪಾಯಿ ತಲುಪಿದೆ. ಇದನ್ನು ಖರೀದಿಸಿ ನಗರಗಳಿಗೆ ಸಾಗಿಸುವ ವ್ಯಾಪಾರಸ್ಥರಿಗೆ ಸಾರಿಗೆ ಮತ್ತು ಇತರ ವೆಚ್ಚಗಳಿಂದಾಗಿ ಬೆಲೆ ಮತ್ತಷ್ಟು ಹೆಚ್ಚಾಗುತ್ತಿದೆ. ಬೇಡಿಕೆಗೆ ತಕ್ಕಂತೆ ಪೂರೈಕೆ ಇಲ್ಲದೆ ಗ್ರಾಹಕರು ಮತ್ತು ವ್ಯಾಪಾರಿಗಳು ಸಂಕಷ್ಟ ಎದುರಿಸುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಾವಣಗೆರೆ ಆಯ್ತು ಈಗ ಬಾಗಲಕೋಟೆಯಲ್ಲೂ ‘ಕೈ’ ಕೊಟ್ಟ ನಾಯಕರಿಗೆ ಅಮಾನತು ಶಿಕ್ಷೆ! – Kannada News | After Davanagere, Congress Suspends 3 Leaders in Bagalkote Byelection for Anti Party Activities

ಬಾಗಲಕೋಟೆ, ಏಪ್ರಿಲ್ 28: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿನ ಪಕ್ಷವಿರೋಧಿ ಚಟುವಟಿಕೆಗಾಗಿ ನಸೀರ್ ಅಹ್ಮದ್ ಮತ್ತು ಅಬ್ದುಲ್ ಜಬ್ಬಾರ್ ಅವರ ಅಮಾನತು (Suspend) ಮಾಡಿದ್ದ ಕಾಂಗ್ರೆಸ್‌ ಹೈಕಮಾಂಡ್, ಈಗ ಬಾಗಲಕೋಟೆಯಲ್ಲೂ ಅಂತಹದ್ದೇ ಕಠಿಣ ಕ್ರಮದ ಮೂಲಕ ಶಿಸ್ತಿನ ಬಿಸಿ ಮುಟ್ಟಿಸಿದೆ. ಬಾಗಲಕೋಟೆ ಉಪಚುನಾವಣೆಯಲ್ಲೂ ಪಕ್ಷವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮೂವರು ಪ್ರಭಾವಿ ಕಾಂಗ್ರೆಸ್ ಮುಖಂಡರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಕೈ ಮುಖಂಡರಿಂದ ದೋಖಾ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಮತಗಿ ಪಟ್ಟಣದ ಮುಖಂಡರು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಕೆಲಸ ಮಾಡುವ ಬದಲು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಬೆಂಬಲ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಮುರುಗೇಶ್ ಕಡ್ಲಿಮಟ್ಟಿ ಹಾಗೂ ಕಮತಗಿ ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ್ ಜಮಖಂಡಿ ಮತ್ತು ಗುರುಲಿಂಗ ‌ಪಾಟೀಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ನೋಟಿಸ್‌ಗೆ ಬೆಲೆ ಕೊಡದ ನಾಯಕರು

ಸ್ಥಳೀಯ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಸ್.ಎನ್. ರಾಂಪುರ ಅವರು ಈ ಮುಖಂಡರ ವಿರುದ್ಧ ದೂರು ನೀಡಿ, ಉಚ್ಚಾಟನೆಗೆ ಪತ್ರ ಬರೆದಿದ್ದರು. ಈ ದೂರಿನ ಆಧಾರದ ಮೇಲೆ ಜಿಲ್ಲಾಧ್ಯಕ್ಷರು ಕಾರಣ ಕೇಳಿ ನೋಟಿಸ್ ನೀಡಿದ್ದರೂ, ಮುಖಂಡರಿಂದ ಯಾವುದೇ ಸಮರ್ಪಕ ಉತ್ತರ ಬಾರದ ಕಾರಣ ಅಂತಿಮವಾಗಿ ಅಮಾನತು ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ ಸಿದ್ದರಾಮಯ್ಯ ಬಣಕ್ಕೆ ಮತ್ತೊಂದು ಪೆಟ್ಟು ನೀಡಿದ ಡಿಕೆ ಶಿವಕುಮಾರ್: ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಜಬ್ಬಾರ್ ಅಮಾನತು

ಬಾಗಲಕೋಟೆ ಚುನಾವಣೆಯಲ್ಲಿ ಕಮತಗಿ ಅತ್ಯಂತ ಪ್ರಮುಖ ಪಟ್ಟಣವಾಗಿದ್ದು, ಇಲ್ಲಿನ ಮತಗಳು ಅಭ್ಯರ್ಥಿಗಳ ಜಯಾಪಜಯ ನಿರ್ಧರಿಸುತ್ತವೆ. ಇಂತಹ ನಿರ್ಣಾಯಕ ಸಂದರ್ಭದಲ್ಲೇ ಪ್ರಭಾವಿ ನಾಯಕರು ಪಕ್ಷಕ್ಕೆ ದೋಖಾ ಮಾಡಿರುವುದು ಕಾಂಗ್ರೆಸ್ ಪಾಳಯದಲ್ಲಿ ಆತಂಕ ಮೂಡಿಸಿದೆ. ಒಟ್ಟಾರೆ, ದಾವಣಗೆರೆಯಿಂದ ಬಾಗಲಕೋಟೆಯವರೆಗೆ ‘ಒಳಪೆಟ್ಟು’ ನೀಡುವ ನಾಯಕರಿಗೆ ಹೈಕಮಾಂಡ್ ಸರಣಿ ತಲೆದಂಡದ ರುಚಿ ತೋರಿಸುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾಟಮಂತ್ರದ ಶಂಕೆ ಒಡಹುಟ್ಟಿದವನನ್ನು ಕೊಂದು, ಇಬ್ಬರು ಮಕ್ಕಳ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ – Kannada News | Gujarat: Man Kills Brother Over Witchcraft Suspicion, Attacks Nieces, Repeat Offender

ನರ್ಮದಾ,ಏಪ್ರಿಲ್ 28: ವ್ಯಕ್ತಿಯೊಬ್ಬ ಮಾಟಮಂತ್ರದ ಶಂಕೆಯಿಂದ ಸಹೋದರನನ್ನು ಕೊಲೆ(Murder) ಮಾಡಿ ಅವರ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಕೇವಲ ಮಾಟಮಂತ್ರದ ಅನುಮಾನದಿಂದ ಅಣ್ಣನೊಬ್ಬ ತನ್ನ ತಮ್ಮನ ಕುತ್ತಿಗೆ ಸೀಳಿ ಕೊಲೆ ಮಾಡಿದ್ದು, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.

ಆರೋಪಿ ರಮೇಶ್ ವಾಸವ ಮತ್ತು ಆತನ ಕಿರಿಯ ಸಹೋದರ ಗುರ್ಜಿ ವಾಸವ ನಡುವೆ ದೀರ್ಘಕಾಲದಿಂದ ಮನಸ್ತಾಪವಿತ್ತು. ಗುರ್ಜಿ ತನ್ನ ಮೇಲೆ ಮಾಟಮಂತ್ರ ಮಾಡುತ್ತಿದ್ದಾನೆ ಎಂದು ರಮೇಶ್ ಬಲವಾಗಿ ನಂಬಿದ್ದ. ಸೋಮವಾರ ಈ ವಿಚಾರವಾಗಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆಯಿತು. ಈ ವೇಳೆ ಕೋಪೋದ್ರಿಕ್ತನಾದ ರಮೇಶ್, ಗುರ್ಜಿ ಅಂಗಡಿಯಿಂದ ಹಿಂತಿರುಗುತ್ತಿದ್ದಾಗ ಹರಿತವಾದ ಆಯುಧದಿಂದ ಹೊಂಚು ಹಾಕಿ ದಾಳಿ ನಡೆಸಿದ್ದಾನೆ. ಅತಿ ಕ್ರೂರವಾಗಿ ಗುರ್ಜಿಯ ಗಂಟಲು ಸೀಳಿ ಕೊಲೆ ಮಾಡಿದ್ದಾನೆ.

ಗುರ್ಜಿ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಕಂಡು ಅವರ ಪುತ್ರಿಯರಾದ ಸಾವಿತ್ರಿ ಮತ್ತು ಶಿಲ್ಪಾ ತಂದೆಯನ್ನು ರಕ್ಷಿಸಲು ಓಡಿಬಂದರು. ಆದರೆ ಪೈಶಾಚಿಕ ಪ್ರವೃತ್ತಿಯ ರಮೇಶ್ ತನ್ನ ಸೊಸೆಯಂದಿರನ್ನು ಬಿಡಲಿಲ್ಲ. ಸಾವಿತ್ರಿಯ ತಲೆಗೆ ಮತ್ತು ಶಿಲ್ಪಾ ಅವರ ಕೈಗಳಿಗೆ ಗಂಭೀರ ಗಾಯಗಳನ್ನು ಉಂಟುಮಾಡಿದ್ದಾನೆ. ಸದ್ಯ ಇಬ್ಬರು ಯುವತಿಯರು ರಾಜ್‌ಪಿಪ್ಲಾ ಸಿವಿಲ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಮತ್ತಷ್ಟು ಓದಿ: ಸಿನಿಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಖಾಕಿ: ಆಸ್ತಿ ವಿವಾದಕ್ಕೆ ನಡೆದಿದ್ದು ಡೆಡ್ಲಿ ಮರ್ಡರ್​!

ಪೊಲೀಸ್ ತನಿಖೆಯ ವೇಳೆ ಬಯಲಾದ ಮಾಹಿತಿ ಅಧಿಕಾರಿಗಳನ್ನೇ ದಂಗಾಗಿಸಿದೆ. ರಮೇಶ್ ಮೊದಲ ಬಾರಿಗೆ ಈ ಕೃತ್ಯ ಎಸಗಿರಲಿಲ್ಲ. ಸರಿಯಾಗಿ ಎರಡು ದಶಕಗಳ ಹಿಂದೆ, ಅಂದರೆ 2005ರಲ್ಲಿ ಇದೇ ರಮೇಶ್ ಕುಡಿದ ಮತ್ತಿನಲ್ಲಿ ತನ್ನ ಮತ್ತೊಬ್ಬ ಸಹೋದರ ವಿಠ್ಠಲ್ ವಾಸವನನ್ನು ಕೊಂದಿದ್ದ, ಅಂದು ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದ ಈತ, ಈಗ ಮತ್ತೊಬ್ಬ ಸಹೋದರನನ್ನು ಬಲಿಪಡೆದಿದ್ದಾನೆ.

ಘಟನೆ ನಡೆದ ತಕ್ಷಣ ಸೊಸೆ ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ರಮೇಶ್ ವಾಸವನನ್ನು ಬಂಧಿಸಿದ್ದಾರೆ. ಆರೋಪಿಯು ಮೊದಲಿನಿಂದಲೂ ಹಿಂಸಾತ್ಮಕ ಪ್ರವೃತ್ತಿ ಹೊಂದಿದ್ದಾನೆ. ಕುಟುಂಬದ ಆಂತರಿಕ ಕಲಹ ಮತ್ತು ಮಾಟಮಂತ್ರದ ಸಂಶಯವೇ ಈ ಭೀಕರ ಹತ್ಯೆಗೆ ಮೂಲ ಕಾರಣ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:54 am, Tue, 28 April 26

Source link

ಮದುವೆ ಬಳಿಕ ವಿಶೇಷ ದ್ವೀಪಕ್ಕೆ ಪ್ರವಾಸಕ್ಕೆ ತೆರಳಿದ ಸಂಜನಾ ಬುರ್ಲಿ

Source link

Vastu Tips: ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಬಾರದು ಏಕೆ? ವಾಸ್ತು ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ – Kannada News | The Significance of Sleeping Direction: Vastu and Scientific Insights on Avoiding North

ಪ್ರತಿಯೊಂದು ಮನೆಗೂ ನಾಲ್ಕು ಪ್ರಮುಖ ದಿಕ್ಕುಗಳಾದ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಮತ್ತು ನಾಲ್ಕು ಉಪದಿಕ್ಕುಗಳಾದ ಈಶಾನ್ಯ, ವಾಯುವ್ಯ, ನೈರುತ್ಯ, ಆಗ್ನೇಯ ಇರುತ್ತವೆ. ಈ ದಿಕ್ಕುಗಳಲ್ಲಿ ನಾವು ಹೇಗೆ ಮಲಗುತ್ತೇವೆ ಎಂಬುದು ನಮ್ಮ ಆರೋಗ್ಯ ಮತ್ತು ಮನಸ್ಥಿತಿಯ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ವಾಸ್ತುಶಾಸ್ತ್ರ ಮತ್ತು ಆಧುನಿಕ ವಿಜ್ಞಾನ ಎರಡೂ ಹೇಳುತ್ತವೆ.

ವಾಸ್ತುಶಾಸ್ತ್ರದ ಪ್ರಕಾರ, ಮನೆಯ ಯಜಮಾನನು ನೈರುತ್ಯ ಮೂಲೆಯಲ್ಲಿ, ಅಂದರೆ ಪಶ್ಚಿಮ-ದಕ್ಷಿಣದ ಮಧ್ಯೆ ತಲೆ ಇಟ್ಟು ಮಲಗುವುದು ಉತ್ತಮ. ಇದು ಮನೆಯಲ್ಲಿ ಸ್ಥಿರತೆ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ. ಹಾಗೆಯೇ, ವಿದ್ಯಾರ್ಥಿಗಳು ಅಥವಾ ಅವಿವಾಹಿತರು ಪೂರ್ವ ದಿಕ್ಕಿಗೆ ತಲೆ ಇಟ್ಟು ಮಲಗುವುದರಿಂದ ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ಮತ್ತು ಯಶಸ್ಸು ದೊರೆಯುತ್ತದೆ. ಪೂರ್ವ ದಿಕ್ಕು ಜ್ಞಾನ ಮತ್ತು ಸಕಾರಾತ್ಮಕ ಶಕ್ತಿಯನ್ನು ಪ್ರತಿನಿಧಿಸುತ್ತದೆ.

ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಬಾರದು ಯಾಕೆ?

ಆದರೆ, ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗುವುದನ್ನು ಕಟ್ಟುನಿಟ್ಟಾಗಿ ನಿಷಿದ್ಧವೆಂದು ಪರಿಗಣಿಸಲಾಗಿದೆ. ನಮ್ಮ ಪೂರ್ವಿಕರು ಮತ್ತು ಇತಿಹಾಸಕಾರರು ಸಹ ಈ ಸಲಹೆಯನ್ನು ನೀಡುತ್ತಾ ಬಂದಿದ್ದಾರೆ. ಉತ್ತರ ದಿಕ್ಕು ಕುಬೇರನ ದಿಕ್ಕು, ಧನ ಸಂಪತ್ತಿಗೆ ಶುಭಕರವಾದ ದಿಕ್ಕು ಹೌದಾದರೂ, ಮಲಗುವಾಗ ಈ ದಿಕ್ಕಿಗೆ ತಲೆ ಇಡಬಾರದು. ಹೀಗೆ ಮಲಗುವುದರಿಂದ ದೇಹದಲ್ಲಿನ ಧನಾತ್ಮಕ ಶಕ್ತಿ ಕುಂದುತ್ತದೆ, ಸಂಕಲ್ಪ ಸಿದ್ಧಿಗಳಿಗೆ ಅಡ್ಡಿಯಾಗುತ್ತದೆ ಎಂದು ಶಾಸ್ತ್ರಗಳು ಹೇಳುತ್ತವೆ. ಗಣೇಶನ ತಲೆಯನ್ನು ಶಿವನು ಕತ್ತರಿಸಿದಾಗ, ಉತ್ತರದ ದಿಕ್ಕಿನಲ್ಲಿ ಮಲಗಿದ್ದ ಆನೆಯ ತಲೆಯನ್ನು ತಂದು ಇಡಲಾಯಿತು ಎಂಬ ಪೂರಕ ಕಥೆಯು ಈ ದಿಕ್ಕಿನೊಂದಿಗಿನ ವಿಶೇಷ ಸಂಬಂಧವನ್ನು ಸೂಚಿಸುತ್ತದೆ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ವೈಜ್ಞಾನಿಕ ಕಾರಣ:

ವೈಜ್ಞಾನಿಕವಾಗಿ ನೋಡಿದಾಗ, ಮಾನವ ದೇಹ ಮತ್ತು ಭೂಮಿ ಎರಡಕ್ಕೂ ಕಾಂತೀಯ ಗುಣಗಳಿವೆ. ನಮ್ಮ ದೇಹವು ತನ್ನದೇ ಆದ ಕಾಂತೀಯ ಶಕ್ತಿಯನ್ನು ಹೊಂದಿದ್ದು, ಹೃದಯದ ಭಾಗವು ಪ್ರಮುಖ ಕೇಂದ್ರವಾಗಿದೆ. ಭೂಮಿಯೂ ಒಂದು ಬೃಹತ್ ಕಾಂತೀಯ ಶಕ್ತಿಯನ್ನು ಹೊಂದಿದ್ದು, ಉತ್ತರ ಮತ್ತು ದಕ್ಷಿಣ ಧ್ರುವಗಳನ್ನು ಹೊಂದಿದೆ. ವಿಜ್ಞಾನದ ನಿಯಮದ ಪ್ರಕಾರ, ಅಸಮಾನ ಧ್ರುವಗಳು (Unlike Poles) ಒಂದನ್ನೊಂದು ಆಕರ್ಷಿಸುತ್ತವೆ, ಆದರೆ ಸಮಾನ ಧ್ರುವಗಳು (Like Poles) ಒಂದನ್ನೊಂದು ವಿಕರ್ಷಿಸುತ್ತವೆ. ನಾವು ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಿದಾಗ, ನಮ್ಮ ದೇಹದ ಉತ್ತರ ಧ್ರುವವು ಭೂಮಿಯ ಉತ್ತರ ಧ್ರುವದೊಂದಿಗೆ ಸರಿಹೊಂದುತ್ತದೆ, ಇದು ಲೈಕ್ ಪೋಲ್ಸ್ ಪರಿಸ್ಥಿತಿಯನ್ನು ಸೃಷ್ಟಿಸುತ್ತದೆ. ಇದರಿಂದಾಗಿ ಭೂಮಿಯ ಕಾಂತೀಯ ಶಕ್ತಿಯು ನಮ್ಮ ದೇಹದ ಕಾಂತೀಯ ಶಕ್ತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿ, ಹೃದಯಕ್ಕೆ ಹೆಚ್ಚಿನ ಒತ್ತಡವನ್ನುಂಟು ಮಾಡುತ್ತದೆ. ಇದು ರಕ್ತ ಸಂಚಾರವನ್ನು ಕಡಿಮೆ ಮಾಡಿ, ರಕ್ತದೊತ್ತಡ (BP), ಹೃದಯಾಘಾತ, ಮನಸ್ಸಿನ ವಿಚಲತೆ, ಆವೇಶ, ಮತ್ತು ಮೈಗ್ರೇನ್‌ನಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ದೇಹದ ರಕ್ತಚಲನೆಯಲ್ಲಿನ ಕುಸಿತವು ಮೆದುಳಿನ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರಿ, ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಕುಂದಿಸುತ್ತದೆ. ಸಾಮಾಜಿಕ ಸಂಬಂಧಗಳ ಮೇಲೂ ಇದು ನಕಾರಾತ್ಮಕ ಪ್ರಭಾವ ಬೀರಬಹುದು. ಆದ್ದರಿಂದ, ಉತ್ತಮ ಆರೋಗ್ಯ, ಮಾನಸಿಕ ಶಾಂತಿ ಮತ್ತು ಯಶಸ್ವಿ ಜೀವನಕ್ಕಾಗಿ, ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗುವುದನ್ನು ತಪ್ಪಿಸಿ, ದಕ್ಷಿಣ ಅಥವಾ ಪೂರ್ವ ದಿಕ್ಕಿಗೆ ತಲೆ ಇಟ್ಟು ಮಲಗುವುದು ಹೆಚ್ಚು ಶುಭಕರವಾಗಿದೆ. ಈ ಸರಳ ಬದಲಾವಣೆಯು ನಿಮ್ಮ ಜೀವನದಲ್ಲಿ ಸಕಾರಾತ್ಮಕ ಪರಿವರ್ತನೆಗಳನ್ನು ತರಬಲ್ಲದು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರವಾಸಿಗರೇ ಎಚ್ಚರ! ಗೋಕರ್ಣದ ಕುಡ್ಲೆ ಬೀಚ್ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ – Kannada News | Leopard Spotted on Kudle Beach Road in Gokarna: Panic Among Tourists and Locals

ಉತ್ತರ ಕನ್ನಡ, ಏಪ್ರಿಲ್ 28: ಇತ್ತೀಚೆಗೆ ರಾಜ್ಯದಲ್ಲಿ ವನ್ಯ ಜೀವಿಗಳ ಹಾವಳಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ಕೆಲವೊಮ್ಮೆ ಮನೆಯೊಳಗೆ ಚಿರತೆ ಅಡಗಿ ಕುಳಿತ ಉದಾಹರಣೆಗಳೂ ಇವೆ. ಅಂತೆಯೇ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಗೋಕರ್ಣದ ಕುಡ್ಲೆ ಕಡಲ ತೀರದ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಆತಂಕಕ್ಕೊಳಗಾಗಿದ್ದಾರೆ. ಕಾಡಿನಿಂದ ನಾಡಿನತ್ತ ಬರುತ್ತಿರುವ ಕಾಡುಪ್ರಾಣಿಗಳ ಹಾವಳಿಯಿಂದ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸೀಕ್ರೆಟ್ ಮೀಟಿಂಗ್​ನಲ್ಲೂ ಮನಬಿಚ್ಚಿ ಮಾತನಾಡದ ಸಿಎಂ ಸಿದ್ದರಾಮಯ್ಯ! ಆತಂಕಕ್ಕೆ ಒಳಗಾದ್ರಾ ಅಹಿಂದ ಸಚಿವರು? – Kannada News | Karnataka Congress Crisis: Siddaramaiah’s Silence Worries AHINDA Ministers; Satish Jarkiholi, Mahadevappa Rush to Delhi

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾದ ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ Image Credit source: tv9

ಬೆಂಗಳೂರು, ಏಪ್ರಿಲ್ 28: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ನಾಯಕತ್ವ ಬದಲಾವಣೆಯ (Leadership Change) ಕೂಗು ಮತ್ತೆ ಜೋರಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿದ್ದು, ಈ ಬೆಳವಣಿಗೆಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌನ ಈಗ ಅಹಿಂದ ಸಚಿವರ ನಿದ್ದೆಗೆಡಿಸಿದೆ. ಸತತ ಸಭೆಗಳ ನಂತರವೂ ಸಿಎಂ ಯಾವುದೇ ಸ್ಪಷ್ಟನೆ ನೀಡಿಲ್ಲ. ಅಲ್ಲದೆ, ಸಿಎಂ ಬಣದ ಸಚಿವರ ರಹಸ್ಯ ಸಭೆಯಲ್ಲಿ ಕೂಡ ಅವರು ಮುಕ್ತವಾಗಿ ಮಾತನಾಡಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಅಹಿಂದ (AHINDA Leaders) ಸಚಿವರು ಈಗ ಹೈಕಮಾಂಡ್ ಮೊರೆ ಹೋಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಮೌನದ ರಹಸ್ಯವೇನು?

ಇತ್ತೀಚೆಗೆ ಸಚಿವ ಹೆಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಡಾ. ಜಿ. ಪರಮೇಶ್ವರ್, ಜಮೀರ್ ಅಹ್ಮದ್ ಖಾನ್ ಮತ್ತು ಕೆ.ಎನ್. ರಾಜಣ್ಣ ಸೇರಿದಂತೆ ಪ್ರಮುಖ ಅಹಿಂದ ನಾಯಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ದರು. ರಾಜ್ಯ ರಾಜಕಾರಣದ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಲು ಈ ನಾಯಕರು ಪ್ರಯತ್ನಿಸಿದರೂ, ಸಿಎಂ ಸಿದ್ದರಾಮಯ್ಯ ಮಾತ್ರ ಮನಬಿಚ್ಚಿ ಮಾತನಾಡದೆ ಮೌನಕ್ಕೆ ಶರಣಾಗಿದ್ದರು. ಸೀಕ್ರೆಟ್ ಮೀಟಿಂಗ್‌ನಲ್ಲೂ ಸಿಎಂ ಕಡೆಯಿಂದ ಯಾವುದೇ ಭರವಸೆ ಸಿಗದ ಕಾರಣ, ಸಿದ್ದರಾಮಯ್ಯ ಬಣದ ಸಚಿವರಿಗೆ ಒಳಗಿಂದೊಳಗೆ ಏನೋ ನಡೆಯುತ್ತಿದೆ ಎಂಬ ಅನುಮಾನ ಶುರುವಾಗಿದೆ.

ದೆಹಲಿಗೆ ಹಾರಿದ ಸತೀಶ್-ಮಹದೇವಪ್ಪ

ಸಿಎಂ ಮೌನದಿಂದ ಕಂಗೆಟ್ಟ ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ತುರ್ತಾಗಿ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸುರ್ಜೇವಾಲ ಅವರನ್ನು ಭೇಟಿಯಾಗಿದ್ದಾರೆ. ಒಂದು ವೇಳೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದರೆ ಅಹಿಂದ ನಾಯಕರ ಭವಿಷ್ಯವೇನು? ತಮ್ಮ ಸ್ಥಾನಮಾನಗಳು ರಕ್ಷಣೆಯಾಗುತ್ತವೆಯೇ? ಎಂಬ ಬಗ್ಗೆ ಸ್ಪಷ್ಟತೆ ಕೇಳಿದ್ದಾರೆ ಎನ್ನಲಾಗಿದೆ. ವಿಶೇಷವೆಂದರೆ, ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ (KPCC President) ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಡಿಕೆಶಿಗೆ ನೀಡಿದಂತೆ ತಮಗೂ ಅಧಿಕಾರ ನೀಡಬೇಕು ಎಂಬ ಬೇಡಿಕೆಯನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಾಪಸಾಗ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಬಣ ದೆಹಲಿಗೆ! ಕಾಂಗ್ರೆಸ್​ನಲ್ಲಿ ಜೋರಾಯ್ತು ಡೆಲ್ಲಿ ಟೂರ್ ಪಾಲಿಟಿಕ್ಸ್

ಏತನ್ಮಧ್ಯೆ, ಕಾಂಗ್ರೆಸ್ ಹೈಕಮಾಂಡ್​ನಿಂದ ಡಿಕೆ ಶಿವಕುಮಾರ್​ಗೆ ಬಿಗ್ ಬರ್ತ್​ಡೇ ಗಿಫ್ಟ್ ಸಿಗಲಿದೆ ಎಂಬ ಊಹಾಪೋಹಗಳ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ನೀಡಿರುವ ಪ್ರತಿಕ್ರಿಯೆ ಕೂಡ ಕುತೂಹಲಕ್ಕೆ ಕಾರಣವಾಗಿದೆ. ಇಷ್ಟು ದಿನ ‘‘ಸಿಎಂ ಬದಲಾವಣೆ ಇಲ್ಲ’’ ಎನ್ನುತ್ತಿದ್ದ ಪರಮೇಶ್ವರ್, ಈಗ ‘‘ಹೈಕಮಾಂಡ್ ನಿರ್ಧಾರವೇ ಅಂತಿಮ’’ ಎಂದಿರುವುದು ಗೊಂದಲವನ್ನು ಮತ್ತಷ್ಟು ಹೆಚ್ಚಿಸಿದೆ. ಮೇ 15ರ ಡಿಕೆಶಿ ಹುಟ್ಟುಹಬ್ಬದ ವೇಳೆಗೆ ಹೈಕಮಾಂಡ್ ಏನಾದರೂ ‘ಗಿಫ್ಟ್’ ನೀಡಲಿದೆಯೇ ಎಂಬ ಚರ್ಚೆ ಜೋರಾಗಿದ್ದು, ಅಸ್ತಿತ್ವ ಉಳಿಸಿಕೊಳ್ಳಲು ಅಹಿಂದ ನಾಯಕರು ಈಗಲೇ ದಾಳ ಉರುಳಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆ ದೇವಾಲಯಕ್ಕೆ ಭೇಟಿ ನೀಡಿದ ಮೇಲೆ ಜೀವನ ಬದಲಾಯ್ತು: ಶ್ರುತಿ ಹಾಸನ್ – Kannada News | Shruti Haasan talks about how a Temple visit changed her life

ಚಿತ್ರರಂಗದ (Movie Industry) ಬಹುತೇಕರು ದೇವರಿನಲ್ಲಿ ವಿಶ್ವಾಸ ಇರುವವರೇ ಆಗಿದ್ದಾರೆ. ಸಿನಿಮಾಗಳ ಶೂಟಿಂಗ್ ಆರಂಭವಾಗುವುದೇ ದೇವರ ಪೂಜೆ ಮೂಲಕ, ಮುಗಿಯುವುದು ಸಹ ಪೂಜೆಯ ಮೂಲಕವೇ. ಆದರೆ ನಟ-ನಟಿಯರ ಐಶಾರಾಮಿ ಜೀವನ ಶೈಲಿ, ಪಾರ್ಟಿಗಳು, ಅವರ ಉಡುಪುಗಳು ಇನ್ನಿತರೆಗಳನ್ನು ಗಮನಿಸುವ ಜನ ದೇವರಲ್ಲಿ ನಂಬಿಕೆ ಇಲ್ಲದವರು ಎಂದು ನಿರ್ಧರಿಸಿಬಿಡುತ್ತಾರೆ. ನಟಿ ಶ್ರುತಿ ಹಾಸನ್, ಪಾಶ್ಚಾತ್ಯ ಶೈಲಿಯ ಜೀವನ ನಿರ್ವಹಣೆ ಮಾಡುವ ನಟಿಯರಲ್ಲಿ ಒಬ್ಬರು. ಲಿವಿನ್ ರಿಲೇಶನ್ ಶಿಪ್, ಪದೇ ಪದೇ ಬದಲಾಗುವ ಬಾಯ್​ಫ್ರೆಂಡ್, ನೈಟ್ ಲೈಫ್, ಪಾರ್ಟಿಗಳು, ಕಾನ್ಸರ್ಟ್​​ಗಳು ಇನ್ನೂ ಹಲವು. ಆದರೆ ಅವರು ಅಪ್ಪಟ ದೈವ ಭಕ್ತೆ. ದೇವಾಲಯ ಒಂದಕ್ಕೆ ಹೋಗಿದ್ದಕ್ಕೆ ತಮ್ಮ ಜೀವನ ಬದಲಾಯ್ತು ಎಂದು ಅವರು ಖುದ್ದು ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ನಟಿ ಶ್ರುತಿ ಹಾಸನ್ ಅವರು ತಮ್ಮ ಜೀವನದಲ್ಲಿ ಉಂಟಾದ ದೊಡ್ಡ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಜೀವನದಲ್ಲಿ ಖಿನ್ನತೆಗೆ ಒಳಗಾಗಿದ್ದರಂತೆ ಶ್ರುತಿ ಹಾಸನ್, ಜೀವನದಲ್ಲಿ ಯಾವುದೂ ಸರಿಯಾಗಿ ನಡೆಯುತ್ತಿಲ್ಲ, ಸೋಲುತ್ತಿದ್ದೇನೆ ಎಂದು ಅನಿಸಲು ಆರಂಭಿಸಿತ್ತಂತೆ. ಕಷ್ಟಗಳ ಮೇಲೆ ಕಷ್ಟಗಳು ಬರುತ್ತಿದ್ದವಂತೆ. ಆಗ ಗೆಳೆಯನೊಬ್ಬ ದೇವಾಲಯವೊಂದಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದನಂತೆ.

ಗೆಳೆಯನ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ ಶ್ರುತಿ ಹಾಸನ್, ಚೆನ್ನೈನ ವಾರಾಹಿ ಅಮ್ಮನ ಗುಡಿಗೆ ಭೇಟಿ ನೀಡಿದರು. ನಂತರ ತಮ್ಮ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆಗಳಾಗಿವೆ ಎಂದು ಅವರು ಹೇಳಿದ್ದಾರೆ. ‘ಅದು ತುಂಬಾ ಪುಟ್ಟ ದೇವಸ್ಥಾನ, ಅಲ್ಲಿ ಯಾವುದೇ ವಿಐಪಿ ಸಾಲುಗಳಿಲ್ಲ ಅಥವಾ ಅದ್ದೂರಿತನವಿಲ್ಲ. ಆದರೆ ಅಲ್ಲಿಗೆ ಹೋದಾಗ ನನಗೆ ಒಂದು ವಿಭಿನ್ನವಾದ ಶಕ್ತಿ ಮತ್ತು ಶಾಂತಿ ಸಿಕ್ಕಿತು’ ಎಂದು ಶ್ರುತಿ ವಿವರಿಸಿದ್ದಾರೆ. ‘ದೇವರೇ ನಮ್ಮನ್ನು ಆರಿಸಿಕೊಳ್ಳುತ್ತಾರೆ ಎಂಬುದನ್ನು ನಾನು ಅಲ್ಲಿಗೆ ಹೋದ ಮೇಲೆ ನಂಬಿದ್ದಾಗಿ ಅವರು ತಿಳಿಸಿದ್ದಾರೆ. ಆ ಭೇಟಿಯ ನಂತರ ಅವರ ಮನಸ್ಸಿನಲ್ಲಿದ್ದ ಭಯಗಳೆಲ್ಲಾ ದೂರವಾಗಿ, ಜೀವನದ ಬಗ್ಗೆ ಒಂದು ಸ್ಪಷ್ಟತೆ ಸಿಕ್ಕಿತಂತೆ. ಶ್ರುತಿ ಹಾಸನ್ ಅವರ ಈ ಆಧ್ಯಾತ್ಮಿಕ ಪಯಣದ ಮಾತುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಇದನ್ನೂ ಓದಿ:ರಾಮ್ ಚರಣ್ ಸಿನಿಮಾನಲ್ಲಿ ಶ್ರುತಿ ಹಾಸನ್ ಐಟಂ ಹಾಡು

ಶ್ರುತಿ ಹಾಸನ್ ಪ್ರಸ್ತುತ ಕೆಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತಮಿಳಿನ ‘ಟ್ರೈನ್’ ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ತೆಲುಗಿನ ‘ಆಕಾಶಂ ಲೋ ಒಕ ತಾರ’ ಸಿನಿಮಾನಲ್ಲಿ ನಟಿಸುತ್ತದ್ದಾರೆ. ‘ಸಲಾರ್ 2’ ಸಿನಿಮಾನಲ್ಲೂ ಅವರೇ ನಾಯಕಿ. ಇತ್ತೀಚೆಗಷ್ಟೆ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದ ಐಟಂ ಹಾಡಿನಲ್ಲಿ ನಟಿಸಲು ಒಪ್ಪಿಗೆ ನೀಡಿದ್ದಾರೆ. ಇವುಗಳ ಜೊತೆಗೆ ಹೊಸ ಆಲ್ಬಂ ಬಿಡುಗಡೆ ಮಾಡಲು ಸಹ ಅವರು ಸಜ್ಜಾಗುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

28 ವರ್ಷಗಳ ಬಳಿಕ ಒಂದಾಗುತ್ತಿರುವ ನಾಗಾರ್ಜುನ ಮತ್ತು ಟಬು – Kannada News | Akkineni Nagarjuna and Tabu acting together after 28 years

ನಾಗಾರ್ಜುನ (Nagarjuna) ಮತ್ತು ಟಬು ಅವರು ಚಿತ್ರರಂಗದ ಹಿರಿಯ ನಟರು. ಆದರೆ ದಶಕಗಳ ಹಿಂದೆ ಇವರಿಬ್ಬರದ್ದು ಬಲು ಹಾಟ್ ಫೇವರೇಟ್ ಜೋಡಿ. ಕೆಲವು ಬ್ಲಾಕ್ ಬಸ್ಟರ್ ರೊಮ್ಯಾಂಟಿಕ್ ಹಿಟ್ ಸಿನಿಮಾಗಳಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಆ ಸಮಯದಲ್ಲಿ ನಾಗಾರ್ಜುನ ಮತ್ತು ಟಬು ನಡುವೆ ತೆರೆಯಾಚೆಯೂ ರೊಮಾನ್ಸ್ ನಡೆದಿತ್ತು ಆ ಬಗ್ಗೆ ಸಾಕಷ್ಟು ಗುಲ್ಲೆದ್ದಿತ್ತು. ನಾಗಾರ್ಜುನ ಮತ್ತು ಟಬು ಮದುವೆ ಆಗಲಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬಂದಿದ್ದವು. ಆದರೆ ಅದಾಗಲಿಲ್ಲ. ಆದರೆ ಇದೀಗ ಬರೋಬ್ಬರಿ 28 ವರ್ಷಗಳ ಬಳಿಕ ಈ ಜೋಡಿ ಮತ್ತೆ ತೆರೆಯ ಮೇಲೆ ಒಂದಾಗುತ್ತಿದೆ.

ನಾಗಾರ್ಜುನ ತಮ್ಮ 100ನೇ ಸಿನಿಮಾದ ಚಿತ್ರೀಕರಣದ ತಯಾರಿಯಲ್ಲಿದ್ದಾರೆ. ಈ ಸಿನಿಮಾವನ್ನು ಬಲು ಅದ್ಧೂರಿಯಾಗಿ ತೆರೆಯ ಮೇಲೆ ತರಲು ಸಕಲ ಪ್ರಯತ್ನಗಳನ್ನು ಖುದ್ದಾಗಿ ಮಾಡುತ್ತಿದ್ದಾರೆ. ಸಿನಿಮಾಕ್ಕೆ ‘ಕಿಂಗ್ 100’ ಎಂದು ಹೆಸರಿಡಲಾಗಿದ್ದು, ನಾಗಾರ್ಜುನ ಅಭಿಮಾನಿಗಳಿಗಾಗಿ ವಿಶೇಷವಾಗಿ ಈ ಸಿನಿಮಾವನ್ನು ನಿರ್ಮಿಸಲಾಗುತ್ತಿದೆಯಂತೆ. ಇದೇ ಸಿನಿಮಾನಲ್ಲಿ ಟಬು ಮುಖ್ಯ ಪಾತ್ರದಲ್ಲಿ ನಟಿಸಲಿದ್ದು, ಬರೋಬ್ಬರಿ 28 ವರ್ಷಗಳ ಬಳಿಕ ಟಬು ಮತ್ತೊಮ್ಮೆ ನಾಗಾರ್ಜುನ ಜೊತೆಗೆ ಸಿನಿಮಾನಲ್ಲಿ ನಟಿಸುತ್ತಿದ್ದಾರೆ.

ಟಬು ಅವರು ಸಿನಿಮಾದ ಶೂಟಿಂಗ್ ಪ್ರಾರಂಭಿಸಿದ್ದು, ‘ಕಿಂಗ್ 100’ ಸಿನಿಮಾ ಸೆಟ್​ನ ಚಿತ್ರವನ್ನು ಟಬು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಟಬು ಮತ್ತು ನಾಗಾರ್ಜುನ ಜೋಡಿಗೆ ತೆಲುಗು ಚಿತ್ರರಂಗದಲ್ಲಿ ದೊಡ್ಡ ಅಭಿಮಾನಿ ವರ್ಗವೇ ಇದ್ದು, ಸಹಜವಾಗಿಯೇ ಅಭಿಮಾನಿಗಳು ಇಬ್ಬರನ್ನೂ ಮತ್ತೆ ತೆರೆಯ ಮೇಲೆ ನೋಡಲು ಕಾತರರಾಗಿದ್ದಾರೆ.

ಇದನ್ನೂ ಓದಿ;ನಾಗಾರ್ಜುನಗೆ ಮತ್ತೆ ಶಾಕ್ ಕೊಟ್ಟ ಸರ್ಕಾರ, ಸ್ಟುಡಿಯೋ ವಿರುದ್ಧ ತೆರಿಗೆ ವಂಚನೆ ಆರೋಪ

ನಾಗಾರ್ಜುನ ಅವರ 100ನೇ ಸಿನಿಮಾವನ್ನು ರಾ ಕಾರ್ತಿಕ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾನಲ್ಲಿ ನಾಗಾರ್ಜುನ ಅವರನ್ನು ಭಿನ್ನ ಭಿನ್ನ ಲುಕ್​​ಗಳಲ್ಲಿ ತೋರಿಸಲಾಗುತ್ತದೆಯಂತೆ. ಇದಕ್ಕಾಗಿ ಡೀ ಏಜಿಂಗ್ ತಂತ್ರಜ್ಞಾನವನ್ನು ನಿರ್ದೇಶಕರು ಬಳಸಲಿದ್ದಾರೆ. ಸಿನಿಮಾವು ತಂದೆ ಮತ್ತು ಮಗಳ ನಡುವೆ ಬಾಂಧವ್ಯದ ಕತೆಯನ್ನು ಹೊಂದಿರಲಿದೆ. ಸಿನಿಮಾನಲ್ಲಿ ಟಬು ಅವರು ನಾಗಾರ್ಜುನ ಅವರಿಗೆ ಜೋಡಿಯಾಗಿ ನಟಿಸಲಿದ್ದಾರೆ.

ನಾಗಾರ್ಜುನ ಮತ್ತು ಟಬು ಈ ವರೆಗೆ ಮೂರು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಮೊದಲಿಗೆ ‘ಸಿಸಿಂದ್ರಿ’ ಸಿನಿಮಾನಲ್ಲಿ ಈ ಇಬ್ಬರೂ ಅತಿಥಿ ಪಾತ್ರಗಳಲ್ಲಿ ನಟಿಸಿದ್ದರು. ಬಳಿಕ ಬ್ಲಾಕ್ ಬಸ್ಟರ್ ಸಿನಿಮಾ ‘ನಿನ್ನೆ ಪೆಳ್ಳಾಡತಾ’ ಆ ಬಳಿಕ ‘ಆವಿಡ ಮಾ ಆವಿಡೇ’ ಸಿನಿಮಾನಲ್ಲಿ ನಟಿಸಿದ್ದರು. 1998 ರಲ್ಲಿ ಈ ಸಿನಿಮಾ ರಿಲೀಸ್ ಆಗಿತ್ತು. ಈಗ 28 ವರ್ಷಗಳ ಬಳಿಕ ಮತ್ತೆ ಒಟ್ಟಿಗೆ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version