ವಾರಾಣಸಿಯಲ್ಲಿ ಬುಲ್ಡೋಜರ್ ದಾಳಿ ಖಂಡಿಸಿ ತನ್ನ ಅಂಗಡಿಗೆ ತಾನೇ ಬೆಂಕಿ ಹಚ್ಚಿದ ವ್ಯಾಪಾರಿ – Kannada News | Man Sets his own Shop Ablaze Pours Petrol On Himself Amid Bulldozer Action begins In Varanasi

ವಾರಾಣಸಿ, ಫೆಬ್ರವರಿ 9: ಉತ್ತರ ಪ್ರದೇಶದ ವಾರಾಣಸಿಯ (Varanasi) ದಾಲ್ಮಂಡಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಸರ್ಕಾರ ಬುಲ್ಡೋಜರ್ ಬಳಸಿ ಮನೆಗಳನ್ನು ಕೆಡವಲು ಪ್ರಾರಂಭಿಸಿದೆ. ಇಂದು, ಪುರಸಭೆ ಗುರುತಿಸಿದ ಶಿಥಿಲಗೊಂಡ ಮನೆಗಳಲ್ಲಿ 21 ಮನೆಗಳನ್ನು ನೆಲಸಮ ಮಾಡಲಾಗಿದೆ. ಇದು ಒಂದೇ ದಿನದಲ್ಲಿ ದಾಲ್ಮಂಡಿಯಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆಯಾಗಿದೆ. ಇದನ್ನು ಖಂಡಿಸಿ ಸ್ಥಳೀಯ ಅಂಗಡಿಯವರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಆಡಳಿತ ಅಧಿಕಾರಿಗಳಿಂದ 10 ದಿನಗಳ ಕಾಲಾವಕಾಶ ಕೋರುತ್ತಿದ್ದಾರೆ. ಆದರೂ ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ. ಹೀಗಾಗಿ, ಕಾರ್ಯಾಚರಣೆಯ ಸಮಯದಲ್ಲಿ ಅಂಗಡಿ ಮಾಲೀಕರೊಬ್ಬರು ತಮ್ಮ ಮೇಲೆ ಪೆಟ್ರೋಲ್ ಸುರಿದುಕೊಂಡು, ಮನೆಗೂ ಬೆಂಕಿ ಹಚ್ಚಿದ್ದಾರೆ. ತಮ್ಮ ಮೈಗೂ ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನಮ್ಮ ತಪ್ಪೇನು? ನೀವು ನಮ್ಮನ್ನು ಕೊಲ್ಲುತ್ತೀರಾ? ನೀವು ರಸ್ತೆ ಅಗಲೀಕರಣ ಮಾಡಲು ಬಯಸಿದರೆ ನೀವು ಜನರ ಜೀವನವನ್ನು ನಾಶ ಮಾಡುತ್ತೀರಾ? ಸರ್ಕಾರ ನಮ್ಮನ್ನು ನಾಶ ಮಾಡುತ್ತಿದೆ. ಅವರು ನಮ್ಮ ಜೀವನಕ್ಕೆ ಆಧಾರವಾಗಿದ್ದ ಅಂಗಡಿಯನ್ನೇ ಕಸಿದುಕೊಂಡಿದೆ. ನಮಗೆ ಸರ್ಕಾರ ಯಾವುದೇ ಸೂಚನೆ ನೀಡಿಲ್ಲ ಎಂದು ಆ ವ್ಯಾಪಾರಿ ಅಳುತ್ತಾ ಕಿರುಚಾಡಿದ್ದಾರೆ. ಜನರೆಲ್ಲ ಅವರನ್ನು ಕೆಳಗಿಳಿಯಲು ಎಷ್ಟೇ ಬೇಡಿಕೊಂಡರೂ ಅವರು ಕೆಳಗೆ ಇಳಿಯಲಿಲ್ಲ.

ಇದನ್ನೂ ಓದಿ: ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ

ಗಲಾಟೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು 4 ಪೊಲೀಸ್ ಠಾಣೆಗಳ ಪಡೆಗಳನ್ನು ನಿಯೋಜಿಸಿದೆ. ಅಲ್ಲಿ ಮಹಿಳಾ ಸಿಬ್ಬಂದಿ ಸೇರಿದಂತೆ 500 ಪೊಲೀಸ್ ಸಿಬ್ಬಂದಿ ಇದ್ದಾರೆ. ಪರಿಸ್ಥಿತಿಯನ್ನು ಡ್ರೋನ್‌ಗಳ ಮೂಲಕವೂ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಇದಕ್ಕೂ ಮೊದಲು, ಜನವರಿ 21ರಂದು 8 ಮನೆಗಳನ್ನು ಒಟ್ಟಿಗೆ ಕೆಡವಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಸ್ಪಿರಿಟ್’ ಸಿನಿಮಾದಿಂದ ಪ್ರಕಾಶ್ ರಾಜ್ ಹೊರಬಂದಿಲ್ಲ; ಸ್ಪಷ್ಟನೆ ನೀಡಿದ ನಟ – Kannada News | Prakash Raj dismissed rumours of his exit from Spirit movie ft Prabhas

ಖ್ಯಾತ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ‘ಸ್ಪಿರಿಟ್’ (Spirit) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಪ್ರಭಾಸ್ ನಟನೆಯ ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಜನರಿಗೆ ಗೊಂದಲ ಮೂಡಿದೆ. ಈ ಮೊದಲು ನಾಯಕಿ ಆಗಿದ್ದ ದೀಪಿಕಾ ಪಡುಕೋಣೆ ಅವರು ಚಿತ್ರತಂಡದಿಂದ ಹೊರನಡೆದರು. ಆ ಬಳಿಕ ತೃಪ್ತಿ ದಿಮ್ರಿ ಅವರನ್ನು ಆಯ್ಕೆ ಮಾಡಲಾಯಿತು. ಈಗ ‘ಸ್ಪಿರಿಟ್’ ಸಿನಿಮಾದಿಂದ ಹಿರಿಯ ನಟ ಪ್ರಕಾಶ್ ರಾಜ್ (Prakash Raj) ಅವರು ಹೊರ ನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅದಕ್ಕೆ ಈಗ ಸ್ವತಃ ಪ್ರಕಾಶ್ ರಾಜ್ ಅವರು ಸ್ಪಷ್ಟನೆ ನೀಡಿದ್ದಾರೆ. ವದಂತಿಯನ್ನು ಅವರು ತಳ್ಳಿಹಾಕಿದ್ದಾರೆ.

ಗಾಸಿಪ್ ಏನು? ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಮತ್ತು ನಟ ಪ್ರಕಾಶ್ ರಾಜ್ ಅವರ ನಡುವೆ ಭಿನ್ನಾಭಿಪ್ರಾಯ ಮೂಡಿತಂತೆ. ಒಂದು ದೃಶ್ಯದ ಚಿತ್ರೀಕರಣ ನಡೆಯುತ್ತಿರುವಾಗಲೇ ಅವರಿಬ್ಬರ ನಡುವೆ ವಾದ ಆಯಿತಂತೆ. ಅದರಿಂದಾಗಿ ಪ್ರಕಾಶ್ ರಾಜ್ ಅವರು ಚಿತ್ರತಂಡದಿಂದ ಹೊರಗೆ ಬರಲು ನಿರ್ಧರಿಸಿದರಂತೆ. ಈ ರೀತಿಯಾಗಿ ಗಾಸಿಪ್ ಹಬ್ಬಿದೆ.

ಆದರೆ ಸ್ವತಃ ಪ್ರಕಾಶ್ ರಾಜ್ ಅವರು ‘ಹಿಂದೂಸ್ತಾನ್ ಟೈಮ್ಸ್’ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಇವೆಲ್ಲವೂ ನಾನ್​ಸೆನ್ಸ್ ಊಹಾಪೋಹಗಳು. ಅದರ ಬಗ್ಗೆ ನನಗೆ ಗೊತ್ತಿಲ್ಲ’ ಎಂದು ಪ್ರಕಾಶ್ ರಾಜ್ ಅವರು ಹೇಳಿದ್ದಾರೆ. ಆ ಮೂಲಕ, ತಾವು ಇನ್ನೂ ಚಿತ್ರತಂಡದ ಭಾಗವಾಗಿರುವುದಾಗಿ ಅವರು ಹೇಳಿದ್ದಾರೆ. ಈ ವಿಷಯ ತಿಳಿದು ಪ್ರಕಾಶ್ ರಾಜ್ ಅವರ ಅಭಿಮಾನಿಗಳಿಗೆ ಸಮಾಧಾನ ಆಗಿದೆ.

ಪ್ರಕಾಶ್ ರಾಜ್ ಅವರು ಪ್ರತಿಭಾನ್ವಿತ ನಟ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಇಂಗ್ಲಿಷ್ ಭಾಷೆಗಳನ್ನು ಅವರು ನಿರರ್ಗಳವಾಗಿ ಮಾತನಾಡುತ್ತಾರೆ. ಇದರಿಂದ ಚಿತ್ರತಂಡಗಳಿಗೆ ಅನುಕೂಲ ಆಗುತ್ತದೆ. ಪಾತ್ರವರ್ಗದಲ್ಲಿ ಪ್ರಕಾಶ್ ರಾಜ್ ಇದ್ದರೆ ಅಂಥ ಸಿನಿಮಾಗಳ ಮೆರುಗು ಹೆಚ್ಚುತ್ತದೆ. ವಿಲನ್ ಮತ್ತು ಪೋಷಕ ಪಾತ್ರಗಳ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ‘ಸ್ಪಿರಿಟ್’ ಸಿನಿಮಾನಲ್ಲಿ ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟಿ

‘ಎಕ್ಸ್’ (ಟ್ವಿಟರ್) ಖಾತೆಯಲ್ಲೂ ಪ್ರಕಾಶ್ ರಾಜ್ ಅವರು ಸ್ಪಷ್ಟನೆ ನೀಡಿದ್ದಾರೆ. ‘ಸ್ಪಿರಿಟ್ ಸಿನಿಮಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ಗಮನಕ್ಕೆ.. ನಾವು ಇನ್ನೂ ನನ್ನ ಪಾತ್ರದ ಶೂಟಿಂಗ್ ಕೂಡ ಆರಂಭಿಸಿಲ್ಲ. ಆದರೆ ನೀವು ವದಂತಿ ಸೃಷ್ಟಿಸುತ್ತಿದ್ದೀರಿ’ ಎಂದು ಪ್ರಕಾಶ್ ರಾಜ್ ಅವರು ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ – Kannada News | KL Rahul Century Powers Karnataka to Ranji Semis vs Mumbai

ರಣಜಿ ಟ್ರೋಫಿಯ ನಾಲ್ಕನೇ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ಹಾಗೂ ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡದ ಪರ ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸುವ ಮೂಲಕ ಸಂಕಷ್ಟದಿಂದ ತಂಡಕ್ಕೆ ನೆರವಾದರು. ಎರಡನೇ ಇನ್ನಿಂಗ್ಸ್​ನಲ್ಲಿ 130 ರನ್‌ ಬಾರಿಸಿದ ರಾಹುಲ್, ಈ ಶತಕದೊಂದಿಗೆ ಕರ್ನಾಟಕ ತಂಡದ ಗೆಲುವನ್ನು ಖಚಿತಪಡಿಸಿದರು. ಮುಂಬೈ ನೀಡಿದ 325 ರನ್‌ಗಳ ಗುರಿಯನ್ನು ಬೆನ್ನಟ್ಟಿ ಕರ್ನಾಟಕ 4 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಇದು ಕೆಎಲ್ ರಾಹುಲ್ ಪ್ರಥಮ ದರ್ಜೆ ವೃತ್ತಿಜೀವನದ 25ನೇ ಶತಕ ಎಂಬುದು ಮತ್ತಷ್ಟು ವಿಶೇಷವಾಗಿತ್ತು.

ಈ ಗೆಲುವಿನೊಂದಿಗೆ ಕರ್ನಾಟಕ ಸೆಮಿಫೈನಲ್‌ಗೆ ತಲುಪಿದೆ. ಕೆಎಲ್ ರಾಹುಲ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಈ ಶತಕ ಬಾರಿಸಿದ್ದು ಅವರ ಬ್ಯಾಟಿಂಗ್ ಕೌಶಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಏಕೆಂದರೆ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್​ನಲ್ಲಿ ಶತಕ ಬಾರಿಸುವುದು ಅಷ್ಟು ಸುಲಭದ ಮಾತಲ್ಲ. ಆದರೆ ರಾಹುಲ್ ಈ ಕೆಲಸ ಮಾಡಿ ತಂಡವನ್ನು ಸೋಲಿನಿಂದ ಪಾರು ಮಾಡಿದರು. ಕೆಎಲ್ ರಾಹುಲ್ ತಮ್ಮ ಇನ್ನಿಂಗ್ಸ್‌ನಲ್ಲಿ 14 ಬೌಂಡರಿಗಳು ಮತ್ತು ಒಂದು ಸಿಕ್ಸ್ ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಈ ರೀತಿಯ ಜನರಿಂದ ದೂರವಿದ್ದಷ್ಟು ಒಳ್ಳೆಯದು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Never help such people, it’s better to stay away from them

ಸಹಾಯ (help) ಮಾಡುವುದು ಒಳ್ಳೆಯ ಗುಣ. ಹೌದು ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಮಾನವೀಯತೆ. ಆದರೆ ಇಂತಹ ಕೆಲವೊಂದಿಷ್ಟು ಜನರಿಗೆ ಯಾವುದೇ ಕಾರಣಕ್ಕೂ ಸಹಾಯ ಮಾಡಬಾರದು ಅಂತಹ ಜನರಿಂದ ಸಾಧ್ಯವಾದಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ. ಚಾಣಕ್ಯರು ಹೇಳುವಂತೆ ಯಾವ ರೀತಿಯ ಜನರಿಗೆ ಸಹಾಯ ಮಾಡಬಾರದು, ಅಂತಹ ಜನರಿಂದ ಯಾವ ಕಾರಣಕ್ಕಾಗಿ ದೂರವಿರಬೇಕು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ.

ಇಂತಹ ಜನರಿಗೆ ಸಹಾಯ ಮಾಡಬಾರದು:

ಮೂರ್ಖ ವ್ಯಕ್ತಿ: ಆಚಾರ್ಯ ಚಾಣಕ್ಯರು ಮೂರ್ಖ ವ್ಯಕ್ತಿಯಿಂದ ಆದಷ್ಟು ದೂರವಿರಬೇಕು ಎಂದು ಸಲಹೆ ನೀಡಿದ್ದಾರೆ. ಏಕೆಂದರೆ ಮೂರ್ಖನಿಗೆ ನಿಮ್ಮ ಸಹಾಯದ ಮಹತ್ವ ಅರ್ಥವಾಗುವುದಿಲ್ಲ, ಇಂತಹವರಿಗೆ ಉಪಕಾರ ಮಾಡುವುದೇ ನಿಷ್ಪ್ರಯೋಜಕ. ಆದ್ದರಿಂದ ಇಂತಹ ಜನರಿಂದ ದೂರವಿರುವುದೇ ತುಂಬಾ ಒಳ್ಳೆಯದು.

ಕೆಟ್ಟ ಸ್ವಭಾವದ ವ್ಯಕ್ತಿ: ಕೆಟ್ಟ ಸ್ವಭಾವದ ಯಾರಾದರೂ ನಿಮಗೆ ತಿಳಿದಿದ್ದರೆ, ಅವರಿಂದ ದೂರವಿರುವುದು ತುಂಬಾ ಒಳ್ಳೆಯದು. ಅಂತಹ ಜನರಿಗೆ ಸಹಾಯ ಮಾಡುವುದು ಅಥವಾ ಒಳ್ಳೆಯದನ್ನು ಮಾಡುವುದು ಸಹ ಹಾನಿಯನ್ನುಂಟುಮಾಡುತ್ತದೆ. ಅಂತಹ ಜನರೊಂದಿಗೆ ಸಂಪರ್ಕದಲ್ಲಿದ್ದರೆ ಸಮಾಜ ಮತ್ತು ಕುಟುಂಬ ವರ್ಗದಲ್ಲಿ ನಿಮ್ಮ ಗೌರವ ಹಾಳಾಗುತ್ತದೆ. ಇದು ಅವಮಾನಕ್ಕೆ ಸಹ ಕಾರಣವಾಗಬಹುದು. ಜೊತೆಗೆ ಅಂತಹ ಜನರ ಸಹವಾಸ ಮಾಡಿದರೇ ನೀವು ಕೂಡ ಕೆಟ್ಟ ಬುದ್ಧಿಯನ್ನು ಕಲಿಯುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಕೆಟ್ಟ ಸ್ವಭಾವದ ಜನರಿಂದ ದೂರವಿರಬೇಕು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ..

ಅನಗತ್ಯವಾಗಿ ದುಃಖಿತನಾಗಿರುವ ವ್ಯಕ್ತಿ: ತಮ್ಮ ಜೀವನದಲ್ಲಿ ಅತೃಪ್ತರಾಗಿರುವ ಮತ್ತು ನಿರಂತರವಾಗಿ ದುಃಖಿತನಾಗಿರುವ ವ್ಯಕ್ತಿ ಇತರರ ಪ್ರಗತಿಯನ್ನು ನೋಡಿ ಅಸೂಯೆ ಪಡುತ್ತಾನೆ. ಆದ್ದರಿಂದ ಇಂತಹ ಸ್ವಭಾವದ ವ್ಯಕ್ತಿಗಳಿಂದ ದೂರವಿರಿ ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ. ಅವರು ಇತರರ ಸಂತೋಷವನ್ನು ಅಸೂಯೆಪಡುತ್ತಾರೆ ಮತ್ತು ಶಪಿಸುತ್ತಾರೆ. ಹೀಗಾಗಿ, ಅಸೂಯೆ ಭಾವನೆಗಳನ್ನು ಹೊಂದಿರುವ ಮತ್ತು ಅತೃಪ್ತರಾಗಿರುವವರಿಂದ ದೂರವಿರುವುದು ನಮಗೆ ಒಳ್ಳೆಯದು.

ಇದನ್ನೂ ಓದಿ: ಯಶಸ್ಸು, ಶ್ರೀಮಂತಿಕೆ ಬಯಸುವವರು ರಾತ್ರಿ ಮಲಗುವ ಮುನ್ನ ಕೆಲಸಗಳನ್ನು ಮಾಡಲೇಬೇಕು

ಕೋಪಗೊಂಡ ಅಥವಾ ಮುಂಗೋಪದ ಜನರು:  ಆಚಾರ್ಯ ಚಾಣಕ್ಯರು ಕೋಪದ ಸ್ವಭಾವ ಹೊಂದಿರುವ ವ್ಯಕ್ತಿಯನ್ನು ಎಂದಿಗೂ ಹತ್ತಿರ ಸೇರಿಸಬಾರದು ಎಂದು ಸಲಹೆ ನೀಡಿದ್ದಾರೆ. ಮನುಷ್ಯನ ದೊಡ್ಡ ಶತ್ರು ಕೋಪ. ಕೋಪವು ವ್ಯಕ್ತಿಯ ತರ್ಕಿಸುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತದೆ. ಕೋಪಗೊಂಡ ವ್ಯಕ್ತಿಯು ತನ್ನನ್ನು ಮತ್ತು ಇತರರನ್ನು ನೋಯಿಸಿಕೊಳ್ಳುತ್ತಾನೆ. ಈ ವ್ಯಕ್ತಿ ವಿರೋಧಿಗಳಿಗಿಂತ ಹೆಚ್ಚು ಅಪಾಯಕಾರಿ ಆದ್ದರಿಂದ ಇಂತಹ ವ್ಯಕ್ತಿಗಳಿಂದ ದೂರವಿದ್ದಷ್ಟು ಒಳ್ಳೆಯದು.

ಮಾದಕ ವ್ಯಸನಿಗಳು: ಮಾದಕ ವ್ಯಸನಿಗಳಿಗೆ ಸಹಾಯ ಮಾಡದಂತೆ ಆಚಾರ್ಯ ಚಾಣಕ್ಯ ಸಲಹೆ ನೀಡಿದ್ದಾರೆ. ಅಂತಹ ಜನರು ಎಂದಾದರೂ ಸಹಾಯ ಕೇಳಿದರೆ, ನಿರಾಕರಿಸುವುದು ಉತ್ತಮ. ಏಕೆಂದರೆ ಅಂತಹ ಜನರು, ಮಾದಕತೆಯ ಪ್ರಭಾವದಲ್ಲಿ, ಉಳಿದೆಲ್ಲವನ್ನೂ ಮರೆತು ನೀರಿನಂತೆ ಹಣವನ್ನು ಖರ್ಚು ಮಾಡುತ್ತಾರೆ. ಅಲ್ಲದೆ ಇವರಿಂದ ಇತರರಿಗೆ ಹಾನಿಯೇ ಹೆಚ್ಚು. ಆದ್ದರಿಂದ ಅಂತಹ ಜನರಿಗೆ ಎಂದಿಗೂ ಸಹಾಯ ಮಾಡಬಾರದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಮಲಾಕರ ಭಟ್​​​ಗೆ ಮತ್ತೋರ್ವ ಮಹಿಳೆ, ಪಡ್ಡೆ ಹುಡುಗರ ಜತೆ ಸುಚಿತ್ರಾ: ಇಬ್ಬರ ಕಮದಾಟ, ಕಳ್ಳಾಟ ಬಯಲಿಗೆ – Kannada News | Siddapura Vasanth Naik Murder Case: reveals Astrologer kamalakara bhat And Lover suchitra illicit relationship With Others

ಕಾರವಾರ, (ಫೆಬ್ರವರಿ 09): ಸಿದ್ದಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣದ (Vasanth Naik Murder Case) ರೂವಾರಿಗಳಾದ ಕಮಲಾಕರ ಭಟ್ (Kamalakar Bhat) ಮತ್ತು ಸುಚಿತ್ರ (Sucitra) ಗ್ಯಾಂಗ್ ಅಂದರ್ ಆಗಿ ಬರೋಬ್ಬರಿ ಇವತ್ತು ಏಳು ದಿನ. ಈ ‌ನಡುವೆ ಇಬ್ಬರ ಕಳ್ಳಾಟದ ಆಡಿಯೋ, ಪೊಟೋಗಳು ಒಂದೊಂದೆ ಆಗಿ ರಿವೀಲ್ ಆಗುತ್ತಿವೆ. ಹೌದು.. ರೀಲ್ಸ್ ರಾಣಿ ಸುಚಿತ್ರಳ ನವಟಂಕಿ ಆಟಗಳು ಒಂದೆರಡಲ್ಲ, ಇದರ‌ ಬಲೆಯಲ್ಲಿ ಬಿದ್ದು ಮೋಸ‌ಹೋದ‌ ಅದೆಷ್ಟೋ ಯುವಕರ ಗುಂಪೇ ಇದೆ. ಆದ್ರೆ ಮರ್ಯಾದೆಗೆ ಅಂಜಿ ಯಾವುದು ಪ್ರಕರಣ ಬೆಳಕಿಗೆ ಬರುತ್ತಿಲ್ಲ. ಈ ನಡುವೆ ಸುಚಿತ್ರ ಪರ ಪುರುಷರ ಸಹವಾಸ ಮಾಡಿ ವಂಚಿಸಲು ಏನೆಲ್ಲ ಪ್ಲ್ಯಾನ್ ಮಾಡಿದ್ದಳು ಎಂದು ಒಮ್ಮೆ ಕೆದಕಿದ್ರೆ ಒಂದು ದೊಡ್ಡ ಸರಣಿ ಪುಟವೇ ತೆರೆದುಕೊಳ್ಳುತ್ತದೆ. ಮದುವೆ ಆಗಿದ್ದ ಸುಚಿತ್ರಾ ಹುಡುಗರನ್ನ ಬಿಳಿಸಿಕೊಳ್ಳಲು ಮಾಸ್ಟರ್ ಪ್ಲಾನ್ ಮಾಡಿದ್ದಳಂತೆ. ಪಡ್ಡೆ ಹುಡುಗರಿಗಾಗಿ ತನ್ನ ಹೆಸರನ್ನೆ ಬದಲಿಸಿಕೊಂಡಿದ್ದಳಂತೆ ಸುಚಿತ್ರ. ಸುರೇಖಾ ಅಂತ ಇದ್ದ ತನ್ನ ಹೆಸರನ್ನ ಸುಚಿತ್ರಾ ಅಂತ ಮಾಡಿಕೊಂಡಿದ್ದು, ಮದುವೆ ಸರ್ಟಿಫಿಕೇಟ್ ನಲ್ಲಿ ಅವಳದ್ದು ಸುರೇಖಾ ಅಂತ ಹೆಸರಿದೆ, ಆ ಸುರೇಖಾ ನನ್ನ ಅಕ್ಕ ಅಂತ ತನ್ನ ಫೋಟೋ ವನ್ನೆ ತೊರಿಸುತ್ತಿದ್ದಳಂತೆ.

ಜ್ಯೋತಿಷ್ಯ ಹೇಳ್ಕೊಂಡಿದ್ದ ಕಮಲಾಕರ ಭಟ್ರು, ಶಿರಸಿ ಮೂಲದ ಮಹಿಳೆ ಜೊತೆ 9 ವರ್ಷ ಸಂಬಂಧದಲ್ಲಿದ್ರಾ? ಈ ವಿಷ್ಯ ತಿಳಿದು ಸುಚಿತ್ರಾ, ಕಮಲಾಕರ ಭಟ್ರಿಗೆ ಕ್ಲಾಸ್ ತೆಗೆದುಕೊಂಡಿದ್ರಾ? ಭಟ್ರಿಗೆ ಆ ಮಹಿಳೆ ಕರೆ ಮಾಡಿದ್ದಕ್ಕೆ ಸುಚಿತ್ರಾ ಸಿಟ್ಟಿಗೆದ್ದಿದ್ಲಾ? ಇಷ್ಟೆಲ್ಲಾ ಆದ್ಮೇಲೆ ಶಿರಸಿ ಮೂಲದ ಮಹಿಳೆಯನ್ನ ಕಮಲಾಕರ ಭಟ್ರು ದೂರವಿಟ್ಟುಬಿಟ್ರಾ? ಸುಚಿತ್ರಾಗಾಗಿ ಆ ಮಹಿಳೆಗೆ ಕಮಲಾಕರ ಭಟ್ ಅವಾಚ್ಯ ಶಬ್ಧಗಳಿಂದಲೂ ನಿಂದಿಸಿದ್ರಾ? ಎನ್ನುವ ಅನುಮಾನ ಶುರುವಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಆಡಿಯೋವೊಂದು ವೈರಲ್ ಆಗಿದೆ. ಮತ್ತೊಂದೆಡೆ ರೀಲ್ಸ್ ರಾಣಿ ಸುಚಿತ್ರಾ ನೌಟಂಕಿ ಆಟಗಳನ್ನಾಡುತ್ತಿದ್ದಳು ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಕಮಲಾಕರ್ ಭಟ್ ಮಾತ್ರವಲ್ಲ, ಕಲಬುರಗಿಯ ಜಮೀನ್ದಾರನ ಜೊತೆಗೂ ಸುಚಿತ್ರಾ ಲವ್ವಿಡವ್ವಿ

ಪಡ್ಡೆ ಹುಡುಗರಿಗೆ ಗಾಳ ಹಾಕ್ತಿದ್ದ ಸುಚಿತ್ರಾ

ಮದುವೆ ಆಗಿದ್ರೂ ಪಡ್ಡೆ ಹುಡುಗರಿಗೆ ಗಾಳ ಹಾಕುತ್ತಿದ್ದಳಂತೆ. ಇದಕ್ಕಾಗೇ ಸುರೇಖಾ ಅಂತಿದ್ದ ಹೆಸರನ್ನ ಸುಚಿತ್ರಾ ಅಂತ ಬದಲಿಸಿದ್ದಳು. ಸುರೇಖಾ ನನ್ನ ಅಕ್ಕ ಅಂತ ತನ್ನದೇ ಫೋಟೋ ತೋರಿಸಿ, ನಾವಿಬ್ಬರೂ ಟ್ವಿನ್ಸ್ ಆಗಿದ್ವಿ ಎಂದು ಕಥೆ ಕಟ್ಟಿದ್ದಳು. ಅಕ್ಕ ಸಾವನ್ನಪ್ಪಿದ ಬಳಿಕ ಮಕ್ಕಳನ್ನು ನಾನೇ ನೋಡಿಕೊಳ್ಳುತ್ತಿದ್ದೇನೆ. ಈ ಮಕ್ಕಳ ತಂದೆ ಮಹೇಶ್ ಬೆಂಗಳೂರಿನಲ್ಲಿ ಇರ್ತಾರೆ ಎಂದು ಒಂದೊಂದೇ ರೀಲ್ ಬಿಡುತ್ತಾ ಯುವಕರಿಗೆ ಗಾಳ ಹಾಕಿದ್ದಾಳೆ.

ಚೆಂದದ ಯುವಕರ ಫೋಟೋಗೆ ತಾನೇ ಕಮೆಂಟ್ ಹಾಕುತ್ತಿದ್ದ ಸುಚಿತ್ರಾ, ಪ್ರೀತಿ ಹೆಸರಲ್ಲಿ ತಲೆ ಕೆಡಿಸಿ, ತನ್ನ ಬಲೆಗೆ ಹಾಕಿಕೊಂಡು ಸುಲಿಗೆ ಮಾಡುತ್ತಿದ್ದಳು ಎನ್ನಲಾಗಿದೆ. ಇಷ್ಟೇ ಅಲ್ಲದೇ ಯುವಕರ ಬಳಿ ತನ್ನ ಕಷ್ಟವನ್ನೆಲ್ಲಾ ಹೇಳಿಕೊಂಡು, ನೇರವಾಗಿ ತನ್ನ ಮನೆಗೆ ಕರೆಯುತ್ತಿದ್ದಳು ಎನ್ನುವುದು ಸಹ ಗೊತ್ತಾಗಿದೆ.

ಕಮಲಾಕರ್ ಭಟ್ ನ ಪುರಾಣ

ಇನ್ನು ಇವಳದ್ದು ಒಂದು ಕಥೆಯಾದ್ರೆ ಈಕೆಯ ಪ್ರಿಯಕರ ಕಮಲಾಕರ್ ಭಟ್ ನ ಪುರಾಣವೇ ಇನ್ನೊಂದು. ಕಮಲಾಕರ ಭಟ್ ಕಾಮಪುರಾಣದ ಆಡಿಯೋ ರಿಲೀಸ್ ಆಗಿದ್ದು, ಜೀವನ ಪೂರ್ತಿ ಇರುವುದಾದ್ರೆ ಇವಳ ಜೊತೆಗೆ ಎಂದಿರುವ ಕಮಲಾಕರ ಭಟ್, ದಿನ ಬಂದು ಹೋಗುವವರ ತರ ಇವಳಲ್ಲ ಎಂದಿರುವ ಆಡಿಯೋ‌ ಈಗ ಸಖತ್ ವೈರಲ್ ಆಗಿತ್ತಿದೆ. ಸುಚಿತ್ರಳ ಚಪ್ಪಲಿ ಎಷ್ಟು ಪ್ರಮಾಣದಲ್ಲಿದೆ ಅದು ಕೂಡ ನಂಗೆ ಗೊತ್ತು ಎಂದಿರುವ ಭಟ್, ಸುಚಿತ್ರಳನ್ನ ಬಿಟ್ಟುಕೊಡೋಕೆ ಆಗದ ರೀತಿಯಲ್ಲಿ ಮಾತಾಡಿದ್ದಾನೆ. ಆದ್ರೆ ಈತ ಸುಚಿತ್ರಳ ಮೊದಲು ಇನ್ನೊಂದು ಮಹಿಳೆಯ ಜೊತೆ ಸಂಬಂಧ ಹೊಂದಿದ್ದನಂತೆ.

9 ವರ್ಷ ಕಾಲ ಶಿರಸಿ ಮೂಲದ ಮಹಿಳೆಯ ಜೊತೆಗೆ ಇದ್ದ ಕಮಲಾಕರ ಜೀವನದಲ್ಲಿ, ಸುಚಿತ್ರಾ ಎಂಟ್ರಿ ಕೊಟ್ಟ ಬಳಿಕ ಆ ಮಹಿಳೆಯನ್ನ ಕಮಲಾಕರ ದೂರ ಮಾಡಿದ್ದ ಎಂಬ ಆರೋಪ ಇದೆ. ಸುಚಿತ್ರ ಎಂಟ್ರಿಯಾದ ಮೇಲೆ ಕಮಲಾಕರನಿಗೆ ಆಗಾಗ ಕರೆ ಮಾಡುತ್ತಿದ್ದಳಂತೆ ಆ ಶಿರಸಿ ಮಹಿಳೆ. ಮಹಿಳೆ ಕರೆ ಮಾಡುವುದು ಸುಚಿತ್ರಾಗೆ ಗೊತ್ತಾದ ಬಳಿಕ ಭಟ್ ನಿಗೆ ಕ್ಲಾಸ್ ತೊಗೊಂಡಿದ್ದಳಂತೆ. ಸುಚಿತ್ರಾಳ ಭಯಕ್ಕೆ ಭಟ್, ಆಕೆಯ ಮುಂದೆಯೇ ಮಹಿಳೆಗೆ ಆಡಿಯೋ ಮೆಸೆಜ್ ಕಳಿಸಿದ್ದನಂತೆ . ಸುಚಿತ್ರ ಖೆಡ್ಡಾಗೆ ಬಿದ್ದ ಬಳಿಕ ಶಿರಸಿ ಮೂಲದ ಮಹಿಳೆಯನ್ನ ಸಂಪೂರ್ಣವಾಗಿ ತಿರಸ್ಕರಿಸಿದ್ದ ಎಂದು ತಿಳಿದುಬಂದಿದೆ.

ಒಟ್ಟಾರೆ ಸಿದ್ದಾಪುರ ವಸಂತ್ ನಾಯ್ಕ್‌ ಕೊಲೆಯಾದ ಬಳಿಕ ಸುಚಿತ್ರಾ ಮತ್ತು ಕಮಲಾಕರ ಭಟ್ ಹಿಂದಿನ ಒಂದೊಂದೆ ಕಮದಾಟ, ಕಳ್ಳಾಟ ಬಯಲಿಗೆ ಬೀಳುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮೊಡವೆಗಳು ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣವೇನು ಗೊತ್ತಾ? ಅವುಗಳನ್ನು ತಡೆಯಲು ಈ ರೀತಿ ಮಾಡಿ – Kannada News | Stop Acne Breakouts: Simple Skincare Hacks

ಇಂದಿನ ಒತ್ತಡದ ಜೀವನ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಅನಿಯಮಿತ ದಿನಚರಿ, ಮೊದಲು ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ತಡರಾತ್ರಿ ಎಚ್ಚರವಾಗಿರುವುದು, ಹೆಚ್ಚು ಜಂಕ್ ಫುಡ್ ಸೇವಿಸುವುದು, ಕಡಿಮೆ ಪ್ರಮಾಣದಲ್ಲಿ ನೀರು ಕುಡಿಯುವುದು ಮತ್ತು ಮಾನಸಿಕ ಒತ್ತಡ ಸೇರಿದಂತೆ ನಾನಾ ರೀತಿಯ ಕಾರಣಗಳು ಚರ್ಮದ ಆರೋಗ್ಯವನ್ನು ಹಾಳು ಮಾಡುತ್ತದೆ. ಈ ರೀತಿಯ ಅಭ್ಯಾಸಗಳಿಂದ ಮುಖದ ಮೇಲೆ ಆಗಾಗ ಮೊಡವೆಗಳು (Acne) ಕಾಣಿಸಿಕೊಳ್ಳುತ್ತದೆ, ಇದು ಯುವಕರು ಮತ್ತು ಮಹಿಳೆಯರಲ್ಲಿ ಕಂಡುಬರುವ ಸಾಮಾನ್ಯ ಸಮಸ್ಯೆಯಾಗಿದ್ದರೂ ಕೂಡ ಇದನ್ನು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಏಕೆಂದರೆ ಇದು ಕ್ರಮೇಣ ಚರ್ಮದ ನೈಸರ್ಗಿಕ ಹೊಳಪನ್ನು ಕಡಿಮೆ ಮಾಡುತ್ತದೆ. ಅಷ್ಟೇಅಲ್ಲ, ಇದು ಕಲೆಗಳಿಗೆ ಕಾರಣವಾಗಬಹುದು. ಸಮಯಕ್ಕೆ ಸರಿಯಾಗಿ ಪರಿಹರಿಸದಿದ್ದರೆ, ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರೆಯುತ್ತದೆ. ಹಾಗಾಗಿ ಮೊಡವೆ ಕಂಡುಬರುವುದಕ್ಕೆ ಕಾರಣ ಮತ್ತು ಅವುಗಳನ್ನು ತಡೆಯುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ.

ಮೊಡವೆ ಹೆಚ್ಚಾಗಿ ಕಂಡುಬರಲು ಕಾರಣವೇನು?

ಮ್ಯಾಕ್ಸ್ ಆಸ್ಪತ್ರೆಯ ಚರ್ಮರೋಗ ತಜ್ಞೆ ಡಾ. ಸೌಮ್ಯ ಸಚ್‌ದೇವ ಹೇಳುವ ಪ್ರಕಾರ, ಚರ್ಮದ ಮೇಲೆ ಮೊಡವೆ ಹೆಚ್ಚಾಗಲು ಹಲವಾರು ಕಾರಣಗಳಿರಬಹುದು. ಅದರಲ್ಲಿ ಹಾರ್ಮೋನುಗಳ ಬದಲಾವಣೆಯೂ ಒಂದು. ಇದು ಮುಟ್ಟಿನ ಸಮಯದಲ್ಲಿ, ಗರ್ಭಾವಸ್ಥೆಯಲ್ಲಿ ಅಥವಾ ಒತ್ತಡದ ಸಮಯದಲ್ಲಿ ಗಮನಾರ್ಹವಾಗಿ ಕಂಡುಬರುತ್ತದೆ. ಇದರ ಜೊತೆಗೆ, ಹುರಿದ, ಮಸಾಲೆಯುಕ್ತ ಮತ್ತು ತುಂಬಾ ಸಿಹಿ ಆಹಾರಗಳು ಸಹ ಮೊಡವೆ ಹೆಚ್ಚಳಕ್ಕೆ ಕಾರಣವಾಗಬಹುದು. ಜೊತೆಗೆ ಮುಖವನ್ನು ಪದೇ ಪದೇ ಸ್ಪರ್ಶಿಸುವುದು ಅಥವಾ ಕೊಳಕು ಕೈಗಳಿಂದ ಸ್ಪರ್ಶಿಸುವುದು ಕೂಡ ಬ್ಯಾಕ್ಟೀರಿಯಾವನ್ನು ಉತ್ತೇಜಿಸುತ್ತದೆ. ಮೇಕಪ್ ಅನ್ನು ಸರಿಯಾಗಿ ತೆಗೆದುಹಾಕದಿರುವುದು ಮತ್ತು ಎಣ್ಣೆಯುಕ್ತ ಚರ್ಮದ ಮೇಲೆ ಕ್ರೀಮ್‌ಗಳನ್ನು ಹಚ್ಚುವುದು, ನಿದ್ರೆಯ ಕೊರತೆ ಮತ್ತು ಕಡಿಮೆ ನೀರು ಕುಡಿಯುವುದು ಕೂಡ ಮೊಡವೆಗಳ ಸಮಸ್ಯೆಯನ್ನು ಹೆಚ್ಚಿಸಬಹುದು. ಕೆಲವರಲ್ಲಿ, ಆನುವಂಶಿಕ ಕಾರಣಗಳಿಂದಲೂ ಮೊಡವೆಗಳು ಕಾಣಿಸಿಕೊಳ್ಳುತ್ತವೆ.

ಇದನ್ನೂ ಓದಿ: ಹುಡುಗಿಯರೇ… ಈ ರೀತಿ ಮಾಡಿದರೆ ಮುಖದಲ್ಲಿ ಎಷ್ಟೇ ಮೊಡವೆಗಳಿದ್ದರೂ ಮಾಯವಾಗಿ ಮುಖದ ಕಾಂತಿ ಹೆಚ್ಚುತ್ತದೆ

ಮೊಡವೆಯನ್ನು ತಡೆಯುವುದು ಹೇಗೆ?

ಸಾಮಾನ್ಯವಾಗಿ ಮೊಡವೆಗಳನ್ನು ತಡೆಗಟ್ಟಲು, ಮೊದಲು ದಿನಚರಿಯನ್ನು ಸುಧಾರಿಸಿಕೊಳ್ಳಿ. ಪ್ರತಿದಿನ ಸೌಮ್ಯವಾದ ಫೇಸ್ ವಾಶ್‌ನಿಂದ ಮುಖವನ್ನು ಸ್ವಚ್ಛಗೊಳಿಸಿ ಮತ್ತು ಮೇಕಪ್ ತೆಗೆದ ನಂತರವೇ ನಿದ್ರೆ ಮಾಡಿ. ಹುರಿದ ಮತ್ತು ಜಂಕ್ ಫುಡ್ ಅನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿ, ಆಹಾರದಲ್ಲಿ ಹಸಿರು ತರಕಾರಿ ಮತ್ತು ಹಣ್ಣುಗಳನ್ನು ಸೇರಿಸಿ. ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಒತ್ತಡ ಕಡಿಮೆ ಮಾಡಲು ಯೋಗ ಮತ್ತು ವ್ಯಾಯಾಮ ಮಾಡಿ. ನಿಮ್ಮ ಚರ್ಮದ ಪ್ರಕಾರಕ್ಕೆ ಅನುಗುಣವಾಗಿ ಉತ್ಪನ್ನಗಳನ್ನು ಬಳಸಿ. ಮೊಡವೆ ದೀರ್ಘಕಾಲದ ವರೆಗೆ ಗುಣವಾಗದಿದ್ದರೆ ಮನೆಮದ್ದುಗಳನ್ನು ಮಾತ್ರ ಅವಲಂಬಿಸಬೇಡಿ. ಚರ್ಮರೋಗ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chikkaballapur: ಕುಡಿದ ಅಮಲಿನಲ್ಲಿ ಕದಿಯಲು ಹೋದ ಮನೆಯಲ್ಲೇ ಬೆಚ್ಚಗೆ ಮಲಗಿದ ಕಳ್ಳ! – Kannada News | Drunk Thief Naps in Stolen House: Chikkaballapur’s Bizarre Burglary

ಚಿಕ್ಕಬಳ್ಳಾಪುರ, ಫೆಬ್ರವರಿ 09: ಕಳ್ಳತನಕ್ಕೆ ಹೋಗೋ ಖದೀಮರು ಪಕ್ಕಾ ಪ್ಲ್ಯಾನ್​​ ಮಾಡಿಕೊಂಡೇ ಅಖಾಡಕ್ಕಿಳಿಯುತ್ತಾರೆ. ಮನೆಯಲ್ಲಿ ಯಾರಿದ್ದಾರಾ? ಇಲ್ಲವಾ? ಎನ್ನುವ ಮಾಹಿತಿಗಳ ಸಂಗ್ರಹದ ಜೊತೆ ಯಾವ ಸಮಯ ಕಳ್ಳತನಕ್ಕೆ ಸೂಕ್ತ ಎಂಬಿತ್ಯಾದಿ ತಮ್ಮದೇ ಲೆಕ್ಕಾಚಾರಗಳನ್ನು ಹಾಕಿಕೊಂಡು ರಾಬರಿ ನಡೆಸುವ ಅದೆಷ್ಟೋ ಪ್ರಕರಣಗಳ ಬಗ್ಗೆ ನಾವು ಕೇಳಿದ್ದೇವೆ. ಒಂದೇ ಒಂದು ಸಾಕ್ಷಿಯೂ ಪೊಲೀಸರಿಗೆ ಸಿಗದಂತೆ ಎಸ್ಕೇಪ್​​ ಆಗುವ ಘಟನೆಗಳ ಬಗ್ಗೆಯೂ ತಿಳಿದಿದ್ದೇವೆ. ಆದ್ರೆ ಇಲ್ಲೊಬ್ಬ ಖದೀಮ ಎಣ್ಣೆ ನಶೆಯಲ್ಲಿ ಕಳ್ಳತನಕ್ಕೆಂದು ಮನೆಗೆ ನುಗ್ಗಿದ್ದ ವೇಳೆ ನಿದ್ದೆ ಬಂದ ಕಾರಣ ಅಲ್ಲೇ ಬೆಚ್ಚಗೆ ಮಲಗಿ ತಗಲಾಕಿಕೊಂಡಿದ್ದಾನೆ.

ಹೌದು, ಇಂತಹದ್ದೊಂದು ಘಟನೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಸಾಕ್ಷಿಯಾಗಿದೆ. ಇಲ್ಲಿನ ಹಳೇ RTO ಕಚೇರಿ ಬಳಿಯ ಪ್ರೇಮನಾಥ ಎಂಬುವರ ಮನೆಯಲ್ಲಿ ಕಳ್ಳತನ ನಡೆಸಲೆಂದು ಇಬ್ಬರು ಖದೀಮರು ತೆರಳಿದ್ದರು. ಮನೆಯ ಮೇಲಿನ ರೇಕ್ ಕತ್ತರಿಸಿ ಒಳಗೆ ಕೂಡ ನುಗ್ಗಿದ್ದರು. ಬಳಿಕ ಮನೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು, ನಗದು ದೋಚಿ ಓರ್ವ ಕಳ್ಳ ಪರಾರಿಯಾಗಿದ್ದರೆ, ಮತ್ತೊಬ್ಬ ಅದೇ ಮನೆಯಲ್ಲಿ ನಿದ್ದೆಗೆ ಜಾರಿದ್ದಾನೆ. ಇತ್ತ ಮನೆಗೆ ಕಳ್ಳರು ನುಗ್ಗಿರುವ ಅನುಮಾನದಿಂದ ಮಾಲೀಕ ಪ್ರೇಮನಾಥನಿಗೆ ಕರೆ ಮಾಡಿ ನೆರೆ ಮನೆಯವರು ವಿಷಯ ತಿಳಿಸಿದ್ದಾರೆ. ಕೆಲಸದ ನಿಮಿತ್ತ ಹೈದರಾಬಾದ್ ಗೆ ತೆರಳಿದ್ದ ಅವರು, ರಾತ್ರೋ ರಾತ್ರಿ ಮನೆಗೆ ಹಿಂದಿರುಗಿದ್ದಾರೆ. ಇನ್ನು ಮನೆಗೆ ಪ್ರೇಮನಾಥ ಎಂಟ್ರಿಯಾಗ್ತಿದ್ದಂತೆ ಅವರಿಗೆ ಆಶ್ಚರ್ಯವಾಗಿದೆ. ಕಳ್ಳತನಕ್ಕೆಂದು ಬಂದಾತ ಮನೆಯಲ್ಲೇ ಮಲಗಿದ್ದನ್ನು ನೋಡಿದ ಅವರು, ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ವ್ಯಕ್ತಿ ಗೌರಿಬಿದನೂರಿನ ನದಿದಡ ವಾರ್ಡ್​ನ ದೇವರಾಜು ಎಂಬುದು ಗೊತ್ತಾಗಿದ್ದು, ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೊಂದು ದರೋಡೆ; ಫ್ಲಿಪ್‌ಕಾರ್ಟ್​​ನ ಲಕ್ಷಾಂತರ ರೂ ಮೌಲ್ಯದ ವಸ್ತುಗಳ ಕಳ್ಳತನ

ಜ್ಯುವೆಲ್ಲರಿ ದರೋಡೆ ನಡೆಸಿದ್ದ ಆರೋಪಿಗಳ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಮ್​ದೇವ್ ಜ್ಯುವೆಲ್ಲರಿಗೆ ನುಗ್ಗಿ ಗನ್​​ ತೋರಿಸಿ ದರೋಡೆ ನಡೆಸಿದ್ದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅನೂಪ್, ರವಿ, ಅಂಕಿತ್, ಅರುಣ್ ಸೇರಿದಂತೆ ಐವರು ಖಾಕಿ ಬಲೆಗೆ ಬಿದ್ದಿದ್ದು, ಬಂಧಿತರು ರಾಜಸ್ಥಾನ ಮೂಲದವರು ಎಂಬುದು ಗೊತ್ತಾಗಿದೆ. ಈ ಪೈಕಿ ಆರೋಪಿ ಅಂಕಿತ್​​ ಮಾದನಾಯಕನಹಳ್ಳಿ ವಾಸವಿದ್ದು, ಕಚೋರಿ ಮಾರಿ ಜೀವನ ಸಾಗಿಸುತ್ತಿದ್ದ. ಈ ರೀತಿ ಎಷ್ಟು ದಿನ ಜೀವನ ಸಾಗಿಸೋದು ಎಂದು ನಿರ್ಧರಿಸಿ ದರೋಡೆ ಪ್ಲಾನ್ ಮಾಡಿದ್ದ. ಈ ವೇಳೆ ರಾಜಸ್ಥಾನದಲ್ಲಿ ರವಿ ಎಂಬಾತನ ಪರಿಚಯವಾಗಿದ್ದು, ಆತನ ಬಳಿ ಇದ್ದ ಪಿಸ್ತೂಲೇ ಇವರ ಬಂಡವಾಳವಾಗಿತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:14 pm, Mon, 9 February 26

Source link

ಅಂಡರ್-19 ವಿಶ್ವಕಪ್ ತಂಡ ಪ್ರಕಟಿಸಿದ ಐಸಿಸಿ; ಭಾರತದ ಮೂವರಿಗೆ ಅವಕಾಶ – Kannada News | U19 World Cup Team of the Tournament revealed 3 Indians in ICC Team

ಫೆಬ್ರವರಿ 6 ರಂದು ಹರಾರೆಯಲ್ಲಿ ನಡೆದ 2026 ರ ಅಂಡರ್-19 ವಿಶ್ವಕಪ್‌ (U19 World Cup) ಫೈನಲ್‌ನಲ್ಲಿ ಯುವ ಭಾರತ ತಂಡ, ಇಂಗ್ಲೆಂಡ್ (India vs England) ತಂಡವನ್ನು ಸೋಲಿಸಿ 6ನೇ ಬಾರಿಗೆ ವಿಶ್ವಕಪ್ ಗೆದ್ದುಕೊಂಡಿತು. ಭಾರತ ತಂಡ ಇಂಗ್ಲೆಂಡ್ ತಂಡವನ್ನು ಸೋಲಿಸಿ ವಿಶ್ವಕಪ್ ಗೆದ್ದಿದ್ದು ಇದು ಸತತ ಎರಡನೇ ಬಾರಿ. ಭಾರತ ತಂಡದ ಈ ಐತಿಹಾಸಿಕ ಗೆಲುವಿನಲ್ಲಿ ತಂಡದ ಎಲ್ಲಾ ಆಟಗಾರರ ಕೊಡುಗೆ ಪ್ರಮುಖವಾಗಿತ್ತು. ಅದರಲ್ಲೂ ಫೈನಲ್ ಪಂದ್ಯದಲ್ಲಿ 175 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ವಿಶ್ವಕಪ್ ಮುಗಿದ ಮೂರು ದಿನಗಳ ಬಳಿಕ ಐಸಿಸಿ ಈ ಬಾರಿಯ ಅಂಡರ್-19 ವಿಶ್ವಕಪ್​ ತಂಡವನ್ನು ಘೋಷಿಸಿದೆ. ಈ ತಂಡದಲ್ಲಿ ಭಾರತದ ಮೂವರು ಆಟಗಾರರು ಕೂಡ ಸ್ಥಾನ ಪಡೆದಿದ್ದಾರೆ.

ಐಸಿಸಿ ವಿಶ್ವಕಪ್ ತಂಡದಲ್ಲಿ 12 ಆಟಗಾರರು

ಪ್ರತಿ ಐಸಿಸಿ ಈವೆಂಟ್ ಮುಗಿದ ಬಳಿಕ ಐಸಿಸಿ, ಟೂರ್ನಮೆಂಟ್ ತಂಡವನ್ನು ಪ್ರಕಟಿಸುತ್ತದೆ. ಆ ಪ್ರಕಾರ ಐಸಿಸಿ, ಅಂಡರ್-19 ವಿಶ್ವಕಪ್‌ನ ಅತ್ಯುತ್ತಮ ತಂಡವನ್ನು ಘೋಷಿಸಿದೆ. ಐಸಿಸಿ ಈ ತಂಡದಲ್ಲಿ ವೈಭವ್ ಸೂರ್ಯವಂಶಿ ಕೂಡ ಸ್ಥಾನ ಪಡೆದಿದ್ದಾರೆ. ವೈಭವ್ ಹೊರತುಪಡಿಸಿ ಇಡೀ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡಿದ 12 ಆಟಗಾರರನ್ನು ಆಯ್ಕೆ ಮಾಡಿ ಐಸಿಸಿ ತಂಡವನ್ನು ಪ್ರಕಟಿಸಿದೆ.

ಭಾರತದ ಮೂವರಿಗೆ ಸ್ಥಾನ

12 ಸದಸ್ಯರ ತಂಡವನ್ನು ಇಯಾನ್ ಬಿಷಪ್, ಆಂಡಿ ಫ್ಲವರ್ ಮತ್ತು ಟೆಲ್ಫೋರ್ಡ್ ವೈಸ್ ಅವರನ್ನೊಳಗೊಂಡ ಮೂವರು ಸದಸ್ಯರ ಸಮಿತಿಯು ಆಯ್ಕೆ ಮಾಡಿದೆ. ವೈಭವ್ ಜೊತೆಗೆ, 12 ಸದಸ್ಯರ ತಂಡದಲ್ಲಿ ಇಬ್ಬರು ಭಾರತೀಯರಾದ ಕನಿಷ್ಕ್ ಚೌಹಾಣ್ ಮತ್ತು ಹೆನಿಲ್ ಪಟೇಲ್ ಕೂಡ ಇದ್ದಾರೆ. ಇಂಗ್ಲೆಂಡ್ ನಾಯಕ ಥಾಮಸ್ ರೆವ್ ಅವರನ್ನು ಟೂರ್ನಮೆಂಟ್ ತಂಡದ ನಾಯಕರನ್ನಾಗಿಯೂ ಆಯ್ಕೆ ಮಾಡಲಾಗಿದೆ.

ಭಾರತ- ಇಂಗ್ಲೆಂಡ್​ನಿಂದ ಅತ್ಯಧಿಕ ಆಟಗಾರರು

ಐಸಿಸಿ ಆಯ್ಕೆ ಮಾಡಿರುವ ತಂಡದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡದಿಂದ ತಲಾ 3 ಆಟಗಾರರು ಆಯ್ಕೆಯಾಗಿದ್ದಾರೆ. ಉಳಿದಂತೆ ಅಫ್ಘಾನಿಸ್ತಾನ ತಂಡದಿಂದ ಇಬ್ಬರು ಆಟಗಾರರು, ಶ್ರೀಲಂಕಾ, ಆಸ್ಟ್ರೇಲಿಯಾ, ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ ತಂಡದಿಂದ ತಲಾ ಒಬ್ಬರು ಆಟಗಾರರನ್ನು ಈ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅಚ್ಚರಿಯ ಸಂಗತಿಯೆಂದರೆ ಈ ತಂಡದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾದಂತಹ ತಂಡಗಳ ಒಬ್ಬ ಆಟಗಾರನ್ನು ಸ್ಥಾನ ಪಡೆದಿಲ್ಲ.

ಐಸಿಸಿ ಅಂಡರ್-19 ವಿಶ್ವಕಪ್ ತಂಡ

1. ವೈಭವ್ ಸೂರ್ಯವಂಶಿ (ಭಾರತ)

2. ವೀರನ್ ಚಾಮುದಿತ (ಶ್ರೀಲಂಕಾ)

3. ಫೈಸಲ್ ಖಾನ್ ಶಿನೋಜಾಡಾ (ಅಫ್ಘಾನಿಸ್ತಾನ)

4. ಥಾಮಸ್ ರೆವ್ (ನಾಯಕ, ವಿಕೆಟ್ ಕೀಪರ್) (ಇಂಗ್ಲೆಂಡ್)

5. ಆಲಿವರ್ ಪೀಕ್ (ಆಸ್ಟ್ರೇಲಿಯಾ)

6. ಬೆನ್ ಮೇಯಸ್ (ಇಂಗ್ಲೆಂಡ್)

7. ಕಾನಿಷ್ಕ್ ಚೌಹಾಣ್ (ಭಾರತ)

8. ನೂರಿಸ್ತಾನಿ ಒಮರ್ಜೈ (ಅಫ್ಘಾನಿಸ್ತಾನ)

9. ವಿಟೆಲ್ ಲಾವ್ಸ್ (ವೆಸ್ಟ್ ಇಂಡೀಸ್)

10. ಅಲಿ ರಜಾ (ಪಾಕಿಸ್ತಾನ)

11. ಮನ್ನಿ ಲುಮ್ಸ್ಡೆನ್ (ಇಂಗ್ಲೆಂಡ್)

12. ಹೆನಿಲ್ ಪಟೇಲ್ (ಭಾರತ).

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಿಡ್ನಿ ಸಮಸ್ಯೆಗಳಿಗೆ ರಾಮಬಾಣವಾಗಬಲ್ಲ ಮನೆಮದ್ದುಗಳು; ಬಾಬಾ ರಾಮದೇವ್ ಸಲಹೆ ಇದು – Kannada News | Kidney stones and other issues, Baba Ramdev suggests ayurvedic and home remedies

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಕಲ್ಲುಗಳು, ಉರಿಯೂತ ಮತ್ತು ಕಿಡ್ನಿ ಹಾನಿಯಂತಹ ಮೂತ್ರಪಿಂಡದ ಸಮಸ್ಯೆಗಳು (Kidney problems) ಸಾಮಾನ್ಯವಾಗಿದೆ. ನೀರಿನ ಕೊರತೆ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಅತಿಯಾದ ಕಬ್ಬಿಣದ ಮಟ್ಟಗಳು ಮೂತ್ರಪಿಂಡದ ಸಮಸ್ಯೆಗಳಿಗೆ ಕಾರಣವಾಗಬಹುದು. ಮೂತ್ರಪಿಂಡದ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸದಿದ್ದರೆ, ಅವು ಗಂಭೀರ ಕಾಯಿಲೆಗಳಾಗಿ ಪರಿಣಮಿಸಬಹುದು. ಮೂತ್ರಪಿಂಡದ ಸಮಸ್ಯೆಗಳನ್ನು ನಿವಾರಿಸಲು ಹಲವು ಚಿಕಿತ್ಸೆಗಳು ಮತ್ತು ಔಷಧಿಗಳು ಲಭ್ಯವಿದ್ದರೂ, ಆಯುರ್ವೇದ ವಿಧಾನಗಳನ್ನು ಬಳಸಿಕೊಂಡು ಅವುಗಳಿಗೆ ಚಿಕಿತ್ಸೆ ನೀಡಬಹುದು. ಈ ಆಯುರ್ವೇದ ವಿಧಾನವು ಹೆಚ್ಚು ಪರಿಣಾಮಕಾರಿಯಾಗಿದ್ದು, ಯಾವುದೇ ಅಡ್ಡಪರಿಣಾಮಗಳನ್ನು ಹೊಂದಿಲ್ಲ ಎಂದು ಹೇಳಲಾಗುತ್ತದೆ.

ಆಯುರ್ವೇದ ತಜ್ಞ ಮತ್ತು ಯೋಗ ಗುರು ಬಾಬಾ ರಾಮದೇವ್ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರಗಳನ್ನು ನೀಡುತ್ತಾರೆ. ಈ ಬಾರಿ, ಯೋಗ ಗುರು ಬಾಬಾ ರಾಮ್‌ದೇವ್ ಮೂತ್ರಪಿಂಡ ಕಾಯಿಲೆಗೆ ಪರಿಣಾಮಕಾರಿ ಎನಿಸುವ ಜ್ಯೂಸ್​ವೊಂದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ರಸವು ಮೂತ್ರಪಿಂಡ ಸಮಸ್ಯೆಗಳನ್ನು ಗುಣಪಡಿಸುವ ಶಕ್ತಿ ಹೊಂದಿದೆ. ಮನೆಮದ್ದಾಗಿರುವ ಇದರ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Hair Fall Treatment: ಕೂದಲು ಉದುರುವಿಕೆ ನಿಲ್ಲಿಸಲು ಮನೆಮದ್ದುಗಳು: ಸರಳ ಪರಿಹಾರ ಸೂಚಿಸುವ ಬಾಬಾ ರಾಮದೇವ್

ಬಾಬಾ ರಾಮದೇವ್ ತಿಳಿಸಿದ ಮನೆಮದ್ದು ಇದೇ

ಬಾಬಾ ರಾಮದೇವ್ ಅವರು ಕಿಡ್ನಿ ಸ್ಟೋನ್ ಮತ್ತು ಉರಿಯೂತಕ್ಕೆ ವಿವಿಧ ಮನೆಮದ್ದುಗಳನ್ನು ಸೂಚಿಸಿದ್ದಾರೆ. ಇವು ಯಾವುದೇ ಅಡ್ಡಪರಿಣಾಮಗಳಿಲ್ಲದೆ ಪರಿಣಾಮಕಾರಿತ್ವವನ್ನು ತೋರಿಸುತ್ತವೆ. ಇವುಗಳಲ್ಲಿ ಬೇವು, ಅರಳಿ ಎಲೆಯ ರಸ, ಕಸ್ನಿ, ಗೋಖ್ರು, ಕೊತ್ತಂಬರಿ ಮತ್ತು ಪುದೀನದಂತಹ ಗಿಡಮೂಲಿಕೆಗಳ ಮಿಶ್ರಣವೂ ಸೇರಿದೆ. ಬಾಬಾ ರಾಮದೇವ್ ಅವರ ಪ್ರಕಾರ, ಪ್ರತಿದಿನ ತಮ್ಮ ಆಹಾರದಲ್ಲಿ ಕೊತ್ತಂಬರಿ ಸೊಪ್ಪು ಸೇವಿಸುವ ಜನರು ಆರೋಗ್ಯಕರ ಮೂತ್ರಪಿಂಡಗಳನ್ನು ಹೊಂದಿರುತ್ತಾರೆ. ವಾಸ್ತವವಾಗಿ, ಕೊತ್ತಂಬರಿ ಸೊಪ್ಪಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ಸ್, ವಿಟಮಿನ್ ಎ, ಸಿ, ಕೆ ಮತ್ತು ಮಿನರಲ್​ಗಳು ಮೂತ್ರಪಿಂಡಗಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ, ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ.

ಕಿಡ್ನಿಸ್ಟೋನ್ ತಡೆಗಟ್ಟಲು ಪರಿಣಾಮಕಾರಿ ಮಾರ್ಗಗಳು

ಯಾರಿಗಾದರೂ ಮೂತ್ರಪಿಂಡ, ಪಿತ್ತಕೋಶ (Gall Bladder) ಅಥವಾ ಮೇದೋಜ್ಜೀರಕ ಗ್ರಂಥಿಯ (Pancreas) ಕಲ್ಲು ಇದ್ದರೆ, ಅದನ್ನು ತೆಗೆದುಹಾಕಲು ನೀವು ಪ್ರತಿದಿನ ಹುರುಳಿಕಾಳು (Horse gram) ಸೇವಿಸಬಹುದು ಎಂದು ರಾಮದೇವ್ ವಿವರಿಸುತ್ತಾರೆ. ವಾರಕ್ಕೊಮ್ಮೆಯಾದರೂ ಹುರುಳಿಕಾಳನ್ನು ತಿನ್ನುವುದರಿಂದ ಮೂತ್ರಪಿಂಡದ ಕಲ್ಲುಗಳು ನಿರ್ಮಾಣವಾಗುವುದನ್ನು ತಡೆಯಬಹುದು.

ಇದನ್ನೂ ಓದಿ: ವಾತ ದೋಷದಿಂದ ಏನು ಆರೋಗ್ಯ ಸಮಸ್ಯೆ, ನಿವಾರಣೆ ಹೇಗೆ? ಬಾಬಾ ರಾಮದೇವ್ ಸಲಹೆ ಕೇಳಿ

ಮೂತ್ರಪಿಂಡದ ಕೆಲಸಕ್ಕೆ ಸಹಾಯವಾಗುವ ಬಾರ್ಲಿ

ಮೂತ್ರಪಿಂಡದ ಕಾರ್ಯವನ್ನು ಸಕ್ರಿಯವಾಗಿ ನಿರ್ವಹಿಸಲು ಬಾರ್ಲಿ ಹಿಟ್ಟಿನ ರೊಟ್ಟಿ ತುಂಬಾ ಪ್ರಯೋಜನಕಾರಿ. ಬಾಬಾ ರಾಮದೇವ್ ಅವರ ಪ್ರಕಾರ, ವಾರಕ್ಕೆ ಒಮ್ಮೆ ಅಥವಾ ಎರಡು ಬಾರಿ ಬಾರ್ಲಿ ಹಿಟ್ಟಿನ ರೊಟ್ಟಿ ತಿನ್ನುವುದರಿಂದ ನಿಮ್ಮ ಕಿಡ್ನಿಗಳು ಆರೋಗ್ಯವಾಗಿರುತ್ತವೆ ಮತ್ತು ಮೂತ್ರಪಿಂಡದ ಕಾಯಿಲೆಯ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ಮಧುಮೇಹಿಗಳು ಈ ಜ್ಯೂಸ್ ಕುಡಿಯಲೇಬೇಕು

ಬಾಬಾ ರಾಮದೇವ್ ಅವರು ಹಾಗಲಕಾಯಿ ರಸವನ್ನು ಕುಡಿಯಲು ಜನರಿಗೆ ಸಲಹೆ ನೀಡುತ್ತಾರೆ. ಹಾಗಲಕಾಯಿ ರಸವನ್ನು ಕುಡಿಯುವುದರಿಂದ ಹೊಟ್ಟೆಯು ಶುದ್ಧವಾಗುತ್ತದೆ ಎಂದು ಅವರು ಹೇಳುತ್ತಾರೆ. ಇದಲ್ಲದೆ, ಇದು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಹಾಗಲಕಾಯಿ ರಸ ಕುಡಿಯಲು ತುಂಬಾ ಕಹಿ ಎನಿಸಿದ್ದರೆ, ಅದಕ್ಕೆ ಟೊಮೆಟೊ ಸೇರಿಸಬಹುದು. ರಾಮದೇವ್ ಪ್ರಕಾರ, ವಾರಕ್ಕೊಮ್ಮೆಯಾದರೂ ಹಾಗಲಕಾಯಿ ರಸವನ್ನು ಕುಡಿಯುವುದರಿಂದ ಮಧುಮೇಹದ ಅಪಾಯ ಕಡಿಮೆಯಾಗುತ್ತದೆ.

ಇನ್ನಷ್ಟು ಲೈಫ್​ಸ್ಟೈಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ? – Kannada News | Is Gilli Nata talking to Kavya Shaiva on phone everyday after Bigg Boss Kannada 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada) ಶೋನಲ್ಲಿ ಗಿಲ್ಲಿ ನಟ ಅವರು ಕಾವ್ಯಾ ಶೈವ ಜೊತೆ ಕ್ಲೋಸ್ ಆಗಿದ್ದರು. ಶೋ ಮುಗಿದ ನಂತರವೂ ಆ ಸ್ನೇಹ ಮುಂದುವರಿದಿದೆ. ಈಗ ಗಿಲ್ಲಿ ನಟ ಅಭಿನಯದ ‘ಸೂಪರ್ ಹಿಟ್’ ಸಿನಿಮಾದ ಸುದ್ದಿಗೋಷ್ಠಿ ಸೋಮವಾರ (ಫೆ.9) ನಡೆಯಿತು. ಆ ಬಳಿಕ ಅವರಿಗೆ ಕಾವ್ಯಾ (Kavya Shaiva) ಬಗ್ಗೆ ಪ್ರಶ್ನೆ ಎದುರಾಯಿತು. ‘ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದೀರಂತೆ ಹೌದಾ?’ ಎಂದು ಪ್ರಶ್ನಿಸಲಾಯಿತು. ಅದಕ್ಕೆ ಗಿಲ್ಲಿ ಅವರು ಜಾಣತನದ ಉತ್ತರ ನೀಡಿದರು. ‘ನಿಮ್ಮ ಜೊತೆಯೂ ಸುಮಾರು ಸಲ ಮಾತನಾಡಿದ್​ದೇನೆ. ನೀವು ಎಷ್ಟೋ ಸಲ ನನಗೆ ಫೋನ್ ಮಾಡಿದ್ದೀರಿ. ನಾನು ಕೂಡ ಮಾಡಿದ್ದೇನೆ’ ಎಂದು ಗಿಲ್ಲಿ ನಟ (Gilli Nata) ಹೇಳಿದರು. ಆ ಮೂಲಕ ಕಾವ್ಯಾ ಜೊತೆಗಿನ ತಮ್ಮ ಮಾತಕಥೆ ತಂಬ ಸಹಜವಾದದ್ದು ಎಂಬರ್ಥದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಆ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version