ಬಿಸಿಲ ಬೇಗೆಗೆ ಬೆಂದ ಬೆಂಗಳೂರು: ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್! – Kannada News | Bengaluru Heatwave: High Demand for ACs, Coolers, and Earthen Pots as Temperatures Soar

ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್!

ಬೆಂಗಳೂರು, ಏಪ್ರಿಲ್ 28: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ (Weather) ಹೆಚ್ಚಾಗುತ್ತಿದ್ದು, ತಾಪಮಾನ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಸುಡುವ ಬಿಸಿಲಿನಿಂದ ಹೈರಾಣಾಗಿರುವ ನಗರದ ಜನತೆ ಈಗ ‘ಕೂಲ್’ ಆಗಿರಲು ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಮಣ್ಣಿನ ಉತ್ಪನ್ನಗಳ ಮೊರೆ ಹೋಗುತ್ತಿದ್ದಾರೆ. ಏಪ್ರಿಲ್ ತಿಂಗಳ ಆರಂಭದಲ್ಲೇ ಸೆಕೆ ತಾಳಲಾರದೆ ಜನರು ಎಸಿ, ಕೂಲರ್ ಮತ್ತು ಮಣ್ಣಿನ ಮಡಿಕೆಗಳನ್ನು ಖರೀದಿಸಲು ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಾರೆ.

ಶೋರೂಮ್‌ಗಳಲ್ಲಿ ಸ್ಟಾಕ್ ಖಾಲಿ

ನಗರದ ಎಲೆಕ್ಟ್ರಾನಿಕ್ ಶೋರೂಮ್‌ಗಳಲ್ಲಿ ಎಸಿ ಮತ್ತು ಕೂಲರ್‌ಗಳಿಗೆ ಹಿಂದೆಂದೂ ಇಲ್ಲದ ಬೇಡಿಕೆ ಸೃಷ್ಟಿಯಾಗಿದೆ. ಮನೆಯೊಳಗೆ ಫ್ಯಾನ್ ಇದ್ದರೂ ಬೆವರಿನಿಂದ ಮುಕ್ತಿ ಸಿಗದ ಕಾರಣ, ಗ್ರಾಹಕರು ಬಜೆಟ್‌ಗೆ ತಕ್ಕಂತೆ ಕೂಲರ್ ಅಥವಾ ಎಸಿ ಖರೀದಿಸಲು ಮುಗಿಬೀಳುತ್ತಿದ್ದಾರೆ. ಆದರೆ, ಬೇಡಿಕೆ ವಿಪರೀತವಾಗಿರುವ ಕಾರಣ ಹಲವು ಕಡೆಗಳಲ್ಲಿ ಸ್ಟಾಕ್ ಖಾಲಿಯಾಗಿದ್ದು, ಹೊಸ ಉಪಕರಣಗಳಿಗಾಗಿ ಗ್ರಾಹಕರು ಒಂದು ವಾರ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಹಕರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ

ಬಡವರ ಫ್ರಿಡ್ಜ್‌ಗೆ ಭರ್ಜರಿ ಬೇಡಿಕೆ

ಒಂದೆಡೆ ಆಧುನಿಕ ಉಪಕರಣಗಳ ಹವಾ ಇದ್ದರೆ, ಇನ್ನೊಂದೆಡೆ ಪರಿಸರ ಸ್ನೇಹಿ ‘ಮಣ್ಣಿನ ಮಡಿಕೆ’ಗಳ ವ್ಯಾಪಾರವೂ ಚೇತರಿಸಿಕೊಂಡಿದೆ. ‘ಬಡವರ ಫ್ರಿಡ್ಜ್’ ಎಂದೇ ಕರೆಯಲ್ಪಡುವ ಮಣ್ಣಿನ ಮಡಿಕೆಗಳು, ಜಗ್ಗುಗಳು ಹಾಗೂ ಬಾಟಲಿಗಳಿಗೆ ಈಗ ಎಲ್ಲಿಲ್ಲದ ಬೇಡಿಕೆ ಬಂದಿದೆ. ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿರುವ ಕಾರಣ ಜನರು ಮಡಿಕೆ ನೀರನ್ನೇ ಹೆಚ್ಚು ಇಷ್ಟಪಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲವಾದರೂ, ಕುಂಬಾರರು ಮತ್ತು ವ್ಯಾಪಾರಿಗಳ ಮುಖದಲ್ಲಿ ಲಾಭದ ಮಂದಹಾಸ ಮೂಡಿದೆ.

ವರದಿ: ಅರುಣ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Breaking Engagement: ಶಾಸ್ತ್ರೋಕ್ತವಾಗಿ ಎಂಗೇಜ್​ಮೆಂಟ್ ಆಗಿ ಮದುವೆಯಾಗದಿದ್ರೆ ದೋಷ ಕಾಡುತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Nischaya Tambula: The Spiritual Impact of Breaking an Engagement in Sanatana Dharma

“ಮ್ಯಾರೇಜಸ್ ಆರ್ ಮೇಡ್ ಇನ್ ಹೆವೆನ್” ಎಂಬ ನುಡಿಯಂತೆ, ವಿವಾಹ ಬಂಧವು ಕೇವಲ ಮಾನವ ಸಂಬಂಧವಲ್ಲ, ಅದೊಂದು ದೈವಿಕ ಸಂಪರ್ಕ. ಮನುಷ್ಯನ ಜೀವನದಲ್ಲಿ ವಿವಾಹವು ಒಂದು ಪ್ರಮುಖ ಪರಿವರ್ತನೆಯ ಕಾಲವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿವಾಹ ಮತ್ತು ಅದರ ಪೂರ್ವಭಾವಿ ಸಂಸ್ಕಾರಗಳಿಗೆ ನೀಡುವ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ. ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದಾಗಿ ವಾಗ್ದಾನಗಳ ಮಹತ್ವವನ್ನು ಮರೆಯಲಾಗುತ್ತಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ನಿಶ್ಚಿತಾರ್ಥ (ನಿಶ್ಚಯ ತಾಂಬೂಲ) ಪ್ರಕ್ರಿಯೆಗೆ ಬಂದಾಗ, ಹುಡುಗ-ಹುಡುಗಿಯ ಕುಟುಂಬಗಳು ಒಪ್ಪಿಗೆ ನೀಡಿ, ಮಾತುಕತೆ ಮುಂದುವರಿಸಿ ಅಥವಾ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಿ ವಾಗ್ದಾನ ಮಾಡುತ್ತಾರೆ. ಈ ವಾಗ್ದಾನಕ್ಕೆ ಭಗವಂತನೇ ಸಾಕ್ಷಿಯಾಗಿರುತ್ತಾನೆ. ಯಾವುದೇ ಕಾಗದಪತ್ರಗಳಿಲ್ಲದೆ ಮಾಡುವ ಈ ಪ್ರತಿಜ್ಞೆಗೆ ಅತೀವ ಪಾವಿತ್ರತೆಯಿದೆ. ಆದರೆ, ನಿಶ್ಚಯ ತಾಂಬೂಲವನ್ನು ಸ್ವೀಕರಿಸಿ, ನಂತರ ಯಾವುದೇ ಸಬೂಬುಗಳು ಅಥವಾ ಅನುಮಾನಗಳನ್ನು ಮುಂದಿಟ್ಟು ವಿವಾಹವನ್ನು ನಿರಾಕರಿಸಿದರೆ, ಅದು ಭಾರೀ ದೋಷಗಳಿಗೆ ಕಾರಣವಾಗುತ್ತದೆ.

ನಿಶ್ಚಯ ತಾಂಬೂಲದ ಸಮಯದಲ್ಲಿ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು, ತೆಂಗಿನಕಾಯಿ, ಹೂವುಗಳು, ಅರಿಶಿನ ಮತ್ತು ಕುಂಕುಮಗಳಂತಹ ಮಂಗಳಕರ ವಸ್ತುಗಳನ್ನು ಬಳಸಲಾಗುತ್ತದೆ. ಈ ಪ್ರತಿಯೊಂದು ವಸ್ತುವಿಗೂ ದೈವಿಕ ಪ್ರಾಮುಖ್ಯತೆಯಿದೆ. ವೀಳ್ಯದೆಲೆಯಲ್ಲಿ ಸಾಕ್ಷಾತ್ ಪಾರ್ವತಿ ದೇವಿಯ ಸಾನಿಧ್ಯವಿರುತ್ತದೆ. ಬಾಳೆಹಣ್ಣು ಮಂಗಳಕರ ಫಲವನ್ನು ಪ್ರತಿನಿಧಿಸುತ್ತದೆ. ತೆಂಗಿನಕಾಯಿಯನ್ನು “ಪೂರ್ಣ ಫಲ” ಎಂದು ಕರೆಯಲಾಗುತ್ತದೆ. ಅಡಿಕೆ ಮಂಗಳಕರವಾದ ವಸ್ತುವಾಗಿದೆ. ಅರಿಶಿನ ಮತ್ತು ಕುಂಕುಮಗಳಲ್ಲಿ ಮಹಾಕಾಳಿಯ ಸ್ವರೂಪ ಅಡಗಿದೆ ಎಂದು ನಂಬಲಾಗಿದೆ. ಕೇವಲ ಅರಿಶಿನ ಕುಂಕುಮವನ್ನು ಮಂತ್ರಿಸಿ ಯಾವುದೇ ಕಾರ್ಯಕ್ಕೆ ಬಳಸಿದರೆ ಅದು ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಸನಾತನ ಸಂಸ್ಕೃತಿಯಲ್ಲಿದೆ. ಇಷ್ಟೆಲ್ಲಾ ಮಂಗಳ ದ್ರವ್ಯಗಳು ಮತ್ತು ಸುಮಂಗಲಿಯರು ಇರುವ ಒಂದು ಕಾರ್ಯಕ್ರಮದಲ್ಲಿ ಸರ್ವ ದೇವತೆಗಳು ಸಹ ಸಾಕ್ಷಿಯಾಗಿರುತ್ತಾರೆ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಅಂತಹ ಪವಿತ್ರವಾದ ನಿಶ್ಚಯ ತಾಂಬೂಲವನ್ನು ಒಪ್ಪಿ, ನಂತರ ತಿರಸ್ಕರಿಸಿದರೆ, ಅದನ್ನು ಮಹಾಪಾಪ ಎಂದು ಪರಿಗಣಿಸಲಾಗುತ್ತದೆ. ಈ ಪಾಪದಿಂದಾಗಿ ವ್ಯಕ್ತಿಯ ಕುಟುಂಬದಲ್ಲಿ ಹಲವು ದೋಷಗಳು ಅಂಟಿಕೊಳ್ಳುತ್ತವೆ. ತಿರಸ್ಕರಿಸಿದ ಗಂಡಾಗಲಿ ಅಥವಾ ಹೆಣ್ಣಾಗಲಿ, ಅವರ ಜೀವನದ ಕೊನೆಯ ಭಾಗದಲ್ಲಿ ಅತಿ ಹೆಚ್ಚು ದೋಷಗಳನ್ನು ಎದುರಿಸುತ್ತಾರೆ. ಇದು ಕೇವಲ ವ್ಯಕ್ತಿಗಳಿಗೆ ಕೊಟ್ಟ ವಾಗ್ದಾನ ಭಂಗವಲ್ಲ, ದೈವಿಕ ಶಕ್ತಿಗಳಿಗೇ ಮಾಡಿದ ಅಗೌರವ. ಇದರ ಫಲವಾಗಿ ಆರೋಗ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ, ಅದೃಷ್ಟ ಕುಂದುತ್ತದೆ, ಸ್ಥಾನಪಲ್ಲಟಗಳು ಸಂಭವಿಸುತ್ತವೆ. ಮುಂದಿನ ದಿನಗಳಲ್ಲಿ ಕುಲದೇವರ ಅಸಮಾಧಾನಕ್ಕೂ ಇದು ಕಾರಣವಾಗುತ್ತದೆ.

ಅನೇಕರು ತಮ್ಮ ಜಾತಕ ಚೆನ್ನಾಗಿದ್ದರೂ, ಒಳ್ಳೆ ಕೆಲಸಗಳನ್ನು ಮಾಡುತ್ತಿದ್ದರೂ, ಅದೃಷ್ಟ ಕೈಕೊಟ್ಟಿದೆ ಎಂದು ಹೇಳುತ್ತಾರೆ. ಇದಕ್ಕೆ ಮುಖ್ಯ ಕಾರಣ, ನಿಶ್ಚಯ ತಾಂಬೂಲದಂತಹ ಪವಿತ್ರ ವಾಗ್ದಾನಗಳನ್ನು ಮುರಿದಿರುವುದು ಆಗಿರಬಹುದು. ಸನಾತನ ಧರ್ಮದ ನಂಬಿಕೆಗಳ ಪ್ರಕಾರ, “ಮಾಡಿದ್ದುಣ್ಣೋ ಮಾರಾಯ” ಎನ್ನುವಂತೆ, ಈ ಕರ್ಮದ ಫಲವನ್ನು ಅನುಭವಿಸಲೇಬೇಕು. ಇದು ಭಗವಂತನ ಶಿಕ್ಷೆ, ಎಲ್ಲಾ ಶಿಕ್ಷೆಗಳಿಗಿಂತ ದೊಡ್ಡದು. ಆದ್ದರಿಂದ, ಗಂಡಾಗಲಿ ಅಥವಾ ಹೆಣ್ಣಾಗಲಿ, ನಿಶ್ಚಯ ತಾಂಬೂಲವನ್ನು ಸ್ವೀಕರಿಸುವ ಮೊದಲು ಕೂಲಂಕಷವಾಗಿ, ಎಲ್ಲವನ್ನೂ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದು ಅವಶ್ಯಕ. ಒಮ್ಮೆ ಒಪ್ಪಿಕೊಂಡ ನಂತರ, ಅದನ್ನು ತಿರಸ್ಕರಿಸಬಾರದು. ಇಲ್ಲವಾದರೆ, ಕುಲದೇವರ ಅಪವಾದಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಂಜಾಬ್‌ನಲ್ಲಿ ಸ್ಫೋಟ, ರೈಲ್ವೆ ಹಳಿಗೆ ಹಾನಿ, ಅಪರಿಚಿತ ಶವ ಪತ್ತೆ – Kannada News | Patiala Railway Track Explosion: Damaged Line, Dead Body Found, Probe On

ಪಟಿಯಾಲ, ಏಪ್ರಿಲ್ 28: ಪಂಜಾಬ್‌ನ ಪಟಿಯಾಲದಲ್ಲಿ ಸೋಮವಾರ ತಡರಾತ್ರಿ ಸ್ಫೋಟ(Blast) ಸಂಭವಿಸಿದ್ದು  ರೈಲ್ವೆ ಹಳಿ ಹಾನಿಗೊಳಗಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಂಭು-ಅಂಬಾಲ ರೈಲು ಹಳಿಯಲ್ಲಿ ಸ್ಫೋಟದ ಸ್ಥಳದ ಬಳಿ ಒಂದು ಮೃತದೇಹ ಪತ್ತೆಯಾಗಿದ್ದು, ತನಿಖೆ ಆರಂಭಿಸಲಾಗಿದೆ. ಆದರೆ, ಸ್ಫೋಟಕ್ಕೆ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಪೊಲೀಸರ ಪ್ರಕಾರ, ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಸರಕು ರೈಲುಗಳಿಗೆ ಮೀಸಲಾಗಿರುವ ರೈಲ್ವೆ ಹಳಿಯ ಬಳಿ ಸ್ಫೋಟ ಸಂಭವಿಸಿದೆ.

ಸ್ಫೋಟದ ನಂತರ, ಪೊಲೀಸ್ ಉಪ ಮಹಾನಿರ್ದೇಶಕ (ಡಿಐಜಿಪಿ) ಮತ್ತು ಪಟಿಯಾಲ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದರು.
ಸರ್ಕಾರಿ ರೈಲ್ವೆ ಪೊಲೀಸರು ಮತ್ತು ರೈಲ್ವೆ ರಕ್ಷಣಾ ಪಡೆ ತಂಡಗಳು ಕೂಡ ತನಿಖೆಗಾಗಿ ಸ್ಥಳಕ್ಕೆ ತಲುಪಿದವು. ವಿಧಿವಿಜ್ಞಾನ ತಜ್ಞರ ತಂಡವೂ ಮಾದರಿಗಳನ್ನು ಸಂಗ್ರಹಿಸಲು ಅಲ್ಲಿಗೆ ತಲುಪಿತ್ತು.

ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ ಎಂದು ಪಟಿಯಾಲ ಎಸ್‌ಎಸ್‌ಪಿ ವರುಣ್ ಶರ್ಮಾ ಹೇಳಿದ್ದಾರೆ, ಹಳಿಗಳ ಬಳಿ ಪತ್ತೆಯಾದ ಶವದ ಬಗ್ಗೆ ಕೇಳಿದಾಗ, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು, ಆದರೆ ಶವವು ಛಿದ್ರಗೊಂಡ ಸ್ಥಿತಿಯಲ್ಲಿದೆ ಎಂದು ಹೇಳಿದರು.

ಮತ್ತಷ್ಟು ಓದಿ: ಕೇರಳದ ತ್ರಿಶೂರ್‌ನಲ್ಲಿ ಪಟಾಕಿಗಳ ಸ್ಫೋಟ; 10 ಜನ ಸಾವು, ಹಲವರಿಗೆ ಗಾಯ

ಜನವರಿಯ ಆರಂಭದಲ್ಲಿ, ಪಂಜಾಬ್‌ನ ಫತೇಘರ್ ಸಾಹಿಬ್ ಜಿಲ್ಲೆಯ ಸಿರ್ಹಿಂದ್‌ನಲ್ಲಿರುವ ಸರಕು ಸಾಗಣೆ ಕಾರಿಡಾರ್ ಕೂಡ ಆಗಿರುವ ರೈಲ್ವೆ ಹಳಿಯಲ್ಲಿ ಸ್ಫೋಟ ಸಂಭವಿಸಿತ್ತು. ಈ ಘಟನೆ ಜನವರಿ 24 ರಂದು, ಗಣರಾಜ್ಯೋತ್ಸವಕ್ಕೆ ಕೇವಲ ಎರಡು ದಿನಗಳ ಮೊದಲು ನಡೆದಿದ್ದು, ಲೋಕೋ ಪೈಲಟ್ ಗಾಯಗೊಂಡಿದ್ದರು.

ಗಾಯಗೊಂಡ ಲೋಕೋ ಪೈಲಟ್ ಅನ್ನು ಅನಿಲ್ ಶರ್ಮಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಹಾನಿಗೊಳಗಾದ ರೈಲು ಫುಟ್‌ಪ್ಲೇಟ್ ತಪಾಸಣೆಯಲ್ಲಿದ್ದು, ಗೋಬಿಂದ್‌ಗಢದಿಂದ ಸಿರ್ಹಿಂದ್ ಕಡೆಗೆ ಬರುತ್ತಿತ್ತು ಎಂದು ಹೇಳಿದರು. ಸಾಮಾಜಿಕ ಮಾಧ್ಯಮಗಳಲ್ಲಿ ಈ ದಾಳಿಯನ್ನು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಖಾಲಿಸ್ತಾನ್ ಜಿಂದಾಬಾದ್ ಫೋರ್ಸ್ ನಡೆಸಿದೆ ಎನ್ನುವ ಮಾಹಿತಿ ಹರಿದಾಡಿತ್ತು. ಆದರೆ, ಪೊಲೀಸರು ಈ ಆರೋಪಗಳನ್ನು ಪರಿಶೀಲಿಸಲು ನಿರಾಕರಿಸಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಹೇಳಿದ್ದರು. ಲೋಕೋ ಪೈಲಟ್ ಅವರ ಕೆನ್ನೆಗೆ ಸಣ್ಣ ಗಾಯವಾಗಿದೆ. ಅವರು ಅಪಾಯದಿಂದ ಪಾರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 9:42 am, Tue, 28 April 26

Source link

ಉದ್ಯೋಗ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ! ಮಹಿಳೆಯರನ್ನ ದಂಧೆಗೆ ಇಳಿಸ್ತಿದ್ದ ಕಿಂಗ್ ಪಿನ್ ಸೇರಿ 11 ಜನ ಅರೆಸ್ಟ್ – Kannada News | Manvi Police Bust Prostitution Racket: 11 Arrested for Trapping Unemployed Women in Raichur

ರಾಯಚೂರು, ಏಪ್ರಿಲ್ 28: ಉದ್ಯೋಗ ನೀಡುವ ನೆಪದಲ್ಲಿ ನಿರುದ್ಯೋಗಿ ಮಹಿಳೆಯರನ್ನು ದಂಧೆಗೆ ಇಳಿಸುತ್ತಿದ್ದ ಜಾಲವನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೊಲೀಸರು ಭೇದಿಸಿದ್ದಾರೆ. ಹಿರೇಕೊಟ್ನೆಕಲ್ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ (Prostitution) ದಂಧೆಯ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಕಿಂಗ್‌ಪಿನ್ ತಾಯಪ್ಪ ಸೇರಿದಂತೆ ಒಟ್ಟು 11 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಸ್ಟರ್ ಮೈಂಡ್ ತಾಯಪ್ಪ!

ಮಾನ್ವಿ ಪಟ್ಟಣದ ಇಂದಿರಾನಗರದ ನಿವಾಸಿಯಾದ ತಾಯಪ್ಪ ಈ ದಂಧೆಯ ಮಾಸ್ಟರ್ ಮೈಂಡ್ ಆಗಿದ್ದು, ಆಂಧ್ರಪ್ರದೇಶ, ತೆಲಂಗಾಣ, ಬೆಳಗಾವಿ ಹಾಗೂ ಮಹಾರಾಷ್ಟ್ರದ ನಿರುದ್ಯೋಗಿ ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದ. ಅವರಿಗೆ ಉತ್ತಮ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ನಂತರ ಬಲವಂತವಾಗಿ ದಂಧೆಗೆ ತಳ್ಳುತ್ತಿದ್ದ ಎನ್ನಲಾಗಿದೆ. ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನುಗಳನ್ನು ಈ ಅಕ್ರಮ ಚಟುವಟಿಕೆಗೆ ಅಡ್ಡೆಯನ್ನಾಗಿ ಮಾಡಿಕೊಳ್ಳಲಾಗಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಓದಿ ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ

ಆರೋಪಿಗಳು ಸೆರೆ

ವಿಷಯ ತಿಳಿದ ಮಾನ್ವಿ ಪೊಲೀಸರು ಜಮೀನಿನ ಮೇಲೆ ಅನಿರೀಕ್ಷಿತ ದಾಳಿ ನಡೆಸಿದ್ದಾರೆ. ಈ ವೇಳೆ ಕಿಂಗ್‌ಪಿನ್ ತಾಯಪ್ಪ, ಅಮರೇಶ್, ಹುಸೇನಪ್ಪ, ಪ್ರಕಾಶ್, ಆದೇಶ್, ವಿಜಯಕುಮಾರ್, ಶರಣಬಸವ ಹಾಗೂ ಮಲ್ಲಿಕಾರ್ಜುನ ಸೇರಿದಂತೆ 11 ಮಂದಿಯನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಅವರನ್ನು ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐಪಿಎಲ್ ಟಿಕೆಟ್ ಬ್ಲಾಕ್ ದಂಧೆಗೆ ಪೊಲೀಸರ ಬ್ರೇಕ್: 24 ಮಂದಿ ಅರೆಸ್ಟ್, 17 ಕೇಸ್ ದಾಖಲು! – Kannada News | IPL 2026: Bengaluru Police Crack Down on Ticket Black Marketing; 24 Arrested and 37 Tickets Seized

ಬೆಂಗಳೂರು, ಏಪ್ರಿಲ್ 28: ಐಪಿಎಲ್ ಪಂದ್ಯಾವಳಿಗಳ ಸಂದರ್ಭದಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಬ್ಲಾಕ್ ಮಾರ್ಕೆಟ್ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ, ಪೊಲೀಸರು 17 ಪ್ರಕರಣಗಳನ್ನು ದಾಖಲಿಸಿದ್ದು, ಈ ಸಂಬಂಧ 24 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 37 ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ಪ್ರಕರಣಗಳು ದಾಖಲಾಗಿದ್ದರೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಪ್ರೇಮಿಗಳ ಆಸೆಯನ್ನು ದುರುಪಯೋಗಪಡಿಸಿಕೊಂಡು ಹೆಚ್ಚಿನ ಲಾಭ ಗಳಿಸಲು ಯತ್ನಿಸುತ್ತಿದ್ದ ದಂಧೆಕೋರರನ್ನು ಸಿಸಿಬಿ ಅಧಿಕಾರಿಗಳು ಸಹ ದಾಳಿ ನಡೆಸಿ ಬಂಧಿಸಿದ್ದಾರೆ. ಈ ಮೂಲಕ ಐಪಿಎಲ್ ಟಿಕೆಟ್ ಬ್ಲಾಕ್ ಮಾರ್ಕೆಟ್​​ಗೆ ಕಡಿವಾಣ ಹಾಕುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

DC vs RCB: ಜಾಕೋಬ್ ಬೆಥೆಲ್‌ ಸಿಡಿಸಿದ 104 ಮೀಟರ್ ಸಿಕ್ಸ್ ಕಂಡು ಶಾಕ್ ಆದ ಕೊಹ್ಲಿ: ವಿಡಿಯೋ ನೋಡಿ – Kannada News | Virat Kohli shocked by Jacob Bethell’s 104 meter six in DC vs RCB Match Watch video

ಬೆಂಗಳೂರು (ಏ. 28): 2026 ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 39 ನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಆರ್‌ಸಿಬಿಯ ಸ್ಟಾರ್ ಮತ್ತು ಯುವ ಇಂಗ್ಲಿಷ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ (Jacob Bethell) ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆದರು. ಈ ಪಂದ್ಯದಲ್ಲಿ ಜಾಕೋಬ್ ಸಣ್ಣ ಇನ್ನಿಂಗ್ಸ್ ಆಡಿದರೂ, ಇವರು ಬಾರಿಸಿದ ಒಂದು ಶಾಟ್ ಎಲ್ಲರನ್ನೂ ದಂಗಾಗಿಸಿತು. ಜಾಕೋಬ್ ಬೆಥೆಲ್ ಡೆಲ್ಲಿ ಕ್ಯಾಪಿಟಲ್ಸ್​ನ ವೇಗಿ ಕೈಲ್ ಜೇಮಿಸನ್ ಬೌಲಿಂಗ್​ನಲ್ಲಿ ಅದ್ಭುತವಾದ ಸಿಕ್ಸರ್ ಬಾರಿಸಿದರು, ಅದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗುತ್ತದೆ.

ಜೇಮಿಸನ್ ಬೌಲಿಂಗ್​ನಲ್ಲಿ 104 ಮೀಟರ್ ಸಿಕ್ಸ್ ಸಿಡಿಸಿದ ಬೆಥೆಲ್

ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಡೆಲ್ಲಿ ಕ್ಯಾಪಿಟಲ್ಸ್ ಪರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮೂರನೇ ಓವರ್ ಬೌಲಿಂಗ್ ಮಾಡುತ್ತಿದ್ದರು. ಅವರ ಓವರ್‌ನಲ್ಲಿ, ಜಾಕೋಬ್ ಬೆಥೆಲ್ ಶಾರ್ಟ್ ಬಾಲ್‌ನಲ್ಲಿ ಔಟಾದರು, ಆದರೆ ಇದಕ್ಕೂ ಮುನ್ನ 104 ಮೀಟರ್ ಉದ್ದದ ಸಿಕ್ಸ್ ಬಾರಿಸಿದ್ದು ಅದ್ಭುತವಾಗಿತ್ತು. ಅವರು ಜೇಮಿಸನ್ ಎಸೆತದಲ್ಲಿ ಅದ್ಭುತ ಪುಲ್ ಶಾಟ್ ಹೊಡೆದರು. ಇದನ್ನು ಫ್ಯಾನ್ಸ್ ಮಾತ್ರವಲ್ಲದೆ ಮತ್ತೊಂದು ತುದಿಯಲ್ಲಿದ್ದ ವಿರಾಟ್ ಕೊಹ್ಲಿ ಕೂಡ ದಂಗಾಗಿ ಹೋದರು. ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ಈ ಸಿಕ್ಸ್‌ನ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ಜಾಕೋಬ್ ಬೆಥೆಲ್ ಸಿಡಿಸಿದ ಸಿಕ್ಸ್​ನ ವಿಡಿಯೋ:

ಆರ್‌ಸಿಬಿ ತಂಡ ದೆಹಲಿಯನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿತು

ಏಪ್ರಿಲ್ 27 ರಂದು ನಡೆದ ದೆಹಲಿ ಮತ್ತು ಬೆಂಗಳೂರು ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡವು ಡಿಸಿ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ಬ್ಯಾಟಿಂಗ್ ತೀರಾ ಕಳಪೆ ಮಟ್ಟದಲ್ಲಿತ್ತು. ಡೆಲ್ಲಿ ತಂಡವು ಕೇವಲ 75 ರನ್‌ಗಳಿಗೆ ಸೀಮಿತವಾಯಿತು. ಆರ್‌ಸಿಬಿ ಕೇವಲ 6.3 ಓವರ್‌ಗಳಲ್ಲಿ 76 ರನ್‌ಗಳ ಗುರಿಯನ್ನು ಬೆನ್ನಟ್ಟಿತು.

DC vs RCB, IPL 2026: ಆರ್‌ಸಿಬಿ ವಿರುದ್ಧದ ಅವಮಾನಕರ ಸೋಲಿನ ನಂತರ ಅಕ್ಷರ್ ಪಟೇಲ್​ರಿಂದ ದೊಡ್ಡ ಹೇಳಿಕೆ

12 ಅಂಕ ಸಂಪಾದಿಸಿದ ಬೆಂಗಳೂರು ತಂಡ

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಲ್ಲಿಯವರೆಗೆ ಅದ್ಭುತ ಪ್ರದರ್ಶನ ನೀಡುತ್ತಿದೆ. ಅವರು ತಮ್ಮ ಎಂಟು ಪಂದ್ಯಗಳಲ್ಲಿ ಆರನ್ನು ಗೆದ್ದು 12 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಏತನ್ಮಧ್ಯೆ, ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್‌ಗೆ ಅರ್ಹತೆ ಪಡೆಯುವ ಸಾಧ್ಯತೆ ಕ್ಷೀಣಿಸುತ್ತಿದೆ. ಅಕ್ಷರ್ ಪಡೆ ತಮ್ಮ ಎಂಟು ಪಂದ್ಯಗಳಲ್ಲಿ ಐದರಲ್ಲಿ ಸೋತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಕೆಡಿ’ ರಿಲೀಸ್ ಆದ ಒಂದೇ ವಾರಕ್ಕೆ ‘ಜನ ನಾಯಗನ್’ ತೆರೆಗೆ? ಯಾಕೀ ನಿರ್ಧಾರ? – Kannada News | Thalapathy Vijay’s ‘Jan Nayagan’: Why Release Just After K.D. Amidst Delays and Leaks?

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 9ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಈವರೆಗೆ ಸಿನಿಮಾದ ರಿಲೀಸ್ ಬಗ್ಗೆ ಅಪ್​​​ಡೇಟ್ ಸಿಕ್ಕಿಲ್ಲ. ಈಗ ‘ಜನ ನಾಯಗನ್’ಗೆ ನಾಲ್ಕು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ ಎಂದು ವರದಿ ಆಗಿದೆ. ಕೆಲವು ವರದಿಗಳ ಪ್ರಕಾರ ಸಿನಿಮಾ ಮೇ 8ರಂದು ತೆರೆಗೆ ಬರಲಿದೆಯಂತೆ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಲಿದೆ ಎಂದು ವರದಿ ಆಗಿದೆ. ಈ ವಿಷಯದಲ್ಲಿ ಸಾಕಷ್ಟು ಗೊಂದಲವೂ ಇದೆ.
‘ಕೆವಿಎನ್​’ ಸಂಸ್ಥೆ ‘ಜನ ನಾಯಗನ್’ ಚಿತ್ರ ನಿರ್ಮಾಣ ಮಾಡಿದೆ. ಇದೇ ಸಂಸ್ಥೆ ಬಂಡವಾಳ ಹೂಡಿರುವ ‘ಕೆಡಿ’ ಚಿತ್ರ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಇದಾದ ಒಂದೇ ವಾರಕ್ಕೆ ‘ಜನ ನಾಯಗನ್’ ಸಿನಿಮಾ ತೆರೆಗೆ ಬರಲು ಸಾಧ್ಯವೇ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿದೆ.ಈ ಗೊಂದಲಕ್ಕೆ ಶೀಘ್ರವೇ ಉತ್ತರ ಸಿಗಬೇಕಿದೆ.

ದಳಪತಿ ವಿಜಯ್ ಅವರು ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ನೀತಿ ಸಂಹಿತೆ ಜಾರಿ ಇದ್ದ ಹಿನ್ನೆಲೆಯಲ್ಲಿ ‘ಜನ ನಾಯಗನ್’ ಸಿನಿಮಾ ರಿಲೀಸ್ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಚುನಾವಣೆ ಮುಗಿದಿದೆ. ಮೇ 4ರಂದು ಫಲಿತಾಂಶ ಹೊರ ಬರಲಿದೆ. ಈ ಹಿನ್ನೆಲೆಯಲ್ಲಿ ಮೇ 8ನ್ನು ತಂಡ ಆಯ್ಕೆ ಮಾಡಿತೇ ಎನ್ನುವ ಪ್ರಶ್ನೆ ಮೂಡಿದೆ.

ಈಗಾಗಲೇ ‘ಜನ ನಾಯಗನ್’ ಸಿನಿಮಾ ಮೇಲಿನ ನಿರೀಕ್ಷೆ ಕೊಂಚ ಮಟ್ಟಿಗೆ ಕಡಿಮೆ ಆಗಿದೆ. ಇದಕ್ಕೆ ಕಾರಣ ಆಗಿರೋದು ಸಿನಿಮಾದ ದೃಶ್ಯಗಳು ಲೀಕ್ ಆಗಿದ್ದು. ಹೀಗಾಗಿ, ಆದಷ್ಟು ಬೇಗ ಸಿನಿಮಾನ ರಿಲೀಸ್ ಮಾಡಲು ತಂಡ ನಿರ್ಧರಿಸಿದೆ. ಮೇ 4ರಂದು ತಮಿಳುನಾಡು ಚುನಾವಣೆ ಫಲಿತಾಂಶ ಹೊರ ಬೀಳಲಿದೆ. ವಿಜಯ್ ಪಕ್ಷ ಎಷ್ಟು ಸೀಟ್ ಗೆದ್ದಿದೆ ಎಂಬ ವಿಷಯವೂ ಸಿನಿಮಾ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಅವರ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಸಿನಿಮಾ ಸೂಪರ್ ಹಿಟ್ ಆಗಬಹುದು.

ಇದನ್ನೂ ಓದಿ: ‘ಜನ ನಾಯಗನ್’ ಸಿನಿಮಾಕ್ಕೆ ಅಂದುಕೊಳ್ಳದೆ ಸಿಕ್ತು ‘ಗೋಲ್ಡನ್ ಟೈಮ್?’

ಏಪ್ರಿಲ್ 30ರಂದು ‘ಕೆಡಿ’ ತೆರೆಗೆ ಬರುತ್ತಿದೆ. ಜೂನ್ 4ರಂದು ‘ಟಾಕ್ಸಿಕ್’ ಬರಲಿದೆ. ಒಂದೊಮ್ಮೆ  ಮೇ ಮೊದಲ ವಾರ ಅಥವಾ ಎರಡನೇ ವಾರ ಮಿಸ್ ಆಯಿತು ಎಂದರೆ ಆ ಬಳಿಕ ‘ಜನ ನಾಯಗನ್’ ರಿಲೀಸ್ ಮಾಡಲು ಜುಲೈವರೆಗೂ ಸಾಧ್ಯವಾಗುವುದಿಲ್ಲ. ಹೀಗಾಗಿ, ತಂಡದವರು ಮೇ 8 ಎಂದು ನಿರ್ಧರಿಸಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 9:08 am, Tue, 28 April 26

Source link

ಬೆಂಕಿ ಅವಘಡ: ಪ್ರಾಣ ಲೆಕ್ಕಿಸದೇ ಪಿಜಿಯಿಂದ ಹಾರಿ ಜೀವ ಉಳಿಸಿಕೊಂಡ ಯುವತಿಯರು, 50 ಮಂದಿ ಜಸ್ಟ್ ಮಿಸ್ – Kannada News | Bengaluru: 50 PG Girls Narrowly Escape After Banner Warehouse Catches Fire in Nandini Layout; Dramatic CCTV Footage Emerges

ಬೆಂಗಳೂರು, ಏಪ್ರಿಲ್ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಯಾನರ್ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 50 ಯುವತಿಯರು ಅಪಾಯದಿಂದ ಪಾರಾಗಿದ್ದು, ಭಾರಿ ದುರಂತ ತಪ್ಪಿದೆ. ಬೆಂಕಿ ಗೋದಾಮಿಗೆ ಹತ್ತಿಕೊಂಡು ಪಕ್ಕದಲ್ಲಿದ್ದ ನಾಲ್ಕು ಅಂತಸ್ತಿನ ಪಿಜಿ ಕಟ್ಟಡಕ್ಕೂ ವ್ಯಾಪಿಸಲು ಶುರುವಾಗಿತ್ತು. ಬೆಂಕಿ ಹೊತ್ತಿಕೊಳ್ಳುವುದನ್ನು ಗಮನಿಸಿದ ತಕ್ಷಣ, ಪಿಜಿಯಲ್ಲಿ ವಾಸವಿದ್ದ ಯುವತಿಯರು ಪ್ರಾಣದ ಹಂಗು ತೊರೆದು ಕಟ್ಟಡದಿಂದ ಹೊರಗೆ ಜಿಗಿದು ಓಡಿದ್ದಾರೆ. ಕೆಲವರು ಜೀವ ಉಳಿಸಿಕೊಳ್ಳಲು ಜಿಗಿದು ಪಾರಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಯುವತಿಯರು ಚೀರಾಡುತ್ತಾ ಕಟ್ಟಡದಿಂದ ಹೊರಬರುವುದು ಸ್ಪಷ್ಟವಾಗಿ ದಾಖಲಾಗಿದೆ ಸಿಸಿಟಿವಿ ದೃಶ್ಯಾವಳಿ ಸಹಿತ ವರದಿ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಾಮೂಹಿಕ ವಿವಾಹದಲ್ಲಿ ಅನಿರೀಕ್ಷಿತ ಅತಿಥಿಯಾಗಿ ಬಂದ ಬಿರುಗಾಳಿ, ಸಪ್ತಪದಿ ತುಳಿಯುವುದ ಬಿಟ್ಟು ಓಡಿಹೋದ 36 ಜೋಡಿಗಳು – Kannada News | Rajasthan: Sudden Storm Disrupts Mass Wedding, Couples Rush to Safety

ಜೈಪುರ, ಏಪ್ರಿಲ್ 28: ಸಾಮೂಹಿಕ ವಿವಾಹ ಸಮಾರಂಭದ ವೇಳೆ ಬಿರುಗಾಳಿ ಬೀಸಿ ನವ ಜೋಡಿಗಳು ಹೆದರಿ ಓಡಿ ಹೋಗಿರುವ ವಿಡಿಯೋ ವೈರಲ್ ಆಗಿದೆ.  ಬೇಸಿಗೆಯ ಆರಂಭದ ಬಿಸಿಲಿಗೆ ತತ್ತರಿಸಿದ್ದ ರಾಜಸ್ಥಾನದ ಟೋಂಕ್‌ನಲ್ಲಿ ಗುಡುಗು ಸಹಿತ ಮಳೆ ಎಲ್ಲರಿಗೂ ಸಂತೋಷ ನೀಡಬೇಕಿತ್ತು. ಆದರೆ, ಧಾಕಡ್ ಸಮುದಾಯ ಆಯೋಜಿಸಿದ್ದ 36 ಜೋಡಿಗಳ ಸಾಮೂಹಿಕ ವಿವಾಹದ ಮಂಟಪದಲ್ಲಿ ಬಿರುಗಾಳಿ, ಮಳೆ ಭೀಕರ ಅನಾಹುತವನ್ನೇ ಸೃಷ್ಟಿಸಿತ್ತು. ಹೂವಿನ ಅಲಂಕಾರ, ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚುತ್ತಿದ್ದ ವಧು-ವರರು ಮತ್ತು ಅವರ ಸಂಬಂಧಿಕರಿಂದ ಮೈದಾನ ತುಂಬಿ ತುಳುಕುತ್ತಿತ್ತು. ಬಿರುಗಾಳಿಯ ವೇಗ ಎಷ್ಟಿತ್ತೆಂದರೆ, ಬೃಹತ್ ಟೆಂಟ್​ಗಳು ಕಿತ್ತು ಗಾಳಿಯಲ್ಲಿ ಹಾರತೊಡಗಿದ್ದವು. ಮದುವೆಗಾಗಿ ತಂದಿದ್ದ ಉಡುಗೊರೆಗಳು, ಪಾತ್ರೆ ಪದಾರ್ಥಗಳು ಮತ್ತು ಮಂಟಪದ ಸಾಮಗ್ರಿಗಳು ಹತ್ತಿರದ ಹೊಲಗಳಿಗೆ ಚೆಲ್ಲಾಪಿಲ್ಲಿಯಾಗಿ ಹೋದವು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

DC vs RCB, IPL 2026: ಆರ್‌ಸಿಬಿ ವಿರುದ್ಧದ ಅವಮಾನಕರ ಸೋಲಿನ ನಂತರ ಅಕ್ಷರ್ ಪಟೇಲ್​ರಿಂದ ದೊಡ್ಡ ಹೇಳಿಕೆ – Kannada News | Axar Patel Post Match Presentation statement after loss against Royal Challengers Bengaluru

ಬೆಂಗಳೂರು (ಏ. 28): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 39 ನೇ ಪಂದ್ಯದಲ್ಲಿ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ವಿರುದ್ಧ 75 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 9 ವಿಕೆಟ್‌ಗಳಿಂದ ಸೋತಿತು. ಈ ಹೀನಾಯ ಸೋಲಿನ ನಂತರ, ಏನಾಯಿತು ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದು ನಾಯಕ ಅಕ್ಷರ್ ಪಟೇಲ್ ಹೇಳಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಕೆಟ್ಟ ಆರಂಭವನ್ನು ಪಡೆದು ಕೇವಲ 16.3 ಓವರ್‌ಗಳಲ್ಲಿ 75 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ, ಆರ್‌ಸಿಬಿ ಕೇವಲ 6.3 ಓವರ್‌ಗಳಲ್ಲಿ ಪಂದ್ಯವನ್ನು ಗೆದ್ದುಕೊಂಡಿತು.

ಪಂದ್ಯ ಸೋತ ನಂತರ, ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್, “ಏನಾಯಿತು ಎಂದು ನನಗೆ ಇನ್ನೂ ಅರ್ಥವಾಗುತ್ತಿಲ್ಲ. ಆದರೆ ಕ್ರಿಕೆಟ್‌ನಲ್ಲಿ ನೀವು ಪ್ರತಿದಿನ ಜಾಗರೂಕರಾಗಿರಬೇಕು. ಮುಂದಿನ ಪಂದ್ಯಕ್ಕೆ ತಯಾರಿ ಮಾಡುವಾಗ, ನೀವು ಅದನ್ನು ಮರೆತು ಮುಂದುವರಿಯಬೇಕು ಎಂದು ಹೇಳಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದ ದೆಲ್ಲಿ

ಈ ಋತುವಿನಲ್ಲಿ ಡಿಸಿ ತಮ್ಮ ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದಿತು. ನಂತರ ಗುಜರಾತ್ ಟೈಟಾನ್ಸ್ ವಿರುದ್ಧ ಕೇವಲ ಒಂದು ರನ್ ಅಂತರದ ಸೋಲನ್ನು ಅನುಭವಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಕೊನೆಯ ಆರು ಪಂದ್ಯಗಳಲ್ಲಿ ಐದನ್ನು ಸೋತಿದೆ. ಜಿಟಿ ವಿರುದ್ಧದ ಪಂದ್ಯದ ನಂತರ ತಂಡದ ಅದೃಷ್ಟ ಬದಲಾಗಿದೆಯೇ ಎಂದು ಕೇಳಿದಾಗ, “ಹೌದು, ನಾನು ಇಂದಿನ ಬಗ್ಗೆ ಮಾತನಾಡುತ್ತಿದ್ದರೆ, ನೀವು ಹಾಗೆ ಭಾವಿಸಬಹುದು, ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಾವು ಆ ಕ್ಯಾಚ್ ತೆಗೆದುಕೊಂಡಿದ್ದರೆ ಅಥವಾ ಆ ರನ್ ಪೂರ್ಣಗೊಳಿಸಿದ್ದರೆ, ಬಹುಶಃ ಆವೇಗ ಮುಂದುವರಿಯುತ್ತಿತ್ತು ಎಂದು ನೀವು ಭಾವಿಸಬಹುದು. ಆದರೆ ಈ ವಿಷಯಗಳು ಸಂಭವಿಸುತ್ತವೆ” ಎಂದು ಅಕ್ಷರ್ ಹೇಳಿದ್ದಾರೆ.

ಮಾತು ಮುಂದುವರೆಸಿದ ಅಕ್ಷರ್, “ಐಪಿಎಲ್ ತುಂಬಾ ಕಠಿಣ ಪಂದ್ಯಾವಳಿ. ಎಲ್ಲವೂ ಸರಾಗವಾಗಿ ನಡೆಯುತ್ತದೆ ಎಂದು ನೀವು ಒಂದು ದಿನವೂ ಯೋಚಿಸಲು ಸಾಧ್ಯವಿಲ್ಲ. ನೀವು ಪ್ರತಿ ಬಾರಿಯೂ ಹೊರಗೆ ಬಂದು ನಿಮ್ಮ ಯೋಜನೆಯನ್ನು ಕಾರ್ಯಗತಗೊಳಿಸಬೇಕು. ಹೌದು, ಆವೇಗ ಮುಖ್ಯ, ಆದರೆ ನೀವು ಇದು ಆಗಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಎಂದು ಯೋಚಿಸುತ್ತಲೇ ಇರಬಾರದು. ನಿಮ್ಮ ಮುಂದೆ ಏನಿದೆ ಎಂಬುದರ ಮೇಲೆ ಗಮನಹರಿಸುವುದು ಉತ್ತಮ” ಎಂಬುದು ಅಕ್ಷರ್ ಮಾತು.

RCB Playoffs Scenario: ದಾಖಲೆಯ ಗೆಲುವಿನೊಂದಿಗೆ ಪ್ಲೇಆಫ್‌ಗೆ ಹತ್ತಿರವಾದ ಆರ್‌ಸಿಬಿ: ಇನ್ನೆಷ್ಟು ಪಂದ್ಯ ಗೆಲ್ಲಬೇಕು?

ಈ ಸೋಲಿನಿಂದ ದೆಹಲಿ ತಂಡ ಹೇಗೆ ಚೇತರಿಸಿಕೊಳ್ಳುತ್ತದೆ?

ಈ ಪಂದ್ಯದಿಂದ ಮುಂದುವರಿಯುವ ಬಗ್ಗೆ ಮಾತನಾಡಿದ ಅಕ್ಷರ್, “ನಾವು ಮುಂದುವರಿಯಬೇಕು ಎಂದು ನಾನು ಭಾವಿಸುತ್ತೇನೆ. ನೀವು ನಕಾರಾತ್ಮಕವಾಗಿ ಯೋಚಿಸಿದರೆ, ನೀವು ಪಂದ್ಯವನ್ನು ಕಳೆದುಕೊಳ್ಳುತ್ತೀರಿ. ನೀವು ಸಕಾರಾತ್ಮಕವಾಗಿ ಯೋಚಿಸಿದರೆ, ನೀವು ಉತ್ತಮ ಪ್ರದರ್ಶನ ನೀಡುತ್ತೀರಿ. ಆದ್ದರಿಂದ ನಾವು ಇದನ್ನು ಮರೆತು ಮುಂದುವರಿಯಬೇಕು. ನಾನು ತಂಡಕ್ಕೂ ಅದನ್ನೇ ಹೇಳುತ್ತೇನೆ: ಒಂದು ಕೆಟ್ಟ ಪಂದ್ಯ ಎಂದರೆ ನೀವು ಪರಸ್ಪರ ಬೆರಳು ತೋರಿಸಲು ಅಥವಾ ಬ್ಯಾಟ್ಸ್‌ಮನ್‌ಗಳನ್ನು ದೂಷಿಸಲು ಪ್ರಾರಂಭಿಸಬೇಕು ಎಂದಲ್ಲ. ನಾವು ಸಕಾರಾತ್ಮಕವಾಗಿರಬೇಕು ಸರಿಯಾದ ಮನಸ್ಥಿತಿಯನ್ನು ಕಾಪಾಡಿಕೊಳ್ಳಬೇಕು.”

“ಆರ್​ಸಿಬಿ ತಂಡದಲ್ಲಿರುವವರು ವಿಶ್ವ ದರ್ಜೆಯ ಬೌಲರ್‌ಗಳು ಮತ್ತು ಚೆಂಡನ್ನು ಎಲ್ಲಿ ಬೇಕಾದರೂ ಸ್ವಿಂಗ್ ಮಾಡಬಹುದು; ಅವರು ಪ್ರತಿಯೊಂದು ಮೈದಾನದಲ್ಲೂ ಅದನ್ನು ಮಾಡಿದ್ದಾರೆ. ಆದರೆ ನಮ್ಮ ಆರಂಭಿಕರು ಅಥವಾ ನಮ್ಮ ಯಾವುದೇ ಉನ್ನತ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಮೊದಲ ಕೆಲವು ಓವರ್‌ಗಳಲ್ಲಿ ಉತ್ತಮವಾಗಿ ಆಡಿದ್ದರೆ, ಅದು ವ್ಯತ್ಯಾಸವನ್ನುಂಟುಮಾಡಬಹುದಿತ್ತು. ಆದರೆ ಅವರು ಬೌಲಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು.” ಎಂದು ಅಕ್ಷರ್ ಪಟೇಲ್ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version