ಪ್ರತಿದಿನ ಊಟದ ಬಳಿಕ ಒಂದು ಸ್ಪೂನ್‌ ಸೋಂಪು ತಿನ್ನಿ, ಈ ಅದ್ಭುತ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ – Kannada News | What are the benefits of eating fennel seeds?

ಭಾರತೀಯ ಅಡುಗೆ ಮನೆಗಳಲ್ಲಿ ಇರುವಂತಹ ಅನೇಕ ಮಸಾಲೆ ಪದಾರ್ಥಗಳು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿವೆ. ಅವುಗಳಲ್ಲಿ ಸೋಂಪು (fennel seeds) ಕೂಡ ಒಂದು. ಈ ಸೋಂಪು ಕಾಳುಗಳಲ್ಲಿ ವಿಟಮಿನ್‌, ಫೈಬರ್‌, ಕ್ಯಾಲ್ಸಿಯಂ, ಆಂಟಿ ಆಕ್ಸಿಡೆಂಟ್‌, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿ ಫಂಗಲ್‌ ಗುಣಗಳಿದ್ದು, ಪ್ರತಿನಿತ್ಯ ಊಟದ ಬಳಿಕ ಸ್ವಲ್ಪ ಸೋಂಪು ತಿನ್ನುವ ಮೂಲಕ ಹಲವು ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಹೌದು ಸೋಂಪು ಕಾಳು ಜಗಿಯುವುದರಿಂದ ಬಾಯಿಯ ವಾಸನೆ ನಿವಾರಣೆಯಾಗುವುದಲ್ಲದೆ, ಅನೇಕ ಆರೋಗ್ಯ ಲಾಭಗಳು ಲಭಿಸುತ್ತವೆ. ಅವು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಊಟದ ನಂತರ ಸೋಂಪು ತಿನ್ನುವುದರಿಂದ ಲಭಿಸುವ ಪ್ರಯೋಜನಗಳೇನು?

ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ: ಸೋಂಪು ವಿಟಮಿನ್ ಎ ಯಲ್ಲಿ ಸಮೃದ್ಧವಾಗಿದೆ, ಇದು ದೃಷ್ಟಿ ಸುಧಾರಿಸಲು ತುಂಬಾನೇ ಸಕಾರಿಯಾಗಿದೆ. ಊಟದ ನಂತರ ಸೋಂಪನ್ನು ನಿಯಮಿತವಾಗಿ ಸೇವಿಸುವುದರಿಂದ ಕಣ್ಣುಗಳನ್ನು ಮ್ಯಾಕ್ಯುಲರ್ ಡಿಜೆನರೇಶನ್ ಮತ್ತು ಕಣ್ಣಿನ ಪೊರೆಗಳಂತಹ ಸ್ಥಿತಿಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ: ಸೋಂಪು ಕಾಳುಗಳಲ್ಲಿರುವ ಉತ್ಕರ್ಷಣ ನಿರೋಧಕಗಳು ಅಕಾಲಿಕ ವಯಸ್ಸಾಗುವಿಕೆಗೆ ಕಾರಣವಾಗುವ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡುವ ಮೂಲಕ ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೆಚ್ಚುವರಿಯಾಗಿ, ಸೋಂಪು ಬೀಜಗಳು ಚರ್ಮದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಉಸಿರಾಟವನ್ನು ತಾಜಾಗೊಳಿಸುತ್ತದೆ: ಊಟದ ನಂತರ ಸೋಂಪು ಬೀಜಗಳನ್ನು ಅಗಿಯುವುದರಿಂದ ಉಸಿರಾಟವು ತಾಜಾವಾಗಿರುತ್ತದೆ. ಸೋಂಪು ಬೀಜಗಳಲ್ಲಿರುವ ಆರೊಮ್ಯಾಟಿಕ್ ಸಂಯುಕ್ತಗಳು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು ಅದು ಬಾಯಿಯ ದುರ್ವಾಸನೆಯ ವಿರುದ್ಧ ಹೋರಾಡುತ್ತದೆ ಮತ್ತು ನಿಮ್ಮ ಬಾಯಿಯನ್ನು ತಾಜಾತನದಿಂದ ಇರುವಂತೆ ಮಾಡುತ್ತದೆ.

ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ:  ಇದು ಜೀರ್ಣಕಾರಿ ರಸಗಳು ಮತ್ತು ಕಿಣ್ವಗಳ ಸ್ರವಿಸುವಿಕೆಯನ್ನು ಉತ್ತೇಜಿಸುತ್ತದೆ, ಅಜೀರ್ಣ, ಉಬ್ಬುವುದು ಮತ್ತು ಮಲಬದ್ಧತೆಯನ್ನು ನಿವಾರಿಸುತ್ತದೆ. ಅಲ್ಲದೆ ಸೋಂಪು ಅನಿಲ ಮತ್ತು ಉಬ್ಬುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಊಟದ ಬಳಿಕ ಸ್ವಲ್ಪ ಸೋಂಪು ಸೇವಿಸಿ.

ತೂಕ ನಿಯಂತ್ರಣಕ್ಕೆ ಸಹಕಾರಿ: ಸೋಂಪು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದನ್ನು ಅಗಿಯುವುದರಿಂದ ಲಾಲಾರಸದ ಉತ್ಪಾದನೆ ಹೆಚ್ಚಾಗುತ್ತದೆ, ಇದು ಹೊಟ್ಟೆ ತುಂಬಿದ ಭಾವನೆಗೆ ಕಾರಣವಾಗುತ್ತದೆ ಮತ್ತು ಹಸಿವಿನ ಹಂಬಲವನ್ನು ಕಡಿಮೆ ಮಾಡುತ್ತದೆ. ಆ

ಇದನ್ನೂ ಓದಿ: ರಾತ್ರಿ ಊಟ ಮಾಡದೆ ಖಾಲಿ ಹೊಟ್ಟೆಯಲ್ಲಿ ಮಲಗುವ ಅಭ್ಯಾಸ ಎಷ್ಟು ಡೇಂಜರಸ್‌ ಗೊತ್ತಾ?

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ: ಸೋಂಪು ಬೀಜಗಳು ಪೊಟ್ಯಾಸಿಯಮ್‌ನಲ್ಲಿ ಸಮೃದ್ಧವಾಗಿವೆ, ಇದರ ನಿಯಮಿತ ಸೇವನೆಯು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ: ಇದರಲ್ಲಿರುವ ಜೀವಸತ್ವಗಳು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.

ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ: ಸೋಂಪು ಜಗಿಯುವುದರಿಂದ ಚಯಾಪಚಯ ಕ್ರಿಯೆ ಹೆಚ್ಚಾಗುತ್ತದೆ. ಇದರಲ್ಲಿರುವ ಅನೆಥೋಲ್, ಫೆನ್ಸೋನ್ ಮತ್ತು ಎಸ್ಟ್ರಾಗೋಲ್ ನಂತಹ ಅಂಶಗಳಿದ್ದು, ಇವು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs PAK Women’s T20 WC Live Score: ಭಾರತ-ಪಾಕಿಸ್ತಾನ ಹಣಾಹಣಿ – Kannada News | India vs Pakistan Women’s T20 World Cup 2026 Live Cricket Score IND vs PAK Group A Today Match, highlights latest news in Kannada

2026 ರ ಐಸಿಸಿ ಮಹಿಳಾ ಟಿ20ಐ ವಿಶ್ವಕಪ್‌ನ ಆರನೇ ಪಂದ್ಯವು ಎರಡು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿದೆ. ಈ ಪಂದ್ಯವು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಟಿ20 ವಿಶ್ವಕಪ್​ನಲ್ಲಿ ಎರಡೂ ತಂಡಗಳ ಮೊದಲ ಪಂದ್ಯ ಇದಾಗಿದೆ. ವಿಶ್ವಕಪ್ ಇತಿಹಾಸದಲ್ಲಿ, ಟೀಂ ಇಂಡಿಯಾ 8 ಪಂದ್ಯಗಳಲ್ಲಿ 6 ರಲ್ಲಿ ಪಾಕಿಸ್ತಾನವನ್ನು ಸೋಲಿಸಿದೆ. ಆದ್ದರಿಂದ, ಭಾರತ ತಂಡವು ಪಾಕಿಸ್ತಾನದ ವಿರುದ್ಧ ಏಳನೇ ಗೆಲುವು ಸಾಧಿಸುತ್ತದೆಯೇ? ಎಂಬುದು ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ.

Source link

‘ರಾಮಾಯಣ’ ಚಿತ್ರದ ಬಿಡುಗಡೆ ಮುಂದೂಡಿಕೆ? ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ! – Kannada News | Ramayana movie released postponed what team said

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಇನ್ನೂ ಹಲವು ಸ್ಟಾರ್ ನಟ, ನಟಿಯರು ನಟಿಸಿ ಭಾರಿ ಬಜೆಟ್​​ನಲ್ಲಿ ನಿರ್ಮಾಣ ಮಾಡಲಾಗಿರುವ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾವನ್ನು ಹಾಲಿವುಡ್​​ ಮಾದರಿಯಲ್ಲಿ ನಿರ್ಮಾಣ ಮಾಡಿರುವುದಾಗಿ ಮಾತ್ರವಲ್ಲದೆ, ಭಾರತದಿಂದ ವಿಶ್ವ ಸಿನಿಮಾ ರಂಗಕ್ಕಾಗಿ ನಿರ್ಮಾಣ ಮಾಡಲಾಗಿರುವ ಸಿನಿಮಾ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಪದೇ ಪದೇ ಹೇಳಿದ್ದಾರೆ. ಸಿನಿಮಾದ ಪ್ರಚಾರವನ್ನು ಈಗಾಗಲೇ ಆರಂಭಿಸಲಾಗಿದೆ. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ, ಸಿನಿಮಾದ ಬಿಡುಗಡೆ ಮುಂದೂಡಲಾಗಿದೆ ಎನ್ನಲಾಗುತ್ತಿದೆ.

‘ರಾಮಾಯಣ’ ಸಿನಿಮಾದ ಟೀಸರ್ ಬಿಡುಗಡೆ ವಿಳಂಬವಾಗಿತ್ತು, ಆ ಬಳಿಕ ಬಿಡುಗಡೆ ಆದ ಟೀಸರ್​​ನಲ್ಲಿ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿತ್ತು. ಇದೇ ವರ್ಷದ ದೀಪಾವಳಿಗೆ ಸಿನಿಮಾದ ಮೊದಲ ಭಾಗ ರಿಲೀಸ್ ಆಗಲಿದೆ ಎನ್ನಲಾಯ್ತು. ಆದರೆ ಇದೀಗ ಹರಿದಾಡುತ್ತಿರುವ ಕೆಲ ಸುದ್ದಿಗಳ ಪ್ರಕಾರ ಸಿನಿಮಾದ ಬಿಡುಗಡೆ ತಡವಾಗಲಿದೆಯಂತೆ. ಅಂತರಾಷ್ಟ್ರೀಯ ಯುದ್ಧ ಪರಿಸ್ಥಿತಿಯ ಜೊತೆಗೆ ಸಿನಿಮಾದ ಕೆಲ ಭಾಗಗಳ ಮರು ವಿಎಫ್​​ಎಕ್ಸ್ ಮತ್ತು ಮರು ಚಿತ್ರೀಕರಣ ಸಹ ಮಾಡಲಾಗುತ್ತಿದೆ ಎಂಬ ಸುದ್ದಿಗಳು ಅಲ್ಲಲ್ಲಿ ಕೇಳಿ ಬರುತ್ತಿವೆ.

ಆದರೆ ಚಿತ್ರತಂಡ ಹೇಳಿರವಂತೆ ಅದೆಲ್ಲ ಸುಳ್ಳು ಸುದ್ದಿ ಎನ್ನಲಾಗಿದ್ದು, ಸಿನಿಮಾವು ಈ ಹಿಂದೆಯೇ ನಿಗದಿ ಪಡಿಸಿರುವಂತೆ ದೀಪಾವಳಿ ಹಬ್ಬದಂದೇ ಬಿಡುಗಡೆ ಆಗಲಿದೆಯೆಂತೆ. ಹಿಂದಿ ಮಾತ್ರವಲ್ಲದೆ, ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಕೆಲ ವಿದೇಶಿ ಭಾಷೆಗಳಲ್ಲಿಯೂ ಡಬ್ ಆಗಿ ಸಿನಿಮಾ ಬಿಡುಗಡೆ ಆಗಲಿದೆ. ‘ರಾಮಾಯಣ’ ಸಿನಿಮಾದ ಪ್ರಚಾರ ಭಾರತದಲ್ಲಿ ಇನ್ನೂ ಅಧಿಕೃತವಾಗಿ ಆರಂಭವಾಗಿಲ್ಲ, ಆದರೆ ಅದೂ ಸಹ ಶೀಘ್ರವೇ ಆರಂಭ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ:‘ಅನಿಮಲ್ ಪಾರ್ಕ್’ ಚಿತ್ರೀಕರಣ ಯಾವಾಗ: ಬಾಯ್ಬಿಟ್ಟ ರಣ್​​ಬೀರ್ ಕಪೂರ್

ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಮತ್ತು ಯಶ್ ರಾವಣನಾಗಿ ಕಾಣಿಸಿಕೊಳ್ಳುತ್ತಿರುವ ಈ ಸಿನಿಮಾ ನಮಿತ್ ಮಲ್ಹೋತ್ರಾ ಅವರ ಅತ್ಯಂತ ಮಹತ್ವಾಕಾಂಕ್ಷೆಯ ಸಿನಿಮಾ ಆಗಿದೆ. ಆಸ್ಕರ್ ವಿಜೇತ ಹಾಲಿವುಡ್ ಸಂಗೀತ ನಿರ್ದೇಶಕ ಹ್ಯಾನ್ಸ್ ಝಿಮ್ಮರ್ ಮತ್ತು ಎಆರ್ ರೆಹಮಾನ್ ಒಟ್ಟಿಗೆ ಈ ಸಿನಿಮಾಕ್ಕೆ ಸಂಗೀತ ನೀಡುತ್ತಿರುವುದು ವಿಶೇಷ. ಈ ಚಿತ್ರವನ್ನು ಜಾಗತಿಕ ಮಟ್ಟದ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಅತ್ಯಾಧುನಿಕ ವಿಎಫ್‌ಎಕ್ಸ್ ತಂತ್ರಜ್ಞಾನದೊಂದಿಗೆ ತಯಾರಿಸಲಾಗುತ್ತಿದೆ. ಚಿತ್ರದ ಕೆಲಸಗಳು ವೇಗವಾಗಿ ನಡೆಯುತ್ತಿದ್ದು, ಬಿಡುಗಡೆಯ ದಿನಾಂಕದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎನ್ನಲಾಗಿದೆ. ಸಿನಿಮಾದ ಮೊದಲ ಭಾಗ ಈ ವರ್ಷ ದೀಪಾವಳಿಗೆ ಬಿಡುಗಡೆ ಆದರೆ ಎರಡನೇ ಭಾಗ ಮುಂದಿನ ವರ್ಷದ ದೀಪಾವಳಿಗೆ ಬಿಡುಗಡೆ ಆಗಲಿದೆ. ಸಿನಿಮಾ ಅನ್ನು ನಿತೇಶ್ ತಿವಾರಿ ನಿರ್ದೇಶನ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಭಾರತೀಯ ಪ್ರತಿಭೆ ಮತ್ತು ಐರೋಪ್ಯ ಪರಿಣಿತಿಗೆ ಸೇತುವಾಗಿರುವ ಭಾರತ್ ಇನ್ನೋವೇಟ್ಸ್: ಪ್ರಧಾನಿ ಮೋದಿ – Kannada News | India France Tech Partnership: Modi & Macron Lead Global Deep Tech Innovation for World Challenges

ನೀಸ್ ನಗರದಲ್ಲಿ ಮೋದಿ ಮತ್ತು ಮ್ಯಾಕ್ರಾನ್Image Credit source: PTI

ನೀಸ್ (ಫ್ರಾನ್ಸ್), ಜೂನ್ 14: ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ಭಾರತ ಮತ್ತು ಫ್ರಾನ್ಸ್ ದೇಶಗಳ ತಾಂತ್ರಿಕ ಪಾಲುದಾರಿಕೆ ಅತ್ಯಂತ ನಿರ್ಣಾಯಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತಿಳಿಸಿದ್ದಾರೆ. ಫ್ರಾನ್ಸ್‌ನ ನೀಸ್ ನಗರದಲ್ಲಿ (Nice city) ಜಂಟಿಯಾಗಿ ಹಮ್ಮಿಕೊಳ್ಳಲಾಗಿರುವ ‘ಭಾರತ್ ಇನ್ನೋವೇಟ್ಸ್ 2026’ (Bharat Innovates 2026) ಜಾಗತಿಕ ಡೀಪ್-ಟೆಕ್ (Deep Tech) ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೆ ಜಂಟಿಯಾಗಿ ಸಮಾವೇಶವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ, ಉಭಯ ದೇಶಗಳ ಸ್ನೇಹವು ಕೇವಲ ರಾಜತಾಂತ್ರಿಕತೆಗೆ ಸೀಮಿತವಾಗಿರದೆ, ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಿದರು.

ಮಾನವಕುಲದ ಸವಾಲುಗಳಿಗೆ ಪರಿಹಾರ: ಮೋದಿ

“ಇಂದು ಜಗತ್ತು ಎದುರಿಸುತ್ತಿರುವ ಹವಾಮಾನ ವೈಪರೀತ್ಯ, ಆರೋಗ್ಯ ರಕ್ಷಣೆ ಮತ್ತು ಕೃತಕ ಬುದ್ಧಿಮತ್ತೆಯ (AI) ಸುರಕ್ಷಿತ ಬಳಕೆಯಂತಹ ಬೃಹತ್ ಸವಾಲುಗಳಿಗೆ ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ನಾವೀನ್ಯತೆಯ (Innovation) ಮೂಲಕ ಉತ್ತರಗಳನ್ನು ಹುಡುಕುತ್ತಿವೆ,” ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ: ಮೋದಿ 5 ದಿನಗಳ ಐರೋಪ್ಯ ಪ್ರವಾಸದಲ್ಲಿ ‘ಭಾರತ್ ಇನ್ನೋವೇಟ್ಸ್’; ಹೂಡಿಕೆದಾರರೊಂದಿಗೆ ಪ್ರಧಾನಿ ಸಂವಾದ

ಹಿಂದಿನ ಕೈಗಾರಿಕಾ ಕ್ರಾಂತಿಗಳಲ್ಲಿ ಭಾರತ ಮತ್ತು ಅಭಿವೃದ್ಧಿಶೀಲ (Global South) ದೇಶಗಳು ಕೇವಲ ಅನುಯಾಯಿಗಳಾಗಿದ್ದವು. ಆದರೆ ಇಂದಿನ ಎಐ ಮತ್ತು ಡೀಪ್-ಟೆಕ್ ಯುಗದಲ್ಲಿ ಭಾರತವು ಕೇವಲ ವೀಕ್ಷಕನಲ್ಲ, ಬದಲಿಗೆ ಜಾಗತಿಕ ನಿರ್ಧಾರಗಳನ್ನು ರೂಪಿಸುವ ಪ್ರಮುಖ ಪಾಲುದಾರನಾಗಿ ಹೊರಹೊಮ್ಮಿದೆ ಎಂದು ಅವರು ಒತ್ತಿ ಹೇಳಿದರು.

ಸ್ಟಾರ್ಟ್‌ಅಪ್ ಶಕ್ತಿ: ಭಾರತದ ಯುವ ಪೀಳಿಗೆಯು ಬಾಹ್ಯಾಕಾಶ (Space Tech), ಸೆಮಿಕಂಡಕ್ಟರ್ ಮತ್ತು ಗ್ರೀನ್ ಹೈಡ್ರೋಜನ್ ವಲಯಗಳಲ್ಲಿ ಅದ್ಭುತ ಕ್ರಾಂತಿ ಮಾಡುತ್ತಿದೆ. ಭಾರತದಲ್ಲಿ ಸೃಷ್ಟಿಯಾಗುತ್ತಿರುವ ತಂತ್ರಜ್ಞಾನಗಳು ಕೇವಲ ದೇಶಕ್ಕಷ್ಟೇ ಅಲ್ಲ, ‘ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದ ವರ್ಲ್ಡ್’ (ಭಾರತದಲ್ಲಿ ನಿರ್ಮಿಸಿ, ಜಗತ್ತಿಗಾಗಿ ನೀಡಿ) ಎಂಬ ಮಂತ್ರದೊಂದಿಗೆ ಜಗತ್ತಿಗೆ ಉಪಯುಕ್ತವಾಗಲಿವೆ ಎಂದರು.

ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ ಶ್ಲಾಘನೆ

ಇದೇ ಸಂದರ್ಭದಲ್ಲಿ ಮಾತನಾಡಿದ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್, ಭಾರತದ ಡಿಜಿಟಲ್ ಮೂಲಸೌಕರ್ಯ ಮತ್ತು ತಾಂತ್ರಿಕ ಬೆಳವಣಿಗೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ತಂತ್ರಜ್ಞಾನ ವಲಯದಲ್ಲಿ ಭಾರತದೊಂದಿಗೆ ಕೈಜೋಡಿಸಲು ಫ್ರಾನ್ಸ್ ಯುವ ಉದ್ಯಮಿಗಳು ಉತ್ಸುಕರಾಗಿದ್ದಾರೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಆಂತ್ರೋಪಿಕ್​ನ ಬಲಿಷ್ಠ ಎಐ ಮಾಡಲ್​ಗಳು ಅಮೆರಿಕನ್ನೇತರರಿಗೆ ಅಲಭ್ಯ; ಭಾರತಕ್ಕೆ ಇದು ಎಚ್ಚರಿಕೆಯ ಕರೆಗಂಟೆಯಾ?

ಈ ಮೂರು ದಿನಗಳ ಜಾಗತಿಕ ಸಮಾವೇಶದಲ್ಲಿ ಭಾರತದ 120 ಕ್ಕೂ ಹೆಚ್ಚು ಅತ್ಯಾಧುನಿಕ ದೀಪ್-ಟೆಕ್ ಸ್ಟಾರ್ಟ್‌ಅಪ್‌ಗಳು ಹಾಗೂ ಐಐಟಿಗಳಂತಹ ಉನ್ನತ ಶಿಕ್ಷಣ ಸಂಸ್ಥೆಗಳು ಭಾಗವಹಿಸಿದ್ದು, ಜಾಗತಿಕ ಹೂಡಿಕೆದಾರರ ಗಮನ ಸೆಳೆಯುತ್ತಿವೆ. 2047ರ ವೇಳೆಗೆ ಭಾರತವನ್ನು ‘ವಿಕಸಿತ ಭಾರತ’ವನ್ನಾಗಿ ಮಾಡುವ ನಿಟ್ಟಿನಲ್ಲಿ ಈ ಸಮಾವೇಶವು ಅತ್ಯಂತ ಮಹತ್ವದ ಮೈಲಿಗಲ್ಲಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು? ಎಲ್ಲಿ ಸಲ್ಲಿಸಬೇಕು? – Kannada News | Gruhalakshmi And Gruha Jyothi Scheme: here Is details Where And How to Apply and what are Documents Required

ಬೆಂಗಳೂರು, (ಜೂನ್ 14): ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಯನ್ನು  (Gruhalakshmi And Gruha Jyothi Scheme) ಪರಿಷ್ಕರಿಸಲು ರಾಜ್ಯ ಸರ್ಕಾರದ ಮುಂದಾಗಿದೆ. ಅನರ್ಹರಿಗೆ ಹೊಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ತಡೆಯಲು ಈ ಕ್ರಮಕ್ಕೆ ಮುಂದಾಗಿದ್ದು, ಫಲಾನುಭವಿಗಳು ಮತ್ತೊಮ್ಮೆ ಎಲ್ಲಾ ವಿವರ-ಫೋಟೋ ಜೊತೆಗೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದೆ. ಹೌದು… ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂತಹ ನಿರ್ಧಾರ ಕೈಗೊಂಡಿದೆ. ಹಾಗಾದ್ರೆ, ಮತ್ತೊಮ್ಮೆ ಅರ್ಜಿಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕು? ದಾಖಲೆಗಳೊಂದಿಗೆ ಎಲ್ಲಿ ಅರ್ಜಿ ಸಲ್ಲಿಸಬಹುದು? ಈ ಯೋಜನೆಗಳಿಗೆ ಯಾರ್ಯಾರು ಅರ್ಹರು ಎನ್ನುವ ವಿವರ ಇಲ್ಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Bangaluru rain: ಬೆಂಗಳೂರಲ್ಲಿ ಧಾರಾಕಾರ ಮಳೆ; ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ! – Kannada News | Bengaluru Heavy Rain: Roads Turn Into Lakes, Motorists Struggle Amid Severe Waterlogging

ಬೆಂಗಳೂರು, ಜೂನ್​​ 14: ನಗರದಲ್ಲಿ (bengaluru) ಕಳೆದೆರಡು ದಿನಗಳಿಂದ ಮಳೆ (Rain) ಚುರುಕುಗೊಂಡಿದೆ. ನಿನ್ನೆ ಸಂಜೆಯೂ ಮಳೆ ದರ್ಶನವಾಗಿದ್ದು, ಇಂದು ಮತ್ತೆ ಮಳೆ ಎಂಟ್ರಿಕೊಟ್ಟಿದೆ. ಎಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಸಂಜೆ ಆಗುತ್ತಿದ್ದಂತೆ ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ ಆರಂಭವಾಗಿದೆ. ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡಿದ್ದಾರೆ.

ಮುಖ್ಯಾಂಶಗಳು

  • ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆ
  • ಮಳೆಯಿಂದ ಟ್ರಾಫಿಕ್ ಜಾಮ್​, ವಾಹನ ಸವಾರರ ಪರದಾಟ
  • ಧಾರಾಕಾರ ಮಳೆಯಿಂದ ಕೆರೆಯಂತಾದ ಹಲವು ರಸ್ತೆಗಳು

ಎಲ್ಲೆಲ್ಲಿ ಮಳೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಆಗುತ್ತಿದ್ದಂತೆ ವರುಣನ ಆರ್ಭಟ ಶುರುವಾಗಿದೆ. ನಗರದ ಮೆಜೆಸ್ಟಿಕ್, ಟೌನ್ ಹಾಲ್, ಶೇಷಾದ್ರಿಪುರಂ, ಮಲ್ಲೇಶ್ವರಂ, ಶಿವಾಜಿನಗರ, ಫ್ರೀಡಂಪಾರ್ಕ್, ಗಾಂಧಿನಗರ, ಚಾಮರಾಜಪೇಟೆ, ಕಾರ್ಪೊರೇಷನ್, ಚಿಕ್ಕಪೇಟೆ, ರಾಜಾಜಿನಗರ, ವಿಜಯನಗರ, ಶಾಂತಿನಗರ ಹಾಗೂ ಮಡಿವಾಳ ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ.

ಇದನ್ನೂ ಓದಿ: Karnataka Weather Forecast: ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್​ ಘೋಷಣೆ

ಮಧ್ಯಾಹ್ನವಿದ್ದ ಜಿಟಿ ಜಿಟಿ ಮಳೆ, ಸಂಜೆ ಆಗುತ್ತಿದ್ದಂತೆ ಬಿರುಸು ಪಡೆದುಕೊಂಡಿದ್ದು ಮಹಾನಗರವನ್ನು ಮತ್ತಷ್ಟು ಕೂಲ್ ಮಾಡಿದೆ. ಆದರೆ, ಈ ದಿಢೀರ್ ಮಳೆಯಿಂದಾಗಿ ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ಸಾರ್ವಜನಿಕರು ಹಾಗೂ ರಸ್ತೆ ಬದಿಯ ವ್ಯಾಪಾರಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಕೆರೆಯಂತೆ ತುಂಬಿ ತುಳುಕುತ್ತಿರುವ ರಸ್ತೆಗಳು

ಇನ್ನು ಧಾರಾಕಾರ ಮಳೆ ಹಿನ್ನೆಲೆ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿವೆ. ರಸ್ತೆಗಳ ಮೇಲೆ ಮೊಣಕಾಲುದ್ದ ನೀರು ನಿಂತಿರುವುದರಿಂದ ವಾಹನ ಸವಾರರು ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ದಿಢೀರ್ ಮಳೆಗೆ ಸಿಲುಕಿದ ನೂರಾರು ಸಾರ್ವಜನಿಕರು ಮತ್ತು ದ್ವಿಚಕ್ರ ವಾಹನ ಸವಾರರು ಕೆ.ಆರ್. ಮಾರ್ಕೆಟ್ ಫ್ಲೈಓವರ್ ಕೆಳಗೆ ನಿಂತು ಆಶ್ರಯ ಪಡೆದರು. ಜನಸಾಮಾನ್ಯರು ಛತ್ರಿ ಹಿಡಿದು ಮಳೆಯಲ್ಲೇ ಹೋಗುತ್ತಿರುವ ದೃಶ್ಯಗಳು ಕಂಡುಬಂದಿವೆ. ಮಳೆಯಿಂದಾಗಿ ಕೆಲವೆಡೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ.

ವರದಿ: ನಟರಾಜ್​​ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನಿಮ್ಮನೆಯಲ್ಲೂ ನೊಣಗಳ ಕಾಟ ಹೆಚ್ಚಿದ್ಯಾ? ಇವುಗಳನ್ನು ತೊಡೆದು ಹಾಕಲು ಇಲ್ಲಿದೆ ಸುಲಭ ಪರಿಹಾರ – Kannada News | Home remedies that help keep away houseflies from home

ಮಾನ್ಸೂಸ್‌ ಸೀಸನ್‌ನಲ್ಲಿ ಮಳೆಯೊಂದಿಗೆ ಹಾವು, ಸೊಳ್ಳೆಗಳ ಕಾಟವೂ ಹೆಚ್ಚಿರುತ್ತದೆ. ನೊಣಗಳು (houseflies) ಇದಕ್ಕೆ ಹೊರತಿಲ್ಲ. ಹೌದು ಮಳೆಗಾಲ ಆರಂಭವಾಗುತ್ತಿದ್ದಂತೆ ಮನೆಗಳಲ್ಲಿ ನೊಣಗಳ ಹಾವಳಿ ಕೂಡ ಹೆಚ್ಚಾಗುತ್ತದೆ. ತೇವಾಂಶವುಳ್ಳ ಪ್ರದೇಶಗಳಲ್ಲಿ ನೊಣಗಳು ಹೆಚ್ಚಾಗಿ ಬೆಳೆಯುತ್ತವೆ. ಮಳೆಗಾಲದಲ್ಲಿ ಅವುಗಳ ಸಂಖ್ಯೆ ಹೆಚ್ಚಾಗುತ್ತದೆ. ಇವು ಆಹಾರ ಮತ್ತು ಪಾನೀಯಗಳನ್ನು ಕಲುಷಿತಗೊಳಿಸಿ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದರೆ  ಅನೇಕರಿಗೆ ಮನೆಯಲ್ಲಿ ಹಾವಳಿಯಿಡುವ ಈ ನೊಣಗಳನ್ನು ತೊಡೆದುಹಾಕುವುದು ತುಂಬಾನೇ ಕಷ್ಟ. ಹೀಗಿರುವಾಗ ಕೆಲವೊಂದು ಮನೆಮದ್ದುಗಳ ಸಹಾಯದಿಂದ ನೊಣಗಳನ್ನು ಸಂಪೂರ್ಣವಾಗಿ ತೊಡೆದುಹಾಕಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ನೊಣಗಳ ಕಾಟದಿಂದ ಮುಕ್ತಿ ಪಡೆಯಲು ಸಹಕಾರಿ ಈ ಮನೆಮದ್ದುಗಳು:

ಉಪ್ಪು ನೀರು:
ಒಂದು ಲೋಟಕ್ಕೆ ಎರಡು ಟೀ ಚಮಚ ಉಪ್ಪು ತುಂಬಿಸಿ ನೀರು ಸೇರಿಸಿ. ಈಗ, ಈ ನೀರನ್ನು ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ ಮನೆಯ ವಿವಿಧ ಪ್ರದೇಶಗಳಲ್ಲಿ ಸಿಂಪಡಿಸಿ. ಈ ನೀರನ್ನು ಸಿಂಪಡಿಸಿದ ಪ್ರದೇಶಗಳಲ್ಲಿ ನೊಣಗಳು ಸುಳಿದಾಡುವುದಿಲ್ಲ.

ನಿಂಬೆ ಮತ್ತು ಲವಂಗ: ನಿಂಬೆಹಣ್ಣನ್ನು ಅರ್ಧದಷ್ಟು ಕತ್ತರಿಸಿ ಅದರ ತಿರುಳಿನಲ್ಲಿ ಲವಂಗವನ್ನು ಅಂಟಿಸಿ. ಈ ನಿಂಬೆ ಹೋಳುಗಳನ್ನು ಒಂದು ತಟ್ಟೆಯಲ್ಲಿ ಇರಿಸಿ ಮತ್ತು ನೊಣಗಳು ಹೆಚ್ಚಾಗಿ ಬರುವ ಸ್ಥಳಗಳಲ್ಲಿ ಇರಿಸಿ. ನಿಂಬೆ ಮತ್ತು ಲವಂಗದ ವಾಸನೆಯು ನೊಣಗಳನ್ನು ನಿಮ್ಮ ಮನೆಯಿಂದ ದೂರವಿಡುತ್ತದೆ.

ಕರ್ಪೂರ ಪುಡಿ: ಬಹುತೇಕ ಎಲ್ಲರ ಮನೆಯಲ್ಲೂ ಕರ್ಪೂರ ಇದ್ದೇ ಇರುತ್ತವೆ. 4 ರಿಂದ 8 ಕರ್ಪೂರ ತೆಗೆದುಕೊಂಡು ನುಣ್ಣಗೆ ಪುಡಿಮಾಡಿ. ನಂತರ ಈ ಪುಡಿಯನ್ನು ನೀರಿನೊಂದಿಗೆ ಬೆರೆಸಿ ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ. ನೊಣಗಳು ಹೆಚ್ಚಾಗಿ ಬರುವ ಕಡೆ ಸಿಂಪಡಿಸಿ. ನೀವು ಹೀಗೆ ಮಾಡಿದರೆ, ಒಂದೇ ಒಂದು ನೊಣ ಮನೆಯೊಳಗೆ ಕಾಣಿಸುವುದಿಲ್ಲ.

ತುಳಸಿ ಎಲೆ ಪೇಸ್ಟ್: ಕೆಲವು ತುಳಸಿ ಎಲೆಗಳನ್ನು ತೆಗೆದುಕೊಂಡು ಅವುಗಳನ್ನು ನುಣ್ಣಗೆ ಪೇಸ್ಟ್ ಮಾಡಿ. ಈ ಪೇಸ್ಟ್ ಅನ್ನು ನೀರಿನೊಂದಿಗೆ ಬೆರೆಸಿ ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ. ನಿಮ್ಮ ಮನೆಯಲ್ಲಿ ನೊಣಗಳು ಹೆಚ್ಚಾಗಿ ಕಂಡುಬರುವ ಪ್ರದೇಶಗಳಲ್ಲಿ ದಿನಕ್ಕೆ ಎರಡು ಬಾರಿ ಸಿಂಪಡಿಸಿ. ನೀವು ಹೀಗೆ ಮಾಡಿದರೆ, ಮನೆಯೊಳಗೆ ನೊಣಗಳು ಕಾಣಿಸಿಕೊಳ್ಳುವುದಿಲ್ಲ.

ದಾಲ್ಚಿನ್ನಿ ಪುಡಿ: ನೊಣಗಳನ್ನು ತೊಡೆದುಹಾಕಲು ದಾಲ್ಚಿನ್ನಿ ಕೂಡ ತುಂಬಾ ಉಪಯುಕ್ತವಾಗಿದೆ. ಮೊದಲು, ಕೆಲವು ದಾಲ್ಚಿನ್ನಿ ತುಂಡುಗಳನ್ನು ತೆಗೆದುಕೊಂಡು ಅವುಗಳನ್ನು ಮಿಕ್ಸಿಯಲ್ಲಿ ಪುಡಿಮಾಡಿ. ನಿಮ್ಮ ಮನೆಯಲ್ಲಿ ನೊಣಗಳು ಹೆಚ್ಚಾಗಿ ಕಂಡುಬರುವ ಪ್ರದೇಶಗಳಲ್ಲಿ ಈ ಪುಡಿಯನ್ನು ಸ್ವಲ್ಪ ಪ್ರಮಾಣದಲ್ಲಿ ಸಿಂಪಡಿಸಿ. ದಾಲ್ಚಿನ್ನಿಯ ವಾಸನೆಯು ನೊಣಗಳು ಮನೆಯೊಳಗೆ ಪ್ರವೇಶಿಸದಂತೆ ನೋಡಿಕೊಳ್ಳುತ್ತದೆ.

ಇದನ್ನೂ ಓದಿ: ಸೊಳ್ಳೆಯ ಕಾಟದಿಂದ ಪಾರಾಗಲು ಮನೆಯಲ್ಲಿ ಗಿಡಗಳನ್ನು ನೆಡುವುದು ಉತ್ತಮ

ಬೆಳ್ಳುಳ್ಳಿ ಮತ್ತು ಪುದೀನ ರಸ: ಕೆಲವು ಬೆಳ್ಳುಳ್ಳಿ ಎಸಳುಗಳನ್ನು ಕುದಿಸಿ, ನೀರನ್ನು ಸೋಸಿ, ಪುದೀನಾ ಎಣ್ಣೆಯೊಂದಿಗೆ ಬೆರೆಸಿ ಸ್ಪ್ರೇ ಮಾಡಿ. ಈ ಮಿಶ್ರಣವನ್ನು ಮನೆಯ ಮೂಲೆಗಳು, ಕಿಟಕಿಗಳು ಮತ್ತು ಬಾಗಿಲುಗಳ ಮೇಲೆ ಸಿಂಪಡಿಸಿ. ಬೆಳ್ಳುಳ್ಳಿ ಮತ್ತು ಪುದೀನದ ಬಲವಾದ ವಾಸನೆಯು ನೊಣಗಳು ಮತ್ತು ಸೊಳ್ಳೆಗಳನ್ನು ತೊಡೆದು ಹಾಕಲು ತುಂಬಾನೇ ಸಹಕಾರಿಯಾಗಿದೆ.

ಮನೆಯನ್ನು ಸ್ವಚ್ಛವಾಗಿಡಿ: ನೊಣಗಳು ಕಸ, ಆಹಾರದ ಅವಶೇಷಗಳು ಮತ್ತು ಸ್ವಚ್ಛವಲ್ಲದ ಪ್ರದೇಶಗಳತ್ತ ಹೆಚ್ಚು ಆಕರ್ಷಿತವಾಗುತ್ತವೆ. ಆದ್ದರಿಂದ, ನಿಮ್ಮ ಮನೆಯನ್ನು, ವಿಶೇಷವಾಗಿ ನಿಮ್ಮ ಅಡುಗೆಮನೆಯನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ ಮತ್ತು ಕಸಗಳನ್ನು ಆಗಾಗ್ಗೆ ವಿಲೇವಾರಿ ಮಾಡುತ್ತಿರಿ.

ಈ ಸಸ್ಯಗಳು ಪ್ರಯೋಜನಕಾರಿ: ತುಳಸಿ, ಪುದೀನ ಮತ್ತು ಲ್ಯಾವೆಂಡರ್‌ನಂತಹ ಕೆಲವು ಸಸ್ಯಗಳು ನೈಸರ್ಗಿಕ ಕೀಟ-ನಿವಾರಕ ಗುಣಗಳನ್ನು ಹೊಂದಿವೆ. ನೊಣಗಳು ನಿಮ್ಮ ಮನೆಗೆ ಪ್ರವೇಶಿಸುವುದನ್ನು ತಡೆಯಲು, ಕಿಟಕಿಗಳು ಅಥವಾ ಪ್ರವೇಶದ್ವಾರಗಳ ಬಳಿ ಪಾಟ್‌ಗಳಲ್ಲಿ ಈ ಸಸ್ಯಗಳನ್ನಿಡಿ. ಇದು ನೊಣಗಳು ಮನೆಯೊಳಗೆ ಪ್ರವೇಶಿಸುವುದನ್ನು ತಡೆಯುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಖುಷಿ ಪಟ್ಟ ರಮೇಶ ಜಾರಕಿಹೊಳಿ – Kannada News | BJP MLA Ramesh jarkiholi happy for Missed KPCC President to Hi Brother Satish Jarkiholi

ದಾವಣಗೆರೆ, (ಜೂನ್ 14): ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್​​ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ  ರಮೇಶ್ ಜಾರಕಿಹೊಳಿ (Ramesh Jarkiholi) ಖುಷಿ ಪಟ್ಟಿದ್ದಾರೆ.

ದಾವಣಗೆರೆಯಲ್ಲಿಂದು ಮಾತನಾಡಿದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಆಗದೇ ಇರುವುದು ಒಳ್ಳೆಯದಾಗಿದೆ. ಕಾರಣ 2028ಕ್ಕೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಸತೀಶ್ ಜಾರಕಿಹೊಳಿ ಕೆಪಿಸಿಸಿ ಆಧ್ಯಕ್ಷ ಆಗದೇ ಇರುವು ದೇವರೇ ಒಳ್ಳೆಯದನ್ನ ಮಾಡಿದ್ದಾನೆ. ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ನೀಡಿದ್ದರೇ ತೊಂದರೇ ನಮಗಾಗುತ್ತಿತ್ತು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿವಾದಾತ್ಮಕ ಹೇಳಿಕೆ: ಪ್ರೊ ಭಗವಾನ್ ವಿರುದ್ಧ ಕೇಸ್​ ಬುಕ್​​, ಕ್ಷಮೆ‌ ಕೇಳಬೇಕು ಎಂದ ಉಗ್ರಪ್ಪ – Kannada News | Controversial Remarks on Lord Rama: Case Filed Against Prof. K.S. Bhagawan, Ugrappa Demands Apology

ದಾವಣಗೆರೆ, ಜೂನ್​ 14: ‘ಶ್ರೀರಾಮ ದಶರಥನ ಮಗ ಅಲ್ಲ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರೊ. ಕೆಎಸ್ ಭಗವಾನ್ (KS Bhagavan)​​ ವಿರುದ್ಧ ದಾವಣಗೆರೆ (davanagere) ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ ಎಂದು ಆರೋಪಿಸಿ, ಹಿಂದೂ ಜಾಗರಣ ವೇದಿಕೆಯ ಹರಿಹರ ತಾಲೂಕು ಪ್ರಧಾನ ಕಾರ್ಯದರ್ಶಿ ದಿನೇಶ್ ದೂರು ನೀಡಿದ್ದಾರೆ. ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಮುಖ್ಯಾಂಶಗಳು

  • ಶ್ರೀರಾಮನ ಬಗ್ಗೆ ಪ್ರೊ ಕೆಎಸ್ ಭಗವಾನ್​ ಅವಹೇಳನಕಾರಿ ಹೇಳಿಕೆ
  • ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ
  • ಪ್ರೊ ಕೆಎಸ್ ಭಗವಾನ್​​ ವಿರುದ್ಧ ಪ್ರಕರಣ ದಾಖಲು

ಸದ್ಯ ಹರಿಹರ ಗ್ರಾಮಾಂತರ ಪೊಲೀಸರು ಪ್ರೊ. ಕೆ.ಎಸ್. ಭಗವಾನ್​ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಲಂ 196(1)(a) ಮತ್ತು 299ರ ಅನ್ವಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಜನರ ಬಳಿ ಕ್ಷಮೆ‌ ಕೇಳಬೇಕು: ಮಾಜಿ ಸಂಸದ ವಿಎಸ್ ಉಗ್ರಪ್ಪ ಆಗ್ರಹ

ಇನ್ನು ವಿಚಾರವಾಗಿ ಬಾಗಲಕೋಟೆಯಲ್ಲಿ ಮಾಜಿ ಸಂಸದ ವಿಎಸ್ ಉಗ್ರಪ್ಪ ಪ್ರತಿಕ್ರಿಯಿಸಿದ್ದು, ಭಗವಾನ್ ಅವರು ವಯಸ್ಸಿನ ಕಾರಣ‌ವೊ, ತಿಕ್ಕಲುತನವೊ ಗೊತ್ತಿಲ್ಲ. ಏನೇನೋ ಬಾಯಿಗೆ ಬಂದ ಹಾಗೆ ಮಾತನಾಡುತ್ತಾನೆ. ಅವರನ್ನು ನಾನು ಅನೇಕ ಸಾರಿ ಇಗ್ನೋರ್‌ ಮಾಡಬೇಕು ಅಂತಿದ್ದೆ. ಮಹರ್ಷಿ ವಾಲ್ಮೀಕಿ ರಾಮಾಯಣ ಬಗ್ಗೆ ಕೆಟ್ಟ ರೀತಿ ಮಾತಾಡಿದ್ದಾನೆ. ಇವರಿಗೆ ರಾಮಾಯಣದ ಬಗ್ಗೆ ಅರಿವು ಇಲ್ಲ. ಭಗವಾನ್ ಅಂತ‌ ಹೆಸರು ಇಟ್ಟುಕೊಂಡು ಮನಸಾ ಇಚ್ಛೆ ಮಾತಾಡುತ್ತಾನೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ‘ಶ್ರೀರಾಮ ದಶರಥನ ಮಗ ಅಲ್ಲ’: ವಿವಾದಾತ್ಮಕ ಹೇಳಿಕೆ ಕೊಟ್ಟ ಪ್ರೊ. ಭಗವಾನ್

ಗಾಂಧೀಜಿ ಬಯಸಿದ್ದು ಗಾಂಧಿ ರಾಜ್ಯವಲ್ಲ, ರಾಮರಾಜ್ಯ. ಗಾಂಧಿಗಿಂತ ದೊಡ್ಡ ಮನುಷ್ಯನಾ ನೀನು? ಸೋ ಕಾಲ್ಡ್ ಇಂಟಲೆಕ್ಚುವಲ್ ಅಂತ ತೋರಿಸಿಕೊಳ್ಳುತ್ತಿರುವ ಭಗವಾನ್ ಈ ರೀತಿ ಮಾತಾಡಬಾರದು. ವಾಲ್ಮೀಕಿ‌ ಸಮಾಜದ‌ ಮೇಲೆ ಸಿಟ್ಟಿದ್ದರೆ ಈ‌ ರೀತಿ ಮಾತನಾಡುವುದು ಶೋಭೆ ತರುವುದಿಲ್ಲ. ನಮ ಭಾವನೆಗೆ ಧಕ್ಕೆ ಮಾಡಿದ್ದೀರಿ ಈ ದೇಶದ ಜನರ ಬಳಿ ಕ್ಷಮೆ‌ ಕೇಳಬೇಕು ಎಂದು ಉಗ್ರಪ್ಪ ಆಗ್ರಹಿಸಿದ್ದಾರೆ.

ನಡೆದಿದ್ದೇನು?

ಜೂನ್ 9 ರಂದು ಹರಿಹರದ ‘ಪ್ರೊ. ಬಿ. ಕೃಷ್ಣಪ್ಪ ಮೈತ್ರಿವನ’ದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರೊ. ಕೆ.ಎಸ್. ಭಗವಾನ್, ಶ್ರೀರಾಮನ ಜನನದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. “ನೀವು ಪೂಜೆ ಮಾಡುವ ಶ್ರೀರಾಮ ತನ್ನ ತಂದೆಗೆ ಹುಟ್ಟಿದವನಲ್ಲ. ರಾಜ ದಶರಥ ಪುತ್ರಕಾಮೇಷ್ಟಿ ಯಾಗ ಮಾಡಿದಾಗ, ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕಿತ್ತು. ರಾಣಿ ಪುರೋಹಿತರೊಂದಿಗೆ ರಾತ್ರಿ ಕಳೆದಿದ್ದಾಳೆ ಎಂದರೆ ಅರ್ಥ ಮಾಡಿಕೊಳ್ಳಿ, ನಿಮ್ಮ ದೇವರು ಅಪ್ಪನಿಗೆ ಹುಟ್ಟಿದ ಮಗ ಅಲ್ಲ”. ಹೀಗೆ ವಿವಾದಾತ್ಮಕವಾಗಿ ಮಾತನಾಡಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

T20 World Cup 2026: ಪಾಕ್ ವಿರುದ್ಧ ಅಗ್ರಸ್ಥಾನಕ್ಕೇರುವ ಸನಿಹದಲ್ಲಿ ದೀಪ್ತಿ ಶರ್ಮಾ

Source link

Exit mobile version