ರಜನಿ ಕೊನೆಯ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಆ ವಿಶೇಷ ವ್ಯಕ್ತಿ – Kannada News | Rajinikanth’s Last Film? Daughter Soundarya to Produce Post Jailer 2 Buzz

ರಜನಿಕಾಂತ್ (Rajinikanth) ಅವರು ಸದ್ಯ ‘ಜೈಲರ್ 2’ ಸಿನಿಮಾ ಶೂಟ್​​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟ್ ವಿವಿಧ ಹಂತಗಳಲ್ಲಿ ಭರದಿಂದ ಸಾಗಿದೆ. ಹೀಗಿರುವಾಗಲೇ ರಜನಿಕಾಂತ್ ಕೊನೆಯ ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಚಿತ್ರವನ್ನು ರಜನಿ ಮಗಳೇ ನಿರ್ಮಾಣ ಮಾಡುವ ಸಾಧ್ಯತೆ ಇದೆ ಎಂದು ವರದಿ ಆಗಿದೆ. ಈ ಆಸೆಯನ್ನು ಈಡೇರಿಸಲು ರಜನಿ ಕೂಡ ಒಪ್ಪಿದ್ದಾರಂತೆ.

ಹಲವು ವರ್ಷ ಚಿತ್ರರಂಗದಲ್ಲಿ ಶ್ರಮಿಸಿ ನಂತರ ವೃತ್ತಿ ಜೀವನಕ್ಕೆ ಗುಡ್​​​ಬೈ ಹೇಳಬೇಕು ಎಂದರೆ ಭಾವನಾತ್ಮಕವಾಗಿ ಅದು ನಿಜಕ್ಕೂ ಚಾಲೆಂಜಿಂಗ್ ಅನ್ನಿಸೋ ವಿಷಯ. ಕೊನೆಯ ಸಿನಿಮಾ ಮೆಮೊರೆಬಲ್ ಆಗಿರಬೇಕು ಎಂದು ಅನೇಕರು ಬಯಸುತ್ತಾರೆ. ಈ ಎಲ್ಲಾ ಕಾರಣದಿಂದ ಸೌಂದರ್ಯಾ ರಜನಿಕಾಂತ್ ಅವರು ಸಿನಿಮಾನ ನಿರ್ಮಾಣ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಸಾಮಾನ್ಯವಾಗಿ ಕೊನೆಯ ಸಿನಿಮಾ ಎಂದಾಗ ಬಿಸ್ನೆಸ್ ದೃಷ್ಟಿಯಲ್ಲೂ ಹೆಚ್ಚು ಲಾಭ ತಂದುಕೊಡುತ್ತದೆ. ರಜನಿ ಅವರನ್ನು ಇನ್ನೆಂದೂ ದೊಡ್ಡ ಪರದೆ ಮೇಲೆ ನೋಡಲು ಸಾಧ್ಯವಿಲ್ಲ ಎಂಬ ಭಾವಾನಾತ್ಮಕ ನೆಲೆಗಟ್ಟಿನ ಮೇಲೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಿನಿಮಾನ ವೀಕ್ಷಿಸಲು ತೆರೆಳುತ್ತಾರೆ. ಇನ್ನು, ಟಿವಿ ಹಾಗೂ ಒಟಿಟಿ ಹಕ್ಕುಗಳು ಕೂಡ ದೊಡ್ಡ ಸಂಖ್ಯೆಯಲ್ಲಿ ಬಿಕರಿ ಆಗುವ ಸಾಧ್ಯತೆ ಇರುತ್ತದೆ.

ರಜನಿಕಾಂತ್ ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಶ್ರಮಿಸಿದ್ದಾರೆ. ಅವರ ದೇಹ ಆ್ಯಕ್ಷನ್ ದೃಶ್ಯಗಳನ್ನು ಮಾಡಲು ಸ್ಪಂದಿಸುತ್ತಿಲ್ಲ. ಹೀಗಾಗಿ ಡ್ಯೂಪ್ ಬಳಸಿ ಈ ರೀತಿಯ ದೃಶ್ಯಗಳನ್ನು ಸೆರೆ ಹಿಡಿಯಬೇಕಿದೆ. ಇದೆಲ್ಲದರ ಮಧ್ಯೆ ನಟಿಸಲು ಸಾಕಷ್ಟು ಶ್ರಮ ಹಾಕಲೇಬೇಕು. ಈ ಎಲ್ಲಾ ಕಾರಣದಿಂದ ವಿಶ್ರಾಂತಿ ಪಡೆಯುವ ಆಲೋಚನೆಯಲ್ಲಿ ಅವರಿದ್ದಾರೆ.

ಇದನ್ನೂ ಓದಿ: ಆಪ್ತ ಗೆಳೆಯನಿಗೂ ಇಲ್ಲ ರಿಯಾಯಿತಿ, ಕಮಲ್ ಜೊತೆ ಸಿನಿಮಾಕ್ಕೆ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು?

ರಜನಿಕಾಂತ್ ಇನ್ನೂ ಕೆಲವು ಸಿನಿಮಾಗಳನ್ನು ಮಾಡುತ್ತಾರೆ ಎಂಬ ವರದಿ ಕೂಡ ಇದೆ. ಅವರು ಕಮಲ್ ಹಾಸನ್ ಜೊತೆ ಸಿನಿಮಾ ಒಂದನ್ನು ಮಾಡಬೇಕಿದೆ. ಇದಾದ ಬಳಿಕ ಅವರ ಕೊನೆಯ ಸಿನಿಮಾ ಸೆಟ್ಟೇರುತ್ತದೆಯೇ ಎಂಬ ಪ್ರಶ್ನೆ ಮೂಡಿದೆ. ಅಷ್ಟೇ ಅಲ್ಲ, ಕೊನೆಯ ಸಿನಿಮಾಗೆ ನಿರ್ದೇಶನ ಮಾಡುವವರು ಯಾರು ಎಂಬ ಕುತೂಹಲವೂ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 2:48 pm, Wed, 18 February 26

Source link

ಹೆಣ್ಣುಮಕ್ಕಳ ಪೈಜಾಮದ ದಾರ ಸಡಿಲಿಸುವುದು ಕೂಡ ಅತ್ಯಾಚಾರದ ಪ್ರಯತ್ನ: ಸುಪ್ರೀಂಕೋರ್ಟ್​ – Kannada News | Supreme Court: Loosening Pajama String Is Attempted physical Assault Under POCSO, Overturns HC

ನವದೆಹಲಿ, ಫೆಬ್ರವರಿ 18: ಹೆಣ್ಣುಮಕ್ಕಳ ಪೈಜಾಮದ ದಾರ ಸಡಿಲಿಸುವುದು ಕೂಡ ಅತ್ಯಾಚಾರ ಪ್ರಯತ್ನ ಎಂದು ಸುಪ್ರೀಂಕೋರ್ಟ್(Supreme Court)​ ಅಭಿಪ್ರಾಯಪಟ್ಟಿದೆ. ಹೆಣ್ಣುಮಕ್ಕಳನ್ನು ಅನುಚಿತವಾಗಿ ಸ್ಪರ್ಶಿಸುವುದು ಪ್ಯಾಂಟ್ ದಾರವನ್ನು ಸಡಿಲಗೊಳಿಸುವುದು ಕೂಡ ಅತ್ಯಾಚಾರದ ಪ್ರಯತ್ನ ಎಂದು ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.

ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿತು, ವಿವಾದಾತ್ಮಕ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿತು, ಹೈಕೋರ್ಟ್​ ಈ ಅಪರಾಧವನ್ನು ಅತ್ಯಾಚಾರಕ್ಕೆ ಸಿದ್ಧತೆ ಎಂದು ವಿವರಿಸಿತ್ತು, ಪ್ರಯತ್ನವಲ್ಲ ಎಂದು ಹೇಳಿತ್ತು. ಅಲಹಾಬಾದ್ ಹೈಕೋರ್ಟ್‌ನ ತೀರ್ಪನ್ನು ಮಾರ್ಚ್ 17, 2025 ರಂದು ನೀಡಲಾಯಿತು. ನ್ಯಾಯಾಲಯದ ತೀರ್ಪು ಸಾಕಷ್ಟು ಕೋಲಾಹಲಕ್ಕೆ ಕಾರಣವಾಯಿತು.

ವೀ ದಿ ವುಮೆನ್ ಎಂಬ ಸರ್ಕಾರೇತರ ಸಂಸ್ಥೆಯ ಅಧ್ಯಕ್ಷೆ ಮತ್ತು ಹಿರಿಯ ವಕೀಲೆ ಶೋಭಾ ಗುಪ್ತಾ ಅವರ ಪತ್ರದ ನಂತರ ಸುಪ್ರೀಂ ಕೋರ್ಟ್ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿತ್ತು. ಮಂಗಳವಾರ, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಹೈಕೋರ್ಟ್‌ನ ತೀರ್ಪನ್ನು ರದ್ದುಗೊಳಿಸಿತು ಮತ್ತು ಇಬ್ಬರು ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಕಠಿಣ ಆರೋಪವನ್ನು ಎದುರಿಸುವಂತಾಗಿದೆ.

ಮತ್ತಷ್ಟು ಓದಿ: ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಲೈಂಗಿಕ ಅಪರಾಧಗಳ ಪ್ರಕರಣಗಳಲ್ಲಿ ಮಹಿಳೆಯರ ಬಗ್ಗೆ ಹೆಚ್ಚಿನ ಸಂವೇದನೆ ಇರಬೇಕು ಎಂದು ಎನ್‌ಜಿಒ ಅಧ್ಯಕ್ಷೆ ಶೋಭಾ ಗುಪ್ತಾ ಮತ್ತು ಹಿರಿಯ ವಕೀಲೆ ಎಚ್.ಎಸ್. ಫೂಲ್ಕಾ ಅವರು ಪೀಠಕ್ಕೆ ಮನವಿ ಮಾಡಿದ್ದರು. ಯಾವುದೇ ನ್ಯಾಯಮೂರ್ತಿಗಳು ಅಥವಾ ನ್ಯಾಯಾಲವು ವಾಸ್ತವತೆ ಮತ್ತು ಮಹಿಳೆಯರು ಎದುರಿಸಬಹುದಾದ ಸಂದರ್ಭಗಳ ಬಗ್ಗೆ ಸಂವೇದನಾಶೀಲರಲ್ಲದಿದ್ದರೆ ಸಂಪೂರ್ಣ ನ್ಯಾಯವನ್ನು ಕೊಡುತ್ತಾರೆ ಎಂದು ಅಪೇಕ್ಷಿಸಲು ಸಾಧ್ಯವಿಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

KSRTC BMTC Employees Strike: ನಾಳೆ ಸಾರಿಗೆ ಬಸ್ ಇರೋದಿಲ್ವಾ? ಹೇಗಿರುತ್ತೆ ಮುಷ್ಕರ? – Kannada News | Karnataka transport employees Bengaluru Chalo Protest On February 19th, Likely Disrupt Bus Services

ಬೆಂಗಳೂರು, (ಫೆಬ್ರವರಿ 18): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆ ‘ಬೆಂಗಳೂರು ಚಲೋ’ (Bengaluru Chalo) ಕೈಗೊಳ್ಳಲಿದ್ದು,ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ನಾಳೆ (ಗುರುವಾರ) ಸಂಜೆ ಬಳಿಕ ಬಿಎಂಟಿಸಿ (BMTC), ಕೆಎಸ್‌ಆರ್‌ಟಿಸಿ (KSRTC) ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ ಸಾರಿಗೆ ಇಲಾಖೆ ಸಹ ರಜೆ ಹಾಗೂ ನೋ ವರ್ಕ್ ನೋ ಪೇ ಸುತ್ತೋಲೆ ಹೊರಡಿಸಿದೆ. ಇನ್ನು ನಾಳಿನ ಮುಷ್ಕರ ಹೇಗಿರಲಿದೆ? ಬಸ್ ಸಂಚಾರ ಇರುತ್ತಾ? ಎನ್ನುವ ವಿವರ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರೇಯಸಿಯ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮಾಧ್ಯಮಗಳೆದುರು ನಕ್ಕು ಹೇಳಿದ್ದೇನು? – Kannada News | Indore Girlfriend Murder: Piyush Kills, Corpse Assault, Shows No Remorse

ಇಂದೋರ್, ಫೆಬ್ರವರಿ 18: ಪ್ರೇಯಸಿ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುಂಬಿ, ಉಸಿರುಗಟ್ಟಿಸಿ ಕೊಲೆ ಮಾಡಿ, ಎದೆಯ ಮೇಲೆ ಕುಳಿತು ಚಾಕು ಮುರಿಯುವವರೆಗೂ ಇರಿದಿದ್ದ ಆರೋಪಿ ಪಿಯೂಷ್ ಕೊಲೆ(Murder) ಬಗ್ಗೆ ಕೇಳಿದಾಗ ಮಾಧ್ಯಮದವರ ಮುಂದೆ ನಕ್ಕಿದ್ದಾನೆ. ಏನು ಆಗಬೇಕೋ ಅದೇ ಆಗಿದೆಬಿಡಿ ಎಂದಿದ್ದಾನೆ. ಆರೋಪಿ ಪಿಯೂಷ್ ಧಮ್ನೋಟಿಯಾ ಈ ಕೃತ್ಯ ಎಸಗಿದ ಕಾರಣ ಕೇಳಿದಾಗ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಲಿಲ್ಲ. ಇಂಡಿಯಾ ಟುಡೇಗೆ ಹೇಳಿಕೆ ನೀಡುವಾಗ ಆತನ ಮುಖದಲ್ಲಿ ನಗು ಇತ್ತು, ಎಲ್ಲವನ್ನೂ ಮರೆತುಬಿಡಿ, ಆಗಬೇಕಾಗಿರುವುದು ಆಗಿದೆ, ನೀವು ತಿಳಿದುಕೊಂಡು ಏನು ಮಾಡುತ್ತೀರಿ ಎಂದು ಪ್ರಶ್ನಿಸಿದ್ದಾನೆ.

ಮತ್ತಷ್ಟು ಪ್ರಶ್ನೆಗಳನ್ನು ಕೇಳಿದಾಗ ಸಮಯ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳಿದ್ದಾರೆ., ಫೆಬ್ರವರಿ 13 ರಂದು ಇಂದೋರ್‌ನ ದ್ವಾರಕಾಪುರಿ ಪ್ರದೇಶದ ಬಾಡಿಗೆ ಮನೆಯಲ್ಲಿ ಯುವತಿಯ ಕೊಳೆತ ಶವ ಪತ್ತೆಯಾಗಿತ್ತು. ಬೆತ್ತಲೆ ದೇಹವು ಪತ್ತೆಯಾದಾಗ ಈ ಅಪರಾಧ ಬೆಳಕಿಗೆ ಬಂದಿತು. ಒಂದು ದಿನದ ನಂತರ ಆರೋಪಿಯನ್ನು ಬಂಧಿಸಲಾಗಿತ್ತು. ನೆರೆಹೊರೆಯವರು ಕೆಟ್ಟ ವಾಸನೆ ಬರುತ್ತಿದೆ ಎಂದು ದೂರು ನೀಡಿದ ನಂತರ ಪೊಲೀಸರು ಸ್ಥಳಕ್ಕೆ ಬಂದಾಗ ಬೆಳಕಿಗೆ ಬಂದಿತ್ತು. ಕುತ್ತಿಗೆಯಲ್ಲಿ ಹಗ್ಗದ ಗುರುತುಗಳು ಗೋಚರಿಸುತ್ತಿತ್ತು.

ಈ ಇಬ್ಬರು ಒಬ್ಬರಿಗೊಬ್ಬರು ಪರಿಚಿತರಾಗಿದ್ದರು ಮತ್ತು ಒಂದಷ್ಟು ಭಿನ್ನಾಭಿಪ್ರಾಯಗಳನ್ನು ಹೊಂದಿದ್ದರು, ಆಕೆ ಮದುವೆಯಾಗು ಎಂದು ಒತ್ತಡ ಹಾಕುತ್ತಿದ್ದಳು ಎನ್ನಲಾಗಿದೆ. ಗೆಳತಿ ಇತರ ಪುರುಷರೊಂದಿಗೆ ಮಾತನಾಡಿದಾಗಲೆಲ್ಲಾ ಆತನಿಗೆ ಕೋಪ ಬರುತ್ತಿತ್ತು. ಘಟನೆಯ ನಂತರ, ಆರೋಪಿಯು ಕೋಣೆಯಲ್ಲೇ ಇದ್ದು, ದೇಹದ ಪಕ್ಕದಲ್ಲೇ ಮದ್ಯ ಸೇವಿಸಿದ್ದ. ಬಳಿಕ ಆಕೆಯ ಆತ್ಮವನ್ನು ಕರೆಯಲು ಪ್ರಯತ್ನಿಸಿದ್ದ.

ಮತ್ತಷ್ಟು ಓದಿ: ಗರ್ಲ್​ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ

ಪೊಲೀಸ್ ಮೂಲಗಳ ಪ್ರಕಾರ, ಧಮ್ನೋಟಿಯಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕ್ರಿಯೆಗೆ ಒತ್ತಡ ಹೇರಿದ್ದ, ಆಕೆ ಅನಾರೋಗ್ಯದಿಂದ ಬಳಲುತ್ತಿರುವುದಾಗಿ ಹೇಳಿ ನಿರಾಕರಿಸಿದ್ದಳು. ಆಕೆಯ ಮೇಲೆ ಬಲವಂತವಾಗಿ ಹಲ್ಲೆ ನಡೆಸಿದ್ದ ಆತ, ಆಕೆಯ ಕೈಕಾಲುಗಳನ್ನು ಹಗ್ಗಗಳಿಂದ ಕಟ್ಟಿ, ಕಣ್ಣಿಗೆ ಬಟ್ಟೆ ಕಟ್ಟಿ, ಉಡುಗೊರೆ ನೀಡುವುದಾಗಿ ಹೇಳಿದ್ದ. ಅವಳು ಮತ್ತೆ ವಿರೋಧಿಸಿದಾಗ, ಅವನು ಅವಳ ಬಾಯಿಗೆ ಬಟ್ಟೆಯನ್ನು ತುರುಕಿ ಅವಳ ಎದೆಯ ಮೇಲೆ ಕುಳಿತು, ಅವಳು ಪ್ರಜ್ಞೆ ಕಳೆದುಕೊಳ್ಳುವವರೆಗೂ ಅವಳನ್ನು ಉಸಿರುಗಟ್ಟಿಸಿದ್ದ.

ಅವಳು ಉಸಿರಾಟವನ್ನು ನಿಲ್ಲಿಸಿದ್ದಾಳೆಂದು ಅರಿತುಕೊಂಡ ಅವನು, ಅವಳ ಎದೆಯ ಬಳಿ ಎಷ್ಟು ಬಲದಿಂದ ಇರಿದಿದ್ದನೆಂದರೆ ಚಾಕುವೇ ಮುರಿದು ಹೋಗಿತ್ತು. ಆದರೆ ಆ ಕ್ರೌರ್ಯ ಸಾವಿನೊಂದಿಗೆ ಕೊನೆಗೊಂಡಿಲ್ಲ. ಆಕೆಯನ್ನು ಕೊಂದ ನಂತರವೂ ಅವನು ಕೋಣೆಯೊಳಗೆ ಇದ್ದ. ಅವನು ಹೊರಗೆ ಬಂದು, ಮದ್ಯದ ಅಂಗಡಿಯಿಂದ ಬಿಯರ್ ಖರೀದಿಸಿ, ಹಿಂತಿರುಗಿ, ಆಕೆಯ ನಿರ್ಜೀವ ದೇಹದ ಪಕ್ಕದಲ್ಲಿ ಕುಳಿತು ಕುಡಿದಿದ್ದ.

ವಿಚಾರಣೆಯ ಸಮಯದಲ್ಲಿ, ಅವನು ಶವದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬಟ್ಟೆ ಬದಲಾಯಿಸಿ ಪರಾರಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ, ಯುವತಿಯನ್ನು ಬೆತ್ತಲೆಯಾಗಿ ಬಿಟ್ಟು ಪರಾರಿಯಾಗಿದ್ದಾನೆ. ವಿದ್ಯಾರ್ಥಿನಿ ತನ್ನ ಆಧಾರ್ ಕಾರ್ಡ್ ಸರಿಪಡಿಸಬೇಕೆಂದು ಮನೆಯಿಂದ ಹೊರಟಿದ್ದಳು. ಆಕೆಯ ತಂದೆ ಆಕೆಯನ್ನು ಕಲೆಕ್ಟರೇಟ್ ಬಳಿ ಡ್ರಾಪ್ ಮಾಡಿದ್ದರು. ನಂತರ ಆಕೆ ತನ್ನ ತಂಗಿಗೆ ಕರೆ ಮಾಡಿ, ತನ್ನ ಸಹಪಾಠಿ ಪಿಯೂಷ್ ಧಮ್ನೋಟಿಯಾ ಜೊತೆ ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿರುವುದಾಗಿ ಮತ್ತು ರಾತ್ರಿ 11 ಗಂಟೆಗೆ ಹಿಂತಿರುಗುವುದಾಗಿ ಹೇಳಿದ್ದಳು. ಬಳಿಕ ವಾಪಸ್ ಬರಲೇ ಇಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮುದ್ದಾದ ಮೂರು ಮರಿಗಳಿಗೆ ಜನ್ಮ ನೀಡಿದ ‘ಗಾಮಿನಿ’: ಭಾರತದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ – Kannada News | Kuno National Park: Gamini Cheetah Welcomes 3 Cubs, Boosting India’s Population to 38

ಮಧ್ಯಪ್ರದೇಶ, ಫೆ.18: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ(KNP) ಇಂದು (ಫೆಬ್ರವರಿ 18, 2026) ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ‘ಗಾಮಿನಿ’ (Gamini) ಎಂಬ ಹೆಣ್ಣು ಚೀತಾ ಮೂರು ಆರೋಗ್ಯವಂತ ಮರಿಗಳಿಗೆ ಜನ್ಮ ನೀಡಿದೆ. ಇದೀಗ ಭಾರತದಲ್ಲಿ ಚೀತಾಗಳ ಒಟ್ಟು ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಇದರಲ್ಲಿ 27 ಚೀತಾಗಳು ಭಾರತದ ಮಣ್ಣಿನಲ್ಲೇ ಜನಿಸಿದ ಮರಿಗಳಾಗಿವೆ ಎಂಬುದು ವಿಶೇಷ. ಕಳೆದ ಬಾರಿ (ಮಾರ್ಚ್ 2024 ರಲ್ಲಿ) ಗಾಮಿನಿ ಆರು ಮರಿಗಳಿಗೆ ಜನ್ಮ ನೀಡುವ ಮೂಲಕ ದಾಖಲೆ ನಿರ್ಮಿಸಿತ್ತು. ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ: ‘ಕೈ’ ಸರ್ಕಾರಕ್ಕೆ ಅಶೋಕ್ ಪ್ರಶ್ನೆ

ಬೆಂಗಳೂರು, ಫೆಬ್ರವರಿ 18: ಕಮಿಷನ್ ಆರೋಪದ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ದ್ವಂದ್ವ ಧೋರಣೆ ಅನುಸರಿಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಟೀಕಿಸಿದರು. ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ಹಿಂದಿನ ಸರ್ಕಾರದ ಆರೋಪಗಳಿಗೆ ಸಾಕ್ಷಿ ಕೇಳದವರು ಈಗ ಏಕೆ ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು. ಸರ್ಕಾರದ ಮೇಲೆ ಗುತ್ತಿಗೆದಾರರ ಸಂಘ ಮಾಡಿರುವ 80 % ಕಮಿಷನ್ ಆರೋಪ ಗಂಭೀರ ವಿಷಯವಾಗಿದ್ದು, ಅದು ಸುಳ್ಳು ಎಂದು ಹೇಳುವ ಕಾಂಗ್ರೆಸ್ ನಾಯಕರು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಸವಾಲು ಹಾಕಿದರು. ನಾವು ಸತ್ಯಹರಿಶ್ಚಂದ್ರನ ಮಕ್ಕಳು ಎಂದು ಹೇಳಿಕೊಳ್ಳುವ ಸಚಿವರು ಮೊದಲು ಈ ಆರೋಪಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದ ಟೆಂಡರ್‌ಗಳು ನೆರೆಯ ಆಂಧ್ರಪ್ರದೇಶದ ಗುತ್ತಿಗೆದಾರರಿಗೆ ಹೋಗುತ್ತಿವೆ ಎಂದು ಆರೋಪಿಸಿದ ಅವರು, ಕೆಕೆಆರ್‌ಡಿಬಿ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಯಾವ್ಯಾವ ಕೆಲಸಕ್ಕೆ ಎಷ್ಟು ಕಮಿಷನ್? ಅಶೋಕ್ ಹೇಳಿದ್ದೇನು?

ಕಸದ ಟೆಂಡರ್ ಪಡೆಯಲು 7% ಕಮಿಷನ್, ಬಿಲ್ ಬಿಡುಗಡೆಗೆ 7% ಹಾಗೂ ವಿಶೇಷ ಎಲ್‌ಒಸಿ ಪಡೆಯಲು 7% ನೀಡಬೇಕಾಗಿದೆ. ಇದರಿಂದ ಒಟ್ಟಾರೆ 21% ಕಮಿಷನ್ ಸರ್ಕಾರಕ್ಕೆ ಹೋಗುತ್ತಿದೆ ಎಂದು ಆರೋಪಿಸಿದರು. ಇಂಜಿನಿಯರ್‌ಗಳಿಗೆ ಬೇರೆ ಕಮೀಷನ್ ನೀಡಬೇಕಾಗುತ್ತಿದೆ, ಕಸದ ಸಮಸ್ಯೆಗೆ ಸರ್ಕಾರದ ‘ಮಾಫಿಯಾ’ವೇ ಕಾರಣ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಸರ್ಕಾರದಿಂದಲೇ ಭೂಕಬಳಿಕೆ: ಜಿಲ್ಲೆಜಿಲ್ಲೆಗಳಲ್ಲಿ ಕಾಂಗ್ರೆಸ್​ ಭವನಕ್ಕೆ ಭೂಮಿ ನೀಡಿದ ದಾಖಲೆ ಸಮೇತ ಬಿಜೆಪಿ ಗಂಭೀರ ಆರೋಪ

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಕ್ರಮವನ್ನು ಖಂಡಿಸಿದ ಅವರು, ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಬಗ್ಗೆ ಅಶೋಕ್ ಏನಂದ್ರು?

ಜಿಬಿಎ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ವಿಚಾರವಾಗಿ ಮಾತನಾಡಿದ ಅಶೋಕ್, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆದಿದ್ದು, ಮೈತ್ರಿ ಸುಗಮವಾಗಿ ಚುನಾವಣೆ ಎದುರಿಸಲಿದೆ ಎಂದರು. ಸಣ್ಣಪುಟ್ಟ ಗೊಂದಲಗಳನ್ನು ಬೇಗನೆ ಬಗೆಹರಿಸಲಾಗುವುದು, ಅಂತಿಮ ತೀರ್ಮಾನ ಹೈಕಮಾಂಡ್‌ದ್ದು ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸೀಡಿಂಗ್ ಸಿಸ್ಟಂ… ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಇಲ್ಲ ಅವಕಾಶ! – Kannada News | India and Pakistan cannot meet in the Super 8 stage

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಝಿಂಬಾಬ್ವೆ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ತಂಡಗಳು ಸೂಪರ್-8 ಹಂತಕ್ಕೇರಿದೆ. ಇನ್ನು ನಮೀಬಿಯ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ಪಾಕಿಸ್ತಾನ್ ತಂಡ ಕೂಡ ದ್ವಿತೀಯ ಸುತ್ತಿಗೆ ಪ್ರವೇಶಿಸಲಿದೆ.

ಇದಾಗ್ಯೂ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಸೂಪರ್-8 ಸುತ್ತಿನಲ್ಲಿ ಮುಖಾಮುಖಿಯಾಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ಐಸಿಸಿ ನಿಗದಿಪಡಿಸಿರುವ ಸೀಡಿಂಗ್ ಸಿಸ್ಟಂ.

ಟಿ20 ವಿಶ್ವಕಪ್​ನ ಆರಂಭದಲ್ಲೇ ಐಸಿಸಿ ಸೀಡಿಂಗ್ ವ್ಯವಸ್ಥೆಯನ್ನು ರೂಪಿಸಿದೆ. ಈ ಮೂಲಕ ಪಂದ್ಯಾವಳಿಗೂ ಮುನ್ನವೇ ತಂಡಗಳ ಶ್ರೇಯಾಂಕದ ಆಧಾರದ ಮೇಲೆ ಅವುಗಳು ಮುಂದಿನ ಹಂತದಲ್ಲಿ (Super 8) ಯಾವ ಗುಂಪಿನಲ್ಲಿ ಇರಬೇಕೆಂಬುದನ್ನು ಎಂಬುದನ್ನು ನಿರ್ಧರಿಸಲಾಗಿದೆ.

ಅಂದರೆ ಗುಂಪು ಹಂತದಲ್ಲಿ ಒಂದು ತಂಡ ಮೊದಲ ಸ್ಥಾನ ಪಡೆಯಲಿ ಅಥವಾ ಎರಡನೇ ಸ್ಥಾನ ಪಡೆಯಲಿ, ಅದು ತನ್ನ ಸೀಡಿಂಗ್‌ಗೆ ನಿಗದಿಯಾದ ಸೂಪರ್ 8 ಗುಂಪನ್ನೇ ಸೇರುತ್ತದೆ. ಉದಾಹರಣೆಗೆ, ಭಾರತವು ತನ್ನ ಗುಂಪಿನಲ್ಲಿ ಎಷ್ಟನೇ ಸ್ಥಾನದಲ್ಲಿದ್ದರೂ ಸೂಪರ್ 8ರಲ್ಲಿ ‘X1’ ಸ್ಥಾನವನ್ನೇ ಪಡೆಯುತ್ತದೆ.  ಅತ್ತ ಪಾಕಿಸ್ತಾನಕ್ಕೆ Y3 ಸ್ಥಾನವನ್ನು ನೀಡಲಾಗಿದೆ.

ಹೀಗಾಗಿ ಸೂಪರ್-8 ಹಂತದಲ್ಲಿ ಭಾರತ ತಂಡವು ಗ್ರೂಪ್- 1 ರಲ್ಲಿ ಕಣಕ್ಕಿಳಿದರೆ, ಪಾಕ್ ತಂಡವು ಅರ್ಹತೆ ಪಡೆದರೆ ಗ್ರೂಪ್-2 ನಲ್ಲಿ ಕಣಕ್ಕಿಳಿಯಲಿದೆ.

ಸೀಡಿಂಗ್ ಸಿಸ್ಟಂ ಯಾಕೆ?

ವಾಣಿಜ್ಯ ಮತ್ತು ಸಾರಿಗೆ ಅನುಕೂಲಕ್ಕಾಗಿ ಟಿ20 ವಿಶ್ವಕಪ್​ನ ಆರಂಭದಲ್ಲೇ ಸೀಡಿಂಗ್ ಸಿಸ್ಟಂ ಪರಿಚಯಿಸಲಾಗಿದೆ. ಇದರಿಂದ ಪ್ರಸಾರಕರು ಮತ್ತು ಅಭಿಮಾನಿಗಳಿಗೆ ಯಾವ ತಂಡ ಯಾವ ದಿನ ಎಲ್ಲಿ ಆಡಲಿದೆ ಎಂಬುದು ಮೊದಲೇ ತಿಳಿಯಲು  ಸಹಾಯ ಮಾಡುತ್ತದೆ. ಇದರಿಂದ ಟಿಕೆಟ್ ಬುಕ್ಕಿಂಗ್ ಹಾಗೂ ಪ್ರಯಾಣ ಕೂಡ ಸುಲಭವಾಗುತ್ತದೆ.

ಹೀಗಾಗಿ ಈ ಬಾರಿ ಸೂಪರ್-8 ಸುತ್ತಿಗೆ ಸೀಡಿಂಗ್ ವ್ಯವಸ್ಥೆ ಮಾಡಲಾಗಿದ್ದು, ಅದರಂತೆ ಗ್ರೂಪ್- 1 ರಲ್ಲಿ ಕಣಕ್ಕಿಳಿಯುವ ತಂಡಗಳು ತನ್ನೆಲ್ಲಾ ಪಂದ್ಯಗಳನ್ನು ಭಾರತದಲ್ಲೇ ಆಡಲಿದೆ. ಹಾಗೆಯೇ ಗ್ರೂಪ್-2 ನಲ್ಲಿರುವ ತಂಡಗಳ ಪಂದ್ಯಗಳು ಶ್ರೀಲಂಕಾದಲ್ಲಿ ಜರುಗಲಿದೆ.

ಸೂಪರ್-8 ಗ್ರೂಪ್:

  • ಗ್ರೂಪ್ 1 (X): ಭಾರತ (X1), ಝಿಂಬಾಬ್ವೆ (X2), ವೆಸ್ಟ್ ಇಂಡೀಸ್ (X3), ಸೌತ್ ಆಫ್ರಿಕಾ (X4).
  • ಗ್ರೂಪ್ 2 (Y): ಇಂಗ್ಲೆಂಡ್ (Y1), ನ್ಯೂಝಿಲೆಂಡ್ (Y2), ಪಾಕಿಸ್ತಾನ್ (ಅರ್ಹತೆ ಪಡೆದರೆ) (Y3), ಶ್ರೀಲಂಕಾ (Y4).

ಈ ಎಂಟು ತಂಡಗಳು ಸೂಪರ್-8 ಸುತ್ತಿನಲ್ಲಿ ಗ್ರೂಪ್ ತಂಡಗಳ ವಿರುದ್ಧ ಸೆಣಸಲಿದೆ. ಅಂದರೆ ಭಾರತ ತಂಡವು ತನ್ನ ಗ್ರೂಪ್​ನಲ್ಲಿರುವ ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ತಂಡಗಳನ್ನು ಎದುರಿಸಲಿದೆ.

ಇತ್ತ ಪಾಕಿಸ್ತಾನ್ ತಂಡವು ಸೂಪರ್-8 ಸುತ್ತಿಗೆ ಪ್ರವೇಶಿಸಿದರೆ ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ಸೆಣಸಬೇಕಿದೆ.

ಇದನ್ನೂ ಓದಿ: ಭಾರತದಲ್ಲಿ ‘ಬಿಗ್ ಬ್ಯಾಷ್ ಲೀಗ್’

ಇಲ್ಲಿ ಗ್ರೂಪ್​ನಲ್ಲಿನ ತಂಡಗಳ ನಡುವೆ ಪಂದ್ಯ ನಡೆಯುವುದರಿಂದ ಸೂಪರ್-8 ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗುವುದಿಲ್ಲ. ಇದಾಗ್ಯೂ ಉಭಯ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದರೆ ಮತ್ತೆ ಮುಖಾಮುಖಿಯಾಗುವ ಸಾಧ್ಯತೆಯಿದೆ. ಹೀಗಾಗಿ ಇಂಡೊ-ಪಾಕ್ ಕದನವನ್ನು ಮತ್ತೆ ವೀಕ್ಷಿಸಲು ಸೆಮಿಫೈನಲ್ ಅಥವಾ ಫೈನಲ್​ವರೆಗೆ ಕಾಯಲೇಬೇಕು.

Source link

ಶಾಸಕ ಸ್ಥಾನ ಅಸಿಂಧುಗೊಂಡ ಬಗ್ಗೆ ಸುಬ್ಬಾರೆಡ್ಡಿ ಫಸ್ಟ್​ ರಿಯಾಕ್ಷನ್​​: ಕಾಂಗ್ರೆಸ್​​ ನಾಯಕ ಹೇಳಿದ್ದೇನು? – Kannada News | S.N. Subbareddy Reacts to Bagepalli MLA Seat Invalidation Verdict

ದೇವನಹಳ್ಳಿ, ಫೆಬ್ರವರಿ 18: ಬಾಗೇಪಲ್ಲಿ ಶಾಸಕ ಸ್ಥಾನ ಅಸಿಂಧುಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಸ್.ಎನ್. ಸುಬ್ಬಾರೆಡ್ಡಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದ ತೀರ್ಪನ್ನು ಸಂಪೂರ್ಣವಾಗಿ ಗೌರವಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು , ಇದು ದೊಡ್ಡ ಪ್ರಕರಣವೇನಲ್ಲ. ಸೋತಿರುವವರೆಲ್ಲರೂ ಈ ರೀತಿ ರಾಜಕೀಯ ದ್ವೇಷ ತೀರಿಸಿಕೊಳ್ಳಲು ಮುಂದಾದರೆ, ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಕಷ್ಟವಾಗುತ್ತದೆ.  ಪ್ರಸ್ತುತ ತಾನು ದೆಹಲಿಗೆ ತೆರಳುತ್ತಿದ್ದು, ಅಲ್ಲಿಂದ ಮರಳಿದ ನಂತರ ಈ ಕುರಿತು ವಿಸ್ತೃತವಾಗಿ ಪ್ರತಿಕ್ರಿಯೆ ನೀಡುವುದಾಗಿ ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಜನೀಕಾಂತ್ ಸಿಗರೇಟು ಸ್ಟೈಲು ಕಲಿತಿದ್ದು ಕನ್ನಡದ ಆ ಸ್ಟಾರ್ ನಟನಿಂದ – Kannada News | Rajinikanth said he copied his cigarette style from Ambareesh

ರಜನೀಕಾಂತ್ (Rajinikanth), ಭಾರತದ ನಂಬರ್ 1 ಸೂಪರ್ ಸ್ಟಾರ್. ರಜನೀಕಾಂತ್ ಅವರನ್ನು ಸ್ಟೈಲ್ ಕಿಂಗ್ ಎಂದೂ ಸಹ ಕರೆಯಲಾಗುತ್ತದೆ. ರಜನೀಕಾಂತ್ ಅವರಿಗೆ ಮೊದಲು ತಮಿಳು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದ್ದೇ ಅವರು ಮಾಡುತ್ತಿದ್ದ ಸ್ಟೈಲ್​​ನಿಂದ ಅದರಲ್ಲೂ ಅವರು ಸಿಗರೇಟನ್ನು ಬಾಯಿಗೆ ಎಸೆದುಕೊಳ್ಳುವ ಸ್ಟೈಲ್ ಈಗಲೂ ಜನಪ್ರಿಯ. ರಜನೀಕಾಂತ್ ತಮ್ಮ ಹಲವಾರು ಸಿನಿಮಾಗಳಲ್ಲಿ ಈ ಸಿಗರೇಟು ಸ್ಟೈಲ್ ಬಳಸಿದ್ದಾರೆ. ಅದರಿಂದಲೇ ಅವರಿಗೆ ದೊಡ್ಡ ಗುರುತು ಸಿಕ್ಕಿದೆ ಸಹ. ಆದರೆ ಆ ಸಿಗರೇಟು ಸ್ಟೈಲ್ ಅನ್ನು ರಜನೀಕಾಂತ್ ಕಲಿತಿದ್ದು ಕನ್ನಡದ ಸ್ಟಾರ್ ನಟನಿಂದ. ಈ ಬಗ್ಗೆ ಸ್ವತಃ ರಜನೀಕಾಂತ್ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

ರಜನೀಕಾಂತ್ ಆಗಿನ್ನೂ ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಆಗ ವಿಷ್ಣುವರ್ಧನ್ ನಟನೆಯ ‘ನಾಗರಹಾವು’ ಸಿನಿಮಾ ಬಿಡುಗಡೆ ಆಗಿತ್ತು. ರಜನೀಕಾಂತ್ ಸಂದರ್ಶನದಲ್ಲಿ ಹೇಳಿಕೊಂಡಿರುವಂತೆ, ಅವರು ಡ್ಯೂಟಿ ಮುಗಿಸಿ, ಯೂನಿಫಾರ್ಮ್ ಸಹ ಕಳಚಿಡದೆ, ಟಿಕೆಟ್ ಬುಕ್​​ಗಳನ್ನು ಸಹ ಮರಳಿಸದೆ ‘ನಾಗರಹಾವು’ ಸಿನಿಮಾ ನೋಡಲು ಹೋಗಿದ್ದರಂತೆ.

ಇದನ್ನೂ ಓದಿ:ಸ್ವಚ್ಛತಾ ಕಾರ್ಮಿಕ ಮಹಿಳೆ ಪದ್ಮಮ್ಮನ ಸನ್ಮಾನಿಸಿದ ರಜನೀಕಾಂತ್: ಕಾರಣ?

ಅದೇ ‘ನಾಗರಹಾವು’ ಸಿನಿಮಾನಲ್ಲಿ ಅಂಬರೀಶ್ ಮೊದಲ ಬಾರಿಗೆ ಕ್ಯಾಮೆರಾ ಎದುರಿಸಿದ್ದರು. ಅವರ ಇಂಟ್ರೊಡಕ್ಷನ್ ಸೀನ್ ಸಖತ್ ಜನಪ್ರಿಯ ಆಗಿತ್ತು. ‘ಕ್ಯಾರೆ ಬುಲ್ ಬುಲ್ ಮಾತಾಡಕಿಲ್ವ’ ಎಂದು ಅಂಬರೀಶ್ ಸಖತ್ ಎಂಟ್ರಿ ಕೊಟ್ಟಿದ್ದರು. ಆ ಸೀನ್​​ನಲ್ಲಿ ಅಂಬರೀಶ್ ಸಿಗರೇಟನ್ನು ಬಾಯಿಗೆ ಎಸೆದುಕೊಳ್ಳುತ್ತಾರೆ. ಆ ಸೀನ್ ನೋಡಿದ್ದ ರಜನೀಕಾಂತ್ ಅದೇ ಸ್ಟೈಲ್ ಅನ್ನು ಕಾಪಿ ಮಾಡಿದರಂತೆ. ರಜನೀಕಾಂತ್, ಆ ಸಮಯದಲ್ಲಿ ಅಂಬರೀಶ್ ಫ್ಯಾನ್ ಆಗಿಬಿಟ್ಟಿದ್ದರಂತೆ. ‘ನಾಗರಹಾವು’ ಸಿನಿಮಾ 1972ರಲ್ಲಿ ಬಿಡುಗಡೆ ಆಗಿತ್ತು. ಅದಾಗಿ ಮೂರು ವರ್ಷಗಳ ಬಳಿಕ 1975 ರಲ್ಲಿ ರಜನೀಕಾಂತ್ ಅವರು ಮೊದಲ ಸಿನಿಮಾ ‘ಅಪೂರ್ವ ರಾಗಂಗಳ್’ನಲ್ಲಿ ನಟಿಸಿದರು.

ರಜನೀಕಾಂತ್ ಮತ್ತು ಅಂಬರೀಶ್ ಅವರು ಬಹಳ ಆತ್ಮೀಯ ಗೆಳೆಯರಾಗಿದ್ದರು. ಅಂಬರೀಶ್ ಕಾಲವಾದಾಗ ಬೆಂಗಳೂರಿಗೆ ಬಂದಿದ್ದ ರಜನೀಕಾಂತ್, ತಮ್ಮ ಹಾಗೂ ಅಂಬರೀಶ್ ನಡುವೆ ಇದ್ದ ಆತ್ಮೀಯತೆ ಬಗ್ಗೆ ಮಾತನಾಡಿದ್ದು, ಇಬ್ಬರೂ ಏಕವಚನದ ಗೆಳೆಯರಾಗಿದ್ದರು. ತಮ್ಮ ಆತ್ಮೀಯ ಗೆಳೆಯನನ್ನು ಕಳೆದುಕೊಂಡ ದುಃಖದಲ್ಲಿ ಕಣ್ಣೀರು ಹಾಕಿದ್ದರು ರಜನೀಕಾಂತ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸ್ಟೀವ್ ಸ್ಮಿತ್ ಬರುವಷ್ಟರಲ್ಲಿ ವಿಶ್ವಕಪ್​ನಿಂದಲೇ ಹೊರಬಿದ್ದ ಆಸ್ಟ್ರೇಲಿಯಾ

Source link

Exit mobile version