Horoscope Today 28 April: ಇಂದು ಈ ರಾಶಿಯವರು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು – Kannada News | Horoscope Today, April 28: People of this zodiac sign will indirectly earn charity and merit today

ಇಂದಿನ ಪಂಚಾಂಗ

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಗಂಡ, ಕರಣ : ಬವ, ಸೂರ್ಯೋದಯ – 06 – 04 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:31 – 17:05, ಯಮಗಂಡ ಕಾಲ 09:13 – 10:48, ಗುಳಿಕ ಕಾಲ 12:22 – 13:56

ಮೇಷ ರಾಶಿ:

ಸಾಮಾಜಿಕ ಕೆಲಸಕ್ಕೆ ಪ್ರಶಂಸೆ ಸಿಗಲಿದೆ. ಎಲ್ಲ ಬೇಸರಕ್ಕೂ ಅನ್ಯರೇ ಕಾರಣವಾಗಿರಲು ಸಾಧ್ಯವಿಲ್ಲ. ಹಣದ ಅಭಾವವನ್ನು ಹೇಳಿಕೊಳ್ಳಲಾರಿರಿ. ನಿಮ್ಮನ್ನು ಯಾರಾದರೂ ಬಂಧುಗಳು ಮಾತನಾಡಸಲು ಬರಬಹುದು. ಎಲ್ಲರೂ ನಾನಾ ಪ್ರಶ್ನೆಗಳನ್ನು ಕೇಳುವರು. ಇಂದು ನೀವು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು. ಸೌಂದರ್ಯ ಇಂದು ಪ್ರಜ್ಞೆ ಹೆಚ್ಚು. ಹೂಡಿಕೆಯಲ್ಲಿ ನಿಮಗೆ ನಷ್ಟವಾಗಲಿದೆ. ಹೊಸ ವಸ್ತುಗಳನ್ನು ಖರೀದಸಲು ಹೋಗಿ ಸಮಯ ವ್ಯರ್ಥವಾಗುವುದು.‌

ವೃಷಭ ರಾಶಿ:

ನಿಮ್ಮ ಬುದ್ಧಿವಂತಿಕೆ ಹಾಗೂ ಪ್ರಬುದ್ಧತೆಯ ಕಾರಣಕ್ಕೆ ಹಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತೀರಿ. ವ್ಯಥೆಗಳನ್ನು ಕಳೆಯಲು ಹೊಸ ಮಾರ್ಗವನ್ನು ಅನ್ವೇಷಿಸುವಿರಿ. ನಷ್ಟದ ಪ್ರಮಾಣಗಳು ಅಧಿಕವಾಗಬಹುದು. ಉದ್ಯಮದಲ್ಲಿ ಹಿನ್ನಡೆ ಇರಲಿದೆ. ಮರೆವಿನಿಂದ ನಿಮ್ಮ ವಸ್ತುಗಳು ಕಷ್ಟವಾಗಬಹುದು. ನಿಮ್ಮನ್ನು ಅರ್ಥಮಾಡಿಕೊಳ್ಳಲು ಸ್ನೇಹಿತರಿಗೆ ಕಷ್ಟವಾದೀತು. ನಿಮಗೆ ನಿಮ್ಮ ಸ್ವಭಾವವು ಬದಲಾಗಬೇಕಾದಂತೆ ಅನ್ನಿಸುವುದು.

ಮಿಥುನ ರಾಶಿ:

ತಾನು ಮಾಡಿದ್ದೇ ಸರಿ ಎಂಬ ಹುಂಬುತನ ಇರಲಿದೆ. ಸ್ವಂತ ವಿಮರ್ಶೆ ಮಾಡಿಕೊಂಡು, ಅಂತಿಮ ನಿರ್ಧಾರಕ್ಕೆ ಬನ್ನಿ. ತಪ್ಪುಗಳನ್ನು ತಿದ್ದಿಕೊಂಡು ಒಳ್ಳೆಯವರಾಗುವಿರಿ. ನಿಮ್ಮನ್ನು ನೀವೇ ಬೈದುಕೊಳ್ಳುವ ಸ್ಥಿತಿ ಬರಬಹುದು. ಅದನ್ನು ಕೂಡಲೇ ಪ್ರಕಟಿಸದೇ ನಿಯಂತ್ರಿಸಲು ಪ್ರಯತ್ನಿಸಿ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಹೆಚ್ಚಾಗುವುದು. ನಾನಾ ಪ್ರಕಾರದ ಖರ್ಚುಗಳಿಂದ ಇಂದಿನ ದಿನದ ಸಮಯವು ದುಬಾರಿ ಎನಿಸಬಹುದು. ನಿಮ್ಮ ಲಾಭಕ್ಕೆ ಪೂರಕವಾದ ಅವಕಾಶಗಳು ಸಿಗುತ್ತವೆ.

ಕರ್ಕಾಟಕ ರಾಶಿ:

ಯಾವುದಾದರೂ ಮುಖ್ಯ ದಾಖಲೆಯನ್ನು ಎಲ್ಲಿಯೋ ಎತ್ತಿಟ್ಟು, ಅದಕ್ಕಾಗಿ ವಿಪರೀತ ಹುಡುಕುವಂಥ ಸನ್ನಿವೇಶ ಸೃಷ್ಟಿಯಾಗುತ್ತದೆ. ನಿಮಗೆ ನಿಮ್ಮದೇ ಸರಿ ಎನಿಸುವುದು ಸಹಜ. ವಿದ್ಯುತ್ ಉಪಕರಣವನ್ನು ಹೆಚ್ಚು ಬಳಸುವಿರಿ. ವಾಹನವನ್ನು ಖರೀದಿಸುವ ಯೋಜನೆಯನ್ನು ಮುಂದೂಡುವುದು ಉತ್ತಮ. ಅನಾರೋಗ್ಯದ ಕಾರಣದಿಂದ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಆಗುವುದು. ಇಂದಿನ ಆರ್ಥಿಕತೆಯಿಂದ ನಿಮಗೆ ತೃಪ್ತಿ. ಆರ್ಥಿಕ ಚಿಂತೆಗಳು ಸಕಾರಾತ್ಮಕ ಮಾರ್ಗದಲ್ಲಿ ಇರಲಿ.

ಸಿಂಹ ರಾಶಿ:

ಯಾವುದೋ ನಿಶ್ಚಿತ ಮೂಲದಿಂದ ಹಣ ಬರುವ ಖಾತ್ರಿ ಸಿಕ್ಕು, ಹೆಚ್ಚಿನ ಖರ್ಚು ಮಾಡಲು ಮುಂದಾಗುತ್ತೀರಿ. ಎಲ್ಲವನ್ನೂ ನಿಮ್ಮ ನೇರಕ್ಕೇ ಆಗಬೇಕು ಎನ್ನುವುದು ಆಗದು. ನಿಮ್ಮ ಕಾರಣದಿಂದ ಕುಟುಂಬವು ಸಂಕಷ್ಟದಲ್ಲಿ ಸಿಕ್ಕಿಕೊಳ್ಳಬಹುದು. ನಿಮ್ಮ ಉಡುಗೊರೆಯಿಂದ ಸಂತೋಷವಾಗಲಿದೆ. ಬಂಧುಗಳು, ಸ್ನೇಹಿತರು ನಿಮ್ಮ ಸಮಯಪ್ರಜ್ಞೆಯನ್ನು ಮೆಚ್ಚುತ್ತಾರೆ. ಕಣ್ಣು ನೋವು ನಿಮ್ಮನ್ನು ಕಾಡಬಹುದು. ಕೆಲವನ್ನು ಅನುಭವಿಗಳ ಜೊತೆ ಚರ್ಚಿಸಿ ತೀರ್ಮಾನಿಸುವುದು ಒಳ್ಳೆಯದು.

ಕನ್ಯಾ ರಾಶಿ: 

ಕುಟುಂಬದ ಹಿರಿಯರ ಸಲಹೆ ಪಡೆದು, ಮುಖ್ಯ ಕೆಲಸಗಳಲ್ಲಿ ಮುಂದುವರಿಯಿರಿ. ಯಾರ ಜೊತೆಗೂ ವಾಗ್ವಾದ ನಡೆಸದಿರಿ. ಮಕ್ಕಳ ಭವಿಷ್ಯದ ಬಗ್ಗೆ ಅಗತ್ಯ ಕ್ರಮವನ್ನು ಕೈಗೊಳ್ಳುವಿರಿ. ನಿಮ್ಮ ಬಗ್ಗೆ ಇರುವ ಆಕ್ಷೇಪಗಳು ಎಲ್ಲವು ಮುರಿದು ಬೀಳಬಹುದು. ನ್ಯಾಯ ನೀತಿಯ ವಿರುದ್ಧ ನಡೆಯುವುದು ಬೇಡ. ವಿದ್ಯಾಭ್ಯಾಸದಲ್ಲಿ ಅಸ್ಥಿರತೆ ಕಾಡಬಹುದು. ನಿಮ್ಮ ವರ್ತನೆಗಳ ಬಗ್ಗೆ ಆಕ್ಷೇಪ ಬರಬಹುದು.

ತುಲಾ ರಾಶಿ:

ಹಣಕಾಸಿನ ಸಂಗತಿಗಳನ್ನು ಸಂಗಾತಿ ಜತೆಗೆ ಚರ್ಚಿಸಿ, ಅನಂತರ ಮುಂದಿನ ತೀರ್ಮಾನ ಕೈಗೊಳ್ಳಿ. ಅನಿವಾರ್ಯ ಸಂದರ್ಭದಲ್ಲೂ ಸುಳ್ಳು ಹೇಳಬೇಡಿ. ಶತ್ರುಗಳು ನಿಮ್ಮ ನೆಮ್ಮದಿಯನ್ನು ಹಾಳುಮಾಡಬಹುದು. ಮಕ್ಕಳನ್ನು ನೋಡಬೇಕೆನಿಸುವುದು. ಎಲ್ಲವನ್ನೂ ನೀವು ನಿಶ್ಚಯ ಮಾಡಿಕೊಳ್ಳಲು ಆಗದು. ಆಲಸ್ಯದಿಂದ ಹೊರಬರುವ ಮನಸ್ಸಾಹುವುದು. ಎರಡು ಮನಸ್ಸನ್ನು ಮಾಡಿಕೊಂಡು ಮುಂದುವರಿಯುವುದು ಬೇಡ.

ವೃಶ್ಚಿಕ ರಾಶಿ:

ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಒಂದು ಒಪ್ಪಂದಕ್ಕೆ ಬರುವ ಸಾಧ್ಯತೆ ಇದೆ. ನಿರೀಕ್ಷೆ ಮಾಡಿದಂತೆ ಆದಾಯ ಬರುವುದಿಲ್ಲ. ಆಲಸ್ಯದಿಂದ ಎಲ್ಲ ಕಾರ್ಯದಲ್ಲಿಯೂ ನಿರಾಸಕ್ತಿ ಇರಲಿದೆ. ಉದ್ಯೋಗದ ಹೊಸ ಸ್ಥಳದಲ್ಲಿ ಸ್ನೇಹಿತರಾಗುವರು. ವಿದ್ಯಾಭ್ಯಾಸದ ಹಿನ್ನಡೆಯು ನಿಮಗೆ ಅವಮಾನ ಎನಿಸುವುದು. ದುಃಸ್ವಪ್ನಗಳಿಂದ ನಿಮ್ಮ ಮನಸ್ಸು ವಿಕಾರವಾಗುವುದು. ಉನ್ನತ ವಿದ್ಯಾಭ್ಯಾಸದ ಚಿಂತೆ ಕಾಡಬಹುದು.

ಧನು ರಾಶಿ:

ಹೆಚ್ಚಿನ ಪ್ರತಿಫಲಾಪೇಕ್ಷೆ ಇಲ್ಲದೆ ನೀವು ಈ ಕೆಲಸವನ್ನು ಮಾಡಬೇಕಾಗುತ್ತದೆ. ಪ್ರಾಮಾಣಿಕತೆಯನ್ನು ಬಿಟ್ಟು ವ್ಯವಹಾರ ಮಾಡುವುದು ಬೇಡ. ಯಾವುದೇ ಆಕ್ಷೇಪ ಮಾಡಬೇಡಿ. ನಿಮ್ಮ ವರ್ಚಸ್ಸಿಗೆ ಧಕ್ಕೆ ಆಗಬಹುದು. ಈ ದಿನ ನೀವು ಶಾರೀರಿಕ ಕಾಳಜಿಯನ್ನು ಹೆಚ್ಚು ಮಾಡಬೇಕಾದೀತು. ಉದ್ಯೋಗದಲ್ಲಿ ಒತ್ತಡಗಳು ಇರುವುದುರಿಂದ ಕುಟುಂಬಕ್ಕೆ ಸಮಯವನ್ನು ಕೊಡಲಾಗದು. ಬಂಗಾರದ ಮೇಲೆ ಹೂಡಿಕೆ ಮಾಡುವಿರಿ. ಶಿಸ್ತಿನಿಂದ ನೀವು ವ್ಯವಹಾರವನ್ನು ಇಟ್ಟುಕೊಳ್ಳುವಿರಿ.

ಮಕರ ರಾಶಿ:

ನಿಮ್ಮಿಂದ ಸಾಧ್ಯವಾದಲ್ಲಿ ಅಗತ್ಯ ಇರುವ ಒಬ್ಬರಿಗೆ ಊಟದ ವ್ಯವಸ್ಥೆ ಮಾಡಿ. ಸಂಗಾತಿ ಮಕ್ಕಳ ಮಾತನ್ನು ಸರಿಯಾಗಿ ಕೇಳಿಸಿಕೊಳ್ಳಿ. ವಿದ್ಯಾಭ್ಯಾಸದ ಗಮನವು ಬೇರೆ ಕಡೆಗೆ ಹೋಗಬಹುದು. ಹಣಕಾಸಿನ‌ ವಿಚಾರದಲ್ಲಿ ಸಹೋದರನಿಂದ ಅಪವಾದ ಸಾಧ್ಯತೆ. ಶುಭ ಸುದ್ದಿಯು ನಿಮ್ಮನ್ನು ಪ್ರೋತ್ಸಾಹಿಸಬಹುದು. ಶತ್ರುಗಳ ಕಾಟಗಳು ನಿಮ್ಮ ಉತ್ಸಾಹವನ್ನು ಭಂಗ ಮಾಡಬಹುದು. ದೈವದ ಭೀತಿಯು ನಿಮ್ಮನ್ನು ಕಾಡಬಹುದು. ರಾಜಕಾರಣಿಗಳಿಂದ ನಿಮ್ಮ ಕೆಲಸವು ಪೂರ್ಣ.

ಕುಂಭ ರಾಶಿ:

ಸ್ವಂತ ವ್ಯಾಪಾರ, ವ್ಯವಹಾರ ಮಾಡುವವರಿಗೆ ಅಲ್ಪ ಹಿನ್ನಡೆ. ಪ್ರಯಾಣದಿಂದ ಆಗಬೇಕಾದ ಕೆಲಸವಾದರೂ ಆಯಾಸ ಕಾಡಬಹುದು. ಕಾರ್ಯ ಕ್ಷೇತ್ರದಲ್ಲಿ ಒತ್ತಡವಿರುವ ಕಾರಣ ಮನಸ್ಸಿಗೆ ಸಿಗಬೇಕಾದ ಶಾಂತಿಯ ಕೊರೆತೆಯೂ ಇರಲಿದೆ. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು. ಉದ್ಯಮದಲ್ಲಿ ಪ್ರಗತಿಯನ್ನು ಕಂಡು ಖುಷಿಯಾಗುವುದು. ನಿಮಗೆ ಯಾರಿಂದಲೋ ರಕ್ಷಣೆ ಇದೆ ಎನ್ನಿಸಬಹುದು. ಮನೆಯಲ್ಲೂ ತಾಳ್ಮೆಯನ್ನು ಇಟ್ಟುಕೊಳ್ಳಿ. ನಂಬಿಕೆಯು ಹುಸಿಯಾಗುವುದು.

ಮೀನ ರಾಶಿ:

ಮಕ್ಕಳ ವ್ಯವಹಾರಕ್ಕೆ ಹಣಕಾಸು ನೆರವು ನೀಡಲು ಪ್ರಯತ್ನಿಸುತ್ತೀರಿ. ರಾಜಕೀಯದ ಪ್ರೇರಣೆಪಡೆಯುವ ಸಾಧ್ಯತೆ ಇದೆ. ಹಳೆಯ ವಾಹನಗಳ ಮಾರಾಟ ಮಾಡುವ ಬಗ್ಗೆ ಆಲೋಚನೆ ಬರುತ್ತದೆ. ಈ ಹಿಂದೆ ಷೇರು ಪೇಟೆಯಲ್ಲಿ ಮಾಡಿದ್ದ ಹೂಡಿಕೆಯನ್ನು ಹಿಂಪಡೆಯಲಿದ್ದೀರಿ. ಹೇಗಾದರೂ ಮಾಡಿ ಭಯವನ್ನು ದೂರ ಮಾಡಿಕೊಳ್ಳುವಿರಿ. ತೆಗಳಿಕೆಯನ್ನು ಛಲವಾಗಿ ತೆಗೆದುಕೊಳ್ಳುವಿರಿ. ಯಾರ ಮೇಲೂ ಅವಮಾನ ಬೇಡ.

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಬಿಸಿಲ ತಾಪದಿಂದ ಬಚಾವಾಗಲು ನೀರಿನ ಟ್ಯಾಂಕನ್ನೇ ಸ್ವಿಮ್ಮಿಂಗ್ ಪೂಲ್ ಮಾಡಿಕೊಂಡ ಕೋತಿಗಳು – Kannada News | Monkeys playing in water tank to beat summer heat watch viral video

ನವದೆಹಲಿ, ಏಪ್ರಿಲ್ 27: ದೇಶಾದ್ಯಂತ ಈ ಸಮಯದಲ್ಲಿ ಬಿಸಿಲಿನ ತಾಪವು ಉತ್ತುಂಗವನ್ನು ತಲುಪಿದೆ. ಮಾನವರು ಮಾತ್ರವಲ್ಲದೆ ಪ್ರಾಣಿಗಳು ಸಹ ಈ ಸುಡುವ ಸೂರ್ಯನಿಂದ ತೀವ್ರವಾಗಿ ತೊಂದರೆಗೊಳಗಾಗುತ್ತಿವೆ. ಬಿಸಿಲಿನಿಂದ ಪಾರಾಗಲು ವಿಭಿನ್ನ ವಿಧಾನಗಳನ್ನು ಅನುಸರಿಸುತ್ತಿವೆ. ಇತ್ತೀಚೆಗೆ, ಅಂತಹ ಒಂದು ಆಸಕ್ತಿದಾಯಕ ಮತ್ತು ಆಶ್ಚರ್ಯಕರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಮನೆಯ ಟೆರೇಸಿನಲ್ಲಿ ಇಟ್ಟಿದ್ದ ನೀರಿನ ಟ್ಯಾಂಕ್​ನಲ್ಲಿ ಮಂಗಗಳ ಹಿಂಡೊಂದು ಮುಳುಗೇಳುತ್ತಾ ನೀರಾಟವಾಡುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ.

ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ವೇದಿಕೆ ‘X’ ನಲ್ಲಿ @Surendr0032083 ಎಂಬ ಖಾತೆಯಿಂದ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮನೆಯ ಟೆರೇಸ್ ಮೇಲೆ ಇರಿಸಲಾಗಿರುವ ನೀರಿನ ಟ್ಯಾಂಕ್ ಸುತ್ತಲೂ ಕೆಲವು ಮಂಗಗಳು ಕುಳಿತಿರುವುದನ್ನು ಕಾಣಬಹುದು. ವಿಶೇಷವೆಂದರೆ ಈ ಮಂಗಗಳು ಈ ಟ್ಯಾಂಕ್ ಅನ್ನು ಈಜುಕೊಳದಂತೆ ಬಳಸುತ್ತಿವೆ. ಕೆಲವು ಮಂಗಗಳು ಟ್ಯಾಂಕ್ ಒಳಗೆ ಹಾರಿ ತಂಪಾದ ನೀರಿನಲ್ಲಿ ಮುಳುಗಿ ಮೈ ತಂಪಾಗಿಸಿಕೊಳ್ಳುತ್ತಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪುಣೆ ನಿಲ್ದಾಣಕ್ಕೆ ಬರುವಾಗ ಹಳಿ ತಪ್ಪಿದ ಮುಂಬೈ-ಸೋಲಾಪುರ ವಂದೇ ಭಾರತ್ ರೈಲು – Kannada News | Mumbai Solapur Vande Bharat Express train derails while entering Pune station

ಪುಣೆ, ಏಪ್ರಿಲ್ 27: ಮಹಾರಾಷ್ಟ್ರದ ಪುಣೆ ರೈಲು ನಿಲ್ದಾಣವನ್ನು ಪ್ರವೇಶಿಸುವಾಗ ವಂದೇ ಭಾರತ್ ಎಕ್ಸ್‌ಪ್ರೆಸ್‌ನ (Vande Bharat Express) ಒಂದು ಬೋಗಿ ಹಳಿ ತಪ್ಪಿತು. ಇಂದು ಸಂಜೆ 7.30ರ ಸುಮಾರಿಗೆ ನಿಲ್ದಾಣ ಪ್ರವೇಶಿಸುವಾಗ ರೈಲಿನ ನಾಲ್ಕನೇ ಬೋಗಿಯ ಒಂದು ಟ್ರಾಲಿ ಡೈಮಂಡ್ ಕ್ರಾಸಿಂಗ್‌ನಲ್ಲಿ ಹಳಿ ತಪ್ಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯಗಳಾಗಿಲ್ಲ. ರೈಲು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಹೊರಟು ಮಹಾರಾಷ್ಟ್ರದ ಸೋಲಾಪುರಕ್ಕೆ ಹೋಗಬೇಕಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗುದ್ದಲಿ ಪೂಜೆಗೆ ಪ್ರಾಮಾಣಿಕರು ಸಿಗಲಿಲ್ವಾ? ಯಡಿಯೂರಪ್ಪೋತ್ಸವ ಬಗ್ಗೆ ಯತ್ನಾಳ್ ವ್ಯಂಗ್ಯ – Kannada News | Basangouda Patil Yatnal sparks on former CM Yediyurappa’s Conference

ವಿಜಯಪುರ, ಏಪ್ರಿಲ್​ 27: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನವನ್ನು ಸ್ಮರಿಸುವ ನಿಟ್ಟಿನಲ್ಲಿ ಮೇ 9 ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮಾರಂಭಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್, ​ಅಪ್ಪನ ಸಮಾರಂಭಕ್ಕೆ ಮಗ ಗುದ್ದಲಿ ಪೂಜೆ ಮಾಡಿದ್ದಾನೆ. ಬೇರೆ ಪ್ರಾಮಾಣಿಕರು ಸಿಗಲಿಲ್ಲವಾ ಇವರಿಗೆ ಎಂದು ವಾಗ್ದಾಳಿ ಮಾಡಿದ್ದಾರೆ. ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಸದಿದ್ದರೆ, ಸಿಎಂ ಅಭ್ಯರ್ಥಿ ಮಾಡದಿದ್ದರೆ ಲಿಂಗಾಯತರು ಬಿಜೆಪಿ ಬಿಡ್ತಾರೆಂಬ ಸಂದೇಶ ರವಾನಿಸಲು ಯಡಿಯೂರಪ್ಪೋತ್ಸವ ಮಾಡುತ್ತಿದ್ದಾರೆ ಎಂದು ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಕೆಡಿ ಸಿನಿಮಾ ಸುದ್ದಿಗೋಷ್ಠಿ: ಎಷ್ಟೇ ಕೇಳಿದರೂ ಆ ವಿಷಯ ಬಾಯಿ ಬಿಡಲಿಲ್ಲ ಕಿಚ್ಚ ಸುದೀಪ್ – Kannada News | Kichcha Sudeep did not reveal anything about his role in KD Movie

ನಟ ಕಿಚ್ಚ ಸುದೀಪ್ ಅವರು ‘ಕೆಡಿ’ (KD) ಸಿನಿಮಾದಲ್ಲಿ ಕಾಲ ಭೈರವ ಎಂಬ ಅತಿಥಿ ಪಾತ್ರ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾಗೆ ಸ್ಟಾರ್ ಮೆರುಗು ಹೆಚ್ಚಿದೆ. ಆ ಪಾತ್ರದ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಎಲ್ಲರಿಗೂ ಆಸಕ್ತಿ ಇದೆ. ಇಂದು (ಏಪ್ರಿಲ್ 27) ನಡೆದ ಸುದ್ದಿಗೋಷ್ಠಿಯಲ್ಲಿ ಈ ಪಾತ್ರದ ಬಗ್ಗೆ ಪ್ರಶ್ನೆ ಎದುರಾಯಿತು. ಆದರೆ ಕಿಚ್ಚ ಸುದೀಪ್ ಅವರು ಯಾವುದೇ ಗುಟ್ಟು ಬಿಟ್ಟುಕೊಡಲಿಲ್ಲ. ‘ನನಗೆ ಪಾತ್ರದ ಬಗ್ಗೆ ಗೊತ್ತಿಲ್ಲ. ಪ್ರಮಾಣಿಕವಾಗಿ ಹೇಳುತ್ತೇನೆ. ಪ್ರೇಮ್ ಕರೆದಿದ್ದಕ್ಕೆ ಪಾತ್ರ ಮಾಡಿದ್ದೇನೆ. ನಾನು ಅತಿಥಿ ಪಾತ್ರ ಮಾಡಿದಾಗ ಆ ಸಿನಿಮಾದ ಹೀರೋ ಪಾತ್ರಕ್ಕೆ ತೊಂದರೆ ಮಾಡಬಾರದು. ಅಷ್ಟು ಮಾತ್ರ ಕಾಳಜಿ ವಹಿಸುತ್ತೇನೆ. ಮೂರು ದಿನದ ಶೂಟಿಂಗ್ ಬಗ್ಗೆ ಕೇಳಿದರೆ ಮಾತ್ರ ಹೇಳುತ್ತೇನೆ. ಅದನ್ನು ಹೊರತುಪಡಿಸಿ ಬೇರೆ ಏನೂ ನನಗೆ ಗೊತ್ತಿಲ್ಲ’ ಎಂದು ಕಿಚ್ಚ ಸುದೀಪ್ (Kichcha Sudeep) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು: ಪ್ರತಿಷ್ಠಿತ ಕಂಪೆನಿ ಉದ್ಯೋಗಿ ಪೂಜಾ ದತ್ತ ಅನುಮಾನಾಸ್ಪದ ಸಾವು; ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ! – Kannada News | Bengaluru: 34 year old Woman Found Dead in Adugodi Home; Murder Suspected

ಬೆಂಗಳೂರು, ಏ.27: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಯುವತಿಯೊಬ್ಬಳ ಮೃತದೇಹ, ಆಕೆಯ ಆಡುಗೋಡಿ (Adugodi) ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅತ್ಯಂತ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ಯುವತಿಯನ್ನು ಪೂಜಾ ದತ್ತ (34) ಎಂದು ಗುರುತಿಸಲಾಗಿದೆ. ಪೂಜಾ ದತ್ತ ಅವರು ಮೂಲತಃ ಜಾರ್ಖಂಡ್‌ನ ಧನಬಾದ್ ಸಮೀಪದ ಹಿರಾಪುರ ನಿವಾಸಿಯಾಗಿದ್ದರು. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪೂಜಾ ಅವರ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ.

ಮನೆಯಿಂದ ಭಾರಿ ದುರ್ನಾತ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ಮುರಿದು ನೋಡಿದಾಗ ಭೀಕರ ದೃಶ್ಯ ಕಣ್ಣಿಗೆ ಬಿದ್ದಿದೆ. ಪೂಜಾ ದತ್ತ ಅವರ ಮೃತದೇಹ ಸಂಪೂರ್ಣವಾಗಿ ಬೆತ್ತಲೆ ಸ್ಥಿತಿಯಲ್ಲಿ ಮತ್ತು ಅರೆಕೊಳೆತ ಸ್ಥಿತಿಯಲ್ಲಿತ್ತು. ಮೃತದೇಹ ಸಂಪೂರ್ಣ ಕೊಳೆತು ಹೋಗಿದ್ದರಿಂದ ಸಾವು ಸಂಭವಿಸಿ ಕನಿಷ್ಠ 2-3 ದಿನಗಳು ಕಳೆದಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ನೈಜ ಕ್ರೈಂಗೆ ಎಫ್‌ಐಆರ್ ಮಾಡಲ್ಲ, 2 ವರ್ಷಗಳ ಹಳೆಯ ಹಸು ನಾಪತ್ತೆ ಕೇಸ್‌ಗೆ ತರಾತುರಿ ಮಾಡ್ತೀರಾ? ಪೊಲೀಸರಿಗೆ ಹೈಕೋರ್ಟ್ ತರಾಟೆ

ಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವುದು ಮತ್ತು ಮೃತದೇಹ ಕೊಳೆತ ಸ್ಥಿತಿಯಲ್ಲಿರುವುದು ಸಾವಿನ ಕುರಿತು ಭಾರಿ ಅನುಮಾನಗಳನ್ನು ಮೂಡಿಸಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪೋಸ್ಟ್‌ಮಾರ್ಟಂಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪೂಜಾ ಅವರ ಫೋನ್ ಕರೆಗಳು ಮತ್ತು ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಂಡನ ತಂಗಿಯನ್ನೇ ಆತನ ಎರಡನೇ ಹೆಂಡತಿಯೆಂದ ಪತ್ನಿ; ವಿಚ್ಛೇದನಕ್ಕಾಗಿ ಎಷ್ಟೆಲ್ಲ ನಾಟಕ! – Kannada News | Gwalior woman said Husbands Sister as his Second Wife to get divorce crime news in kannada

ಗ್ವಾಲಿಯರ್, ಏಪ್ರಿಲ್ 27: ಭಾರತೀಯ ನ್ಯಾಯಾಲಯಗಳನ್ನು ತಲುಪುವ ವಿಚ್ಛೇದನ (Divorce) ಅರ್ಜಿಗಳು ಹೆಚ್ಚಾಗಿ ಕೌಟುಂಬಿಕ ಹಿಂಸೆ, ವರದಕ್ಷಿಣೆ ಸಂಬಂಧಿತ ಕಿರುಕುಳ ಅಥವಾ ದೀರ್ಘಕಾಲದ ವೈವಾಹಿಕ ಕಲಹದ ಆರೋಪಗಳನ್ನು ಒಳಗೊಂಡಿರುತ್ತವೆ. ಆದರೆ, ಮಧ್ಯಪ್ರದೇಶದ ವಿಚ್ಛೇದನ ಪ್ರಕರಣವೊಂದು ವಿಚಿತ್ರವಾದ ಕಾರಣದಿಂದ ಸುದ್ದಿಯಲ್ಲಿದೆ. ಮಹಿಳೆಯೊಬ್ಬಳು ತನ್ನ ಗಂಡನಿಂದ ವಿಚ್ಛೇದನ ಪಡೆಯಲು ಆತನಿಗೆ 2ನೇ ಮದುವೆಯಾಗಿದೆ ಎಂದು ಸುಳ್ಳು ಹೇಳಿದ್ದಳು. ಅದಕ್ಕೆ ಕೋರ್ಟ್ ಸಾಕ್ಷಿ ಕೇಳಿದಾಗ ಗಂಡನ ತಂಗಿಯನ್ನೇ ಆತನ 2ನೇ ಹೆಂಡತಿ ಎಂದು ಸುಳ್ಳು ಹೇಳಿದ್ದಳು.

2021ರಲ್ಲಿ ಮಹಿಳೆ ತನ್ನ ಪತಿ ಮರುಮದುವೆಯಾಗಿದ್ದಾರೆ ಎಂದು ಹೇಳಿಕೊಂಡು ಆಕೆ ವಿವಾಹ ವಿಚ್ಛೇದನ ಕೋರಿದ್ದಳು. ಇದಕ್ಕೆ ಸಾಕ್ಷಿಯಾಗಿ ಆಕೆ ಪತಿಯ ಸಹೋದರಿ ಮತ್ತು ಇತರ ಸಂಬಂಧಿಕರೊಂದಿಗೆ ನಿಂತಿರುವ ಕುಟುಂಬದ ಫೋಟೋವನ್ನು ನೀಡಿದ್ದರು. ಅದರಲ್ಲಿ ಆಕೆಯ ಗಂಡನ ಪಕ್ಕ ನಿಂತಿದ್ದ ಆತನ ತಂಗಿಯನ್ನೇ ಆತನ ಎರಡನೇ ಹೆಂಡತಿ ಎಂದು ಕೋರ್ಟ್​ಗೆ ನಂಬಿಸಿ ಸಾಕ್ಷಿ ನೀಡಿದ್ದಳು. ಈ ವಿಷಯ ಭಾರೀ ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ವಿಚ್ಛೇದನ ನೀಡಿದ್ದಕ್ಕೆ ಪತ್ನಿಯನ್ನು ಅಟ್ಟಾಡಿಸಿಕೊಂಡು ಹೋಗಿ ಆಸಿಡ್ ಹಾಕಿದ ಪತಿ; ಭಯಾನಕ ವಿಡಿಯೋ ವೈರಲ್

ಏಪ್ರಿಲ್ ಮೊದಲ ವಾರದಲ್ಲಿ ಪತಿಗೆ ವಿಚ್ಛೇದನದ ಆದೇಶದ ಬಗ್ಗೆ ತಿಳಿದಾಗ ಈ ವಿಷಯ ಬೆಳಕಿಗೆ ಬಂದಿತು. ನ್ಯಾಯಾಲಯದ ದಾಖಲೆಗಳನ್ನು ಪರಿಶೀಲಿಸಿದ ನಂತರ ಆಕೆ ತಪ್ಪು ಸಾಕ್ಷಿ ನೀಡಿ, ವಂಚನೆ ಮಾಡಿದ್ದು ಗೊತ್ತಾಯಿತು. ಅವರು ಈಗ ಗ್ವಾಲಿಯರ್ ಹೈಕೋರ್ಟ್‌ನಲ್ಲಿ ಈ ವಿಚ್ಛೇದನದ ತೀರ್ಪನ್ನು ಪ್ರಶ್ನಿಸಿದ್ದಾರೆ. ನ್ಯಾಯಾಲಯವನ್ನು ದಾರಿ ತಪ್ಪಿಸುವ ಮೂಲಕ ತಮ್ಮ ಪತ್ನಿ ಮೋಸದಿಂದ ತೀರ್ಪು ಪಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಲಿದೆ.

ಜಗಳದಿಂದಾಗಿ 2015 ರಿಂದಲೇ ಆ ಮಹಿಳೆ ತನ್ನ ಪತಿಯಿಂದ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸಿದಳು. ದೀರ್ಘಕಾಲದ ಬೇರ್ಪಡುವಿಕೆಯ ಹೊರತಾಗಿಯೂ ಪತಿಗೆ ವಿಚ್ಛೇದನಕ್ಕೆ ಒಪ್ಪಿಗೆ ನೀಡಲು ಇಷ್ಟವಿರಲಿಲ್ಲ. ಆದರೆ ಹೆಂಡತಿ ಮದುವೆಯನ್ನು ವಿಚ್ಛೇದನ ಪಡೆಯಲು ದೃಢನಿಶ್ಚಯದಲ್ಲಿದ್ದಳು. ಹೀಗಾಗಿ, ಸುಳ್ಳು ಸಾಕ್ಷಿ ನೀಡಿ ವಿಚ್ಛೇದನ ಪಡೆಯಲು ನಿರ್ಧರಿಸಿದಳು. ಅದಕ್ಕಾಗಿ 2021 ಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದಳು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೆಎಎಸ್​​​ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ: ಆದಷ್ಟು ಬೇಗ ಪ್ರಮೋಷನ್ ಎಂದ ಸಿದ್ದರಾಮಯ್ಯ – Kannada News | KAS Officers to Be Promoted Soon: CM Siddaramaiah says at KAS Building Inauguration

ಬೆಂಗಳೂರು, ಏಪ್ರಿಲ್​ 27: ನಗರದ ಇನ್ಫೆಂಟ್ರಿ ರಸ್ತೆಯಲ್ಲಿ ನಿರ್ಮಿಸಲಾಗಿರುವ KAS ಅಧಿಕಾರಿಗಳ ಸಂಘದ ನವೀಕೃತ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ಒಟ್ಟಿಗೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಎಎಸ್ ಅಧಿಕಾರಿಗಳಿಗೆ ಪ್ರಮೋಷನ್ ಸಂಬಂಧ 2 ಸಭೆಯಾಗಿದೆ. ಆದಷ್ಟು ಬೇಗ ಪ್ರಮೋಷನ್ ಆಗುತ್ತದೆ ಎಂದರು. ಶೇ. 33% ಅಧಿಕಾರಿಗಳನ್ನು ಸಿಇಒಗಳಾಗಿ ಬಡ್ತಿ ನೀಡುವ ಭರವಸೆ ನೀಡಿದ್ದಾರೆ. ಸಮಸ್ಯೆ ಹೇಳಿಕೊಂಡು ಜನ ನಿಮ್ಮ ಬಳಿ ಬರ್ತಾರೆ, ಸಮಾಧಾನದಿಂದ ಕೇಳಿ ಕೆಲಸ ಮಾಡಿದರೆ ರಾಜ್ಯಕ್ಕೂ ಕೀರ್ತಿ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

DC vs RCB: ಡೆಲ್ಲಿ ವಿರುದ್ಧದ ಸೇಡಿನ ಸಮರವನ್ನು ಗೆದ್ದು ಬೀಗಿದ ಆರ್​ಸಿಬಿ – Kannada News | RCB Crushes DC in IPL 2026: Delhi Capitals All Out for 75, Bengaluru Wins Revenge Match

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ರ 39ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಇದು ಈ ಆವೃತ್ತಿಯಲ್ಲಿ ಎರಡು ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಆರ್​ಸಿಬಿ ವಿರುದ್ಧ ಗೆಲುವು ಸಾಧಿಸಿತ್ತು. ಹೀಗಾಗಿ ಈ ಪಂದ್ಯ ಆರ್​ಸಿಬಿ ಪಾಲಿಗೆ ಸೇಡಿನ ಸಮರವಾಗಿತ್ತು. ಈ ಸೇಡಿನ ಸಮರದಲ್ಲಿ ಡೆಲ್ಲಿ ತಂಡವನ್ನು ಅವರ ನೆಲದಲ್ಲಿ ಹೀನಾಯವಾಗಿ ಮಣಿಸಿದ ಆರ್​ಸಿಬಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಜೊತೆಗೆ ಲೀಗ್​ನಲ್ಲಿ ತನ್ನ 6ನೇ ಗೆಲುವನ್ನು ದಾಖಲಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡ ಕೇವಲ 75 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಕೇವಲ 1 ವಿಕೆಟ್ ಕಳೆದುಕೊಂಡು ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿತು.

Published On – 9:58 pm, Mon, 27 April 26

Source link

IPL 2026: ಮುಂಬೈ ತಂಡಕ್ಕೆ ಆಘಾತ; ಸ್ಟಾರ್ ಆಲ್‌ರೌಂಡರ್ ಐಪಿಎಲ್‌ನಿಂದಲೇ ಔಟ್..! – Kannada News | IPL 2026: MI’s Playoff Hopes Dented as Mitchell Santner Ruled Out, Keshav Maharaj Joins

2026 ರ ಐಪಿಎಲ್‌ನಲ್ಲಿ (IPL2026) ಸತತ ಸೋಲುಗಳಿಂದ ಕಂಗೆಟ್ಟಿರುವ ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್ (Mumbai Indians) ತಂಡ ಇದುವರೆಗೆ ಆಡಿರುವ 7 ಪಂದ್ಯಗಳಲ್ಲಿ 5 ರಲ್ಲಿ ಸೋತು ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಮುಂದಿನ ಸುತ್ತಿಗೆ ಅರ್ಹತೆ ಪಡೆಯಬೇಕೆಂದರೆ ಮುಂಬೈ ತಂಡ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ. ಇದು ತಂಡವನ್ನು ಒತ್ತಡಕ್ಕೆ ಸಿಲುಕಿಸಿದರೆ, ಇದೀಗ ಇದರ ನಡುವೆ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಎಡ ಭುಜದ ಗಾಯದಿಂದಾಗಿ ನ್ಯೂಜಿಲೆಂಡ್ ಸ್ಪಿನ್ ಆಲ್‌ರೌಂಡರ್ ಮಿಚೆಲ್ ಸ್ಯಾಂಟ್ನರ್ (Mitchell Santner) ಇಡೀ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

ಮಿಚೆಲ್ ಸ್ಯಾಂಟ್ನರ್ ಐಪಿಎಲ್​ನಿಂದ ಔಟ್

ವಾಸ್ತವವಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಸ್ಯಾಂಟ್ನರ್ ಬೌಂಡರಿಯ ಬಳಿ ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಗಾಯಕ್ಕೆ ತುತ್ತಾಗಿದ್ದರು. ಇದರಿಂದಾಗಿ ಅವರು ಮೈದಾನ ತೊರೆದು ಡಗೌಟ್ ಸೇರಿಕೊಂಡಿದ್ದರು. ಅಂದಿನಿಂದ ಸ್ಯಾಂಟ್ನರ್ ಗಾಯದ ಬಗ್ಗೆ ಆತಂಕ ಮನೆ ಮಾಡಿತ್ತು. ಇದೀಗ ಅದರಂತೆ ಸ್ಯಾಂಟ್ನರ್ ಗಾಯ ಗಂಭೀರವಾಗಿದ್ದು, ಅವರೀಗ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಹೀಗಾಗಿ ಮುಂಬೈ ಫ್ರಾಂಚೈಸಿ ಸ್ಯಾಂಟ್ನರ್ ಬದಲಿಯಾಗಿ ದಕ್ಷಿಣ ಆಫ್ರಿಕಾದ ಅನುಭವಿ ಎಡಗೈ ಸ್ಪಿನ್ನರ್ ಕೇಶವ್ ಮಹಾರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಮಿಚೆಲ್ ಸ್ಯಾಂಟ್ನರ್ ಮುಂಬೈ ಇಂಡಿಯನ್ಸ್‌ನ ಸ್ಪಿನ್ ಬೌಲಿಂಗ್‌ ವಿಭಾಗದ ಪ್ರಮುಖ ಅಸ್ತ್ರವಾಗಿದ್ದರು. ವಾಂಖೆಡೆ ಕ್ರೀಡಾಂಗಣದಲ್ಲಿ ಸಿಎಸ್‌ಕೆ ವಿರುದ್ಧದ ಪಂದ್ಯದ ಸಮಯದಲ್ಲಿ, ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಸ್ಯಾಂಟ್ನರ್ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಪರಿಣಾಮವಾಗಿ, ಮುಂಬೈ ಇಂಡಿಯನ್ಸ್ ಶಾರ್ದೂಲ್ ಠಾಕೂರ್ ಅವರನ್ನು ಕನ್ಕ್ಯುಶನ್ ಬದಲಿ ಆಟಗಾರನಾಗಿ ಆಡಿಸಿತ್ತು.

ಬದಲಿಯಾಗಿ ಬಂದ ಮಹಾರಾಜ್

ಏತನ್ಮಧ್ಯೆ, ತಂಡವು ಈಗ ಅವರ ಬದಲಿಯಾಗಿ ದಕ್ಷಿಣ ಆಫ್ರಿಕಾದ ಅನುಭವಿ ಎಡಗೈ ಸ್ಪಿನ್ನರ್ ಕೇಶವ್ ಮಹಾರಾಜ್ ಅವರನ್ನು 75 ಲಕ್ಷ ರೂ. ಗೆ ತಂಡಕ್ಕೆ ಸೇರಿಸಿಕೊಂಡಿದೆ. ಕೇಶವ್ ಮಹಾರಾಜ್​ಗೆ ಐಪಿಎಲ್‌ನಲ್ಲಿ ಆಡಿದ ಹೆಚ್ಚಿನ ಅನುಭವವಿಲ್ಲ. 2024 ರಲ್ಲಿ ರಾಜಸ್ಥಾನ್ ಪರ ಆಡಿದ್ದ ಮಹಾರಾಜ್​ಗೆ ಕೇವಲ ಎರಡು ಪಂದ್ಯಗಳನ್ನು ಆಡುವ ಅವಕಾಶ ಸಿಕ್ಕಿತ್ತು. ಈ ಬಾರಿಯ ಹರಾಜಿನಲ್ಲಿ ಅವರನ್ನು ಯಾವ ತಂಡವೂ ಖರೀದಿಸಿರಲಿಲ್ಲ. ಇದೀಗ ಸ್ಯಾಂಟ್ನರ್ ಗಾಯದಿಂದಾಗಿ ಮಹಾರಾಜ್​ಗೆ ಮುಂಬೈ ಪರ ಆಡುವ ಅವಕಾಶ ಸಿಕ್ಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version