Headlines

ದೆಹಲಿಯಲ್ಲಿ ಚುನಾವಣೆ ನಡೆದು, ಬಿಜೆಪಿ 10ಕ್ಕೂ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯವನ್ನೇ ಬಿಡುತ್ತೇನೆ; ಕೇಜ್ರಿವಾಲ್ ಶಪಥ – Kannada News | Hold election in Delhi will quit politics if BJP wins over 10 seats Arvind Kejriwal challenges

ನವದೆಹಲಿ, ಫೆಬ್ರವರಿ 27: ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರಿಗೆ ದೆಹಲಿ ನ್ಯಾಯಾಲಯವು ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

Read More

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಎಳಿಯುವ ಮುನ್ನ ಎಚ್ಚರ: ಚಿಕ್ಕಜಾಲದಲ್ಲಿ ಧೂಮಪಾನಿಗಳ ಬೆವರಿಳಿಸಿದ ರಾಣಿ ಚೆನ್ನಮ್ಮ ಪಡೆ – Kannada News | Bengaluru Police Enforce Public Smoking Ban Rani Chennamma Brigade Acts

ಬೆಂಗಳೂರು, ಜೂ.22: ರಾಜಧಾನಿಯಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡುವ ಮತ್ತು ಧೂಮಪಾನ ಮುಕ್ತ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಈಶಾನ್ಯ ವಿಭಾಗದ ‘ರಾಣಿ ಚೆನ್ನಮ್ಮ ಪಡೆ’ ಭರ್ಜರಿ ಕಾರ್ಯಾಚರಣೆ ಕೈಗೊಂಡಿದೆ. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯ್ದೆ (COTPA) ಉಲ್ಲಂಘಿಸುವವರ ವಿರುದ್ಧ ವಿಶೇಷ ಜಾಗೃತಿ ಹಾಗೂ ಕಠಿಣ ಜಾರಿ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಕಾರ್ಯಾಚರಣೆಯ ವೇಳೆ ರಾಣಿ ಚೆನ್ನಮ್ಮ ಪಡೆ ಹಾಗೂ ಚಿಕ್ಕಜಾಲ ಠಾಣೆಯ ಸಿಬ್ಬಂದಿ ತಂಡವು…

Read More

Horoscope Today 23 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 23, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಷಷ್ಠಿ ಮತ್ತು ಭರಣಿ ನಕ್ಷತ್ರದ ವಿಶೇಷ ದಿನವಾಗಿದೆ. ಇಂದಿನ ಪ್ರಮುಖ ಗ್ರಹಗಳ ಸಂಚಾರವೆಂದರೆ ಕುಜ ಗ್ರಹವು ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶಿಸಿರುವುದು. ಇದು ಏಪ್ರಿಲ್ 2ರ ತನಕ ಕುಂಭ ರಾಶಿಯಲ್ಲಿರುತ್ತದೆ. ಈ ಕುಜ ಗ್ರಹದ…

Read More

ಇರಾನ್​ನ 140 ಮಿಲಿಯನ್ ಬ್ಯಾರೆಲ್ ತೈಲವನ್ನು ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಂತೆ ಅಮೆರಿಕ!

ವಾಷಿಂಗ್ಟನ್, ಮಾರ್ಚ್ 21: ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಾದ್ಯಂತ ಕಚ್ಚಾ ತೈಲ, ಅಡುಗೆ ಅನಿಲ ಸೇರಿದಂತೆ ತೀವ್ರ ಇಂಧನ ಬಿಕ್ಕಟ್ಟು ಎದುರಾಗಿದೆ. ಇಂಥ ಸನ್ನಿವೇಶದಲ್ಲಿ ಇದೀಗ ಅಮೆರಿಕ ಮಹತ್ವದ ಹೇಳಿಕೆ ನೀಡಿದೆ. ಸಮುದ್ರದಲ್ಲಿ ಸಿಲುಕಿರುವ, ಇರಾನ್‌ಗೆ ಸೇರಿದ 140 ಮಿಲಿಯನ್ ಬ್ಯಾರೆಲ್ ಬ್ಯಾರೆಲ್ ತೈಲವನ್ನು ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡಿ ಇಂಧನ ಪೂರೈಕೆಯನ್ನು ಸುಗಮಗೊಳಿಸುವುದಾಗಿ ಅಮೆರಿಕದ ಖಜಾನೆ ಸಚಿವ ಸ್ಕಾಟ್ ಬೆಸೆಂಟ್ (Scott Bessent) ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಸಂದೇಶದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ ಅಷ್ಟೇ ಅಲ್ಲದೆ…

Read More

D.K. Shivakumar: ಡಿ.ಕೆ. ಶಿವಕುಮಾರ್​​ ಕರ್ನಾಟಕದ ನೂತನ ಸಿಎಂ; ಸಿಎಲ್​​ಪಿ ಸಭೆಯಲ್ಲಿ ಅಧಿಕೃತವಾಗಿ ಹೆಸರು ಘೋಷಣೆ

ಡಿ.ಕೆ. ಶಿವಕುಮಾರ್​​ ಕರ್ನಾಟಕದ ನೂತನ ಸಿಎಂImage Credit source: PTI ಬೆಂಗಳೂರು, ಮೇ 30: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ (Congress)​​ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ (D K Shivakumar)​​ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗುವುದು ನಿಶ್ಚಿತವಾಗಿತ್ತು. ಆದರೆ ಪ್ರಕ್ರಿಯೆಯಂತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಮೂಲಕ ನೂತನ ನಾಯಕನ ಆಯ್ಕೆ ಅಧಿಕೃತವಾಗಿ ಇಂದು ನಡೆದಿದೆ….

Read More

‘ಧುರಂಧರ್ 2’ ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ರಣ್ವೀರ್ ಸಿಂಗ್ ಭೇಟಿ

ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಕಳೆದ ತಿಂಗಳು ಬಿಡುಗಡೆ ಆಗಿದ್ದು ಚಿತ್ರಮಂದಿರದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ಭಾರತದಲ್ಲಿ 1000 ಕೋಟಿ ಗಳಿಕೆಯನ್ನು ದಾಟಿದ್ದು, ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇತ್ತೀಚೆಗಷ್ಟೆ ಚುನಾವಣಾ ಪ್ರಚಾರವೊಂದರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಿನಿಮಾದ ಬಗ್ಗೆ ಧನಾತ್ಮಕವಾಗಿ ಮಾತನಾಡಿದ್ದಾರೆ. ಇದೆಲ್ಲದರ ಬೆನ್ನಲ್ಲೆ ನಟ ರಣ್ವಿರ್ ಸಿಂಗ್ ಆರ್​​ಎಸ್​​ಎಸ್ ಕಚೇರಿಗೆ ಭೇಟಿ ನೀಡಿದ್ದು ಆರ್​​ಎಸ್​​ಎಸ್ ಮುಖ್ಯಸ್ಥ…

Read More

IPL 2026: ಇಬ್ಬರು ಔಟ್, ಮತ್ತಿಬ್ಬರು ಇನ್: ಹೀಗಿರಲಿದೆ RCB ಪ್ಲೇಯಿಂಗ್ ಇಲೆವೆನ್ – Kannada News | RCB are likely to make major changes in their playing XI

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ರಾಯ್​ಪುರ್​ನಲ್ಲಿ ನಾಳೆ (ಮೆ.9) ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರ್​ಸಿಬಿ ಕಳೆದ ಎರಡು ಮ್ಯಾಚ್​ಗಳಲ್ಲೂ ಸೋಲನುಭವಿಸಿದೆ. ಈ ಸೋಲಿಗೆ ಮುಖ್ಯ ಕಾರಣ ಆರ್​ಸಿಬಿ ತಂಡದ ಕಳಪೆ ಬ್ಯಾಟಿಂಗ್. ಅದರಲ್ಲೂ ರೊಮಾರಿಯೊ ಶೆಫರ್ಡ್ ಹಾಗೂ ಜಿತೇಶ್ ಶರ್ಮಾ…

Read More

‘ಭೂತ್ ಬಂಗ್ಲ’ ಕಲೆಕ್ಷನ್: 3 ದಿನಕ್ಕೆ 100 ಕೋಟಿ ರೂಪಾಯಿ ಗಳಿಸಿದ ಅಕ್ಷಯ್ ಕುಮಾರ್ ಸಿನಿಮಾ – Kannada News | Akshay Kumar Bhooth Bangla worldwide Box Office Collection day 3 crosses Rs 100 crores

ಬಾಲಿವುಡ್​ನ ಖ್ಯಾತ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಹಿರಿಯ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್​ನಲ್ಲಿ ಬಂದ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಮಾಧಾನಕರ ಗಳಿಕೆ ಮಾಡಿದೆ. ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ ಈ ಚಿತ್ರವು ವಿಶ್ವಾದ್ಯಂತ 100 ಕೋಟಿ ರೂಪಾಯಿಗಳ ಗಡಿಯನ್ನು ದಾಟುವ ಮೂಲಕ ಗಮನ ಸೆಳೆದಿದೆ. ಸುಮಾರು 14 ವರ್ಷಗಳ ಸುದೀರ್ಘ ಬಿಡುವಿನ ನಂತರ ಅಕ್ಷಯ್ ಕುಮಾರ್ ಮತ್ತು ಪ್ರಿಯದರ್ಶನ್ ಒಂದಾಗಿ ಮಾಡಿರುವ ಈ ಹಾರರ್-ಕಾಮಿಡಿ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ…

Read More

ಈ ವಾರ ಕನ್ನಡದ ಎರಡು ದೊಡ್ಡ ಸಿನಿಮಾಗಳು ರಿಲೀಸ್; ಎರಡರಲ್ಲೂ ರಚಿತಾ ನಟನೆ – Kannada News | Rachita Ram’s Double Treat: Cult and Landlord Hit Theaters Jan 23

ಸಂಕ್ರಾಂತಿ ಸಂದರ್ಭದಲ್ಲಿ ತೆಲುಗು ಸಿನಿಮಾಗಳು ರಿಲೀಸ್ ಆಗಿ ಅಬ್ಬರಿಸಿದವು. ಈಗ ಜನವರಿ 26 ಬರುತ್ತಿದೆ. ಇದರ ಲಾಭ ಪಡೆಯಲು ಕನ್ನಡದ ನಿರ್ಮಾಪಕರು ಮುಂದಾಗಿದ್ದಾರೆ. ಜನವರಿ 23ರಂದು ಕನ್ನಡದ ಎರಡು ಪ್ರಮುಖ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದು ಎ ಪ್ರಮಾಣ ಪತ್ರ ಪಡೆದ ಸಿನಿಮಾ (Cinema) ಆದರೆ ಮತ್ತೊಂದು ಯುಎ ಪ್ರಮಾಣ ಪತ್ರ ಪಡೆದ ಚಿತ್ರ. ಈ ಎರಡೂ ಸಿನಿಮಾಗಳು ಧೂಳೆಬ್ಬಿಸಲು ರೆಡಿ ಆಗಿದೆ. ಕಲ್ಟ್ ‘ಉಪಾಧ್ಯಕ್ಷ’ ಸಿನಿಮಾ ನಿರ್ದೇಶನ ಮಾಡಿ ಗಮನ ಸೆಳೆದ ಅನಿಲ್ ಕುಮಾರ್ ಅವರು…

Read More

ಸನ್‌ರೈಸರ್ಸ್- ರಾಜಸ್ಥಾನ್ ನಡುವೆ ಎಲಿಮಿನೇಟರ್; ಯಾರಿಗೆ ಸಿಗಲಿದೆ ಕ್ವಾಲಿಫೈಯರ್ 2 ಟಿಕೆಟ್?

ಮೇ 26 ರ ಮಂಗಳವಾರ ನಡೆದ ಐಪಿಎಲ್ 2026 (IPL 2026) ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದೆ. ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ತಂಡವು ಸೋಲಿನ ಹೊರತಾಗಿಯೂ ಫೈನಲ್ ತಲುಪಲು ಇನ್ನೊಂದು ಅವಕಾಶವನ್ನು ಪಡೆದಿದೆ. ಅದಕ್ಕಾಗಿ ಗುಜರಾತ್ ಕ್ವಾಲಿಫೈಯರ್ 2 ಪಂದ್ಯವನ್ನು ಆಡಬೇಕಾಗುತ್ತದೆ. ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್​ಗೆ ಯಾರು ಎದುರಾಗುತ್ತಾರೆ ಎಂಬುದು ಇಂದು ಅಂದರೆ ಮೇ 27 ರಂದು…

Read More