ಟ್ರಂಪ್ ಹತ್ಯೆ ಯತ್ನ: ಶ್ವೇತಭವನದಲ್ಲಿ ಗುಂಡು ಹಾರಿಸಿದ ಶೂಟರ್ ವಿರುದ್ಧ ಅಧಿಕೃತ ದೂರು ದಾಖಲು, ದೋಷಿ ಸಾಬೀತಾದರೆ ಜೀವಾವಧಿ ಶಿಕ್ಷೆ – Kannada News | Trump Assassination Attempt: Cole Allen Charged, Faces Life for White House Dinner Attack

ವಾಷಿಂಗ್ಟನ್,ಏಪ್ರಿಲ್ 28: ಶ್ವೇತಭವನದ ಪತ್ರಿಕಾ ಭೋಜನಕೂಟದ ವೇಳೆ ಗುಂಡಿನ ದಾಳಿ(Firing) ನಡೆಸಿ ಸಂಚಲನ ಮೂಡಿಸಿದ್ದ ಕ್ಯಾಲಿಫೋರ್ನಿಯಾದ 31 ವರ್ಷದ ಕೋಲ್ ತೋಮಸ್ ಅಲೆನ್ ವಿರುದ್ಧ ಅಮೆರಿಕದ ಫೆಡರಲ್ ನ್ಯಾಯಾಲಯವು ‘ಅಧ್ಯಕ್ಷರ ಹತ್ಯೆ ಯತ್ನ’ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಹೊರಿಸಿದೆ. ಈ ಅಪರಾಧಗಳು ಸಾಬೀತಾದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆಯಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಸೋಮವಾರ ವಾಷಿಂಗ್ಟನ್‌ನ ಫೆಡರಲ್ ನ್ಯಾಯಾಲಯಕ್ಕೆ ಅಲೆನ್‌ನನ್ನು ಹಾಜರುಪಡಿಸಲಾಯಿತು. ಹಂಗಾಮಿ ಅಟಾರ್ನಿ ಜನರಲ್ ಟಾಡ್ ಬ್ಲಾಂಚೆ ಅವರ ಪ್ರಕಾರ, ಅಲೆನ್ ಈ ದಾಳಿಗಾಗಿ ವ್ಯವಸ್ಥಿತವಾಗಿ ಸಿದ್ಧತೆ ನಡೆಸಿದ್ದ. ಉನ್ನತ ಶಿಕ್ಷಣ ಪಡೆದ ಅಲೆನ್ ಇಂತಹ ಕೃತ್ಯಕ್ಕೆ ಮುಂದಾಗಿರುವುದು ತನಿಖಾಧಿಕಾರಿಗಳನ್ನು ಬೆಚ್ಚಿಬೀಳಿಸಿದೆ.

ಕ್ಯಾಲಿಫೋರ್ನಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಪದವೀಧರನಾಗಿರುವ ಈತ, ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದಿದ್ದಾನೆ.ಈತ ಒಬ್ಬ ಹವ್ಯಾಸಿ ವಿಡಿಯೋ ಗೇಮ್ ಡೆವಲಪರ್ ಎಂದು ಗುರುತಿಸಿಕೊಳ್ಳುತ್ತಿದ್ದ.

ಮತ್ತಷ್ಟು ಓದಿ: ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ: ಪ್ರಧಾನಿ ಮೋದಿ

ದಾಳಿಗೂ ಮುನ್ನ ತನ್ನ ಕುಟುಂಬಕ್ಕೆ ಕಳುಹಿಸಿದ ಪ್ರಣಾಳಿಕೆಯಲ್ಲಿ ತನ್ನನ್ನು ‘ಫ್ರೆಂಡ್ಲಿ ಫೆಡರಲ್ ಅಸಾಸಿನ್’ ಎಂದು ಬಣ್ಣಿಸಿಕೊಂಡಿದ್ದ. ಅಧ್ಯಕ್ಷ ಟ್ರಂಪ್ ಅವರನ್ನು ದುಷ್ಟ ವ್ಯಕ್ತಿ ಎಂದು ಕರೆದಿದ್ದ ಆತ, ಆಡಳಿತದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದ.

ಆರೋಪಿಯು ಕ್ಯಾಲಿಫೋರ್ನಿಯಾದಿಂದ ಚಿಕಾಗೋಗೆ ರೈಲಿನಲ್ಲಿ ಪ್ರಯಾಣಿಸಿ, ನಂತರ ವಾಷಿಂಗ್ಟನ್‌ಗೆ ಬಂದಿದ್ದ. ಕಾರ್ಯಕ್ರಮ ನಡೆಯುತ್ತಿದ್ದ ಹಿಲ್ಟನ್ ಹೋಟೆಲ್‌ನಲ್ಲಿ ಅತಿಥಿಯಾಗಿ ಚೆಕ್-ಇನ್ ಆಗಿದ್ದನು. ಭದ್ರತಾ ಬ್ಯಾರಿಕೇಡ್‌ಗಳನ್ನು ದಾಟಿ ಓಡಿಬಂದು ಹಲವು ಸುತ್ತು ಗುಂಡು ಹಾರಿಸುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಅಂತಿಮವಾಗಿ ಭದ್ರತಾ ಸಿಬ್ಬಂದಿ ಆತನನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು.

ಅಲೆನ್ ಪರವಾಗಿ ವಕೀಲರು ವಾದ ಮಂಡಿಸಿದ್ದು, ಆತನಿಗೆ ಯಾವುದೇ ಹಳೆಯ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂದು ತಿಳಿಸಿದ್ದಾರೆ. ಆದರೆ, ಆತನ ಪ್ರಣಾಳಿಕೆ ಮತ್ತು ಸಾಮಾಜಿಕ ಮಾಧ್ಯಮಗಳ ಬರಹಗಳು ಆತನ ಕ್ರೂರ ಉದ್ದೇಶಕ್ಕೆ ಸಾಕ್ಷಿಯಾಗಿವೆ ಎಂದು ಪ್ರಾಸಿಕ್ಯೂಟರ್‌ಗಳು ವಾದಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ರಾಕಾ’ ಸಿನಿಮಾದ ಬಹುತೇಕ ದೃಶ್ಯಗಳಲ್ಲಿ ಇರ್ತಾರೆ ದೀಪಿಕಾ ಪಡಿಯಚ್ಚು – Kannada News | Deepika Padukone Films ‘Raaka’ Action Scenes with Body Double Amid Pregnancy

ದೀಪಿಕಾ ಪಡುಕೋಣೆ ಅವರು ಇತ್ತೀಚೆಗೆ ಸಿಹಿ ಸುದ್ದಿ ನೀಡಿದ್ದಾರೆ. ಅವರು ತಾಯಿ ಆಗುತ್ತಿದ್ದಾರೆ. ಕೆಲ ವರ್ಷಗಳ ಹಿಂದೆ ಅವರು ಹೆಣ್ಣು ಮಗುವಿಗೆ ಜನ್ಮನೀಡಿದರು. ಈಗ ಅವರು ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈಗ ಅವರು ‘ರಾಕಾ’ ಸಿನಿಮಾ ಹಾಗೂ ‘ಕಿಂಗ್’ ಚಿತ್ರಗಳ ಶೂಟ್ ಪೂರ್ಣಗೊಳಿಸಬೇಕಿದೆ. ಈ ಸಿನಿಮಾದಲ್ಲಿ ಬರುವ ಆ್ಯಕ್ಷನ್ ದೃಶ್ಯಗಳಿಗೆ ಬಾಡಿ ಡಬಲ್ ಬಳಕೆ ಮಾಡಲು ತಂಡ ನಿರ್ಧರಿಸಿದೆ.

ಸಾಮಾನ್ಯವಾಗಿ ಪ್ರೆಗ್ನೆಂಟ್ ಆದಾಗ ಮನೆಯಲ್ಲೇ ವಿಶ್ರಾಂತಿ ಪಡೆಯಲು ಎಲ್ಲರೂ ನಿರ್ಧರಿಸುತ್ತಾರೆ. ಆದರೆ, ದೀಪಿಕಾ ಪಡುಕೋಣೆ ಆ ರೀತಿ ಅಲ್ಲ. ಅವರು ಒಪ್ಪಿಕೊಂಡ ಸಿನಿಮಾ ಕೆಲಸಗಳನ್ನು ಮುಗಿಸುವ ನಿರ್ಧಾರಕ್ಕೆ ಬಂದಿದ್ದಾರೆ. ‘ರಾಕಾ’ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ದೃಶ್ಯಗಳಿವೆ. ಈ ಆ್ಯಕ್ಷನ್ ದೃಶ್ಯಗಳನ್ನು ಅವರಿಂದ ಮಾಡಿಸಲು ತಂಡ ರೆಡಿ ಇಲ್ಲ. ಹೀಗಾಗಿ, ಬಾಡಿ ಡಬಲ್ ಮೊರೆ ಹೋಗಿದೆ.

ಬಾಡಿ ಡಬಲ್ ಚಿತ್ರರಂಗದಲ್ಲಿ ಮೊದಲಿನಿಂದಲೂ ಬಳಕೆಯಲ್ಲಿರುವ ತಂತ್ರ. ರಿಸ್ಕಿ ಆ್ಯಕ್ಷನ್ ದೃಶ್ಯಗಳ ಸಮಯದಲ್ಲಿ ಇದನ್ನು ಬಳಸಲಾಗುತ್ತದೆ. ದೇಹದ ಆಕಾರದಲ್ಲಿ ಹೀರೋ/ಹೀರೋಯಿನ್ ಹೋಲುವ ವ್ಯಕ್ತಿಯನ್ನು ಕರೆತರಲಾಗುತ್ತದೆ. ಇಲ್ಲಿ ಎಲ್ಲಿಯೂ ಮುಖವನ್ನು ತೋರಿಸುವುದಿಲ್ಲ. ರಿಸ್ಕಿ ಸ್ಟಂಟ್​​ಗಳನ್ನು ಕಲಾವಿದರ ಬದಲು ಇವರು ಮಾಡುತ್ತಾರೆ. ಇದರಿಂದ ಸ್ಟಂಟ್ ಮಾಡುವ ವೇಳೆ ಏನಾದರೂ ತೊಂದರೆ ಆದರೆ, ಹೀರೋ/ಹೀರೋಯಿನ್ ಸೇಫ್ ಆಗಿ ಇರುತ್ತಾರೆ. ರಜನಿಕಾಂತ್ ಅವರ ‘ಕೂಲಿ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಇದರಲ್ಲಿ ಅನೇಕ ದೃಶ್ಯಗಳನ್ನು ಬಾಡಿ ಡಬಲ್ ಮೂಲಕವೇ ಮಾಡಲಾಗಿತ್ತು ಎಂದು ವರದಿ ಆಗಿತ್ತು.

ಇದನ್ನೂ ಓದಿ: ಗರ್ಭಿಣಿ ಆದ ನಂತರವೂ ಸಾಹಸ ದೃಶ್ಯಗಳ ಚಿತ್ರೀಕರಣ ಮಾಡಿದ ದೀಪಿಕಾ ಪಡುಕೋಣೆ

ಈಗ ಅಟ್ಲಿ ಕೂಡ ಇದೇ ತಂತ್ರದ ಮೊರೆ ಹೋಗಿದ್ದಾರೆ. ಈಗಾಗಲೇ ದೀಪಿಕಾ ಪಡುಕೋಣೆ ಅವರು ಕ್ಲೋಸ್​​ಅಪ್ ಶಾಟ್​​ಗಳನ್ನು ಕೊಟ್ಟಿದ್ದಾರೆ. ಸ್ಟಂಟ್ ಮಾಡುವ ದಶ್ಯಗಳಲ್ಲಿ ದೀಪಿಕಾ ಪಡುಕೋಣೆ ಮುಖ ತೋರಿಸುವ ದೃಶ್ಯ ಬಂದರೆ, ವಿಎಫ್​​ಎಕ್ಸ್ ಮೂಲಕ ಎಡಿಟ್ ಮಾಡಲು ನಿರ್ಧರಿಸಲಾಗಿದೆ. ಅಲ್ಲು ಅರ್ಜುನ್ ಅವರು ‘ರಾಕಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಅಟ್ಲಿ ನಿರ್ದೇಶನ ಇರುವ ಈ ಚಿತ್ರಕ್ಕೆ ತಮಿಳಿನ ಸನ್ ಪಿಕ್ಚರ್ಸ್ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Horoscope Today: ಇಂದು ಈ ರಾಶಿಯವರಿಗೆ ಇಂದು ಖರ್ಚು ಹೆಚ್ಚು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 28, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಏಕಾದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ.

ಈ ಶುಭ ದಿನದಂದು ಸೂರ್ಯ ಭಗವಾನರು ಮೇಷ ರಾಶಿಯ ಭರಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದರೆ, ಚಂದ್ರನು ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ. ಇಂದಿನ ರಾಹುಕಾಲವು ಮಧ್ಯಾಹ್ನ 3:24 ರಿಂದ 4:58 ರವರೆಗೆ ಇದ್ದು, ಸರ್ವಸಿದ್ಧಿ ಸಂಕಲ್ಪ ಕಾಲ ಮತ್ತು ಶುಭಕಾಲವು ಬೆಳಗ್ಗೆ 10:43 ರಿಂದ 12:17 ರವರೆಗೆ ಇರುತ್ತದೆ. ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಡಾ. ಗುರೂಜಿ ಶುಭ ಹಾರೈಸಿದ್ದಾರೆ.

 

 

 

Source link

ಖಾತೆದಾರರು ಬಂದ್ರೆ ಮಾತ್ರ ಹಣ ಕೊಡೋದು ಎಂದ ಬ್ಯಾಂಕ್ ಸಿಬ್ಬಂದಿ, ಮೃತ ಸಹೋದರಿಯ ಅಸ್ಥಿಪಂಜರ ಹೊತ್ತು ಬಂದ ವ್ಯಕ್ತಿ – Kannada News | Odisha Man Carries Sister’s Skeleton to Bank for Money: A Tragic Tale of Bank Rules

ಅಸ್ಥಿಪಂಜರ ಹಿಡಿದು ಬ್ಯಾಂಕಿಗೆ ಹೋದ ವ್ಯಕ್ತಿ Image Credit source: NDTV

ಕಿಯೋಂಜಾರ್, ಏಪ್ರಿಲ್ 28:  ವ್ಯಕ್ತಿಯೊಬ್ಬರು ತನ್ನ ಮೃತ ಸಹೋದರಿಯ ಅಸ್ಥಿಪಂಜರ(Skeleton)ವನ್ನೇ ಹೊತ್ತು ಉರಿಯುವ ಬಿಸಿಲಿನಲ್ಲಿ 3 ಕಿಲೋಮೀಟರ್ ನಡೆದು ಬ್ಯಾಂಕಿಗೆ ಹೋಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಕಿಯೋಂಜಾರ್ ಜಿಲ್ಲೆಯ ಡಯಾನಾಲಿ ಗ್ರಾಮದ ಜಿತು ಮುಂಡಾ ಅವರ ಸಹೋದರಿ ಕಾಕ್ರಾ ಮುಂಡಾ ಎರಡು ತಿಂಗಳ ಹಿಂದೆ ನಿಧನರಾಗಿದ್ದರು. ಕಾಕ್ರಾ ಅವರ ಪತಿ ಮತ್ತು ಮಗು ಮೊದಲೇ ಮೃತಪಟ್ಟಿದ್ದರಿಂದ, ಜಿತು ಅವರೇ ಏಕೈಕ ಸಂಬಂಧಿಯಾಗಿದ್ದರು. ಸಹೋದರಿಯ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಪಡೆಯಲು ಜಿತು ಅವರು ಬ್ಯಾಂಕ್ ಮ್ಯಾನೇಜರ್ ಅನ್ನು ಭೇಟಿ ಮಾಡಿದಾಗ, ಖಾತೆದಾರರು ಖುದ್ದಾಗಿ ಬರಬೇಕು ಅಥವಾ ಕಾನೂನುಬದ್ಧ ಉತ್ತರಾಧಿಕಾರಿ ದಾಖಲೆಗಳನ್ನು ನೀಡಬೇಕು ಎಂದು ಬ್ಯಾಂಕ್ ನಿಯಮದ ನೆಪವೊಡ್ಡಿತ್ತು.

ಯಾವುದೇ ಶಿಕ್ಷಣವಿಲ್ಲದ ಮತ್ತು ಬುಡಕಟ್ಟು ಜನಾಂಗದ ಜಿತು ಅವರಿಗೆ ಮರಣ ಪ್ರಮಾಣಪತ್ರ ಪಡೆಯುವ ಅಥವಾ ಉತ್ತರಾಧಿಕಾರ ಪತ್ರದ ಸಂಕೀರ್ಣ ಪ್ರಕ್ರಿಯೆಗಳ ಬಗ್ಗೆ ತಿಳಿದಿರಲಿಲ್ಲ. ಹಣ ಸಿಗದಿದ್ದರೆ ಜೀವನ ನಡೆಸುವುದು ಕಷ್ಟ ಎಂಬ ಭಯದಿಂದ ಜಿತು ಅವರು ಸೋಮವಾರ ನಿರ್ಧಾರವೊಂದನ್ನು ತೆಗೆದುಕೊಂಡರು.

ಬೇರೆ ದಾರಿ ಕಾಣದ ಜಿತು, ಹಳ್ಳಿಯ ಸ್ಮಶಾನಕ್ಕೆ ಹೋಗಿ ಸಹೋದರಿಯ ಅವಶೇಷಗಳನ್ನು ಅಗೆದು ತೆಗೆದಿದ್ದಾರೆ. ಅಸ್ಥಿಪಂಜರವನ್ನು ಬಟ್ಟೆಯಲ್ಲಿ ಸುತ್ತಿ, ಅದನ್ನು ತಮ್ಮ ಭುಜದ ಮೇಲೆ ಹೊತ್ತುಕೊಂಡು 3 ಕಿಲೋಮೀಟರ್ ನಡೆದು ಬ್ಯಾಂಕ್‌ಗೆ ಬಂದಿದ್ದಾರೆ. ಅಸ್ಥಿಪಂಜರವನ್ನು ಬ್ಯಾಂಕ್ ಎದುರು ಇರಿಸಿದಾಗ ಅಲ್ಲಿದ್ದ ಜನರು ಮತ್ತು ಬ್ಯಾಂಕ್ ಸಿಬ್ಬಂದಿ ದಿಗ್ಭ್ರಮೆಗೊಂಡರು. ಈ ದೃಶ್ಯ ಕಂಡ ಗ್ರಾಮಸ್ಥರು ಬ್ಯಾಂಕ್‌ನ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮತ್ತಷ್ಟು ಓದಿ: ತೆಕ್ಕಲಕೋಟೆ ಉತ್ಖನನದ ವೇಳೆ ಶಿಲಾಯುಗ ಕಾಲದ 3ನೇ ಅಸ್ಥಿಪಂಜರ ಪತ್ತೆ: ಇಲ್ಲಿದೆ ಸಂಪೂರ್ಣ ಮಾಹಿತಿ

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಜಿತು ಮುಂಡಾ ಅವರನ್ನು ಸಮಾಧಾನಪಡಿಸಿದರು. ಕೇವಲ ದಾಖಲೆಗಳಿಗಾಗಿ ಹಠ ಹಿಡಿಯುವ ಬದಲು, ಸ್ಥಳೀಯ ಸರಪಂಚರ ಮೂಲಕ ಬ್ಯಾಂಕ್ ಪರಿಶೀಲನೆ ನಡೆಸಬಹುದಿತ್ತು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಸದ್ಯ ಪೊಲೀಸರು ಈ ಪ್ರಕರಣವನ್ನು ಮಾನವೀಯ ನೆಲೆಯಲ್ಲಿ ನಿಭಾಯಿಸುವುದಾಗಿ ಭರವಸೆ ನೀಡಿದ್ದಾರೆ ಮತ್ತು ಬ್ಯಾಂಕ್‌ನಿಂದ ಸೂಕ್ತ ವಿವರಣೆ ಕೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Daily Devotional: ಕೇವಲ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾಗಲ್ಲ, ದೇವಸ್ಥಾನಕ್ಕೂ ಹೋಗಬೇಕು! ಯಾಕೆ ಗೊತ್ತಾ?

ಮನೆಯಲ್ಲಿ ಪೂಜೆ ಮಾಡುವುದರ ಜೊತೆಗೆ ದೇವಸ್ಥಾನಕ್ಕೂ ಹೋಗಬೇಕು ಯಾಕೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅನೇಕರಿಗೆ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾ ಅಥವಾ ದೇವಾಲಯಕ್ಕೂ ಹೋಗಬೇಕಾ ಎಂಬ ಗೊಂದಲವಿರುತ್ತದೆ. ಮನೆಯಲ್ಲಿ ನಾವು ನಮ್ಮ ತೃಪ್ತಿಗಾಗಿ ವಿಗ್ರಹಗಳನ್ನು ಇಟ್ಟು ಪೂಜೆ ಮಾಡುತ್ತೇವೆ, ಇದು ಆಂತರಿಕ ಆತ್ಮ ಶುದ್ಧಿಗೆ ಸಹಕಾರಿ. ಆದರೆ ದೇವಾಲಯಗಳಲ್ಲಿ ವಿಗ್ರಹಗಳನ್ನು ಶಾಸ್ತ್ರಬದ್ಧವಾಗಿ ಭೂಸ್ಥಾಪನೆ ಮಾಡಿ ಪ್ರತಿಷ್ಠಾಪಿಸಲಾಗಿರುತ್ತದೆ. ಅಲ್ಲಿ ತ್ರಿಕಾಲ ಪೂಜೆ ನಡೆಯುತ್ತದೆ ಮತ್ತು ಅವು ಪಂಚಭೂತಗಳನ್ನು ನಿಯಂತ್ರಿಸುವ ಶಕ್ತಿ ಕೇಂದ್ರಗಳಾಗಿವೆ.

ದೇವಾಲಯದ ಭೇಟಿ ನಮ್ಮ ದೇಹದ ಹೊರಭಾಗಕ್ಕೆ ವಿಶೇಷ ಪ್ರಭಾವಳಿಯನ್ನು ತರುತ್ತದೆ, ದೈವಾಂಶವನ್ನು ಹೆಚ್ಚಿಸುತ್ತದೆ. ಮನೆಯಲ್ಲಿ ಅಂತರಾತ್ಮವನ್ನು ಶುದ್ಧಿ ಮಾಡಿಕೊಂಡ ನಂತರ ದೇವಸ್ಥಾನಕ್ಕೆ ಹೋಗುವುದು ದೇಹದ ಸಂಪೂರ್ಣ ಶುದ್ಧಿಗೆ ಕಾರಣವಾಗುತ್ತದೆ. ಮನೆ ಪೂಜೆ ಬೇರು ಇದ್ದರೆ, ದೇವಾಲಯವು ಫಲ ನೀಡುವ ವೃಕ್ಷವಿದ್ದಂತೆ. ಹಾಗಾಗಿ, ಮನೆಯ ಪೂಜೆ ಮತ್ತು ದೇವಾಲಯ ಭೇಟಿ ಎರಡೂ ಆಧ್ಯಾತ್ಮಿಕ ಜೀವನಕ್ಕೆ ಅವಶ್ಯಕ, ಒಂದನ್ನು ಬಿಟ್ಟು ಒಂದಿಲ್ಲ.

 

Source link

‘ನನ್ನನ್ನು ಮುಗಿಸ್ತೀನಿ ಅಂತ ಕನಸಲ್ಲೂ ಅಂದ್ಕೋಬೇಡಿ’; ಸುದೀಪ್ ನೇರ ಎಚ್ಚರಿಕೆ – Kannada News | Kiccha Sudeep’s Witty Warning at KD Press Meet: “Don’t Even Dream of Finishing Me!

ಕಿಚ್ಚ ಸುದೀಪ್ ಅವರು (Sudeep) ಯಾವುದೇ ಸುದ್ದಿಗೋಷ್ಠಿಗೆ ತೆರಳಿದರೂ ಅದಕ್ಕೊಂದು ವಿಶೇಷ ಕಳೆ ಬರುತ್ತದೆ. ಅವರು ಆಡುವ ಖಡಕ್ ಮಾತುಗಳನ್ನು ಕೇಳಲು ಫ್ಯಾನ್ಸ್ ಕಾದಿರುತ್ತಾರೆ. ಈಗ ಅವರು ‘ಕೆಡಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಹಲವು ವಿಷಯಗಳ ಬಗ್ಗೆ ಅವರು ಮಾತನಾಡಿದ್ದಾರೆ. ಈ ವೇಳೆ ತಮ್ಮನ್ನು ಮುಗಿಸುವ ಆಲೋಚನೆ ಮಾಡಬೇಡಿ ಎಂದು ಗಂಭೀರ ಹಾಗೂ ಹಾಸ್ಯ ಮಿಶ್ರಣದಲ್ಲಿ ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಕಿಚ್ಚ ಸುದೀಪ್ ಅವರು ‘ಕೆಡಿ’ ಸಿನಿಮಾದಲ್ಲಿ ‘ಕಾಲ ಭೈರವ’ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ರಿಲೀಸ್​​ಗೂ ಮೊದಲು ಸುದೀಪ್ ಅವರನ್ನು ವೇದಿಕೆ ಮೇಲೆ ತರೋದಾಗಿ ಈ ಮೊದಲು ಪ್ರೇಮ್ ಹೇಳಿದ್ದರು. ಅದರಂತೆ, ಸುದೀಪ್ ಅವರನ್ನು ವೇದಿಕೆಗೆ ಕರೆತರುವ ಕೆಲಸ ಆಗಿದೆ. ಆಗ ಅವರಿಗೆ ವಿವಿಧ ರೀತಿಯ ಪ್ರಶ್ನೆಗಳು ಎದುರಾಗಿವೆ.

ಪತ್ರಕರ್ತರೊಬ್ಬರು ‘ಕೊನೆಯ ಪ್ರಶ್ನೆ, ಮುಗಿಸಿಬಿಡ್ತೀನಿ’ ಎಂದು ಹೇಳಿದರು. ಆಗ ಸುದೀಪ್ ಅವರು ‘ಯಾರನ್ನು ಮುಗಿಸುತ್ತೀರಾ? ನನ್ನನ್ನು ಮುಗಿಸ್ತೀನಿ ಅಂತ ಕನಸಲ್ಲೂ ಅಂದ್ಕೋಬೇಡಿ ’ ಎಂದು ಹೇಳಿದರು. ಆಗ ಅಲ್ಲಿದ್ದವರು ಇದಕ್ಕೆ ನಕ್ಕಿದ್ದಾರೆ. ಸುದೀಪ್ ಅವರು ಪ್ರತಿ ಸುದ್ದಿಗೋಷ್ಠಿಯಲ್ಲೂ ಈ ರೀತಿಯಲ್ಲಿ ಫನ್ ಆಗಿ ಮಾತನಾಡುತ್ತಾ ಇರುತ್ತಾರೆ. ಈ ವಿಡಿಯೋಗಳು ವೈರಲ್ ಆಗುತ್ತವೆ. ಬಿಗ್ ಬಾಸ್ ವೇದಿಕೆಯಲ್ಲೂ ಅವರು ಈ ರೀತಿ ಮಾತುಗಳನ್ನು ಆಡುತ್ತಾರೆ. ಇದಕ್ಕೆ ದೊಡ್ಡ ಅಭಿಮಾನಿ ಬಳಗ ಇದೆ.

ಇದನ್ನೂ ಓದಿ: ಕೆಡಿ ಸಿನಿಮಾ ಸುದ್ದಿಗೋಷ್ಠಿ: ಎಷ್ಟೇ ಕೇಳಿದರೂ ಆ ವಿಷಯ ಬಾಯಿ ಬಿಡಲಿಲ್ಲ ಕಿಚ್ಚ ಸುದೀಪ್

‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗುತ್ತಿದೆ. ಮೇ 1ರಂದು ಕಾರ್ಮಿಕ ದಿನಾಚರಣೆ ಪ್ರಯುಕ್ತ ಸರ್ಕಾರಿ ರಜೆ ಇದೆ. ಹೀಗಾಗಿ, ಈ ದಿನ ಸಿನಿಮಾಗೆ ಸಹಕಾರಿ ಆಗಲಿದೆ. ಈ ಚಿತ್ರದಲ್ಲಿ ಧ್ರುವ ಸರ್ಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರೀಷ್ಮಾ ನಾಣಯ್ಯ, ಶಿಲ್ಪಾ ಶೆಟ್ಟಿ, ಕಿಚ್ಚ ಸುದೀಪ್, ಸಂಜಯ್ ದತ್, ರವಿಚಂದ್ರನ್, ರಮೇಶ್ ಅರವಿಂದ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ವಿವಾದಗಳ ಮೂಲಕ ಸುದ್ದಿ ಆಗಿದೆ. ಪ್ರೇಮ್ ನಿರ್ದೇಶನದ ಈ ಚಿತ್ರಕ್ಕೆ, ಕೆವಿಎನ್ ಸಂಸ್ಥೆ ಬಂಡವಾಳ ಹೂಡಿದೆ. ಈ ಚಿತ್ರದ ಹಾಡು ಹಾಗೂ ಟ್ರೇಲರ್ ವಿವಾದಕ್ಕೆ ಕಾರಣ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಡಿಕೆ ಶಿವಕುಮಾರ್ ವಾಪಸಾಗ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಬಣ ದೆಹಲಿಗೆ! ಕಾಂಗ್ರೆಸ್​ನಲ್ಲಿ ಜೋರಾಯ್ತು ಡೆಲ್ಲಿ ಟೂರ್ ಪಾಲಿಟಿಕ್ಸ್ – Kannada News | Karnataka Congress Leadership Row: Siddaramaiah Camp Rushes to Delhi After DK Shivakumar’s Visit

ಬೆಂಗಳೂರು, ಏಪ್ರಿಲ್ 28: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕಳೆದ ಕೆಲವು ತಿಂಗಳುಗಳಿಂದ ಸದ್ದಿಲ್ಲದೆ ನಡೆಯುತ್ತಿದ್ದ ‘ಕುರ್ಚಿ ಕಿತ್ತಾಟ’ ಈಗ ಮತ್ತೆ ಬಹಿರಂಗಗೊಳ್ಳುವ ಹಾಗೂ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿ ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತ ಬಣ ದೆಹಲಿಗೆ ದೌಡಾಯಿಸಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ದೆಹಲಿಯಲ್ಲಿ ಸಿದ್ದು ಬಣದ ಸಂಚಲನ

ಡಿಕೆಶಿ ಅವರ ಮೂರು ದಿನಗಳ ದೆಹಲಿ ವಾಸ್ತವ್ಯದ ಬೆನ್ನಲ್ಲೇ ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ. ಮಹದೇವಪ್ಪ ಮತ್ತು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೈಕಮಾಂಡ್ ಭೇಟಿಗೆ ತೆರಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಸತೀಶ್ ಜಾರಕಿಹೊಳಿ, ‘ಪಕ್ಷದಲ್ಲಿನ ಗೊಂದಲಗಳನ್ನು ತಕ್ಷಣ ಬಗೆಹರಿಸಿ ಒಂದು ಸ್ಪಷ್ಟತೆ (Clarity) ಕೊಡಿ’ ಎಂದು ಮನವಿ ಮಾಡಿದ್ದಾರೆ. ಇದು ನಾಯಕತ್ವ ಬದಲಾವಣೆಯ ಚರ್ಚೆಗೆ ಹೊಸ ವೇಗ ನೀಡಿದೆ.

ಡಿಕೆಶಿ ಬರ್ತ್‌ಡೇ ಗಿಫ್ಟ್ ನಿರೀಕ್ಷೆ

ಇತ್ತ ‘ಬಂಡೆ’ ಬಣದಲ್ಲಿ ಹೊಸ ಆಶಾಭಾವನೆ ಮೂಡಿದೆ. ಮೇ 15ಕ್ಕೆ ಡಿಕೆ ಶಿವಕುಮಾರ್ ಜನ್ಮದಿನವಿದ್ದು, ಅಷ್ಟರೊಳಗೆ ಹೈಕಮಾಂಡ್‌ನಿಂದ ಶುಭ ಸುದ್ಧಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಅವರ ಬೆಂಬಲಿಗರಿದ್ದಾರೆ. ಶಾಸಕರಾದ ಕುಣಿಗಲ್ ರಂಗನಾಥ್ ಮತ್ತು ಅಶೋಕ್ ಪಟ್ಟಣ್ ಅವರು ಮೇ ಎರಡನೇ ವಾರದಲ್ಲಿ ‘ಸಿಹಿ ಸುದ್ಧಿ’ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅಧಿಕಾರ ಹಂಚಿಕೆಯ ಒಪ್ಪಂದವಾಗಿದ್ದರೆ ಡಿಕೆಶಿಗೆ ಅವಕಾಶ ಸಿಗಲಿ ಎಂದು ಗುಬ್ಬಿ ಶಾಸಕ ಶ್ರೀನಿವಾಸ್ ಕೂಡ ದಾಳ ಉರುಳಿಸಿದ್ದಾರೆ.

ಹೆಚ್‌ಡಿಕೆ ಹೊಸ ಬಾಂಬ್

ಕಾಂಗ್ರೆಸ್‌ನ ಈ ಆಂತರಿಕ ಕಚ್ಚಾಟದ ನಡುವೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ‘ಸುಮಾರು 40 ರಿಂದ 50 ಕಾಂಗ್ರೆಸ್ ಶಾಸಕರು ದೆಹಲಿಗೆ ಹೋಗಲು ಟಿಕೆಟ್ ರೆಡಿ ಮಾಡಿಸಿಕೊಳ್ಳುತ್ತಿದ್ದಾರೆ’ ಎಂದು ಹೇಳುವ ಮೂಲಕ ಸರ್ಕಾರಕ್ಕೆ ಅಸ್ಥಿರತೆಯ ಭೀತಿ ಎದುರಾಗಿದೆಯೇ ಎಂಬ ಪ್ರಶ್ನೆ ಮೂಡಿಸಿದ್ದಾರೆ.

ಮೇ 4ರ ರಿಸಲ್ಟ್ ಬಳಿಕ ಹೈಡ್ರಾಮಾ?

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮೇ 4ರಂದು ಹೊರಬೀಳಲಿದ್ದು, ಅದರ ನಂತರ ಹೈಕಮಾಂಡ್ ಕರ್ನಾಟಕದ ವಿಚಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ಒಂದು ವೇಳೆ ವರಿಷ್ಠರು ಮಧ್ಯಪ್ರವೇಶಿಸದಿದ್ದರೆ ಡಿಕೆಶಿ ಅವರ ಮುಂದಿನ ನಡೆ ಏನು ಎಂಬುದು ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 28 April: ಇಂದು ಈ ರಾಶಿಯವರು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು – Kannada News | Horoscope Today, April 28: People of this zodiac sign will indirectly earn charity and merit today

ಇಂದಿನ ಪಂಚಾಂಗ

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಗಂಡ, ಕರಣ : ಬವ, ಸೂರ್ಯೋದಯ – 06 – 04 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:31 – 17:05, ಯಮಗಂಡ ಕಾಲ 09:13 – 10:48, ಗುಳಿಕ ಕಾಲ 12:22 – 13:56

ಮೇಷ ರಾಶಿ:

ಸಾಮಾಜಿಕ ಕೆಲಸಕ್ಕೆ ಪ್ರಶಂಸೆ ಸಿಗಲಿದೆ. ಎಲ್ಲ ಬೇಸರಕ್ಕೂ ಅನ್ಯರೇ ಕಾರಣವಾಗಿರಲು ಸಾಧ್ಯವಿಲ್ಲ. ಹಣದ ಅಭಾವವನ್ನು ಹೇಳಿಕೊಳ್ಳಲಾರಿರಿ. ನಿಮ್ಮನ್ನು ಯಾರಾದರೂ ಬಂಧುಗಳು ಮಾತನಾಡಸಲು ಬರಬಹುದು. ಎಲ್ಲರೂ ನಾನಾ ಪ್ರಶ್ನೆಗಳನ್ನು ಕೇಳುವರು. ಇಂದು ನೀವು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು. ಸೌಂದರ್ಯ ಇಂದು ಪ್ರಜ್ಞೆ ಹೆಚ್ಚು. ಹೂಡಿಕೆಯಲ್ಲಿ ನಿಮಗೆ ನಷ್ಟವಾಗಲಿದೆ. ಹೊಸ ವಸ್ತುಗಳನ್ನು ಖರೀದಸಲು ಹೋಗಿ ಸಮಯ ವ್ಯರ್ಥವಾಗುವುದು.‌

ವೃಷಭ ರಾಶಿ:

ನಿಮ್ಮ ಬುದ್ಧಿವಂತಿಕೆ ಹಾಗೂ ಪ್ರಬುದ್ಧತೆಯ ಕಾರಣಕ್ಕೆ ಹಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತೀರಿ. ವ್ಯಥೆಗಳನ್ನು ಕಳೆಯಲು ಹೊಸ ಮಾರ್ಗವನ್ನು ಅನ್ವೇಷಿಸುವಿರಿ. ನಷ್ಟದ ಪ್ರಮಾಣಗಳು ಅಧಿಕವಾಗಬಹುದು. ಉದ್ಯಮದಲ್ಲಿ ಹಿನ್ನಡೆ ಇರಲಿದೆ. ಮರೆವಿನಿಂದ ನಿಮ್ಮ ವಸ್ತುಗಳು ಕಷ್ಟವಾಗಬಹುದು. ನಿಮ್ಮನ್ನು ಅರ್ಥಮಾಡಿಕೊಳ್ಳಲು ಸ್ನೇಹಿತರಿಗೆ ಕಷ್ಟವಾದೀತು. ನಿಮಗೆ ನಿಮ್ಮ ಸ್ವಭಾವವು ಬದಲಾಗಬೇಕಾದಂತೆ ಅನ್ನಿಸುವುದು.

ಮಿಥುನ ರಾಶಿ:

ತಾನು ಮಾಡಿದ್ದೇ ಸರಿ ಎಂಬ ಹುಂಬುತನ ಇರಲಿದೆ. ಸ್ವಂತ ವಿಮರ್ಶೆ ಮಾಡಿಕೊಂಡು, ಅಂತಿಮ ನಿರ್ಧಾರಕ್ಕೆ ಬನ್ನಿ. ತಪ್ಪುಗಳನ್ನು ತಿದ್ದಿಕೊಂಡು ಒಳ್ಳೆಯವರಾಗುವಿರಿ. ನಿಮ್ಮನ್ನು ನೀವೇ ಬೈದುಕೊಳ್ಳುವ ಸ್ಥಿತಿ ಬರಬಹುದು. ಅದನ್ನು ಕೂಡಲೇ ಪ್ರಕಟಿಸದೇ ನಿಯಂತ್ರಿಸಲು ಪ್ರಯತ್ನಿಸಿ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಹೆಚ್ಚಾಗುವುದು. ನಾನಾ ಪ್ರಕಾರದ ಖರ್ಚುಗಳಿಂದ ಇಂದಿನ ದಿನದ ಸಮಯವು ದುಬಾರಿ ಎನಿಸಬಹುದು. ನಿಮ್ಮ ಲಾಭಕ್ಕೆ ಪೂರಕವಾದ ಅವಕಾಶಗಳು ಸಿಗುತ್ತವೆ.

ಕರ್ಕಾಟಕ ರಾಶಿ:

ಯಾವುದಾದರೂ ಮುಖ್ಯ ದಾಖಲೆಯನ್ನು ಎಲ್ಲಿಯೋ ಎತ್ತಿಟ್ಟು, ಅದಕ್ಕಾಗಿ ವಿಪರೀತ ಹುಡುಕುವಂಥ ಸನ್ನಿವೇಶ ಸೃಷ್ಟಿಯಾಗುತ್ತದೆ. ನಿಮಗೆ ನಿಮ್ಮದೇ ಸರಿ ಎನಿಸುವುದು ಸಹಜ. ವಿದ್ಯುತ್ ಉಪಕರಣವನ್ನು ಹೆಚ್ಚು ಬಳಸುವಿರಿ. ವಾಹನವನ್ನು ಖರೀದಿಸುವ ಯೋಜನೆಯನ್ನು ಮುಂದೂಡುವುದು ಉತ್ತಮ. ಅನಾರೋಗ್ಯದ ಕಾರಣದಿಂದ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಆಗುವುದು. ಇಂದಿನ ಆರ್ಥಿಕತೆಯಿಂದ ನಿಮಗೆ ತೃಪ್ತಿ. ಆರ್ಥಿಕ ಚಿಂತೆಗಳು ಸಕಾರಾತ್ಮಕ ಮಾರ್ಗದಲ್ಲಿ ಇರಲಿ.

ಸಿಂಹ ರಾಶಿ:

ಯಾವುದೋ ನಿಶ್ಚಿತ ಮೂಲದಿಂದ ಹಣ ಬರುವ ಖಾತ್ರಿ ಸಿಕ್ಕು, ಹೆಚ್ಚಿನ ಖರ್ಚು ಮಾಡಲು ಮುಂದಾಗುತ್ತೀರಿ. ಎಲ್ಲವನ್ನೂ ನಿಮ್ಮ ನೇರಕ್ಕೇ ಆಗಬೇಕು ಎನ್ನುವುದು ಆಗದು. ನಿಮ್ಮ ಕಾರಣದಿಂದ ಕುಟುಂಬವು ಸಂಕಷ್ಟದಲ್ಲಿ ಸಿಕ್ಕಿಕೊಳ್ಳಬಹುದು. ನಿಮ್ಮ ಉಡುಗೊರೆಯಿಂದ ಸಂತೋಷವಾಗಲಿದೆ. ಬಂಧುಗಳು, ಸ್ನೇಹಿತರು ನಿಮ್ಮ ಸಮಯಪ್ರಜ್ಞೆಯನ್ನು ಮೆಚ್ಚುತ್ತಾರೆ. ಕಣ್ಣು ನೋವು ನಿಮ್ಮನ್ನು ಕಾಡಬಹುದು. ಕೆಲವನ್ನು ಅನುಭವಿಗಳ ಜೊತೆ ಚರ್ಚಿಸಿ ತೀರ್ಮಾನಿಸುವುದು ಒಳ್ಳೆಯದು.

ಕನ್ಯಾ ರಾಶಿ: 

ಕುಟುಂಬದ ಹಿರಿಯರ ಸಲಹೆ ಪಡೆದು, ಮುಖ್ಯ ಕೆಲಸಗಳಲ್ಲಿ ಮುಂದುವರಿಯಿರಿ. ಯಾರ ಜೊತೆಗೂ ವಾಗ್ವಾದ ನಡೆಸದಿರಿ. ಮಕ್ಕಳ ಭವಿಷ್ಯದ ಬಗ್ಗೆ ಅಗತ್ಯ ಕ್ರಮವನ್ನು ಕೈಗೊಳ್ಳುವಿರಿ. ನಿಮ್ಮ ಬಗ್ಗೆ ಇರುವ ಆಕ್ಷೇಪಗಳು ಎಲ್ಲವು ಮುರಿದು ಬೀಳಬಹುದು. ನ್ಯಾಯ ನೀತಿಯ ವಿರುದ್ಧ ನಡೆಯುವುದು ಬೇಡ. ವಿದ್ಯಾಭ್ಯಾಸದಲ್ಲಿ ಅಸ್ಥಿರತೆ ಕಾಡಬಹುದು. ನಿಮ್ಮ ವರ್ತನೆಗಳ ಬಗ್ಗೆ ಆಕ್ಷೇಪ ಬರಬಹುದು.

ತುಲಾ ರಾಶಿ:

ಹಣಕಾಸಿನ ಸಂಗತಿಗಳನ್ನು ಸಂಗಾತಿ ಜತೆಗೆ ಚರ್ಚಿಸಿ, ಅನಂತರ ಮುಂದಿನ ತೀರ್ಮಾನ ಕೈಗೊಳ್ಳಿ. ಅನಿವಾರ್ಯ ಸಂದರ್ಭದಲ್ಲೂ ಸುಳ್ಳು ಹೇಳಬೇಡಿ. ಶತ್ರುಗಳು ನಿಮ್ಮ ನೆಮ್ಮದಿಯನ್ನು ಹಾಳುಮಾಡಬಹುದು. ಮಕ್ಕಳನ್ನು ನೋಡಬೇಕೆನಿಸುವುದು. ಎಲ್ಲವನ್ನೂ ನೀವು ನಿಶ್ಚಯ ಮಾಡಿಕೊಳ್ಳಲು ಆಗದು. ಆಲಸ್ಯದಿಂದ ಹೊರಬರುವ ಮನಸ್ಸಾಹುವುದು. ಎರಡು ಮನಸ್ಸನ್ನು ಮಾಡಿಕೊಂಡು ಮುಂದುವರಿಯುವುದು ಬೇಡ.

ವೃಶ್ಚಿಕ ರಾಶಿ:

ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಒಂದು ಒಪ್ಪಂದಕ್ಕೆ ಬರುವ ಸಾಧ್ಯತೆ ಇದೆ. ನಿರೀಕ್ಷೆ ಮಾಡಿದಂತೆ ಆದಾಯ ಬರುವುದಿಲ್ಲ. ಆಲಸ್ಯದಿಂದ ಎಲ್ಲ ಕಾರ್ಯದಲ್ಲಿಯೂ ನಿರಾಸಕ್ತಿ ಇರಲಿದೆ. ಉದ್ಯೋಗದ ಹೊಸ ಸ್ಥಳದಲ್ಲಿ ಸ್ನೇಹಿತರಾಗುವರು. ವಿದ್ಯಾಭ್ಯಾಸದ ಹಿನ್ನಡೆಯು ನಿಮಗೆ ಅವಮಾನ ಎನಿಸುವುದು. ದುಃಸ್ವಪ್ನಗಳಿಂದ ನಿಮ್ಮ ಮನಸ್ಸು ವಿಕಾರವಾಗುವುದು. ಉನ್ನತ ವಿದ್ಯಾಭ್ಯಾಸದ ಚಿಂತೆ ಕಾಡಬಹುದು.

ಧನು ರಾಶಿ:

ಹೆಚ್ಚಿನ ಪ್ರತಿಫಲಾಪೇಕ್ಷೆ ಇಲ್ಲದೆ ನೀವು ಈ ಕೆಲಸವನ್ನು ಮಾಡಬೇಕಾಗುತ್ತದೆ. ಪ್ರಾಮಾಣಿಕತೆಯನ್ನು ಬಿಟ್ಟು ವ್ಯವಹಾರ ಮಾಡುವುದು ಬೇಡ. ಯಾವುದೇ ಆಕ್ಷೇಪ ಮಾಡಬೇಡಿ. ನಿಮ್ಮ ವರ್ಚಸ್ಸಿಗೆ ಧಕ್ಕೆ ಆಗಬಹುದು. ಈ ದಿನ ನೀವು ಶಾರೀರಿಕ ಕಾಳಜಿಯನ್ನು ಹೆಚ್ಚು ಮಾಡಬೇಕಾದೀತು. ಉದ್ಯೋಗದಲ್ಲಿ ಒತ್ತಡಗಳು ಇರುವುದುರಿಂದ ಕುಟುಂಬಕ್ಕೆ ಸಮಯವನ್ನು ಕೊಡಲಾಗದು. ಬಂಗಾರದ ಮೇಲೆ ಹೂಡಿಕೆ ಮಾಡುವಿರಿ. ಶಿಸ್ತಿನಿಂದ ನೀವು ವ್ಯವಹಾರವನ್ನು ಇಟ್ಟುಕೊಳ್ಳುವಿರಿ.

ಮಕರ ರಾಶಿ:

ನಿಮ್ಮಿಂದ ಸಾಧ್ಯವಾದಲ್ಲಿ ಅಗತ್ಯ ಇರುವ ಒಬ್ಬರಿಗೆ ಊಟದ ವ್ಯವಸ್ಥೆ ಮಾಡಿ. ಸಂಗಾತಿ ಮಕ್ಕಳ ಮಾತನ್ನು ಸರಿಯಾಗಿ ಕೇಳಿಸಿಕೊಳ್ಳಿ. ವಿದ್ಯಾಭ್ಯಾಸದ ಗಮನವು ಬೇರೆ ಕಡೆಗೆ ಹೋಗಬಹುದು. ಹಣಕಾಸಿನ‌ ವಿಚಾರದಲ್ಲಿ ಸಹೋದರನಿಂದ ಅಪವಾದ ಸಾಧ್ಯತೆ. ಶುಭ ಸುದ್ದಿಯು ನಿಮ್ಮನ್ನು ಪ್ರೋತ್ಸಾಹಿಸಬಹುದು. ಶತ್ರುಗಳ ಕಾಟಗಳು ನಿಮ್ಮ ಉತ್ಸಾಹವನ್ನು ಭಂಗ ಮಾಡಬಹುದು. ದೈವದ ಭೀತಿಯು ನಿಮ್ಮನ್ನು ಕಾಡಬಹುದು. ರಾಜಕಾರಣಿಗಳಿಂದ ನಿಮ್ಮ ಕೆಲಸವು ಪೂರ್ಣ.

ಕುಂಭ ರಾಶಿ:

ಸ್ವಂತ ವ್ಯಾಪಾರ, ವ್ಯವಹಾರ ಮಾಡುವವರಿಗೆ ಅಲ್ಪ ಹಿನ್ನಡೆ. ಪ್ರಯಾಣದಿಂದ ಆಗಬೇಕಾದ ಕೆಲಸವಾದರೂ ಆಯಾಸ ಕಾಡಬಹುದು. ಕಾರ್ಯ ಕ್ಷೇತ್ರದಲ್ಲಿ ಒತ್ತಡವಿರುವ ಕಾರಣ ಮನಸ್ಸಿಗೆ ಸಿಗಬೇಕಾದ ಶಾಂತಿಯ ಕೊರೆತೆಯೂ ಇರಲಿದೆ. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು. ಉದ್ಯಮದಲ್ಲಿ ಪ್ರಗತಿಯನ್ನು ಕಂಡು ಖುಷಿಯಾಗುವುದು. ನಿಮಗೆ ಯಾರಿಂದಲೋ ರಕ್ಷಣೆ ಇದೆ ಎನ್ನಿಸಬಹುದು. ಮನೆಯಲ್ಲೂ ತಾಳ್ಮೆಯನ್ನು ಇಟ್ಟುಕೊಳ್ಳಿ. ನಂಬಿಕೆಯು ಹುಸಿಯಾಗುವುದು.

ಮೀನ ರಾಶಿ:

ಮಕ್ಕಳ ವ್ಯವಹಾರಕ್ಕೆ ಹಣಕಾಸು ನೆರವು ನೀಡಲು ಪ್ರಯತ್ನಿಸುತ್ತೀರಿ. ರಾಜಕೀಯದ ಪ್ರೇರಣೆಪಡೆಯುವ ಸಾಧ್ಯತೆ ಇದೆ. ಹಳೆಯ ವಾಹನಗಳ ಮಾರಾಟ ಮಾಡುವ ಬಗ್ಗೆ ಆಲೋಚನೆ ಬರುತ್ತದೆ. ಈ ಹಿಂದೆ ಷೇರು ಪೇಟೆಯಲ್ಲಿ ಮಾಡಿದ್ದ ಹೂಡಿಕೆಯನ್ನು ಹಿಂಪಡೆಯಲಿದ್ದೀರಿ. ಹೇಗಾದರೂ ಮಾಡಿ ಭಯವನ್ನು ದೂರ ಮಾಡಿಕೊಳ್ಳುವಿರಿ. ತೆಗಳಿಕೆಯನ್ನು ಛಲವಾಗಿ ತೆಗೆದುಕೊಳ್ಳುವಿರಿ. ಯಾರ ಮೇಲೂ ಅವಮಾನ ಬೇಡ.

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಬಿಸಿಲ ತಾಪದಿಂದ ಬಚಾವಾಗಲು ನೀರಿನ ಟ್ಯಾಂಕನ್ನೇ ಸ್ವಿಮ್ಮಿಂಗ್ ಪೂಲ್ ಮಾಡಿಕೊಂಡ ಕೋತಿಗಳು – Kannada News | Monkeys playing in water tank to beat summer heat watch viral video

ನವದೆಹಲಿ, ಏಪ್ರಿಲ್ 27: ದೇಶಾದ್ಯಂತ ಈ ಸಮಯದಲ್ಲಿ ಬಿಸಿಲಿನ ತಾಪವು ಉತ್ತುಂಗವನ್ನು ತಲುಪಿದೆ. ಮಾನವರು ಮಾತ್ರವಲ್ಲದೆ ಪ್ರಾಣಿಗಳು ಸಹ ಈ ಸುಡುವ ಸೂರ್ಯನಿಂದ ತೀವ್ರವಾಗಿ ತೊಂದರೆಗೊಳಗಾಗುತ್ತಿವೆ. ಬಿಸಿಲಿನಿಂದ ಪಾರಾಗಲು ವಿಭಿನ್ನ ವಿಧಾನಗಳನ್ನು ಅನುಸರಿಸುತ್ತಿವೆ. ಇತ್ತೀಚೆಗೆ, ಅಂತಹ ಒಂದು ಆಸಕ್ತಿದಾಯಕ ಮತ್ತು ಆಶ್ಚರ್ಯಕರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಮನೆಯ ಟೆರೇಸಿನಲ್ಲಿ ಇಟ್ಟಿದ್ದ ನೀರಿನ ಟ್ಯಾಂಕ್​ನಲ್ಲಿ ಮಂಗಗಳ ಹಿಂಡೊಂದು ಮುಳುಗೇಳುತ್ತಾ ನೀರಾಟವಾಡುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ.

ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ವೇದಿಕೆ ‘X’ ನಲ್ಲಿ @Surendr0032083 ಎಂಬ ಖಾತೆಯಿಂದ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮನೆಯ ಟೆರೇಸ್ ಮೇಲೆ ಇರಿಸಲಾಗಿರುವ ನೀರಿನ ಟ್ಯಾಂಕ್ ಸುತ್ತಲೂ ಕೆಲವು ಮಂಗಗಳು ಕುಳಿತಿರುವುದನ್ನು ಕಾಣಬಹುದು. ವಿಶೇಷವೆಂದರೆ ಈ ಮಂಗಗಳು ಈ ಟ್ಯಾಂಕ್ ಅನ್ನು ಈಜುಕೊಳದಂತೆ ಬಳಸುತ್ತಿವೆ. ಕೆಲವು ಮಂಗಗಳು ಟ್ಯಾಂಕ್ ಒಳಗೆ ಹಾರಿ ತಂಪಾದ ನೀರಿನಲ್ಲಿ ಮುಳುಗಿ ಮೈ ತಂಪಾಗಿಸಿಕೊಳ್ಳುತ್ತಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪುಣೆ ನಿಲ್ದಾಣಕ್ಕೆ ಬರುವಾಗ ಹಳಿ ತಪ್ಪಿದ ಮುಂಬೈ-ಸೋಲಾಪುರ ವಂದೇ ಭಾರತ್ ರೈಲು – Kannada News | Mumbai Solapur Vande Bharat Express train derails while entering Pune station

ಪುಣೆ, ಏಪ್ರಿಲ್ 27: ಮಹಾರಾಷ್ಟ್ರದ ಪುಣೆ ರೈಲು ನಿಲ್ದಾಣವನ್ನು ಪ್ರವೇಶಿಸುವಾಗ ವಂದೇ ಭಾರತ್ ಎಕ್ಸ್‌ಪ್ರೆಸ್‌ನ (Vande Bharat Express) ಒಂದು ಬೋಗಿ ಹಳಿ ತಪ್ಪಿತು. ಇಂದು ಸಂಜೆ 7.30ರ ಸುಮಾರಿಗೆ ನಿಲ್ದಾಣ ಪ್ರವೇಶಿಸುವಾಗ ರೈಲಿನ ನಾಲ್ಕನೇ ಬೋಗಿಯ ಒಂದು ಟ್ರಾಲಿ ಡೈಮಂಡ್ ಕ್ರಾಸಿಂಗ್‌ನಲ್ಲಿ ಹಳಿ ತಪ್ಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯಗಳಾಗಿಲ್ಲ. ರೈಲು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಹೊರಟು ಮಹಾರಾಷ್ಟ್ರದ ಸೋಲಾಪುರಕ್ಕೆ ಹೋಗಬೇಕಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version