SSLC ಫಲಿತಾಂಶದಲ್ಲಿ ಮತ್ತೊಂದು ಎಡವಟ್ಟು: ಕೇವಲ 12 ಅಂಕ ನಮೂದು; ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ – Kannada News | Koppal SSLC Mark Entry Error: Student Attempts Suicide After Only 12 Marks Recorded

SSLC ಮೌಲ್ಯಮಾಪಕರಿಂದ ಎಡವಟ್ಟುImage Credit source: tv9 kannada

ಕೊಪ್ಪಳ, ಏಪ್ರಿಲ್​​ 27: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್​​​ಎಸ್​ಎಲ್​​ಸಿ (SSLC) ಪರೀಕ್ಷೆಯ ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ತೇರ್ಗಡೆಯಲ್ಲಿ ದಾಖಲೆಯ ರಿಸಲ್ಟ್​ ಬಂದಿದೆ. ಆದರೆ ಮೌಲ್ಯಮಾಪಕರಿಂದ ಉಂಟಾಗಿರುವಂತಹ ಕೆಲ ಎಡವಟ್ಟುಗಳು ದಿನೇದಿನೆ ಬೆಳಕಿಗೆ ಬರುತ್ತಿವೆ. ಇದೀಗ ಜಿಲ್ಲೆಯಲ್ಲೂ ಶಿಕ್ಷಣ ಇಲಾಖೆಯ ಎಡವಟ್ಟು ಒಂದು ಬೆಳಕಿಗೆ ಬಂದಿದ್ದು, ಅದರಿಂದ ಆಘಾತಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.

ಕೊಪ್ಪಳ ತಾಲೂಕಿನ ಕಾತರಕಿ ಗುಡ್ಲಾನೂರ ಗ್ರಾಮದ ನಿವಾಸಿ ಸಂಜನಾ ಮಡಿವಾಳರ ಎಸ್​​​ಎಸ್​ಎಲ್​​ಸಿ ಪರೀಕ್ಷೆ ಬರೆದಿದ್ದಳು. ಆದರೆ ಫಲಿತಾಂಶದಂದು ಆಘಾತವೊಂದು ಎದುರಾಗಿತ್ತು. ಎಲ್ಲಾ ವಿಷಯಗಳಲ್ಲಿ ಉತ್ತಮ ಅಂಕ ಪಡೆದುಕೊಂಡಿದ್ದ ಸಂಜನಾ, ಕನ್ನಡ ವಿಷಯದಲ್ಲಿ ಅಂಕಪಟ್ಟಿಯಲ್ಲಿ ಕೇವಲ 12 ಅಂಕಗಳು ಎಂದು ನಮೂದಾಗಿತ್ತು. ಆದರೆ ಉತ್ತರ ಪತ್ರಿಕೆಯ ಫೋಟೋ ಪ್ರತಿ ತರೆಸಿಕೊಂಡು ಪರಿಶೀಲನೆ ಮಾಡಿದಾಗ 71 ಅಂಕ ಪಡೆದುಕೊಂಡಿರುವುದು ಗೊತ್ತಾಗಿದ್ದು, ಸದ್ಯ ಸಂಜನಾ ನಿಟ್ಟುಸಿರು ಬಿಟ್ಟಿದ್ದಾಳೆ.

ಆತ್ಮಹತ್ಯೆಗೆ ಯತ್ನ

ಹೆಚ್ಚು ಅಂಕ ನಿರೀಕ್ಷಿಸಿದ್ದ ಸಂಜನಾ, ಅಂಕಪಟ್ಟಿಯಲ್ಲಿ ಫೇಲ್ ಆಗಿರುವುದನ್ನು ಕಂಡು ತೀವ್ರ ಮಾನಸಿಕ ಆಘಾತಕ್ಕೊಳಗಾಗಿದ್ದಳು. ಇದೇ ಕಾರಣಕ್ಕೆ ದುಡುಕಿನ ನಿರ್ಧಾರಕ್ಕೆ ಮುಂದಾಗಿದ್ದಳು. ಶಿಕ್ಷಣ ಇಲಾಖೆಯ ಎಡವಟ್ಟಿನಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ, ಪೋಷಕರ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದ್ದು, ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಇದನ್ನೂ ಓದಿ: SSLC ಫಲಿತಾಂಶದ ವೇಳೆ ಮೌಲ್ಯಮಾಪಕರಿಂದ ಭಾರಿ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ!

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿ ಸಂಜನಾ, ಕಷ್ಟಪಟ್ಟು ಓದಿ ಉತ್ತಮ ಅಂಕ ಗಳಿಸಿದ್ದರೂ, ಇಲಾಖೆಯವರ ನಿರ್ಲಕ್ಷ್ಯದಿಂದಾಗಿ ಸ್ನೇಹಿತರ ಮುಂದೆ ಮತ್ತು ಹೆತ್ತವರಿಗೆ ಅವಮಾನ ಅನುಭವಿಸಬೇಕಾಯಿತು ಎಂದು ಅಳಲು ತೋಡಿಕೊಂಡಿದ್ದಾಳೆ.

ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಸಂಜನಾ ತಂದೆ

ಇನ್ನು ಈ ಬಗ್ಗೆ ಸಂಜನಾ ತಂದೆ ಮಂಜುನಾಥ್​ ಮಡಿವಾಳರ ಮಾತನಾಡಿದ್ದು, ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ನನ್ನ ಮಗಳೊಂದಿಗೆ ಆದ ಘಟನೆ ಬೇರೆ ಮಕ್ಕಳೊಂದಿಗೆ ಆಗಬಾರದು. ಶಿಕ್ಷಣ ಇಲಾಖೆ ಎಡವಟ್ಟಿನಿಂದ ನನ್ನ ಮಗಳನ್ನು ಕಳೆದುಕೊಳ್ಳುತ್ತಿದ್ದೆ. ಹೀಗಾಗಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಮಂಜುನಾಥ್ ಅವರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನೈಜ ಕ್ರೈಂಗೆ ಎಫ್‌ಐಆರ್ ಮಾಡಲ್ಲ, 2 ವರ್ಷಗಳ ಹಳೆಯ ಹಸು ನಾಪತ್ತೆ ಕೇಸ್‌ಗೆ ತರಾತುರಿ ಮಾಡ್ತೀರಾ? ಪೊಲೀಸರಿಗೆ ಹೈಕೋರ್ಟ್ ತರಾಟೆ – Kannada News | High Court reprimands police for registering FIR for a 2 year old missing cow case while serious crimes are

ಬೆಂಗಳೂರು, ಏ.27: “ನೈಜ ಅಪರಾಧಗಳು ನಡೆದಾಗ ಎಫ್‌ಐಆರ್ ದಾಖಲಿಸಲು ಜನ ನೂರಾರು ಬಾರಿ ಅಲೆಯಬೇಕು. ಆದರೆ ಎರಡು ವರ್ಷಗಳ ಹಳೆಯ ಹಸು ನಾಪತ್ತೆ ಪ್ರಕರಣಕ್ಕೆ ಈಗ ಎಫ್‌ಐಆರ್ ದಾಖಲಿಸುತ್ತೀರಿ,” ಎಂದು ಕರ್ನಾಟಕ ಹೈಕೋರ್ಟ್ ಪೊಲೀಸರ ವಿರುದ್ಧ ಚಾಟಿ ಬೀಸಿದೆ. ಚನ್ನಪಟ್ಟಣ ತಾಲೂಕಿನ ಬೇವೂರು ನಿವಾಸಿ ಪ್ರಸಾದ್ ಎಂಬುವರು 2024ರಲ್ಲಿ ತಮ್ಮ ಹೊಲದಲ್ಲಿ ಕಟ್ಟಿದ್ದ ಎರಡು ಹಸುಗಳು ನಾಪತ್ತೆಯಾಗಿದ್ದವು ಎಂದು ಈ ವರ್ಷದ (2026) ಮಾರ್ಚ್‌ನಲ್ಲಿ ದೂರು ನೀಡಿದ್ದರು. ಮಂಗಳಮ್ಮ, ಚೇತನ್, ಚಂದನ್ ಮತ್ತು ಸೌಮ್ಯಾ ಎಂಬುವವರು ಈ ಹಸುಗಳನ್ನು ಕದ್ದು ಮಾರಾಟ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದರು. ಇದರ ಆಧಾರದ ಮೇಲೆ ಪೊಲೀಸರು ನಾಲ್ವರ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದರು.

ತಮ್ಮ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಆರೋಪಿ ಸ್ಥಾನದಲ್ಲಿದ್ದ ಕುಟುಂಬದ ನಾಲ್ವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಪೊಲೀಸರಿಗೆ ಸರಿಯಾಗಿ ಕ್ಲಾಸ್​​​ ತೆಗೆದುಕೊಂಡಿದೆ. 2024ರಲ್ಲಿ ಹಸುಗಳು ಕಾಣೆಯಾಗಿದ್ದಕ್ಕೆ 2026ರಲ್ಲಿ ಪ್ರಕರಣ ದಾಖಲಿಸಿರುವುದು ಎಷ್ಟು ಸರಿ? ಇಷ್ಟು ದಿನ ಏನು ಮಾಡುತ್ತಿದ್ದಿರಿ? ಎಂದು ಗದರಿದ್ದಾರೆ.

ಇದನ್ನೂ ಓದಿ: ‘ಎಂಥ ಮನುಷ್ಯರು ನೀವು?’: ಮೆಟ್ರೋದಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದ ಆರೋಪಿಗೆ ಹೈಕೋರ್ಟ್ ಛೀಮಾರಿ, ಅರ್ಜಿ ವಜಾ

ಗಂಭೀರ ಅಪರಾಧಗಳು ನಡೆದಾಗ ಎಫ್‌ಐಆರ್ ಮಾಡಲು ಹಿಂದೇಟು ಹಾಕುವ ಪೊಲೀಸರು, ಇಂತಹ ಪ್ರಕರಣಗಳಲ್ಲಿ ತಕ್ಷಣ ಕ್ರೈಂ ದಾಖಲಿಸುವುದು ಎಷ್ಟು ನ್ಯಾಯೋಚಿತ ಎಂದು ನ್ಯಾಯಪೀಠ ಪ್ರಶ್ನಿಸಿದೆ. ಪೊಲೀಸರ ಈ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯವು, ಮಂಗಳಮ್ಮ ಮತ್ತು ಕುಟುಂಬದ ಇತರ ಮೂವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುದ್ದಿಗೋಷ್ಠಿಯಲ್ಲಿ ‘ಕೆಡಿ’ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ ಪರ ನಿಂತ ಕಿಚ್ಚ ಸುದೀಪ್ – Kannada News | Kichcha Sudeep comes in support of Reeshma Nanaiah in KD Movie press meet

ಬಿಡುಗಡೆಗೆ ಸಜ್ಜಾಗಿರುವ ‘ಕೆಡಿ’ ಸಿನಿಮಾದ (KD Movie) ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಇಂದು (ಏಪ್ರಿಲ್ 27) ಬೆಂಗಳೂರಿನಲ್ಲಿ ಧ್ರುವ ಸರ್ಜಾ, ಕಿಚ್ಚ ಸುದೀಪ್, ಜೋಗಿ ಪ್ರೇಮ್ ಹಾಗೂ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ರೀಷ್ಮಾ ಅವರಿಗೆ ಯಾರೂ ಕೂಡ ಪ್ರಶ್ನೆ ಕೇಳಿಲ್ಲ ಎಂಬುದನ್ನು ಸುದೀಪ್ (Kichcha Sudeep) ಗಮನಿಸಿದರು. ‘ನಮ್ಮ ಮಧ್ಯೆ ಒಂದು ಹುಡುಗಿ ಕೂತಿದೆ. ಇಷ್ಟು ಜನರಿಂದ ಅವರಿಗೆ ಒಂದು ಪ್ರಶ್ನೆ ಕೂಡ ಇಲ್ಲವಾ? ಅವರು ಕೂಡ ಕಲಾವಿದೆ. ಈ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ಅವರಿಗೆ ಯಾರೂ ಪ್ರಶ್ನೆ ಕೇಳದೇ ಇರುವುದು ನ್ಯಾಯವಲ್ಲ. ಅವರಿಗೆ ನಾನು ಪ್ರಶ್ನೆ ಕೇಳುತ್ತೇನೆ’ ಎಂದು ಕಿಚ್ಚ ಸುದೀಪ್ ಅವರು ನಟಿಯ ಬೆಂಬಲಕ್ಕೆ ನಿಂತರು. ಅವರ ಈ ಬೆಂಬಲಕ್ಕೆ ರೀಷ್ಮಾ ನಾಣಯ್ಯ (Reeshma Nanaiah) ಅವರು ಧನ್ಯವಾದ ತಿಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

DC vs RCB: ಅತಿ ಕಡಿಮೆ ಮೊತ್ತ; ಐಪಿಎಲ್‌ನಲ್ಲಿ ಮುಜುಗರದ ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್ – Kannada News | Delhi Capitals’ Humiliating IPL Record: Lowest Powerplay Score Against RCB

ಕೇವಲ ಎರಡೇ ಎರಡು ದಿನಗಳ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಯಾವ ಮೈದಾನದಲ್ಲಿ ರನ್​ಗಳ ಮಳೆ ಹರಿಸಿ ಐಪಿಎಲ್‌ (IPL) ಇತಿಹಾಸದಲ್ಲಿ ಅತ್ಯಧಿಕ ಮೊತ್ತ ಕಲೆಹಾಕಿದ್ದ ದಾಖಲೆ ಬರೆದಿತ್ತೋ. ಇದೀಗ ಅದೇ ಮೈದಾನದಲ್ಲಿ ಅತ್ಯಂತ ಹೀನಾಯ ದಾಖಲೆಯೊಂದನ್ನು ಬರೆದಿದೆ. ಏಪ್ರಿಲ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಇದೇ ಅರುಣ್ ಜೇಟ್ಲಿ ಮೈದಾನದಲ್ಲಿ ಬರೋಬ್ಬರಿ 264 ರನ್ ಬಾರಿಸಿತ್ತು. ಇದು ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ತಂಡ ಕಲೆಹಾಕಿದ್ದ ಅತ್ಯಧಿಕ ಮೊತ್ತವಾಗಿತ್ತು. ಹೀಗಾಗಿ ಆರ್​ಸಿಬಿ (RCB) ವಿರುದ್ಧದ ಇಂದಿನ ಪಂದ್ಯದಲ್ಲೂ ಅದೇ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಆರ್​ಸಿಬಿ ವೇಗಿಗಳ ಸಾಂಘಿಕ ದಾಳಿಗೆ ಡೆಲ್ಲಿ ಬ್ಯಾಟರ್​ಗಳ ಬಳಿ ಉತ್ತರವಿಲ್ಲದಂತ್ತಾಯಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ 3 ಓವರ್​ಗಳಲ್ಲಿಯೇ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿತು. ಆ ಸಮಯಕ್ಕೆ ತಂಡ ಕಲೆಹಾಕಿದ್ದು, ಕೇವಲ 7 ರನ್. ಈ 7 ರನ್​ಗಳಲ್ಲಿ ಸ್ಟಬ್ಸ್ ಬಾರಿಸಿದ ಬೌಂಡರಿಯೂ ಸೇರಿತ್ತು. ಅಂದರೆ ಸ್ಟಬ್ಸ್ 5 ರನ್ ಕಲೆಹಾಕಿದನ್ನು ಬಿಟ್ಟರೆ, ಉಳಿದ 4 ಬ್ಯಾಟ್ಸ್‌ಮನ್​ಗಳಲ್ಲಿ ಇಬ್ಬರಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

13 ರನ್​ಗೆ 6 ವಿಕೆಟ್

ಐಪಿಎಲ್‌ನಲ್ಲಿ ಚೊಚ್ಚಲ ಪಂದ್ಯವನ್ನಾಡಿದ ಸಾಹಿಲ್ ಪರಾಖ್ ಭುವಿ ಎಸೆತದಲ್ಲಿ ಖಾತೆ ತೆರೆಯದೆ ಕ್ಲೀನ್ ಬೌಲ್ಡ್ ಆದರೆ, ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಕೇವಲ 1 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಸಮೀರ್ ರಿಜ್ವಿ ಕೂಡ ಖಾತೆ ತೆರೆಯದೆ ಔಟಾದರು. ಸ್ಟಬ್ಸ್ 5 ರನ್ ಬಾರಿಸಿ ಔಟಾದರೆ, ನಿತೀಶ್ ರಾಣಾ ಅವರ ಇನ್ನಿಂಗ್ಸ್ ಕೂಡ 1 ರನ್​ಗಳಿಗೆ ಅಂತ್ಯವಾಯಿತು. ನಾಯಕ ಅಕ್ಷರ್ ಪಟೇಲ್​ಗೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅಂದರೆ 6 ಬ್ಯಾಟ್ಸ್‌ಮನ್​ಗಳಲ್ಲಿ ಮೂವರಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಇದರ ಪರಿಣಾಮವಾಗಿ ಡೆಲ್ಲಿ ಪವರ್‌ಪ್ಲೇನಲ್ಲಿ ಕೇವಲ 13 ರನ್ ಬಾರಿಸಿ 6 ವಿಕೆಟ್ ಕಳೆದುಕೊಂಡಿತು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ನಾಚಿಕೆಗೇಡಿನ ದಾಖಲೆ ಬರೆಯಿತು.

DC vs RCB IPL 2026 Live Score: ಆರ್​ಸಿಬಿ ಮಾರಕ ದಾಳಿ; 75 ರನ್​ಗೆ ಡೆಲ್ಲಿ ಆಲೌಟ್

ನಾಚಿಕೆಗೇಡಿನ ದಾಖಲೆ ಬರೆದ ಡೆಲ್ಲಿ

ವಾಸ್ತವವಾಗಿ ಪವರ್‌ಪ್ಲೇನಲ್ಲಿ ಅತ್ಯಂತ ಕಡಿಮೆ ಸ್ಕೋರ್ ದಾಖಲಿಸಿದ ತಂಡವೆಂಬ ಬೇಡದ ದಾಖಲೆ ಡೆಲ್ಲಿ ಪಾಲಾಗಿದೆ. ಪವರ್‌ಪ್ಲೇನಲ್ಲಿ ಕೇವಲ 13 ರನ್ ಗಳಿಸಿದ ಡೆಲ್ಲಿ ಆರು ವಿಕೆಟ್‌ಗಳನ್ನು ಕಳೆದುಕೊಂಡಿತು. ತಂಡವೊಂದು ಇಷ್ಟು ಕಡಿಮೆ ರನ್ ಗಳಿಸಿ ಪವರ್‌ಪ್ಲೇನಲ್ಲಿ ಐದು ವಿಕೆಟ್‌ಗಳಿಗಿಂತ ಹೆಚ್ಚು ಕಳೆದುಕೊಂಡಿರುವುದು ಇದೇ ಮೊದಲು. ಇದಕ್ಕೂ ಮೊದಲು ಕೊಚ್ಚಿ ಟಸ್ಕರ್ಸ್​ ತಂಡ 2011 ರ ಐಪಿಎಲ್‌ನಲ್ಲಿ ಡೆಕ್ಕನ್ ಚಾರ್ಜಸ್ ವಿರುದ್ಧ 29 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡಿದ್ದು, ಇದುವರೆಗಿನ ದಾಖಲೆಯಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೆಚ್ಚು ಯೋಚನೆ ಮಾಡುವವರಿಗೆ ಬಿಪಿ ಬೇಗ ಬರುತ್ತಾ? ಈ ಸಮಸ್ಯೆಯನ್ನು ತಡೆಗಟ್ಟುವುದು ಹೇಗೆ? – Kannada News | Does Overthinking Increase Blood Pressure? Anxiety & Hypertension Link

ಇಂದಿನ ವೇಗದ ಜೀವನಶೈಲಿಯಲ್ಲಿ ಹೆಚ್ಚು ಯೋಚನೆ (ಓವರ್‌ಥಿಂಕಿಂಗ್) ಮತ್ತು ಮಾನಸಿಕ ಒತ್ತಡ ಸಾಮಾನ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಸಣ್ಣ ವಿಷಯಗಳನ್ನೂ ಹೆಚ್ಚು ಆಲೋಚಿಸುವ ಅಭ್ಯಾಸದಿಂದ ಮನಸ್ಸಿನ ಮೇಲೆ ಒತ್ತಡ ಹೆಚ್ಚುತ್ತದೆ. ತಜ್ಞರ ಪ್ರಕಾರ, ಈ ಅಭ್ಯಾಸವು ಕೇವಲ ಮಾನಸಿಕ ಆರೋಗ್ಯಕ್ಕಷ್ಟೇ ಅಲ್ಲ, ದೈಹಿಕ ಆರೋಗ್ಯಕ್ಕೂ ಪರಿಣಾಮ ಬೀರುತ್ತದೆ ಎನ್ನುತ್ತಾರೆ. ಹೌದು, ಇದು ಕೆಲವೊಮ್ಮೆ ಅರಿವಿಗೆ ಬಾರದಿರಬಹುದು. ಹಾಗಾದರೆ ಹೆಚ್ಚು ಯೋಚನೆ ಮಾಡುವುದಕ್ಕೂ ಬಿಪಿ (BP) ಬರುವುದಕ್ಕೂ ಸಂಬಂಧವಿದೆಯೇ ಓವರ್‌ಥಿಂಕ್ ಮಾಡುವುದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ಹೆಚ್ಚು ಯೋಚನೆ ಮತ್ತು ರಕ್ತದೊತ್ತಡಕ್ಕಿರುವ ಸಂಬಂಧ;

ವೈದ್ಯರ ಪ್ರಕಾರ, ವ್ಯಕ್ತಿ ನಿರಂತರವಾಗಿ ಒತ್ತಡ ಮತ್ತು ಚಿಂತೆಗೊಳಗಾದಾಗ ದೇಹದಲ್ಲಿ ಕೆಲವು ಹಾರ್ಮೋನ್‌ಗಳು ಸಕ್ರಿಯವಾಗುತ್ತವೆ. ಇವು ಹೃದಯದ ಬಡಿತವನ್ನು ಹೆಚ್ಚಿಸಿ ರಕ್ತದ ಸಂಚಾರವನ್ನು ಪ್ರಭಾವಿತಗೊಳಿಸುತ್ತದೆ. ಇದರ ಪರಿಣಾಮವಾಗಿ ರಕ್ತದ ಒತ್ತಡ (ಬ್ಲಡ್ ಪ್ರೆಶರ್) ಹೆಚ್ಚುವ ಸಾಧ್ಯತೆ ಇರುತ್ತದೆ. ಈ ಸ್ಥಿತಿ ದೀರ್ಘಕಾಲ ಮುಂದುವರಿದರೆ ಹೃದಯದ ಆರೋಗ್ಯಕ್ಕೂ ಅಪಾಯ ಉಂಟುಮಾಡಬಹುದು. ಆದರೆ ಪ್ರತಿ ವ್ಯಕ್ತಿಯ ದೇಹ ವಿಭಿನ್ನವಾಗಿರುವುದರಿಂದ ಪರಿಣಾಮವೂ ವಿಭಿನ್ನವಾಗಿರುತ್ತದೆ. ಕೆಲವರಿಗೆ ತಕ್ಷಣವೇ ಪರಿಣಾಮ ಕಾಣಿಸದಿದ್ದರೂ, ದೀರ್ಘಕಾಲದ ಒತ್ತಡದಿಂದ ಸಮಸ್ಯೆ ಗಂಭೀರವಾಗಬಹುದು. ಆದ್ದರಿಂದ ಮಾನಸಿಕ ಒತ್ತಡವನ್ನು ನಿಯಂತ್ರಿಸುವುದು ಅತ್ಯಂತ ಅಗತ್ಯ.

ಇದನ್ನೂ ಓದಿ: ಬೇಸಿಗೆಯಲ್ಲಿ ಬಿಪಿ ಸಾಮಾನ್ಯವಾಗಿದ್ದರೂ ಹೃದಯಕ್ಕೆ ಅಪಾಯ: ಮಾಸ್ಕ್ಡ್ ಹೈಪರ್ಟೆನ್ಷನ್ ಬಗ್ಗೆ ವೈದ್ಯರ ಎಚ್ಚರಿಕೆ

ಹೆಚ್ಚು ಯೋಚನೆ ಮಾಡುವುದನ್ನು ಹೇಗೆ ನಿಯಂತ್ರಿಸಬೇಕು?

ತಜ್ಞರು ಸಲಹೆ ನೀಡುವಂತೆ, ದಿನಚರಿಯಲ್ಲಿ ಕೆಲವು ಆರೋಗ್ಯಕರ ಬದಲಾವಣೆಗಳನ್ನು ಮಾಡುವುದು ಮುಖ್ಯ. ಧ್ಯಾನ, ಯೋಗ ಮತ್ತು ವ್ಯಾಯಾಮ ಮನಸ್ಸನ್ನು ಶಾಂತಗೊಳಿಸಲು ಸಹಾಯಕ. ದಿನಕ್ಕೆ ಕನಿಷ್ಠ 30 ನಿಮಿಷ ವ್ಯಾಯಾಮ ಮಾಡುವುದು ಒತ್ತಡವನ್ನು ಕಡಿಮೆ ಮಾಡುತ್ತದೆ. ಅದರ ಜೊತೆಗೆ ಸರಿಯಾಗಿ ನಿದ್ರೆ ಮಾಡುವುದು ಬಹಳ ಮುಖ್ಯ. ನಿದ್ರೆ ಕೊರತೆಯಿಂದ ದೇಹ ಮತ್ತು ಮನಸ್ಸು ಎರಡೂ ದಣಿವಿಗೆ ಒಳಗಾಗುತ್ತವೆ. ನಕಾರಾತ್ಮಕ ಚಿಂತನೆಗಳಿಂದ ದೂರವಿದ್ದು, ಹಿತಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಉತ್ತಮ. ಅದರೊಂದಿಗೆ, ಮಾನಸಿಕ ಆರೋಗ್ಯವನ್ನು ನಿರ್ಲಕ್ಷಿಸುವುದು ದೊಡ್ಡ ತಪ್ಪು. ಹೆಚ್ಚು ಯೋಚನೆ ದೇಹದ ಮೇಲೂ ಒತ್ತಡ ತರುತ್ತದೆ. ಆದ್ದರಿಂದ ಸಮಯಕ್ಕೆ ಸರಿಯಾಗಿ ತಜ್ಞರ ಸಲಹೆ ಪಡೆಯುವುದು ಮತ್ತು ಮನಸ್ಸನ್ನು ಸಮತೋಲನದಲ್ಲಿಡುವುದು ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಕೆಡಿ’ ಅಶ್ಲೀಲ ಹಾಡಿನ ವಿವಾದ: ಮಹಿಳಾ ಆಯೋಗದ ಮುಂದೆ ಕ್ಷಮೆ ಕೇಳಿದ ಸಂಜಯ್ ದತ್ – Kannada News | Sanjay Dutt apologizes to National Commission for Women over KD Movie song controversy

ಕನ್ನಡದ ಪ್ಯಾನ್-ಇಂಡಿಯಾ ಸಿನಿಮಾ ‘ಕೆಡಿ: ದಿ ಡೆವಿಲ್’ (KD: The Devil) ಬಿಡುಗಡೆಗೂ ಮುನ್ನ ಸಖತ್ ವಿವಾದ ಮಾಡಿಕೊಂಡಿದೆ. ಈ ಸಿನಿಮಾದ ‘ಸರ್ಕೆ ಚುನಾರ್ ತೇರಿ ಸರ್ಕೆ’ ಹಾಡಿನಲ್ಲಿನ ಅಶ್ಲೀಲ ಸಾಹಿತ್ಯದ ಕಾರಣಕ್ಕೆ ಭಾರಿ ಟೀಕೆ ವ್ಯಕ್ತವಾಯಿತು. ಈ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅವರು ಸೋಮವಾರ (ಏಪ್ರಿಲ್ 27) ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿ ಕ್ಷಮೆ ಯಾಚಿಸಿದ್ದಾರೆ.

ಸೋಮವಾರ ಮಧ್ಯಾಹ್ನ ತಮ್ಮ ವಕೀಲರೊಂದಿಗೆ ಮಹಿಳಾ ಆಯೋಗದ ಕಚೇರಿಗೆ ಆಗಮಿಸಿದ ಸಂಜಯ್ ದತ್ ಅವರು ಹಾಡಿನ ಸಾಹಿತ್ಯದ ಬಗ್ಗೆ ತಮಗೆ ಮೊದಲೇ ಅರಿವಿರಲಿಲ್ಲ ಎಂದು ಸ್ಪಷ್ಟಪಡಿಸಿದರು. ನಟನ ಪರ ವಕೀಲರು ಮಾತನಾಡಿ, ‘ಸಂಜಯ್ ದತ್ ಅವರು ಮಹಿಳೆಯರ ಮತ್ತು ಆಯೋಗದ ಮೇಲೆ ಅಪಾರ ಗೌರವ ಹೊಂದಿದ್ದಾರೆ. ಹಾಡನ್ನು ರೆಕಾರ್ಡ್ ಮಾಡುವಾಗ ಅದು ಬೇರೆ ಭಾಷೆಯಲ್ಲಿದ್ದ ಕಾರಣ ಸಾಹಿತ್ಯದ ಅರ್ಥ ತಮಗೆ ತಿಳಿದಿರಲಿಲ್ಲ ಎಂದು ಅವರು ಹೇಳಿದ್ದಾರೆ. ಆದರೂ, ಘಟನೆಗೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸಿದ್ದಾರೆ. ಇದೇ ವೇಳೆ ಅವರು ಸ್ವಯಂಪ್ರೇರಿತರಾಗಿ ಬುಡಕಟ್ಟು ಸಮುದಾಯದ 50 ಮಕ್ಕಳ ಶಿಕ್ಷಣಕ್ಕೆ ನೆರವು ನೀಡಲು ಮುಂದಾಗಿದ್ದಾರೆ’ ಎಂದು ತಿಳಿಸಿದರು.

ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಈ ಹಾಡಿನಲ್ಲಿ ನೋರಾ ಫತೇಹಿ ಮತ್ತು ಸಂಜಯ್ ದತ್ ಕಾಣಿಸಿಕೊಂಡಿದ್ದರು. ಹಾಡಿನ ಆರಂಭಿಕ ಸಾಲುಗಳು ಲೈಂಗಿಕತೆಯನ್ನು ಬಿಂಬಿಸುವ ದ್ವಂದ್ವಾರ್ಥದಿಂದ ಕೂಡಿದ್ದು, ಅತ್ಯಂತ ಅಶ್ಲೀಲವಾಗಿವೆ ಎಂದು ಆಕ್ಷೇಪ ವ್ಯಕ್ತವಾಗಿತ್ತು. ಹಾಡಿನ ನೃತ್ಯ ಸಂಯೋಜನೆಯೂ ಕೂಡ ಆಕ್ಷೇಪಾರ್ಹವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟೀಕೆ ವ್ಯಕ್ತವಾಗಿತ್ತು.

ರಾಷ್ಟ್ರೀಯ ಮಹಿಳಾ ಆಯೋಗವು ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಈ ಹಾಡು ಭಾರತೀಯ ನ್ಯಾಯ ಸಂಹಿತೆ, ಐಟಿ ಕಾಯ್ದೆ ಮತ್ತು ಪೋಕ್ಸೋ (POCSO) ಕಾಯ್ದೆಗಳ ನಿಬಂಧನೆಗಳನ್ನು ಉಲ್ಲಂಘಿಸುವಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಆಯೋಗ ಹೇಳಿತ್ತು.

ಇದನ್ನೂ ಓದಿ: ‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ ನೋಡಿ..

ವಿವಾದ ತಾರಕಕ್ಕೇರುತ್ತಿದ್ದಂತೆ, ಹಾಡನ್ನು ಬಿಡುಗಡೆ ಮಾಡಿದ್ದ ‘ಆನಂದ್ ಆಡಿಯೋ’ ಸಂಸ್ಥೆಯು ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಲಿರಿಕಲ್ ವಿಡಿಯೋಗಳನ್ನು ಯೂಟ್ಯೂಬ್‌ನಿಂದ ತೆಗೆದುಹಾಕಿತು. ನಟಿ ನೋರಾ ಫತೇಹಿ ಕೂಡ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರತಿಕ್ರಿಯಿಸಿ, ‘ನಾನು ಇಂತಹ ಸಾಹಿತ್ಯವನ್ನು ಬೆಂಬಲಿಸುವುದಿಲ್ಲ. ಪ್ರತಿರೋಧದ ನಂತರ ಚಿತ್ರತಂಡ ಹಾಡನ್ನು ತೆಗೆದುಹಾಕಿರುವುದು ಸಮಾಧಾನ ತಂದಿದೆ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮುಖ್ಯಮಂತ್ರಿ ಹುದ್ದೆಗಾಗಿ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ: ಹೊಸ ಬಾಂಬ್ ಹಾಕಿದ ಹೆಚ್.ಡಿ. ಕುಮಾರಸ್ವಾಮಿ – Kannada News | HD Kumaraswamy Criticises Congress over Neglected Public Issues

ಕೋಲಾರ, ಏ.27: ಜಿಲ್ಲೆ ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಹುದ್ದೆಗಾಗಿ 40 ರಿಂದ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಅವರು ಹೇಳಿದರು. ಆದರೆ, ರಾಜ್ಯದಲ್ಲಿ ಈಗ ಜನ ಎದುರಿಸುತ್ತಿರುವ ಕುಡಿಯುವ ನೀರು ಮತ್ತು ಬಿಸಿಲಿನಂತಹ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಕುಮಾರಸ್ವಾಮಿ ಟೀಕಿಸಿದರು. ಅಳಂದದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಒಂದು ರೂಪಾಯಿಯೂ ಇಲ್ಲ, ಪಿಡಿಓಗಳು ಲಭ್ಯರಿಲ್ಲ ಎಂದು ಬಿ.ಆರ್. ಪಾಟೀಲ್ ಹೇಳಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಎಂದು ಅವರು ವಿವರಿಸಿದರು. ಮಾಲಿಕಲ್ ಮಳೆಯಿಂದ ದ್ರಾಕ್ಷಿ, ಬಾಳೆ ಮತ್ತು ಮಾವು ಬೆಳೆಗಳು ನಾಶವಾಗಿದ್ದರೂ, ಯಾರೊಬ್ಬರೂ ಮುಖ್ಯಮಂತ್ರಿಗಳ ಬಳಿ ಪರಿಹಾರ ಕೇಳಿಲ್ಲ ಎಂದು ಕುಮಾರಸ್ವಾಮಿ ದೂರಿದರು. ಜನಪ್ರತಿನಿಧಿಗಳು ಜನರ ಕಷ್ಟಗಳ ಬಗ್ಗೆ ಚಿಂತಿಸದೆ, ಅಧಿಕಾರದ ಹಿಂದೆ ಓಡುತ್ತಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

DC vs RCB: W,W,W,W,W,W..! ಕೇವಲ 8 ರನ್​ಗೆ 6 ವಿಕೆಟ್ ಕಳೆದುಕೊಂಡ ಡೆಲ್ಲಿ – Kannada News | IPL 2026: Delhi Capitals Collapse! RCB Pace Attack Destroys DC in Powerplay, 6 Wickets Down

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ರ 39ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡ ಕೇವಲ 8 ರನ್​ಗಳಿಗೆ ಪ್ರಮುಖ 6 ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಆರ್​ಸಿಬಿ ವೇಗಿಗಳಾದ ಭುವನೇಶ್ವರ್ ಕುಮಾರ್ ಹಾಗೂ ಹೇಜಲ್‌ವುಡ್ ಅವರ ದಾಳಿಗೆ ತತ್ತರಿಸಿ ಹೋಗಿರುವ ಡೆಲ್ಲಿ ಬ್ಯಾಟರ್​ಗಳಿಗೆ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮವಾಗಿ ಡೆಲ್ಲಿ ತಂಡ ಪವರ್‌ಪ್ಲೇನಲ್ಲಿ ಅಂದರೆ ಮೊದಲ 6 ಓವರ್​ಗಳಲ್ಲಿ ಕೇವಲ 13 ರನ್ ಕಲೆಹಾಕಿ ಬರೋಬ್ಬರಿ 6 ವಿಕೆಟ್​ಗಳನ್ನು ಕಳೆದುಕೊಂಡಿದೆ.

Source link

DC vs RCB: ರಾಹುಲ್ ವಿರುದ್ಧ ಸೇಡು ತೀರಿಸಿಕೊಂಡ ಹೇಜಲ್‌ವುಡ್; ವಿಡಿಯೋ – Kannada News | IPL 2026: DC vs RCB Match 39 Delhi’s Dramatic Collapse, Hazlewood Dominates

ಐಪಿಎಲ್ 2026 ರ 39ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡ ಮೊದಲ 3 ಓವರ್​ಗಳಲ್ಲೇ ಪ್ರಮುಖ 5 ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಭುವನೇಶ್ವರ್ ಕುಮಾರ್ ಹಾಗೂ ಹೇಜಲ್‌ವುಡ್ ಅವರ ದಾಳಿಗೆ ತತ್ತರಿಸಿ ಹೋಗಿರುವ ಡೆಲ್ಲಿ ಬ್ಯಾಟರ್​ಗಳಿಗೆ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ.

ಅದರಲ್ಲೂ ಇದೇ ಉಭಯ ತಂಡಗಳ ನಡುವೆ ಏಪ್ರಿಲ್ 18 ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ದೆಹಲಿ 6 ವಿಕೆಟ್‌ಗಳಿಂದ ಆರ್​​ಸಿಬಿಯನ್ನು ಸೋಲಿಸಿತ್ತು. ಆ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್, ಆರ್​ಸಿಬಿ ವಿರುದ್ಧ ಗೆಲುವಿನ ಅರ್ಧಶತಕ ಬಾರಿಸಿದ್ದರು. ಅಲ್ಲದೆ ಆ ಪಂದ್ಯದಲ್ಲಿ ಅವರು ಹೇಜಲ್‌ವುಡ್ ವಿರುದ್ಧ ಸರಾಗವಾಗಿ ರನ್ ಕಲೆಹಾಕಿದ್ದರು. ತವರು ಮೈದಾನದ ಲಾಭ ಪಡೆದುಕೊಂಡಿದ್ದ ರಾಹುಲ್ ಹೇಜಲ್‌ವುಡ್ ಬೌಲಿಂಗ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದಿದ್ದರು.

ಹೀಗಾಗಿ ಇಂದಿನ ಪಂದ್ಯದಲ್ಲಿ ರಾಹುಲ್ ಮೇಲೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದ್ದರು. ಅದರಂತೆ ಆರ್​​ಸಿಬಿ ಪರ ಎರಡನೇ ಓವರ್ ಬೌಲಿಂಗ್ ಮಾಡಿದ ಹೇಜಲ್‌ವುಡ್, ಎಸೆದ ಮೊದಲ ಎಸೆತದಲ್ಲೇ ರಾಹುಲ್ ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು. ಹೇಜಲ್‌ವುಡ್ ಎಸೆದ ಶಾರ್ಟ್​ ಬಾಲ್ ಅನ್ನು ಸಿಕ್ಸರ್​ಗಟ್ಟುವ ಯತ್ನದಲ್ಲಿ ರಾಹುಲ್ ವಿಕೆಟ್​ ಕೀಪರ್​ಗೆ ಕ್ಯಾಚ್ ನೀಡಿದರು. ಕಳೆದ ಮುಖಾಮುಖಿಯಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ರಾಹುಲ್​, ಈ ಪಂದ್ಯದಲ್ಲಿ ಕೇವಲ 1 ರನ್ ಬಾರಿಸಲಷ್ಟೇ ಶಕ್ತರಾದರು.

ಇನ್ನು ಇದೇ ಓವರ್​ನಲ್ಲಿಯೇ ಹೇಜಲ್​ವುಡ್ ಮತ್ತೊಂದು ವಿಕೆಟ್ ಉರುಳಿಸಿದರು. ರಾಹುಲ್ ವಿಕೆಟ್ ಪತನದ ಬಳಿಕ ಬಂದ ಸಮೀರ್ ರಿಜ್ವಿ ಕೂಡ ಎದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಕೀಪರ್​ಗೆ ಕ್ಯಾಚಿತ್ತು ಖಾತೆ ತೆರೆಯದೆ ನಿರ್ಗಮಿಸಿದರು.

Source link

ಪಂಚಮಸಾಲಿ ಪೀಠದ ‘ಲೆಕ್ಕಾ’ಚಾರ: 18 ವರ್ಷದ ಲೆಕ್ಕ ಕೊಟ್ಟ ಟ್ರಸ್ಟ್‌; ಕಳ್ಳಲೆಕ್ಕ ಎಂದ ಸ್ವಾಮೀಜಿ ಟೀಂ – Kannada News | Harihara Panchamasali Peetha Crisis: Trust that submits 18 year old financial report; Vachanananda Sri Rejects Report

ಟ್ರಸ್ಟಿ ಬಿ.ಸಿ ಉಮಾಪತಿ, ವಚನಾನಂದ ಶ್ರೀImage Credit source: tv9 kannada

ದಾವಣಗೆರೆ, ಏಪ್ರಿಲ್​ 27: ಮಠದಲ್ಲಿ ಅನುದಾನ ಮತ್ತು ಭಕ್ತರ ದೇಣಿಗೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಹರಿಹರದ ಪಂಚಮಸಾಲಿ ಮಠದ (Harihara Panchamasali Peetha) ಆಡಳಿತ ಮಂಡಳಿ ಹಾಗೂ ವಚನಾನಂದ ಶ್ರೀ ಮಧ್ಯೆ ಬಹಿರಂಗ ಸಂಘರ್ಷಕ್ಕೆ ಕಾರಣವಾಗಿತ್ತು. ಈ ಬಗ್ಗೆ ಲೆಕ್ಕ ಕೊಡುವಂತೆ ವಚನಾನಂದ ಶ್ರೀ ಪಟ್ಟು ಹಿಡಿದಿದ್ದರು. ಈ ಬೆನ್ನಲ್ಲೇ ಇಂದು ಟ್ರಸ್ಟ್‌ ಸದಸ್ಯರು 2008 ರಿಂದ 2026ವರೆಗಿನ ಲೆಕ್ಕದ ಸಂಪೂರ್ಣ ವಿವರವನ್ನು ನೀಡಿದ್ದಾರೆ. ಈ ಲೆಕ್ಕವನ್ನ ನಾವು ಒಪ್ಪುವುದಿಲ್ಲ, ಇದು ಕಳ್ಳ ಲೆಕ್ಕ ಎಂದು ಸ್ವಾಮೀಜಿ ಹಾಗೂ ತಂಡ ಕಿಡಿಕಾರಿದ್ದಾರೆ. ಇನ್ನು ಇದೇ ವೇಳೆ ಮಠದ ಆವರಣ ಅಕ್ಷರಶಃ ರಣಾಂಗಣವಾಗಿತ್ತು. ವಚನಪಠಣ ಆಗಬೇಕಿದ್ದ ಜಾಗದಲ್ಲಿ ಬೈಗುಳ ಕೇಳಿಬಂದವು.

ಪಂಚಮಸಾಲಿ ಸಮುದಾಯ ನಾಡಿನ ದೊಡ್ಡ ಸಮುದಾಯಗಳಲ್ಲೊಂದು. ಇದೇ ಸಮುದಾಯದ ಬೆಳವಣಿಗೆಗೆ ಅಂತಾನೇ ಹರಿಹರದಲ್ಲಿ ಮಠ ಸ್ಥಾಪಿಸಲಾಗಿದೆ. ಆದರೆ ಇದೇ ಮಠದಲ್ಲಿ ಇಂದು ನಡೆದಿದ್ದು ಮಾತ್ರ ಬಿಗ್‌ ಹೈಡ್ರಾಮಾ.

ಇದನ್ನೂ ಓದಿ: ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತಾ?

ಹರಿಹರ ಪಂಚಮಸಾಲಿ ಪೀಠದ ಪೀಠಾಧಿಪತಿಯಾಗಿದ್ದ ವಚನಾನಂದ ಶ್ರೀಗಳನ್ನ ಹತ್ತಾರು ಕಾರಣ ನೀಡಿ ಮಠದಿಂದ ಉಚ್ಚಾಟನೆ ಮಾಡಲಾಗಿತ್ತು. ಪಂಚಮಸಾಲಿ ಟ್ರಸ್ಟ್‌ ತೆಗೆದುಕೊಂಡ ಇದೇ ನಿರ್ಧಾರ ಶ್ರೀಗಳ ಪರ ಇರುವ ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಇನ್ನು ಉಚ್ಚಾಟನೆ ಮಾಡಿದ್ರೂ ಮಠ ತೊರೆಯದ ಶ್ರೀಗಳು, ಲೆಕ್ಕ ಕೊಡಿ ಅಂತಾ ಅಭಿಯಾನ ಆರಂಭಿಸಿದ್ದರು. ಇದೇ ಅಭಿಯಾನಕ್ಕೆ ಉತ್ತರ ಎಂಬಂತೆ ಮಠದ ಆವರಣದಲ್ಲೇ ಬಹಿರಂಗ ಸಭೆ ನಡೆಸಿದ ಟ್ರಸ್ಟ್‌ ಸದಸ್ಯರು 2008 ರಿಂದ 2026 ರವರೆಗಿನ ಲೆಕ್ಕ ಕೊಟ್ಟಿದ್ದಾರೆ.

18 ವರ್ಷಗಳಲ್ಲಿ 27,61,57,017 ರೂ. ದೇಣಿಗೆ ಸಂಗ್ರಹ

ಕಳೆದ 18 ವರ್ಷಗಳಲ್ಲಿ ಮಠದ ಭಕ್ತರಿಂದ 27 ಕೋಟಿ 61 ಲಕ್ಷದ57 ಸಾವಿರದ17 ರೂಪಾಯಿ ದೇಣಿಗೆ ಸಂಗ್ರಹ ಆಗಿದೆ. ರಾಜ್ಯ ಸರ್ಕಾರ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಅಂತಾ 12 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಇನ್ನು ಮರಳು ಮಾರಾಟದಿಂದ 10 ಲಕ್ಷ ರೂಪಾಯಿ ಸಂಗ್ರಹವಾದರೆ, ತುಲಾಭಾರದಿಂದ4.5 ಕೋಟಿ ರೂ ಮೌಲ್ಯದ 174 ಕೆಜಿ ಬೆಳ್ಳಿ ಸಂಗ್ರಹವಾಗಿದೆ. 174 ಕೆಜಿ ಬೆಳ್ಳಿಯನ್ನು ಬ್ಯಾಂಕ್ ಲಾಕರ್‌ ಸುರಕ್ಷಿತವಾಗಿ ಇಡಲಾಗಿದೆ ಅಂತಾ ಟ್ರಸ್ಟ್‌ನವರು ಲೆಕ್ಕ ಒಪ್ಪಿಸಿದ್ದಾರೆ.

ಈ ಲೆಕ್ಕವನ್ನ ನಾವು ಒಪುವುದಿಲ್ಲ: ವಚನಾನಂದ ಶ್ರೀಗಳು

ಇನ್ನು ಲೆಕ್ಕ ಕೊಡುತ್ತಿರುವ ವೇಳೆ ಅತ್ತ ಮಠಕ್ಕೆ ಮಾಜಿ ಶಾಸಕರಾದ ಹೆಚ್‌ಎಸ್ ಶಿವಶಂಕರ್‌, ಅರುಣ್ ಪೂಜಾರ್ ಎಂಟ್ರಿ ಆಗಿದ್ರು. ಇಬ್ಬರನ್ನ ಸ್ವಾಗತಿಸಿದ ಸ್ವಾಮೀಜಿ ಪರ ಭಕ್ತರು, ಇದು ಕಳ್ಳ ಲೆಕ್ಕ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದು, ವೇದಿಕೆಗೆ ನುಗ್ಗಲು ಯತ್ನಿಸಿದರು. ಈ ವೇಳೆ ತಳ್ಳಾಟ ನೂಕಾಟ ಉಂಟಾಯಿತು. ಈ ಲೆಕ್ಕವನ್ನ ನಾವು ಒಪುವುದಿಲ್ಲ ಎಂದು ವಚನಾನಂದ ಶ್ರೀಗಳು ಹೇಳಿದ್ದಾರೆ.

ಗೌರವದಿಂದ ಮಠ ಬಿಟ್ಟು ಹೋಗಿ ಎಂದ ಟ್ರಸ್ಟ್‌: ನೀವೆ ಮಠ ಖಾಲಿ ಮಾಡಿ ಎಂದ ವಚನಾನಂದ ಶ್ರೀ

ಲೆಕ್ಕದ ಗಲಾಟೆ ಒಂದುಕಡೆಯಾದರೆ, ಟ್ರಸ್ಟ್‌ನವರು ಇಂದು ಮನಗೂಳಿ ಶ್ರೀಗಳನ್ನ ಕರೆಸಿ ಲೆಕ್ಕಪತ್ರದ ಕಾರ್ಯಕ್ರಮ ನಡೆಸಿದರು. ಹೀಗಾಗಿ ವಚನಾನಂದ ಶ್ರೀಗಳ ಬದಲಾಗಿ ಬೇರೆಯವರನ್ನ ಪಟ್ಟ ಕಟ್ಟುತ್ತಾರಾ ಅನ್ನೋ ಪ್ರಶ್ನೆ ಮೂಡಿದೆ. ಈ ಬಗ್ಗೆಯೂ ಮಾತನಾಡಿರುವ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಬಿ.ಸಿ ಉಮಾಪತಿ, ಶ್ರೀಗಳಿಗೆ ಗೌರವದಿಂದ ಹೋಗು ಅಂತಾ ಹೇಳಿದ್ದೇವೆ. ಇಲ್ಲದಿದ್ದರೆ ಮುಂದೆ ನೋಡಿಕೊಳ್ತೇವೆ ಎಂದಿದ್ದಾರೆ. ಆದರೆ ವಚನಾನಂದ ಶ್ರೀಗಳು ಮಾತ್ರ ನೀವೆ ಮಠ ಖಾಲಿ ಮಾಡಿ ಅಂತಾ ತಿರುಗೇಟು ಕೊಟ್ಟಿದ್ದಾರೆ.

ಮನಗೂಳಿ ಶ್ರೀಗಳ ಎಂಟ್ರಿ ವೇಳೆ ಬಿಗ್ ಹೈಡ್ರಾಮಾ!

ಸಭೆ ಬಳಿಕ ಮಹಾಂತ ಶ್ರೀಗಳ ಗದ್ದುಗೆ ದರ್ಶನಕ್ಕೆ ಮನಗೂಳಿ ಶ್ರೀಗಳು ಬಂದಿದ್ದರು. ಆಗ ಶ್ರೀಗಳ ಮೇಲೆಯೇ ಭಕ್ತರು ಬಾಟಲ್‌ ಎಸಿದಿದ್ದಾರೆ. ಆಗ ಮತ್ತೊಂದು ಸುತ್ತಿನ ಗಲಾಟೆ ಆಯ್ತು. ಹೀಗೆ ಪಂಚಮಸಾಲಿ ಒಳಜಗಳ ಈಗ ಬೀದಿಗೆ ಬಂದಿದ್ದು, ಇದು ಮತ್ತೆಲ್ಲಿಗೆ ಹೋಗಿ ನಿಲ್ಲುತ್ತೋ ಕಾದು ನೋಡ್ಬೇಕು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version